Tag: Hyderabad

  • ಮಸೀದಿಯಲ್ಲಿ ಎಲ್ಲ ಧರ್ಮದವರಿಗೂ ಚಿಕಿತ್ಸೆ!

    ಮಸೀದಿಯಲ್ಲಿ ಎಲ್ಲ ಧರ್ಮದವರಿಗೂ ಚಿಕಿತ್ಸೆ!

    ಹೈದರಾಬಾದ್: ಇದೇ ಮೊದಲ ಬಾರಿಗೆ ಹೈದರಾಬಾದ್‍ನ ಮಸೀದಿಯೊಂದು ಆರೋಗ್ಯ ಕೇಂದ್ರವಾಗಿ ಮಾರ್ಪಟ್ಟಿದ್ದು, ಎಲ್ಲ ಧರ್ಮದ ಜನರಿಗೂ ಚಿಕಿತ್ಸೆ ನೀಡುವ ಮೂಲಕ ಭಾರೀ ಮೆಚ್ಚುಗೆ ಗಿಟ್ಟಿಸಿಕೊಂಡಿದೆ.

    ಹೈದರಾಬಾದ್‍ನ ಮಸೀದ್-ಇ-ಇಷ್ಕ್ ಪ್ರಾರ್ಥನಾ ಮಂದಿರದಲ್ಲಿ ಇಂತಹ ಸೌಲಭ್ಯ ಸಿಗುತ್ತಿದ್ದು, ಒಂದು ದಿನಕ್ಕೆ ಸುಮಾರು 40 ರಿಂದ 50 ಜನರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಈ ಸೇವೆಯನ್ನು ಹೆಲಿಂಗ್ ಹ್ಯಾಂಡ್ ಫೌಂಡೇಶನ್ (ಎಚ್‍ಎಚ್‍ಎಫ್) ಹೆಸರಿನ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಒದಗಿಸುತ್ತಿದ್ದು, ಇದಕ್ಕೆ ಮಸೀದಿಯ ಆಡಳಿತ ಮಂಡಳಿ ಸಾಥ್ ನೀಡಿದೆ. ಇದರಿಂದಾಗಿ ಕೊಳಗೇರಿ ಪ್ರದೇಶದ ಬಡ ಜನರಿಗೆ ಆರೋಗ್ಯ ಭದ್ರತೆ ಸಿಕ್ಕಂತಾಗಿದೆ.

    ಹೆಚ್ಚು ಬಡ ಜನರಿಗೆ ಚಿಕಿತ್ಸೆಯ ಸೌಲಭ್ಯ ಒದಗಿಸುವ ಉದ್ದೇಶದಿಂದ ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಸಿದ್ದೆವು. ಈ ವೇಳೆ ನಗರದ ಕೇಂದ್ರ ಭಾಗವಾದ ಹಾಗೂ ಕೊಳಗೇರಿಯನ್ನು ಸುತ್ತುವರಿದಿದ್ದ ಮಸೀದಿಯಲ್ಲಿ ಅವಕಾಶ ಸಿಕ್ಕಿತ್ತು ಎಂದು ಹೆಲಿಂಗ್ ಹ್ಯಾಂಡ್ ಫೌಂಡೇಶನ್‍ನ ವ್ಯವಸ್ಥಾಪಕ ಮಜ್ತಾಬಾ ಆಸ್ಕರಿ ತಿಳಿಸಿದ್ದಾರೆ.

    ಮಸೀದಿಯ ಸುತ್ತಮುತ್ತ 9 ಕೊಳಗೇರಿ ಪ್ರದೇಶಗಳಿದ್ದು, ಸುಮಾರು 1.5 ಲಕ್ಷ ಜನರು ವಾಸವಾಗಿದ್ದಾರೆ. ಮಸೀದಿ ಮೂಲಕ ನಮ್ಮ ಉದ್ದೇಶಕ್ಕೆ ಸೂಕ್ತವಾಗಿದ್ದ ಜಾಗ ಸಿಕ್ಕಂತಾಗಿದ್ದು, ಒಂದು ದಿನದಲ್ಲಿ ಸುಮಾರು 40ರಿಂದ 50 ಮಂದಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಚಿಕಿತ್ಸೆ ಪಡೆದ ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕೆಲವು ರೋಗಿಗಳಿಗೆ ಸಾರಿಗೆ ಸೌಲಭ್ಯವನ್ನೂ ಒದಗಿಸುತ್ತಿದ್ದೇವೆ ಎಂದು ಮಜ್ತಾಬಾ ಆಸ್ಕರಿ ಹೇಳಿದ್ದಾರೆ.

    ಇಂತಹ ಸೇವೆಯನ್ನು 30 ಆಸ್ಪತ್ರೆಗಳ ಮೂಲಕ ಕಳೆದ 13 ವರ್ಷಗಳಿಂದ ಒದಗಿಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಅನೇಕರು ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ರೋಗಿಗಳ ಬಗ್ಗೆ ಅಧ್ಯಯನ ಮಾಡಿ, ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಅವರನ್ನು ಆಸ್ಪತ್ರೆಗೆ ಕಳುಹಿಸುತ್ತೇವೆ. ಬಡ ರೋಗಿಗಳ ಸಾರಿಗೆ ಹಾಗೂ ಸ್ವಲ್ಪ ಮಟ್ಟದ ಸಹಾಯ ಧನ ನೀಡುತ್ತೇವೆ ಎಂದು ಎಚ್‍ಎಚ್‍ಎಫ್ ನಿರ್ದೇಶಕ ಫರೀದ್ ಅವರು ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತಾನು ಗರ್ಭಿಣಿ ಎಂದಿದ್ದಕ್ಕೆ ಸುಟ್ಟು ಹಾಕಿದ ಅಪ್ರಾಪ್ತ ಪ್ರೇಮಿ!

    ತಾನು ಗರ್ಭಿಣಿ ಎಂದಿದ್ದಕ್ಕೆ ಸುಟ್ಟು ಹಾಕಿದ ಅಪ್ರಾಪ್ತ ಪ್ರೇಮಿ!

    ಹೈದರಾಬಾದ್: ಪ್ರೇಯಸಿ ತಾನು ಗರ್ಭಿಣಿ ಎಂದು ಹೇಳಿದ ಬಳಿಕ 17 ವರ್ಷದ ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

    ಆರೋಪಿ ಸೇರಿದಂತೆ ಆತನಿಗೆ ಸಹಾಯ ಮಾಡಿದ್ದ ಇಬ್ಬರು ಅಪ್ರಾಪ್ತ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳು 16 ವರ್ಷದ ಅಪ್ರಾಪ್ತೆಯಾಗಿದ್ದು, ಹೈಸ್ಕೂಲ್ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಹುಡುಗಿ ಮನೆಯಿಂದ ಹೊರಗೆ ಹೋದವಳು ಮರಳಿ ಮನೆಗೆ ಹಿಂದಿರುಗಲಿಲ್ಲ. ಬಳಿಕ ಆಕೆಯ ಪೋಷಕರು ನವೆಂಬರ್ 7ರಂದು ನಾಪತ್ತೆ ದೂರು ನೀಡಿದ್ದರು. ನಂತರ ಪೊಲೀಸರು ತನಿಖೆಯನ್ನು ಶುರು ಮಾಡಿದ್ದಾರೆ.

    ಮೂವರು ಆರೋಪಿಗಳ ಮನೆ ಕೂಡ ಮೃತ ಹುಡುಗಿ ಮನೆ ಬೀದಿಯಲ್ಲಿಯೇ ಇತ್ತು. ಮೂವರಲ್ಲಿ ಒಬ್ಬ ಒಂದು ವರ್ಷದಿಂದ ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದನು. ಆದರೆ 15 ದಿನಗಳ ಹಿಂದೆ ಹುಡುಗಿ ನಾನು ಗರ್ಭಿಣಿ ಎಂದು ಆರೋಪಿಗೆ ತಿಳಿಸಿದ್ದಾಳೆ. ಗರ್ಭಪಾತದ ಮಾತ್ರೆ ಸೇವನೆ ಮಾಡುವಂತೆ ಹುಡುಗ ಹೇಳಿದ್ದಾನೆ. ಆದರೆ ಆಕೆ ಅದಕ್ಕೆ ನಿರಾಕರಿಸಿದ್ದಳು. ನಂತರ ಆರೋಪಿ ಪ್ರೇಯಸಿಯ ಕುಟುಂಬದವರ ಭಯದಿಂದ ಆಕೆಯನ್ನು ಕೊಲೆ ಮಾಡಲು ನಿರ್ಧಾರ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಕೊಲೆ ಮಾಡಿದ್ದು ಹೇಗೆ..?
    ನವೆಂಬರ್ 7 ಸಂಜೆ ಆಕೆಯನ್ನು ಸಮೀಪದ ಕ್ರೀಡಾಂಗಣಕ್ಕೆ ಬರುವಂತೆ ಹೇಳಿದ್ದಾನೆ. ಆಕೆ ಬರುತ್ತಿದ್ದಂತೆ ಮೊದಲು ಹುಡುಗಿ ತಲೆಗೆ ರಾಡ್ ನಿಂದ ಹೊಡೆದಿದ್ದಾನೆ. ಬಳಿಕ ಆತ ತನ್ನ ಸ್ನೇಹಿತರ ಸಹಾಯದಿಂದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ತದನಂತರ ಹುಡುಗಿಯ ಗುರುತು ಸಿಗಬಾರದೆಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆದರೆ ಶವ ಸರಿಯಾಗಿ ಸುಡದ ಕಾರಣ ಸತ್ಯ ಹೊರಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಆಗ ಮುಖ್ಯ ಆರೋಪಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಸದ್ಯಕ್ಕೆ ಸಾವಿನ ಕಾರಣಗಳು ಮತ್ತು ಮೃತ ಹುಡುಗಿ ಗರ್ಭಿಣಿಯಾಗಿದ್ದಳಾ ಅಥವಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ದಾಖಲೆ ಇಲ್ಲದ 7 ಕೋಟಿ ರೂ. ಜಪ್ತಿ, ನಾಲ್ವರ ಬಂಧನ

    ದಾಖಲೆ ಇಲ್ಲದ 7 ಕೋಟಿ ರೂ. ಜಪ್ತಿ, ನಾಲ್ವರ ಬಂಧನ

    ಹೈದರಾಬಾದ್: ದಾಖಲೆ ಇಲ್ಲದ ಸುಮಾರು 7 ಕೋಟಿ ರೂ.ಗಳಷ್ಟು ಹಣವನ್ನು ನಗರದ ಟಾಸ್ಕ್ ಪೋರ್ಸ್ ಪೊಲೀಸರು ಬುಧವಾರ ಜಪ್ತಿ ಮಾಡಿದ್ದಾರೆ.

    ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ ನಂತರ ಇನ್ನೂ ಹಲವೆಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಪತ್ತೆಯಾದ ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಿದ್ದೇವೆ ಎಂದು ಪೊಲೀಸ್ ಆಯುಕ್ತರಾದ ಅಂಜನಿ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಸ್ಥಳದಲ್ಲಿ ಹಣವನ್ನು ಹೊರಿತುಪಡಿಸಿ ಒಂದು ಕಾರು, ಮೂರು ಮೊಬೈಲ್ ಫೋನ್, ಮ್ಯಾಕ್‍ಬುಕ್, ಐಪ್ಯಾಡ್, ಲ್ಯಾಪ್‍ಟಾಪ್, 30 ಚೆಕ್ ಬುಕ್‍ಗಳು ಹಾಗೂ ನೋಟ್ ಕೌಟಿಂಗ್ ಮಷಿನ್‍ಗಳನ್ನು ಜಪ್ತಿ ಮಾಡಲಾಗಿದೆ.

    ಅಷ್ಟೇ ಅಲ್ಲದೆ ಜಪ್ತಿಯಾದ ಹಣವನ್ನು ಬರುವ ರಾಜ್ಯದಲ್ಲಿಯ ವಿಧಾನಸಭಾ ಚುನಾವಣೆಗೆ ಉಪಯೋಗಿಸಲು ಇಟ್ಟಿದ್ದರು. ಹಲವು ಕಂಪನಿಗಳು ಹಾಗೂ ಹವಾಲ ನಡೆಸುವವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಾವು ಈ ಪ್ರಕರಣದ ತನಿಖೆಗಾಗಿ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಸಹಾಯ ಪಡೆಯುತ್ತಿದ್ದೇವೆ. ಸದ್ಯ ಈ ಸಂಬಂಧ ವಿಚಾರಣೆಯನ್ನು ಮುಂದುವರಿದಿದೆ ಎಂದು ಅಂಜನಿ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • Exclusive: ಎಂಇಪಿ ನಾಯಕಿ ನೌಹಿರಾ ಶೇಖ್ ಕೇಸ್ ಖುಲಾಸೆಗೆ ಕೋಟಿ ಕೋಟಿ ಹಣ ಪಡೆದ್ರಾ ರೆಡ್ಡಿ?

    Exclusive: ಎಂಇಪಿ ನಾಯಕಿ ನೌಹಿರಾ ಶೇಖ್ ಕೇಸ್ ಖುಲಾಸೆಗೆ ಕೋಟಿ ಕೋಟಿ ಹಣ ಪಡೆದ್ರಾ ರೆಡ್ಡಿ?

    ಬೆಂಗಳೂರು: ಬ್ಯಾಂಕ್ ನೀಡುವ ಬಡ್ಡಿಗಿಂತಲೂ ಹೆಚ್ಚಿನ ದರದಲ್ಲಿ ಬಡ್ಡಿ ನೀಡುವುದಾಗಿ ಹೇಳಿ ದೇಶಾದ್ಯಂತ ಕೋಟ್ಯಂತರ ರೂಪಾಯಿ ವಂಚಿಸಿ ಸದ್ಯ ಬಂಧನದಲ್ಲಿರುವ ಎಂಇಪಿ ಪಕ್ಷದ ಸ್ಥಾಪಕಿ ನೌಹಿರಾ ಶೇಖ್ ಅವರನ್ನು ಪಾರು ಮಾಡಲು ಜನರ್ದಾನ ರೆಡ್ಡಿ ಪ್ರಯತ್ನಿಸಿದ್ದರು ಎನ್ನುವ ಗಂಭೀರ ಆರೋಪವೊಂದು ಈಗ ಕೇಳಿ ಬಂದಿದೆ.

    ಆಲ್‍ಇಂಡಿಯಾ ಮಹಿಳಾ ಎಂಪವರ್ಮೆಂಟ್ ಪಾರ್ಟಿ (ಎಂಇಪಿ) ಪಕ್ಷದ ಮುಖ್ಯಸ್ಥೆ ನೌಹೀರಾ ಶೇಖ್ ತೆಲಂಗಾಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಈ ಪ್ರಕರಣದಿಂದ ಅವರನ್ನು ರಕ್ಷಿಸಲು ರೆಡ್ಡಿ ಸಹಾಯ ಮಾಡುವುದಾಗಿ ಹಣ ಪಡೆದಿದ್ದರು ಎನ್ನುವ ಆರೋಪ ಈಗ ಕೇಳಿಬಂದಿದೆ.

    ನೌಹಿರಾ ಶೇಖ್ ದೇಶದ ಪ್ರಮುಖ ನಗರಗಳಲ್ಲಿ ಬಂಡಾವಳ ಹೂಡಿಕೆ ಮಾಡುವ ಹೆಸರಿನಲ್ಲಿ ಜನರಿಂದ ಕೋಟಿ ಕೋಟಿ ರೂ. ಹಣ ಪಡೆದ ಆರೋಪ ಎದುರಿಸುತ್ತಾರೆ. ಈಗಾಗಲೇ ಮುಂಬೈ ಪೊಲೀಸರು ಬಾಡಿ ವಾರೆಂಟ್ ಪಡೆದು ನೌಹಿರಾ ಶೇಖ್ ವಿಚಾರಣೆಗೆ ಒಳಪಡಿಸಿದ್ದಾರೆ. 

    ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನ್ನನ್ನು ಪಾರು ಮಾಡುವಂತೆ ನೌಹಿರಾ ಶೇಖ್ ಗಾಲಿ ಜನಾರ್ದನ ರೆಡ್ಡಿ ಅವರ ಸಹಾಯಕೋರಿದ್ದರು. ನೌಹಿರಾ ಶೇಖ್ ಅವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದ ರೆಡ್ಡಿ ಕೋಟಿ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ರೆಡ್ಡಿ ಅವರ ಆಪ್ತರ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿದೆ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ. ಸದ್ಯ ರೆಡ್ಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ಆಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಮೂಲಕ ಸಹಾಯ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು ಎನ್ನಲಾಗಿದೆ.

    ಯಾರು ಈ ನೌಹಿರಾ ಶೇಖ್?

    ನೌಹಿರಾ ಶೇಖ್ ಬೆಂಗಳೂರು, ಹೈದ್ರಾಬಾದ್, ಮುಂಬೈ, ಪುಣೆ, ದೆಹಲಿಯಲ್ಲಿ ಬಂಡವಾಳ ಹೂಡಿಕೆ ಮಾಡುವ ಹೆಸರಿನಲ್ಲಿ ಹಲವರಿಂದ ಹಣ ಪಡೆದು ಸಾವಿರ ಕೋಟಿಗೂ ಹೆಚ್ಚು ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ್ದ ಸ್ವರಾಜ್ ಪಕ್ಷದ ಸಂಸ್ಥಾಪಕಿಯಾಗಿರುವ ನೌಹಿರಾ ವಿರುದ್ಧ 2018 ಮೇ ತಿಂಗಳ ಬಳಿಕ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಅಗಸ್ಟ್ 25ರಂದು ಹೈದರಾಬಾದ್‍ನಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣ ಸಂಬಂಧ ಗುಪ್ತಚರ ಇಲಾಖೆಯೂ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ. ನೌಹಿರಾ ವಂಚಿಸಿದವರಲ್ಲಿ ಹೆಚ್ಚಿನವರು ಮುಸ್ಲಿಂ ಧರ್ಮಕ್ಕೆ ಸೇರಿದವರೇ ಆಗಿದ್ದು, ಹೀರಾ ಗ್ರೂಪ್ ಸಂಸ್ಥೆಯ ಮೂಲಕ ವ್ಯವಹಾರ ನಡೆಸುವುದಾಗಿ ನೌಹಿರಾ ಭರವಸೆ ನೀಡಿ ಹಣ ಸಂಗ್ರಹಿಸಿದ್ದರು ಎಂಬ ಮಾಹಿತಿ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv  

  • ಕಲ್ಲು ತೂರಿ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನ ಹತ್ಯೆ

    ಕಲ್ಲು ತೂರಿ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನ ಹತ್ಯೆ

    ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಮುಖಂಡ ನಾರಾಯಣ ರೆಡ್ಡಿಯನ್ನು ಕಲ್ಲು ತೂರಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಿಕರಾಬಾದ್ ನಲ್ಲಿ ನಡೆದಿದೆ.

    ಮಂಗಳವಾರ ಬೆಳಗ್ಗೆ ವಿಕರಾಬಾದ್ ಜಿಲ್ಲೆಯ ಸುಲ್ತಾನಪುರ ಗ್ರಾಮದಲ್ಲಿ ಕಲ್ಲಿನಿಂದ ಹೊಡೆದು, ಹತ್ಯೆ ಮಾಡಿದ ರೀತಿಯಲ್ಲಿ ನಾರಾಯಣ್ ರೆಡ್ಡಿ ಮೃತದೇಹ ಪತ್ತೆಯಾಗಿದೆ. ರೆಡ್ಡಿಯ ಹತ್ಯೆಯ ಸುದ್ದಿ ಹಬ್ಬುತ್ತಲೇ, ಟಿಆರ್‍ಎಸ್ ಕಾರ್ಯಕರ್ತರು ಹತ್ಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನ ಕೆಲವು ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಲ್ಲೆ ನಡೆಸಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಟಿಆರ್ ಎಸ್ ಕಾರ್ಯಕರ್ತರನ್ನು ಚದುರಿಸಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

    ನಾರಾಯಣ ರೆಡ್ಡಿ ಹತ್ಯೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, ಟಿಆರ್ ಎಸ್ ಮುಖಂಡ ನಾರಾಯಣ ರೆಡ್ಡಿ ಮೃತದೇಹ ಪತ್ತೆಯಾಗಿದ್ದು, ರೆಡ್ಡಿಯವರನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಅಲ್ಲದೇ ಈ ಕೊಲೆಯಲ್ಲಿ ಯಾವುದೇ ರಾಜಕೀಯ ವೈಷಮ್ಯ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಇದುವರೆಗೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮದ್ವೆಯಾದ 7 ತಿಂಗಳಿಗೆ ನೇಣು ಬಿಗಿದುಕೊಂಡ ಗರ್ಭಿಣಿ

    ಮದ್ವೆಯಾದ 7 ತಿಂಗಳಿಗೆ ನೇಣು ಬಿಗಿದುಕೊಂಡ ಗರ್ಭಿಣಿ

    ಹೈದರಾಬಾದ್: ವರದಕ್ಷಿಣೆ ಕಿರುಕುಳದಿಂದ ಗರ್ಭಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ನಡೆದಿದೆ.

    ಧನಲಕ್ಷ್ಮಿ (22) ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ಶ್ರೀಕಾಕುಲಂ ಜಿಲ್ಲೆಯ ಪತಿವಾಡಪಾಲೆಮ್ ನಲ್ಲಿ ಗುರುವಾರ ಈ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳದಿಂದ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿ ಮಗಳ ಪತಿಯ ವಿರುದ್ಧ ದೂರು ನೀಡಿದ್ದಾರೆ.

    ವಿಜಯನಗರ ಜಿಲ್ಲೆಯ ಮೃತ ಧನಲಕ್ಷ್ಮಿಗೆ ಉಪ್ಪಾಲಾ ಗುರುಮೂರ್ತಿ ಜೊತೆ ಏಪ್ರಿಲ್ 18 ರಂದು ಮದುವೆಯಾಗಿತ್ತು. ಆದರೆ ಮದುವೆಯಾದ ಕೆಲವು ತಿಂಗಳಲ್ಲೇ ಎರಡೂ ಕುಟುಂಬದವರಿಗೆ ವರದಕ್ಷಿಣೆ ಕುರಿತು ಜಗಳವಾಡಿದ್ದರು. ಮೃತ ಧನಲಕ್ಷ್ಮಿ ಗರ್ಭಿಣಿಯಾಗಿದ್ದರಿಂದ ದಸರಾ ಹಬ್ಬದ ಸಮಯದಲ್ಲಿ ತನ್ನ ಪೋಷಕರ ಮನೆಗೆ ಹೋಗಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ.

    ಅಕ್ಟೋಬರ್ 30 ರಂದು ಗುರುಮೂರ್ತಿಯ ಅಜ್ಜಿ ನಿಧನರಾಗಿದ್ದರು. ಅಂದು ಧನಲಕ್ಷ್ಮಿ ಪತಿಯ ಮನೆಗೆ ವಾಪಸ್ ಬಂದಿದ್ದಾರೆ. ಆದರೆ ಆ ದಿನವೇ ಸುಮಾರು 6 ಗಂಟೆಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿದ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದು, ಬಳಿಕ ಮೃತಳ ತಂದೆ ಮುತ್ಯಾಲ ವೆಂಕಟರಮಣ ಅವರು ಜೆ.ಆರ್.ಪುರಾಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನನ್ನ ಮಗಳಿಗೆ ಪ್ರತಿದಿನ ವರದಕ್ಷಿಣೆ ಬೇಕೆಂದು ಗುರುಮೂರ್ತಿ ಕಿರುಕುಳ ನೀಡುತ್ತಿದ್ದನು. ಆದ್ದರಿಂದ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಬಳಿಕ ಮೃತಳ ತಂದೆ ನೀಡಿದ ದೂರಿನ ಮೆರೆಗೆ ಪೊಲೀಸರು ಮೃತ ಧನಲಕ್ಷ್ಮಿ ಪತಿ ಗುರುಮೂರ್ತಿ ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದ ಮೂವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

    ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಆರ್‍ಐಎಮ್‍ಎಸ್ ಆಸ್ಪತ್ರೆಗೆ ರವಾನಿಸಿದ್ದು, ಪೊಲೀಸರು ಈ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರೀತಿ ತಿರಸ್ಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಬ್ಲೇಡ್‍ನಿಂದ ಹಲ್ಲೆಗೈದ ಶಿಕ್ಷಕ!

    ಪ್ರೀತಿ ತಿರಸ್ಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಬ್ಲೇಡ್‍ನಿಂದ ಹಲ್ಲೆಗೈದ ಶಿಕ್ಷಕ!

    ಹೈದರಾಬಾದ್: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಹಿಂದಿ ಶಿಕ್ಷಕನೊಬ್ಬ ಬ್ಲೇಡ್‍ನಿಂದ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಕರ್ನೂಲ್ ಜಿಲ್ಲೆಯ ಬಂಗರುಪೇಟಾ ಪ್ರದೇಶದಲ್ಲಿರುವ ರಾಕ್ವೆಲ್ ಹೈಸ್ಕೂಲ್ ನಲ್ಲಿ ಹಿಂದಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಶಂಕರ್ ಈ ಕೃತ್ಯವನ್ನು ಎಸಗಿದ್ದಾನೆ. ವಿದ್ಯಾರ್ಥಿನಿ ತನ್ನನ್ನು ತಿರಸ್ಕರಿಸಿದ್ದಕ್ಕಾಗಿ ಶಂಕರ್ ಆಕೆಯ ಮನೆಯಲ್ಲೇ ಹಲ್ಲೆ ಮಾಡಿದ್ದಲ್ಲದೇ ಅವಳ ಗಂಟಲನ್ನು ಕತ್ತರಿಸಲು ಪ್ರಯತ್ನಿಸಿದ್ದಾನೆ. ಈ ಸಮಯದಲ್ಲಿ ಆಕೆ ಜೋರಾಗಿ ಕಿರುಚುಕೊಂಡಿದ್ದಾಳೆ.

    ವಿದ್ಯಾರ್ಥಿನಿಯ ಕಿರುಚಾಟವನ್ನು ಆಲಿಸಿದ ಸ್ಥಳೀಯರು ಬಂದು ವಿದ್ಯಾರ್ಥಿಯನ್ನು ಕಾಮುಕ ಶಿಕ್ಷಕನಿಂದ ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮರಕ್ಕೆ ಕಟ್ಟಿ ಸ್ಥಳೀಯರೇ ಥಳಿಸಿದ್ದಾರೆ. ಘಟನೆಯ ನಂತರ ಸ್ಥಳೀಯರೇ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿ ಆರೋಪಿ ಶಂಕರ್ ನನ್ನು ಒಪ್ಪಿಸಿದ್ದಾರೆ.

    ಆರೋಪಿಯಿಂದ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿಯನ್ನು ಈಗ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಥಳಿತದಿಂದ ಗಾಯಗೊಂಡಿದ್ದ ಆರೋಪಿ ಶಂಕರ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಗಾಂತ ಶ್ರೀನಿವಾಸರಾವ್ ಶಂಕರ್ ನನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪುತ್ರನೊಂದಿಗೆ ಸಾನಿಯಾ ಮಿರ್ಜಾ ಫೋಟೋ ವೈರಲ್

    ಪುತ್ರನೊಂದಿಗೆ ಸಾನಿಯಾ ಮಿರ್ಜಾ ಫೋಟೋ ವೈರಲ್

    ಹೈದರಾಬಾದ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಾಕಿಸ್ತಾನ ತಂಡದ ಕ್ರಿಕೆಟ್ ಆಟಗಾರ ಶೋಯೆಬ್ ಮಲಿಕ್, ಸಾನಿಯಾ ದಂಪತಿಯ ತಮ್ಮ ಮಗುವಿಗೆ ಇಝಾನ್ ಮಿರ್ಜಾ ಮಲಿಕ್ ಎಂದು ಹೆಸರಿಟ್ಟಿದ್ದು, ಇಝಾನ್ ಎಂದರೆ ಅರೇಬಿಕ್ ನಲ್ಲಿ ಗಾಡ್ ಗಿಫ್ಟ್ ಎಂಬರ್ಥವನ್ನು ನೀಡುತ್ತದೆ. ಈ ನಡುವೆ ಅವರ ಮಗುವಿನೊಂದಿಗೆ ಸಾನಿಯಾ ಅವರು ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶೋಯೆಬ್ ಮಲಿಕ್ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ.

    https://www.instagram.com/p/BpsmItylELT/

    ಫೋಟೋದಲ್ಲಿ ಸಾನಿಯಾ ಮಿರ್ಜಾ ಆಸ್ಪತ್ರೆಯಿಂದ ಹೊರ ಬಂದಿರುವ ದೃಶ್ಯ ಕಾಣಬಹುದಾಗಿದ್ದು, ಪುತ್ರ ಇಝಾನ್‍ನನ್ನು ಎತ್ತಿಕೊಂಡು, ಬ್ಲಾಕ್ ಅಂಡ್ ವೈಟ್ ಚೆಕ್ಸ್ ಕುರ್ತಾ ಧರಿಸಿರುವ ಸಾನಿಯಾ, ಸ್ಕ್ರಾಪ್ ಸುತ್ತಿಕೊಂಡಿದ್ದಾರೆ. ಈ ಮೊದಲು ಶೋಯೆಬ್ ಮಲ್ಲಿಕ್ ಅವರು ಸಾನಿಯಾ ಗಂಡು ಮಗು ಜನಿಸಿರುವ ವಿಷಯವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ಖುಷಿ ಹಂಚಿಕೊಂಡಿದ್ದರು. ಅ.30 ರಂದು ಹೈದರಾಬಾದ್ ಬಂಜಾರ ಹಿಲ್ಸ್‍ನಲ್ಲಿರುವ ಆಸ್ಪತ್ರೆಯಲ್ಲಿ ಸಾನಿಯಾ ಮಿರ್ಜಾ ಮಗುವಿಗೆ ಜನ್ಮ ನೀಡಿದ್ದರು.

    ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲ್ಲಿಕ್ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಿರ್ಜಾಮಲಿಕ್ ದಂಪತಿಗೆ ಇದು ಮೊದಲ ಮಗುವಾಗಿದೆ. ಸಾನಿಯಾ ಗರ್ಭಿಣಿಯಾಗಿದ್ದಾಗ ನನ್ನ ಮಗುವಿಗೆ ಮಿರ್ಜಾ ಹಾಗೂ ಮಲ್ಲಿಕ್ ಮೂಲನಾಮ ಇರುತ್ತದೆ ಎಂದು ಹೇಳಿದ್ದರು. ಬಳಿಕ ತಮ್ಮ ಟ್ವಿಟ್ಟರಿನಲ್ಲಿ ಬೇಬಿ ಮಿರ್ಜಾಮಲ್ಲಿಕ್ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವಿಟ್ಟರಿನಲ್ಲಿ ಸಿಹಿ ಸುದ್ದಿ ನೀಡಿದ್ದರು. ಆದರೆ ಆ ಬಳಿಕ ಮಿರ್ಜಾಮಲಿಕ್ ದಂಪತಿಯ ಮಗು ಎಂಬ ಕೆಲ ಫೇಕ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.instagram.com/p/BpijafugaVL/

    https://www.instagram.com/p/Bpipj_sAQnn/

  • ಮಲಗಿದ್ದ ಮಕ್ಕಳನ್ನ ಎತ್ಕೊಂಡು ಹೋಗಿ ಕೊಂದು ಸಮಾಧಿ ಮಾಡ್ದ!

    ಮಲಗಿದ್ದ ಮಕ್ಕಳನ್ನ ಎತ್ಕೊಂಡು ಹೋಗಿ ಕೊಂದು ಸಮಾಧಿ ಮಾಡ್ದ!

    ಹೈದರಾಬಾದ್: ಬೆಂಗಳೂರಿನ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟೆನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

    ಅನಂತಪುರದ ಪುಟ್ಟಪರ್ತಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಒಬ್ಲುಸು ಎಂದು ಗುರುತಿಸಲಾಗಿದೆ. ಈತ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ನಾಗಮ್ಮ ಎಂಬವರ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ ತಿಳಿದು ಬಂದಿದೆ.

    ಆರೋಪಿ ಒಬ್ಲುಸು, ನಾಗಮ್ಮ ಮತ್ತು ಪತಿ ಗಣೇಶ್ ಅವರು ಬೆಂಗಳೂರಿನ ಮುನಿಸಿಪಲ್ ಕಾರ್ಪೋರೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ನಾಗಮ್ಮ ಮತ್ತು ಒಬ್ಲುಸು ಇಬ್ಬರಿಗೂ ಪರಿಚಯವಾಗಿ ಸ್ನೇಹವಾಗಿತ್ತು. ಸ್ನೇಹ ಪ್ರೀತಿಯಾಗಿ ಆರೋಪಿ ಒಬ್ಲುಸು ನಾಗಮ್ಮಳನ್ನು ಮದುವೆಯಾಗುತ್ತೇನೆ ಎಂದು ಮಾತುಕೊಟ್ಟಿದ್ದನು. ಅದರಂತೆಯೇ ಆಕೆಯನ್ನು ತನ್ನ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತಮ್ಮ ಮೊದಲ ಪತ್ನಿಗೆ ನಾನು ಈಕೆಯನ್ನು ಮದುವೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾನೆ. ಆದರೆ ಇದಕ್ಕೆ ಆತನ ಪತ್ನಿ ವಿರೋಧಿಸಿದ್ದಾರೆ. ಬಳಿಕ ಅಲ್ಲಿಂದ ಅವರಿಬ್ಬರು ಪುಟ್ಟಪರ್ತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಮೀಪದ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾರೆ.

    ಅಕ್ಟೋಬರ್ 25 ರಂದು ನಾಗಮ್ಮ ಮಲಗಿದ್ದಾಗ ಆಕೆಯ ಮಕ್ಕಳಾದ ದರ್ಶಿನಿ(3) ಮತ್ತು 6 ತಿಂಗಳ ಮಗುವನ್ನು ಎತ್ತಿಕೊಂಡು ಹೋಗಿ ಕೊಲೆ ಮಾಡಿ ದೇಹಗಳನ್ನು ಕಾಲುವೆಯ ಬಳಿ ಸಮಾಧಿ ಮಾಡಿ ವಾಪಸ್ ಬಂದಿದ್ದಾನೆ. ಇತ್ತ ನಾಗಮ್ಮ ಎಚ್ಚರಗೊಂಡು ಮಕ್ಕಳ ಬಗ್ಗೆ ವಿಚಾರಿಸಿದಾಗ ಸಂಬಂಧಿ ಮನೆಯಲ್ಲಿ ಬಿಟ್ಟು ಬಂದಿದ್ದೇನೆ ಎಂದು ಆರೋಪಿ ಸುಳ್ಳು ಹೇಳಿದ್ದಾನೆ.

    ಇಬ್ಬರು ಒಟ್ಟಿಗೆ ವಾಪಸ್ ಬೆಂಗಳೂರಿಗೆ ಬಂದಾಗ ನಾಗಮ್ಮ ಪತಿ ಗಣೇಶ್ ಅವರನ್ನು ನೋಡಿ ಅನುಮಾನಗೊಂಡಿದ್ದಾನೆ. ಬಳಿಕ ಸಂಬಂಧಿಗಳು ಮತ್ತು ಗಣೇಶ್ ವಿಚಾರಿಸಿದಾಗ ಮಕ್ಕಳನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂತರ ಪುಟ್ಟಪರ್ತಿ ಸ್ಥಳೀಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ.

    ಮಾಹಿತಿ ತಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸಮಾಧಿ ಮಾಡಿದ್ದ ಸ್ಥಳದಲ್ಲಿ ಮಕ್ಕಳ ದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹೆಂಡ್ತಿ ಜೊತೆಗಿನ ಅಶ್ಲೀಲ ಫೋಟೋವನ್ನ ಲವರ್ ಗೆ ಕಳುಹಿಸ್ದ- ಪತಿ, ಲವ್ವರ್ ಬಂಧನ

    ಹೆಂಡ್ತಿ ಜೊತೆಗಿನ ಅಶ್ಲೀಲ ಫೋಟೋವನ್ನ ಲವರ್ ಗೆ ಕಳುಹಿಸ್ದ- ಪತಿ, ಲವ್ವರ್ ಬಂಧನ

    ಹೈದರಾಬಾದ್: ಪತಿ ತನ್ನ ಅಕ್ರಮ ಸಂಬಂಧದಿಂದ ದೂರವಾಗಲು ಪತ್ನಿಯ ಜೊತೆಗಿನ ಅಶ್ಲೀಲ ಫೋಟೋವನ್ನು ಲವ್ವರ್ ಗೆ ಕಳುಹಿಸಿದ. ಆ ಫೋಟೋಗೆ ಅಸಭ್ಯವಾಗಿ ಮೆಸೇಜ್ ಮಾಡುತ್ತಿದ್ದ ಪತಿಯ ಪ್ರಿಯತಮೆಯನ್ನು ರಾಚಕೊಂಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರೋಪಿ ಪತಿಯನ್ನು ತುಳಸಿನಾಥ್ ಮತ್ತು ಪ್ರಿಯತಮೆ ಮೋನಿಕಾ ಎಂದು ಗುರುತಿಸಲಾಗಿದೆ. ಈತ ವನಸ್ಥಳಿಪುರಂ ನಿವಾಸಿಯಾಗಿದ್ದು, ಆಸ್ಟ್ರೇಲಿಯಾದ ವಿಶ್ವವಿದ್ಯಾನಿಲಯದಲ್ಲಿ ಬಿಬಿಎ ಪದವಿ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಕಳೆದ ವರ್ಷ ಬಂಜಾರ ಹಿಲ್ಸ್ ನನ ಭದ್ರತಾ ಸೇವೆಗಳ ಸಭೆಯಲ್ಲಿ ತುಳಸಿನಾಥ್ ಹೈಟೆಕ್ ಸಿಟಿಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೋನಿಕಾಳನ್ನು ಭೇಟಿ ಮಾಡಿದ್ದನು. ಮೋನಿಕಾ ತನ್ನ ಪತಿ ಈಶ್ವರನಿಂದ ದೂರವಾಗಿ ವಿಚ್ಛೇದನ ಪಡೆದುಕೊಂಡಿದ್ದಳು. ತುಳಸಿನಾಥ್ ಮತ್ತು ಮೋನಿಕಾ ಪರಸ್ಪರ ಪರಿಚಯವಾಗಿ ಇಬ್ಬರು ಅನೈತಿಕ ಸಂಬಂಧವನ್ನು ಹೊಂದಿದ್ದಾರೆ ಎಂದು ರಾಚಕೊಂಡ ಪೋಲಿಸ್ ಕಮಿಷನರ್ ಮಹೇಶ್ ಭಾಗವತ್ ಹೇಳಿದ್ದಾರೆ.

    ಆದರೆ ಪತ್ನಿ ಈ ಬಗ್ಗೆ ತಿಳಿದು ವನಸ್ಥಳಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಳಿಕ ಪತಿ ತುಳಸಿನಾಥ್ ಅಕ್ರಮ ಸಂಬಂಧ ಹೊಂದಿದ್ದ ಮೋನಿಕಾಳಿಂದ ದೂರವಾಗಲು ಇಚ್ಚಿಸಿದ್ದು, ತನ್ನ ಪತ್ನಿಯ ಜೊತೆಗಿದ್ದ ಆಶ್ಲೀಲ ಫೋಟೋಗಳನ್ನು ಮೋನಿಕಾಗೆ ಕಳುಹಿಸಿದ್ದಾನೆ.

    ಮೋನಿಕಾ ಆ ಫೋಟೋವನ್ನು ತನ್ನ ವಾಟ್ಸಪ್ ನಲ್ಲಿ ಅಪ್ಲೋಡ್ ಮಾಡಿ, ಜೊತೆಗೆ “ಈಕೆ ಹಣಕ್ಕಾಗಿ ಪತಿಯನ್ನು ಜೈಲಿಗೆ ಕಳುಹಿಸುವುದರ ಜೊತೆಗೆ ಏನು ಬೇಕಾದರೂ ಮಾಡುತ್ತಾಳೆ” ಎಂದು ಸ್ಟೇಟಸ್ ಹಾಕಿಕೊಂಡಿದ್ದಾಳೆ.

    ಅಷ್ಟೇ ಅಲ್ಲದೇ ತುಳಸಿನಾಥ್ ಮತ್ತು ಆಕೆ ಪತ್ನಿಗೆ ಅಸಭ್ಯವಾಗಿ ಮೆಸೇಜ್ ಕೂಡ ಮಾಡಿದ್ದಾಳೆ. ಬಳಿಕ ತುಳಸಿನಾಥ್ ಪತ್ನಿ ಈ ಬಗ್ಗೆ ಸೈಬರ್ ಕ್ರೈಂ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ರಾಚಕೊಂಡ ಸೈಬರ್ ಕ್ರೈಂ ಅಧಿಕಾರಿಗಳು ಈ ಬಗ್ಗೆ ತನಿಖೆ ಕೈಗೊಂಡು ಇಬ್ಬರನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv