ಚಾಮರಾಜನಗರ: ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಬಂಧಿತರು. ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ಇವರುಗಳನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ ಎರಡು ನಾಡ ಬಂದೂಕು, ಆರು ಸಜೀವ ಕಾಟ್ರೇಜ್ಗಳು, ಕಬ್ಬಿಣದ ಬಾಲ್ಸ್, ಕಾರು ಮತ್ತು ಬೈಕ್ನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ: ಕಾಡು ಹಂದಿಗಳನ್ನು ಬೇಟೆಯಾಡುವ (Hunting) ಸಲುವಾಗಿ ಹಾಕಲಾಗಿದ್ದ ಲೈವ್ ವೈರ್ಗಳ ಸ್ಪರ್ಶದಿಂದ ಹೆಣ್ಣು ಚಿರತೆ (Cheetah) ಮತ್ತು ಎರಡು ಚಿರತೆ ಮರಿಗಳು (Cubs) ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಗೊಂಡಿಯಾ (Gondia) ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರ್ವಾಸನೆ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಶೋಧ ನಡೆಸಿದಾಗ ಚಿರತೆ ಹಾಗೂ ಎರಡು ಮರಿಗಳ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಕಳ್ಳಬೇಟೆಗೆ ಬಳಸಿದ ವಿದ್ಯುತ್ ತಂತಿಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸುಳಿವಿನ ಮೇರೆಗೆ ಅರಣ್ಯಾಧಿಕಾರಿಗಳು ಭೋಯರ್ತೋಲಾ ಮತ್ತು ಮೆಹ್ತಖೇಡಾ ಗ್ರಾಮಗಳ ಎಂಟು ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಬಳಿಕ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: INDIA ಒಕ್ಕೂಟದ ವಿರುದ್ಧ NDA ಶಕ್ತಿ ಪ್ರದರ್ಶನ – ಮುಂಬೈನಲ್ಲಿ ಒಂದೇ ದಿನ ಎರಡು ಸಭೆ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿಎಫ್ ರಾಥೋಡ್ ಅವರ ಪ್ರಕಾರ, ನಾಲ್ವರು ಆಗಸ್ಟ್ 26ರ ರಾತ್ರಿ ಕಾಡು ಹಂದಿಗಳನ್ನು ಬೇಟೆಯಾಡಲು ಲೈವ್ ವೈರ್ಗಳನ್ನು ಹಾಕಿದ್ದರು. ಅದು ಚಿರತೆಗಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಹೆಣ್ಣು ಚಿರತೆ ಹಾಗೂ ಮರಿಗಳು ಎರಡು ದಿನಗಳ ಹಿಂದೆ ಸತ್ತಿದ್ದು, ದೇಹದ ಭಾಗಗಳು ಹಾಗೆಯೇ ಇವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಅಧಿಕೃತ ಮ್ಯಾಪ್ನಲ್ಲಿ ಅರುಣಾಚಲ ಪ್ರದೇಶ ಸೇರಿಸಿಕೊಂಡ ಚೀನಾ – ದಕ್ಷಿಣ ಟಿಬೆಟ್ ಎಂದು ನಾಮಕರಣ
ಮಡಿಕೇರಿ: ಆ 4 ಜನರು ಎಂದೂ ಬಿಟ್ಟಿರಲಾರದ ಆಪ್ತ ಸ್ನೇಹಿತರು (Friends). ಒಟ್ಟೊಟ್ಟಿಗೆ ಪಾರ್ಟಿ ಮಾಡಿ ಎಂಜಾಯ್ ಮಾಡುತ್ತಿದ್ದವರು. ಅದೇ ಆತ್ಮೀಯತೆಯಿಂದಲೇ ಸೋಮವಾರ ಮಟಮಟ ಮಧ್ಯಾಹ್ನವೇ ಗನ್ ಹಿಡಿದು ಬೇಟೆಗೆ (Hunting) ಹೊರಟಿದ್ದರು. ಬೇಟೆಗೆ ಹೋದ ನಾಲ್ವರಲ್ಲಿ ಮೂವರು ಊರಿಗೆ ವಾಪಸ್ ಬಂದ್ರೆ, ಅದರಲ್ಲೊಬ್ಬ ನಾಪತ್ತೆಯಾಗಿದ್ದ. ಆದರೆ ಮಿಸ್ ಆದವನು 4 ದಿನವಾದರೂ ಪತ್ತೆ ಆಗಲೇ ಇಲ್ಲ. ಒಟ್ಟಿಗೆ ಹೋದವನು ಮಿಸ್ ಆಗಿದ್ದು ಹೇಗೆ ಎನ್ನುವುದೇ ಈಗ ಮಿಸ್ಟರಿ.
ಹೌದು, ಗ್ರಾಮದ 4 ಜನರು ಪ್ರಾಣ ಸ್ನೇಹಿತರು ಒಬ್ಬರಿಗೆ ಒಬ್ಬರು ಪ್ರಾಣ ಕೊಡುವಷ್ಟು ಆತ್ಮೀಯರು. ಒಂದೇ ತಟ್ಟೆಯಲ್ಲಿ ಊಟ ಮಾಡುವ ಸ್ನೇಹಿತರು. ಇದೇ ಕಾರಣಕ್ಕೆ ಒಟ್ಟಿಗೆ ಊರಿನಲ್ಲಿ ಇರುವ ಕಾಡಿಗೆ ಬೇಟೆಗೆ ಹೋಗುವುದಾಗಿ ಮಾತಾನಾಡಿಕೊಂಡ ನಾಲ್ವರು ಸ್ನೇಹಿತರು ಹೋಗಿ ಬರುವಾಗ ಮೂವರು ಬಂದಿದ್ದಾರೆ. ಮತ್ತೋರ್ವ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ.
ಅಷ್ಟಕ್ಕೂ ಈ ಘಟನೆ ನಡೆದಿರುವುದು ಕೊಡಗು ಜಿಲ್ಲೆಯ (ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯಲ್ಲಿ. ವಿರೂಪಾಕ್ಷಪುರ ಗ್ರಾಮದ ನಿವಾಸಿ, ಆಟೋ ಚಾಲಕ ವಿನೋದ್(29) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ಸೋಮವಾರ ವಿನೋದ್ ತನ್ನ ಸಹಚರರಾದ ಧರ್ಮ, ಯೋಗೇಶ್, ಈಶ್ವರ ಎಂಬವರೊಂದಿಗೆ ಬೇಟೆಗೆ ತೆರಳಿದ್ದರು. ಗ್ರಾಮದ ನದಿ ದಾಟಿ ಬೈಲುಕೊಪ್ಪ ಪೋಲಿಸ್ ಠಾಣಾ ವ್ಯಾಪ್ತಿಯ ಕಾಡಿಗೆ ತೆರಳಿದ್ದಾರೆ. ಆದರೆ ಮೂವರು ಮಾತ್ರ ಹಿಂತಿರುಗಿದ್ದರು. ವಿನೋದ್ ಮರಳಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನ ಪತ್ನಿ ಅನುಷಾ ಬುಧವಾರ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಮಿಸ್ಸಿಂಗ್ ದೂರು ನೀಡಿದರು. ಆದರೆ ಇಂದು ಕಾವೇರಿ ನದಿಯಲ್ಲಿ ವಿನೋದ್ ಮೃತ ದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸೋಮವಾರ ಮಧ್ಯಾಹ್ನದ ವೇಳೆಗೆ ಈ ನಾಲ್ವರು ಬೇಟೆಗೆ ಊರಿನ ಮಧ್ಯೆಯೇ ಗನ್ ಹಿಡಿದುಕೊಂಡು ಹೋಗಿದ್ದಾರೆ. ಅವರು ಕಾವೇರಿ ನದಿಯನ್ನು ದಾಟಿಕೊಂಡು ಹೋಗುವುದನ್ನು ಇಡೀ ಊರಿನ ಜನರು ನೋಡಿದ್ದಾರೆ. ಆದರೆ ಅಂದು ಯೋಗೇಶ್, ಈಶ್ವರ ಮತ್ತು ಧರ್ಮ ಮನೆಗೆ ವಾಪಸ್ ಬಂದ ಬಳಿಕ ವಿನೋದ್ ಮನೆಗೆ ಆಗಾಗ ಹೋಗಿ ಆತ ಮರಳಿ ಬಂದಿದ್ದಾನಾ? ಎಂದು ಕೇಳಿದ್ದಾರೆ. ಹೀಗಾಗಿ ವಿನೋದ್ ಮನೆಯರು ಅನುಮಾನಗೊಂಡು, ನಿನ್ನೆ ಪತ್ನಿ ಅನುಷಾ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಜೊತೆ ಗಂಡನ ಫೋಟೋಸ್ ನೋಡಿ ನವವಿಹಾಹಿತೆ ಆತ್ಮಹತ್ಯೆ
ಇಂದು ಬೆಳಗ್ಗೆ ಬಾಳುಗೋಡು ವ್ಯಾಪ್ತಿಯ ಕಾವೇರಿ ನದಿ ದಂಡೆಯಲ್ಲಿ ವಿನೋದ್ ಮೃತದೇಹ ಪತ್ತೆಯಾಗಿದೆ. ಬೇಟೆಗೆ ಹೋಗಿದ್ದ ಸಂದರ್ಭ ಆಕಸ್ಮಿಕವಾಗಿ ಗುಂಡು ತಗುಲಿದೆಯೋ ಅಥವಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೋ ಎನ್ನುವ ಅನುಮಾನ ಕುಟುಂಬಸ್ಥರಿಗೆ ಕಾಡಿದೆ. ಆದರೆ ಬೇಟೆಗೆ ತೆರಳಿದ್ದ ಯೋಗೇಶ್, ಈಶ್ವರ ಈಗ ತಲೆಮರೆಸಿಕೊಂಡಿದ್ದು, ಧರ್ಮ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಧರ್ಮನನ್ನು ವಶಕ್ಕೆ ಪಡೆದು, ಮತ್ತಿಬ್ಬರ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ. ಆಕಸ್ಮಿಕ ಗುಂಡು ತಗಲಿ ವಿನೋದ್ ಸತ್ತನೋ ಅಥವಾ ಕಾಲು ಜಾರಿ ನದಿಗೆ ಬಿದ್ದು ಸತ್ತನೋ ತನಿಖೆ ನಂತರವಷ್ಟೇ ಸತ್ಯ ಬಯಲಿಗೆ ಬರಲಿದೆ. ಇದನ್ನೂ ಓದಿ: ಹೆರಿಗೆ ಶಸ್ತ್ರಚಿಕಿತ್ಸೆ ಬಳಿಕ ಬಾಣಂತಿ ಸಾವು – ಸರ್ಕಾರಿ ಆಸ್ಪತ್ರೆ ಎದುರು ಮೃತದೇಹವಿಟ್ಟು ಪ್ರತಿಭಟನೆ
Live Tv
[brid partner=56869869 player=32851 video=960834 autoplay=true]
ಕೋಲಾರ: ಮಾವಿನ ತೋಟದಲ್ಲಿ ರಾತ್ರಿ ಕಾವಲಿಗೆ ಕೋವಿ ಇಟ್ಟುಕೊಂಡು ಕಾವಲಿದ್ದವನು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಬಳಿ ಮಾವಿನ ತೋಟದಲ್ಲಿ ನಡೆದಿದೆ.
ಕಾವಲು ಗಾರ ಕೊಲೆಯಾದನೆ ಅಥವಾ ಬೇಟೆಯಾಡಲು ಹೋಗಿ ತಾನೇ ಬೇಟೆಯಾದನೆ ಎಂಬ ಹಲವು ಪ್ರಶ್ನೆಗಳು ಎದ್ದಿವೆ. ತಲೆಗೆ ಬಂದೂಕಿನಿಂದ ಹೊಡೆದ ಪರಿಣಾಮ ಸತ್ತು ಬಿದ್ದಿದ್ದಾನೆ. ಶಂಕರ (45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಸೀಗೆಹಳ್ಳಿ ಗ್ರಾಮದ ರವಿ ಅವರ ಮಾವಿನ ತೋಟದಲ್ಲಿ ರಾತ್ರಿ ಕಾವಲು ಕಾಯುವ ಕೆಲಸ ಮಾಡುತಿದ್ದ. ಆದರೆ ನಿನ್ನೆ ಮುಂಜಾನೆ ಆರು ಗಂಟೆಗೆ ಶವವಾಗಿ ಪತ್ತೆಯಾಗಿದ್ದಾನೆ.
ತನ್ನದೇ ಕೈಯಲ್ಲಿದ್ದ ಕೋವಿಯಿಂದ ತಲೆಗೆ ಸರಿಯಾಗಿ ಗುಂಡೇಟು ಬಿದ್ದಿದ್ದು ಮೆದುಳು ಕೂಡ ಹೊರಬಿದ್ದು, ಭೀಕರವಾಗಿ ಮೃತಪಟ್ಟಿದ್ದಾನೆ. ಪ್ರಾಣಿ ಭೇಟೆಯಾಡಲು ಹೋಗಿದ್ದ ಕೋವಿ ಮಾಲೀಕ ಕೋದಂಡಪ್ಪ ಜೊತೆಗೆ ಶ್ರೀನಿವಾಸಗೌಡ ಮತ್ತು ಚೌಡಪ್ಪ ಎಂಬುವರಿದ್ದು, ರಾತ್ರಿ ನಡೆಯಬಾರದ್ದು ನಡೆದಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಶಂಕರಪ್ಪನ ತಲೆಗೆ ನೇರವಾಗಿ ಗುಂಡೇಟು ತಗಿಲಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ ಕೋವಿಯ ಮಾಲೀಕ ಕೋದಂಡಪ್ಪ ಆಗಿದ್ದು, ಮೃತನ ಕೈಗೆ ಕೋವಿ ಏಕೆ ಕೊಟ್ಟಿದ್ದರು ಎಂಬುದು ಕೂಡ ಪ್ರಶ್ನೆಯಾಗಿದೆ.
ಗ್ರಾಮಸ್ಥರಲ್ಲಿ ಕೆಲವರು ಹೇಳುವ ಪ್ರಕಾರ ಮಿಸ್ ಆಗಿ ಗುಂಡೇಟು ಆತನ ತಲೆಗೆ ಬಿದ್ದಿದೆ, ಅವನ ಮೇಲೆ ವೈಷಮ್ಯ ಯಾರಿಗೂ ಇರಲಿಲ್ಲ. ಇದು ಕೊಲೆಯಲ್ಲ ಆಕಸ್ಮಿಕ ಆಗಿರಬಹುದು ಎನ್ನುತ್ತಿದ್ದಾರೆ. ಸದ್ಯ ಪ್ರಕರಣ ದಾಖಲಿಸಿರುವ ಶ್ರೀನಿವಾಸಪುರ ಪೋಲೀಸರು ಘಟನೆ ಸತ್ಯಾಸತ್ಯತೆ ಕುರಿತು ತನಿಖೆ ಮುಂದುವರೆಸಿದ್ದಾರೆ. ಘಟನೆ ಸಂಬಂಧ ನಾಲ್ವರನ್ನು ವಿಚಾರಣೆ ನಡೆಸುತಿದ್ದಾರೆ.
ಹಾಸನ: ಶಿಕಾರಿಗೆ ತೆರಳಿದ್ದ ವೇಳೆ ಗೆಳೆಯರ ನಡುವೆ ಗಲಾಟೆಯಾಗಿ, ಸ್ನೇಹಿತನಿಗೆ ಮತ್ತೊಬ್ಬ ಸ್ನೇಹಿತ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ ಹಾರೋಹಳ್ಳಿ ಬಳಿಯ ಅರಣ್ಯದಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ರವಿ, ಶಾಂತಕುಮಾರ್ ಹಾಗೂ ಸ್ನೇಹಿತರು ಶಿಕಾರಿಗೆ ತೆರಳಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗೆಳೆಯರ ನಡುವೆ ಕಿತ್ತಾಟ ಶುರುವಾಗಿದೆ. ಇದ್ರಿಂದ ಕೆರಳಿದ ರವಿ ತನ್ನ ಬಳಿ ಇದ್ದ ನಾಡ ಬಂದೂಕಿನಿಂದ ಸ್ನೇಹಿತ ಶಾಂತಕುಮಾರ್ ಕಾಲಿಗೆ ಗುಂಡು ಹೊಡೆದಿದ್ದಾನೆ. ಗುಂಡಿತ ಹೊಡೆತ ತಿಂದು ಗಾಯಗೊಂಡ ಶಾಂತಕುಮಾರ್ಗೆ ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ನಂತರ ಆರೋಪಿ ರವಿ ಪರಾರಿಯಾಗಿದ್ದಾನೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆಹ್ರಾಡೂನ್: ಬೇಟೆಗೆಂದು ಕಾಡಿಗೆ ಹೋದ ವೇಳೆ ಗುಂಡಿಗೆ ಸ್ನೇಹಿತ ಬಿಲಿಯಾಗಿದ್ದನು. ಈ ವಿಚಾರವಾಗಿ ಮನನನೊಂದ ಮೂವರು ಸ್ನೇಹಿತರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಾಖಂಡದ ನ್ಯೂತೆಹ್ರಿಯಲ್ಲಿ ನಡೆದಿದೆ.
ಮೃತ ಯುವಕರನ್ನು ಸಂತೋಷ್, ಸೋಬನ್, ಪಂಕಜ್, ಅರ್ಜುನ್ ಎಂದು ಗುರುತಿಸಲಾಗಿದೆ. ಬೇಟೆಗೆ ಹೋದ ವೇಳೆ ಸಂತೋಷ್ ಗುಂಡು ತಾಗಿ ಮೃತಪಟ್ಟಿದ್ದನು. ಸ್ನೇಹಿತನ ಸಾವಿಗೆ ನಾವು ಕಾರಣ ಎಂದು ಈ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
7 ಮಂದಿ ಯುವಕರು ಸೇರಿ ಬೇಟೆಗೆ ಹೋಗಿದ್ದರು. ಅರಣ್ಯದಲ್ಲಿ ಗನ್ ಹಿಡಿದು ಓಡಾಡುತ್ತಿದ್ದರು. ರಾಜೀವ್ ಕಾಲು ಜಾರಿ ಬಿದ್ದಿದ್ದಾನೆ. ಈ ವೇಳೆ ಗನ್ ಟ್ರಿಗರ್ ಅದುಮಿ ಸಂತೋಷ್ನಿಗೆ ಗುಂಡು ತಾಗಿ ಸಾವನ್ನಪ್ಪಿದ್ದಾನೆ. ಈ ವೇಳೆ ಭಯಗೊಂಡ ರಾಜೀವ್ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಸಂತೋಷ್ ಜೊತೆಯಲ್ಲೇ ಇದ್ದ ಸ್ನೇಹಿತರು ಇವನ ಸಾವಿಗೆ ನಾವು ಕಾರಣ ಎಂದು ಮನನನೊಂದು ಸೋಬನ್, ಪಂಕಜ್, ಅರ್ಜುನ್ ಗ್ರಾಮಕ್ಕೆ ಮರಳಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೇಟೆಯಲ್ಲಿ ಸಂತೋಷ್ ಸಾವನ್ನಪ್ಪಿದ ವಿಚಾರವನ್ನು ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಸಂತೋಷ್ ಮೃತಪಟ್ಟರೆ, ಈತನ ಸ್ನೇಹಿತರು ವಿಷಸೇವಿಸಿದ್ದರು. ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸುತ್ತಿರುವಾಗಲೇ ಮೂವರು ಪ್ರಾಣ ಬಿಟ್ಟಿದ್ದಾರೆ.
ಕೋಲಾರ: ಕಾಡುಹಂದಿಗಳ ಬೇಟೆಗಾಗಿ ಇಟ್ಟಿದ್ದ ನಾಡ ಬಾಂಬ್ ಸಿಡಿದು ಗಾಯಗೊಂಡಿದ್ದ ಗರ್ಭಿಣಿ ಸೀಮೆ ಹಸು ನರಳಾಡಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಬಂಗಾರಪೇಟೆ ತಾಲೂಕಿನ ಹೊಸೂರು ಗ್ರಾಮದ ರೈತ ಶ್ರೀನಿವಾಸನ್ ಎಂಬುವರಿಗೆ ಸೇರಿದ ಹಸುವಾಗಿದ್ದು, ಸುಮಾರು 80 ಸಾವಿರ ರೂಪಾಯಿ ಮೌಲ್ಯ ಹೊಂದಿತ್ತು. ಹಸು ಆಹಾರ ಅರಸಿಕೊಂಡು ಪಕ್ಕದಲ್ಲಿದ್ದ ಜಾಗದಲ್ಲಿ ಮೇಯುತ್ತಿದ್ದ ವೇಳೆ ನಾಡ ಬಾಂಬ್ ಸಿಡಿದು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಂದಿ ಬೇಟೆಗೆ ಇಟ್ಟಿದ್ದ ಕೇಪ್ ಉಂಡೆ ಸಿಡಿದು ಸೀಮೆಹಸು ಬಾಯಿ ಛಿದ್ರವಾಗಿತ್ತು, ವಿಷ ಮದ್ದಿನ ಉಂಡೆ ಸಿಡಿತದ ರಭಸಕ್ಕೆ ಇನ್ನೇನು 1 ತಿಂಗಳಲ್ಲಿ ಕರುವಿಗೆ ಜನ್ಮ ನೀಡಬೇಕಿದ್ದ ಸೀಮೆಹಸು ನರಳಿ ನರಳಿ ಸಾವನ್ನಪ್ಪಿದೆ. ಕಿಡಗೇಡಿ ಬೇಟೆಗಾರರು ಕಾಡುಹಂದಿಗಾಗಿ ಸ್ಪೋಟಕ ವಸ್ತುಗಳಿಂದ ಮಾಡಿದ್ದ ಈ ಕೃತ್ಯದಿಂದ ಎರಡು ಜೀವ ಬಲಿಯಾಗಿದೆ. ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಬಂಗಾರಪೇಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ: ಅಕ್ರಮವಾಗಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಏಳು ಮಂದಿ ಬೇಟೆಗಾರರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಪಿಸ್ತೂಲು, ಬಂದೂಕು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಕಾಡಿನಂಚಿನಲ್ಲಿ ಘಟನೆ ನಡೆದಿದ್ದು, ಆರೋಪಿಗಳು ತಂದಿದ್ದ ಅತ್ಯಾಧುನಿಕ ನಾಲ್ಕು ಬಂದೂಕುಗಳನ್ನು, ಒಂದು ಪಿಸ್ತೂಲ್, ಬೌ ಆ್ಯಂಡ್ ಆರೋ, ಹೈ ಫ್ಲ್ಯಾಶ್ ಲೈಟ್ಗಳು ಹಾಗೂ ಬೇಟೆಗೆ ಉಪಯೋಗಿಸುವ ಹಲವಾರು ಉಪಕರಣಗಳು, ಬೇಟೆಗಾರರ ಎರಡು ಮಹಿಂದ್ರ ಜೀಪ್ ಹಾಗೂ ಮಹಿಂದ್ರ ಸ್ಕಾರ್ಪಿಯೋ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಬಂಧಿತ 7 ಮಂದಿ ಆರೋಪಿಗಳು ಶಿವಮೊಗ್ಗ, ಬೆಂಗಳೂರು ಮೂಲದವರಾಗಿದ್ದು, ಪ್ರಮುಖ ನಾಲ್ಕು ಮಂದಿ ಬೇಟೆಗಾಗರರು ಮತ್ತು ಮೂರು ಮಂದಿ ವಾಹನಗಳ ಚಾಲಕರಾಗಿದ್ದಾರೆ. ಬೇಟೆಗಾರರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ಪರಿಪಾಲಕರು ಕಾರ್ಯ ಪ್ರವೃತ್ತರಾಗಿ, ಇಡೀ ಅರಣ್ಯ ಪ್ರದೇಶವನ್ನು ಎರಡು ಬಾರಿ ಸ್ಥಳ ವೀಕ್ಷಣೆ ಮಾಡಿ ಖಚಿತಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲಾ ಗೌರವ ವನ್ಯಜೀವಿ ಪರಿಪಾಲಕರಾದ ರಘುರಾಮ್ ಜಿ.ಎಚ್., ಹಿರಿಯೂರು ವಲಯ ಅರಣ್ಯಾಧಿಕಾರಿ ಶ್ರಿಹರ್ಷ, ಉಪ ವಲಯ ಅರಣ್ಯಾಧಿಕಾರಿ ಪ್ರದೀಪ್ ಕೇಸರಿ ಮತ್ತು ಸಿಬ್ಬಂದಿ ನೇರವಾಗಿ ದಾಳಿ ನಡೆಸಿ ಬೇಟೆಗಾರರನ್ನು ಹಿಡಿದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಸಿಎಫ್ ಲಿಂಗರಾಜು ಬೆನ್ನೆಲುಬಾಗಿ ನಿಂತು ಮಾರ್ಗದರ್ಶನ ನೀಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
– 20 ಕೃಷ್ಣಮೃಗ ಚರ್ಮ, 2 ಕೊಂಬು ವಶಕ್ಕೆ, 6 ಮಂದಿ ಅರೆಸ್ಟ್
ಕೊಪ್ಪಳ: ಕೃಷ್ಣಮೃಗಳ ಬೇಟೆಯಾಡಿ ಚರ್ಮ, ಕೊಂಬುಗಳ ಮಾರಾಟ ಮಾಡುತ್ತಿದ್ದ ಗ್ಯಾಂಗ್ವೊಂದನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದ ನಿವಾಸಿಗಳಾದ ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳು ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿ ಅದರ ಚರ್ಮ ಮತ್ತು ಕೊಂಬುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು.
ಬಂಧಿತರಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಫಿಯುಳ್ಳ ಕೊಂಬು, ಒಂದು ಜಿಂಕೆ ಮರಿ ಸೇರಿದಂತೆ ದಂಧೆಗೆ ಬಳಸುತ್ತಿದ್ದ ಮೂರು ಬೈಕ್ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಗಿಳಿದು ಕೃಷ್ಣಮೃಗ ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೃಷ್ಣಮೃಗದ ಒಂದು ಚರ್ಮಕ್ಕೆ 50 ಸಾವಿರ ರೂಪಾಯಿಯಂತೆ ಮಾರಾಟ ಮಾಡುತ್ತಿದ್ದರು. ಬೆಂಗಳೂರು, ಮಂಗಳೂರು ಭಾಗದಲ್ಲಿ ಮಾರಾಟ ಮಾಡಿ ದುಡ್ಡು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿನಿಮಿಯ ರೀತಿಯಲ್ಲಿ ಅರಣ್ಯ ಅಧಿಕಾರಿಗಳು ಮಾರುವೇಶ ಧರಿಸಿಕೊಂಡು ಜಿಂಕೆ ಚರ್ಮ ಖರೀದಿಗೆ ಬಂದಿದ್ದೇವೆ ಎಂದು ಹೇಳಿ ಗ್ಯಾಂಗ್ನ್ನು ಸೆರೆಹಿಡಿದಿದ್ದಾರೆ. ಅರಣ್ಯ ಇಲಾಖೆಯ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.
ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪ್ರಾಣಿಗಳ ಮೇಲಿನ ಕ್ರೌರ್ಯ ಮರುಕಳಿಸಿದೆ. ಗರ್ಭಿಣಿ ಕಾಡು ಎಮ್ಮೆಯನ್ನು ಅಮಾನುಷವಾಗಿ ಬೇಟೆಯಾಡಿ ಕೊಲ್ಲಲಾಗಿದೆ.
ಗರ್ಭಿಣಿ ಕಾಡು ಎಮ್ಮೆ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆ ಈಗ ಐದು ಜನರನ್ನು ಬಂಧಿಸಿದೆ. ಆರೋಪಿಗಳನ್ನು ಪುಲ್ಲಾರ ಅಬು ಅಕಾ ನಾನಿಪ್ಪ (47), ಮುಹಮ್ಮದ್ ಬುಸ್ತಾನ್ (30), ಮುಹಮ್ಮದ್ ಅನ್ಸಿಫ್ (23), ಆಶಿಕ್ (27) ಮತ್ತು ಸುಹೇಲ್ (28) ಎಂದು ಗುರುತಿಸಲಾಗಿದೆ.
ಕಳೆದ ಎರಡು ತಿಂಗಳ ಹಿಂದೆ ಇದೇ ಕೇರಳದ ಪಾಲಕ್ಕಾಡ್ ಜಿಲ್ಲೆಯ ಮನ್ನಾರ್ಕಡ್ ಅರಣ್ಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆಯನ್ನು ಹಣ್ಣಿನಲ್ಲಿ ಪಟಾಕಿ ಇಟ್ಟು ಕೊಲೆ ಮಾಡಲಾಗಿತ್ತು. ಈಗ ನಿಲಾಂಬೂರ್ ದಕ್ಷಿಣ ಅರಣ್ಯ ವಿಭಾಗದ ಕಾಳಿಕಾವ್ ವ್ಯಾಪ್ತಿಯಲ್ಲಿರುವ ಚಕ್ಕಿಕುಜಿ ಅರಣ್ಯ ಕೇಂದ್ರದ ವ್ಯಾಪ್ತಿಯ ಪುಂಚ ಅರಣ್ಯದಲ್ಲಿ ಆರೋಪಿಗಳು ಕಾಡು ಎಮ್ಮೆಯನ್ನು ಬೇಟೆಯಾಡಿದ್ದಾರೆ ಎಂದು ವರದಿಯಾಗಿದೆ.
ಆಗಸ್ಟ್ 10ರಂದು ರಾತ್ರಿ ನಡೆದ ದಾಳಿಯಲ್ಲಿ ಅರಣ್ಯ ಅಧಿಕಾರಿಗಳು ಆರೋಪಿಗಳ ಮನೆಯಿಂದ ಕಾಡು ಎಮ್ಮೆ ಮಾಂಸವನ್ನು ಪತ್ತೆ ಮಾಡಿದ್ದಾರೆ. ಅರಣ್ಯ ಅಧಿಕಾರಿಗಳು ಸುಮಾರು 25 ಕೆಜಿಗಳಷ್ಟು ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 200 ಕೆಜಿಗಳಷ್ಟು ಮಾಂಸ ಇತ್ತು ಎಂದು ಅಂದಾಜಿಸಲಾಗಿದೆ. ಆರೋಪಿಗಳು ಎರಡು ತಲೆಬುರುಡೆ ಮತ್ತು ಇತರ ಕಾಡು ಎಮ್ಮೆಯ ಅವಶೇಷಗಳನ್ನು ಕಾಡಿನ ವಿವಿಧ ಭಾಗಗಳಲ್ಲಿ ಎಸೆದಿದ್ದಾರೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕಾಡು ಎಮ್ಮೆಯ ಹತ್ಯೆ ಪ್ರಕರಣದಲ್ಲಿ ಹೆಚ್ಚಿನ ಆರೋಪಿಗಳು ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ. ಆರೋಪಿಗಳನ್ನು ಇಂದು ಮಲಪ್ಪುರಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.