Tag: Hyderabad

  • ಸಿನಿಮಾ ಶೈಲಿಯಲ್ಲಿ ಹೈದ್ರಾಬಾದ್ ಮ್ಯೂಸಿಯಂನಿಂದಲೇ 2 ಕೆಜಿ ಚಿನ್ನದ ಟಿಫಿನ್ ಬಾಕ್ಸ್ ದರೋಡೆ!

    ಸಿನಿಮಾ ಶೈಲಿಯಲ್ಲಿ ಹೈದ್ರಾಬಾದ್ ಮ್ಯೂಸಿಯಂನಿಂದಲೇ 2 ಕೆಜಿ ಚಿನ್ನದ ಟಿಫಿನ್ ಬಾಕ್ಸ್ ದರೋಡೆ!

    ಹೈದರಾಬಾದ್: ತೆಲಂಗಾಣದ ರಾಜಧಾನಿಯಲ್ಲಿರುವ ಪ್ರಸಿದ್ಧ ನಿಜಾಮ್ ಮ್ಯೂಸಿಯಂ ಸಂಗ್ರಹಾಲಯದಲ್ಲಿ ಸಿನಿಮೀಯಾ ಶೈಲಿಯಲ್ಲಿ ಕಳ್ಳರು 2 ಕೆಜಿ ಚಿನ್ನದ ಟಿಫಿನ್ ಬಾಕ್ಸ್ ಸೇರಿದಂತೆ ಹಲವು ವಸ್ತುಗಳನ್ನು ಎಗರಿಸಿದ್ದಾರೆ.

    ದೇಶದಲ್ಲೇ ಪ್ರಸಿದ್ಧ ಹಾಗೂ ಅತಿ ಭದ್ರತೆ ಹೊಂದಿರುವ ನಿಜಾಮಾ ಮ್ಯೂಸಿಯಂನಲ್ಲಿ ಎರಡು ದಶಕಗಳಿಗೂ ಹಳೆಯದಾದ 2 ಕೆಜಿ ತೂಕದ ಚಿನ್ನದ ಟಿಫಿನ್ ಬಾಕ್ಸ್, ಟೀ ಕಪ್, ಸಾಸರ್ ಹಾಗೂ ಸ್ಪೂನ್‍ಗಳನ್ನು ಕಳ್ಳರು ಸಿನಿಮಾ ಶೈಲಿಯಲ್ಲಿ ಎಗರಸಿ ಪರಾರಿಯಾಗಿದ್ದಾರೆ.

    ಕಳ್ಳತನವಾಗಿದ್ದು ಹೇಗೆ?
    ದರೋಡೆಕೋರರು ಭಾನುವಾರ ತಡರಾತ್ರಿ ಮೊದಲನೇ ಮಹಡಿಯಲ್ಲಿರುವ ಕಬ್ಬಿಣದ ಸರಳು ಮತ್ತು ವೆಂಟಿಲೇಟರ್ ಗಳನ್ನು ಮುರಿದು ಹಗ್ಗದ ಮೂಲಕ ಟಿಫಿನ್ ಬಾಕ್ಸ್ ಇರುವ ಕೊಠಡಿಗೆ ಬಂದಿದ್ದಾರೆ. ಮಾಣಿಕ್ಯ, ವಜ್ರ ಮತ್ತು ಪಚ್ಚೆಗಳಿಂದ ಅಲಂಕರಿಸಲಾಗಿದ್ದ ಟಿಫಿನ್ ಬಾಕ್ಸ್ ಸೇರಿದಂತೆ ಇತರೆ ಚಿನ್ನದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಸೋಮವಾರ ಎಂದಿನಂತೆ ಕೊಠಡಿಯನ್ನು ಪರೀಕ್ಷಿಸಿದ ಸೆಕ್ಯೂರಿಟಿ ಸಿಬ್ಬಂದಿಗಳು ಕಳ್ಳತನವಾಗಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಕೂಡಲೇ ಸ್ಥಳಕ್ಕೆ ಮೀರ್ ಚೌಕ್ ಪೊಲೀಸ್ ಠಾಣಾ ಅಧಿಕಾರಿಗಳು ಆಗಮಿಸಿದ್ದಾರೆ. ಈ ವೇಳೆ ಸ್ಥಳವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿ, ಸಿಸಿಟಿವಿಯ ದೃಶ್ಯಾವಳಿಗಳನ್ನು ಪರೀಕ್ಷಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಸಂಗ್ರಾಹಲಯದ ಸಿಬ್ಬಂದಿಗಳೇ ಕಳ್ಳತನದಲ್ಲಿ ಭಾಗಿಯಾಗಿರುವುದರ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಹೈದರಾಬಾದಿನ ಕೊನೆಯ ನಿಜಾಮ 7 ನೇ ಮೀರ್ ಒಸ್ಮಾನ್ ಅಲಿ ಖಾನ್ ಅಸಫ್ ಜಾ 1936 ರಲ್ಲಿ ತನ್ನ ಬೆಳ್ಳಿ ಮಹೋತ್ಸವದ ಜ್ಞಾಪಕಾರ್ಥವಾಗಿ ಈ ವಸ್ತು ಸಂಗ್ರಹಾಲಯವನ್ನು ನಿರ್ಮಿಸಿದ್ದನು. ಈ ಮ್ಯೂಸಿಯಂನಲ್ಲಿ ಹೈದರಾಬಾದಿನ ನಿಜಾಮರಿಗೆ ಸೇರಿದ ಪ್ರಮುಖ ಕಾಣಿಕೆಗಳು ಹಾಗೂ ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=dN3WLhctcCE

  • ತಂದೆ ಸಾವಿನ ದುಃಖದ ನಡುವೆಯೂ ಶೂಟಿಂಗ್ ಗೆ ಹಾಜರಾಗಿ ಕರ್ತವ್ಯ ಪ್ರಜ್ಞೆ ಮೆರೆದ ಜೂ.ಎನ್‍ಟಿಆರ್

    ತಂದೆ ಸಾವಿನ ದುಃಖದ ನಡುವೆಯೂ ಶೂಟಿಂಗ್ ಗೆ ಹಾಜರಾಗಿ ಕರ್ತವ್ಯ ಪ್ರಜ್ಞೆ ಮೆರೆದ ಜೂ.ಎನ್‍ಟಿಆರ್

    ಹೈದರಾಬಾದ್: ಟಾಲಿವುಡ್ ನಟ ಜೂ.ಎನ್‍ಟಿಆರ್ ತಂದೆ ಹರಿಕೃಷ್ಣರ ಸಾವಿನ ನೋವಿನಲ್ಲೂ ತಮ್ಮ ಮುಂದಿನ ಸಿನಿಮಾ ‘ಅರವಿಂದ ಸಮೇತ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

    ಚಿತ್ರದ ಬಿಡುಗಡೆಯ ಸಮಯ ಹತ್ತಿರವಾಗಿರುವುದರಿಂದ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸುವುದು ಅನಿವಾರ್ಯವಾಗಿದ್ದು, ಇಲ್ಲವಾದಲ್ಲಿ ನಿರ್ಮಾಪಕರು ಭಾರೀ ನಷ್ಟ ಅನುಭವಿಸುವ ಸಾಧ್ಯತೆ ಇತ್ತು. ಇದನ್ನು ತಿಳಿದ ನಟ ಎನ್‍ಟಿಆರ್ ಚಿತ್ರ ನಿಂತು ಹೋಗುವುದರಿಂದ ತಂಡಕ್ಕೆ ಉಂಟಾಗಬಹುದಾದ ನಷ್ಟವನ್ನು ತಪ್ಪಿಸಲು ಶನಿವಾರದಿಂದಲೇ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ.

    ರಾಧಾ ಕೃಷ್ಣ ನಿರ್ಮಾಣದ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದೆ. ಹರಿಕೃಷ್ಣರ ಹಠಾತ್ ಮರಣದಿಂದ ಪುತ್ರ ಎನ್‍ಟಿಆರ್ ತೀವ್ರವಾಗಿ ನೊಂದಿದ್ದರು. ಇದರಿಂದ ಈ ಹಿಂದೆ ಚಿತ್ರತಂಡ ತಿಳಿದಂತೆ ದಸರಾಗೆ ಸಿನಿಮಾ ಬಿಡುಗಡೆ ಕಷ್ಟಸಾಧ್ಯ ಎಂಬ ಮಾತು ಕೇಳಿಬಂದಿತ್ತು. ಆದರೆ ತೀವ್ರ ದುಃಖದ ನಡುವೆಯೂ ತಮ್ಮ ಸಿನಿಮಾ ಪೂರ್ಣಗೊಳಿಸಲು ಎನ್‍ಟಿಆರ್ ಮುಂದಾಗಿದ್ದಾರೆ. ಇದೇ ಆಕ್ಟೋಬರ್ 11ಕ್ಕೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆ ಇದೆ.

    ಸದ್ಯ ಹರಿಕೃಷ್ಣರ ಸಾವಿನ ಶಾಕ್ ನಲ್ಲಿರುವ ಎನ್‍ಟಿಆರ್ ಕುಟುಂಬಕ್ಕೆ ಹರಿಕೃಷ್ಣ ಸಹೋದರ ನಟ ಬಾಲಕೃಷ್ಣ ಹತ್ತಿರವಾಗಿದ್ದಾರೆ ಎಂಬ ಮಾತು ಟಾಲಿವುಡ್‍ನಲ್ಲಿ ಕೇಳಿಬಂದಿದೆ. ಅಲ್ಲದೇ ಇದೂವರೆಗೂ ಇದ್ದ ಎಲ್ಲಾ ಮನಸ್ತಾಪಗಳನ್ನು ಮರೆತು ಎನ್‍ಟಿಆರ್ ರ `ಅರವಿಂದ ಸಮೇತ’ ಸಿನಿಮಾ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಭಾಗವಹಿಸುವ ಸಾಧ್ಯತೆ ಇದೆ. ಇದನ್ನು  ಓದಿ: ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ಟಾಲಿವುಡ್ ಸ್ಟಾರ್ ನಿರ್ದೇಶಕರಾಗಿರುವ ತ್ರಿವಿಕ್ರಮ್ ಹಾಗೂ ಎನ್‍ಟಿಆರ್ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಿನಿಮಾ ಆಡಿಯೋ ಬಿಡುಗೆಡಯಾಗುವ ಮಾಡುವ ಕುರಿತು ಚಿತ್ರತಂಡ ಮಾಹಿತಿ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಿಯಾದ್‍ಗೆ ಉದ್ಯೋಗಕ್ಕೆ ತೆರಳಿದ್ದ ಭಾರತೀಯ ಮಹಿಳೆ ನಿಗೂಢ ಸಾವು!

    ರಿಯಾದ್‍ಗೆ ಉದ್ಯೋಗಕ್ಕೆ ತೆರಳಿದ್ದ ಭಾರತೀಯ ಮಹಿಳೆ ನಿಗೂಢ ಸಾವು!

    ಹೈದರಾಬಾದ್: ಸೌದಿ ಅರೇಬಿಯಾದ ರಿಯಾದ್‍ನಲ್ಲಿ ಭಾರತದ ಮಹಿಳೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಶಾಹಿನ್(41) ನಿಗೂಢವಾಗಿ ಮೃತಪಟ್ಟ ಮಹಿಳೆ. ಈ ಘಟನೆ ಕುರಿತು ಮೃತಪಟ್ಟ ಮಹಿಳೆಯ ಕುಟುಂಬದವರು ಮಾಲೀಕನೇ ಶಾಹಿನ್ ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಸಹಾಯವನ್ನು ಕೋರಿದ್ದು ಮೃತ ದೇಹವನ್ನು ಸೌದಿ ಅರೇಬಿಯಾದಿಂದ ವಾಪಸ್ಸು ತರಲು ಮನವಿ ಮಾಡಿಕೊಂಡಿದ್ದಾರೆ.

    ಸೌದಿ ಅರೇಬಿಯಾದಲ್ಲಿ ಉದ್ಯೋಗವಿದ್ದು ತಿಂಗಳಿಗೆ 20 ಸಾವಿರ ಸಂಬಳ ಇದೆ ಎಂದು ಮಧ್ಯವರ್ತಿಯೊಬ್ಬರು ನನ್ನ ತಾಯಿಗೆ ತಿಳಿಸಿದ್ದರು. ಮಧ್ಯವರ್ತಿಯ ಮಾತನ್ನು ನಂಬಿ ದುಬೈನಲ್ಲಿ ಕೆಲಸ ಮಾಡುತ್ತಿದ್ದ ತಾಯಿ ರಿಯಾದ್ ಗೆ ತೆರಳಿದ್ದರು. ಆದರೆ 20 ಸಾವಿರ ಸಂಬಳ ನೀಡದೇ 16 ಸಾವಿರ ಸಂಬಳ ನೀಡುತ್ತಿದ್ದರು ಎಂದು ಮೃತ ಶಾಹಿನ ಮಗಳಾದ ಬಸೀನ ತಿಳಿಸಿದ್ದಾರೆ.

    ತಾಯಿ ಶಾಹಿನ್ ಸೌದಿ ಅರೇಬಿಯಾ ತಲುಪಿದ ನಂತರ ಅವರ ಮಾಲೀಕ ತಾಯಿಯನ್ನು ಮನೆ ಕೆಲಸಕ್ಕೆ ನೇಮಕ ಮಾಡಿ ತನ್ನ ಮಕ್ಕಳನ್ನು ನೋಡಿಕೊಳ್ಳಲು ಹೇಳಿದ್ದಾನೆ. ಈ ನಡುವೆ ತನ್ನ ತಾಯಿಯ ಆರೋಗ್ಯ ಜುಲೈನಿಂದ ಕ್ಷೀಣಿಸಲು ಆರಂಭವಾಯಿತು. ಹೀಗಾಗಿ ತನ್ನ ತಾಯಿ ಭಾರತಕ್ಕೆ ಮರಳಿ ಕಳುಹಿಸಲು ಅವರ ಮಾಲೀಕನೊಂದಿಗೆ ಮನವಿ ಮಾಡಲು ನನ್ನನ್ನು ಕೇಳಿಕೊಂಡರು. ನಾನು ಮಾಲೀಕನನ್ನು ಕೇಳಿದಾಗ ತಾಯಿಯನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದ. ಆದರೆ ಮಾಲೀಕ ತಾಯಿಗೆ ನಿತ್ಯವು ಕಿರುಕುಳವನ್ನು ನೀಡಿ ಬೆದರಿಕೆ ಹಾಕುತ್ತಿದ್ದನು. ಶುಕ್ರವಾರ ಮಾಲೀಕ ಕರೆ ಮಾಡಿ ತಾಯಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದ. ಈ ವೇಳೆ ಮೃತಪಟ್ಟಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಕ್ಕೆ ಕರೆಯನ್ನು ಕಡಿತಗೊಳಿಸಿದ್ದಾನೆ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂದು ಬಸೀನ ಶಂಕೆ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ಹೈದರಾಬಾದ್: ನಟ ಹಾಗೂ ರಾಜಕಾರಣಿ ನಂದಮೂರಿ ಹರಿಕೃಷ್ಣ ಅವರ ಮೃತ ದೇಹದ ಜೊತೆ ನಾಲ್ಕು ಜನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಕುರಿತು ಭಾರೀ ಟೀಕೆ ಕೇಳಿ ಬರುತ್ತಿದ್ದಂತೆ ಆಸ್ಪತ್ರೆ ಆಡಳಿತ ಮಂಡಳಿ ನಾಲ್ವರನ್ನು ಕೆಲಸದಿಂದ ವಜಾಗೊಳಿಸಿದೆ.

    ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆಗಿನ ಸೆಲ್ಫಿ ಫೋಟೋ ನೋಡಿದ್ದ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಯ ಅವರನ್ನು ಕೆಲಸದಿಂದ ತೆಗೆದು ಹಾಕುವಂತೆ ಒತ್ತಾಯಿಸಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿ, ಸಾರ್ವಜನಿಕರಲ್ಲಿ ಕ್ಷಮೆ ಕೇಳಿದೆ.

    ನಡೆದದ್ದು ಏನು?
    ಆಗಸ್ಟ್ 29ರಂದು ತೆಲಂಗಾಣದ ನಲ್ಗೊಂಡ ಬಳಿ ಬೀಕರ ಅಪಘಾತ ಸಂಭವಿಸಿ, ನಂದಮೂರಿ ಹರಿಕೃಷ್ಣ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

    ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಒಬ್ಬ ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಮೃತ ದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೊಲೀಸರಿಗೆ ಬೇರೆ ಕೆಲ್ಸ ಇಲ್ಲವೇ: ಪ್ರಿಯಾ ವಾರಿಯರ್ ಕೇಸಲ್ಲಿ ಸುಪ್ರೀಂ ಚಾಟಿ

    ಪೊಲೀಸರಿಗೆ ಬೇರೆ ಕೆಲ್ಸ ಇಲ್ಲವೇ: ಪ್ರಿಯಾ ವಾರಿಯರ್ ಕೇಸಲ್ಲಿ ಸುಪ್ರೀಂ ಚಾಟಿ

    ನವದೆಹಲಿ: ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಕಣ್ಸಸನ್ನೆ ಮಾಡುವ ಮೂಲಕ ಒಂದೇ ದಿನದಲ್ಲಿ ಸ್ಟಾರ್ ಆದ ಪ್ರಿಯಾ ವಾರಿಯಾರ್ ನಟನೆಯ ಚಿತ್ರದ ಹಾಡು ಧಾರ್ಮಿಕ ನಂಬಿಕೆ ಹಾಗೂ ಭಾವನೆಗೆ ಧಕ್ಕೆ ತರುವಂತಿದ್ದು, ಅದ್ದರಿಂದ ಹಾಡನ್ನು ನಿಷೇಧ ಮಾಡಿ ನಟಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಹೈದರಾಬಾದ್ ಮೂಲದ ಕೆಲ ಯುವಕರು ದೂರು ನೀಡಿದ್ದರು. ಈ ದೂರನ್ನು ಸ್ವೀಕರಿಸಿದ ಹೈದರಾಬಾದ್ ಪೊಲೀಸರು ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ಪ್ರಿಯಾ ವಾರಿಯಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಈ ಪ್ರಕರಣ ದಾಖಲಾಗಿದ್ದನ್ನು ಪ್ರಶ್ನಿಸಿ ಚಿತ್ರ ತಂಡ ಸುಪ್ರೀಂ ಮೆಟ್ಟಿಲು ಏರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಸಿನಿಮಾದಲ್ಲಿ ಕಣ್ಣು ಹೊಡೆಯುವುದು ದೈವ ವಿರೋಧಿ ಹಾಗೂ ನೈತಿಕ ವಿರೋಧಿಯೂ ಅಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಪೊಲೀಸರಿಗೆ ಮಾಡಲು ಬೇರೆ ಕೆಲಸವಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದು ಕೇಸ್ ವಜಾಗೊಳಿಸುವಂತೆ ಆದೇಶಿಸಿದ್ದಾರೆ.

    ಏನಿದು ಪ್ರಕರಣ?
    ಒರು ಅಡಾರ್ ಲವ್ ಚಿತ್ರದ ಮಾಣಿಕ್ಯ ಮಲರಾಯ ಪೂವಿ ಹಾಡಿನಲ್ಲಿ ಮುಸಲ್ಮಾನರ ಧಾರ್ಮಿಕ ಭಾವನೆಗೆ ಧಕ್ಕೆ ಆಗುವ ವಿಚಾರಗಳಿವೆ ಎಂದು ಹೈದರಾಬಾದಿನ ಫಲಕ್‍ನಾಮಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮೊಹಮ್ಮದ್ ಅಬ್ದುಲ್ ಖಾನ್ ತನ್ನ ಸ್ನೇಹಿತರ ಜೊತೆ ದೂರು ದಾಖಲಿಸಿದ್ದರು. ಹಾಡಿನಲ್ಲಿ ಪ್ರವಾದಿ ಕೀರ್ತನೆಗಳನ್ನು ಬಳಸಿರುವುದು ಸರಿಯಲ್ಲ ಎಂದು ದೂರಿನಲ್ಲಿ ತಿಳಿಸಿದ್ದರು.

    ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಸೂಚನೆ ನೀಡುವಂತೆ ನಟಿ ಪ್ರಿಯಾ ವರಿಯಾರ್ ಪರವಾಗಿ ಚಿತ್ರ ತಂಡ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಜನವರಿಯಲ್ಲಿ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪೊಲೀಸ್ ತನಿಖೆಗೆ ತಡೆ ನೀಡಿತ್ತು.

    ಮಲಯಾಳಂಯೇತರ ರಾಜ್ಯಗಳಲ್ಲಿ ದೂರು ದಾಖಲಿಸಿರುವವರು ಹಾಡನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಪ್ರವಾದಿ ಹಾಗೂ ಅವರ ಮೊದಲ ಪತ್ನಿ ಖದೀಜಾ ಅವರ ನಡುವಿನ ಪ್ರೀತಿಯನ್ನು ಹಾಡು ಶ್ಲಾಘಿಸುತ್ತದೆ ಎಂದು ಪ್ರಿಯಾ ಪರ ಸಲ್ಲಿಸಿದ್ದ ಅರ್ಜಿಯಲ್ಲಿ ಸ್ಪಷ್ಟನೆ ನೀಡಲಾಗಿತ್ತು. ಇದು ಜಾನಪದ ಹಾಡು. ಜಬ್ಬರ್ ಎಂಬವರು 1978ರಲ್ಲಿ ರಚಿಸಿದ್ದಾರೆ. ಕಳೆದ 40 ವರ್ಷಗಳಿಂದ ಮುಸ್ಲಿಮರು ಇದನ್ನು ಬಳಸುತ್ತಿದ್ದು, ಈಗ ಏಕೆ ವಿರೋಧಿಸುತ್ತಿದ್ದಾರೆ ಎಂದು ಚಿತ್ರ ತಂಡ ಪ್ರಶ್ನಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಾಲಕರ ಜೊತೆ ಮಾತನಾಡಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಎಂಜಿನಿಯರಿಂಗ್ ವಿದ್ಯಾರ್ಥಿ

    ಬಾಲಕರ ಜೊತೆ ಮಾತನಾಡಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಎಂಜಿನಿಯರಿಂಗ್ ವಿದ್ಯಾರ್ಥಿ

    ಹೈದರಾಬಾದ್: 10ನೇ ತರಗತಿ ವಿದ್ಯಾರ್ಥಿನಿ ಬೇರೆ ಬಾಲಕರ ಜೊತೆಗೆ ಮಾತನಾಡುತ್ತಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ತೆಲಂಗಾಣ ಸಂಗ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

    ಮಹಾರಾಷ್ಟ್ರದ ನ್ಯಾಂಡೆಡ್ ನಗರದ ಎಂಜಿನಿಯರಿಂಗ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಅರವಿಂದ್ (20) ಕೊಲೆ ಮಾಡಿದ ಆರೋಪಿ. ಕೆಲವು ದಿನಗಳಿಂದ ಆಕೆಯನ್ನು ಅರವಿಂದ್ ಚುಡಾಯಿಸುತ್ತಿದ್ದ ಎಂದು ವರದಿಯಾಗಿದೆ.

    ಗುರುವಾರ ಚಾಕು ಹಿಡಿದು ಅರವಿಂದ್ ವಿದ್ಯಾರ್ಥಿನಿ ಮನೆಗೆ ಬಂದಿದ್ದನು. ಕೆಲ ಹೊತ್ತು ಆಕೆಯೊಂದಿಗೆ ಮಾತಿನ ಚಕಮಕಿ ನಡೆಸಿ, ಬಳಿಕ ಆಕೆಯ ಕತ್ತಿಗೆ ಚಾಕು ಹಾಕಿದ್ದಾನೆ. ವಿದ್ಯಾರ್ಥಿನಿ ಕಿರುಚಿದ್ದ ಧ್ವನಿ ಕೇಳಿದ ಸ್ಥಳೀಯರು ಬರುತ್ತಿದ್ದಂತೆ, ಆಕೆಯು ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಕುಕ್ಕಟಪಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

    ಆರೋಪಿ ಅರವಿಂದ್‍ನನ್ನು ಸ್ಥಳೀಯರು ಥಳಿಸಿ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿ ಬೇರೆ ಬಾಲಕರ ಜೊತೆ ಮಾತನಾಡುತ್ತಿದ್ದಳು, ಇದರಿಂದ ಕೊಪಗೊಂಡು ನಾನು ಕೊಲೆ ಮಾಡಿದ್ದೇನೆ ಎಂದು ತನಿಖೆಯ ವೇಳೆ ಅರವಿಂದ್ ಒಪ್ಪಿಕೊಂಡಿದ್ದಾನೆ ಎಂದು ತನಿಖಾಧಿಕಾರಿ ಸತೀಶ್ ರೆಡ್ಡಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂತೋಷದಿಂದ ರಾಖಿ ಹಬ್ಬ ಆಚರಿಸಿ ಕಾಲೇಜಿಗೆ ಹೋಗಿ ನೇಣಿಗೆ ಶರಣಾದ ವಿದ್ಯಾರ್ಥಿನಿ

    ಸಂತೋಷದಿಂದ ರಾಖಿ ಹಬ್ಬ ಆಚರಿಸಿ ಕಾಲೇಜಿಗೆ ಹೋಗಿ ನೇಣಿಗೆ ಶರಣಾದ ವಿದ್ಯಾರ್ಥಿನಿ

    ಹೈದರಾಬಾದ್: ಕಾಲೇಜಿನಲ್ಲಿ ಶುಲ್ಕ ಪಾವತಿಸುವಂತೆ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದಿನ ಸರೋನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

    ಅರ್ಚನಾ (15) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ಚೈತನ್ಯಪುರಿಯ ಶ್ರೀ ಚೈತನ್ಯ ಜೂನಿಯರ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮಂಗಳವಾರ ಕಾಲೇಜಿನಿಂದ ಬಂದು ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಅರ್ಚನಾ ಕಾಲೇಜಿಗೆ ಒಂದು ಲಕ್ಷ ರೂ. ಶುಲ್ಕ ಕಟ್ಟಬೇಕಿತ್ತು. ಪೋಷಕರು ಎರಡು ತಿಂಗಳ ಹಿಂದೆ 50,000 ರೂ. ಶುಲ್ಕ ಮಾತ್ರ ಪಾವತಿಸಿದ್ದರು. ಅರ್ಚನಾ ಭಾನುವಾರ ರಾಖಿ ಹಬ್ಬದ ಪ್ರಯುಕ್ತ ತನ್ನ ಗ್ರಾಮಕ್ಕೆ ಹೋಗಿ ಮರಳಿ ಮಂಗಳವಾರ ಕಾಲೇಜಿಗೆ ಹೋಗಿದ್ದಾಳೆ. ಆಗ ಕಾಲೇಜಿನ ಸಿಬ್ಬಂದಿ ಇನ್ನು ಕೆಲವು ದಿನಗಳಲ್ಲಿ ಉಳಿದ ಶುಲ್ಕವನ್ನು ಪಾವತಿಸಬೇಕೆಂದು ಹೇಳಿದ್ದಾರೆ. ನಂತರ ಅರ್ಚನಾ ಮನನೊಂದು ಹಾಸ್ಟೆಲ್ ರೂಮಿಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ವಿದ್ಯಾರ್ಥಿಗಳು ಮಧ್ಯಾಹ್ನ ಊಟಕ್ಕೆಂದು ಹಾಸ್ಟೆಲಿನ ರೂಮಿಗೆ ಬಂದಿದ್ದಾರೆ. ಆಗ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚನಾ ಪತ್ತೆಯಾಗಿದ್ದಾಳೆ. ಕೂಡಲೇ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಗೆ ತಿಳಿಸಿದ್ದಾರೆ. ನಂತರ ಅರ್ಚನಾಳನ್ನು ಸಮೀಪದ ಓಮ್ನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿಯೇ ಆಕೆ ಮೃತಪಟ್ಟಿದ್ದಳು. ಬಳಿಕ ಅಲ್ಲಿಂದ ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಪೊಲೀಸರು ಆಸ್ಪತ್ರೆಗೆ ಬಂದು ಅರ್ಚನಾ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ನಾವು ಒಂದು ವಾರದಲ್ಲೇ ಉಳಿದ ಶುಲ್ಕವನ್ನು ಪಾವತಿಸಲು ಸಿದ್ಧರಿದ್ದೆವು. ಆದರೆ ಕಾಲೇಜಿನ ಆಡಳಿತ ಮಂಡಳಿ ನಮ್ಮ ಮಗಳಿಗೆ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳುವ ರೀತಿ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

    ಶುಲ್ಕದ ಹೆಸರಿನಲ್ಲಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದೆ. ಆದ್ದರಿಂದ ಈ ಬಗ್ಗೆ ತನಿಖೆ ಮಾಡಿ ಕಾಲೇಜಿನ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ವಿದ್ಯಾರ್ಥಿ ಸಂಘಗಳು ಪ್ರತಿಭಟನೆಯನ್ನು ಕೂಡ ಮಾಡಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದ ನಂದಮೂರಿ ಹರಿಕೃಷ್ಣ

    ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದ ನಂದಮೂರಿ ಹರಿಕೃಷ್ಣ

    ಹೈದರಾಬಾದ್: ಟಾಲಿವುಡ್ ನಟ, ಆಂಧ್ರಪ್ರದೇಶ ಮಾಜಿ ಸಿಎಂ ನಂದಮೂರಿ ರಾಮಾರಾವ್ ಅವರ ಪುತ್ರ ಹರಿಕೃಷ್ಣರ ಆಕಾಲಿಕ ಮರಣ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ತೀವ್ರ ದು:ಖ ಉಂಟು ಮಾಡಿದ್ದು, ಕಳೆದ ಕೆಲ ದಿನಗಳ ಹಿಂದೆ ಹರಿಕೃಷ್ಣ ಅವರು ಅಭಿಮಾನಿಗಳಿಗೆ ಬರೆದ ಪತ್ರ ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ.

    ಹರಿಕೃಷ್ಣ ಅವರು ಬದುಕಿದ್ದರೆ ಸೆಪ್ಟೆಂಬರ್ 2ರಂದು 62ಕ್ಕೆ ವಸಂತಕ್ಕೆ ಕಾಲಿಡುತ್ತಿದ್ದರು. ಈ ವೇಳೆ ಪ್ರತಿ ವರ್ಷದಂತೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿ ತಮ್ಮ ನೆಚ್ಚಿನ ನಟನ ಹುಟ್ಟಹಬ್ಬ ಆಚರಿಸುತ್ತಿದ್ದರು. ಇದನ್ನು ತಿಳಿದಿದ್ದ ಹರಿಕೃಷ್ಣ ಅವರು ಈ ಬಾರಿ ಕೇರಳದಲ್ಲಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಅಭಿಮಾನಿಗಳು ತಮ್ಮ ಹುಟ್ಟು ಹಬ್ಬ ಆಚರಣೆ ಮಾಡದೆ ಆ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಓದಿ:  ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳಿ ನಂದಮೂರಿ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಸಂತಾಪ

    https://twitter.com/TollyBattel/status/1034655323934535680

    ಈ ಕುರಿತು ತಮ್ಮ ಅಭಿಮಾನಿಗಳಿಗೆ ಸ್ವತಃ ಒಂದು ಪುಟದ ಪತ್ರ ಬರೆದಿದ್ದ ಅವರು, ಆಂಧ್ರಪ್ರದೇಶ ಕೆಲ ಜಿಲ್ಲೆಗಳು ಹಾಗೂ ಕೇರಳದಲ್ಲಿ ಪ್ರವಾಹದಿಂದ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಹಲವರು ನಿರಾಶ್ರಿತರಾಗಿದ್ದಾರೆ. ಅದ್ದರಿಂದ ತಮ್ಮ ಹುಟ್ಟುಹಬ್ಬದಂದು ಹಾಕುವ ಫ್ಲೆಕ್ಸ್, ಹೂವಿನ ಹಾರ, ಕೇಕ್‍ಗೆ ವೆಚ್ಚ ಮಾಡುವ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಇದನ್ನು ಓದಿ: ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಸದ್ಯ ಹರಿಕೃಷ್ಣ ಅವರ ಪಾರ್ಥಿಕ ಶರೀರವನ್ನು ಹೈದರಾಬಾದ್‍ನಲ್ಲಿರುವ ಅವರ ನಿವಾಸಕ್ಕೆ ಸಾಗಿಸಲಾಗಿದೆ. ಭಾರತದ ಹಲವು ಚಿತ್ರರಂಗದ ಗಣ್ಯರು ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಹರಿಕೃಷ್ಣ ಅವರ ಅಂತಿಮ ಸಂಸ್ಕಾರಗಳು ನಾಳೆ ನಡೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಈ ಹಿಂದೆ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಜಾನಕಿರಾಮ್‍ರ ಪಕ್ಕದಲ್ಲೇ ಹರಿಕೃಷ್ಣ ಸಂಸ್ಕಾರ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಹರಿಕೃಷ್ಣ ಅವರ ಅಂತಿಮ ಸಂಸ್ಕಾರಕ್ಕೆ ತೆಲಂಗಾಣ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=2283Fb13–Y

     

  • ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‍ಟಿ ರಾಮರಾವ್ ಕುಟುಂಬಕ್ಕೆ ನಲ್ಗೊಂಡ ಹೆದ್ದಾರಿ ಮಾರ್ಗ ಶಾಪವೇ ಎನ್ನುವ ಚರ್ಚೆ ಈಗ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಕುಟುಂಬದ ಮೂವರು ಸದಸ್ಯರಿಗೂ ಇದೇ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಈ ಪ್ರಶ್ನೆ ಮತ್ತೆ ಎದ್ದಿದೆ.

    ಇಂದು ನಡೆದ ಅಪಘಾತದಲ್ಲಿ ನಟ ಹರಿಕೃಷ್ಣ ಸಾವನ್ನಪ್ಪಿದ್ದು, ಎನ್‍ಟಿಆರ್ ಕುಟುಂಬಸ್ಥರು ಸೇರಿದಂತೆ ಅಭಿಮಾನಿಗಳಿಗೆ ತೀವ್ರ ಅಘಾತವನ್ನುಂಟು ಮಾಡಿದೆ.

    ಮಾಜಿ ಸಿಎಂ, ನಟ ಎನ್‍ಟಿಆರ್ ಸೇರಿದಂತೆ ಇಡೀ ಕುಟುಂಬ ಸದಸ್ಯರಿಗೆ ಕಾರು ಚಾಲನೆಯ ಕುರಿತು ಹೆಚ್ಚಿನ ಆಸಕ್ತಿ ಇದ್ದು, ನಟರಾಗಿದ್ದ ಎನ್‍ಟಿಆರ್ ರಾಜಕೀಯ ಪ್ರವೇಶ ಮಾಡಿ `ಚೈತನ್ಯ ಯಾತ್ರೆ’ ಆರಂಭಿಸಿದ ವೇಳೆ ಸ್ವತಃ ಎನ್‍ಟಿಆರ್ ಪುತ್ರ ಹರಿಕೃಷ್ಣ ಅವರೇ ಯಾತ್ರೆಯ ವಾಹನ ಚಲಾಯಿಸಿ ಶಕ್ತಿ ತುಂಬಿದ್ದರು. ಅಲ್ಲದೇ ತಂದೆ ಸಿನಿಮಾ ಚಿತ್ರೀಕರಣಕ್ಕೆ ತೆರಳುವ ವೇಳೆಯೂ ಅವರೇ ಕಾರು ಚಲಾಯಿಸುತ್ತಿದ್ದರು.

    ಆದರೆ ಇಂದು ನಡೆದ ಅಪಘಾತ ಮತ್ತೆ ಎನ್‍ಟಿಆರ್ ಕುಟುಂಬಸ್ಥರನ್ನು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. 2009 ರಲ್ಲಿಯೂ ಸಹ ನಲ್ಗೊಂಡ ಜಿಲ್ಲೆಯ ಮಾರ್ಗದಲ್ಲೇ ಹರಿಕೃಷ್ಣ ಮಗ ಜೂನಿಯರ್ ಎನ್‍ಟಿಆರ್ ಅಪಘಾತದಲ್ಲಿ ಗಾಯಗೊಂಡಿದ್ದರು. ಅಲ್ಲದೇ 4 ವರ್ಷಗಳ ಹಿಂದೆ ಹರಿಕೃಷ್ಣ ಮಗ ಜಾನಕಿರಾಮ್ ಕೂಡ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಸದ್ಯ ಈ ಘಟನೆಗಳಿಂದ ಎನ್‍ಟಿಆಆರ್ ಅಭಿಮಾನಿಗಳು ಸಹ ಶಾಕ್ ಗೆ ಒಳಗಾಗಿದ್ದು, ನಲ್ಗೊಂಡ ಮಾರ್ಗವೇ ಶಾಪವಾಗಿದೆಯೇ ಎನ್ನುವ ಪ್ರಶ್ನೆಯನ್ನು ಇಟ್ಟು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    https://twitter.com/Mohansainikpuri/status/1034651482979590144

    ಅಪಘಾತದಲ್ಲಿ ಹರಿಕೃಷ್ಣ ಸಾವನ್ನಪ್ಪಿರುವ ಸುದ್ದಿ ಹೊರಬೀಳುತ್ತಿದಂತೆ ಪುತ್ರರಾದ ನಟ ಜೂ.ಎನ್‍ಟಿಆರ್, ಕಲ್ಯಾಣ ರಾಮ್ ಹಾಗೂ ಕುಟುಂಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಅಲ್ಲದೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೂಡ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ಧಾವಿಸಿದ್ದಾರೆ. ಹರಿಕೃಷ್ಣ ಅವರ ಸಾವಿಗೆ ಟಾಲಿವುಡ್ ಕಲಾವಿದರು ಸೇರಿದಂತೆ ಸ್ಯಾಂಡಲ್‍ವುಡ್‍ನ ಹಲವು ನಟರು ಸಂತಾಪ ಸೂಚಿಸಿದ್ದಾರೆ. ಇದನ್ನು ಓದಿ: ತೆಲಂಗಾಣದ ನಲ್ಗೊಂಡ ಬಳಿ ಅಪಘಾತ – ಜ್ಯೂನಿಯರ್ NTR ತಂದೆ ನಂದಮೂರಿ ಹರಿಕೃಷ್ಣ ದುರ್ಮರಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೆಲಂಗಾಣದ ನಲ್ಗೊಂಡ ಬಳಿ ಅಪಘಾತ – ಜ್ಯೂನಿಯರ್ NTR ತಂದೆ ನಂದಮೂರಿ ಹರಿಕೃಷ್ಣ ದುರ್ಮರಣ

    ತೆಲಂಗಾಣದ ನಲ್ಗೊಂಡ ಬಳಿ ಅಪಘಾತ – ಜ್ಯೂನಿಯರ್ NTR ತಂದೆ ನಂದಮೂರಿ ಹರಿಕೃಷ್ಣ ದುರ್ಮರಣ

    ಹೈದರಾಬಾದ್: ತೆಲಂಗಾಣದ ನಲ್ಗೊಂಡ ಬಳಿ ಬೀಕರ ಅಪಘಾತ ಸಂಭವಿಸಿದ್ದು, ಜ್ಯೂನಿಯರ್ ಎನ್ ಟಿಆರ್ ಅವರ ತಂದೆ ನಂದಮೂರಿ ಹರಿಕೃಷ್ಣ(61) ಮೃತಪಟ್ಟಿದ್ದಾರೆ.

    ನಂದಮೂರಿ ಹರಿಕೃಷ್ಣ ಪರಿಚಯರಸ್ಥರ ಮದುವೆಗೆಂದು ನೆಲ್ಲೂರು ಜಿಲ್ಲೆಯ ಕಾವಲಿಗೆ ಹೋಗಿದ್ದರು. ಮದುವೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದಿದೆ.

    ಕಾರ್ ಪಲ್ಟಿ ಹೊಡೆದ ಪರಿಣಾಮ ಹರಿಕೃಷ್ಣ ಅವರ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹರಿಕೃಷ್ಣ ಪುತ್ರ ಜ್ಯೂನಿಯರ್ ಎನ್ ಟಿಆರ್ ಮತ್ತು ಕಲ್ಯಾಣ ಕುಮಾರ್ ಆಸ್ಪತ್ರೆಗೆ ಧಾವಿಸಿದ್ದಾರೆ. ಹರಿಕೃಷ್ಣ ಅವರು ಪ್ರಸ್ತುತ ಈಗಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಾಮೈದ ಆಗಿದ್ದಾರೆ. ಆದ್ದರಿಂದ ಚಂದ್ರಬಾಬು ನಾಯ್ಡು ಈ ದಿನದ ಎಲ್ಲ ಕಾರ್ಯಕ್ರಮವನ್ನು ರದ್ದು ಮಾಡಿ ಹೈದರಾಬಾದ್ ನತ್ತ ಧಾವಿಸಿದ್ದಾರೆ.

    ನಂದಮೂರಿ ಹರಿಕೃಷ್ಣ ಅವರು ಎನ್‍ಟಿ ರಾಮ್ ರಾವ್ ಅವರ ಹಿರಿಯ ಪುತ್ರನಾಗಿದ್ದು, ತೆಲುಗಿನ ಸೀತಯ್ಯ ಸೇರಿದಂತೆ ಹತ್ತಾರು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ನಿರ್ಮಾಪಕರೂ ಕೂಡ ಆಗಿದ್ದು, ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv