Tag: Hyderabad

  • ಸ್ನಾನಕ್ಕೆಂದು ಹೋಗಿದ್ದ ಯುವತಿಯ ಉಡುಪು ರಸ್ತೆಯಲ್ಲಿ ಪತ್ತೆ..!

    ಸ್ನಾನಕ್ಕೆಂದು ಹೋಗಿದ್ದ ಯುವತಿಯ ಉಡುಪು ರಸ್ತೆಯಲ್ಲಿ ಪತ್ತೆ..!

    – ಸ್ವಲ್ಪ ದೂರದಲ್ಲೇ ಯುವತಿ ಶವವಾಗಿ ಪತ್ತೆ
    – ಲೈಂಗಿಕ ಕಿರುಕುಳ ನೀಡಿ ಕೊಲೆಗೈದ್ರಾ..?

    ಹೈದರಾಬಾದ್: ಸ್ನಾನಕ್ಕೆಂದು ಹೋಗಿದ್ದ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ರಾಮಚಂದ್ರಪುರಂನ ಸೋಮಪೇಟಾ ಮಂಡಲ್ ನಲ್ಲಿ ನಡೆದಿದೆ.

    ಮೃತಳನ್ನು ಕನಕ ಲತಾ ಮಹಂತಿ ಅಲಿಯಾಸ್ ಲಿಲ್ಲಿ (22) ಎಂದು ಗುರುತಿಸಲಾಗಿದೆ. ಮೃತ ಯುವತಿ ಕುರಾ ಮಹಾಂತಿ ಮತ್ತು ರಾಧಾಮಣಿ ಮಹಾತಿಯ ಪುತ್ರಿಯಾಗಿದ್ದು, ಅವರ ಪೋಷಕರು ಅಡುಗೆ ಕೆಲಸ ಮಾಡುತ್ತಿದ್ದರು. ಮೃತ ಯುವತಿ ಸ್ಥಳೀಯ ಶಾಲೆಯೊಂದರಲ್ಲಿ ಸ್ವಯಂ ಸೇವಕಳಾಗಿ ಕಾರ್ಯನಿರ್ವಹಿಸುತ್ತಿದ್ದಳು. ಕನಕ ಲತಾ ತನ್ನ ತಾಯಿಯೊಂದಿಗೆ ದಿನನಿತ್ಯವೂ ಗ್ರಾಮದ ಹೊರಗೆ ಸ್ನಾನಕ್ಕಾಗಿ ಹೋಗುತ್ತಿದ್ದಳು. ಆದರೆ ಶನಿವಾರ ಒಬ್ಬಳೇ ಹೋಗಿದ್ದಳು.

    ರಸ್ತೆಯ ಮೇಲೆ ಯುವತಿಯ ಉಡುಪು ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಪರಿಶೀಲನೆ ಮಾಡಿದ್ದು, ಸ್ವಲ್ಪ ದೂರ ಹೋಗಿ ನೋಡಿದಾಗ ಕನಕ ಲತಾ ನೆಲದಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ತಕ್ಷಣ ಅವರು ಆಕೆಯ ಪೋಷಕರಿಗೆ ತಿಳಿಸಿದ್ದರು. ಕೂಡಲೇ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದು, ನಂತರ ಗ್ರಾಮಸ್ಥರು ಮತ್ತು ಆಕೆಯ ಪೋಷಕರು ಯುವತಿಯನ್ನು ಎಚ್ಚರಗೊಳಿಸಲು ಪ್ರಯತ್ನಗಳನ್ನು ಮಾಡಿದ್ದಾರೆ. ಆದರೆ ಕನಕ ಲತಾ ಅದಾಗಲೇ ಮೃತಪಟ್ಟಿದ್ದಳು.

    ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಚಾರ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೊಂಪೇಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪೊಲೀಸರು ಕೊಲೆಯ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ಯುವತಿಯ ಮುಖದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಸ್ಥಳೀಯರು ಮೃತ ಯುವತಿಗೆ ಲೈಂಗಿಕವಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಿದ್ದಾರೆ. ಆದರೆ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಬಗ್ಗೆ ಖಚಿತವಾಗಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾರ್ಕಿನಲ್ಲಿ ಸಿಕ್ಕಿಬಿದ್ದ ಜೋಡಿಗೆ ಮದ್ವೆ

    ಪಾರ್ಕಿನಲ್ಲಿ ಸಿಕ್ಕಿಬಿದ್ದ ಜೋಡಿಗೆ ಮದ್ವೆ

    ಹೈದರಾಬಾದ್: ಸ್ವಯಂ ಘೋಷಿತ ಬಜರಂಗದಳದ ಕಾರ್ಯಕರ್ತರು ಪ್ರೇಮಿಗಳ ದಿನದ ಪಾರ್ಕ್ ನಲ್ಲಿದ್ದ ಯುವಕ-ಯುವತಿಗೆ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಹೈದರಾಬಾದ್ ನಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರೇಮಿಗಳ ದಿನವನ್ನು ವಿರೋಧಿಸಿ ಅಂಗಡಿ, ಪಬ್ ಮತ್ತು ಕಚೇರಿಗಳನ್ನು ಮುಂಚಿತವಾಗಿ ಮುಚ್ಚಿಸಿ ರ‍್ಯಾಲಿ ಮತ್ತು ಪ್ರತಿಭಟನೆಗಳನ್ನು ಮಾಡುತ್ತಿದ್ದರು. ಈ ವೇಳೆ ಹೈದರಾಬಾದಿನ ಕೊಂಡಲಕೋಯ ಆಕ್ಸಿಜನ್ ಪಾರ್ಕ್ ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ನೋಡಿದ್ದಾರೆ.

    ಕಾರ್ಯಕರ್ತರು ಅವರು ಬಳಿ ಹೋಗಿ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದರೆ ಮದುವೆಯಾಗಿ ಎಂದು ಬಲವಂತದಿಂದ ಯುವಕನಿಂದ ಯುವತಿಗೆ ಅರಿಶಿಣದ ದಾರ ಕಟ್ಟಿಸುವ ಮೂಲಕ ಮದುವೆ ಮಾಡಿಸಿದ್ದಾರೆ. ಈ ಎಲ್ಲ ದೃಶ್ಯವನ್ನು ಕಾರ್ಯಕರ್ತರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಇದೀಗ ಆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

    ಹೈದರಾಬಾದ್ ನಲ್ಲಿ ವ್ಯಾಲೆಂಟೈನ್ಸ್ ಡೇ ಆಚರಿಸುವ ಜೋಡಿಯ ಮೇಲೆ ಕಣ್ಣಿಡಲು ರಾಜ್ಯದಾದ್ಯಂತ ಸುಮಾರು 30 ತಂಡಗಳನ್ನು ಕಳುಹಿಸುವ ಯೋಜನೆ ಇದೆ ಎಂದು ಮುಂಚಿತವಾಗಿವೇ ವಿಶ್ವ ಹಿಂದೂ ಪರಿಷತ್ ತಿಳಿಸಿತ್ತು. ಅಷ್ಟೇ ಅಲ್ಲದೇ ಪಾರ್ಕ್, ಶಾಪಿಂಗ್ ಮಳಿಗೆ ಹಾಗೂ ಮುಂತಾದ ಪ್ರತಿದಿನ ಓಡಾಡುವ ಸ್ಥಳಗಳನ್ನು ಹೊರತುಪಡಿಸಿ ಆಫೀಸ್ ಹೊರಗಡೆಯೂ ಪ್ರತಿಭಟನೆ ನಡೆಸುತ್ತೇವೆ ಎಂದು ಘೋಷಿಸಿತ್ತು.

    ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆದ್ಕಲ್ ಪೊಲೀಸರು ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ದಂಪತಿ ತಾವು ಸ್ವ ಇಚ್ಛೆಯಿಂದ ವಿವಾಹವಾಗಿದ್ದೇವೆ ಎಂದು ಹೇಳಿ ದೂರು ನೀಡಲಿಲ್ಲ. ಆದರೂ ನವದಂಪತಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಉಪ ಆಯುಕ್ತ ಪಿವಿ ಪದ್ಮಜಾ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಮದ್ವೆಯಾಗಲು ಈ ನಂಬರಿಗೆ ಕರೆ ಮಾಡಿ ಎಂದಿದ್ದ ನಟನಿಗೆ ಕೊನೆಗೂ ಮ್ಯಾರೇಜ್ ಫಿಕ್ಸ್

    ನನ್ನ ಮದ್ವೆಯಾಗಲು ಈ ನಂಬರಿಗೆ ಕರೆ ಮಾಡಿ ಎಂದಿದ್ದ ನಟನಿಗೆ ಕೊನೆಗೂ ಮ್ಯಾರೇಜ್ ಫಿಕ್ಸ್

    ಹೈದರಾಬಾದ್: ನನ್ನನ್ನು ಮದುವೆಯಾಗಲು ಯಾವುದೇ ಷರತ್ತುಗಳಿಲ್ಲ, ಈ ನಂಬರಿಗೆ ಕರೆ ಮಾಡಿ ಎಂದು ವಿಡಿಯೋ ಕಾಲ್ ಮೂಲಕ ಹೇಳಿಕೊಂಡಿದ್ದ ತಮಿಳು ನಟ ಆರ್ಯನಿಗೆ ಕೊನೆಗೂ ಮದುವೆ ಫಿಕ್ಸ್ ಆಗಿದೆ.

    ಹೌದು. ಪ್ರೇಮಿಗಳ ದಿನದಂದೇ ನಟ ತಮ್ಮ ಮದುವೆ ಹಾಗೂ ತಾನೂ ವಿವಾಹವಾಗುತ್ತಿರುವ ಹುಡುಗಿಯ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ತಾವು ಮದುವೆಯಾಗುತ್ತಿರುವ ಹುಡುಗಿ ಜೊತೆಗಿನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಷರತ್ತಿಲ್ಲ, ನನ್ನನ್ನು ಮದ್ವೆಯಾಗಲು ಈ ನಂಬರಿಗೆ ಕರೆ ಮಾಡಿ: ನಟ ಆರ್ಯ

    ಟ್ವೀಟ್ ನಲ್ಲೇನಿದೆ..?
    ನಟ ಆರ್ಯ ಅವರು ಸಯ್ಯೇಷಾ ಸೈಗಲ್ ಜೊತೆ ಮಾರ್ಚ್ ತಿಂಗಳಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿರುವ ಕುರಿತು ಟ್ವಿಟ್ ಮಾಡುವ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. “ಹ್ಯಾಪಿ ವ್ಯಾಲೆಂಟೈನ್ಸ್ ಡೇ ಮತ್ತು ಆಶೀರ್ವಾದಿಸಿ” ಎಂದು ಬರೆದು ತಾವು ಮದುವೆಯಾಗುತ್ತಿರುವ ಹುಡುಗಿ ಜೊತೆಗಿರುವ ಫೋಟೋ ಹಾಕಿದ್ದಾರೆ.

    “ನಮ್ಮ ಪೋಷಕರು ಮತ್ತು ಕುಟುಂಬದ ಆಶೀರ್ವಾದದಿಂದ, ನಿಮ್ಮೊಂದಿಗೆ ನಮ್ಮ ಬಾಳಿನ ಅತ್ಯಂತ ಸುಂದರವಾದ ದಿನವನ್ನು ಹಂಚಿಕೊಳ್ಳಲು ನಾವು ಬಯಸುತ್ತೇವೆ. ನಾವು ಮುಂದಿನ ತಿಂಗಳು ಮಾರ್ಚ್ ನಲ್ಲಿ ಮದುವೆಯಾಗುತ್ತಿದ್ದೇವೆ. ನಮ್ಮ ಹೊಸ ಜೀವನ ಪ್ರಯಾಣಕ್ಕೆ ನಿಮ್ಮ ಪ್ರೀತಿಯ ಆಶೀರ್ವಾದ ಬೇಕೆಂದು” ದಂಪತಿ ಮನವಿ ಮಾಡಿಕೊಂಡಿದ್ದಾರೆ.

    ಆರ್ಯ ಮತ್ತು ಸಯ್ಯೇಷಾ ಮದುವೆಯಾಗುತ್ತಿರುವ ಬಗ್ಗೆ ತಿಳಿಸಿದ್ದು, ಆದರೆ ತಮ್ಮ ಮದುವೆಯ ದಿನಾಂಕವನ್ನು ಮಾತ್ರ ಬಹಿರಂಗಪಡಿಸಲಿಲ್ಲ. ಕಳೆದ ತಿಂಗಳಿನಿಂದ ಆರ್ಯ ಮತ್ತು ಸಯ್ಯೇಷಾ ಮದುವೆಯಾಗುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಈಗ ಸ್ವತಃ ಆರ್ಯ ಅವರೇ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಮಾರ್ಚ್ 9 ರಂದು ಆರ್ಯ ಹಾಗೂ ಸಯ್ಯೇಷಾ ಮದುವೆ ಮುಸ್ಲಿಂ ಸಂಪ್ರದಾಯದಂತೆ ನಡೆಯಲಿದೆ ಎಂದು ತಿಳಿದುಬಂದಿದೆ.

    ಸಯ್ಯೇಷಾ ಸೈಗಲ್ ಯಾರು?
    ಸಯ್ಯೇಷಾ ಅವರು ನಟ-ನಿರ್ಮಾಪಕ ಸುಮೇತ್ ಸೈಗಲ್ ಮತ್ತು ನಟಿ ಶಹೀನ್ ಬಾನು ಅವರ ಮಗಳಾಗಿದ್ದು, ಶಹೀನ್ ಅವರು ‘ಮಹಾ-ಸಂಗ್ರಮ್’ ಮತ್ತು’ ಆಯಿ ಮಿಲಾನ್ ಕಿ ರಾತ್’ ನಂತಹ ಸಿನಿಮಾಗಲ್ಲಿ ಹೆಸರುವಾಸಿಯಾಗಿದ್ದಾರೆ. 2018 ರ ‘ಘಜಿನಿಕಾಂತ್’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಯ್ಯೇಷಾ ಅವರು ನಟ ಆರ್ಯರನ್ನು ಭೇಟಿಯಾಗಿದ್ದರು.

    ಸದ್ಯಕ್ಕೆ ಈ ಜೋಡಿಯು ಮೋಹನ್ ಲಾಲ್ ಮತ್ತು ಸೂರ್ಯ ಅಭಿನಯಿಸಿರುವ ‘ಕಾಪ್ಪಾನ್’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಕಾಪ್ಪಾನ್’ ಅಕ್ಟೋಬರ್ 2019 ರಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 86ರ ತಾಯಿ ಮೇಲೆ ಕಾಮುಕ ಮಗನಿಂದ ಲೈಂಗಿಕ ದೌರ್ಜನ್ಯ!

    86ರ ತಾಯಿ ಮೇಲೆ ಕಾಮುಕ ಮಗನಿಂದ ಲೈಂಗಿಕ ದೌರ್ಜನ್ಯ!

    ಹೈದರಾಬಾದ್: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ 86 ವರ್ಷದ ವೃದ್ಧ ತಾಯಿ ಮೇಲೆ ಕುಡಿದ ಅಮಲಿನಲ್ಲಿದ್ದ ಮಗನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಕೃತ್ಯ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವುಯ್ಯುರು ಗ್ರಾಮದಲ್ಲಿ ನಡೆದಿದೆ.

    ಶನಿವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಗ ಶನಿವಾರ ರಾತ್ರಿ ಮನೆಗೆ ಕುಡಿದು ಬಂದಿದ್ದನು. ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ತಾಯಿಗೆ ಕುಡಿದ ನಶೆಯಲ್ಲಿದ್ದ ಪಾಪಿ ಮಗ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆಯಿಂದ ಮನನೊಂದಿದ್ದ ತಾಯಿ ನೆರೆಹೊರೆಯವರ ಬಳಿ ಈ ಬಗ್ಗೆ ಹೇಳಿಕೊಂಡಿದ್ದರು. ನಂತರ ಅಕ್ಕಪಕ್ಕದ ಮನೆಯವರೇ ಮುಂದೆ ನಿಂತು ಪೊಲೀಸ್ ಠಾಣೆಗೆ ಆರೋಪಿ ಮೇಲೆ ದೂರು ನೀಡಿದ್ದಾರೆ.

    ವೃದ್ಧೆಯ ಮೂರು ಮಕ್ಕಳ ಪೈಕಿ ಕಿರಿಯ ಮಗ ಈ ಅಟ್ಟಹಾಸ ಮೆರೆದಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆರೋಪಿ ಈ ದುಷ್ಕೃತ್ಯವೆಸೆಗಿದ್ದಾನೆ. ಅಲ್ಲದೆ ತನ್ನ ಕುರಿತು ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

    ವೈದ್ಯರು ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಖಚಿತ ಪಡಿಸಿದ್ದು, ಸಂತ್ರಸ್ತೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುತ್ತೇವೆ ಎಂದು ವುಯ್ಯುರು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌  ಪಿ.ಕಾಶಿ ವಿಶ್ವನಾಥ್ ಅವರು ತಿಳಿಸಿದ್ದಾರೆ.

    ಈ ಹಿಂದೆ ಕೂಡ ಇಂತಹದ್ದೆ ಘಟನೆಯೊಂದು ವುಯ್ಯುರು ಗ್ರಾಮದಲ್ಲಿ ನಡೆದಿತ್ತು. ಕಳೆದ ವರ್ಷ 20 ವರ್ಷದ ಯುವಕನೊಬ್ಬ 68 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

    ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

    ಹೈದರಾಬಾದ್: ಕುಟುಂಬದ ಲಾಭಕ್ಕಾಗಿ ಬಡವರನ್ನು ಲೂಟಿ ಮಾಡಿದವರು ಈಗ ದೇಶವನ್ನು ಕೊಳ್ಳೆ ಹೊಡೆಯಲು ಮಹಾಘಟಬಂಧನ್ ಮಾಡಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟಿಸುವ ನಿಟ್ಟಿನಲ್ಲಿ ಮಾತನಾಡಿದ ಅವರು, ಬಡವರ ಅಭಿವೃದ್ಧಿಗೆ ಮೋದಿ ಸರ್ಕಾರ ಮಾಡಿರುವ ಕೆಲಸವನ್ನು ವಿರೋಧ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣಕ್ಕಾಗಿ ವಿರೋಧಿಗಳೆಲ್ಲ ಒಂದಾಗಿದ್ದಾರೆಂದು ಅವರು ದೂರಿದರು.

    ಯಾರು ಭ್ರಷ್ಟಾಚಾರ ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೋ ಅವರು ಪ್ರಧಾನ ಸೇವಕರಾದ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿದ್ದಾರೆ. ಇಲ್ಲಿಯವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ಸಿನ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದರು.

    ಗಾಂಧಿ ಕುಟುಂಬದ ಅಳಿಯ ರಾಬರ್ಟ್ ವಾದ್ರಾ ಅವರ ಅಕ್ರಮ ಆಸ್ಥಿಗಳಿಕೆ ವಿಚಾರವಾಗಿ ಪ್ರತಿಕಿಯಿಸಿ, ಶ್ರೀಮಂತರ ಮಧ್ಯೆ ವಾಸಿಸುತ್ತ ವರ್ಷಗಳಿಂದ ಬಡವರನ್ನು ಕೊಳ್ಳೆಹೊಡೆಯುತ್ತ ಬಂದಿದ್ದಾರೆ. ಅವರ ಕುಟುಂಬದ ಅಳಿಯ ಲಂಡನ್‍ನಲ್ಲಿ ಸಾಕಷ್ಟು ಆಸ್ತಿ ಖರೀದಿಸಿದ್ದಾರೆ. ಹೀಗಿರುವಾಗ ಇಂತವರು ಪ್ರಧಾನಮಂತ್ರಿಗಳ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ವೆ ಆಗಲು ನಿರಾಕರಿಸಿದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನ

    ಮದ್ವೆ ಆಗಲು ನಿರಾಕರಿಸಿದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನ

    ಹೈದರಾಬಾದ್: ಮದುವೆಯಾಗಲು ನಿರಾಕರಿಸಿದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತೆಲಂಗಾಣದ ಮುಕ್ತರೋಪೇಟಾದಲ್ಲಿ ನಡೆದಿದೆ.

    ಅನುಷಾ ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಅನುಷಾ ಜಗ್ತಯಲ್ಲಿನ ಜ್ಯೋತ್ಸ್ನಾ ಆಸ್ಪತ್ರೆಯಲ್ಲಿ ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದಳು. ಈ ವೇಳೆ ಅವಳಿಗೆ ಕಿರಣ್‍ನ ಪರಿಚಯ ಆಗಿದೆ. ಪರಿಚಯ ಪ್ರೀತಿಗೆ ತಿರುಗಿ ಇಬ್ಬರು ಒಬ್ಬರನೊಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ. ಇದರ ನಡುವೆ ಅನುಷಾ ಜ್ಯೋತ್ಸ್ನಾ ಆಸ್ಪತ್ರೆಯಲ್ಲಿ ಕೆಲಸ ಬಿಟ್ಟು ಕರೀಂನಗರದಲ್ಲಿರುವ ಅಪೆಕ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಶುರು ಮಾಡಿದ್ದರು. ಕರೀಂನಗರಕ್ಕೆ ಬಂದ ನಂತರವೂ ಅನುಷಾ, ಕಿರಣ್‍ನನ್ನು ಮೂರು ವರ್ಷ ಪ್ರೀತಿಸಿದ್ದಳು.

    ಅನುಷಾ, ಕಿರಣ್ ಜೊತೆ ಕಾಲ ಕಳೆಯುತ್ತಿದ್ದಾಗ ಮದುವೆ ಬಗ್ಗೆ ಮಾತನಾಡಿದ್ದಾಳೆ. ಅದಕ್ಕೆ ಕಿರಣ್ ನಮ್ಮಿಬ್ಬರ ಜಾತಿ ಬೇರೆ ನಾನು ನಿನ್ನನ್ನು ಮದುವೆ ಆಗಲ್ಲ ಎಂದು ಆಕೆಯನ್ನು ನಿರಾಕರಿಸಿದ್ದಾನೆ. ಕಿರಣ್ ತನ್ನನ್ನು ನಿರಾಕರಿಸಿದಕ್ಕೆ ಅನುಷಾ ಮಾನಸಿಕವಾಗಿ ನೊಂದಿದ್ದಳು. ಬಳಿಕ ಅನುಷಾ ಭಾನುವಾರ ರಾತ್ರಿ ಮುಕ್ತರೋಪೇಟಾಕ್ಕೆ ಬಂದು ಡೆತ್‍ನೋಟ್ ಬರೆದು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅನುಷಾ ಪೋಷಕರು ಆಕೆಯನ್ನು ಅಪೆಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

    ಡೆತ್‍ನೋಟ್‍ನಲ್ಲಿ ಏನಿದೆ?
    ಅನುಷಾ ತನ್ನ ಡೆತ್‍ನೋಟ್‍ನಲ್ಲಿ ಪೋಷಕರ ಬಳಿ ಕ್ಷಮೆ ಕೇಳಿದ್ದಾಳೆ. ಅಲ್ಲದೇ ತನ್ನ ಅಕ್ಕ-ಬಾವನಿಗೆ ತಂದೆ ತಾಯಿಯನ್ನು ನೋಡಿಕೊಳ್ಳಲು ಒತ್ತಾಯಿಸಿದ್ದಾಳೆ. ನನ್ನ ಸಾವಿಗೆ ಕಿರಣ್ ಕುಟುಂಬದವರೇ ಕಾರಣ. ಕಿರಣ್ ನನ್ನನ್ನು ಮದುವೆ ಆಗಲು ನಿರಾಕರಿಸಿದ್ದಾನೆ. ಆತನ ಕುಟುಂಬದವರು ನನ್ನ ಕುಟುಂಬದವರಿಗೆ ಕಿರುಕುಳ ನೀಡುವುದಾಗಿ ಬೆದರಿಸಿದ್ದಾರೆ. ಕಿರಣ್ ಕಿರುಕುಳ ಸಹಿಸಲಾಗದೇ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬರೆದಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಂಟಿ ಜೊತೆಗಿನ ಸಂಬಂಧದಿಂದ ಪೀಸ್ ಪೀಸ್ ಆದ್ನಾ 19ರ ತರುಣ..?

    ಆಂಟಿ ಜೊತೆಗಿನ ಸಂಬಂಧದಿಂದ ಪೀಸ್ ಪೀಸ್ ಆದ್ನಾ 19ರ ತರುಣ..?

    ಹೈದರಾಬಾದ್: 19 ವರ್ಷದ ಯುವಕನ ದೇಹವನ್ನು ಪೀಸ್ ಪೀಸ್ ಮಾಡಿ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪುತ್ತೂರು ಮಂಡಲ್ ನ ಡಿಜಿವಾಪುಡಿ ಗ್ರಾಮದಲ್ಲಿ ನಡೆದಿದೆ.

    ವಂಶಿ (19) ಮೃತ ದುರ್ದೈವಿ. ಗೋವಿಂದರಾಜುಲು ಮತ್ತು ಮುನಿಚಂದ್ರಮ್ಮ ಅವರ ಎರಡನೇ ಮಗ ವಂಶಿ ಜೆಸಿಬಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. ಗುರುವಾರ ಬೆಳಗ್ಗೆ ವಂಶಿ ಮರಕ್ಕಾಗಿ ಅರಣ್ಯದೊಳಗೆ ಹೋಗಿದ್ದಾನೆ. ಆದರೆ ಸಂಜೆಯಾದರೂ ಮನಗೆ ಹಿಂದಿರುಗಲಿಲ್ಲ. ಬಳಿಕ ಕುಟುಂಬದವರು ಎಲ್ಲಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ವಂಶಿ ಪತ್ತೆಯಾಗಿಲ್ಲ.

    ಎರಡು ದಿನದ ನಂತರ ಕಾಡಿನಿಂದ ಕೆಟ್ಟವಾಸನೆ ಬಂದಿದೆ. ಹೀಗಾಗಿ ಸ್ಥಳೀಯರು ಪರಿಶೀಲನೆ ನಡೆಸಿದಾಗ ಕತ್ತರಿಸಿದ ಸ್ಥಿತಿಯಲ್ಲಿ ದೇಹದ ಭಾಗಗಳು ಕಂಡು ಬಂದಿದೆ. ಅಲ್ಲೇ ಪಕ್ಕದಲ್ಲಿ ಸೆಲ್ ಫೋನ್ ಮತ್ತು ಕೈಗೆ ಕಟ್ಟಿದ ದಾರದಿಂದ ಪೀಸ್ ಪೀಸ್ ದೇಹ ವಂಶಿಯದ್ದು ಎಂದು ಗುರುತಿಸಲಾಗಿದೆ. ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಪುತ್ತೂರು ಡಿಎಸ್‍ಪಿ ಸೌಮ್ಯಲತಾ, ಸಿಐ ದಾವಪ್ರಸಾದ್, ನಾರಾಯಣನಂ ಸಿಐ ದಸ್ತಿಗಿರಿ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಸತತ 5 ಗಂಟೆಯ ಕಾಲ ಶೋಧ ಕಾರ್ಯ ನಡೆಸಿದ ಬಳಿಕ ಸುಮಾರು 40 ಮೀಟರ್ ದೂರದಲ್ಲಿ ದೇಹದಿಂದ ಬೇರ್ಪಟ್ಟಿದ್ದ ತಲೆ ಕಂಡುಬಂದಿದೆ. ಎರಡು ದಿನಗಳ ಹಿಂದೆ ವಂಶಿಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಂತರ ಗ್ರಾಮಸ್ಥರ ಸಹಾಯದಿಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀಕಾಲಹಸ್ತಿ ಆಸ್ಪತ್ರೆಗೆ ರವಾನಿಸಿದ್ದಾರೆ.

    ಮೃತ ವಂಶಿ ತಾಯಿ ಸಲ್ಲಿಸಿದ ದೂರನ್ನು ಆಧರಿಸಿ ಈ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ವಂಶಿ ಅದೇ ಗ್ರಾಮದ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಈ ಕಾರಣದಿಂದಾಗಿ ಅವನನ್ನು ಕ್ರೂರವಾಗಿ ಕೊಲೆ ಮಾಡಲಾಗಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೇಸ್‍ಬುಕ್ ಮೂಲಕ ಪತಿಯ ರಹಸ್ಯ ಬಯಲು

    ಫೇಸ್‍ಬುಕ್ ಮೂಲಕ ಪತಿಯ ರಹಸ್ಯ ಬಯಲು

    -ವಿಷಯ ತಿಳಿಯುತ್ತಿದ್ದಂತೆ ಅಮೆರಿಕಾದಿಂದ ಬಂದ ಪತ್ನಿ

    ಹೈದರಾಬಾದ್: ಮೊದಲ ಪತ್ನಿ ಇರುವಾಗಲೇ ವ್ಯಕ್ತಿಯೊಬ್ಬ ಎರಡನೇ ಮದುವೆಯಾಗಲು ಮುಂದಾಗಿದ್ದು, ಫೇಸ್‍ಬುಕ್ ಮೂಲಕ ಸಿಕ್ಕಿಬಿದ್ದಿರುವ ಘಟನೆ ನಗೋನ್ ನಲ್ಲಿ ನಡೆದಿದೆ.

    ಕಿಶೋರ್ ರೆಡ್ಡಿ (30) ಎರಡನೇ ಮದುವೆಯಾಗಲೂ ಹೋಗಿ ಸಿಕ್ಕಿಬಿದ್ದ ಪತಿರಾಯ. ಈತ ಶಬಾದ್ ಮಂಡಲ್ ನ ಆಸ್ಪಲ್ಲಿಗುಡದ ನಿವಾಸಿಯಾಗಿದ್ದು, 2015 ರಲ್ಲಿ ಆರ್ಯ ಸಮಾಜದಲ್ಲಿ ವಿವಾಹವಾಗಿದ್ದನು.

    ಮದುವೆಯಾದ ಕೆಲವು ತಿಂಗಳ ನಂತರ ರೆಡ್ಡಿ ಪತ್ನಿ ಕೆಲಸಕ್ಕಾಗಿ ಅಮೆರಿಕಾಗೆ ಹೋಗಿದ್ದರು. ಬಳಿಕ ಪತ್ನಿ ತನ್ನ ಪತಿಯನ್ನು ಯುಎಸ್‍ಗೆ ಕರೆಸಿಕೊಳ್ಳಬೇಕು ಎಂದು ಪ್ರಯತ್ನಿಸಿದ್ದರು. ಆದರೆ ರೆಡ್ಡಿಯ ವೀಸಾ ನಿರಾಕರಣೆಯಾಗಿತ್ತು. ಬಳಿಕ ಪತ್ನಿ ಯುಎಸ್‍ಎ ಯಲ್ಲಿ ಕೆಲಸ ಮಾಡಿಕೊಂಡು ಪತಿಗೆ ಹಣವನ್ನು ಕಳುಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತ ಪತ್ನಿ ಕಳುಹಿಸಿದ ಹಣದಲ್ಲಿ ಆರೋಪಿ ರೆಡ್ಡಿ ನ್ಯಾಗೋಲ್ ನಲ್ಲಿ ಫ್ಲಾಟ್ ಖರೀದಿಸಿದ್ದನು. ಅಷ್ಟೇ ಅಲ್ಲದೇ ಕಿಶೋರ್ ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧವನ್ನು ಇಟ್ಟುಕೊಂಡಿದ್ದನು. ದಿನ ಕಳೆದಂತೆ ಮೊದಲ ಹೆಂಡತಿಗೆ ತಿಳಿಯದಂತೆ ಮದುವೆಯಾಗಲು ಯತ್ನಿಸಿದ್ದು, ಆಕೆಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದನು. ಆದರೆ ಆರೋಪಿ ನಿಶ್ಚಿತಾರ್ಥದ ಫೋಟೋಗಳನ್ನು ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ.

    ಫೇಸ್‍ಬುಕ್ ನಲ್ಲಿ ಪತಿಯ ಎರಡನೇ ಹೆಂಡತಿ ಫೋಟೋಗಳು ಮೊದಲ ಪತ್ನಿ ಗಮನಕ್ಕೆ ಬಂದಿದ್ದು. ತಕ್ಷಣವೇ ಆಕೆ ಭಾರತಕ್ಕೆ ಬಂದು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಸದ್ಯಕ್ಕೆ ಇನ್ನೊಬ್ಬ ಮಹಿಳೆ ಮದುವೆಯಾಗಲು ಯತ್ನಿಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಇಕ್ಕಳ ಬಿಟ್ಟ ವೈದ್ಯರು

    ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಇಕ್ಕಳ ಬಿಟ್ಟ ವೈದ್ಯರು

    – ಮೂರು ತಿಂಗಳ ಬಳಿಕ ಬೆಳಕಿಗೆ ಬಂತು ವೈದ್ಯರ ನಿರ್ಲಕ್ಷ್ಯ

    ಹೈದರಾಬಾದ್: ಶಸ್ತ್ರಚಿಕಿತ್ಸೆ ವೇಳೆ ಮಹಿಳಾ ರೋಗಿಯ ದೇಹದಲ್ಲಿ ಇಕ್ಕಳ (ಶಸ್ತ್ರಚಿಕಿತ್ಸೆ ವಸ್ತು) ಮರೆತ ಘಟನೆ ಹೈದ್ರಾಬಾದ್‍ನ ನಿಜಾಮ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ನಿಮ್ಸ್)ನಲ್ಲಿ ನಡೆದಿದೆ.

    ವೈದ್ಯರ ಈ ನಿರ್ಲಕ್ಷ್ಯದಿಂದಾಗಿ ಮಹಿಳೆ ಮೂರು ತಿಂಗಳ ಕಾಲ ಭಾರೀ ನೋವು ಅನುಭವಿಸಿದ್ದಾರೆ. ಮಹಿಳೆಯ ಹೊಟ್ಟೆಯಲ್ಲಿ ಇಕ್ಕಳ ಪತ್ತೆಯಾಗುತ್ತಿದ್ದಂತೆ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೈದರಾಬಾದ್‍ನ ಮಂಗಲ್ಹಾಟ್ ಪ್ರದೇಶದ ಮಹೇಶ್ವರಿ ಚೌದರಿ (33) ಅವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ನಿಮ್ಸ್ ನಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದರು. ಬಳಿಕ ಮನೆಗೆ ವಾಪಾಸ್ ಆಗಿದ್ದ ಮಹೇಶ್ವರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಎಕ್ಸ್ ರೇ ತೆಗೆಸಿದಾಗ ವೈದ್ಯರ ಎಡವಟ್ಟು ಬೆಳಕಿಗೆ ಬಂದಿದೆ.

    ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿ ಮಹೇಶ್ವರಿ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಧರಣಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ಶಸ್ತ್ರಚಿಕಿತ್ಸೆ ಬಳಿಕವೂ ಮಹೇಶ್ವರಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರ ಸಲಹೆಯಂತೆ ಸಾಕಷ್ಟು ಮಾತ್ರೆ, ಔಷಧಿ ಸೇವಿಸಿದರೂ ಗುಣಮುಖಳಾಗಲಿಲ್ಲ. ಹೊಟ್ಟೆಯಲ್ಲಿ ಇಕ್ಕಳ ಬಿಟ್ಟಿದ್ದೇ ಇಷ್ಟು ಸಮಸ್ಯೆಗೆ ಕಾರಣವಾಗಿದೆ ಎಂದು ಮಹೇಶ್ವರಿ ಹತ್ತಿರ ಸಂಬಂಧಿ ದೂರಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿಮ್ಸ್ ವೈದ್ಯ ಕೆ.ಮನೋಹರ್, ಹೊಟ್ಟೆ ನೋವಿನಿಂದಾಗಿ ಮಹೇಶ್ವರಿ ಅವರು ಅಕ್ಟೋಬರ್ 28ರಂದು ಆಸ್ಪತ್ರೆ ದಾಖಲಾಗಿದ್ದರು. ಅವರಿಗೆ ನವೆಂಬರ್ ಮೊದಲವಾರ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಚೇತರಿಸಿಕೊಂಡ ಬಳಿಕ ಅವರನ್ನು ನವೆಂಬರ್ 12ರಂದು ಮನೆಗೆ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ.

    ವೈದ್ಯರಾದ ಬೀರಪ್ಪ, ವೇಣು ಹಾಗೂ ವರ್ಮಾ ಅವರು ಮಹೇಶ್ವರಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಸಮಿತಿ ರಚನೆ ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮನೋಹರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೀತಿಸಿ ಮದ್ವೆಯಾಗಿ ಒಂದೇ ವರ್ಷದಲ್ಲಿ ಹೆಣವಾದ್ಳು.!

    ಪ್ರೀತಿಸಿ ಮದ್ವೆಯಾಗಿ ಒಂದೇ ವರ್ಷದಲ್ಲಿ ಹೆಣವಾದ್ಳು.!

    ಹೈದರಾಬಾದ್: ವರದಕ್ಷಿಣೆ ಕಿರುಕುಳದಿಂದ 23 ವರ್ಷದ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಗುಂಟೂರು ಗ್ರಾಮದಲ್ಲಿ ನಡೆದಿದೆ.

    ಪ್ರಿಯಾಂಕ ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಪ್ರಿಯಾಂಕ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ತಾಯಿ ನೋಡಿದ್ದು, ತಕ್ಷಣ ಕುಟುಂಬದವರು ಚಿಲಕಲುರಿಪೇಟ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಿಯಾಂಕ ಮೃತಪಟ್ಟಿದ್ದಾರೆ.

    ಮೃತ ಪ್ರಿಯಾಂಕ ಕಳೆದ ವರ್ಷ ಮಾರ್ತೂರ್ ನಿವಾಸಿ ನವೀನ್ ಜೊತೆ ವಿವಾಹವಾಗಿದ್ದರು. ಪ್ರಿಯಾಂಕ ಮತ್ತು ನವೀನ್ ಪ್ರೀತಿಸಿದ್ದು, ಪ್ರಿಯಾಂಕ ಕುಟುಂಬದವರು ಮೊದಲಿಗೆ ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಪೋಷಕರು ಮಗಳಿಗಾಗಿ ಒಪ್ಪಿ ಇಬ್ಬರಿಗೂ ಮದುವೆ ಮಾಡಿಸಿದ್ದರು. ಆದರೆ ಮದುವೆಯಾದ ಒಂದು ವರ್ಷದಲ್ಲಿ ಪ್ರಿಯಾಂಕ ಮೃತಪಟ್ಟಿದ್ದಾಳೆ. ಪ್ರಿಯಾಂಕ ಕುಟುಂಬದ ಸದಸ್ಯರು ಆಕೆಯ ಪತಿ ಮನೆಯವರೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನವೀನ್ ಗ್ರಾನೈಟ್ ವ್ಯವಹಾರ ಮಾಡಿಕೊಂಡು ಮಾರ್ತುರ್ ನಲ್ಲಿ ನೆಲೆಸಿದ್ದನು. ಮದುವೆಯಾದ ನಂತರ ಪ್ರಿಯಾಂಕಳಿಗೆ ಅವಳ ಅತ್ತೆ-ಮಾವ ವರದಕ್ಷಿಣೆ ತರಲು ಒತ್ತಾಯಿಸುತ್ತಿದ್ದರು. ಇದರಿಂದ ನವೀನ್ ಮತ್ತು ಪ್ರಿಯಾಂಕ ನಡುವೆ ಭಿನ್ನಾಭಿಪ್ರಾಯವಿತ್ತು. ಅಷ್ಟೇ ಅಲ್ಲದೇ ವರದಕ್ಷಿಣೆ ವಿಷಯದಲ್ಲಿ ನವೀನ್ ಪ್ರತಿದಿನ ಕಿರುಕುಳ ನೀಡುತ್ತಿದ್ದನು ಎಂದು ಪ್ರಿಯಾಂಕ ತಾಯಿ ರೋಜರಮಣಿ ಹೇಳಿದ್ದಾರೆ.

    ತಾಯಿ ತಮ್ಮ ಮನೆಯ ಕಾರ್ಯಕ್ರಮಕ್ಕೆ ಕರೆಯಲೆಂದು ಮಗಳಿಗೆ ಕರೆ ಮಾಡಿದ್ದಾರೆ. ಆದರೆ ಪ್ರಿಯಾಂಕ ಫೋನ್ ರಿಸೀವ್ ಮಾಡಲಿಲ್ಲ. ಈ ವೇಳೆ ಅನುಮಾನಗೊಂಡ ತಾಯಿ ಅವರ ಮನೆಗೆ ಹೋಗಿದ್ದಾರೆ. ಆಗ ಮಗಳು ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅವರ ಅತ್ತೆ-ಮಾವನೇ ನಮ್ಮ ಮಗಳನ್ನು ಕೊಂದಿದ್ದಾರೆ. ನಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಪ್ರಿಯಾಂಕ ಪೋಷಕರು ಮನವಿ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv