Tag: Hyderabad

  • ಬ್ಯಾಡ್ಮಿಂಟನ್  ಸ್ಟಾರ್ ಸೈನಾ ನೆಹ್ವಾಲ್ ಮದುವೆ ಫಿಕ್ಸ್!

    ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹ್ವಾಲ್ ಮದುವೆ ಫಿಕ್ಸ್!

    ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್  ತಾರೆ ಸೈನಾ ನೆಹ್ವಾಲ್ ಮದುವೆಯಾಗಲು ನಿರ್ಧರಿಸಿದ್ದು, ವರ್ಷಾಂತ್ಯಕ್ಕೆ ಅವರ ವಿವಾಹ ನಡೆಯಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಸೈನಾ ಮದುವೆ ಆಗುತ್ತಿರುವ ವರ ಯಾರು ಎಂಬ ಕುತೂಹಲವೂ ಹೆಚ್ಚಿನ ಅಭಿಮಾನಿಗಳಲ್ಲಿ ಇದ್ದು, ಸೈನಾ ನೆಹ್ವಾಲ್ ಗುರು ಗೋಪಿಚಂದ್ ಅವರ ಗರಡಿಯಲ್ಲಿ ಪಳಗಿದ ಪಾರುಪಲ್ಲಿ ಕಶ್ಯಪ್‍ರನ್ನೇ ಮದುವೆ ಆಗಲಿದ್ದಾರೆ. ಈ ಇಬ್ಬರು ತಾರೆಯರು ಕೂಡ ಗೋಪಿಚಂದ್ ಅವರ ಬಳಿಯೇ ತರಬೇತಿ ಪಡೆದಿದ್ದಾರೆ. ಇಬ್ಬರ ವಿವಾಹ ಕಾರ್ಯಕ್ರಮ ಡಿಸೆಂಬರ್ 16 ರಂದು ನಡೆಯಲು ಸಿದ್ಧತೆ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

    ಕುಟುಂಬಗಳ ಹಿರಿಯರು ಈಗಾಗಲೇ ಮದುವೆ ಕುರಿತು ಮಾತುಕತೆ ನಡೆಸಿದ್ದಾರೆ. ಅಲ್ಲದೇ ವಿವಾಹ ಕಾರ್ಯಕ್ರಮದ ಸಿದ್ಧತೆಗಳನ್ನು ನಡೆಸಿದ್ದಾರೆ. ಮದುವೆಯ ಸಮಾರಂಭಕ್ಕೆ ಕುಟುಂಬದ ಸದಸ್ಯರು ಹಾಗೂ ಆಪ್ತ ವಲಯದ ಕೆಲವೇ ಮಂದಿಗೆ ಆಹ್ವಾನ ನೀಡಲಾಗುತ್ತದೆ ಎನ್ನಲಾಗಿದೆ. ಮದುವೆ ಬಳಿಕ ಅಂದರೆ ಡಿಸೆಂಬರ್ 21 ರಂದು ನಡೆಯುವ ಆರತಕ್ಷತೆ ಸಮಾರಂಭದಲ್ಲಿ ಸ್ನೇಹಿತರು, ಗಣ್ಯರಿಗೆ ಆಹ್ವಾನ ನೀಡಲಾಗುತ್ತದೆ ಎಂದು ವರದಿಯಾಗಿದೆ.

    2005ರಲ್ಲಿ ಗೋಪಿಚಂದ್ ಅವರ ಬಳಿ ತರಬೇತಿ ಪಡೆಯುತ್ತಿದ್ದ ವೇಳೆ ಕಶ್ಯಪ್ ಹಾಗೂ ಸೈನಾ ನಡುವೆ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಲು ಆರಂಭಿಸಿದ್ದಾರೆ. 28 ವರ್ಷದ ಸೈನಾ ನೆಹ್ವಾಲ್ ಹಾಗೂ 32 ವರ್ಷದ ಕಶ್ಯಪ್ ವಿಶ್ವ ಬ್ಯಾಡ್ಮಿಟನ್ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

    ಸೈನಾ ನೆಹ್ವಾಲ್ 2014 ರಲ್ಲಿ ಗೋಪಿಚಂದ್ ಅವರ ಬಳಿ ತರಬೇತಿ ತೊರೆದು ಬೆಂಗಳೂರಿನ ವಿಮಲ್ ಕುಮಾರ್ ಅವರ ಬಳಿ ತರಬೇತಿ ಪಡೆಯಲು ಆಗಮಿಸಿದ್ದರು. ಈ ವೇಳೆ ಹಲವು ಬಾರಿ ಕಶ್ಯಪ್ ಬೆಂಗಳೂರಿಗೆ ಬಂದು ಸೈನಾರನ್ನು ಭೇಟಿ ಮಾಡುತ್ತಿದ್ದರು. ಆಗಲೇ ಇಬ್ಬರು ಪ್ರೀತಿಯಲ್ಲಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು. ಆದರೆ ಈ ಕುರಿತು ಇಬ್ಬರು ಎಲ್ಲಿಯೂ ಮಾತನಾಡಿರಲಿಲ್ಲ. ಬಳಿಕ ಸೈನಾ ಮತ್ತೆ ಬೆಂಗಳೂರಿನಿಂದ ಗೋಪಿಚಂದ್ ಅವರ ತರಬೇತಿ ಕೇಂದ್ರಕ್ಕೆ ಶಿಪ್ಟ್ ಆಗಿದ್ದರು. ಸೈನಾರ ಈ ನಿರ್ಧಾರಕ್ಕೆ ಕಶ್ಯಪ್ ಅವರೊಂದಿನ ಪ್ರೀತಿಯೂ ಒಂದು ಕಾರಣ ಎನ್ನಲಾಗಿದೆ. ಸೈನಾ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲೂ ಕಶ್ಯಪ್ ರೊಂದಿನ ಫೋಟೋಗಳನ್ನೇ ಹೆಚ್ಚು ಪೋಸ್ಟ್ ಮಾಡುತ್ತಿದ್ದ ಕಾರಣ ಇವರಿಬ್ಬರು ಪ್ರೀತಿಯಲ್ಲಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು.

    ಈ ಹಿಂದೆಯೂ ಕೂಡ ಕ್ರೀಡಾ ಕ್ಷೇತ್ರದಲ್ಲಿರುವ ಹಲವು ಸ್ಟಾರ್ ಗಳು ವಿವಾಹವಾಗಿದ್ದು, ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್-ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್, ಇಶಾಂತ್ ಶರ್ಮಾ-ಬ್ಯಾಸ್ಕೆಟ್ ಬಾಲ್ ಆಟಗಾರ್ತಿ ಪ್ರತಿಮಾ ಸಿಂಗ್, ಕುಸ್ತಿ ಪಟು ಗೀತಾ ಪೋಗಟ್- ಕುಸ್ತಿಪಟು ಪವನ್ ಕುಮಾರ್ ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್-ಕುಸ್ತಿಪಟು ಸತ್ಯವರ್ತ್ ಕಡಿಯಾನ್ ರೊಂದಿಗೆ ವಿವಾಹವಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.instagram.com/p/BiuZHnPBMif/?hl=en&taken-by=nehwalsaina

    https://www.instagram.com/p/BhoNuHKFUmX/?hl=en&taken-by=nehwalsaina

    https://www.instagram.com/p/BgdNzPNg6G5/?hl=en&taken-by=nehwalsaina

  • ಮರ್ಯಾದಾ ಹತ್ಯೆ- ಗರ್ಭಿಣಿ ಅಮೃತಾಗೆ ಸರ್ಕಾರಿ ಉದ್ಯೋಗ, ಮನೆ, 8.25 ಲಕ್ಷ ರೂ. ಪರಿಹಾರ

    ಮರ್ಯಾದಾ ಹತ್ಯೆ- ಗರ್ಭಿಣಿ ಅಮೃತಾಗೆ ಸರ್ಕಾರಿ ಉದ್ಯೋಗ, ಮನೆ, 8.25 ಲಕ್ಷ ರೂ. ಪರಿಹಾರ

    ಹೈದರಾಬಾದ್: ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಕುಟುಂಬದವರಿಗೆ ರಾಜ್ಯ ಸರ್ಕಾರವೂ ಪರಿಹಾರ ಧನವನ್ನು ಫೋಷಿಸಿತ್ತು. ಈಗ ಮೃತ ಪ್ರಣಯ್ ಪತ್ನಿ ಅಮೃತಾಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಭರವಸೆಯನ್ನು ಕೂಡ ನೀಡಿದೆ.

    ಗುರುವಾರ ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿದ್ದು, ಸಂತಾಪ ವ್ಯಕ್ತಪಡಿಸಿದ್ದರು. ಇವರ ಜೊತೆಗೆ ತುಂಗತುರ್ತಿ ಶಾಸಕ ಗದರಿ ಕಿಶೋರ್ ಮತ್ತು ರಾಜ್ಯಸಭೆ ಸದಸ್ಯ ಬಾದುಗುಲಾ ಲಿಂಗಯ್ಯ ಯಾದವ್, ಪೊಲೀಸ್ ಅಧೀಕ್ಷಕ ಎ.ವಿ ರಂಗನಾಥ್ ಮತ್ತು ಜಿಲ್ಲಾಧಿಕಾರಿ ಗೌರವ್ ಉಪ್ಪಲ್ ಅವರು ಭೇಟಿಯಾಗಿದ್ದಾರೆ. ಇದನ್ನೂ ಓದಿ: ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ, ಇಂತಹ ಘಟನೆಗಳು ಪ್ರಸ್ತುತ ದಿನಗಳಲ್ಲಿ ಇನ್ನೂ ನಡೆಯುತ್ತಿವೆ ಎಂದು ನಾಚಿಕೆ ಆಗುತ್ತದೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

    ಮೃತ ಪ್ರಣಯ್ ಪತ್ನಿ ಅಮೃತ ವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ಅವರ ಕುಟುಂಬಕ್ಕೆ ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ಪ್ರಣಯ್ ಮತ್ತು ಅಮೃತ ಇಬ್ಬರು ಪ್ರೀತಿಸಿದ್ದು, ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರು ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ ಸೆಪ್ಟಂಬರ್ 15 ಶನಿವಾರ ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದನು ಎಂದು ತನಿಖೆ ವೇಳೆ ತಿಳಿದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

    ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಬದುಕಿರುವುದು ಈ ವಿಡಿಯೋದಲ್ಲಿ ಮಾತ್ರ

    ಹೈದರಾಬಾದ್: ಮರ್ಯಾದಾ ಹತ್ಯೆಗೆ ಬಲಿಯಾದ ಮೃತ ಪ್ರಣಯ್, ಪತ್ನಿ ಅಮೃತ ಅಪ್ಲೋಡ್ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

    ಸೆಪ್ಟಂಬರ್ 15 ರಂದು ಶನಿವಾರ ಪ್ರಣಯ್ ನನ್ನು ಗರ್ಭಿಣಿ ಪತ್ನಿಯ ಮುಂದೇ ಕೊಲೆ ಮಾಡಲಾಗಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಇವರಿಬ್ಬರು ಮದುವೆಯಾದ ನಂತರ ಒಟ್ಟಾಗಿ ತೆಗಿಸಿದ್ದ ಫೋಟೋ ಮತ್ತು ವಿಡಿಯೋವನ್ನು ಒಂದು ತಿಂಗಳ ಹಿಂದೆಯಷ್ಟೆ ಅಮೃತ ತಮ್ಮ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದರು. ಈಗ ಆ ವಿಡಿಯೋ ವೈರಲ್ ಆಗಿದೆ.

    ವಿಡಿಯೋದಲ್ಲಿ ಪ್ರಣಯ್ ಮತ್ತು ಅಮೃತ ಇಬ್ಬರು ಮುದ್ದಾಗಿ ಕಾಣಿಸುತ್ತಿದ್ದು, ಸುಮಾರು 2 ಲಕ್ಷಕ್ಕಿಂತ ಅಧಿಕವಾಗಿ ವ್ಯೂ ಕಂಡಿದೆ. ಜೊತೆಗೆ 7 ಸಾವಿರ ಮಂದಿ ಲೈಕ್ಸ್ ಕೂಡ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ವಿಡಿಯೋವನ್ನು 1.5 ಸಾವಿರ ಜನರು ಶೇರ್ ಕೂಡ ಮಾಡಿದ್ದಾರೆ. ಅನೇಕ ಮಂದಿ ಇಬ್ಬರ ಜೋಡಿ ಚೆನ್ನಾಗಿದೆ ಎಂದು ಶುಭಾ ಕೋರಿದ್ದಾರೆ.

    ಪ್ರಣಯ್ ಕೊಲೆ
    ಪ್ರಣಯ್ ಮತ್ತು ಅಮೃತ ಹೈಸ್ಕೂಲ್ ನಲ್ಲಿಯೇ ಪ್ರೇಮಪಾಶಕ್ಕೆ ಸಿಲುಕಿದ್ದರು. ಮುಂದೆ ಕಾಲೇಜಿನಲ್ಲಿಯೂ ಇಬ್ಬರ ಪ್ರೇಮ ಮುಂದುವರಿದಿತ್ತು. ಆದ್ರೆ ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದ್ರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು.

    ಸೆಪ್ಟಂಬರ್ 15 ಶನಿವಾರ ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದನು ಎಂದು ತನಿಖೆ ವೇಳೆ ತಿಳಿದಿತ್ತು.

    ಅಮೃತ ಹೇಳಿದ್ದೇನು?
    ಮನೆಯ ವಿರೋಧದ ನಡುವೆ ನಾವು ಮದುವೆಯಾಗಿ ಚೆನ್ನಾಗಿ ಜೀವನ ನಡೆಸುತ್ತಿದ್ದೇವು. ನಾನು ಐದು ತಿಂಗಳ ಗರ್ಭಿಣಿ ಎಂದು ತಿಳಿದು ಪೋಷಕರು ಪತಿಯನ್ನು ಕೊಲೆ ಮಾಡಿಸಿ ಗರ್ಭಪಾತ ಮಾಡಿಸುವ ಪ್ಲಾನ್ ಮಾಡಿಕೊಂಡಿದ್ದರು. ನನ್ನ ತಂದೆ ಓರ್ವ ಉದ್ಯಮಿಯಾಗಿದ್ದು, ಹಲವು ಪ್ರಭಾವಿ ರಾಜಕಾರಣಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ತಮ್ಮ ಪ್ರಭಾವ ಬೆಳೆಸಿ ಪ್ರಣಯನನ್ನು ಬಿಟ್ಟು ಬೆದರಿಕೆ ಹಾಕುತ್ತಿದ್ದರು. ಪ್ರಣಯ್ ಕೊಲೆಯ ಮುನ್ನ ಸಹ ನನಗೆ ಗರ್ಭಪಾತ ಮಾಡಿಸಿಕೊ ಎಂದು ಜೀವ ಬೆದರಿಕೆ ಹಾಕಿದ್ದರು ಎಂದು ಅಮೃತ ಪೊಲೀಸರಿಗೆ ತಿಳಿಸಿದ್ದರು.

    ನಾನು ನನ್ನ ಪತಿಯ ಆಸೆಯನ್ನು ನೆರವೇರಿಸಲು ಬದುಕಿದ್ದೇನೆ ಎಂದು ಅಮೃತ ಹೇಳಿದ್ದರು. ಪತಿ ಪ್ರಣಯ್ ತಮ್ಮ ಮಗುವನ್ನು ಒಬ್ಬ ಜಾತಿ, ಧರ್ಮವನ್ನು ಮೀರಿ ಬೆಳಸಬೇಕು ಅಂತ ಇಷ್ಟ ಪಟ್ಟಿದ್ದದ್ದರು. ಅದರಂತೆ ನನ್ನ ಮಗುವನ್ನು ಬೆಳೆಸುತ್ತೇನೆ ಎಂದು ನೋವಿನಲ್ಲೂ ಹೇಳಿಕೊಂಡಿದ್ದರು.

    https://www.facebook.com/amrutha.pranay.3/videos/vb.100025915881312/204756723731522/?type=2&video_source=user_video_tab

    ಪ್ರಣಯ್ ಕೊಲೆ ಬಳಿಕ ಮರ್ಯದಾ ಹತ್ಯೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಫೇಸ್ ಬುಕ್‍ನಲ್ಲಿ Justice For Pranay ಎಂಬ ಪೇಜ್ ಕ್ರಿಯೇಟ್ ಮಾಡಲಾಗಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದರು. ಪ್ರಣಯ್ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗವಹಿಸಿ `ಅಮರ್ ರಹೇ ಪ್ರಣಯ್’ ಎಂದು ಘೋಷಣೆ ಕೂಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.facebook.com/amrutha.pranay.3/videos/vb.100025915881312/214516019422259/?type=2&video_source=user_video_tab

     

  • ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ- ಪ್ರೀತ್ಸಿ ಮದ್ವೆಯಾದ ಒಂದೇ ವಾರಕ್ಕೆ ಜೋಡಿ ಮೇಲೆ ಹಲ್ಲೆ

    ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ- ಪ್ರೀತ್ಸಿ ಮದ್ವೆಯಾದ ಒಂದೇ ವಾರಕ್ಕೆ ಜೋಡಿ ಮೇಲೆ ಹಲ್ಲೆ

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಮರ್ಯಾದಾ ಹತ್ಯೆಯ ಘಟನೆ ಮಾಸುವ ಮುನ್ನವೇ ಇದೀಗ ಹೈದರಾಬಾದ್‍ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆ ಆಗಿದ್ದ ನವವಿವಾಹಿತರ ಮೇಲೆ ಯುವತಿಯ ತಂದೆ ಮಚ್ಚು ಬೀಸಿದ ಘಟನೆ ಹೈದರಾಬಾದ್ ನ ಎಸ್‍ಆರ್ ನಗರದಲ್ಲಿ ನಡೆದಿದೆ.

    ಮಾಧವಿ ಹಾಗೂ ಸಂದೀಪ್ ಪ್ರೀತಿಸಿ ಒಂದು ವಾರದ ಹಿಂದೆಯಷ್ಟೇ ಮದುವೆಯಾಗಿದ್ದರು. ಬಳಿಕ ರಾಜಿ ಸಂಧಾನ ಎಂದು ಯುವತಿಯ ತಂದೆ ಮನೋಹರಚಾರಿ ಕರೆಸಿದ್ದನು. ಹೀಗಾಗಿ ಸಂದೀಪ್ ಹಾಗೂ ಮಾಧವಿ ಇಬ್ಬರು ಮನೋಹರಚಾರಿಯನ್ನು ಭೇಟಿಯಾಗಲು ಹೋದರು. ಈ ವೇಳೆ ಮನೋಹರಚಾರಿ ಅವರಿಬ್ಬರನ್ನು ನೋಡುತ್ತಿದ್ದಂತೆಯೇ ತನ್ನ ವಾಹನವನ್ನು ಪಾರ್ಕ್ ಮಾಡಿ, ಹೆಲ್ಮೆಟ್ ತೆಗೆದು ಒಂದು ನಿಮಿಷ ತಡ ಮಾಡದೇ ಸಂದೀಪ್ ಮೇಲೆ ಮಚ್ಚು ಬೀಸಿದ್ದಾನೆ. ಇದನ್ನೂ ಓದಿ: ಮರ್ಯಾದಾ ಹತ್ಯೆ: ಗರ್ಭಿಣಿ ಪತ್ನಿಯ ಎದುರೇ ಪತಿಯ ತಲೆಗೆ ಮಚ್ಚಿನಿಂದ ಏಟು

    ಮನೋಹರಚಾರಿ ಮೊದಲು ಸಂದೀಪ್ ಮೇಲೆ ಹಲ್ಲೆ ನಡೆಸಿ, ನಂತರ ತನ್ನ ಮಗಳು ಮಾಧವಿ ಮೇಲೆ ಹಲ್ಲೆ ನಡೆಸಿದ್ದಾನೆ. ಮನೋಹರಚಾರಿ ಇಬ್ಬರ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಅಲ್ಲಿದ್ದ ಜನರು ಅವರನ್ನು ತಡೆಯಲು ಹೋದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಇಬ್ಬರ ಮೇಲೂ ಹಲ್ಲೆ ನಡೆಸಿದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಮನೋಹರಚಾರಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮರ್ಯದಾ ಹತ್ಯೆ: ಪ್ರಣಯ್ ಕೊಲ್ಲಲು 1 ಕೋಟಿಗೆ ಸುಪಾರಿ ನೀಡಿದ್ದ ಮಾವ

    ಹಲ್ಲೆಯಿಂದಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಸಂದೀಪ್‍ಗೆ ಗಂಭೀರ ಗಾಯಗಳಾಗಿವೆ. ಮಾಧವಿಗೂ ಕತ್ತು ಹಾಗೂ ಕೈ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ತ್ರಾವ ಆಗಿದೆ. ಹಲ್ಲೆಗೊಳಗಾದ ಮಾಧವಿ ದೈಹಿಕ ಹಾಗೂ ಮಾನಸಿಕವಾಗಿ ಶಾಕ್‍ಗೆ ಒಳಗಾಗಿದ್ದಾರೆ. ಅಲ್ಲದೇ ತೀವ್ರ ರಸ್ತಸ್ತ್ರಾವ ಆಗಿದ್ದರಿಂದ ಆಕೆಗೆ ಇನ್ಫೆಕ್ಷನ್ ಆಗುವ ಸಾಧ್ಯತೆಗಳಿವೆ. ಹಾಗಾಗಿ 24 ಗಂಟೆಗಳಿಂದ ಆಕೆಯನ್ನು ನೋಡಿಕೊಳ್ಳಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಪ್ರೀತಿ ಶುರುವಾಗಿದ್ದು ಹೇಗೆ?
    ಮಾಧವಿ ಹಾಗೂ ಸಂದೀಪ್ ಒಬ್ಬರನ್ನೊಬ್ಬರು 5 ವರ್ಷದಿಂದ ಪ್ರೀತಿಸುತ್ತಿದ್ದರು. ಹೈದರಾಬಾದ್‍ನ ಬೇರೆ ಬೇರೆ ಕಾಲೇಜಿನಲ್ಲಿ ಓದ್ದುತ್ತಿದ್ದ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಮಾಧವಿ ಕುಟುಂಬ ಮೇಲ್ಜಾತಿ ಆದ ಕಾರಣ ಅವರು ಈ ಮದುವೆಯನ್ನು ವಿರೋಧಿಸಿದ್ದರು. ಹಾಗಾಗಿ ಸಂದೀಪ್ ಹಾಗೂ ಮಾಧವಿ ಕಳೆದ ಬುಧವಾರ ಸ್ನೇಹಿತರ ಸಮ್ಮುಖದಲ್ಲಿ ಆರ್ಯ ಸಮಾಜದಲ್ಲಿ ಮದುವೆಯಾಗಿದ್ದರು.

    ಸಂದೀಪ್ ಹಾಗೂ ಮಾಧವಿ ಮದುವೆಯಾದ ಬಳಿಕ ಎಸ್‍ಆರ್ ಪೊಲೀಸ್ ಠಾಣೆಗೆ ಬಂದಿದ್ದರು. ಆಗ ಇಬ್ಬರ ಕುಟುಂಬದವರನ್ನು ಕರೆಸಿ ರಾಜಿ ಸಂಧಾನ ಮಾಡಿಸಲಾಗಿತ್ತು. ಸದ್ಯ ಈಗ ನಾವು ಆರೋಪಿ ಮನೋಹರಚಾರಿಯನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಲೇಜು ಸಿಬ್ಬಂದಿ ಕಿರುಕುಳ- ದಂತ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

    ಕಾಲೇಜು ಸಿಬ್ಬಂದಿ ಕಿರುಕುಳ- ದಂತ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

    ಹೈದರಾಬಾದ್: ಕಾಲೇಜು ಸಿಬ್ಬಂದಿ ಕಿರುಕುಳ ತಾಳಲಾರದೇ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಮಿರ್ಜಾ ಅಸಿಂ ಅಹ್ಮದ್ ಬೇಗ್ (33) ಮೃತ ವಿದ್ಯಾರ್ಥಿ. ಹೈದರಾಬಾದಿನಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದ ಮಿರ್ಜಾ ಅಸಿಂ ಕಾಲೇಜು ಸಿಬ್ಬಂದಿ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ನಡೆದದ್ದು ಏನು?
    ಸೋಮವಾರ ಮಿರ್ಜಾ ಅಸಿಂ ಕಾಲೇಜಿಗೆ ಹೋಗದೆ ಮನೆಯಲ್ಲಿ ಉಳಿದಿದ್ದರು. ಸಂಜೆ ರೂಮ್ ಒಳಗೆ ಹೋದ ಅವರು ಬಹಳ ಸಮಯ ಕಳೆದೂ ಹೊರಗೆ ಬರಲಿಲ್ಲ. ಇದರಿಂದ ಅನುಮಾನ ವ್ಯಕ್ತಪಡಿಸಿದ ಮಿರ್ಜಾ ಅಸಿಂ ಸಹೋದರ ಬಾಗಿಲು ಮುರಿದು ನೋಡಿದಾಗ, ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡಿರುವುದು ತಿಳಿದಿದೆ ಎಂದು ಇನ್‍ಸ್ಪೆಕ್ಟರ್ ನಾಗೇಶ್ ಹೇಳಿದ್ದಾರೆ.

    ಮಿರ್ಜಾ ಮೃತ ದೇಹವನ್ನು ಓಸ್ಮಾನಿಯಾ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಇತ್ತ ರೂಮ್‍ನಲ್ಲಿ ಡೆತ್ ನೋಟ್ ದೊರತಿದ್ದು, ತಮ್ಮ ಸಾವಿಗೆ ಕಾಲೇಜು ಸಿಬ್ಬಂದಿಯೇ ಕಾರಣವೆಂದು ಮಿರ್ಜಾ ಬರೆದಿದ್ದಾರೆ ಎಂದು ನಾಗೇಶ್ ಮಾಹಿತಿ ನೀಡಿದ್ದಾರೆ.

    ಮಿರ್ಜಾ ಅಸಿಂ ಕಾಲೇಜು ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆಯಲ್ಲಿ ಫೇಲ್ ಮಾಡಲಾಗಿತ್ತು. ಜೊತೆಗೆ ಶುಲ್ಕ ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿತ್ತು ಎಂದು ಸಹೋದರ ಆರೋಪಿಸಿದ್ದಾರೆ.

    ನಾವು ಮಿರ್ಜಾ ಅಸಿಂ ಬಗ್ಗೆ ಯಾವುದೇ ರೀತಿಯ ನಿಷ್ಕಾಳಜಿ ತೋರಿಲ್ಲ ಹಾಗೂ ಕಿರುಕುಳ ನೀಡಿಲ್ಲ ಎಂದು ಕಾಲೇಜು ಆಡಳಿತಾಧಿಕಾರಿ ಪೊಲೀಸರಿಗೆ ಸ್ಪಷ್ಟನೆ ನೀಡಿದ್ದಾರೆ.

    ಮಿರ್ಜಾ ಕಳೆದ ಕೆಲವು ವಾರಗಳಿಂದ ಮಂಕಾಗಿದ್ದರು. ಅಲ್ಲದೆ ಕಾಲೇಜು ಪರೀಕ್ಷೆಗೂ ಹಾಜರಾಗಿರಲಿಲ್ಲ. ಹೀಗಾಗಿ ಫೇಲ್ ಆಗಿದ್ದಾರೆ. ಅವರು ಓದುವುದರಲ್ಲಿ ಶ್ರದ್ಧೆ ಹೊಂದಿದ್ದರಿಂದ ಪ್ರಾಯೋಗಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ನೀಡಿದ್ದೇವೆ ಎಂದು ಕಾಲೇಜು ಪ್ರಾಚಾರ್ಯ ಪಿ.ಕರುಣಾಕರ್ ವಿವರಿಸಿದ್ದಾರೆ.

    ನಾವು ಅವರಿಗೆ ಪ್ರೋತ್ಸಾಹ ನೀಡುತ್ತಲೇ ಬಂದಿದ್ದೇವೆ. ಆದರೆ ಈ ವರ್ಷ ಮಿರ್ಜಾ ಮಾನಸಿಕವಾಗಿ ಕುಗ್ಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ನಮ್ಮ ಕಾಲೇಜು ಹೆಸರನ್ನು ಏಕೆ ತಮ್ಮ ಡೆತ್ ನೋಟ್ ನಲ್ಲಿ ಬರೆದಿದ್ದಾರೆಂದು ಅರ್ಥವಾಗುತ್ತಿಲ್ಲ ಎಂದರು.

    ಈ ಕುರಿತು ಮದನ್ನಪೇಟ್ ಪೊಲೀಸ್ ಠಾಣೆಯಲ್ಲಿ ಕಾಲೇಜು ಸಿಬ್ಬಂದಿ ವಿರುದ್ಧ ಐಪಿಸಿ 306 (ಆತ್ಮಹತ್ಯೆಗೆ ಪ್ರೇರಣೆ) ಅಡಿ ಪ್ರಕರಣ ದಾಖಲಾಗಿದೆ. ಕಾಲೇಜು ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ತನಿಖೆಯನ್ನು ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಾಟ್ಸಪ್ ಮೂಲಕ 29ರ ಪತ್ನಿಗೆ ತಲಾಖ್ ಕೊಟ್ಟ 62ರ ಪತಿ!

    ವಾಟ್ಸಪ್ ಮೂಲಕ 29ರ ಪತ್ನಿಗೆ ತಲಾಖ್ ಕೊಟ್ಟ 62ರ ಪತಿ!

    ಹೈದರಾಬಾದ್: 62 ವರ್ಷದ ಪತಿಯೊಬ್ಬ 29 ವರ್ಷದ ಪತ್ನಿಗೆ ವಾಟ್ಸಪ್ ಮೂಲಕ ತಲಾಕ್ ನೀಡಿರುವ ಘಟನೆ ತೆಲಂಗಾಣದ ರಾಜಧಾನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಹೈದರಾಬಾದ್ ನಿವಾಸಿ ಹುಮ ಸೈರಾ (29) ತನ್ನ 62 ವರ್ಷದ ಪತಿಯಿಂದ ವಾಟ್ಸಪ್ ಮೂಲಕ ತಲಾಕ್ ಪಡೆದ ಪತ್ನಿಯಾಗಿದ್ದಾರೆ. ಸೈರಾ ಎಂಬವರು 2017 ರ ಮೇ ತಿಂಗಳಲ್ಲಿ ಓಮನ್ ನಿವಾಸಿಯಾದ 62 ವರ್ಷದ ವ್ಯಕ್ತಿಯೊಬ್ಬರನ್ನು ಮದುವೆಯಾಗಿದ್ದರು. ವಿವಾಹದ ಬಳಿಕ ಆತನೊಂದಿಗೆ ಓಮನ್‍ಗೆ ತೆರಳಿ ಒಂದು ವರ್ಷಗಳ ಕಾಲ ಜೀವನ ಸಾಗಿಸಿದ್ದರು.

    ಈ ವೇಳೆ ಸೈರಾ ಓಮನ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅನಾರೋಗ್ಯದಿಂದಾಗಿ ಮಗು ತನ್ನ 8ನೇ ತಿಂಗಳಿನಲ್ಲಿ ಮೃತಪಟ್ಟಿತ್ತು. ಇದಾದ ಬಳಿಕ ಪತಿ ಸೈರಾರನ್ನು ಚಿಕಿತ್ಸೆಯ ನೆಪವೊಡ್ಡಿ ಜುಲೈ 30 ರಂದು ಹೈದರಾಬಾದ್‍ನ ಆಕೆಯ ತಾಯಿ ಮನೆಗೆ ಕಳುಹಿಸಿಕೊಟ್ಟಿದ್ದಾನೆ.

    ಪತ್ನಿ ಭಾರತಕ್ಕೆ ಮರಳಿದ ಮೇಲೆ ಆಕೆಯೊಂದಿಗೆ ಫೋನ್ ಸಂಭಾಷಣೆಯನ್ನು ನಿಲ್ಲಿಸಿದ್ದ. ಹೀಗಾಗಿ ಸೈರಾ ಎಷ್ಟೇ ಬಾರಿ ಸಂಪರ್ಕಕ್ಕೆ ಪ್ರಯತ್ನಿಸಿದ್ದರೂ ಸಫಲವಾಗಿರಲಿಲ್ಲ. ಈ ವೇಳೆ ಆಗಸ್ಟ್ 12 ರಂದು ಪತಿ ತನ್ನ ವಾಟ್ಸಪ್ ಮೂಲಕ ಪತ್ನಿಗೆ ತಲಾಖ್ ನೀಡಿದ್ದಾನೆ. ಪತಿಯ ತಲಾಖ್ ನಿಂದ ಆಘಾತಗೊಂಡ ಸೈರಾ ನ್ಯಾಯ ಕೊಡಿಸುವಂತೆ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಬಳಿ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಕಲಚೇತನ ಮಹಿಳೆಗೆ ಕೆಲ್ಸ ಕೊಡಿಸೋದಾಗಿ ಹೇಳಿ 3 ಲಕ್ಷ ಪಡೆದು ಅತ್ಯಾಚಾರವೆಸಗಿದ!

    ವಿಕಲಚೇತನ ಮಹಿಳೆಗೆ ಕೆಲ್ಸ ಕೊಡಿಸೋದಾಗಿ ಹೇಳಿ 3 ಲಕ್ಷ ಪಡೆದು ಅತ್ಯಾಚಾರವೆಸಗಿದ!

    ಹೈದರಾಬಾದ್: ಕೆಲಸ ಕೊಡಿಸ್ತೀನಿ ಅಂತ ಹೇಳಿ ಹಲವು ತಿಂಗಳಿನಿಂದ 29 ವರ್ಷದ ವಿಕಲಚೇತನ ಮಹಿಳೆಗೆ ವಂಚಿಸಿ ಬಳಿಕ ಅತ್ಯಾಚಾರವೆಸಗಿ ಮೋಸ ಮಾಡಿದ ವ್ಯಕ್ತಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಸೋಮ ಸೈಲು ಎಂದು ಗುರುತಿಸಲಾಗಿದ್ದು, ಈತ ರಸ್ತೆ ಸಾರಿಗೆ ನಿಗಮ(ಆರ್‍ಟಿಸಿ)ದಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ಈತ ತನ್ನ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆ ಬಳಿಯಿಂದ 3 ಲಕ್ಷ ರೂ. ಹಣ ಹಾಗೂ ಕೆಲ ದಾಖಲೆಗಳನ್ನು ಕಳೆದ ವರ್ಷ ಪಡೆದಿದ್ದಾನೆ ಅಂತ ಮಹಿಳೆ ಆರೋಪಿಸಿದ್ದಾರೆ.

    ಸೆಪ್ಟೆಂಬರ್ 16ರಂದು ಮಹಿಳೆ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, `ತನ್ನ ಪತಿ ಆರ್‍ಟಿಸಿಯಲ್ಲಿ ಕೆಲಸ ಮಾಡುತ್ತಿದ್ದು, ಮೃತಪಟ್ಟಿದ್ದರು. ಗಂಡನ ಸಾವಿನ ಬಳಿಕ ತಾನು ಅಲ್ಲಿ ಕೆಲಸ ಪಡೆದುಕೊಳ್ಳಲು ಯತ್ನಿಸುತ್ತಿದ್ದೆ. ಈ ವೇಳೆ ಸೈಲು ಅವರನ್ನು ಭೇಟಿ ಮಾಡಿದ್ದು, ಆತ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾನೆ. ಇದೇ ವೇಳೆ ತಾನು, `ತನ್ನ ಕೆಲಸದ ಬಗ್ಗೆ ವಿಚಾರಿಸಿದೆ. ಆಗ ಆತ ನಕಲು ಐಡಿ ಹಾಗೂ ಸ್ಯಾಲರಿ ಸ್ಲಿಪ್ ಗಳನ್ನು ಮಾಡಿ ಕಚೇರಿ ಹೋಗದಿದ್ದರೂ ತಮ್ಮ ಅಕೌಂಟ್ ಗೆ ಹಣ ನೀಡುವುದಾಗಿ ಹೇಳಿದ್ದಾನೆ ಅಂತ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

    ಇಷ್ಟು ಮಾತ್ರವಲ್ಲದೇ ಸೈಲು ಒಂದು ದಿನ ತನ್ನ ಮನೆಗೆ ಬಂದು ಸ್ವೀಟ್ಸ್ ಹಾಗೂ ಚಾಕ್ಲೇಟ್ ಡಬ್ಬ ಕೊಟ್ಟಿದ್ದನು. ಈ ವೇಳೆ ಅದರಿಂದ ತೆಗೆದು ಸಿಹಿ ತಿಂದಿದ್ದೆ. ಬಳಿಕ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆನು. ಇದನ್ನೇ ಸದುಪಯೋಗಪಡಿಸಿಕೊಂಡ ಆತ ತನ್ನ ಮೇಲೆ ಅತ್ಯಾಚಾರವೆಗಿದ್ದಾನೆ. ಅಲ್ಲದೇ ಈ ವಿಚಾರ ಯಾರ ಬಳಿಯೂ ಹೇಳದಂತೆ ತಾಕೀತು ಮಾಡಿದ್ದನು ಅಂತ ಮಹಿಳೆಗೆ ಪೊಲೀಸರ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾರೆ.

    ಇಷ್ಟೆಲ್ಲಾ ಮಾಡಿದ ಸೈಲು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ರೀತಿ ಬೆದರಿಕೆಗಳನ್ನು ಹಾಕುತ್ತಾ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಅಂತ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

    ಸದ್ಯ ಮಹಿಳೆಯ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮದ್ವೆ ವೇಳೆ ಕೊಟ್ಟಿದ್ದ ಫ್ಲ್ಯಾಟ್ ತನ್ನ ಹೆಸರಿಗೆ ಬರೆದುಕೊಡದಿದ್ದಕ್ಕೆ ಪತ್ನಿಯನ್ನೇ ಕೊಂದ!

    ಮದ್ವೆ ವೇಳೆ ಕೊಟ್ಟಿದ್ದ ಫ್ಲ್ಯಾಟ್ ತನ್ನ ಹೆಸರಿಗೆ ಬರೆದುಕೊಡದಿದ್ದಕ್ಕೆ ಪತ್ನಿಯನ್ನೇ ಕೊಂದ!

    ಹೈದರಾಬಾದ್: ಹೆಚ್ಚಿನ ವರದಕ್ಷಿಣೆಗಾಗಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹೈದರಾಬಾದ್ ನ ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅಸೀಮಾ(19) ಎಂಬಾಕೆಯೇ ತನ್ನ ಪತಿ ಸಿರಾಜ್ ನಿಂದ ಕೊಲೆಯಾದ ದುರ್ದೈವಿ ಮಹಿಳೆ. ಆರೋಪಿ ಸಿರಾಜ್ ಸನತ್ ನಗರ್ ಎಂಬಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದು, ಈತ ಕಳೆದ ವರ್ಷ ಶ್ರೀ ಕಷ್ಣ ನಗರದ ಅಸೀಮಾಳನ್ನು ಮದುವೆಯಾಗಿದ್ದನು.

    ಮದುವೆ ಸಂದರ್ಭದಲ್ಲಿ ಸಿರಾಜ್, ಅಸೀಮಾ ಮನೆಯಿಂದ 1.5 ಲಕ್ಷ ನಗದು, 200 ಗ್ರಾಂ ಚಿನ್ನ ಹಾಗೂ 50 ಲಕ್ಷ ಮೌಲ್ಯದ ಫ್ಲ್ಯಾಟ್ ನ್ನು ವರದಕ್ಷಿಣೆಯಾಗಿ ಪಡೆದಿದ್ದನು. ಇದುವರೆಗೆ ಆ ಫ್ಲ್ಯಾಟ್ ಅಸೀಮಾಳ ಹೆಸರಲ್ಲಿದೆ. ಇದೀಗ ಅದನ್ನು ತನ್ನ ಹೆಸರಿಗೆ ಬರೆದುಕೊಡಬೇಕಾಗಿ ಅಸೀಮಾ ತಂದೆಗೆ ಸಿರಾಜ್ ಪೀಡಿಸುತ್ತಿದ್ದನು.

    ಇದೇ ವಿಚಾರಕ್ಕೆ ಆಗಾಗ ಅಸೀಮಾ ಹಾಗೂ ಪತಿ ಸಿರಾಜ್ ಮಧ್ಯೆ ಜಗಳ ನಡೆಯುತ್ತಿತ್ತು. ಆಗಸ್ಟ್ 18ರಂದು ಕೂಡ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಗಲಾಟೆ ತಾರಕಕ್ಕೇರಿದ್ದು, ಆಸೀಮಾಳಿಗೆ ಥಳಿಸಿ ಮನೆಯಿಂದ ಹೊರಗೆ ಹಾಕಿದ್ದನು. ಗಂಡನ ಕೃತ್ಯದಿಂದಾಗಿ ಮನೆಯಿಂದ ಹೊರಗಡೆಯಿದ್ದ ಅಸೀಮಾ ತನ್ನ 4 ತಿಂಗಳ ಗಂಡು ಮಗುವಿನೊಂದಿಗೆ ನೇರವಾಗಿ ತವರು ಮನೆಗೆ ತೆರಳಿದ್ದಾಳೆ.

    ಹೀಗೆ ಮನೆಗೆ ತೆರಳಿದ ಅಸೀಮಾ, ನಡೆದ ಘಟನೆಯನ್ನು ತನ್ನ ತಂದೆಯ ಬಳಿ ವಿವರಿಸಿದ್ದಾಳೆ. ಮಗಳ ಅಳಲನ್ನು ಆಲಿಸಿದ ತಂದೆ, ಅಳಿ ಸಿರಾಜ್ ಬಳಿ ಮಾತುಕತೆ ನಡೆಸಿ ಸಂಧಾನ ಮಾಡಿ ಮತ್ತೆ ಮಗಳನ್ನು ಗಂಡನ ಮನೆಗೆ ಕಳುಹಿಸಿದ್ದಾರೆ. ಆದ್ರೆ ಭಾನುವಾರ ಮುಂಜಾನೆ ಕುಟುಂಬಸ್ಥರು ಮಲಗಿದ್ದ ಸಂದರ್ಭದಲ್ಲಿ ಪತಿ ಸಿರಾಜ್ ತಾವು ಮಲಗಿದ್ದ ಕೊಣೆಯ ಬಾಗಿಲು ಹಾಕಿಕೊಂಡು ಪತ್ನಿ ಅಸೀಮಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅಸೀಮಾ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೃತ್ಯದ ಬಳಿಕ ಸಿರಾಜ್ ಹಾಗೂ ಆತನ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ.

     

    ಇತ್ತ ಮಗಳ ಮೇಲಿನ ಕೃತ್ಯದ ವಿಚಾರ ತಿಳಿದ ಕೂಡಲೇ ಅಸೀಮಾ ತಂದೆ ಆಕೆಯ ಮನೆಯ ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಮಗಳನ್ನು ನೋಡಿ ಬರಲು ತಿಳಿಸಿದ್ದಾರೆ. ಆದ್ರೆ ಅದಾಗಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಅವರು ಶಾಕ್ ಗೆ ಒಳಗಾಗಿದ್ದಾರೆ. ಕೂಡಲೇ ಬಂಜಾರಾ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಮಾಹಿತಿ ಕಲೆಹಾಕಿದ್ದಾರೆ. ಸದ್ಯ ಅಸೀಮಾ ತಂದೆಯ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ತಲೆಮರೆಸಿಕೊಂಡಿರು ಆರೋಪಿ ಸಿರಾಜ್ ಗಾಗಿ ಪೊಲೀಸರು ಆತನ ಫೋನ್ ಟ್ರೇಸ್ ಮಾಡಿದ್ದಾರೆ. ಆದ್ರೆ ಅದಾಗಲೇ ಆತ ತಾನೆಲ್ಲಿದ್ದೇನೆ ಅನ್ನೋದು ಗೊತ್ತಾಗದಂತೆ ಸಿಗ್ನಲ್ ಡಿಸ್ ಕನೆಕ್ಟ್ ಮಾಡಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಾಕ್ಲೇಟ್ ಆಸೆ ತೋರಿಸಿ ಶಾಲಾ ಸಿಬ್ಬಂದಿಯಿಂದಲೇ ಯುಕೆಜಿ ವಿದ್ಯಾರ್ಥಿನಿ ರೇಪ್!

    ಚಾಕ್ಲೇಟ್ ಆಸೆ ತೋರಿಸಿ ಶಾಲಾ ಸಿಬ್ಬಂದಿಯಿಂದಲೇ ಯುಕೆಜಿ ವಿದ್ಯಾರ್ಥಿನಿ ರೇಪ್!

    ಹೈದರಾಬಾದ್: ಚಾಕ್ಲೇಟ್ ನೀಡುವುದಾಗಿ ಹೇಳಿ ಐದು ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆ ಆವರಣದಲ್ಲಿಯೇ ಅತ್ಯಾಚಾರ ಎಸಗಿದ ಅಮಾವನೀಯ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಶನಿವಾರ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಚಾಕ್ಲೇಟ್ ನೀಡುತ್ತೇನೆ ಎಂದು ಹೇಳಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದ ಮಗಳನ್ನು ಶಾಲೆಯ ಸಿಬ್ಬಂದಿಯೊಬ್ಬ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆವರಣದಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಗೆ ನುಗ್ಗಿ, ಪೀಠೋಪಕರಣ, ಕಟ್ಟದ ಸೇರಿದಂತೆ ವಿವಿಧ ವಸ್ತುಗಳನ್ನು ದ್ವಂಸಗೊಳಿಸಿದ್ದಾರೆ. ಗಲಾಟೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

    ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ಪೋಕ್ಸೋ ಕಾಯ್ದೆ ಅಡಿ ಗೋಲ್ಕೊಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೈಲ ಬೆಲೆ ಕಡಿತಗೊಳಿಸಲು ಶೀಘ್ರವೇ ಕೇಂದ್ರದಿಂದ ಕ್ರಮ – ಅಮಿತ್ ಶಾ

    ತೈಲ ಬೆಲೆ ಕಡಿತಗೊಳಿಸಲು ಶೀಘ್ರವೇ ಕೇಂದ್ರದಿಂದ ಕ್ರಮ – ಅಮಿತ್ ಶಾ

    ಹೈದರಾಬಾದ್: ದೇಶ್ಯಾದಂತ ತೀವ್ರಗತಿಯಲ್ಲಿ ಹೆಚ್ಚಾಳವಾಗುತ್ತಿರುವ ತೈಲಬೆಲೆ ಕಡಿಮೆಗೊಳಿಸಲು ಕೇಂದ್ರದ ಕ್ರಿಯಾ ಯೋಜನೆ ಶೀಘ್ರವೇ ಜಾರಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಶನಿವಾರ ದೆಹಲಿಯಲ್ಲಿ ಹೇಳಿದ್ದಾರೆ.

    ತೆಲಂಗಾಣ ವಿಧಾನಸಭೆ ವಿಸರ್ಜನೆ ಮಾಡುತ್ತಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹೈದರಾಬಾದ್‍ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿ ಇಂಧನ ಬೆಲೆ ಏರಿಕೆ ಕುರಿತು ಪ್ರಸ್ತಾಪಿಸಿದರು. ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಯುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಜನರ ಆಂತಕವನ್ನು ನಾವು ತಿಳಿದಿದ್ದೇವೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕ್ರಿಯಾ ಯೋಜನೆ ಹೊರತಂದು ಬೆಲೆ ಏರಿಕೆಗೆ ಕಡಿವಾಣ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಅವಧಿ ಮುನ್ನ ವಿಧಾನಸಭೆ ಮಾಡಿದ ಕುರಿತು ಸಿಎಂ ಕೆಸಿಆರ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಅವಧಿ ಮೊದಲೇ ವಿಧಾನಸಭೆಯನ್ನು ಏಕೆ ವಿಸರ್ಜನೆ ಮಾಡಿದ್ದಾರೆ ಎಂಬುವುದನ್ನು ಕೆಸಿಆರ್ ಜನರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸಿದರು.

    ಮೊದಲು `ಒಂದೇ ದೇಶ.. ಒಂದೇ ಚುನಾವಣೆ’ಗೆ ಓಕೆ ಎಂದಿದ್ದ ಕೆಸಿಆರ್ ನಂತರ ಮಾತು ಬದಲಿಸದ್ದೇಕೆ? ಪದೇ ಪದೇ ಚುನಾವಣೆ ನಡೆದರೆ ಸಣ್ಣ ರಾಜ್ಯಗಳಿಗೆ ಆರ್ಥಿಕ ಹೊರೆ ಆಗಲ್ವಾ ಎಂದು ಪ್ರಶ್ನಿಸಿದರು. ಅಲ್ಲದೇ ನಿಮಗೆ ರಜಾಕಾರರ ಆಡಳಿತ ಬೇಕೋ, ಬಿಜೆಪಿ ಆಡಳಿತ ಬೇಕೋ? ಎಂದು ಜನರು ಚಿಂತನೆ ನಡೆಸಲಿ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv