Tag: hunger strike

  • ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಆರೋಗ್ಯ – ಆಪ್‌ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

    ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಆರೋಗ್ಯ – ಆಪ್‌ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಸಮರ್ಪಕ ನೀರಿನ ಪೂರೈಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ (Hunger Strike0 ಆರಂಭಿಸಿರುವ ಸಚಿವೆ ಅತಿಶಿ (Minister Atishi) ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಮಂಗಳವಾರ ನಸುಕಿನ ಜಾವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು (ಮಂಗಳವಾರ) ಮುಂಜಾನೆ ಅತಿಶಿ ಅವರನ್ನು ರಾಷ್ಟ್ರ ರಾಜಧಾನಿಯ ಲೋಕನಾಯಕ ಜೈ ಪ್ರಕಾಶ್ (LNJP) ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಶಿ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರ 5ನೇ ದಿನಕ್ಕೆ ಕಾಲಿಟ್ಟಿದೆ. ಹರಿಯಾಣ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ವೈದರ ಸಲಹೆ ತಿರಸ್ಕಾರ:
    ಉಪವಾಸ ಸತ್ಯಾಗ್ರಹ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವೈದ್ಯರು ಸಲಹೆ ನೀಡಿದ್ದರು. ಆದರೂ ವೈದ್ಯರ ಸಲಹೆ ತಿರಸ್ಕರಿಸಿದ ಸಚಿವೆ ಅತಿಶಿ ಆರೋಗ್ಯ (Health) ಹದಗೆಟ್ಟಿದ್ದರೂ, ಹರಿಯಾಣವು (Haryana) ದೆಹಲಿಯ ನ್ಯಾಯಯುತವಾದ ನೀರನ್ನು (Delhi Water Crisis) ಬಿಡುಗಡೆ ಮಾಡುವವರೆಗೆ ಅನಿರ್ದಿಷ್ಟ ಉಪವಾಸ ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದರು. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸ ಮುಂದುವರಿಸುತ್ತೇನೆ ಎಂದು ಅತಿಶಿ ಕಳೆದ ಒಂದು ದಿನದ ಹಿಂದೆಯಷ್ಟೇ ಕೂಗಿ ಹೇಳಿದ್ದರು.

    ಈ ನಡುವೆ ದೆಹಲಿ ಕ್ಯಾಬಿನೆಟ್ ಮಂತ್ರಿಗಳು ಜಂಗ್ಪುರದ ಉಪವಾಸ ಸತ್ಯಾಗ್ರಹ ಸ್ಥಳದಲ್ಲಿ ಸಭೆ ನಡೆಸಿದ್ದರು ಮತ್ತು ಪರಿಹಾರ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದರು. ಎಎಪಿ ಅತಿಶಿ ಅವರ ಉಪವಾಸ ಬೆಂಬಲಿಸಿ ಕ್ಯಾಂಡಲ್‌ಲೈಟ್ ಮೆರವಣಿಗೆ ಮಾಡಲು ಘೋಷಿಸಲಾಗಿದೆ.

    ಬೇಡಿಕೆಯೇನು?
    ರಾಷ್ಟ್ರ ರಾಜಧಾನಿಗೆ ಸಮರ್ಪಕ ನೀರಿನ ಪೂರೈಸುವಂತೆ ಆಗ್ರಹಿಸಿ ಇದೇ ತಿಂಗಳ ಜೂನ್‌ 22ರಂದು ಸಚಿವೆ ಅತಿಶಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ದೆಹಲಿಗೆ ಒಟ್ಟು 1005 MGD ನೀರಿನ ಅಗತ್ಯವಿದೆ, ಅದರಲ್ಲಿ 613 MGD ಹರಿಯಾಣದ ಮೂಲವಾಗಿದೆ. ಕಳೆದ ಕೆಲ ವಾರಗಳಲ್ಲಿ ಈ ಮಟ್ಟದ ನೀರಿನ ಪೂರೈಕೆಯು ಗಣನೀಯವಾಗಿ ಕಡಿಮೆಯಾಗಿದೆ. ಕೇವಲ 513 MGD ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಂದು MGD ನೀರು 28,500 ಜನರ ಬಳಕೆಗೆ ಬರಲಿದೆ. ಹರಿಯಾಣ 100 MGD ಕಡಿಮೆ ನೀರನ್ನು ನೀಡಿದರೆ 28 ಲಕ್ಷಕ್ಕೂ ಹೆಚ್ಚು ಜನರಿಗೆ ದಿನದ ನೀರಿನ ಕೊರತೆಯಾಗಲಿದೆ ಹಾಗಾಗಿ ಸಮರ್ಪಕವಾಗಿ ನೀರು ಪೂರೈಕೆ ಆಗಬೇಕು ಎಂಬುದು ಅವರ ಆಗ್ರಹವಾಗಿದೆ.

    ಕಳೆದ ಶುಕ್ರವಾರವೂ ಸಹ ಹರಿಯಾಣವು ದೆಹಲಿಗೆ 110 ಎಂಜಿಡಿ ಕಡಿಮೆ ನೀರನ್ನು ಕಳುಹಿಸಿದೆ, ನಾನು ದೆಹಲಿಯ ನೀರಿನ ಸರಿಯಾದ ಪಾಲನ್ನು ಪಡೆಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಯ ಜನರನ್ನು ನಿರ್ಲಕ್ಷಿಸಿದೆ. ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು ನನಗೆ ಬೇರೆ ದಾರಿಯೇ ಇಲ್ಲ ಎಂದು ಅತಿಶಿ ಹೇಳಿದ್ದರು.

  • ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ನವದೆಹಲಿ: ನೀರಿನ ಬಿಕ್ಕಟ್ಟು ಇತ್ಯರ್ಥಪಡಿಸಲು (Delhi Water Crisis) ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸದ ಹಿನ್ನೆಲೆ ಸಚಿವೆ ಅತಿಶಿ ಆರಂಭಿಸಿರುವ ಉಪವಾಸ ಸತ್ಯಾಗ್ರಹ (Hunger Strike) ಎರಡನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿಯ 28 ಲಕ್ಷ ಜನರಿಗೆ ಹರಿಯಾಣದಿಂದ ತಮ್ಮ ಪಾಲಿನ ನೀರು ಸಿಗದವರೆಗೂ ಉಪವಾಸ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

    ದೆಹಲಿಯಲ್ಲಿ ನೀರಿನ ಕೊರತೆಯಾಗಿದ್ದು ನಿಗದಿತ ಪ್ರಮಾಣದ ನೀರು ಬಿಡದೇ ಹರಿಯಾಣ ಮತ್ತು ಹಿಮಾಚಲಪ್ರದೇಶ ಸರ್ಕಾರಗಳು ಅನ್ಯಾಯ ಮಾಡುತ್ತಿವೆ. ಮೋದಿ ಅವರು ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಅತಿಶಿ (Atishi) ಆಗ್ರಹಿಸುತ್ತಿದ್ದಾರೆ.

    ಎರಡನೇ ದಿನ ಉಪವಾಸ ಆರಂಭಕ್ಕೂ ಮುನ್ನ ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು ಹೋರಾಟ ಮುಂದುವರಿಸುವುದಾಗಿ ಹೇಳಿದರು. ದೆಹಲಿಗೆ ಒಟ್ಟು 1005 MGD ನೀರಿನ ಅಗತ್ಯವಿದೆ, ಅದರಲ್ಲಿ 613 MGD ಹರಿಯಾಣದ ಮೂಲವಾಗಿದೆ. ಕಳೆದ ಕೆಲ ವಾರಗಳಲ್ಲಿ ಈ ಮಟ್ಟದ ನೀರಿನ ಪೂರೈಕೆಯು ಗಣನೀಯವಾಗಿ ಕಡಿಮೆಯಾಗಿದೆ. ಕೇವಲ 513 MGD ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಂದು MGD ನೀರು 28,500 ಜನರ ಬಳಕೆಗೆ ಬರಲಿದೆ. ಹರಿಯಾಣ 100 MGD ಕಡಿಮೆ ನೀರನ್ನು ನೀಡಿದರೆ 28 ಲಕ್ಷಕ್ಕೂ ಹೆಚ್ಚು ಜನರಿಗೆ ದಿನದ ನೀರಿನ ಕೊರತೆಯಾಗಲಿದೆ. ಇದನ್ನೂ ಓದಿ: ಹಣಕಾಸು ಆಯೋಗದ ಶಿಫಾರಸಿನ ಅನುದಾನವನ್ನು ಕರ್ನಾಟಕಕ್ಕೆ ನೀಡಿ – ಕೇಂದ್ರದ ಮುಂದೆ ರಾಜ್ಯ ಸರ್ಕಾರ ಡಿಮ್ಯಾಂಡ್!

    ಶುಕ್ರವಾರ ಹರಿಯಾಣವು ದೆಹಲಿಗೆ 110 ಎಂಜಿಡಿ ಕಡಿಮೆ ನೀರನ್ನು ಕಳುಹಿಸಿದೆ, ನಾನು ದೆಹಲಿಯ ನೀರಿನ ಸರಿಯಾದ ಪಾಲನ್ನು ಪಡೆಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಯ ಜನರನ್ನು ನಿರ್ಲಕ್ಷಿಸಿದೆ. ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು ನನಗೆ ಬೇರೆ ದಾರಿಯೇ ಇಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಉಪವಾಸ ಸತ್ಯಾಗ್ರಹದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ನೀರು ಪೂರೈಕೆಯ ವಿಷಯದಲ್ಲಿ ನಡೆಯುತ್ತಿರುವ ತಾರತಮ್ಯದ ಆರೋಪಗಳನ್ನು ಅವರು ನಿರಾಕರಿಸಿದರು. ನೀರಿನ ಬಿಕ್ಕಟ್ಟನ್ನು ʻಅಸಮರ್ಪಕ ಮತ್ತು ಅಸಮರ್ಥʼ ಎಂದು ಆಪ್‌ ಸರ್ಕಾರವನ್ನು ದೂಷಿಸಿದರು. ಈ ನಡುವೆ ದೆಹಲಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ದೆಹಲಿಯ ಜಲ ಬೋರ್ಡ್ ಎದರು ಪ್ರತಿಭಟನೆ ನಡೆಸಿದರು. ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಪ್ರಯೋಗಿಸಲಾಯಿತು. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ – ಸೇಡಿನ ರಾಜಕಾರಣ ಎಂದು ಆಕ್ರೋಶ

  • ಸರ್ಕಾರದ ವಿರುದ್ದ ಸಮರ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ

    ಸರ್ಕಾರದ ವಿರುದ್ದ ಸಮರ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ

    ಬೆಂಗಳೂರು: ವೇತನ ಹೆಚ್ಚಳ (Salary Hike) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು (Transport Staff) ಫ್ರೀಡಂಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ (Hunger Strike) ನಡೆಸಲು ಮುಂದಾಗಿದ್ದಾರೆ.

    ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ.

    ಸಾರಿಗೆ ನೌಕರರಿಗೆ ಜನವರಿ 1ರಿಂದ ಹೊಸ ಒಪ್ಪಂದದ ಪ್ರಕಾರ ವೇತನ ಪರಿಷ್ಕರಣೆ ಆಗಬೇಕು. ಆದರೆ ಇಲ್ಲಿಯವರೆಗೆ ವೇತನ ಪರಿಷ್ಕರಣೆ ವಿಚಾರವನ್ನು ಸಾರಿಗೆ ನಿಗಮಗಳು ಪ್ರಸ್ತಾಪಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟು ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ.  ಇದನ್ನೂ ಓದಿ: ಲೋಕಸಭೆಗೆ ಮತ್ತೆ ಒಕ್ಕಲಿಗ ಕಾರ್ಡ್, ಎರಡೂವರೆ ವರ್ಷ ನಂತರ ಡಿಕೆ ಸಿಎಂ ಸಾಧ್ಯತೆ – ಒಕ್ಕಲಿಗ ನಾಯಕರ ಸಭೆಯ ಇನ್‌ಸೈಡ್‌ ಸುದ್ದಿ

    ಸಾರಿಗೆ ನೌಕರರ ಬೇಡಿಕೆಗಳು?
    – ಮೂಲ ವೇತನದ 25% ವೇತನ ಹೆಚ್ಚಿಸಬೇಕು.
    – ಎಲೆಕ್ಟ್ರಿಕ್ ಬಸ್‌ಗಳಲ್ಲಿ ಸಾರಿಗೆ ನಿಗಮದ ನೌಕರರನ್ನೇ  ಚಾಲಕರಾಗಿ ನೇಮಿಸಿಕೊಳ್ಳುವುದು.
    – ನಿವೃತ್ತಿ ನೌಕರರಿಗೆ ಅಂತಿಮವಾಗಿ ಬರಬೇಕಾದ ಹಣ ಕೊಡಬೇಕು ಮತ್ತು 38 ತಿಂಗಳ ವೇತನ ಹೆಚ್ಚಳದ ಬಾಕಿ ನೌಕರರಿಗೆ ನೀಡಬೇಕು.
    – ಎಲ್ಲಾ ನಿಗಮಗಳ ನೌಕರರ ಮುಂಬಡ್ತಿಗೆ ಕ್ರಮವಹಿಸುವುದು. ವಿವಿಧ ಭತ್ಯೆಗಳನ್ನ ಐದು ಪಟ್ಟು ಹೆಚ್ಚಿಸುವುದು.
    – ಉಚಿತ ಔಷಧಿ ಸೇರಿದಂತೆ ವೈದ್ಯಕೀಯ ಸೌಲಭ್ಯ ನೀಡಬೇಕು.

  • ರಾಮನಗರ ಜಿಲ್ಲೆ ಹೆಸರು ಬದಲಾದ್ರೆ ಅಮರಣಾಂತ ಉಪವಾಸ ಮಾಡ್ತೀನಿ: ಹೆಚ್‌ಡಿಕೆ ಪ್ರತಿಜ್ಞೆ

    ರಾಮನಗರ ಜಿಲ್ಲೆ ಹೆಸರು ಬದಲಾದ್ರೆ ಅಮರಣಾಂತ ಉಪವಾಸ ಮಾಡ್ತೀನಿ: ಹೆಚ್‌ಡಿಕೆ ಪ್ರತಿಜ್ಞೆ

    ಬೆಂಗಳೂರು: ರಾಮನಗರ (Ramanagara) ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ನಾನು ಅಮರಣಾಂತ ಉಪವಾಸ ಸತ್ಯಾಗ್ರಹ (Hunger Strike) ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪ್ರತಿಜ್ಞೆ ಮಾಡಿದ್ದಾರೆ.

    ರಾಮನಗರ ಜಿಲ್ಲೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸವಾಲು ಸ್ವೀಕರಿಸುತ್ತೇನೆ. ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಡಿಕೆ ಶಿವಕುಮಾರ್ ಬೆಂಗಳೂರು ಮೂಲದವರಲ್ಲ. ಬೆಂಗಳೂರು ಇಡೀ ಕರ್ನಾಟಕ ರಾಜ್ಯದ ಭಾಗ. ಬೆಂಗಳೂರಿನ ಆರ್ಥಿಕ ಶಕ್ತಿ ಇಡೀ ಕರ್ನಾಟಕ ಅಭಿವೃದ್ಧಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.

    ಎಷ್ಟೆಲ್ಲಾ ಕೆರೆ-ಕಟ್ಟೆ ನುಂಗಿ ಹಾಕಿದ್ದೀರಾ? ಯಾವ್ ಯಾವ್ ಕೆರೆ ನುಂಗಿದ್ದೀರಾ ಪಟ್ಟಿ ಬೇಕಾ? ಯಾವ ಮುಖ ಇಟ್ಟುಕೊಂಡು ಕೆಂಪೇಗೌಡರ ಹೆಸರು ಹೇಳ್ತೀರಾ? ಈ ಬಗ್ಗೆ ಚರ್ಚೆ ನಡೆಸಲು ಪಾಪ ಅವರು ಬ್ಯುಸಿ ಇದ್ದಾರೆ. ಅವರು ಯಾವಾಗ ಬೇಕಾದರೂ ಸಮಯ ಫಿಕ್ಸ್ ಮಾಡಲಿ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

    ನಾನು ಹುಟ್ಟಿದ್ದು ಹಾಸನ ಆದರೂ ನನ್ನ ಜೀವನ ಅಂತ್ಯ ಆಗೋದು ರಾಮನಗರದಲ್ಲೇ. ನನ್ನ ಹೋರಾಟಕ್ಕೆ ರಾಮನಗರದ ಜನರ ಸಹಕಾರ ಕೇಳುತ್ತೇನೆ. ನಮ್ಮ ಸಮಾಜದವರು ಹೇಳಿದ್ರು ಅಂತ ಸುಮ್ಮನೆ ಇದ್ದೆ ಎನ್ನುವ ಡಿಕೆ ಹೇಳಿಕೆ ವಿಚಾರವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಎಲ್ಲವು ಜನರೇ ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಚರ್ಚೆಗೆ ಡೇಟ್‌, ಟೈಮ್ ಫಿಕ್ಸ್ ಮಾಡಿ: ಡಿ.ಕೆ ಶಿವಕುಮಾರ್

    ಕನಕಪುರ ಸ್ಕೂಲ್‌ಗಳಲ್ಲಿ ಎಷ್ಟು ಟೀಚರ್ ಇಲ್ಲ ನೋಡಿ. ಭೂಮಿ ದಾನ ಕೊಟ್ಟಿದ್ದೇವೆ ಅಂತಾರೆ. ನಾನು ನೋಡಿದ್ದೇನೆ ಎಷ್ಟು ಕೊಟ್ಟಿದ್ದಾರೆ ಎನ್ನುವುದನ್ನು. ದಾಖಲಾತಿ ಹೇಗೆ ಮಾಡಿಕೊಂಡಿದ್ದೀರಾ ನಮಗೆ ಗೊತ್ತಿದೆ. ಕನಕಪುರದಲ್ಲಿ ಒಬ್ಬ ಟೀಚರ್ ಜಾಗದಲ್ಲಿ ಡಿಕೆ ಶಿವಕುಮಾರ್ ಪಟಾಲಂ ಇದ್ದ. 10 ವರ್ಷ ಆದರೂ ಬಿಡಿಸಲು ಆಗಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕನಕಪುರ ಡೈರಿಗೆ ಜಾಗ ಕೊಟ್ಟ ರೈತರಿಗೆ ಎಷ್ಟು ಕೊಟ್ರಿ, ನಿಮ್ಮ ಪಟಾಲಂಗೆ ಎಷ್ಟು ಕೊಟ್ರಿ – ಡಿಕೆಶಿಗೆ ಹೆಚ್‍ಡಿಕೆ ಪ್ರಶ್ನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿಹಾರ್‌ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ – ಯಾಸಿನ್‌ ಮಲಿಕ್‌ ಆಸ್ಪತ್ರೆಗೆ ದಾಖಲು

    ತಿಹಾರ್‌ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ – ಯಾಸಿನ್‌ ಮಲಿಕ್‌ ಆಸ್ಪತ್ರೆಗೆ ದಾಖಲು

    ನವದೆಹಲಿ: ತಿಹಾರ್‌ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್‌ ಮಲಿಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಕ್ತದ ಒತ್ತಡದಲ್ಲಿ ಏರುಪೇರಾದ ಕಾರಣ ಯಾಸಿನ್‌ ಮಲಿಕ್‌ನನ್ನು ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ವೈದ್ಯರಿಗೆ ಯಾಸಿನ್‌ ಪತ್ರ ಬರೆದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಸದನದಲ್ಲಿ ಕಾಗದ ಎಸೆದ ಆಪ್ ಸಂಸದ ಅಮಾನತು

    ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿ ಮಲಿಕ್ ಜುಲೈ 22 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

    ಮಲಿಕ್ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿದೆ. ವೈದ್ಯರು ಮಲಿಕ್‌ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು: ಆಪ್ತೆ ಅರ್ಪಿತಾ

    ಸ್ವಾತಂತ್ರ್ಯ ಹೋರಾಟದ ಹೆಸರಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ನಿಧಿ ಸಂಗ್ರಹಿಸುತ್ತಿದ್ದ ಆರೋಪದಡಿ ಮಲಿಕ್‌ ಜೈಲುಪಾಲಾಗಿದ್ದು, ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ನೂರಾರು ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ಆರಂಭ

    ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ನೂರಾರು ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ಆರಂಭ

    – ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಕಲ್ಪಿಸುವಂತೆ ಪ್ರಧಾನಿಗೆ ಮನವಿ

    ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳು ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕೆ ಆಗ್ರಹಿಸಿ 5 ದಿನಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳು ತಮ್ಮ ಭವಿಷ್ಯ ಕಳೆದುಕೊಳ್ಳುವ ಆತಂಕದಲ್ಲಿದ್ದು, ಖಿನ್ನತೆ, ಆತಂಕ ಇತರ ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ತಮ್ಮ ಭವಿಷ್ಯ ಉಳಿಸಬೇಕು. ಅದಕ್ಕಾಗಿ ಸರ್ಕಾರ ನಮಗೆ ಸಹಾಯ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ

    ದೆಹಲಿಯ ರಾಮಲೀಲಾ ಮೈದಾನದಲ್ಲಿ ಜುಲೈ 23 ರಿಂದ 27ರ ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಕಳೆದ ತಿಂಗಳು, ದೇಶದ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಹಲವಾರು ವಿದ್ಯಾರ್ಥಿಗಳು ರಾಜಧಾನಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

    ನಾವು ಜಂತರ್ ಮಂತರ್‌ನಲ್ಲಿ ಮೂರು ಬಾರಿ, ದ್ವಾರಕದಲ್ಲಿನ ರಾಷ್ಟ್ರೀಯ ವೈದ್ಯಕೀಯ ಆಯೋಗದ (MNC) ಕಚೇರಿಯಲ್ಲಿ, ಪ್ರಧಾನಮಂತ್ರಿ ಕಚೇರಿ, ಆರೋಗ್ಯ ಸಚಿವಾಲಯ, ಶಿಕ್ಷಣ ಸಚಿವಾಲಯ ಕಚೇರಿಗಳ ಮುಂದೆ ಪ್ರತಿಭಟನೆ ಮಾಡಿದ್ದೇವೆ. ಭಾರತದ ರಾಷ್ಟçಪತಿಗಳಿಗೆ ನಮ್ಮ ಬೇಡಿಕೆ-ಕೋರಿಕೆ ಪತ್ರವನ್ನು ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಭರವಸೆ ಇಲ್ಲ. ಅನಿವಾರ್ಯ ಕಾರಣಗಳಿಂದಾಗಿ ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ಹೇಳಿದ್ದರೆ. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್‌ನ ಗಗನಸಖಿಯೊಂದಿಗೆ ಅಸಭ್ಯ ವರ್ತನೆ- ಪ್ರಯಾಣಿಕನ ಬಂಧನ

    ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸರಿಸುಮಾರು 12,000 ಅಂತಹ ವಿದ್ಯಾರ್ಥಿಗಳಿರುವುದರಿಂದ 600 ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸಂಸ್ಥೆಯು ಸುಮಾರು 20 ವಿದ್ಯಾರ್ಥಿಗಳನ್ನು ವ್ಯವಸ್ಥೆಗೊಳಿಸಬಹುದು ಎಂದು ಅವರು ಕೇಳಿಕೊಂಡಿದ್ದಾರೆ.

    ರಷ್ಯಾದ ಪಡೆಗಳು ಉಕ್ರೇನ್ ವಿರುದ್ಧ ಆಕ್ರಮಣವನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನಾದ್ಯಂತ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ಕನಿಷ್ಠ 18,000 ವಿದ್ಯಾರ್ಥಿಗಳು ಫೆಬ್ರವರಿಯಲ್ಲಿ ಭಾರತಕ್ಕೆ ಮರಳಿದರು.

    Live Tv
    [brid partner=56869869 player=32851 video=960834 autoplay=true]

  • ಚೀನಾ: ಕೋವಿಡ್‌ ಬಗ್ಗೆ ವರದಿ ಮಾಡಿ ಅರೆಸ್ಟ್‌ ಆಗಿದ್ದ ಪತ್ರಕರ್ತೆ ಜೈಲಿನಲ್ಲಿ ಸಾವು-ಬದುಕಿನ ನಡುವೆ ಹೋರಾಟ!

    ಚೀನಾ: ಕೋವಿಡ್‌ ಬಗ್ಗೆ ವರದಿ ಮಾಡಿ ಅರೆಸ್ಟ್‌ ಆಗಿದ್ದ ಪತ್ರಕರ್ತೆ ಜೈಲಿನಲ್ಲಿ ಸಾವು-ಬದುಕಿನ ನಡುವೆ ಹೋರಾಟ!

    ಬೀಜಿಂಗ್: ಚೀನಾದ ವುಹಾನ್‌ನಲ್ಲಿ ಕೋವಿಡ್‌-19 ಕುರಿತು ವರದಿ ಮಾಡಿ ಬಂಧನಕ್ಕೊಳಗಾಗಿದ್ದ ಪತ್ರಕರ್ತೆ ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆಂದು ಕುಟುಂಬದ ಮೂಲಗಳು ಹೇಳಿವೆ. ಆಕೆ ಬದುಕುಳಿಯುವ ಸ್ಥಿತಿಯಲ್ಲಿಲ್ಲ. ಕೂಡಲೇ ಬಿಡುಗಡೆ ಮಾಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

    JAIL

    ಝಾಂಗ್‌ ಜಾನ್‌ (38) ಅವರು ಫೆಬ್ರವರಿ 2020ರಲ್ಲಿ ವುಹಾನ್‌ಗೆ ಭೇಟಿ ನೀಡಿ ಕೋವಿಡ್‌ ಸಾಂಕ್ರಾಮಿಕ ಕುರಿತು ವರದಿ ಮಾಡಿದ್ದರು. ಈ ವೇಳೆ ಅಧಿಕಾರಿಗಳಿಗೆ ಪ್ರಶ್ನೆಗಳನ್ನು ಕೇಳಿ ವಿಡಿಯೊ ಮಾಡಿಕೊಂಡಿದ್ದರು. ನಂತರ ಆಕೆಯನ್ನು ಮೇ 2020ರಲ್ಲಿ ಬಂಧಿಸಲಾಗಿತ್ತು. ಡಿಸೆಂಬರ್‌ನಲ್ಲಿ ಪತ್ರಕರ್ತೆಗೆ ನಾಲ್ಕು ವರ್ಷಗಳ ಜೈಲು ಶಿಕ್ಷ ವಿಧಿಸಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ

    ಬಂಧನಕ್ಕೊಳಗಾಗಿರುವ ನನ್ನ ಸಹೋದರಿ ಹೆಚ್ಚು ದಿನ ಬದುಕುವಂತೆ ಕಾಣುತ್ತಿಲ್ಲ ಎಂದು ಪತ್ರಕರ್ತೆಯ ಸಹೋದರ ಝಾಂಗ್‌ ಜು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ

    ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಪತ್ರಕರ್ತೆ ಝಾಂಗ್‌ಗೆ ಬಲವಂತವಾಗಿ ಮೂಗಿನಲ್ಲಿ ಪೈಪ್‌ ಹಾಕಿ ದ್ರವರೂಪದ ಆಹಾರ ನೀಡಲಾಗುತ್ತಿದೆ. ಆಕೆಯ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆಕೆಯ ಆಪ್ತ ಮೂಲಗಳು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿವೆ.

    COVID

    ನನ್ನ ಸಹೋದರಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹಾಗೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಚೀನಾ ಸರ್ಕಾರ ಕೂಡಲೇ ಆಕೆಯನ್ನು ಬಿಡುಗಡೆ ಮಾಡಲು ಕ್ರಮವಹಿಸಬೇಕು ಎಂದು ಸಹೋದರ ಝಾಂಗ್‌ ಜು ಮನವಿ ಮಾಡಿದ್ದಾರೆ.

  • ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

    ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

    ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ.

    ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಹಿರಿಯ ವಕೀಲರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಇಂದು ಸದಾನಂದಗೌಡ ಮತ್ತು ರವಿಶಂಕರ್ ಪ್ರಸಾದ್ ಚರ್ಚಿಸಿದರು. ಸದಾನಂದಗೌಡರು ಈ ಕುರಿತು ವಿವರಗಳನ್ನು ಕಾನೂನು ಸಚಿವರಿಗೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದರು.

    ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

    ಬೇಡಿಕೆ ಏನು?
    ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

    ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

    ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

  • ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

    ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

    ಬೆಂಗಳೂರು: ಹೈಕೋರ್ಟ್ ನ್ಯಾಯಾಧೀಶರ ಶೀಘ್ರ ನೇಮಕಾತಿಗೆ ಆಗ್ರಹಿಸಿ ಹಿರಿಯ ವಕೀಲರು ಹೈಕೋರ್ಟ್ ಬಳಿಯ ಗೋಲ್ಡನ್ ಜ್ಯೂಬ್ಲಿ ಗೇಟ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಮಾಜಿ ಅಡ್ವೊಕೇಟ್ ಜನರಲ್ ಬಿವಿ ಆಚಾರ್ಯ ಜೊತೆ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ, ನಂಜುಂಡ ರೆಡ್ಡಿ, ಬಿಎಲ್ ಜಗದೀಶ್ ಸೇರಿದಂತೆ ಹಲವು ಮಂದಿ ಭಾಗವಹಿಸಿ ಪ್ರತಿಭಟಿಸಿದ್ದರು.

    ಕೇಂದ್ರ ಸರ್ಕಾರ ಹೈಕೋರ್ಟ್‍ಗೆ ನ್ಯಾಯಮೂರ್ತಿಗಳ ಭರ್ತಿ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಇದರಿಂದ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡಲು ಮೀನಮೇಷ ಎಣಿಸುತ್ತಿದೆ ಎಂದು ಹಿರಿಯ ವಕೀಲರು ಆರೋಪ ಮಾಡಿದರು. ಧರಣಿ ನಿರತ ಸ್ಥಳಕ್ಕೆ ಮಾಜಿ ಕಾನೂನು ಸಚಿವ, ಹಾಲಿ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

    ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

    ಬೇಡಿಕೆ ಏನು? ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

    ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

    ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

    ಕಣ್ಣೀರಿಟ್ಟಿದ್ದ ಸಿಜೆ: 2016ರ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ಭಾಷಣದಲ್ಲಿ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರವನ್ನು ಪ್ರಸ್ತಾಪ ಮಾಡದಕ್ಕೆ ಅಂದಿನ ಮುಖ್ಯ ನ್ಯಾಯಾಧೀಶರಾಗಿದ್ದ ಟಿ.ಎಸ್.ಠಾಕೂರ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಬೇಸರಗೊಂಡು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೆದುರೇ ಟಿ.ಎಸ್.ಠಾಕೂರ್ ಗದ್ಗದಿತರಾಗಿ ಕಣ್ಣೀರಿಟ್ಟಿದ್ದರು.