Tag: Hubballi Murder Case

  • ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

    ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

    ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್‌ (Neha Hiremath) ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್‌ (Rachita Ram) ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

    ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು

     

    View this post on Instagram

     

    A post shared by Rachitaa Ram (@rachita_instaofficial)

    ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.

    ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

    ನಟಿ ರಚಿತಾ ರಾಮ್‌, ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.

  • ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು

    ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು

    – ನೇಹಾ ಬೇರೆಯಲ್ಲ, ನನ್ನ ಮಗಳು ಬೇರೆಯಲ್ಲ
    – ನನ್ನ ಮಗನ ತಪ್ಪಿಗೆ ಕರ್ನಾಟಕದ ಜನತೆ, ನೇಹಾ ತಂದೆ-ತಾಯಿ ಬಳಿ ಕ್ಷಮೆಯಾಚಿಸುತ್ತೇನೆ

    ಧಾರವಾಡ: ನನ್ನ ಮಗ ಮಾಡಿರುವ ತಪ್ಪಿಗೆ ಕರ್ನಾಟಕದ ಸಮಸ್ತ ಜನತೆಗೆ ಕೈಮುಗಿದು ಕ್ಷಮೆ ಯಾಚಿಸುತ್ತೇನೆ ಎಂದು ನೇಹಾ ಹತ್ಯೆಗೈದ ಫಯಾಜ್‌ ತಾಯಿ (Fayaz Mother) ಮುಮ್ತಾಜ್‌ ಕಣ್ಣೀರಿಟ್ಟಿದ್ದಾರೆ.

    ಮಗನ ಕೃತ್ಯಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನೇಹಾಳ ತಂದೆ-ತಾಯಿಯವರಲ್ಲೂ ನಾನು ಕ್ಷಮೆ ಕೇಳುತ್ತೇನೆ. ನೇಹಾ (Neha Hiremath) ಕೂಡ ನನ್ನ ಮಗಳು ಇದ್ದಂತೆ. ನೇಹಾ ಬೇರೆಯಲ್ಲ, ನನ್ನ ಮಗಳು ಬೇರೆಯಲ್ಲ. ನೇಹಾ ತಂದೆ-ತಾಯಿಗೆ ಆಗಿರುವಷ್ಟೇ ದುಃಖ ಆಗಿದೆ ಎಂದು ಅಳಲು ತೋಡಿಕೊಂಡರು. ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

    ನನ್ನ ಮಗ ಮಾಡಿರುವುದು ತಪ್ಪು. ಯಾವ ಮಕ್ಕಳು ಮಾಡಿದರು ತಪ್ಪು ತಪ್ಪೇ. ಈ ನೆಲದ ಕಾನೂನು ಏನು ಹೇಳುತ್ತೋ ಅದರ ಪ್ರಕಾರವೇ ಶಿಕ್ಷೆ ಆಗಲಿ ಎಂದು ಹೇಳಿದರು.

    ನನ್ನ ಮಗನನ್ನ ಐಎಎಸ್‌ ಅಧಿಕಾರಿ ಮಾಡುವ ಆಸೆ ಇತ್ತು. ತುಂಬಾ ಬುದ್ಧಿವಂತ ಇದ್ದ. ಎಲ್‌ಕೆಜಿ, ಯುಕೆಜಿ ಯಿಂದ 90% ಜಾಸ್ತಿ ಮಾರ್ಕ್ಸ್‌ ತೆಗೆಯುತ್ತಿದ್ದ ಎಂದು ಮಗನ ಬಗ್ಗೆ ಹೇಳಿಕೊಂಡರು. ಇದನ್ನೂ ಓದಿ: ಕೈ ಮುಗಿದು ಕೇಳಿಕೊಳ್ತೀನಿ, ಸಿಎಂ ಹೇಳಿಕೆ ನೀಡುವುದನ್ನು ನಿಲ್ಲಿಸಿ: ನೇಹಾ ತಂದೆ ನಿರಂಜನ್‌ ಕಿಡಿ

    ಅವನು ತಪ್ಪು ಮಾಡಿದ್ದಾನೆ. ಶಿಕ್ಷೆ ಆಗಲೇಬೇಕು. ನಾನು ಕೂಡ ನೂರಾರು ಮಕ್ಕಳಿಗೆ ಶಿಕ್ಷೆ ಕೊಟ್ಟಿದ್ದೇನೆ. ಈಗ ನನ್ನ ಮಗ ತಪ್ಪು ಮಾಡಿದ್ದಾನೆ ಅಂದ್ಮೇಲೆ ಶಿಕ್ಷೆ ಆಗಬೇಕು. ಶಿಕ್ಷೆಯನ್ನು ಅವನು ಅನುಭವಿಸಲಿ. ಮಗನ ತಪ್ಪಿಗೆ ನಾವು ತಲೆ ತಗ್ಗಿಸುವಂತಾಗಿದೆ ಎಂದು ಕಣ್ಣೀರಿಟ್ಟರು.

  • ಹುಬ್ಬಳ್ಳಿಯ ನೇಹಾ ಹತ್ಯೆಗೈದ ಫಯಾಜ್ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ

    ಹುಬ್ಬಳ್ಳಿಯ ನೇಹಾ ಹತ್ಯೆಗೈದ ಫಯಾಜ್ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ

    ಬೆಳಗಾವಿ: ಹುಬ್ಬಳ್ಳಿ ಯುವತಿ (Hubballi Murder Case) ಕೊಲೆ ಪ್ರಕರಣದ ಆರೋಪಿ ಫಯಾಜ್ (Fayaz) ಮನೆಗೆ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆರೋಪಿ ಕುಟುಂಬಸ್ಥರು ಬೆಳಗಾವಿ (Belagavi) ಪೊಲೀಸರ ಸುಪರ್ದಿಯಲ್ಲಿದ್ದಾರೆ.

    ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ಸಾಯಿನಗರದಲ್ಲಿ ಆರೋಪಿ ಫಯಾಜ್ ಮನೆ ಇದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಉದ್ದೇಶದಿಂದ ಆರೋಪಿ ಮನೆಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

    ಆರೋಪಿಯ ತಂದೆ, ತಾಯಿ ಹಾಗೂ ಸಹೋದರಿ ಪೊಲೀಸ್ ಸುಪರ್ದಿಯಲ್ಲಿದ್ದಾರೆ. ಬೆಳಗಾವಿ ಎಸ್‌ಪಿ ಡಾ. ಭೀಮಾಶಂಕರ್ ಗುಳೇದರಿಂದ ಆರೋಪಿ ಕುಟುಂಬಸ್ಥರು ಸೆಕ್ಯೂರ್ ಮಾಡಲಾಗಿದೆ.

    ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath) ಹತ್ಯೆಯನ್ನು ಖಂಡಿಸಿ ಮುನವಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಪಿ ಮನೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಲವ್‌ ಜಿಹಾದ್‌ಗೆ ಬಲಿಯಾಗಲ್ಲ ಅಂದ್ರೆ ಅವಳ ಕುತ್ತಿಗೆಗೆ ಚಾಕು ಹಾಕಿ ಸಾಯಿಸ್ತಾರೆ.. ಸರ್ಕಾರ ಮೂಕಪ್ರೇಕ್ಷಕನಂತಿರುತ್ತೆ: ಸಿ.ಟಿ.ರವಿ

    ಪ್ರೀತಿ ವಿಚಾರವಾಗಿ ನೇಹಾ ಯುವತಿಯನ್ನು ಹುಬ್ಬಳ್ಳಿ ಕಾಲೇಜಿನಲ್ಲೇ ಫಯಾಜ್ ಎಂಬಾತ ಚಾಕುವಿನಿಂದ 9 ಬಾರಿ ಇರಿದು ಕೊಂದಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

    ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

    – ಜಿಹಾದಿ ಕೊಲೆಗಾರನ ಗಲ್ಲಿಗೇರಿಸುವಂತೆ ಒತ್ತಾಯ
    – ರಸ್ತೆ ತಡೆದು, ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

    ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ವಿರುದ್ಧ ಹುಬ್ಬಳ್ಳಿಯಲ್ಲಿ (Hubballi) ಆಕ್ರೋಶ ಭುಗಿಲೆದ್ದಿದೆ. ಯುವತಿ ಕೊಲೆ ಖಂಡಿಸಿ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

    ಎಬಿವಿಪಿಯಿಂದ (ABVP) ಮಹಾನಗರ ವ್ಯಾಪ್ತಿಯ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂ ಜಾಗರಣ ವೇದಿಕೆ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್‌ನಿಂದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ನೇಹಾ ಹತ್ಯೆಯಿಂದ ಕಟ್ಟೆಯೊಡೆದ ಆಕ್ರೋಶ; 3 ಕಿಮೀ ಪಾರ್ಥಿವ ಶರೀರ ಮೆರವಣಿಗೆಗೆ ಸಿದ್ಧತೆ – ಕಾಲೇಜು ಬಂದ್‌ಗೆ ಕರೆ!

    ಜಿಹಾದಿ ಫಯಾಜ್‌ನನ್ನು ಗಲ್ಲಿಗೇರಿಸಿ ಎಂದು ಪೋಸ್ಟರ್ ಹಿಡಿದು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಪ್ರತಿಭಟನೆಯಿಂದಾಗಿ ಬಿವಿಬಿ ಕಾಲೇಜು ರಸ್ತೆ ಬಂದ್ ಆಗಿದೆ. ವಿದ್ಯಾರ್ಥಿಗಳು ರಸ್ತೆಯಲ್ಲೇ ಪ್ರತಿಭಟನೆಗೆ ಕುಳಿತಿದ್ದಾರೆ. ಸ್ಥಳಕ್ಕೆ ಪೊಲೀಸ್ ಆಯುಕ್ತರು ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಜಸ್ಟಿಸ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಪ್ರತಿಭಟನಾಕಾರರು ಹತ್ಯೆಯಾದ ಯುವತಿ ನೇಹಾಳ ದೊಡ್ಡ ಕಟೌಟ್ ಮಾಡಿ ತಂದಿದ್ದಾರೆ. ಕಟೌಟ್ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಫಯಾಜ್ ಫೋಟೊ ಮೇಲೆ ಜಿಹಾದಿ ಎಂದು ಬರೆಯಲಾಗಿದೆ. ಫಯಾಜ್ ಫೋಟೊಗೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆಗೆ ಭುಗಿಲೆದ್ದ ಆಕ್ರೋಶ- ಪಾತಕಿ ಎನ್‍ಕೌಂಟರ್‌ಗೆ ಹಿಂದೂಪರ ಸಂಘಟನೆಗಳ ಆಗ್ರಹ

    ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿತ್ತು. ಬಿವಿಬಿ ಕಾಲೇಜ್‌ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. 3 ಸಿಪಿಐ, 5 ಪಿಎಸ್‌ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜಿಸಲಾಗಿದೆ.

    ಬಳಿಕ ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಆಗಮಿಸಿ ವಿದ್ಯಾರ್ಥಿ ಸಂಘಟನೆ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದ್ದಾರೆ.