Tag: huvinahadagali

  • ಆಕಸ್ಮಿಕ ಬೆಂಕಿಗೆ 30 ಹುಲ್ಲಿನ ಬಣವೆಗಳು ಸುಟ್ಟು ಭಸ್ಮ

    ಆಕಸ್ಮಿಕ ಬೆಂಕಿಗೆ 30 ಹುಲ್ಲಿನ ಬಣವೆಗಳು ಸುಟ್ಟು ಭಸ್ಮ

     ಬೇಸಿಗೆಯಲ್ಲಿ ಜಾನುವಾರುಗಳಿಗಾಗಿ ಮೇವು ಸಂಗ್ರಹಿಸಿಟ್ಟಿದ್ದ ರೈತರು

    ಬಳ್ಳಾರಿ: ಆಕಸ್ಮಿಕ ಬೆಂಕಿಗೆ (Fire) 30 ಹುಲ್ಲಿನ ಬಣವೆಗಳು (Haystacks) ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ (Huvinahadagali) ತಾಲೂಕಿನ ಸೋಗಿ ಗ್ರಾಮದಲ್ಲಿ ನಡೆದಿದೆ.

    ರೈತರು ತಮ್ಮ ಜಾನುವಾರುಗಳಿಗೆ ಬೇಸಿಗೆಗಾಗಿ ಸುಮಾರು 30 ಬಣವೆಗಳನ್ನ ಸಂಗ್ರಹಿಸಿಟ್ಟಿದ್ದರು. ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಷ್ಟೂ ಮೇವಿನ ಬಣವೆಗಳು ಸುಟ್ಟು ಹೋಗಿವೆ.

    ಬಣವೆ ಇರುವ ಭಾಗದಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ್ದ ರೈತರು (Farmers) ಸ್ಥಳಕ್ಕೆ ಹೋಗುವಷ್ಟರಲ್ಲಿ ಎಲ್ಲಾ ಬಣವೆಗಳಿಗೆ ಬೆಂಕಿ ತಗುಲಿತ್ತು. ಕೂಡಲೇ ರೈತರು ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬಣವೆಗಳು ಬೆಂಕಿಗಾಹುತಿಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಏಪ್ರಿಲ್ Vs ಡಿಸೆಂಬರ್ ವಾರ್!

    ರೈತರಾದ ರಫಿ, ನಾಗರಾಜ, ಆನಂದ, ಮಂಜವ್ವ, ಕೊಟ್ರೇಶ, ಖಾಜಾಸಾಬ್, ಜಿನ್ನಾಸಾಬ್, ಟಿ.ಬಸವರಾಜ, ನಾಗಪ್ಪ ತಳಕಲ್, ಕಾಗನೂರು ನಾಗರಾಜಪ್ಪ ಸೇರಿ ಒಟ್ಟು ಹತ್ತು ಜನ ರೈತರಿಗೆ ಸೇರಿದ್ದ ಲಕ್ಷಾಂತರ ಬೆಲೆ ಬಾಳುವ ಮೆಕ್ಕೆಜೋಳದ ಸಿಪ್ಪೆ ಹಾಗೂ ಭತ್ತದ ಹುಲ್ಲಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

    ಪ್ರತಿವರ್ಷ ಬೇಸಿಗೆಯ ಸಂದರ್ಭದಲ್ಲಿ ಯಾರೋ‌ ಕಿಡಿಗೇಡಿಗಳು ಮೇವಿನ ಬಣವೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಆಗಿತ್ತು ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇಟ್ಟಿಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

     

  • ಬಳ್ಳಾರಿಯಲ್ಲಿ ಭಾರೀ ಮಳೆ- ಕೆರೆಕಟ್ಟೆ ಒಡೆದು ನೂರಾರು ಎಕರೆ ಬೆಳೆನಾಶ

    ಬಳ್ಳಾರಿಯಲ್ಲಿ ಭಾರೀ ಮಳೆ- ಕೆರೆಕಟ್ಟೆ ಒಡೆದು ನೂರಾರು ಎಕರೆ ಬೆಳೆನಾಶ

    ಬಳ್ಳಾರಿ: ಭೀಕರ ಬರಗಾಲದಿಂದ ತತ್ತರಿಸಿದ್ದ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರಿ ಮಳೆ ಸುರಿದಿದೆ. ಅದರಲ್ಲೂ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾದ ಪರಿಣಾಮ ಸಾಕಷ್ಟು ಅನಾಹುತ ಸಹ ಸಂಭವಿಸಿದೆ.

    ಭಾನುವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ ಗ್ರಾಮದ ಸೋಮೇಶ್ವರ ಕೆರೆ ತುಂಬಿ ಕೋಡಿ ಬಿದ್ದಿದೆ. ಅಷ್ಟೆ ಅಲ್ಲ ನೀರಿನ ಪ್ರಮಾಣ ಹೆಚ್ಚಾದ ಹಿನ್ನಲೆಯಲ್ಲಿ ಕೆರೆಯ ಗೋಡೆ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿದೆ.

    ಕೆರೆ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ನೂರಾರು ಎಕರೆ ಬೆಳೆ ಬೆಳೆ ಹಾನಿಯಾಗಿದೆ. ಹೀಗಾಗಿ ರೈತರು ಮತ್ತೆ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

     

  • ಒಂದೇ ಕಾಮಗಾರಿಗೆ ಡಬಲ್ ಬಿಲ್ – ಹೂವಿನಹಡಗಲಿಯಲ್ಲಿ ಪರಮೇಶ್ವರ್ ನಾಯ್ಕ್ ದರ್ಬಾರ್

    ಒಂದೇ ಕಾಮಗಾರಿಗೆ ಡಬಲ್ ಬಿಲ್ – ಹೂವಿನಹಡಗಲಿಯಲ್ಲಿ ಪರಮೇಶ್ವರ್ ನಾಯ್ಕ್ ದರ್ಬಾರ್

    ಬಳ್ಳಾರಿ: ಅಲ್ಲಿರೋದು ಒಂದೆ ರೋಡ್, ಆದ್ರೆ ಆ ಒಂದು ರೋಡ್ ಕಾಮಗಾರಿಗೆ ಎರಡೆರಡು ಬಾರಿ ಬಿಲ್ ಪಾವತಿ ಆಗಿದೆ. ಇದು ಹೂವಿನಹಡಗಲಿಯ ಪುರಸಭೆಯಲ್ಲಿ ನಡೆದ ಅವ್ಯವಹಾರ.

    ಮಾಜಿ ಸಚಿವ ಪರಮೇಶ್ವರ ನಾಯ್ಕ್ ಅಧಿಕಾರವಧಿಯಲ್ಲಿ ಆದ ಅವ್ಯವಹಾರಗಳು ಇದೀಗ ಒಂದೊಂದೇ ಬಯಲಾಗುತ್ತಿವೆ. ಹೂವಿನಹಡಗಲಿಯಲ್ಲಿ ಒಂದೇ ರೋಡ್ ಕಾಮಗಾರಿಗೆ ಎರಡೆರಡು ಬಾರಿ ಬಿಲ್ ಪಾವತಿಯಾಗಿರೋದು ದಾಖಲೆಗಳ ಮೂಲಕ ಬೆಳಕಿಗೆ ಬಂದಿದೆ.

    ಪಿಟಿ ಪರಮೇಶ್ವರ ನಾಯ್ಕ್ ಸಚಿವರಾಗಿದ್ದ ವೇಳೆ ಅಧಿಕಾರ ದುರುಪಯೋಗಪಡಿಸಿಕೊಂಡು ಹೂವಿನಹಡಗಲಿಯ ರಾಜೀವನಗರದಿಂದ ನಜೀರ್ ನಗರದವರೆಗೆ ರಸ್ತೆ ಕಾಮಗಾರಿ ಮಾಡಲಾಗಿದೆ. ಈ ಕಾಮಗಾರಿಗೆ ಪುರಸಭೆಯಿಂದ ಮೆಟಲಿಂಗ್ ಮಾಡಲು 5.18 ಲಕ್ಷ ಹಾಗೂ ಸಿಸಿ ರಸ್ತೆ, ಚರಂಡಿಗಾಗಿ 8.17 ಲಕ್ಷ ಬೋಗಸ್ ಬಿಲ್ ಪಡೆಯಲಾಗಿದೆ. ಇದೇ ಕಾಮಗಾರಿಯನ್ನು ಎಚ್‍ಕೆಡಿಬಿ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯ್ತಿ ಮೂಲಕ ಮಾಡಲಾಗಿದೆ ಎಂದು ತೋರಿಸಿ ಬರೋಬ್ಬರಿ 53.49 ಲಕ್ಷ ರೂಪಾಯಿ ಹಣ ಕಿತ್ತಿದ್ದಾರೆ.

    ಇನ್ನೂ ವಿಚಿತ್ರ ಅಂದ್ರೆ ಈ ಕಾಮಗಾರಿ ನಡೆದಿರೋದು ಖಾಸಗಿ ಲೇಔಟ್‍ನಲ್ಲಿ ಅಂದ್ರೆ ನಂಬಲೇಬೇಕು. ಅಧಿಕಾರ ದುರುಪಯೋಗ ಮಾಡ್ಕೊಂಡ ಪರಮೇಶ್ವರ ನಾಯ್ಕ್ ಪುರಸಭೆ ಅಧಿಕಾರಿಗಳ ಜೊತೆಗೂಡಿ ಈ ಲೂಟಿ ನಡೆಸಿರೋದು ದಾಖಲೆಗಳ ಸಮೇತ ಬೆಳಕಿಗೆ ಬಂದಿದೆ.

    ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ತನಿಖೆ ನಡೆಸಿದ್ರೆ ಒಂದೇ ರೋಡ್‍ಗೆ ಎರಡು ಬಿಲ್ ಪಾವತಿ ಮಾಡಿ ಹಣ ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.