ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿದ್ದ ಬೀದರ್ನಿಂದ (Bidar) ಚಾಮರಾಜನಗರದವರೆಗೆ (Chamarajanagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwar) ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಈಗ ಸೇವೆಗಳಲ್ಲಿ ಸ್ವಾರ್ಥ ಬಂದಿದೆ: ಹೆಚ್.ಆರ್.ರಂಗನಾಥ್ ಬೇಸರ
ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.
ತಕ್ಷಣವೇ ಇಬ್ಬರು ಶಿಕ್ಷಕಿಯರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪೆಟ್ಟಾ’ ಚಿತ್ರದ ನಟಿ ಮೇಘಾ
ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವದ ಅತಿದೊಡ್ಡ ಮಾನವ ಸರಪಳಿ ನಿರ್ಮಾಣದಲ್ಲಿ ನವಜೋಡಿಯೊಂದು ಪಾಲ್ಗೊಂಡು ಗಮನ ಸೆಳೆಯಿತು.
ರಾಜ್ಯದಾದ್ಯಂತ ಸುಮಾರು 2,500 ಕಿ.ಮೀ ಉದ್ಧದ ಮಾನವ ಸರಪಳಿ ನಿರ್ಮಿಸಲಾಗಿತ್ತು. ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ, ಸುಮಾರು 60 ಕಿಮೀ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.
ಶಿವಮೊಗ್ಗ ಜಿಲ್ಲಾಡಳಿತದಿಂದ ಕೈಗೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನವಜೋಡಿಯೊಂದು ಪಾಲ್ಗೊಂಡಿತ್ತು. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ವಧು-ವರ ಭಾಗವಹಿಸಿದ್ದರು. ಮದುವೆ ಮಂಟಪದಿಂದ ಸೀದಾ ಬಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜೋಡಿ ಭಾಗವಹಿಸಿತು.
ಮಾನವ ಸರಪಳಿಯಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲೆ ಮಕ್ಕಳು ಮತ್ತು ಸರ್ಕಾರಿ ನೌಕರರು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಮಹಾನಗರ ಪಾಲಿಕೆ ಆಚರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಜೊತೆಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಸ್ಪಿ ಮಿಥುನ್ ಕುಮಾರ್ ಸಾಥ್ ನೀಡಿದರು.
ಚಾಮರಾಜನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿರುವ ಬೀದರ್ನಿಂದ (Bidar) ಚಾಮರಾಜನಗರದವರೆಗೆ (Chamarajnagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧ್ವಜವನ್ನು ಹಿಡಿದು ಏಕತೆಯ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದಾರೆ.
ಚಾಮರಾಜನಗರ ಮತ್ತು ಮೈಸೂರು (Mysuru) ಗಡಿ ಭಾಗವಾದ ಮೂಗೂರು ಕ್ರಾಸ್ನಲ್ಲಿ ಆರಂಭಗೊಂಡ ಮಾನವ ಸರಪಳಿ ಚಾಮರಾಜನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ಒಂದೊಂದು ರಾಜ್ಯದ ಸಾಂಸ್ಕೃತಿಕ ಧಿರಿಸು ಧರಿಸಿ ವಿವಿಧೆತೆಯಲ್ಲಿ ಏಕತೆಯನ್ನು ಮೆರೆದಿದ್ದಾರೆ.ಇದನ್ನೂ ಓದಿ: ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಾರಿಯಲ್ಲಿ ಸಾಗುತ್ತಿದೆ: ಸಿಎಂ
ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು. ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್, ಶಲ್ಯ ಧರಿಸಿ ಮಿಂಚಿದರು. ರೈತರು ಹಸಿರು ಟವೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ರಾಮಸಮುದ್ರದಲ್ಲಿ 1 ಕಿಮೀ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಎಲ್ಲರ ಮನ ಗೆದ್ದಿತು. ಗಡಿ ಜಿಲ್ಲೆ ಚಾಮರಾಜನಗರಲ್ಲಿ 25 ಕಿಮೀ ಉದ್ದದ ಮಾನವ ಸರಪಳಿ 19,700 ಮಂದಿ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಜಿಲ್ಲಾಡಳಿತದ ನಿರೀಕ್ಷೆ ಹುಸಿಯಾಗಿ ಮಾನವ ಸರಪಳಿ ಅಲ್ಲಲ್ಲಿ ನಿರೀಕ್ಷಿತ ಪ್ರಮಾಣದ ಜನರು ಸೇರದೇ ಇದ್ದದ್ದು ಕಂಡುಬಂದಿತು.ಇದನ್ನೂ ಓದಿ: ‘ಗಿಚ್ಚಿ ಗಿಲಿಗಿಲಿ’ ಫಿನಾಲೆಯಲ್ಲಿ ರಿವೀಲ್ ಆಗ್ತಿದೆ Bigg Boss ಬಿಗ್ ಅಪ್ಡೇಟ್- ಏನದು?
– ಬೀದರ್ನಿಂದ ಚಾಮರಾಜನಗರದವರೆಗೆ ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಇಂದು (ಸೆ.15) ಬೀದರ್ನಿಂದ (Bidar) ಚಾಮರಾಜನಗರದವರೆಗೆ (Chamarajnagar) ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚಾಲನೆ ನೀಡಿದರು.
ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಪರಿಷತ್ ಸಭಾಪತಿ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಪರಿಷತ್ ಸದಸ್ಯ ಸಲೀಂ ಅಹಮದ್, ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಪ್ಪ ಮತ್ತಿತರರು ಸಾಥ್ ನೀಡಿದರು.
ಏಕಕಾಲಕ್ಕೆ 2500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಬಹುತೇಕ ವಿವಿಧ ಸಮಾಜದ 3 ಕೋಟಿ ಜನರು ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿಲಿದ್ದಾರೆ.
ರಾಜ್ಯಾದ್ಯಂತ ಮಾನವ ಸರಪಳಿಗೆ ಚಾಲನೆ: ಬೀದರ್:
ಸಂವಿಧಾನದ ಆಶಯ ಜಾಗೃತಿಗೊಳಿಸುವ ಮಹಾದಾಶಯದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ನಿಮಿತ್ತ ಬಸವಾದಿ ಶರಣರ ಕಾಯಕ ಭೂಮಿ ಬಸವಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದವರೆಗೆ ರಾಜ್ಯ ಸರ್ಕಾರದಿಂದ ಹಮ್ಮಿಕೊಳ್ಳಲಾದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಮಾಡಿಕೊಳ್ಳಲಾಗಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಅನುಭವ ಮಂಟಪದಿಂದ ಮಾನವ ಸರಪಳಿಗೆ ಚಾಲನೆ ನೀಡುವಂತೆ ಕಾಂಗ್ರೆಸ್ ಸರ್ಕಾರ ಯೋಜನೆ ಹಾಕಿದೆ. ಬೃಹತ್ ಮಾನವ ಸರಪಳಿ ಅಭಿಯಾನಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಚಾಲನೆ ನೀಡಿದರು. ಜಿಲ್ಲೆಯಾದ್ಯಂತ 40 ಕಿ.ಮೀ.ವರೆಗೆ 35 ಸಾವಿರ ಜನರು ಭಾಗಿಯಾಗಿ ಮಾನವ ಸರಪಳಿ ರಚನೆಯಾಗಲಿದೆ. ಬಸವಕಲ್ಯಾಣದಿಂದ ಹುಮ್ನಾಬಾದ್ಗೆ ತಲುಪಿ ಬಳಿಕ ಕಲಬುರಗಿಯ ಕಿಣ್ಣಿ ಸಡಕ ತಲುಪಲಿದೆ.
ಕಲಬುರಗಿ :
ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ನಿಂದ ಚಿತ್ತಾಪುರ ತಾಲೂಕಿನ ದೇವಲಾಪುರದವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದೆ. ಈ ಕಾರ್ಯಕ್ರಮಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ವೀರಶೈವ ಕಲ್ಯಾಣ ಮಂಟಪದ ಬಳಿ ಚಾಲನೆ ನೀಡಿದರು. ಜಿಲ್ಲೆಯಾದ್ಯಂತ 113ಕಿ.ಮಿ. ಹಾದು ಹೋಗಲಿದೆ.
ಉತ್ತರಕನ್ನಡ:
ಹೊನ್ನಾವರದಲ್ಲಿ ಸಚಿವ ಮಂಕಾಳು ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ 143 ಕಿ.ಮೀ. ಉದ್ದದ ಮಾನವ ಸರಪಳಿ ಹಳಿಯಾಳದ ಮಾವಿನಕೊಪ್ಪದಿಂದ ಭಟ್ಕಳದ ಶಿರೂರುವರೆಗೆ ರಚನೆಯಾಗಲಿದ್ದು, 80 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.
ದಕ್ಷಿಣ ಕನ್ನಡ:
ಜಿಲ್ಲೆಯಲ್ಲಿ ಒಟ್ಟು 132 ಕಿ.ಮೀ. ಮಾನವ ಸರಪಳಿ ನಿರ್ಮಾಣವಾಗಲಿದ್ದು, ಉಡುಪಿ ಜಿಲ್ಲಾ ಗಡಿ ಹೆಜಮಾಡಿಯಿಂದ ಕೊಡಗು ಜಿಲ್ಲಾ ಗಡಿ ಸಂಪಾಜೆಯವರೆಗೆ ಮಾನವ ಸರಪಳಿ ರಚನೆಯಾಗಲಿದೆ.
ಬಾಗಲಕೋಟೆ:
ಜಿಲ್ಲೆಯಲ್ಲಿ 105 ಕಿ.ಮೀ. ಮಾನವಸರಪಳಿ ಆಲಮಟ್ಟಿಯಿಂದ ಸಾಲಹಳ್ಳಿವರೆಗೆ ರಚನೆಯಾಗಲಿದೆ. ಈಗಾಗಲೇ ವಿದ್ಯಾರ್ಥಿಗಳು ರಸ್ತೆ ಬದಿ ಬಂದು ಉತ್ಸುಕತಟಯಿಂದ ಕಾಯುತ್ತಿದ್ದಾರೆ.
ಚಾಮರಾಜನಗರ:
ಜಿಲ್ಲೆಯಲ್ಲಿ 24 ಕಿ.ಮೀ ಉದ್ದ ಮಾನವ ಸರಪಳಿ ರಚನೆಗೆ ಸಿದ್ದತೆ ನಡೆದಿದ್ದು, ಗಡಿಭಾಗ ಮೂಗೂರು ಕ್ರಾಸ್ನಿಂದ ಚಾಮರಾಜನಗರದವರೆಗೆ 24 ಕಿ.ಮೀ ಮಾನವ ಸರಪಳಿ 19,200 ಜನರಿಂದ ರಚನೆಯಾಗಲಿದೆ. ಬೆಳಿಗ್ಗೆ 9.30 ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಬೆಳಿಗ್ಗೆ 9.57 ರಿಂದ 9.59ರವರೆಗೆ ಮಾನವ ಸರಪಳಿ ರಚನೆಯಾಗಲಿದೆ.
ದಾವಣಗೆರೆ:
ನ್ಯಾಮತಿ ಗಡಿಭಾಗದಿಂದ ರಾಣೆಬೆನ್ನೂರು ತಾಲ್ಲೂಕಿನ ಕೊಡಿಯಾಲ್ ಹೊಸಪೇಟೆವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದೆ. 80 ಕಿ.ಮೀ.ನಲ್ಲಿ 90 ಸಾವಿರ ಜನ ಮಾನವ ಸರಪಳಿಯಲ್ಲಿ ಭಾಗಿಯಾಗಲಿದ್ದಾರೆ. ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಮಂಡ್ಯ:
ಜಿಲ್ಲೆಯ ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದ್ದು, 62 ಕಿ.ಮೀ. ಮಾನವ ಸರಪಳಿ ನಿರ್ಮಾಣವಾಗಲಿದೆ.
ಚಿತ್ರದುರ್ಗ:
145ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದ್ದು, 1.50ಲಕ್ಷ ಜನ ಭಾಗಿ ನಿರೀಕ್ಷೆಯಿದೆ. ಮೊಳಕಾಲ್ಮೂರು ತಾಲೂಕಿನ ಮೇಗಲಕಣಿವೆ ಗ್ರಾಮದಿಂದ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿವರೆಗೆ ಮಾನವ ಸರಪಳಿ ರಚನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಚಾಲನೆ ನೀಡಿದರು.
ಧಾರವಾಡ:
ಜಿಲ್ಲೆಯಲ್ಲಿ 55 ಕಿ.ಮೀ. ಮಾನವ ಸರಪಳಿ ನಿರ್ಮಾಣವಾಗಲಿದ್ದು, ಕೆಸಿಡಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.
ಬೆಳಗಾವಿ:
ಸುವರ್ಣ ವಿಧಾನಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.
ಹಾಸನ:
ಜಿಲ್ಲೆಯ, ಕೊಡಗು ಗಡಿ ಕಡುವಿನಹೊಸಹಳ್ಳಿಯಿಂದ ಚಿಕ್ಕಮಗಳೂರು ಜಿಲ್ಲೆಯ ಗಡಿವರೆಗೆ 114 ಕಿಲೋಮೀಟರ್ ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದೆ.
ಶಿವಮೊಗ್ಗ:
ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ 60 ಕಿ.ಮೀ ಮಾನವ ಸರಪಳಿ ನಿರ್ಮಾಣವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಕೊಡಗು:
ಜಿಲ್ಲೆಯ ಸಂಪಾಜೆಯಿಂದ ಶಿರಂಗಾಲದವರೆಗೆ 72.7 ಕಿ.ಮೀ ಮಾನವ ಸರಪಳಿ ನಿರ್ಮಾಣವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಚಾಲನೆ ನೀಡಿದರು.
ಕೋಲಾರ:
ಜಿಲ್ಲೆಯ ಚೊಕ್ಕನಹಳ್ಳಿ ಗ್ರಾಮದಿಂದ ವೆಂಕಟಾಪುರ ಗ್ರಾಮದವರೆಗೆ 55 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದೆ.
ತುಮಕೂರು:
ಜಿಲ್ಲೆಯಲ್ಲಿ 25 ಲಕ್ಷ ಜನರಿಂದ ಮಾನವ ಸರಪಳಿ ನಿರ್ಮಾಣವಾಗಲಿದ್ದು, ಮಾನವ ಸರಪಳಿಗೆ ಸಚಿವ ಪರಮೇಶ್ವರ್ ಚಾಲನೆ ನೀಡಿದರು.
ಉಡುಪಿ:
ಜಿಲ್ಲೆಯ ಗಡಿ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ನಿಂದ, ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ 106 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಾಣವಾಗಲಿದೆ.
ರಾಮನಗರ:
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಮೈಸೂರು-ಬೆಂಗಳೂರು ಹಳೇ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಾಣವಾಗಲಿದೆ.
ಡೆಹ್ರಾಡೂನ್: 50 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ಉತ್ತರಾಖಂಡದ ವಿದ್ಯಾರ್ಥಿಗಳು ಪಾಲಿಥಿನ್ (ಪ್ಲಾಸ್ಟಿಕ್) ವಿರುದ್ಧ ಜಾಗೃತಿ ಮೂಡಿಸಿದ್ದಾರೆ.
ವಿವಿಧ ಶಾಲಾ ಮಕ್ಕಳು ಡೆಹ್ರಾಡೂನ್ನ ರಸ್ತೆಯುದ್ದಕ್ಕೂ ಸುಮಾರು 50 ಕಿ.ಮೀ ನಿಂತು, ಪಾಲಿಥಿನ್ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲು ಮಾನವ ಸರಪಳಿಯನ್ನು ರಚಿಸಿದರು. ಈ ಅಭಿಯನದಲ್ಲಿ ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕೂಡ ಭಾಗವಹಿಸಿದ್ದರು.
#WATCH Uttarakhand: A 50-km-long human chain formed by students in Dehradun to spread awareness against the use of polythene. Chief Minister Trivendra Singh Rawat also took part in the campaign. pic.twitter.com/WOeV2BgRda
ವಿದ್ಯಾರ್ಥಿಗಳು ಜಾಗೃತಿ ಮೂಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೆಲ ನೆಟ್ಟಿಗರು ಕಮೆಂಟ್ ಮೂಲಕ ಪಾಲಿಥಿಲ್ ಬಳಸದಂದೆ ಮನವಿ ಮಾಡಿಕೊಂಡಿದ್ದಾರೆ.
ಪ್ಯಾಕಿಂಗ್ ಕವರ್, ಕೈಚೀಲ, ಉಪಾಹಾರ ನೀಡುವ ಪ್ಲೇಟ್, ನೀರಿನ ಗ್ಲಾಸ್, ಟೇಬಲ್ ಪೇಪರ್ ಸೇರಿ ಹತ್ತು ಹಲವು ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಆದರೂ ಕೆಲವು ವ್ಯಾಪಾರಸ್ತರು ಕದ್ದು ಮುಚ್ಚಿ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಅಭಿಯಾನದ ಮೂಲಕ ಹೂವು, ಹಣ್ಣು, ಚಿಲ್ಲರೆ ಅಂಗಡಿಗಳಲ್ಲಿ ಪಾಲಿಥಿನ್ ಕವರ್ ಮಾರಾಟ ಅಥವಾ ಬಳಸಬಾರದು. ಅದಕ್ಕೆ ಪರಾರಯಯವಾಗಿ ಬಟ್ಟೆ ಅಥವಾ ಬ್ಯಾಗ್ ಬಳಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಭೋಪಾಲ್: ಮಧ್ಯಪ್ರದೇಶದ ಇಂದೋರಿನ ಗೌತಮಪುರದಲ್ಲಿ ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಸ್ಥಳೀಯರು ಮಾನವ ಸರ್ಪಳಿ ನಿರ್ಮಿಸಿ, ತಮ್ಮ ಪ್ರಾಣ ಪಣಕ್ಕಿಟ್ಟು ಅವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಗುರುವಾರ ಗೌತಮಪುರದಲ್ಲಿನ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಲು ಮುಂದಾದರು. ಈ ವೇಳೆ 10ರಿಂದ 15 ಮಂದಿ ಸೇರಿ ಒಬ್ಬರ ಕೈ ಮತ್ತೊಬ್ಬರು ಹಿಡಿದು ಮಾನವ ಸರಪಳಿ ನಿರ್ಮಿಸಿಕೊಂಡು ಹೊಳೆಗೆ ಇಳಿದಿದ್ದಾರೆ. ಸದ್ಯ ಕೊಚ್ಚಿ ಹೋಗುತ್ತಿದ್ದ ಓರ್ವನನ್ನು ಸ್ಥಳೀಯರೇ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
Madhya Pradesh: Locals in Indore's Gautampura formed human chain to rescue two people who were washed away in an overflowing stream. One person was rescued, search for the other is underway. (12.9.19) #MadhyaPradeshpic.twitter.com/3NOZVJFLfJ
ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ಇನ್ನೋರ್ವ ಪತ್ತೆಯಾಗದ ಹಿನ್ನೆಲೆ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ. ಅವರಿಗೆ ಸ್ಥಳೀಯರು ಕೂಡ ಸಾಥ್ ನೀಡುತ್ತಿದ್ದಾರೆ. ಹೊಳೆಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಈ ವ್ಯಕ್ತಿಗಳು ಹೊಳೆ ಬಳಿ ಏಕೆ ಹೋಗಿದ್ದರು? ಹೇಗೆ ನೀರಿಗೆ ಬಿದ್ದರು ಎನ್ನುವ ಬಗ್ಗೆ ಕೂಡ ಯಾವುದೇ ಮಾಹಿತಿ ದೊರಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
#WATCH Locals in Indore's Gautampura form human chain to rescue two people who were washed away in an overflowing stream. One person was rescued, search for the other is underway. (12.9.19) #MadhyaPradeshpic.twitter.com/FXaHDz9p1z
ಕೊಪ್ಪಳ: ವಿಧಾನಸಭೆ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಲೇ, ರಾಜ್ಯದ ಪ್ರಮುಖ ಮೂರು ಪಕ್ಷಗಳು ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿವೆ. ಮೂರು ಪಕ್ಷದ ನಾಯಕರು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಇದನ್ನೆಲ್ಲ ನೋಡಿದ ಕೊಪ್ಪಳದ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಡಿಸಿ ನಾವೇನು ಕಮ್ಮಿ ಎಂದು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಹೌದು. ಜಿಲ್ಲಾಧಿಕಾರಿಗಳೂ ಚುನಾವಣೆ ಪ್ರಚಾರ ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಮತದಾನದ ಕುರಿತ ಜಾಗೃತಿ ಮೂಡಿಸಲು ವಿಶೇಷವಾದ ಕಾರ್ಯಕ್ಕೆ ಮುಂದಾಗಿದ್ದಾರೆ.
ಜಾಗೃತಿ ಹೇಗೆ?: ವಿದ್ಯಾರ್ಥಿಗಳಿಂದ ಭಾರತರ ನಕಾಶೆ ಮಾದರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಅದರಲ್ಲಿ ಮನಸ್ಸಿಗೆ ಮುದ ನೀಡುವ ಕರ್ನಾಟಕ ನಕಾಶೆಯ ದೃಶ್ಯವನ್ನು ನಿರ್ಮಿಸಿದ್ದರು. ಕೊಪ್ಪಳದ ಗವಿಮಠದ ಆವರಣದಲ್ಲಿ ನಡೆದ ಮತದಾನದ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಸುಮಾರು 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಭಾರತ ನಕಾಶೆ ಜೊತೆಗೆ ಕನ್ನಡದಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಹಾಗೂ ಇಂಗ್ಲೀಷ್ ನಲ್ಲಿ ಮೈ ವೋಟ್, ಮೈ ರೈಟ್ಸ್ ಎಂಬ ಘೋಷ ವಾಕ್ಯ ಬರೆದು ಅದರಲ್ಲೂ ಮಾನವ ಸರಪಳಿ ಮಾಡಲಾಗಿತ್ತು.
ಮುಂಬಾರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶವನ್ನು ಈ ಕಾರ್ಯ ಹೊಂದಿದೆ. ಈ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ಜಿಲ್ಲೆಯ ಜಿಪಂ ಸಿಇಒಗೆ ಚುನಾವಣಾ ಆಯೋಗ ಜವಾಬ್ದಾರಿ ವಹಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿಭಿನ್ನ ಮಾದರಿಯಲ್ಲಿ ಮತದಾನ ಜಾಗೃತಿ ಆರಂಭವಾಗಲಿದ್ದು, ಕೊಪ್ಪಳ ಜಿಲ್ಲಾಡಳಿತ ತುಸು ಮುಂಚಿತವಾಗಿಯೇ ಈ ಕಾರ್ಯಕ್ಕೆ ಚಾಲನೆ ನೀಡಿದೆ.
ಕಾರ್ಯಕ್ರಮದ ವೇಳೆ ಮಾತನಾಡಿದ ಕೊಪ್ಪಳ ಡಿಸಿ, ಮತದಾನದ ಹಕ್ಕನ್ನು ನಾವು ಚಲಾಯಿಸದಿದ್ದಲ್ಲಿ, ನಮಗೆ ನಾವು ವಂಚನೆ ಮಾಡಿಕೊಂಡಂತಾಗುತ್ತದೆ ಅಂದ್ರು. ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸವುಳ್ಳ ನಾವು, ಯಾವುದೇ ಪ್ರೇರಣೆ ಮತ್ತು ದಾಕ್ಷಿಣ್ಯಕ್ಕೆ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂಬ ಪ್ರತಿಜ್ಞಾವಿಧಿ ಭೋದಿಸಿದರು. ಈ ಬಾರಿ ಎಲ್ಲ ಪ್ರಜ್ಞಾವಂತರು ಮತಗಟ್ಟೆಗೆ ಬಂದು ಮತ ಚಲಾಯಿಸಲು. ಶೇ. 100 ರಷ್ಟು ಮತದಾನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.