Tag: Hubbli

  • ಪ್ರವಾಹ ಬಂದು 15 ದಿನ ಕಳೆದ್ರೂ ಒಂದು ನಯಾ ಪೈಸೆ ಬಂದಿಲ್ಲ: ಸಿದ್ದರಾಮಯ್ಯ

    ಪ್ರವಾಹ ಬಂದು 15 ದಿನ ಕಳೆದ್ರೂ ಒಂದು ನಯಾ ಪೈಸೆ ಬಂದಿಲ್ಲ: ಸಿದ್ದರಾಮಯ್ಯ

    ಹುಬ್ಬಳ್ಳಿ: ಪ್ರವಾಹ ಬಂದು 15 ದಿನ ಕಳೆದರೂ ಕೇಂದ್ರದಿಂದ ಒಂದು ನಯಾ ಪೈಸೆ ಬಂದಿಲ್ಲಾ. ಯಡಿಯೂರಪ್ಪ ಅವರು ಒನ್ ಮ್ಯಾನ್ ಶೋ ಮಾಡಿಕೊಂಡು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದರು.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರವಾಹ ಬಂದು 15 ದಿನ ಕಳೆದರೂ ಕೇಂದ್ರದಿಂದ ಒಂದು ನಯಾ ಪೈಸೆ ಬಂದಿಲ್ಲಾ. ಯಡಿಯೂರಪ್ಪ ಅವರು ಒನ್ ಮ್ಯಾನ್ ಶೋ ಮಾಡಿಕೊಂಡು ಬಂದಿದ್ದಾರೆ. ಮಂಗಳವಾರ ಮಂತ್ರಿ ಮಂಡಲ ವಿಸ್ತರಣೆಯಾಗುತ್ತದೆ ಎಂದು ಹೇಳಿದ್ದಾರೆ. ಬಹುಶಃ ಮಂತ್ರಿ ಮಂಡಲ ಇಲ್ಲದೇ ಇಷ್ಟು ದಿನ ಸರ್ಕಾರ ಇಲ್ಲದೆ ಇದ್ದದ್ದು ಮೊದಲು ಬಾರಿಯಾಗಿದೆ. ಯಡಿಯೂರಪ್ಪ ಪಿಎಂ ಅವರನ್ನು ಭೇಟಿಯಾಗಿ ಬಂದಿದ್ದಾರೆ. ಪಿಎಂ ಹಣ ಕೊಡುತ್ತೀನಿ ಎಂದು ಎಲ್ಲಿ ಆದರೂ ಹೇಳಿದ್ದಾರಾ? ಎಂದು ಪ್ರಶ್ನೆ ಮಾಡಿದರು.

    ಯಡಿಯೂರಪ್ಪನವರು ಸಿದ್ದರಾಮಯ್ಯನವರ ಸಲಹೆ ಮೇರೆಗೆ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದು ನೂರಕ್ಕೆ ನೂರರಷ್ಟು ಸುಳ್ಳು, ಅವರ ಜೊತೆ ನಾನು ಮಾತಾಡಿಲ್ಲ. ನನ್ನ ಸಲಹೆ ಕೇಳಿದರೆ, ಆಪರೇಷನ್ ಕಮಲದಲ್ಲಿ ನೂರಾರು ಕೋಟಿ ಹಣ ಖರ್ಚುಮಾಡಿದ್ದಾರೆ. ಅದನ್ನು ಸಿಬಿಐಗೆ ಕೊಡಲಿ ಎಂದರು.

    ಬಿಜೆಪಿ ಅವರಿಗೆ ಸಿಬಿಐ ಅಂದರೆ ವಾಕರಿಕೆ ಇತ್ತು. ಈಗ ಇದ್ದಕ್ಕಿದ್ದಂತೆ ಅವರ ಸರ್ಕಾರ ಬಂದಾಕ್ಷಣ ಸಿಬಿಐ ಮೇಲೆ ವ್ಯಾಮೋಹ ಬಂದಿದೆ. ನಮ್ಮ ಪೊಲೀಸರಿಂದ ತನಿಖೆ ಮಾಡಿಸಬಹುದಿತ್ತು. ಆದರೆ ಸಿಬಿಐಯನ್ನ ದುರ್ಬಳಕೆ ಮಾಡಲು ಹೊರಟಿದ್ದಾರೆ. ಆಪರೇಷನ್ ಕಮಲವನ್ನ ಸಿಬಿಐಗೆ ಕೊಡಲಿ. ಅವರು ಅದನ್ನು ಮಾಡಲ್ಲ, ಅವರು ಆ ರೀತಿ ಮಾಡಿದರೆ ನನಗೆ ಸಂತೋಷವಾಗುತ್ತದೆ. ಆಡಿಯೋ ಪ್ರಕರಣ ಬಂದಾಗ ತನಿಖೆ ಮಾಡಿಸಬೇಕಿತ್ತು. ಆಗ ಕುಮಾರಸ್ವಾಮಿ ಮಾಡಿಸಲಿಲ್ಲಾ, ಅವರು ಏಕೆ ಬಿಟ್ಟರು ಗೊತ್ತಿಲ್ಲಾ. ಆದರೆ ನಾನು ಯಾವ ಸಲಹೆಯನ್ನು ಕೊಟ್ಟಿಲ್ಲ, ಇದು ಸುಳ್ಳು ಎಂದು ಸಿದ್ದರಾಮಯ್ಯ ಹೇಳಿದರು.

  • ಮಠಾಧಿಪತಿ ಮೇಲೆ ಆರೋಪ ಮಾಡುವುದು ಸರಿಯಲ್ಲ – ಪೇಜಾವರ ಶ್ರೀ

    ಮಠಾಧಿಪತಿ ಮೇಲೆ ಆರೋಪ ಮಾಡುವುದು ಸರಿಯಲ್ಲ – ಪೇಜಾವರ ಶ್ರೀ

    ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ಶಿರೂರು ಶ್ರೀಗಳು ಆನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಹೆಚ್ಚಿನ ಸಮಯ ಕಳೆದಿದ್ದಾರೆ. ಆದರೆ ಅವರ ಸಾವಿನ ಕುರಿತು ಮಠಾಧಿಪತಿಗಳ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

    ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಅಗಲಿಕೆ ನೋವು ತಂದಿದೆ. ಆದರೆ ಸ್ವಾಮೀಜಿಗಳು ಯಾರನ್ನು ಕೊಲೆ ಮಾಡುವುದಿಲ್ಲಾ. ಅವರದು ಒಂದು ಸಹಜ ಸಾವು ಎಂದು ಪೇಜಾವರ ಶ್ರೀಗಳು ಹೇಳಿದರು.

    ಸಾವಿನ ಸಂಶಯದ ಕುರಿತ ಮಾಧ್ಯಮಗಳ ಪ್ರಶ್ನೆಗೆ, ವಿಷ ಪ್ರಾಶನ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದ ಪೇಜಾವರ ಶ್ರೀ ಗಳು, ಶಿರೂರು ಸ್ವಾಮೀಜಿಗಳಿಗೆ ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರನ್ನು ಕೊಲೆ ಮಾಡುವುದಿಲ್ಲ. ಅಲ್ಲದೆ ಅವರನ್ನು ಕೊಲೆ ಮಾಡಿ ಪಟ್ಟಕ್ಕೆ ಏರುವ ಉದ್ದೇಶ ಯಾರಿಗೂ ಇಲ್ಲ. ಕಾರಣ ಇಲ್ಲದೆ ಯಾರ ಮೇಲು ಸುಮ್ಮನೆ ಆರೋಪ ಮಾಡಬಾರದು. ಶ್ರೀಗಳ ಕೊಲೆ ಎಂಬುದು ಶುದ್ಧ ಸುಳ್ಳು. ಅವರದು ಒಂದು ಸಹಜ ಸಾವು. ಅವರ ಸಾವಿನ ಹಿಂದೆ ಸಂಶಯ ಮಾಡುವುದು ಸರಿಯಲ್ಲಾ. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದರು, ಕಳೆದ ಎರಡು ಮೂರ ವರ್ಷಗಳ ಹಿಂದಿನಿಂದ ಪೂಜೆ ಮಾಡುವುದನ್ನು ಸಹ ಬಿಟ್ಟಿದ್ದಾರೆ. ಹೀಗಾಗಿ ಅವರ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲಾ ಎಂದರು.

    ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು. ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗಿಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪದೇ ಪದೇ ಆಸ್ಪತ್ರೆಗಳಿಗೆ ಚೆಕಪ್ ಗೆ ತೆರಳುತ್ತಿದ್ದ ಶ್ರೀಗಳು ಒಮ್ಮೆ ಗುಣಮುಖರಾದ್ರೆ ಮತ್ತೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಲೇ ಇದ್ದರು.

  • ಹುಬ್ಬಳ್ಳಿ ಜವಳಿ ಮಾರ್ಕೆಟ್‍ನಲ್ಲಿ ಜಿಟಿಡಿ ಶಾಪಿಂಗ್

    ಹುಬ್ಬಳ್ಳಿ ಜವಳಿ ಮಾರ್ಕೆಟ್‍ನಲ್ಲಿ ಜಿಟಿಡಿ ಶಾಪಿಂಗ್

    ಹುಬ್ಬಳ್ಳಿ: ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ವಾಣಿಜ್ಯ ನಗರಿ ಹುಬ್ಬಳ್ಳಿಯ ಜವಳಿ ಮಾರ್ಕೆಟ್ ನಲ್ಲಿ ಶಾಪಿಂಗ್ ಮಾಡುವ ಮೂಲಕ ಜನರ ಅಚ್ಚರಿಗೆ ಕಾರಣರಾಗಿದ್ದಾರೆ.

    ಹೌದು. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಸಚಿವರು, ನೇರವಾಗಿ ಜವಳಿ ಮಾರ್ಕೆಟ್ ಗೆ ಭೇಟಿ ನೀಡಿದ್ದಾರೆ. ಈ ವೇಳೆ ಜವಳಿ ಮಾರ್ಕೆಟ್ ಸಾಲಿನಲ್ಲಿ ಒಂದು ಬಟ್ಟೆ ಅಂಗಡಿಗೆ ತೆರಳಿ ಪಂಚೆಗಳನ್ನು ಖರೀದಿ ಮಾಡಿದ್ದಾರೆ.

    ನಾಳೆ ಬೆಳಗಾವಿ ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲು ಹುಬ್ಬಳ್ಳಿಗೆ ಆಗಮಿಸಿದ್ದ ಸಚಿವರು ಹಾಗೆ ಏಕಾಏಕಿ ಮಾರ್ಕೆಟ್ ಹೋಗೆ ಪಂಚೆ ಖರೀದಿ ಮಾಡಿದ್ದಾರೆ. ಇನ್ನು ಜನರು ನೂತನ ಸಚಿವರನ್ನು ಮಾರ್ಕೆಟ್ ನಲ್ಲಿ ಕಂಡು ಖುಷಿ ಪಟ್ಟು ಮಾತನಾಡಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಖಾತೆ ಬೇಡ ದೇವೇಗೌಡರು ನಿರಾಕರಿಸಿದ್ದರು. ಆದರೆ ಸಿಎಂ ಕುಮಾರಸ್ವಾಮಿ ಅವರು ಜಿಟಿ ದೇವೇಗೌಡ ಅವರ ಮನವೊಲಿಸಲು ಯಶಸ್ವಿಯಾಗಿದ್ದರು. ಬಳಿಕ ಜೂನ್ 23 ರಂದು ಸಚಿವ ಸ್ಥಾನ ಒಪ್ಪಿಕೊಂಡ ಜಿಟಿಡಿ ವಿಧಾನಸೌದಲ್ಲಿ ತಮ್ಮ ಕಚೇರಿಯಲ್ಲಿ ಪೂಜೆ ಮಾಡಿ ಬಳಿಕ ಕಾರ್ಯಾರಂಭ ಮಾಡಿದ್ದರು.

  • ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

    ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ನಾಗಮೋಹನ ದಾಸ್ ಸಮಿತಿ ವರದಿಯನ್ನು ಒಪ್ಪಿದ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ರಂಭಾಪುರಿ ಶ್ರೀ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರಂಭಾಪುರಿ ಶ್ರೀಗಳು, ಮುಖ್ಯಮಂತ್ರಿಗಳು ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಲಿಂಗಾಯತ ವೀರಶೈವ ಧರ್ಮವನ್ನ ಛಿದ್ರ ಮಾಡಿದ್ದಾರೆ. ಇವರಿಗೆ ಜನರು ತಕ್ಕಪಾಠ ಕಲಿಸುತ್ತಾರೆ. ಅತ್ಯಂತ ಅವೈಜ್ಞಾನಿಕ ಹಾಗೂ ರಾಜಕೀಯ ಪ್ರೇರಿತರಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಿಡಿಕಾರಿದರು.

    ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕ ಧರ್ಮ ಸ್ಥಾಪನೆ ಮಾಡುವ ವಿಚಾರದಲ್ಲಿ ಅತುರದ ನಿರ್ಧಾರ ಮಾಡಿದ್ದಾರೆ. ಕ್ಯಾಬಿನೆಟ್ ನಿರ್ಧಾರವನ್ನು ವೀರಶೈವ ಲಿಂಗಾಯತ ಧರ್ಮ ರಾಷ್ಟ್ರೀಯ ಮಠ ಪರಿಷತ್ ಖಂಡಿಸುತ್ತದೆ. ಅಲ್ಲದೇ ವೀರಶೈವ ಮಠಾಧೀಶರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ವೀರಶೈವದಿಂದ ಲಿಂಗಾಯತವನ್ನು ಯಾರು ಬೇರ್ಪಡಿಸಲು ಸಾಧ್ಯವಿಲ್ಲ. ಧರ್ಮವನ್ನು ಒಡೆಯುವ ಕೆಲಸ ಮಾಡಿದ ರಾಜಕಾರಣಿಗಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸುವುದಿಲ್ಲ ಎಂದು ಹೇಳಿದರು.

    ಸಮಿತಿಯ ಮುಂದೆ ಈಗಾಗಲೇ ನಾವು ಸಾವಿರಾರು ಪುಟಗಳ ಮಾಹಿತಿ ನೀಡಿದ್ದೆವು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಸಹ ವೀರಶೈವ ಹಾಗೂ ಲಿಂಗಾಯತ ಧರ್ಮದ ಎಲ್ಲರು ಒಟ್ಟಿಗೆ ಬಂದರೆ ಮಾತ್ರ ಶಿಫಾರಸು ಮಾಡುವ ಕುರಿತು ಹೇಳಿದ್ದರು. ಆದರೆ ಇಂದು ಅವರು ತಮ್ಮ ಮಾತನ್ನು ತಪ್ಪಿದ್ದಾರೆ. ಅವರ ಮಾತಿನ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಆರೋಪಿಸಿದರು.

    ಸಮಿತಿಗೆ ಸಾವಿರಾರು ಪುಟ ವೀರಶೈವ ಇತಿಹಾಸದ ಕುರಿತು ಮಾಹಿತಿ ನೀಡಲಾಗಿದೆ. ಆದರೆ ಇಲ್ಲಿ ಏಕಪಕ್ಷೀಯ ನಿರ್ಧಾರ ಮಾಡಿ. ಸ್ವಾತಂತ್ರ್ಯ ಲಿಂಗಾಯತರು ನೀಡಿದ ಮಾಹಿತಿಯನ್ನೇ ಸಮಿತಿ ನೀಡಿದೆ ಎಂದರು.

    ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ. ವೀರಶೈವ ಮಠದ ರಾಷ್ಟ್ರೀಯ ಪರಿಷತ್ ಹಾಗೂ ವೀರಶೈವ ಮುಂಖಡರ ಸಮಾವೇಶ ಕರೆದು ಚರ್ಚೆ ನಡೆಸಲಾಗುತ್ತದೆ. ಅಲ್ಲದೇ ಈ ಕುರಿತು ಕೇಂದ್ರ ಸರ್ಕಾರಕ್ಕೂ ಮಾಹಿತಿ ಸಲ್ಲಿಸಲಾಗುತ್ತದೆ. ಕಾನೂನು ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.   ಇದನ್ನು ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು