Tag: Huts

  • ರಾತ್ರೋ ರಾತ್ರಿ ಲೇಔಟ್‍ನಲ್ಲಿ ಗುಡಿಸಲು ನಿರ್ಮಾಣ

    ರಾತ್ರೋ ರಾತ್ರಿ ಲೇಔಟ್‍ನಲ್ಲಿ ಗುಡಿಸಲು ನಿರ್ಮಾಣ

    ಕೋಲಾರ: ನಿವೇಶನ ರಹಿತರಿಗೆ ಭೂ ಮಂಜೂರು ಮಾಡದ ಹಿನ್ನೆಲೆ ರಾತ್ರೋರಾತ್ರಿ ಖಾಸಗಿ ಲೇಔಟ್‍ನಲ್ಲಿರುವ ಸರ್ಕಾರಿ ಜಮೀನಿನಲ್ಲಿ ದಲಿತರು ಗುಡಿಸಲು ನಿರ್ಮಾಣ ಮಾಡಿದ್ದಾರೆ. ಸರ್ಕಾರಿ ಜಮೀನಿನಲ್ಲಿ ರಾತ್ರೋ ರಾತ್ರಿ ಗುಡಿಸಲುಗಳ ನಿರ್ಮಾ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ ಇರುವ ಹನುಮಂತಪುರ ಸರ್ವೇ ನಂ. 22 ರಲ್ಲಿ ವಿ.ಆರ್.ವೆಂಚರ್ಸ್ ಎಂಬ ಖಾಸಗಿ ಲೇಔಟ್ ನಲ್ಲಿ ಗುಡಿಸಲುಗಳು ನಿರ್ಮಾಣ ಮಾಡಲಾಗಿದೆ.

    ಸರ್ವೆ ನಂ.22 ರಲ್ಲಿರುವ 1 ಎಕರೆ 20 ಗುಂಟೆ ಸರ್ಕಾರಿ ಗೋಮಾಳದಲ್ಲಿ ನಿವೇಶನ ರಹಿತರು ಹಾಗೂ ದಲಿತರಿಗೆ ನಿವೇಶನ ನೀಡುವಂತೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದ್ರೆ ಅಲ್ಲೆ ಪಕ್ಕದಲ್ಲೆ 120 ಎಕರೆಯಲ್ಲಿ ನಿರ್ಮಾಣ ವಿ.ಅರ್.ವೆಂಚರ್ಸ್ ಖಾಸಗಿ ಲೇಔಟ್ ಅಭಿವೃದ್ದಿ ಮಾಡಿದ್ದು, ಹತ್ತಾರು ಪರಿಶಿಷ್ಟ ಜಾತಿ, ಪಂಗಡದವರು ರಾತ್ರೋ ರಾತ್ರಿ ಗಿಡಿಸಲುಗಳನ್ನ ನಿರ್ಮಾಣ ಮಾಡಿದ್ದಾರೆ.

    ಹುಣಸನಹಳ್ಳಿ, ಹನುಮಂತಪುರ ಗ್ರಾಮದ ಹತ್ತಾರು ದಲಿತ ಕುಟುಂಬಗಳು, ನಿವೇಶನ ರಹಿತರು ಗುಡಿಸಲುಗಳನ್ನ ನಿರ್ಮಾಣ ಮಾಡಿದ್ದಾರೆ. ಇನ್ನೂ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ದಯಾನಂದ್ ಭೇಟಿ ನೀಡಿ ನಿವೇಶನ ರಹಿತರ ಮನವೊಲಿಸುವ ಕಾರ್ಯ ನಡೆಸಿದ್ರು, ಅಲ್ಲದೆ ಸರ್ಕಾರಿ ಜಮೀನು ಉಳಿಸಿಕೊಳ್ಳುವ ಭರವಸೆ ನೀಡಿದ್ದಾರೆ.

  • ಬಿಬಿಎಂಪಿ ಅಧಿಕಾರಿಗಳ ಎಡವಟ್ಟು – ಬಾಂಗ್ಲಾದೇಶಿಯರೆಂದು ಭಾರತೀಯರ ಶೆಡ್‌ಗಳು ತೆರವು

    ಬಿಬಿಎಂಪಿ ಅಧಿಕಾರಿಗಳ ಎಡವಟ್ಟು – ಬಾಂಗ್ಲಾದೇಶಿಯರೆಂದು ಭಾರತೀಯರ ಶೆಡ್‌ಗಳು ತೆರವು

    ಬೆಂಗಳೂರು: ಪೌರತ್ವ ಕಾಯ್ದೆ ಜಾರಿಗೆ ಬಂದ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶಿಯರನ್ನು ಹುಡುಕುವ ಕೆಲಸಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ಮುಂದಾಗಿದ್ದಾರೆ. ಬಾಂಗ್ಲಾದೇಶಿಯರು ನೆಲೆಸುರುವ ಗುಡಿಸಲುಗಳನ್ನು ಬಿಬಿಎಂಪಿ ತೆರವುಗೊಳಿಸುತ್ತಿದೆ. ಈ ತೆರವು ಕಾರ್ಯಾಚರಣೆಯ ಭರಾಟೆಯಲ್ಲಿ ದೇಶದ ನಾಗರಿಕರು ಹಾಗೂ ಉತ್ತರ ಕರ್ನಾಟಕದ ಜನರು ವಾಸವಿರುವ ಶೆಡ್‌ಗಳನ್ನು ಕೂಡ ತೆರವುಗೊಳಿಸಿ ಬಿಬಿಎಂಪಿ ಸಿಬ್ಬಂದಿ ಮಾಹಾ ಎಡವಟ್ಟು ಮಾಡಿದ್ದಾರೆ.

    ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ದೇವರಬೀಸನಹಳ್ಳಿ ಹಾಗೂ ಕರಿಯಮ್ಮನ ಅಗ್ರಹಾರದಲ್ಲಿನ ಮಂತ್ರಿ ಇಂಸ್ಟಂಟ್ ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡಿರೋ ಕೃಷಿ ಜಮೀನಿನಲ್ಲಿ ಈ ಘಟನೆ ನಡೆದಿದೆ. ಹಲವಾರು ವರ್ಷಗಳಿಂದ ಇಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಶೆಡ್‌ಗಳಲ್ಲಿ ಉತ್ತರ ಭಾರತೀಯರು ಹಾಗೂ ಉತ್ತರ ಕರ್ನಾಟಕದ ಜನ ಕೂಲಿ ಮಾಡಿಕೊಂಡು ವಾಸವಿದ್ದಾರೆ. ಆದರೆ ಭಾನುವಾರ ಏಕಾಏಕಿ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ನೀವೆಲ್ಲಾ ಬಾಂಗ್ಲಾದೇಶಿಯರೆಂದು ಆರೋಪಿಸಿ, ಸುಮಾರು 80ಕ್ಕೂ ಹೆಚ್ಚು ಶೆಡ್‌ಗಳನ್ನ ತೆರವು ಮಾಡಿದ್ದಾರೆ. ತೆರವಿನ ವೇಳೆ ನಿವಾಸಿಗಳು ತಾವು ಭಾರತೀಯರು ಎಂದು ದಾಖಲೆಗಳನ್ನು ತೋರಿಸಿದರೂ ಅದನ್ನು ಬಿಬಿಎಂಪಿ ಸಿಬ್ಬಂದಿ, ಅಧಿಕಾರಿಗಳು ಪರಿಶೀಲಿಸದೆ ಏಕಾಏಕಿ ಶೆಡ್‌ಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಇಲ್ಲಿನ ಜನರು ಆರೋಪಿಸಿದ್ದಾರೆ.

    ಇಲ್ಲಿ ಮೊದಲು ಬಾಂಗ್ಲಾದೇಶಿಯರು ವಾಸಿಸುತ್ತಿದ್ದರು. ಆದರೆ ಹಲವು ದಿನಗಳ ಹಿಂದೆಯೇ ಅವರೆಲ್ಲಾ ಶೆಡ್‌ಗಳನ್ನು ಬಿಟ್ಟು ಹೊರಟು ಹೋಗಿದ್ದಾರೆ. ಇನ್ನು ಇಲ್ಲಿ ವಾಸಿಸುತ್ತಿರುವ ಬಹುತೇಕರು ಸ್ಥಳೀಯ ಅಪಾರ್ಟ್‌ಮೆಂಟ್‍ನಲ್ಲಿ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ದಿನಗೂಲಿಗಳಾಗಿ ಕೆಲಸ ಮಾಡುತ್ತಿದ್ದು, ಒಂದು ಶೆಡ್‌ಗಳಗೆ ಜಮೀನಿನ ಮಾಲೀಕನಿಗೆ 3 ಸಾವಿರ ರೂ. ಬಾಡಿಗೆ ಕೊಟ್ಟು ವಾಸಿಸುತ್ತಿದ್ದರು.

    ಇದೀಗ ಏಕಾಏಕಿ ಶೆಡ್‌ಗಳನ್ನು ತೆರವುಗೊಳಿಸಲಾಗಿದ್ದು, ಬರುವ ಸಂಬಳದಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಸಿಗುತ್ತಿದ್ದ ಕಾರಣ ಬಹುತೇಕ ಉತ್ತರ ಭಾರತೀಯರು ಹಾಗೂ ರಾಜ್ಯದ ಕೊಪ್ಪಳ, ಬಿಜಾಪುರ ಸೇರಿದಂತೆ ಅನೇಕ ಉತ್ತರ ಕರ್ನಾಟಕದ ಜನ ಇಲ್ಲಿ ವಾಸವಾಗಿದ್ದರು. ಆದರೆ ಬಿಬಿಎಂಪಿ ಎಡವಟ್ಟಿನಿಂದ ಸುರು ಕಳೆದುಕೊಂಡು ಮುಂದೇನು ಜನರು ಕಂಗಾಲಾಗಿದ್ದಾರೆ.

    ಬಾಂಗ್ಲಾದೇಶಿಯರ ಶೆಡ್‌ಗಳ ತೆರವಿಗೆ ಬಂದ ಬಿಬಿಎಂಪಿ ಅಧಿಕಾರಿಗಳು ಭಾರತೀಯರ ಶೆಡ್‌ಗಳನ್ನು ತೆರವು ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶೆಡ್‌ಗಳ ಪಕ್ಕದಲ್ಲೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್‍ ಬಿಲ್ಡರ್ ಒತ್ತಡಕ್ಕೆ ಬಿಬಿಎಂಪಿ ಮಣಿದಿದ್ದಾರಾ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಉದ್ಭವವಾಗಿದೆ.

  • ಅಲೆಮಾರಿಗಳು ನೆಲೆ ಕಂಡುಕೊಳ್ಳಲು ಹೋದ್ರೆ ಗುಡಿಸಲುಗಳಿಗೆ ಬೆಂಕಿ ಇಟ್ರು!

    ಅಲೆಮಾರಿಗಳು ನೆಲೆ ಕಂಡುಕೊಳ್ಳಲು ಹೋದ್ರೆ ಗುಡಿಸಲುಗಳಿಗೆ ಬೆಂಕಿ ಇಟ್ರು!

    -ಸೂರಿಲ್ಲದೆ ಬೀದಿಗೆ ಬಂದ್ವು ಐದು ಕುಟುಂಬಗಳು

    ತುಮಕೂರು: ನೆಲೆ ಕಂಡುಕೊಂಡಿದ್ದ ಅಲೆಮಾರಿ ಜನಾಂಗದ ಗುಡಿಸಿಲಿಗೆ ಕೆಲ ದುಷ್ಕರ್ಮಿಗಳು ಬೆಂಕಿಯಿಟ್ಟ ಅಮಾನವೀಯತೆ ಮೆರೆದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಐ.ಕೆ.ಕಾಲೊನಿ ಬಳಿ ನಡೆದಿದೆ.

    ಅರಸಮ್ಮ, ಶಶಿಕಲಾ, ಗಂಗಮ್ಮ, ಆಂಜಿನಮ್ಮ ಹಾಗೂ ಮಂಜಮ್ಮ ಎಂಬವರಿಗೆ ಸೇರಿದ ಗುಡಿಸಲು ಬೆಂಕಿಗಾಹುತಿಯಾಗಿವೆ. ಈ ಕುಟುಂಬಗಳು ಪಿಡಬ್ಲ್ಯೂಡಿಗೆ ಸೇರಿದ ಜಾಗದಲ್ಲಿ ಕಳೆದ 20 ವರ್ಷದಿಂದ ವಾಸವಾಗಿವೆ. ಈಗ ಸೂರಿಲ್ಲದೆ ಐದೂ ಕುಟುಂಬಗಳು ಬೀದಿಗೆ ಬಿದ್ದಿದ್ದು, ಮಕ್ಕಳ ಶಾಲಾ ಪುಸ್ತಕಗಳು, ಬಟ್ಟೆ, ಧವಸ ದಾನ್ಯ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ.

    ನಾವು ಕೂಲಿ ಕೆಲಸಕ್ಕೆ ಹೋದಾಗ ಶುಕ್ರವಾರ ಮಧ್ಯಾಹ್ನ, ಸಂಜೆ ಹಾಗೂ ಇಂದು ಬೆಳಗ್ಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಇಲ್ಲಿಂದ ನಮ್ಮನ್ನು ತೆರವುಗೊಳಿಸಲು ಹೀಗೆ ಮಾಡುತ್ತಿದ್ದಾರೆ. ಗ್ರಾಮಸ್ಥರೂ ನಮಗೆ ಇರಲು ಅವಕಾಶ ನೀಡುತ್ತಿಲ್ಲ. ಮುಂದೆ ನಾವು ಎಲ್ಲಿ ನೆಲೆ ಕಂಡುಕೊಳ್ಳವುದು ಅಂತಾ ಗೊತ್ತಾಗುತ್ತಿಲ್ಲ ಎಂದು ಸಂತ್ರಸ್ತ ರಾಮಕೃಷ್ಣ ಅಳಲು ತೋಡಿಕೊಂಡಿದ್ದಾರೆ.

    ಮನೆಯಲ್ಲಿ ಪುಟ್ಟ ಪುಟ್ಟ ಮಕ್ಕಳಿದ್ದಾರೆ. ಅಷ್ಟೇ ಅಲ್ಲದೆ ನಾನು ತುಂಬು ಗರ್ಭಿಣಿ, ಸೂರಿಲ್ಲದೆ ಬೀದಿಗೆ ಬಂದಿದ್ದೇವೆ. ಎಲ್ಲಿಗೆ ಹೋಗಬೇಕು?, ಏನು ಮಾಡಬೇಕು? ಅಂತಾ ಅರ್ಥವಾಗುತ್ತಿಲ್ಲ. ನಮ್ಮ ಆಧಾರ್ ಕಾರ್ಡ್, ಪಡಿತರ ಚೀತಿ, ಹಾಸಿಗೆ, ಧವಸ ಧಾನ್ಯಗಳು ಸುಟ್ಟು ಹೋಗಿವೆ ಎಂದು ಮಹಿಳೆ ಅಸಹಾಯಕತೆ ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv