Tag: human rights

  • ಮಾನವ ಹಕ್ಕುಗಳನ್ನು ಬಳಸಿ ನಮ್ಮಲ್ಲಿ ಇರಲು ಸಾಧ್ಯವಿಲ್ಲ: ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್

    ಮಾನವ ಹಕ್ಕುಗಳನ್ನು ಬಳಸಿ ನಮ್ಮಲ್ಲಿ ಇರಲು ಸಾಧ್ಯವಿಲ್ಲ: ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್

    ನವದೆಹಲಿ: ದೇಶಕ್ಕೆ ಅಕ್ರಮ ವಲಸಿಗರ ಪ್ರವೇಶವನ್ನು ತಡೆಯಲು ಬ್ರಿಟನ್ ಪ್ರಧಾನಿ ರಿಶಿ ಸುನಕ್ (Rishi Sunak) ಹೊಸ ನೀತಿಯೊಂದನ್ನು ಘೋಷಿಸಿದ್ದಾರೆ.

    ಅಕ್ರಮ ವಲಸಿಗರ ಕುರಿತು, ನೀವು ಇಲ್ಲಿ ಅತಿಕ್ರಮವಾಗಿ ಬಂದು ಉಳಿದುಕೊಳ್ಳಲು, ಮಾನವಹಕ್ಕುಗಳನ್ನು (Human rights) ಬಳಸಿಕೊಂಡು ರಕ್ಷಣೆ ಪಡೆಯುವುದು ಸಾಧ್ಯವಿಲ್ಲ ಎಂದು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ದೇಶದಲ್ಲಿ ಅಕ್ರಮ ವಲಸಿಗರ ಸಂಖ್ಯೆ ಉಲ್ಬಣಗೊಳ್ಳುತ್ತಿದೆ. ಅಕ್ರಮ ವಲಸಿಗರನ್ನು ನಾವು ಸಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜನಲ್ಲ, ದೊರೆ ರಾಮಭೋಜ ನೀಡಿದ್ದು- ಪೇಜಾವರ ಶ್ರೀ ಸ್ಪಷ್ಟನೆ

    ನಿಮ್ಮ ದೇಶ ಸುರಕ್ಷಿತವಾಗಿದ್ದರೂ, ಸುರಕ್ಷಿತವಾಗಿರದಿದ್ದರೂ ಸರಿ ಅಕ್ರಮ ವಲಸಿಗರನ್ನು ನಾವು ವಾರದೊಳಗಾಗಿ ಹೊರದಬ್ಬುತ್ತೇವೆ. ಒಮ್ಮೆ ಹೊರ ಹಾಕಿ ನಿಷೇಧಕ್ಕೊಳಪಟ್ಟ ವ್ಯಕ್ತಿಗಳಿಗೆ ಅಮೆರಿಕ (America) ಮತ್ತು ಅಸ್ಟ್ರೇಲಿಯಾಕ್ಕೆ (Australia) ಪ್ರವೇಶ ಇರುವುದಿಲ್ಲ ಎಂದಿದ್ದಾರೆ.

    ಬ್ರಿಟೀಷ್ ಕಾಲುವೆ (English Channel)  ಮೂಲಕ ದೋಣಿಗಳಲ್ಲಿ ದೇಶದ ಗಡಿ ನುಸುಳುವ ವಲಸಿಗರ ಮೇಲೆ ಅಕ್ರಮ ವಲಸೆ ಕಾಯ್ದೆಯ ಅಡಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

    ಕಾಯ್ದೆಯಡಿ, ಸಚಿವ ಸುಯೆಲ್ಲಾ ಬ್ರಾವರ್ ಅವರಿಗೆ ನೂತನ ಜವಬ್ದಾರಿ ನೀಡಲಾಗುತ್ತಿದೆ. ಕಾಲುವೆ ಮೂಲಕ ನುಸುಳುವ ಎಲ್ಲಾ ಅಕ್ರಮ ವಲಸಿಗರ ಹಕ್ಕುಗಳನ್ನು ಕಸಿದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ನಮ್ಮ ಸಹಾಯದ ಅಗತ್ಯವಿರುವವರಿಗೆ ಇದು ಅನ್ಯಾಯ ಎನಿಸಬಹುದು. ಆದರೆ ಅಕ್ರಮ ವಲಸಿಗರಿಂದ ನಮ್ಮ ಆಶ್ರಯ ತಾಣಗಳು ನಶಿಸುತ್ತಿವೆ ಎಂದು ಗುಡುಗಿದ್ದಾರೆ.

    ಕಳೆದ ವರ್ಷ 45,000 ವಲಸಿಗರು ದೋಣಿಗಳ ಮೂಲಕ ಅತಿಕ್ರಮ ಪ್ರವೇಶ ಮಾಡಿದ್ದಾರೆ. 2018 ರಿಂದ ಪ್ರತಿ ವರ್ಷ 60% ರಷ್ಟು ವಲಸಿಗರ ಪ್ರಮಾಣ ಹೆಚ್ಚಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ರಿಶಿ ಸುನಕ್ ಅವರ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರ ಗುಂಪುಗಳು ವಿರೋಧ ವ್ಯಕ್ತಪಡಿಸಿವೆ. ಈ ಯೋಜನೆ ಸರಿಯಲ್ಲ. ನಿರಾಶ್ರಿತರ ಮೇಲಿನ ದೌರ್ಜನ್ಯ ಎಂಬ ಟೀಕೆಗಳು ಕೇಳಿ ಬಂದಿವೆ.

    ಕಳೆದ ವರ್ಷ ಸಹ ಇಂತಹ ಕ್ರಮಕ್ಕೆ ಮುಂದಾಗಿ ಅಕ್ರಮ ವಲಸಿಗರನ್ನು ರುವಾಂಡಕ್ಕೆ (Rwanda) ದಬ್ಬುವ ಯೋಜನೆ ಹಾಕಲಾಗಿತ್ತು. ಯೂರೋಪಿಯನ್ ಮಾನವ ಹಕ್ಕುಗಳ ಕೋರ್ಟ್ (European Court of Human Rights) ತಡೆಯಾಜ್ಞೆಯಿಂದ ಯೋಜನೆ ಸ್ಥಗಿತಗೊಂಡಿತ್ತು. ಇದನ್ನೂ ಓದಿ: ಬೇಹುಗಾರಿಕೆ ಭೀತಿ – 11 ಚೀನಾ ಬ್ರ್ಯಾಂಡ್ ಮೂಬೈಲ್ ಬಳಸದಂತೆ ಸೈನಿಕರಿಗೆ ಸಲಹೆ

  • ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಕಾಬೂಲ್: ಅಂತಾರಾಷ್ಟ್ರೀಯ ಒಪ್ಪಿಗೆ ಬಯಸುವ ತಾಲಿಬಾನ್ ಮೊದಲು ತಮ್ಮ ದೇಶದ ಜನರ ಮಾನವ ಹಕ್ಕುಗಳನ್ನು ಗೌರವಿಸಿಬೇಕು ಎಂದು ವಿಶ್ವಸಂಸ್ಥೆ ತಾಲಿಬಾನ್‍ಗೆ ಸಂದೇಶವನ್ನು ನೀಡಿದೆ.

    ತಾಲಿಬಾನ್ ಸರ್ಕಾರ ಅಂತರಾಷ್ಟ್ರೀಯ ಒಪ್ಪಿಗೆ ಪಡೆಯಬೇಕು ಎಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಯುಎಸ್ ಮಿಷನ್ ಮುಖ್ಯಸ್ಥ ಇಯಾನ್ ಮೆಕ್ಕಾರಿ ಈ ಕುರಿತು ಟ್ವಿಟ್ಟರ್‍ನಲ್ಲಿ ಉತ್ತರ ಕೊಟ್ಟಿದ್ದು, ಕಳೆದ ವರ್ಷ ದೋಹಾದಲ್ಲಿ, ನಾವು ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ತಾಲಿಬಾನ್‍ನೊಂದಿಗೆ ಸಂವಾದವನ್ನು ನಡೆಸಿದ್ದೇವೆ. ನಾವು ಯುಎನ್ ನಾಗರಿಕರು ಮತ್ತು ಅಫ್ಘಾನ್ ಜನರೊಂದಿಗೆ ವ್ಯಾಪಕವಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಹಲವು ಸವತ್ತುಗಳನ್ನು ಒದಗಿಸಿದ್ದೇವೆ. ನಾವು ಸಹಾಯ ಮಾಡಲು ಸಾಧ್ಯವಾಗಿದೆ ಎಂದು ನನಗೆ ಸಂತೋಷವಾಗಿದೆ. ಆದರೆ ಅಫ್ಘಾನಿಸ್ತಾನದಲ್ಲಿ ನಾವು ಇನ್ನೂ ಹಲವು ಸವಾಲುಗಳನ್ನು ಎದುರಿಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್‌ಗೆ ಭಾರತದಲ್ಲಿ ಮೊದಲ ಬಲಿ

    ಅಂತಾರಾಷ್ಟ್ರೀಯ ಪಾಲುದಾರರು ಮತ್ತು ಸಮಾನಮನಸ್ಕ ಸಮುದಾಯದ ಅಸಾಧಾರಣ ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ನಾವು ಒಟ್ಟಾಗಿ ಒಂದು ಸ್ಪಷ್ಟ ಸಂದೇಶವನ್ನು ಕಳುಹಿಸಿದ್ದೇವೆ. ತಾಲಿಬಾನ್ ಅಂತರಾಷ್ಟ್ರೀಯ ಸಮುದಾಯದ ಅಂಗೀಕಾರವನ್ನು ಪಡೆಯಲು ಆಶಿಸಿದರೆ, ಅವರು ಎಲ್ಲ ಆಫ್ಘನ್ ಜನರ ಅಭಿಪ್ರಾಯಗಳನ್ನು ಕೇಳಬೇಕು ಮತ್ತು ಗೌರವಿಸಬೇಕು. ಅದರ ಜೊತೆಗೆ ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಸಂದೇಶವನ್ನು ಕಳುಹಿಸಿದರು.

    ಬಾಲಕಿಯರಿಗೆ ಮಾಧ್ಯಮಿಕ ಶಾಲೆಗಳಿಗೆ ಪ್ರವೇಶ ನೀಡಲು ತಾಲಿಬಾನ್‍ನ ನಿರಂತರವಾಗಿ ನಿರಾಕರಣೆ ಮಾಡುತ್ತಿದೆ. ಅಲ್ಲದೇ ಮಾಧ್ಯಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದೆ. ಮಹಿಳೆಯರ ಹಕ್ಕುಗಳ ಮೇಲೆ ಸ್ವೀಕಾರಾರ್ಹವಲ್ಲದ ನಿರ್ಬಂಧಗಳು ಸೇರಿದಂತೆ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳ ಬಗ್ಗೆ ಅವರು ನಿರಾಶೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಅಮೆರಿಕ ನೆಲದಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ

    ಅಮೆರಿಕ ನೆಲದಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ

    ವಾಷಿಂಗ್ಟನ್‌: ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ ಎಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳುವ ಮೂಲಕ ಅಮೆರಿಕ ನೆಲದಲ್ಲೇ ಅಮೆರಿಕ್ಕೆ ತಿರುಗೇಟು ನೀಡಿದ್ದಾರೆ.

    ಹೌದು. ಅಮೆರಿಕದ ಜನಪ್ರತಿನಿಧಿಗಳು ಭಾರತದ ಪರಿಸ್ಥಿತಿಯ ಬಗ್ಗೆ ಮಾತನಾಡುವುದು ಹೊಸದೆನಲ್ಲ. ಆದರೆ ಭಾರತ ಸರ್ಕಾರದ ಪ್ರತಿನಿಧಿಯಾದ ಜೈ ಶಂಕರ್‌ ಅವರು ಅಮೆರಿಕ ನೆಲದಲ್ಲೇ ಅಮೆರಿಕದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ನಮ್ಮ ದೇಶದ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದರೆ ನಮಗೂ ನಿಮ್ಮ ಬಗ್ಗೆ ಧೈರ್ಯವಾಗಿ ಬಹಿರಂಗವಾಗಿ ಹೇಳಲು ಬರುತ್ತದೆ ಎಂಬ ಖಡಕ್‌ ಸಂದೇಶವನ್ನು ರವಾನಿಸಿದ್ದಾರೆ.

    ಬ್ಲಿಂಕನ್‌ ಹೇಳಿದ್ದೇನು?
    ಅಮೆರಿಕ, ಭಾರತ ಮಧ್ಯೆ ನಡೆದ 2+2 ಸಭೆಯ ನಂತರ ಜಂಟಿ ಸಮ್ಮೇಳನದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಪೊಲೀಸ್ ಮತ್ತು ಜೈಲು ಅಧಿಕಾರಿಗಳಿಂದ ಮಾನವ ಹಕ್ಕುಗಳ ಉಲ್ಲಂಘನೆ, ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯದಂತಹ ಕೆಲವು ಘಟನೆಗಳನ್ನು ನಾವು ಗಮನಿಸುತ್ತಿದ್ದೇವೆ ಎಂದು ಹೇಳಿದ್ದರು.

    ಜೈಶಂಕರ್‌ ಹೇಳಿದ್ದೇನು?
    ಭಾರತ ಮತ್ತು ಅಮೆರಿಕದ ಮಧ್ಯೆ ನಡೆದ ಮಾತುಕತೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಿಲ್ಲ. ಈ ಸಭೆಯಲ್ಲಿ ಮುಖ್ಯವಾಗಿ ರಾಜಕೀಯ-ಮಿಲಿಟರಿ ವಿಷಯಗಳ ಬಗ್ಗೆ ಮಾತುಕತೆ ನಡೆದಿದೆ ಎಂದು ಎಂದು ಸ್ಪಷ್ಟಪಡಿಸಿದರು. ಜನರು ಭಾರತದ ಬಗ್ಗೆ ಕಲ್ಪನೆಗಳನ್ನು ಹೊಂದಬಹುದು. ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ. ಭಾರತದ ಬಗ್ಗೆ ಒಂದು ರೀತಿಯ ಲಾಬಿ ಮತ್ತು ವೋಟ್ ಬ್ಯಾಂಕ್ ಇಂತಹ ಸಮಸ್ಯೆಗಳನ್ನು ಮುಂದಿಡುತ್ತದೆ ಎಂದು ನೇರವಾಗಿ ಜೈಶಂಕರ್‌ ಹೇಳಿದ್ದಾರೆ.  ಇದನ್ನೂ ಓದಿ: ಮುಸ್ಲಿಮರು ಬಿಜೆಪಿ ವಿರೋಧಿಸುವುದನ್ನು ನಿಲ್ಲಿಸಬೇಕು: ಮುಸ್ಲಿಂ ಧರ್ಮಗುರು ಸಲಹೆ

    ಪತ್ರಕರ್ತೆಗೆ ಪಾಠ:
    ವಿದೇಶಾಂಗ ಇಲಾಖೆಯಲ್ಲಿ ಅಪಾರ ಅನುಭವ ಇರುವ ಜೈಶಂಕರ್‌ ಈ ಮೊದಲು ವಿದೇಶಿ ಪತ್ರಕರ್ತೆಗೆ ಸುದ್ದಿಗೋಷ್ಠಿಯಲ್ಲೇ ಪಾಠ ಮಾಡಿದ್ದರು. ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲವನ್ನು ಖರೀದಿಸುತ್ತಿರುವ ಬಗ್ಗೆ ಆಕ್ಷೇಪ ಎತ್ತಿ ಪ್ರತಕರ್ತೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಜೈ ಶಂಕರ್‌, ನೀವು ತೈಲ ಖರೀದಿಯ ಬಗ್ಗೆ ಉಲ್ಲೇಖಿಸಿದ್ದನ್ನು ನಾನು ಗಮನಿಸಿದ್ದೇನೆ. ರಷ್ಯಾದಿಂದ ಇಂಧನ ಖರೀದಿಗೆ ಸಂಬಂಧಿಸಿದಂತೆ ನಿಮ್ಮ ಗಮನವನ್ನು ಯುರೋಪ್ ಕಡೆಗೆ ಕೇಂದ್ರೀಕರಿಸಬೇಕೆಂದು ನಾನು ಸಲಹೆ ನೀಡುತ್ತೇನೆ. ನಾವು ಅಗತ್ಯವಿರುವಷ್ಟನ್ನು ಮಾತ್ರ ಖರೀದಿಸುತ್ತೇವೆ. ಆದರೆ ಅಂಕಿಅಂಶಗಳನ್ನು ನೋಡುವಾಗ, ಬಹುಶಃ ತಿಂಗಳಿಗೆ ನಮ್ಮ ಒಟ್ಟು ಖರೀದಿಯು ಯುರೋಪ್‌ನ ಅರ್ಧ ದಿನದಲ್ಲಿ ಬಳಕೆ ಆಗುತ್ತಿರುವ ತೈಲ ಪ್ರಮಾಣಕ್ಕಿಂತ ಕಡಿಮೆಯಿರಬಹುದು. ಆದ್ದರಿಂದ ನೀವು ಯುರೋಪ್‌ ಬಗ್ಗೆ ಗಮನ ಹರಿಸುವುದು ಉತ್ತಮ ಎಂದು ತಿರುಗೇಟು ನೀಡಿದ್ದರು. ಇದನ್ನೂ ಓದಿ: ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ: ವಿಶೇಷತೆ ಏನು? ಟಿಕೆಟ್‌ ದರ ಎಷ್ಟು?

    ವಿದೇಶಿ ಮಾಧ್ಯಮಗಳು ಭಾರತದ ವಿರುದ್ಧ ಸುದ್ದಿ ಮಾಡುವುದರ ಜೊತೆ ಪಾಶ್ಚಿಮಾತ್ಯ ಸರ್ಕಾರಗಳ ತಾಳಕ್ಕೆ ಭಾರತ ಕುಣಿಯಬೇಕು ಎಂದು ಬಯಸುತ್ತಿರುತ್ತವೆ. ಈ ಕಾರಣಕ್ಕೆ ರಷ್ಯಾದಿಂದ ಭಾರತ ತೈಲ ಖರೀದಿ, ಎಸ್‌400 ವಾಯು ರಕ್ಷಣಾ ವ್ಯವಸ್ಥೆ ಖರೀದಿಗೆ ಆಕ್ಷೇಪ ವ್ಯಕ್ತಪಡಿಸಿ ವರದಿ ಪ್ರಕಟಿಸುತ್ತಿವೆ. ಆದರೆ ಭಾರತ ಈ ಕುತಂತ್ರಕ್ಕೆ ಬಗ್ಗದೇ ರಷ್ಯಾದ ಜೊತೆ ವ್ಯವಹಾರ ಮಾಡುವುದರ ಜೊತೆಗೆ ವಿದೇಶಿ ವೇದಿಕೆಗಳಲ್ಲೇ ಪ್ರಶ್ನೆಗಳಿಗೆ ಖಡಕ್‌ ಉತ್ತರ ನೀಡುತ್ತಿದೆ. ಯುರೋಪ್‌ ದೇಶಗಳು ರಷ್ಯಾದ ಜೊತೆ ವ್ಯವಹಾರ ನಡೆಸುತ್ತಿರುವಾಗಲೇ ನಮ್ಮ ನಡೆಯ ಬಗ್ಗೆ ಪ್ರಶ್ನೆ ಮಾಡುವುದು ಎಷ್ಟು ಸರಿ ಎನ್ನುವುದು ಭಾರತದ ನಿಲುವು.

  • ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡುತ್ತಿದೆ: ಅನ್ಸಾರಿ

    ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡುತ್ತಿದೆ: ಅನ್ಸಾರಿ

    ನವದೆಹಲಿ: ಭಾರತ ಹಿಂದೂ ರಾಷ್ಟ್ರವಾಗುತ್ತಿದ್ದು, ಜನರಿಗೆ ಅಭದ್ರತೆ ಕಾಡುತ್ತಿದೆ ಎಂದು ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿದ್ದಾರೆ.

    ಭಾರತ ಅಮೆರಿಕ ಮುಸ್ಲಿಮ್ ಸಂಘಟನೆ ಆಯೋಜಿಸಿದ್ದ ಅಮೆರಿಕಾದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದ ಮಾನವ ಹಕ್ಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್‌ಪಿ ಗೆದ್ದರೆ ಯುಪಿ ಗೂಂಡಾಗಳ ರಾಜ್ಯವಾಗುತ್ತೆ: ಅಮಿತ್‌ ಶಾ ವಾಗ್ದಾಳಿ

    ಅಮೆರಿಕಾದಲ್ಲಿರುವ ಭಾರತ ಮೂಲದ ಮುಸ್ಲಿಂ ಸಂಘಟನೆಯೊಂದು ಆಯೋಜಿಸಿದ ವರ್ಚುಚಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಮೀದ್ ಅನ್ಸಾರಿ ಮತ್ತು ಅಮೆರಿಕದ ಮೂವರು ಸಂಸತ್ ಸದಸ್ಯರಾದ ಜಿಮ್ ಮೆಕ್‍ಗವರ್ನ್, ಆಂಡಿ ಲೆವಿನ್ ಮತ್ತು ಜೇಮೀ ರಾಸ್ಕಿನ್, ಭಾರತದಲ್ಲಿ ಮಾನವ ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    ಇತ್ತಿಚೀನ ದಿನಗಳಲ್ಲಿ ಭಾರತದಲ್ಲಿ ಧರ್ಮಗಳ ಬಗ್ಗೆ ತುಂಬಾ ಚರ್ಚೆಗಳಾಗುತ್ತಿವೆ. ಭಾರತದಲ್ಲಿ ಅಲ್ಪಸಂಖ್ಯಾತರ ನಂಬಿಕೆಗಳಿಗೆ ಒತ್ತುಕೊಡುತಿಲ್ಲ. ಅಲ್ಲದೆ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಭಾರತವನ್ನು ಹಿಂದೂ ರಾಷ್ಟವನ್ನಾಗಿಸುವ ಕೆಲಸವಾಗುತ್ತಿದೆ ಎಂದು ವರ್ಚುವಲ್ ಕಾರ್ಯಕ್ರಮದಲ್ಲಿ ಚರ್ಚೆ ನಡೆಸಲಾಗಿದೆ. ಇದನ್ನೂ ಓದಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ – ಇದು ನಾಚಿಗೇಡಿನ ಸಂಗತಿ ಎಂದ ಕೇಜ್ರಿವಾಲ್

    ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಹಮೀದ್ ಅನ್ಸಾರಿ, ನಾನು ಪ್ರಸ್ತುತ ದಿನಗಳಲ್ಲಿ ಗಮನಿಸಿದಾಗ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಉದ್ದೇಶ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ರಾಷ್ಟ್ರದಲ್ಲಿರುವ ಎಲ್ಲಾ ನಾಗರೀಕರನ್ನು ಒಂದೇ ಎಂದು ಕಾಣುವ ಅಭಿಪ್ರಾಯ ಬದಲಾಗಿದೆ. ನಾಗರಿಕರ ಕೆಲವು ಹಕ್ಕುಗಳನ್ನು ದಮನಿಸುವಂತಹ ಕಾರ್ಯ ದೇಶದಲ್ಲಿ ನಡೆಯುತ್ತಿದೆ. ಇದರಿಂದ ದೇಶದಲ್ಲಿರುವ ಜನರಲ್ಲಿ ಅಭದ್ರತೆ ಕಾಡುತ್ತಿದೆ ಎಂದು ಭಾರತದ ಬಗ್ಗೆ ಟೀಕಿಸಿದ್ದಾರೆ.

    ಭಾರತದಲ್ಲಿ ಧಾರ್ಮಿಕ ತಾರತಮ್ಯ ಹೆಚ್ಚಾಗುತ್ತಿದ್ದು, ನಾಗರಿಕರು ಸ್ವತಂತ್ರವಾದ ನಿರ್ಧಾರವನ್ನು ತೆಗೆಯಲು ಅವಕಾಶ ಇಲ್ಲದಾಗಿದೆ. ಎಂದು ವರ್ಚುವಲ್ ಚರ್ಚೆಯಲ್ಲಿ ಭಾಗವಹಿಸಿದ ಇತರರು ಕೂಡ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

    ಕೆಲದಿನಗಳ ಹಿಂದೆ ಕೇಂದ್ರ ಸರ್ಕಾರ ದೇಶದಲ್ಲಿ ನಾಗರೀಕ ಹಕ್ಕುಗಳು ಕ್ಷೀಣಿಸುತ್ತಿದೆ ಎಂದು ವಿದೇಶದಿಂದ ಕೇಳಿಬರುತ್ತಿದ್ದ ಆರೋಪಗಳನ್ನು ಅಲ್ಲಗೆಳೆದಿತ್ತು.

  • ಮಾನವ ಹಕ್ಕುಗಳ ಬಗ್ಗೆ ಆಯ್ದ ವಾಖ್ಯಾನದಿಂದ ದೇಶದ ಪ್ರಜಾಪಭುತ್ವಕ್ಕೆ ಧಕ್ಕೆ: ಮೋದಿ ಕಿಡಿ

    ಮಾನವ ಹಕ್ಕುಗಳ ಬಗ್ಗೆ ಆಯ್ದ ವಾಖ್ಯಾನದಿಂದ ದೇಶದ ಪ್ರಜಾಪಭುತ್ವಕ್ಕೆ ಧಕ್ಕೆ: ಮೋದಿ ಕಿಡಿ

    ನವದೆಹಲಿ: ಮಾನವ ಹಕ್ಕುಗಳ ಬಗ್ಗೆ ಕೆಲವರ ‘ಆಯ್ದ ವ್ಯಾಖ್ಯಾನ’ದಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 28ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಲಾಭ ಮತ್ತು ನಷ್ಟದ ಮೇಲೆ ಕಣ್ಣಿಟ್ಟು ಕೆಲವರು ಮಾನವ ಹಕ್ಕುಗಳ ಬಗ್ಗೆ ವಾಖ್ಯಾನ ಮಾಡುತ್ತಾರೆ. ಈ ರೀತಿ ವಾಖ್ಯಾನ ಮಾಡುವುದು ಮಾನವ ಹಕ್ಕುಗಳಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೆಲವರು ಎಲ್ಲ ಘಟನೆಗಳನ್ನು ಪರಿಗಣಿಸದೇ ತಮಗೆ ಬೇಕಾದ ಆಯ್ದ ಘಟನೆಗಳಲ್ಲಿ ಮಾತ್ರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಗಮನಿಸುತ್ತಾರೆ ಎಂದು ಹೇಳುವ ಮೂಲಕ ದೇಶದಲ್ಲಿ ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡುವವರ ವಿರುದ್ಧ ಮೋದಿ ಕಿಡಿಕಾರಿದರು.  ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ಕೆಲವರು ಮಾನವ ಹಕ್ಕುಗಳ ಉಲ್ಲಂಘನೆಯ ಹೆಸರಿನಲ್ಲಿ ದೇಶದ ಪ್ರತಿಷ್ಠೆಯನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಜನರು ಅಂಥವರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಸಂಘಟನೆ, ವ್ಯಕ್ತಿಗಳ ಹೆಸರನ್ನು ನೇರವಾಗಿ ಹೇಳದೇ ಇದ್ದರೂ ಅಂತಾರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಭಾರತದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ ಎಂದು ಹೇಳುವವರ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

    ವಿಶೇಷವಾಗಿ ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಕ್ರಮವನ್ನು ಕೆಲವರು ಟೀಕಿಸಿ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಹೇಳಿದ್ದರು. ಈ ವಿಚಾರವನ್ನು ಟೀಕಿಸಿದವರು ಕಾಶ್ಮೀರದಲ್ಲಿ ಕೆಲ ದಿನಗಳ ಹಿಂದೆ ಪಂಡಿತರು ಮತ್ತು ಸಿಖ್‌ ಸಮುದಾಯದ ಮೇಲೆ ನಡೆದ ದಾಳಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿರುವುದನ್ನು ಜನ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಈ ವಿಚಾರ ಚರ್ಚೆ ಆಗುತ್ತಿರುವ ಸಮಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಮಾನವ ಹಕ್ಕುಗಳ ಬಗ್ಗೆ ಆಯ್ದ ವಾಖ್ಯಾನ ಮಾಡುತ್ತಿರುವ ಜನರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಕೊರೊನಾ ಭ್ರಷ್ಟಾಚಾರ – ಸರ್ಕಾರದ ವಿರುದ್ಧ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲು

    ಕೊರೊನಾ ಭ್ರಷ್ಟಾಚಾರ – ಸರ್ಕಾರದ ವಿರುದ್ಧ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲು

    ಬೆಂಗಳೂರು: ಕೋವಿಡ್ ನಿಯಂತ್ರಣ ಪರಿಕರ ಖರೀದಿಯಲ್ಲಿ ಕಾಂಗ್ರೆಸ್‌ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಪ್ರಕರಣ ದಾಖಲಾಗಿದೆ.

    ಅಂಬುಲೆನ್ಸ್, ಪಿಪಿಇ ಕಿಟ್, ವೆಂಟಿಲೇಟರ್ ಖರೀದಿಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಕೆ ಪಾಟೀಲ್ ದೂರಿನನ್ವಯ ಪ್ರಕರಣ ದಾಖಲಾಗಿದೆ. ಗೌರವಯುತ ಶವಸಂಸ್ಕಾರ ನಡೆಯದ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಿರುವ ಎಚ್‌.ಕೆ. ಪಾಟೀಲ್‌ ಆಗಸ್ಟ್ 3 ರಂದು ಆಯೋಗದ ಮುಂದೆ ಹಾಜರಾಗಲಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಕೆ.ಪಾಟೀಲ್, ಜುಲೈ 15ಕ್ಕೆ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ಮಾನವ ಹಕ್ಕುಗಳು ಉಲ್ಲಂಘನೆಯಾದಾಗ ಆಯೋಗ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿದ್ದೆ. ಅಂಬುಲೆನ್ಸ್ ಸಿಗದೇ ಮೃತಪಟ್ಟಿದ್ದಾರೆ. ಶವ ಸಂಸ್ಕಾರ ಸರಿಯಾಗಿ ಮಾಡಲಿಲ್ಲ. ರೋಗಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯ ಸಿಗದ ಹಿನ್ನೆಲೆಯಲ್ಲಿ ಪತ್ರ ಬರೆದು ಇದನ್ನೇ ದೂರು ಎಂದು ಪರಿಗಣಿಸಬೇಕೆಂದು ಮನವಿ ಮಾಡಿದ್ದೆ ಎಂದರು.

    ನಾನು ಹಲವು ಪತ್ರಗಳನ್ನ ಸರ್ಕಾರಕ್ಕೆ ಬರೆದಿದ್ದು, ಕೆಲ ಪತ್ರಗಳಿಗೆ ಉತ್ತರ ನೀಡಿದ್ದಾರೆ. ಕೆಲ ಪ್ರಶ್ನೆಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಕೊರೊನಾ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೊರೊನಾ ಕೇರ್ ಸೆಂಟರ್‌ನಲ್ಲಿ 10 ಸಾವಿರ ಬೆಡ್ ಹಾಕ್ತೀವಿ ಅಂತ ಹೇಳಿ ಎಷ್ಟು ದಿನವಾಯಿತು ಎಂದು ಪ್ರಶ್ನಿಸಿದರು.

    ಕೇರ್ ಲೇಸ್ ಆಗಿ ಸರ್ಕಾರ ನಡೆದುಕೊಳ್ಳುವುದು ಬೇಡ. ಸರ್ಕಾರ ನೀಡಿದ ಲೀಗಲ್ ನೋಟಿಸ್ ಬಗ್ಗೆ ಪಕ್ಷದ ಮಟ್ಟದಲ್ಲಿ ಚರ್ಚೆ ಮಾಡುತ್ತೇವೆ. ನೋಟಿಸ್ ಕೊಟ್ಟು ಕಾಂಗ್ರೆಸ್ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಮೂರನೇ ತಾರೀಖು ವಿಚಾರಣೆ ಹಾಜರಾಗಿ ನನ್ನ ಬಳಿ ಇರುವ ದಾಖಲೆಯನ್ನ ಕೊಡುತ್ತೇನೆ ಎಂದು ತಿಳಿಸಿದರು.

  • ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮಾನವ ಹಕ್ಕು ರಕ್ಷಣೆಗೆ ಅರ್ಜಿ – ವಿಚಾರಣೆಗೆ ಒಪ್ಪಿದ ಸುಪ್ರೀಂ

    ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮಾನವ ಹಕ್ಕು ರಕ್ಷಣೆಗೆ ಅರ್ಜಿ – ವಿಚಾರಣೆಗೆ ಒಪ್ಪಿದ ಸುಪ್ರೀಂ

    ನವದೆಹಲಿ: ಕರ್ತವ್ಯದ ವೇಳೆ ರಕ್ಷಣಾ ಪಡೆಗಳ ಸಿಬ್ಬಂದಿಯ ಮಾನವ ಹಕ್ಕುಗಳ ರಕ್ಷಣೆ ಕುರಿತು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಲು ನ್ಯಾಯಾಲಯ ಸೋಮವಾರ ಸಮ್ಮತಿ ಸೂಚಿಸಿದೆ.

    ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಿರುದ್ಧ ನಡೆಯುತ್ತಿರುವ ಕಲ್ಲು ತೂರಾಟ ಹಾಗೂ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗುವ ಗುಂಪುಗಳಿಂದ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ವಿವರಿಸಿ ಇಬ್ಬರು ಯುವತಿಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಭದ್ರತಾ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಮಾನವ ಹಕ್ಕುಗಳ ರಕ್ಷಣೆ ಬಗ್ಗೆ ಪ್ರಸ್ತಾಪಿಸಿ ಅರ್ಜಿ ಸಲ್ಲಿಸಿದ್ದಾರೆ.

    19 ವರ್ಷದ ಪ್ರೀತಿ ಕೇದಾರ್ ಗೋಖಲೆ ಹಾಗೂ 20 ವರ್ಷದ ಕಾಜಲ್ ಮಿಶ್ರಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಭದ್ರತಾ ಪಡೆಗಳ ಮೇಲೆ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಹತ್ತಿಕ್ಕಲು ಸರಿಯಾದ ನೀತಿ ರೂಪಿಸಿ ಎಂದು ಅರ್ಜಿಯಲ್ಲಿ ಮನವಿ ಸಲ್ಲಿಸಿದ್ದಾರೆ.

    ಕರ್ತವ್ಯದಲ್ಲಿದ್ದಾಗ ಕಲ್ಲುತೂರಾಟ ನಡೆದಾಗ ಭದ್ರತಾ ಪಡೆಗಳು ತಮ್ಮ ಆತ್ಮ ರಕ್ಷಣೆಗಾಗಿ ಬಲ ಪ್ರಯೋಗ ಮಾಡುತ್ತಾರೆ. ಆದರೆ ಯೋಧರ ವಿರುದ್ಧವೇ ಕೇಸ್ ದಾಖಲಾಗುತ್ತದೆ. ಆದರೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್ ದಾಖಲಾಗುವುದಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದರ ಜೊತೆಯಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರು ಮೊದಲ ಬಾರಿಗೆ ಕಲ್ಲು ತುರಾಟ ನಡೆಸಿದವರ ವಿರುದ್ಧ ದಾಖಲಾದ 9,760 ಎಫ್‍ಐಆರ್ ರದ್ದುಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿ ಘೋಷಿಸುತ್ತಿದ್ದಾರೆ. ನಿಜವಾಗಿಯೂ ಇದು ಶಾಕಿಂಗ್ ಅಂಶ ಎಂದು ಅರ್ಜಿಯಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

    ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಸಂಜೀವ್ ಖನ್ನಾ ಅವರ ಪೀಠ ಅರ್ಜಿ ವಿಚಾರಣೆಗೆ ಸಮ್ಮತಿ ನೀಡಿದೆ. ಈ ಕುರಿತು ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆ, ಜಮ್ಮು ಕಾಶ್ಮೀರ ಸರ್ಕಾರ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

    ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಯುವತಿಯರು ಭಾರತ ಸೇನಾಧಿಕಾರಿಗಳ ಪುತ್ರಿಯಾರಾಗಿದ್ದು, ಅವರ ಪೈಕಿ ಒಬ್ಬರು ನಿವೃತ್ತರಾಗಿದ್ದರೆ ಮತ್ತೊಬ್ಬರು ಸೇವೆಯಲ್ಲಿದ್ದಾರೆ. ಭದ್ರತಾ ಪಡೆಯ ಯೋಧರ ಮೇಲೆ ನಡೆಯುತ್ತಿರುವ ದಾಳಿಗಳು ತಮಗೆ ಅಘಾತ ತಂದಿದೆ ಎಂದು ಯುವತಿಯರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    ಇಬ್ಬರೂ ಈ ಹಿಂದೆ 2018ರ ಫೆಬ್ರವರಿಯಲ್ಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ರಾಜ್ಯದಲ್ಲಿರುವ ಮಾನವ ಹಕ್ಕುಗಳ ಆಯೋಗಕ್ಕೆ ವರ್ಗಾಯಿಸಿತ್ತು.

    https://www.youtube.com/watch?v=HBx6e6LMK9k

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಸಿಯುನಲ್ಲಿ ಮೃತಪಟ್ಟ ವ್ಯಕ್ತಿಯ ದೇಹದ ಮೇಲೆ ಇಲಿ ಕಚ್ಚಿದ ಗುರುತುಗಳು ಪತ್ತೆ!

    ಐಸಿಯುನಲ್ಲಿ ಮೃತಪಟ್ಟ ವ್ಯಕ್ತಿಯ ದೇಹದ ಮೇಲೆ ಇಲಿ ಕಚ್ಚಿದ ಗುರುತುಗಳು ಪತ್ತೆ!

    ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ ಮೃತಪಟ್ಟಿದ್ದ 70 ವರ್ಷದ ವ್ಯಕ್ತಿಯ ದೇಹದಲ್ಲಿ ಇಲಿ ಕಚ್ಚಿದ ಗುರುತುಗಳು ಪತ್ತೆಯಾಗಿದೆ.

    ಸೋಮವಾರ ರಾತ್ರಿ ಸುಖಾ ಸಪ್ತಾರ ಹಳ್ಳಿಯ ವಿರೇಂದ್ರ ಚಾದರ್ ಅವರ ತಂದೆ ಜಗದೀಶ್ ಚಾದರ್(70) ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಸೋಮವಾರ ಐಸಿಯುನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದು, ಮೃತದೇಹವನ್ನು ಪಡೆದುಕೊಳ್ಳುವಾಗ ಇಲಿ ಕಚ್ಚಿದ ಗುರುತುಗಳು ಪತ್ತೆಯಾಗಿದೆ.

    ಮಧ್ಯರಾತ್ರಿ 2 ಗಂಟೆಗೆ ತಂದೆ ಮೃತಪಟ್ಟಿದ್ದಾರೆ ಎಂದು ತಿಳಿಸಲಾಯಿತು. ಮೃತಪಟ್ಟ ದೇಹವನ್ನು ಪಡೆದುಕೊಳ್ಳುವಾಗ ದೇಹದ ಎಡಗಣ್ಣಿನ ಬಳಿ ಕೆಲವು ಗಂಭೀರ ಗುರುತುಗಳಾಗಿದ್ದವು ಮತ್ತು ಆ ಗಾಯಗಳಿಗೆ ಮುಲಾಮು ಹಾಕಲಾಗಿತ್ತು. ಅದನ್ನು ಕಂಡು ಏನಿದು ಎಂದು ಪ್ರಶ್ನಿಸಿದ್ದಾಗ ಸಿಬ್ಬಂದಿ ಇಲಿ ಕಚ್ಚಿದೆ ಎಂದು ಹೇಳಿದ್ದಾರೆ ಎಂಬುದಾಗಿ ವೀರೇಂದ್ರ ಚಾದರ್ ತಿಳಿಸಿದ್ದಾರೆ.

    ಸಿವಿಲ್ ಸರ್ಜನ್ ಡಾ. ಮಮ್ತಾ ಟಿಮೊರಿರವರು ಈ ಘಟನೆ ನನಗೆ ಬುಧವಾರ ಬೆಳಗ್ಗೆ ತಿಳಿದು ಬಂದಿದೆ. ಈ ಬಗ್ಗೆ ಯಾರೊಬ್ಬ ಸಿಬ್ಬಂದಿಯೂ ನನ್ನ ಗಮನಕ್ಕೆ ತಂದಿಲ್ಲ. ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದ್ದು ತನಿಖೆಗೆ ಆದೇಶಿಸಿದ್ದೇನೆ. ಇಲಿಗಳನ್ನು ನಿಯಂತ್ರಿಸಲು ಈಗಾಗಲೇ ಇಂದೋರ್ ಮೂಲದ ಕ್ರೀಮಿನಾಶಕ ಕಂಪೆನಿಯನ್ನು ಸಂಪರ್ಕಿಸಿದ್ದೇನೆ ಎಂದು ತಿಳಿಸಿದರು.

    ಮಾನವ ಹಕ್ಕು ಕಾರ್ಯಕರ್ತ ಮನೋಜ್ ದಿವಾರಿಯಾ ಪ್ರತಿಕ್ರಿಯಿಸಿ, ಜಿಲ್ಲಾ ಆಸ್ಪತ್ರೆಗಳಲ್ಲಿ ಈ ರೀತಿಯ ಘಟನೆ ಇದೇ ಮೊದಲ ಬಾರಿ ಅಲ್ಲ ಈ ಹಿಂದೆಯೂ ಸಂಭವಿಸಿತ್ತು. ಆದರೆ ಈ ಬಗ್ಗೆ ಇನ್ನೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಐಸಿಯು ನಲ್ಲಿ ಇಲಿಗಳು ಕಂಡುಬಂದಿರುವುದು ಗಂಭೀರವಾದ ವಿಷಯವಾಗಿದೆ. ಈ ಬಗ್ಗೆ ಉನ್ನತ ಮಟ್ಟದ ವಿಚಾರಣೆ ಮಾಡಲು ಆದೇಶಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಮಾನವ ಗುರಾಣಿ ಕೇಸ್: ಯುವಕನಿಗೆ ಮಾನವ ಹಕ್ಕುಗಳ ಆಯೋಗದಿಂದ 10 ಲಕ್ಷ ರೂ. ಪರಿಹಾರ

    ಮಾನವ ಗುರಾಣಿ ಕೇಸ್: ಯುವಕನಿಗೆ ಮಾನವ ಹಕ್ಕುಗಳ ಆಯೋಗದಿಂದ 10 ಲಕ್ಷ ರೂ. ಪರಿಹಾರ

    ಶ್ರೀನಗರ: ಸೇನೆಯ ಜೀಪಿನಲ್ಲಿ ಮಾನವ ಗುರಾಣಿಯಾಗಿ ಬಳಕೆಯಾಗಿದ್ದ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

    ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗ ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್‍ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

    ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.

    ಏನಿದು ಪ್ರಕರಣ?
    ಬದ್ಗಾಂ ಜಿಲ್ಲೆಯ ಉಟಿಗಾಮ್ ಗ್ರಾಮದಲ್ಲಿ ಏಪ್ರಿಲ್ 19ರಂದು ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆಯುತಿತ್ತು. ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಎಲ್ಲರನ್ನು ರಕ್ಷಿಸಲು ಲೀತುಲ್ ಗೊಗೋಯ್ ಅವರು ಫಾರೂಖ್ ಅಹ್ಮದ್ ದಾರ್‍ನನ್ನು ಸೇನಾ ಜೀಪಿಗೆ ಕಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

    ಈ ಕುರಿತು ಸೇನೆ ತನಿಖೆಗೆ ಆದೇಶಿಸಿತ್ತು. ಯುವಕನನ್ನು ಜೀಪ್ ಗೆ ಕಟ್ಟಿ ಮೆರವಣಿಗೆ ಮಾಡಿದ್ದ ಸೇನಾ ಲೀತುಲ್   ಅವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ಲೀತುಲ್ ಗೊಗೋಯ್ ಅವರನ್ನು ಶ್ಲಾಘಿಸಿತ್ತು.

    ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾನು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ 12ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ಲೀತುಲ್ ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

    https://www.youtube.com/watch?v=IoFRCMH6Z4E