Tag: hubli dharwad corporation

  • ಪಾಲಿಕೆ ಚುನಾವಣೆ – ಪಕ್ಷೇತರ ಅಭ್ಯರ್ಥಿ ಮರಳಿ ಬಿಜೆಪಿ ತೆಕ್ಕೆಗೆ

    ಪಾಲಿಕೆ ಚುನಾವಣೆ – ಪಕ್ಷೇತರ ಅಭ್ಯರ್ಥಿ ಮರಳಿ ಬಿಜೆಪಿ ತೆಕ್ಕೆಗೆ

    ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಪಕ್ಷೇತರ ಸದಸ್ಯೆ ದುರ್ಗಮ್ಮ ಬಿಜವಾಡ ಮರಳಿ ಬಿಜೆಪಿ ಆಗಮಿಸುವುದು ಬಹುತೇಕ ಖಚಿತವಾಗಿದೆ.

    ವಾರ್ಡ್ ನಂಬರ್ 69 ರಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ದುರ್ಗಮ್ಮ ಬಿಜವಾಡ ಪತಿ ಶಶಿಕಾಂತ್ ಬಿಜವಾಡ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಮೂಲಕ ಬಿಜೆಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಪಾಲಿಕೆ ಗದ್ದುಗೆ ಹಿಡಿಯುವುದು ಖಚಿತವಾಗಿದೆ.  ಇದನ್ನೂ ಓದಿ: ಆಪರೇಷನ್‌ ಕಲಬುರಗಿ: ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ ಎಂದ ಡಿ.ಕೆ. ಶಿವಕುಮಾರ್

    ದುರ್ಗಮ್ಮ ಪತಿ ಶಶಿಕಾಂತ್ ಬಿಜವಾಡ ಅವರು ಪ್ರದೀಪ್ ಶೆಟ್ಟರ್ ಆತ್ಮೀಯರು. 15 ವರ್ಷಗಳಿಗೂ ಅಧಿಕ ಕಾಲ ಬಿಜೆಪಿಯಲ್ಲೇ ಕಾರ್ಯನಿರ್ವಹಿಸಿದ್ದ ಶಶಿಕಾಂತ ಅವರು ಬಿಜೆಪಿ ಟಿಕೆಟ್ ದೊರೆಯದ ಕಾರಣ ತಮ್ಮ ಪತ್ನಿ ದುರ್ಗಮ್ಮ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದರು. ವಾರ್ಡ್ ನಂಬರ್ 69 ರಲ್ಲಿ ದುರ್ಗಮ್ಮ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ – ಶಿಗ್ಗಾಂವಿ ಅಜ್ಜಿ ಮನೆಗೆ ಡಿಸಿ ಭೇಟಿ, 3 ತಿಂಗಳಲ್ಲಿ ಮನೆ ಭರವಸೆ

    ಸದ್ಯ ಉಪಮೇಯರ್ ಸ್ಥಾನ ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಾಗಿದ್ದು ಈ ಮೀಸಲಿಗೆ ಅರ್ಹರಾದ ಪಾಲಿಕೆ ಸದಸ್ಯರು ಬಿಜೆಪಿಯಲ್ಲಿ ಯಾರೂ ಇಲ್ಲ. ಅಲ್ಲದೇ ದುರ್ಗಮ್ಮ ಶಶಿಕಾಂತ ಬಿಜವಾಡ ಅವರು ಈ ಮೀಸಲಿಗೆ ಅರ್ಹರಾಗಿದ್ದಾರೆ. ಹೀಗಾಗಿ ಎಂಎಲ್‍ಸಿ ಪ್ರದೀಪ ಶೆಟ್ಟರ್ ಹಾಗೂ ಶಶಿಕಾಂತ್ ಭೇಟಿ ಹಿನ್ನೆಲೆಯಲ್ಲಿ ದುರ್ಗಮ್ಮ ಅವರು ಬಿಜೆಪಿಗೆ ಬರುವುದು ಬಹುತೇಕ ಖಚಿತವಾಗಿದ್ದು, ದುರ್ಗಮ್ಮ ಬಿಜವಾಡರಿಗೆ ಉಪಮೇಯರ್ ಸ್ಥಾನ ಖಚಿತವಾಗಿದೆ.

  • ಆಪರೇಷನ್‌ ಕಲಬುರಗಿ: ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ ಎಂದ ಡಿ.ಕೆ. ಶಿವಕುಮಾರ್

    ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರವಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ರಾಷ್ಟ್ರೀಯ ನಾಯಕರಾದ ದೇವೇಗೌಡರ ಜತೆ ಮಾತುಕತೆ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

    ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಕಲಬುರಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದು, ಉತ್ತಮ ಫಲಿತಾಂಶ ಸಿಕ್ಕಿದೆ. ಜೆಡಿಎಸ್ ಕೂಡ ಗೆದ್ದಿದೆ. ಬಿಜೆಪಿಯ ಇಡೀ ಸರ್ಕಾರವೇ ಅಲ್ಲಿ ನಿಂತಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು ಇದ್ದರೂ ಕೂಡ ಅವರು 39, ನಾವು 33 ಸ್ಥಾನಗಳನ್ನು ಗೆದ್ದಿದ್ದೇವೆ. ಜತೆಗೆ ನಮ್ಮ ಬಂಡಾಯ ಸದಸ್ಯರೂ ಗೆದ್ದಿದ್ದಾರೆ ಎಂದರು. ಇದನ್ನೂ ಓದಿ: ಕಲಬುರಗಿ ಮೇಯರ್ ಚುನಾವಣೆ- ಮುಂದಿನ ವಾರ ಅಧಿಸೂಚನೆ

    ನಾಳೆ ಹುಬ್ಬಳ್ಳಿ, ಬೆಳಗಾವಿ ಭೇಟಿ: ನಾನು ನಾಳೆ ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಹೋಗುತ್ತಿದ್ದು, ಅಲ್ಲಿ ನಮ್ಮ ಗೆದ್ದ ಹಾಗೂ ಸೋತ ಅಭ್ಯರ್ಥಿಗಳನ್ನು ಮಾತನಾಡಿಸಿಕೊಂಡು ಬರುತ್ತೇನೆ. ಕಲಬುರಗಿಗೆ ಸಂಬಂಧಿಸಿದಂತೆ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಬ್ಬ ರಾಷ್ಟ್ರೀಯ ನಾಯಕರಾದ ದೇವೇಗೌಡರ ಜತೆ ಮಾತನಾಡಿದ್ದಾರೆ. ಅಲ್ಲಿ ಮತದಾರರು ತಮ್ಮ ತೀರ್ಪು ನೀಡಿದ್ದಾರೆ. ಬಿಜೆಪಿಯವರು ಬಳ್ಳಾರಿ, ರಾಮನಗರ, ಚನ್ನಪಟ್ಟಣದ ಚುನಾವಣೆ ದಿನಾಂಕ ಘೋಷಿಸಲು ಹಿಂದೆ-ಮುಂದೆ ನೋಡುತ್ತಿದ್ದಾರೆ. ಬಿಜೆಪಿ ತನ್ನ ಅಧಿಕಾರವನ್ನು ಎಷ್ಟು ಸಾಧ್ಯವೋ ಅಷ್ಟು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

    ಕಲಬುರಗಿ ವಿಚಾರವಾಗಿ ಜೆಡಿಎಸ್ ನಾಯಕರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಜತೆ ನೇರವಾಗಿ ಮಾತನಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಏನೆಲ್ಲಾ ಬೇಕೋ, ಎಲ್ಲರಿಗೂ ಒಳ್ಳೆಯದಾಗುವ ದೃಷ್ಟಿಯಿಂದ ಅವಶ್ಯಕತೆ ಇದ್ದಾಗ ಏನು ಮಾಡಬೇಕೋ, ಅದನ್ನೆಲ್ಲಾ ನಾನು ಮಾಡುತ್ತೇನೆ. ಮೇಯರ್ ಪಟ್ಟ ನಮಗೇ ಬೇಕು ಎಂದು ಯಾರೂ ನನ್ನ ಮುಂದೆ ಬೇಡಿಕೆ ಇಟ್ಟಿಲ್ಲ. ಎರಡೂ ಪಕ್ಷಗಳು ಒಟ್ಟಿಗೆ ಆಡಳಿತ ನಡೆಸಬೇಕು ಎಂಬ ಪ್ರಸ್ತಾವನೆಯಷ್ಟೇ ನನ್ನ ಮುಂದೆ ಇದೆ ಎಂದರು.