Tag: Hunsuru

  • ನಾವು ರಾಗಿ ಮುದ್ದೆ ತಿನ್ನೋರು, ನಮಗೆ ಯಾವ ರೋಗ ಬರಲ್ಲ – ಆದಿವಾಸಿ ಮಹಿಳೆ

    ನಾವು ರಾಗಿ ಮುದ್ದೆ ತಿನ್ನೋರು, ನಮಗೆ ಯಾವ ರೋಗ ಬರಲ್ಲ – ಆದಿವಾಸಿ ಮಹಿಳೆ

    ಮೈಸೂರು: ಆರೋಗ್ಯ ತಪಾಸಣೆ ಮಾಡಲು ಬಂದ ಅಧಿಕಾರಿಗಳಿಗೆ ಮಹಿಳೆಯೊಬ್ಬಳು ನಾವು ರಾಗಿ ಮುದ್ದೆ ತಿನ್ನುವವರು, ನಮಗೆ ಯಾವ ರೋಗ ಬರುವುದಿಲ್ಲ ಎಂದು ಅವಾಜ್ ಹಾಕಿದ್ದಾರೆ.

    ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಸಮೀಪದ ಬೀರತಮ್ಮನ ಹಳ್ಳಿ ಗಿರಿಜನ ಹಾಡಿಯಲ್ಲಿ ಮಹಿಳೆಯೊಬ್ಬಳು ನೀವು ನಮ್ಮ ಹಾಡಿಗೆ ಕಾಲು ಇಡುವುದು ಬೇಡ, ನೀವು ಹಾಡಿಯಿಂದ ಹೋಗಿ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

    ನಾವು ರಾಗಿ ಮುದ್ದೆ ತಿನ್ನುವವರು, ನಮಗೆ ಯಾವ ರೋಗನೂ ಇಲ್ಲ. ನೀವೇನು ನಮಗೆ ಟೆಸ್ಟ್ ಮಾಡಿ ರೋಗ ಕಂಡು ಹಿಡಿಯುವುದು ಬೇಡ. ರೋಗ ಬಂದರೆ ನಾವೇ ವಾಸಿ ಮಾಡಿಕೊಳ್ಳುತ್ತೇವೆ ಎಂದು ಆರೋಗ್ಯ ತಪಾಸಣೆ ನಡೆಸಲು ಮುಂದಾಗಿದ್ದ ಅಧಿಕಾರಿಗಳ ಜೊತೆ ಮಹಿಳೆ ವಾಗ್ವಾದ ನಡೆಸಿದ್ದಾರೆ.  ಇದನ್ನು ಓದಿ: ಜುಲೈ ಮಧ್ಯ, ಆಗಸ್ಟ್ ಆರಂಭದಲ್ಲಿ ದಿನಕ್ಕೆ 1 ಕೋಟಿ ಲಸಿಕೆ ಲಭ್ಯ – ಕೇಂದ್ರ

    ಬೀರತಮ್ಮನಹಳ್ಳಿ ಆದಿವಾಸಿ ಹಾಡಿಯಲ್ಲಿ ಒಟ್ಟು 50ಕ್ಕೂ ಹೆಚ್ಚು ಕುಟುಂಬಗಳಿವೆ. 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಹಾಡಿ ಇದ್ದಾಗಿದ್ದು, ಈ ಪೈಕಿ ಕೇವಲ 7 ಮಂದಿ ಮಾತ್ರ ತಪಾಸಣೆಗೆ ಒಳಗಾಗಿದ್ದಾರೆ.

     

  • ಮೈಸೂರಲ್ಲಿ ಮತಬೇಟೆಗೆ ಇಳಿದ ಶ್ರೀರಾಮುಲು- ಹುಣಸೂರಲ್ಲಿ ರೀಪಿಟ್ ಆಗ್ತಿದೆ ಬಾದಾಮಿ ಫೈಟ್

    ಮೈಸೂರಲ್ಲಿ ಮತಬೇಟೆಗೆ ಇಳಿದ ಶ್ರೀರಾಮುಲು- ಹುಣಸೂರಲ್ಲಿ ರೀಪಿಟ್ ಆಗ್ತಿದೆ ಬಾದಾಮಿ ಫೈಟ್

    ಮೈಸೂರು: ಸಚಿವ ಶ್ರೀರಾಮುಲು ಹುಣಸೂರು ಬೈ ಎಲೆಕ್ಷನ್‍ನಲ್ಲಿ ಬಿಜೆಪಿ ಉಸ್ತುವಾರಿಯಾಗಿದ್ದಾರೆ. ಸಿದ್ದರಾಮಯ್ಯ ಅಖಾಡದಲ್ಲೇ ರಾಮುಲು ಮತಬೇಟೆಯಾಡ್ತಿದ್ದಾರೆ. ಹಾಗಾಗಿ ಮೈಸೂರಲ್ಲಿ ಬಾದಾಮಿ ಫೈಟ್ ಪಕ್ಕಾ ಆಗಿದೆ. ಬಾದಾಮಿಯಲ್ಲಿ ಚುನಾವಣೆ ಬಳಿಕ ಸಿದ್ದರಾಮಯ್ಯ ವಿರುದ್ಧ ರಾಮುಲು ಸೋಲನುಭವಿಸಿದ್ದರು. ಅಂದಿನ ಸೋಲಿನ ಸೇಡನ್ನು ತೀರಿಸಿಕೊಳ್ಳಲು ರಾಮುಲು ಈಗ ಸಿದ್ದರಾಮಯ್ಯ ವಿರುದ್ಧ ತೊಡೆತಟ್ಟಿದ್ದಾರೆ.

    ಸಚಿವ ಶ್ರೀರಾಮುಲು ಹುಣಸೂರಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಗೆಲ್ಲಿಸಲು ಹೋರಾಟಕ್ಕೆ ಇಳಿದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪರಮ ಶಿಷ್ಯ ಎಚ್.ಪಿ. ಮಂಜುನಾಥ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ನಡುವೆ ಇವರಿಬ್ಬರೂ ಹುಣಸೂರನ್ನು ಬಾದಾಮಿ ಅಂದುಕೊಂಡಂತೆ ಕಾಣುತ್ತಿದೆ. ಏಕೆಂದರೆ ಬಾದಾಮಿಯಲ್ಲಿ ಸಿದ್ದರಾಮಯ್ಯ 1,696 ಮತಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿದ್ದರು. ರಾಮುಲುಗೆ ಆ ಸೋಲಿನ ಸಿಟ್ಟು ಕಡಿಮೆ ಆದಂತೆ ಕಾಣುತ್ತಿಲ್ಲ. ಹೀಗಾಗಿ, ಇಬ್ಬರು ಇಲ್ಲಿ ಮತ್ತೆ ತಾವೇ ಅಭ್ಯರ್ಥಿಗಳು ಎಂಬಂತೆ ಕಾದಾಟಕ್ಕೆ ಇಳಿದಿದ್ದಾರೆ.

    ಹುಣಸೂರಿನಲ್ಲೇ ಬೀಡುಬಿಟ್ಟಿರುವ ರಾಮುಲು ತಮ್ಮ ಸಮುದಾಯದ ಮತಗಳ ಸೆಳೆಯುತ್ತಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ನಾಯಕ ಸಮುದಾಯದ ಸುಮಾರು 35 ಸಾವಿರ ಮತಗಳಿವೆ. ಈ ಮತಗಳಲ್ಲಿ ಬಹುಪಾಲು ಮತಗಳು ಬಿಜೆಪಿಗೆ ಬಂದರೆ ಅದು ಬಿಜೆಪಿ ಅಭ್ಯರ್ಥಿಗೆ ದೊಡ್ಡ ಶಕ್ತಿ. ತಮ್ಮ ಸಮುದಾಯದ ಮತಗಳ ಸೆಳೆಯುವ ಮೂಲಕ ರಾಮುಲು ತಮ್ಮ ಅಭ್ಯರ್ಥಿ ಗೆಲುವಿನ ಹಾದಿ ಹಿಡಿಯುವಂತೆ ಮಾಡಿ ತಾವು ನಾಯಕ ಸಮುದಾಯದ ದೊಡ್ಡ ನಾಯಕ ಅಂತ ಮತ್ತೆ ಸಾಬೀತು ಮಾಡಲು ಮುಂದಾಗಿದ್ದಾರೆ.

    ಹೀಗಾಗಿ, ಶ್ರೀರಾಮುಲು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ಶಕ್ತಿ ಇದ್ದರೆ ಮತ್ತೆ ಚುನಾವಣೆಗೆ ಬನ್ನಿ ಅಂತಾ ಸವಾಲ್ ಹಾಕುತ್ತಿದ್ದಾರೆ. ಒಂದರ್ಥದಲ್ಲಿ ಇವರಿಬ್ಬರು ಟೀಕೆ – ಪ್ರತಿ ಟೀಕೆ ನೋಡಿದರೆ ಜನರು ಕೂಡ ಬಾದಾಮಿ ಚುನಾವಣೆಯನ್ನು ಕಣ್ಮುಂದೆ ತಂದುಕೊಳ್ತಿದ್ದಾರೆ. ಶ್ರೀರಾಮುಲು ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಬಾದಾಮಿ ಸೇಡು ತೀರಿಸಿ ಕೊಳ್ತಾರಾ? ಅಥವಾ ಸಿದ್ದರಾಮಯ್ಯ ತಮ್ಮ ಶಿಷ್ಯನನ್ನು ಗೆಲ್ಲಿಸೋ ಮೂಲಕ ಶ್ರೀರಾಮುಲುಗೆ ಮತ್ತೆ ಮುಖ ಭಂಗ ಮಾಡ್ತಾರಾ ಕಾದು ನೋಡಬೇಕಿದೆ.

  • ಹುಣಸೂರಿನಲ್ಲಿ ಜಾತಿ ಸಮೀಕರಣದ ಲೆಕ್ಕಾಚಾರ

    ಹುಣಸೂರಿನಲ್ಲಿ ಜಾತಿ ಸಮೀಕರಣದ ಲೆಕ್ಕಾಚಾರ

    ಮೈಸೂರು: ಹುಣಸೂರು ಬೈ ಎಲೆಕ್ಷನ್‍ನಲ್ಲಿ ಜಾತಿ ಸಮೀಕರಣ ಹೆಚ್ಚಾಗಿ ನಡೆಯುತ್ತಿದೆ. ಒಂದರ್ಥದಲ್ಲಿ ಇಲ್ಲಿ ಕುರುಬ ವರ್ಸಸ್ ಕುರುಬ ಫೈಟ್ ಜೋರಾಗಿದೆ. ಕುರುಬ ಸಮುದಾಯಕ್ಕೆ ತಮ್ಮದೇ ಸಮುದಾಯದ ಎಚ್. ವಿಶ್ವನಾಥ್ ಅವರನ್ನು ಬೆಂಬಲಿಸಬೇಕೋ ಅಥವಾ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕೋ ಎಂಬ ಗೊಂದಲದಲ್ಲಿದೆ. ಈ ನಡುವೆ ಹುಣಸೂರಲ್ಲಿ ಈಗ ಒಕ್ಕಲಿಗರ ಮತದ ಮೇಲೆ ಕಣ್ಣು ಬಿದ್ದಿದೆ ಎನ್ನಲಾಗಿದೆ.

    ಹುಣಸೂರಿನಲ್ಲಿನ ಒಕ್ಕಲಿಗ ಮತದಾರರಿಗೆ ತಾವು ಯಾರ ವಿರುದ್ಧ ನಿಂತುಕೊಳ್ಳಬೇಕು ಎಂಬ ಗೊಂದಲದಲ್ಲಿದ್ದಾರೆ. ಯಾರ ಪರ ನಿಂತರೆ ಯಾರಿಗೆ ನಷ್ಟವಾಗುತ್ತೆ ಎಂಬ ಲೆಕ್ಕಚಾರದಲ್ಲಿ ಮುಳುಗಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಒಕ್ಕಲಿಗ, ಅರೆ ಒಕ್ಕಲಿಗ ಮತಗಳು ಎಲ್ಲಾ ಸಮುದಾಯಕ್ಕಿಂತ ಹೆಚ್ಚಿವೆ. 45 ಸಾವಿರ ಒಕ್ಕಲಿಗ ಮತದಾರರು ಇದ್ದಾರೆ. ಅಲ್ಲಿಗೆ ಚುನಾವಣೆಯಲ್ಲಿ ಈ ಮತಗಳು ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ. ಹೀಗಾಗಿ ಒಕ್ಕಲಿಗರ ಮತ ಸೆಳೆಯಲು ಅಭ್ಯರ್ಥಿಗಳು ಪೈಪೋಟಿಗೆ ಇಳಿದಿದ್ದಾರೆ. ಇದರಿಂದ ಮಾಜಿ ಸಚಿವ ಜಿ.ಟಿ. ದೇವೇಗೌಡ ಮತ್ತು ಅವರ ಪುತ್ರನಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲಿದ್ದಾರೋ ಗೊತ್ತಾಗುತ್ತಿಲ್ಲ, ಅವರು ಬೇಗ ಹೊರಗೆ ಬರಲಿ: ಎಚ್. ವಿಶ್ವನಾಥ್

    ಕೆಲವರು ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಪರ ನಿಂತರೆ, ಕೆಲವರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿದ್ದಾರೆ. ಮತ್ತೆ ಕೆಲವರು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಗಾವಲಾಗಿ ನಿಂತಿದ್ದಾರೆ. ಜೆಡಿಎಸ್ ಸಂಪ್ರದಾಯಿಕ ಮತ ಜೆಡಿಎಸ್‍ಗೆ ಬಂದರೆ ಕಾಂಗ್ರೆಸ್‍ಗಿಂತಾ ಬಿಜೆಪಿಗೆ ನಷ್ಟ ಹೆಚ್ಚಿದೆ. ಹೀಗಾಗಿ ಬಿಜೆಪಿ ಒಕ್ಕಲಿಗ ಮತಗಳ ಒಲಿಸಿಕೊಳ್ಳಲು ಶತಪ್ರಯತ್ನ ಮಾಡ್ತಿದೆ. ಕಾಂಗ್ರೆಸ್ ಮಾತ್ರ ಒಕ್ಕಲಿಗ ಮತಗಳು ನಮಗೆ ಬರಲಿ ಇಲ್ಲದೆ ಇದ್ದರೆ ಜೆಡಿಎಸ್‍ಗೆ ಹೋಗಲಿ, ಬಿಜೆಪಿಗೆ ಮಾತ್ರ ಹೋಗಬಾರದು ಅಂತಾ ರಣತಂತ್ರ ಹೆಣೆಯುತ್ತಿದೆ.