Tag: Hubli Railway Station

  • ಹುಬ್ಬಳ್ಳಿ ರೈಲಿನಲ್ಲಿ 15 ಕೆಜಿ ಹಸಿ ಗಾಂಜಾ ಪತ್ತೆ

    ಹುಬ್ಬಳ್ಳಿ ರೈಲಿನಲ್ಲಿ 15 ಕೆಜಿ ಹಸಿ ಗಾಂಜಾ ಪತ್ತೆ

    ಹುಬ್ಬಳ್ಳಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಪ್ರಯಾಣಿಕ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿ 1.12 ಲಕ್ಷ ರೂ. ಮೌಲ್ಯದ 15 ಕೆ.ಜಿ ಗಾಂಜಾ ಪತ್ತೆಯಾಗಿದೆ.

     

    ಶನಿವಾರ ಗುಂತಕಲ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಗಾಂಜಾ ಪತ್ತೆಯಾಗಿದೆ. ಅಪರಿಚಿತ ಪ್ರಯಾಣಿಕ ರೈಲಿನಲ್ಲಿಯೇ ಬ್ಯಾಗ್ ಬಿಟ್ಟು ಇಳಿದಿದ್ದರ ಬಗ್ಗೆ ಪ್ರಯಾಣಿಕರು ಸಂಶಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಈ ವೇಳೆ ಕರ್ತವ್ಯ ನಿರತ ಟಿಟಿಐ ಬ್ಯಾಗ್ ಮಾಲೀಕರು ಬರದಿದ್ದಕ್ಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಚಾಕುವಿನಿಂದ ಎದೆಗೆ, ಹೊಟ್ಟೆಗೆ ಇರಿದು ವ್ಯಕ್ತಿಯ ಬರ್ಬರ ಹತ್ಯೆ

    ತಕ್ಷಣ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬಂದ ನಂತರ ಬ್ಯಾಗ್ ಅನ್ನು ಶ್ವಾನದಳ ಪರಿಶೀಲಿಸಿತು. ಬಳಿಕ ಪೊಲೀಸರು ಹಾಗೂ ರೈಲ್ವೆ ಸಿಬ್ಬಂದಿ ಎರಡು ಬ್ಯಾಗ್ ತೆರೆದಾಗ 8 ಬಂಡಲ್ ಹಸಿ ಗಾಂಜಾ ಪತ್ತೆಯಾಗಿದ್ದು, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ:  ನಿವಾಸದಲ್ಲಿದ್ದ ಮರಗಳಿಗೆ ಕೊಡಲಿ – ಮಂಡ್ಯ ಎಸ್‍ಪಿಯಿಂದ ಸರ್ವಾಧಿಕಾರಿ ಧೋರಣೆ

  • ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಫೋಟ-ಬೆಚ್ಚಿ ಬಿದ್ದ ಜನ

    ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಫೋಟ-ಬೆಚ್ಚಿ ಬಿದ್ದ ಜನ

    ಧಾರವಾಡ/ಹುಬ್ಬಳ್ಳಿ: ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

    ವಿಜಯವಾಡ ರೈಲಿನಲ್ಲಿ ಅನುಮಾನಾಸ್ಪದವಾಗಿ ರಟ್ಟಿನ ಬಾಕ್ಸ್ ಬಿಟ್ಟು ಹೋಗಲಾಗಿತ್ತು. ಬಾಕ್ಸನ್ನು ಅಧಿಕಾರಿಗಳಿಗೆ ತೋರಿಸಲು ಹುಸೇನ್ ಸಾಬ್ ಮಕಾನವಾಲೆ ಫ್ಲಾಟ್ ಫಾರಂ ನಂಬರ್ 1ಕ್ಕೆ ತೆಗೆದುಕೊಂಡು ಬಂದಿದ್ದಾರೆ. ಈ ವೇಳೆ ಬಾಕ್ಸ್ ನಲ್ಲಿದ್ದ ಟಿಫನ್ ಡಬ್ಬ ತೆರೆಯುತ್ತಿದ್ದಂತೆ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

    ಸ್ಫೋಟದಿಂದ ಫ್ಲಾಟ್‍ಫಾರಂನಲ್ಲಿರುವ ಗಾಜು ಪುಡಿ ಪುಡಿಯಾಗಿದ್ದು, ಹುಸೇನ್ ಸಾಬ್ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಹುಸೇನ್ ಸಾಬ್ ಮಂಟೂರು ರಸ್ತೆಯ ನಿವಾಸಿ. ಬಾಕ್ಸ್ ಮೇಲೆ ಕೋಲ್ಹಾಪುರದ ಶಾಸಕರ ಹೆಸರಿತ್ತು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಹಾನಗರ ಪೊಲೀಸ್, ಡಿಸಿಪಿ, ರೈಲ್ವೇ ಪೊಲೀಸರು ಶ್ವಾನದಳದ ಜೊತೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ರೈಲ್ವೇ ನಿಲ್ದಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಸ್ಫೋಟಕಕ್ಕೆ ಬಳಸಿದ ವಸ್ತುವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡಿರುವ ಯುವಕ ಹುಸೇನ್ ರಟ್ಟಿನ ಡಬ್ಬದಲ್ಲಿಯ ಬಾಕ್ಸ್ ತೆಗೆಯುತ್ತಿದ್ದಂತೆ ಸ್ಫೋಟಗೊಂಡಿದ್ದು, ನಿಲ್ದಾಣದಲ್ಲಿದ್ದ ನೂರಾರು ಪ್ರಯಾಣಿಕರು ಆತಂಕಕ್ಕೊಳಗಾಗಿದ್ದಾರೆ.