Tag: Hyderabad

  • ನಿಜ ಜೀವನದಲ್ಲೂ ಹೀರೋ ಆದ ಬಾಹುಬಲಿ

    ನಿಜ ಜೀವನದಲ್ಲೂ ಹೀರೋ ಆದ ಬಾಹುಬಲಿ

    ಹೈದರಾಬಾದ್: ಚಿತ್ರರಂಗದಲ್ಲಿ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ನೊಂದವರಿಗೆ ಮಾಡುತ್ತಿರುತ್ತಾರೆ. ಅದೇ ರೀತಿ ಈಗ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಚಾರಿಟಿಯೊಂದಕ್ಕೆ 10 ಲಕ್ಷ ರೂ. ದಾನ ಮಾಡಿದ್ದಾರೆ.

    ಪ್ರಭಾಸ ಪ್ರತಿ ವರ್ಷವೂ ಅವರು ಗಳಿಸುವ ಆದಾಯದಿಂದ ಲಕ್ಷಾಂತರ ರೂಪಾಯಿಗಳನ್ನು ಚಾರಿಟಿಗಳಿಗೆ ದಾನ ಮಾಡುತ್ತಾರೆ ಎಂದು ತಿಳಿದು ಬಂದಿದೆ. ಆದರೆ ಇತ್ತೀಚೆಗೆ ಪ್ರಭಾಸ್ ಅವರು ನಲ್ಗೊಂಡ ಜಿಲ್ಲೆಯ ಅಂಧ ಶಾಲೆಗೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ.

    ಪ್ರಭಾಸ್ ಅಲ್ಲಿನ ಅಂಧ ಮಕ್ಕಳಿಗೋಸ್ಕರ ಸುಮಾರು 10 ಲಕ್ಷ ರೂ. ಅನುದಾನ ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರು ಮಕ್ಕಳೊಂದಿಗೆ ಕೆಲ ಸಮಯವನ್ನು ಕಳೆದಿದ್ದಾರೆ. ಇದರಿಂದ ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

    ಸದ್ಯಕ್ಕೆ ಪ್ರಭಾಸ್ ಬಹು ನೀರೀಕ್ಷಿತ `ಸಾಹೋ’ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್, ನೀಲ್ ನಿತಿನ್ ಮುಖೇಶ್ ಮತ್ತು ಜಾಕಿ ಶ್ರಾಫ್ ಪ್ರಮುಖ ಗಣ್ಯರು ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಮೂರು ಭಾಷೆಗಳಿಲ್ಲಿ ಮೂಡಿಬರಲಿದೆ. ಸಾಹೋ ಸಿನಿಮಾ ಮುಂದಿನ ವರ್ಷ ತೆರೆಕಾಣುವ ಸಾಧ್ಯತೆಗಳಿವೆ.

  • ಸಾನ್ವಿ ಟೀಚರ್ ರಶ್ಮಿಕಾ ಮಂದಣ್ಣ ‘ಗೀತಾ ಗೋವಿಂದಂ’ ಟೀಸರ್ ಸೂಪರ್ ಹಿಟ್!

    ಸಾನ್ವಿ ಟೀಚರ್ ರಶ್ಮಿಕಾ ಮಂದಣ್ಣ ‘ಗೀತಾ ಗೋವಿಂದಂ’ ಟೀಸರ್ ಸೂಪರ್ ಹಿಟ್!

    ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ ನಟನೆಯ ತೆಲುಗು ಸಿನಿಮಾ `ಗೀತಾ ಗೋವಿಂದಂ’ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಟೀಸರ್ ಬಿಡುಗಡೆಯಾದ 7 ಗಂಟೆಯಲ್ಲಿ 14 ಲಕ್ಷ ವ್ಯೂ ಆಗಿದ್ದು, ನಂ.1 ಟ್ರೆಂಡಿಂಗ್ ನಲ್ಲಿದೆ. ಕನ್ನಡದ ವರನಟ ರಾಜ್ ಕುಮಾರ್ ಅವರ ಎಂದೆಂದೂ ನಿನ್ನನು ಮರೆತು ನಾನಿರಲಾರೆ… ಹಾಡಿನ ತೆಲುಗು ಟ್ಯೂನ್ ನೊಂದಿಗೆ ಟೀಸರ್ ಆರಂಭವಾಗುತ್ತದೆ.

    ಬ್ಲಾಕ್ ಆಂಡ್ ವೈಟ್ ದೃಶ್ಯಗಳಿಂದ ಆರಂಭವಾಗುವ ದೃಶ್ಯಗಳಲ್ಲಿ ರಶ್ಮಿಕಾ ಮಂದಣ್ಣ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಅವರಿಗೆ ಜೋಡಿಯಾಗಿರುವ ನಟ ವಿಜಯ್ ದೇವರಕೊಂಡ ಜೋಡಿ ಅಭಿಮಾನಿಗಳಿಗೆ ಇಷ್ಟವಾಗುತ್ತದೆ. ಅಪ್ಪಟ ಹಳ್ಳಿ ಯುವತಿಯ ದೃಶ್ಯದಲ್ಲಿ ಪತಿ, ಪತ್ನಿಯ ಪ್ರಣಯದ ದೃಶ್ಯಗಳು ಮೂಡಿ ಬಂದಿದೆ. ಆದರೆ ಮರುಕ್ಷಣದಲ್ಲಿ ಇದು ಹೀರೋ ಕನಸು ಮಾತ್ರ ಎಂಬುದನ್ನು ರಿವೀಲ್ ಮಾಡಲಾಗಿದೆ. ಇದರೊಂದಿಗೆ ರಶ್ಮಿಕಾ ಮಂದಣ್ಣ ಹೀರೋಗೆ ನೀಡುವ ಖಡಕ್ ವಾರ್ನಿಂಗ್ ನೋಡುಗರಿಗೆ ಇಷ್ಟವಾದರೆ, ಚಿತ್ರದ ನಾಯಕ ತನ್ನ ಪ್ರೇಯಸಿಯನ್ನು ಗೆಲ್ಲಲು ಪಡುವ ಪ್ರಯತ್ನ ನಗು ಮೂಡಿಸುತ್ತದೆ.

    ರೊಮ್ಯಾಂಟಿಕ್, ಕಾಮಿಡಿ ಎಳೆಯೊಂದಿಗೆ ಯುವ ಮನಸ್ಸುಗಳ ಪ್ರೇಮ ಕಥೆಯನ್ನು ಚಿತ್ರ ಹೊಂದಿದೆ. ಮೇಡಂ ಮೇಡಂ ಎಂದು ರಶ್ಮಿಕಾ ಹಿಂದೆ ಸುತ್ತುವ ಪಾತ್ರದಲ್ಲಿ ವಿಜಯ್ ದೇವರಕೊಂಡ ಗಮನಸೆಳೆದರೆ, ಖಡಕ್ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ಮಿಂಚಿದ್ದಾರೆ. ಟಾಲಿವುಡ್ ನಲ್ಲಿ ಸಾಕಷ್ಟು ಅವಕಾಶ ಪಡೆದಿರುವ ರಶ್ಮಿಕಾ ಮಂದಣ್ಣ ಅವರಿಗೆ ಇದು ತೆಲುಗಿನ 2ನೇ ಸಿನಿಮಾ ಆಗಿದೆ. ಈ ಹಿಂದೆ ರಶ್ಮಿಕಾ ತೆಲುಗಿನ ಚಲೋ ಸಿನಿಮಾದ ಮೂಲಕ ಟಾಲಿವುಡ್ ನಲ್ಲಿ ಹೆಚ್ಚಿನ ಅಭಿಮಾನಿಗಳನ್ನು ಗಳಿಸಿದ್ದರು. ಜೊತೆಗೆ ಗಣೇಶ್ ಜೊತೆ ಚಮಕ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು.

    ಚಿತ್ರ ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದು, ಗೋಪಿ ಸುಂದರ್ ಸಂಗೀತ ನೀಡಿದ್ದಾರೆ. ಟೀಸರ್ ಮೂಲಕವೇ ಸಿನಿಮಾ ಸೂಪರ್ ಹಿಟ್ ಆಗುವ ಭರವಸೆ ಮೂಡಿಸಿದ್ದು, ಚಿತ್ರದ ಆಡಿಯೋ ಜುಲೈ 29ರಂದು ರಿಲೀಸ್ ಆಗಲಿದೆ.

  • ಉಡುಪಿ ಸರ್ಕಾರಿ ಶಿಕ್ಷಕನ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ವಿವಿಎಸ್ ಲಕ್ಷ್ಮಣ್

    ಉಡುಪಿ ಸರ್ಕಾರಿ ಶಿಕ್ಷಕನ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ವಿವಿಎಸ್ ಲಕ್ಷ್ಮಣ್

    ಹೈದರಾಬಾದ್/ಉಡುಪಿ: ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ನೀಡಲು ತಾವೇ ಬಸ್ ಚಾಲಕರಾಗಿರುವ ಫೋಟೋ ಟ್ವೀಟ್ ಮಾಡಿ ಟೀಂ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಾಳಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು 6 ಕಿ.ಮೀ. ನಡೆದು ಹೋಗುವ ಅನಿವಾರ್ಯತೆ ಇತ್ತು. ಈ ಸಮಸ್ಯೆಯಿಂದ ಶಾಲೆಗೆ ಆಗಮಿಸುತ್ತಿದ್ದ ವಿದ್ಯಾರ್ಥಿಗಳ ಸಂಖ್ಯೆ ಕ್ರಮೇಣ ಕಡಿಮೆಯಾಗಿತ್ತು. ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ನೀಡಲು ಮುಂದಾದ ಶಾಲೆಯ ಶಿಕ್ಷಕ ರಾಜರಾಮ್ ತಾವೇ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ.

    ಬಸ್ ಖರೀದಿಗೆ ಯೋಚನೆ ಮಾಡಿದ್ದ ರಾಜರಾಮ್ ಅವರು ತಮ್ಮ ಶಾಲೆಯ ಹಳೆಯ ವಿದ್ಯಾರ್ಥಿಗಳ, ಶಿಕ್ಷಕರ ಸಹಾಯ ಪಡೆದು ಖರೀದಿ ಮಾಡಿದ್ದಾರೆ. ಖರೀದಿ ಏನೋ ಆಯ್ತು ಚಾಲಕನನನ್ನು ನೇಮಿಸಬೇಕಾದರೆ ಪ್ರತಿ ತಿಂಗಳು 7 ಸಾವಿರ ರೂ. ಸಂಬಳ ನೀಡಬೇಕಿತ್ತು. ಸದ್ಯದ ಆರ್ಥಿಕ ಸಂಪನ್ಮೂಲದಲ್ಲಿ ಇದು ಕಷ್ಟವಾದ ಕಾರಣ ರಾಜರಾಮ್ ಅವರೇ ಚಾಲಕರಾಗಿದ್ದಾರೆ. ಶಾಲೆಯಲ್ಲಿ ಮುಖ್ಯ ಶಿಕ್ಷಕರು ಒಳಗೊಂಡಂತೆ ಮೂವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.

    ಶಾಲೆಯ ಅವಧಿ ಮುಕ್ತಾಯವಾಗುತ್ತಿದ್ದಂತೆ ರಾಜರಾಮ್ ತಾವೇ ಶಾಲಾ ಬಸ್ಸನ್ನು ಚಲಾಯಿಸಿಕೊಂಡು ಪ್ರತಿ ವಿದ್ಯಾರ್ಥಿಯನ್ನು ಮನೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಅಲ್ಲದೇ ಶಾಲೆಯ ಬಸ್ಸಿನ ಇಂಧನ ಹಾಗೂ ಇತರೇ ಖರ್ಚುಗಳನ್ನು ಅವರೇ ಭರಿಸುತ್ತಿದ್ದಾರೆ.

    ಶಾಲೆಯ ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ಪಾಠ ಮಾಡುವುದರೊಂದಿಗೆ ದೈಹಿಕ ಶಿಕ್ಷಕರು ಸಹ ಆಗಿದ್ದಾರೆ. ಬೆಳಗ್ಗೆ 5.30ಕ್ಕೆ ಕಾರ್ಯ ಪ್ರವೃತ್ತರಾಗುವ ರಾಜರಾಮ್ 6 ಗಂಟೆಯಿಂದ ವಿದ್ಯಾರ್ಥಿಗಳಿಗೆ ಹೈಜಂಪ್, ಬ್ಯಾಡ್ಮಿಂಟನ್ ತರಬೇತಿ ನೀಡುತ್ತಾರೆ. ಬಳಿಕ 7.30ಕ್ಕೆ ಸಿದ್ಧರಾಗಿ 8 ಗಂಟೆಗೆ ಬಸ್ಸಿನ ಚಾಲಕನ ಸೀಟ್‍ನಲ್ಲಿ ಕೂತರೇ ಮತ್ತೆ ಮನೆಗೆ ಹಿಂದಿರುಗುವುದು ಸಂಜೆ 5.30ಕ್ಕೆ. ಶಾಲೆಗೆ ಸುತ್ತಲಿನ ಗ್ರಾಮಗಳಿಂದಲೂ ವಿದ್ಯಾರ್ಥಿಗಳು ಬರುತ್ತಿದ್ದು, ಶಿರಿಯಾರ ಕಲ್ಲುಬೆಟ್ಟು, ಹೊರಳಿಜೆಡ್ಡು, ಅಲ್ತಾರು ಕಾರ್ತಿಬೆಟ್ಟು, ಕಾಜ್ರಳ್ಳಿ, ಮುಸಪುರಿ ಗ್ರಾಮಗಳಿಂದ ತಾವೇ ವಿದ್ಯಾರ್ಥಿಗಳನ್ನು ಕರೆತರುತ್ತಾರೆ.

    ಶಾಲಾ ವಾಹನ ಚಾಲನೆ ಮಾಡಲು ಶಿಕ್ಷಕರು ಪರವಾನಗಿ ಸಹ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಮುಂದಾದ ಬಳಿಕ ಸುತ್ತಮುತ್ತಲಿನ ಗ್ರಾಮದ ಎಲ್ಲಾ ಪೋಷಕರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿದ್ದು, ಶಾಲೆಯಲ್ಲಿ 90 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

  • ಅನುಷ್ಕಾಗೆ ಪ್ರಭಾಸ್‍ನಂತಹ Mr. Perfect ಹುಡುಗ ಸಿಗಲಿ: ಸ್ವೀಟಿ ತಾಯಿ

    ಅನುಷ್ಕಾಗೆ ಪ್ರಭಾಸ್‍ನಂತಹ Mr. Perfect ಹುಡುಗ ಸಿಗಲಿ: ಸ್ವೀಟಿ ತಾಯಿ

    ಹೈದರಾಬಾದ್: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿ, ಕ್ಯೂಟ್ ಹೀರೋ-ಹೀರೋಯಿನ್ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತಾರೆ. ಅದರಲ್ಲೂ `ಬಾಹುಬಲಿ 2 ಚಿತ್ರ ತೆರೆಕಂಡ ನಂತರ ಇವರಿಬ್ಬರ ಆಫ್‍ಸ್ಕ್ರೀನ್ ಕೆಮಿಸ್ಟ್ರಿ ಬಗ್ಗೆ ಗಾಸಿಪ್‍ಗಳು ಹೆಚ್ಚಾಗುತ್ತಲೇ ಇವೆ.

    ಸ್ವಲ್ಪ ದಿನದಿಂದಲೂ ಈ ಜೋಡಿಯ ಬಗ್ಗೆ ಯಾವ ಮಾತುಗಳು ಇರಲಿಲ್ಲ. ಈಗ ಅನುಷ್ಕಾ ತಾಯಿ ಇವರಿಬ್ಬರ ಮದುವೆ ಬಗ್ಗೆ ಮಾತನಾಡಿದ್ದಾರೆ.

    ಸ್ವೀಟಿ ತಾಯಿ ಪ್ರಫುಲ್ಲಾ ಶೆಟ್ಟಿ ಅವರು, ಅನುಷ್ಕಾ ಮತ್ತು ಪ್ರಭಾಸ್ ಇಬ್ಬರು ಒಳ್ಳೆಯ ಜೋಡಿ. ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸುವುದು ನನಗೂ ಇಷ್ಟ. ಅನುಷ್ಕಾಗೆ ಪ್ರಭಾಸ್ ನಂತಹ ಮಿ. ಪರ್ಫೆಕ್ಟ್ ಹುಡುಗ ಸಿಗಲಿ ಎಂದು ನಾನು ಇಷ್ಟ ಪಡುತ್ತೇನೆ. ಆದರೆ ಅವರಿಬ್ಬರು ಒಳ್ಳೆಯ ಸ್ನೇಹಿತರು. ಆದ್ದರಿಂದ ಅವರಿಬ್ಬರ ನಡುವಿನ ರಿಲೇಷನ್ ಶಿಪ್ ಬಗ್ಗೆ ವದಂತಿ ಹಬ್ಬಿಸಬೇಡಿ ಎಂದು ಹೇಳಿದ್ದಾರೆ.

    ಪ್ರಭಾಸ್-ಅನುಷ್ಕಾ ಅಭಿಮಾನಿಗಳು ಮದುವೆಯಾಗುತ್ತಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಈ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ಹೇಳೋ ಮೂಲಕ ಸುದ್ದಿಯನ್ನ ತಳ್ಳಿ ಹಾಕಿದ್ದರು.

    ಸದ್ಯಕ್ಕೆ ಪ್ರಭಾಸ್ `ಸಾಹೋ’ ಸಿನಿಮಾದ ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದಾರೆ. ಸಾಹೋ ಚಿತ್ರವನ್ನು ಸುಜೀತ್ ನಿರ್ದೇಶನ ಮಾಡುತ್ತಿದ್ದು, ಪ್ರಭಾಸ್, ಶ್ರದ್ಧಾ ಕಪೂರ್, ಅರುಣ್ ವಿಜಯ್, ನೀಲ್ ನಿತಿನ್ ಮುಕೇಶ್, ಜಾಕಿ ಶ್ರಾಫ್ ಹಾಗೂ ಲಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ತಮಿಳು, ತೆಲಗು ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

  • 375 ಗ್ರಾಂ ತೂಕದ ಅತೀ ಚಿಕ್ಕ ಮಗು ಜನನ!

    375 ಗ್ರಾಂ ತೂಕದ ಅತೀ ಚಿಕ್ಕ ಮಗು ಜನನ!

    ಹೈದರಾಬಾದ್: ನಗರದಲ್ಲಿ ಆಗ್ನೇಯ ಏಷ್ಯಾದ 375 ಗ್ರಾಂ ತೂಕವುಳ್ಳ ಮಗುವಿಗೆ ತಾಯಿ ಜನ್ಮ ನೀಡಿದ್ದಾರೆ.

    ಹೈದರಾಬಾದ್‍ನಲ್ಲಿರುವ ರೈನ್‍ಬೋ ಆಸ್ಪತ್ರೆಯಲ್ಲಿ 375 ಗ್ರಾಂ ಮಗು ಜನನವಾಗಿದೆ. ವೈದ್ಯರು ಈ ಮಗುವಿನ ತೂಕ ನೋಡಿ ದಂಗಾಗಿದ್ದಾರೆ. ಅಲ್ಲದೇ ಕಡಿಮೆ ತೂಕವಿರುವ ಮಗು ಆರೋಗ್ಯವಾಗಿ ಇರೋದನ್ನು ನೋಡಿದ ಆಸ್ಪತ್ರೆ ಸಿಬ್ಬಂದಿ ಆಶ್ಚರ್ಯಚಕಿತರಾಗಿದ್ದಾರೆ.

    ನಿಖಿತಾ ಹಾಗೂ ಸೌರವ್ ದಂಪತಿಗೆ ಈ ಮಗು ಜನಿಸಿದೆ. ನಿಖಿತಾ ಮೂಲತಃ ಛತ್ತಿಸ್‍ಗಢದವರಾಗಿದ್ದು, ಮಗುವಿನ ತಾಯಿ ನಿಖಿತಾ ಹಾಗೂ ಮಗಳು ಚೆರಿ ಆರೋಗ್ಯಕರವಾಗಿದ್ದಾರೆ ಎಂದು ವರದಿಯಾಗಿದೆ. ಡೆಲಿವರಿ ಸಮಯದಲ್ಲಿ ವೈದ್ಯರು ಈ ಮಗುವನ್ನು ನೋಡಿ ಒಂದು ಕ್ಷಣ ದಂಗಾದರು. ನಂತರ ಮಗು ಆರೋಗ್ಯಕರವಾಗಿದೆ ಎಂದು ತಿಳಿದು ವೈದ್ಯರು ನಿಟ್ಟಸಿರು ಬಿಟ್ಟಿದ್ದಾರೆ.ಸದ್ಯ ಈ ಹೆಣ್ಣು ಮಗು ಯಾವುದೇ ತೊಂದರೆ ಇಲ್ಲದೇ ಸುಖಕರವಾಗಿದೆ ಎಂದು ಹೇಳಲಾಗಿದೆ.

    ಸೌರವ್ ತನ್ನ ಅತ್ಯಂತ ಚಿಕ್ಕ ಮಗುವನ್ನು ಕಂಡು ಸಾಕಷ್ಟು ಖುಷಿಯಾಗಿದ್ದಾರೆ. ಈ ಮಗುವನ್ನು ನಿಖಿತಾ 25 ವಾರದೊಳಗೆ ಜನ್ಮ ನೀಡಿದ್ದಾರೆ. ನಾಲ್ಕು ತಿಂಗಳು ಮೊದಲೇ ಮಗು ಜನಿಸಿದ್ದು, 20 ಸೆ.ಮೀ ಉದ್ದವಿದೆ ಎಂದು ರೈನ್‍ಬೋ ಆಸ್ಪತ್ರೆಯ ಚೇರ್‍ಮೆನ್ ಹಾಗೂ ಎಂಡಿ ರಮೇಶ್ ಕಂಚ್ರಾಲಾ ತಿಳಿಸಿದ್ದಾರೆ.

    ಈ ಹಿಂದೆ ಮುಂಬೈನಲ್ಲಿ ಭಾರತದ ಅತ್ಯಂತ ಚಿಕ್ಕ ಮಗು ಜನಿಸಿತ್ತು. ಆ ಮಗುವಿನ ಹೆಸರು ನಿರ್ವಾನ್ ಆಗಿದ್ದು, ಮುಂಬೈನ ಸೂರ್ಯ ಆಸ್ಪತ್ರೆಯಲ್ಲಿ 5 ತಿಂಗಳಿಗೆ ಜನ್ಮ ಪಡೆದಿತ್ತು. ಮಗುವಿನ ತಾಯಿ ಗರ್ಭವತಿ ಆಗಿ 22ನೇ ವಾರದಲ್ಲಿ ಅಂದರೆ ಮೇ 12, 2017ರಂದು ಜನ್ಮ ನೀಡಿದ್ದರು. ಈ ಮಗು 610 ಗ್ರಾಂ ತೂಕವಿತ್ತು.

  • ಸ್ಮಾರ್ಟ್ ಫೋನಿಗಾಗಿ ವಿದ್ಯಾರ್ಥಿಯನ್ನು ಅಪಹರಿಸಿ ಬರ್ಬರವಾಗಿ ಕೊಂದ ಗೆಳೆಯ!

    ಸ್ಮಾರ್ಟ್ ಫೋನಿಗಾಗಿ ವಿದ್ಯಾರ್ಥಿಯನ್ನು ಅಪಹರಿಸಿ ಬರ್ಬರವಾಗಿ ಕೊಂದ ಗೆಳೆಯ!

    ಹೈದರಾಬಾದ್: ಮೊಬೈಲ್ ಫೋನ್ ಗಾಗಿ ತನ್ನ ಗೆಳೆಯನನ್ನೇ ಅಪಹರಿಸಿ ಬರ್ಬರವಾಗಿ ಕೊಂದು ಹಾಕಿದ ಘಟನೆ ತೆಲಂಗಾಣದ ಹೈದರಾಬಾದ್ ನ ಉಪ್ಪಳ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಪ್ರೇಮ್ (17) ಕೊಲೆಯಾದ ವಿದ್ಯಾರ್ಥಿ. ಶನಿವಾರ ಕಾಲೇಜಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದ. ಮೃತ ಪ್ರೇಮ್ ನ ಸ್ನೇಹಿತ ಆರೋಪಿ ಸಾಗರ್ ನನ್ನು (19) ಪೊಲೀಸರು ಬಂಧಿಸಿದ್ದಾರೆ.

    ಕೊಲೆ ಮಾಡಿದ್ದು ಯಾಕೆ?
    ಆರೋಪಿಯು ಪ್ರೇಮ್ ಬಳಿ ಮೊಬೈಲ್ ಫೋನ್‍ನನ್ನು ಕೊಡುವಂತೆ ಕೇಳಿದ್ದಾನೆ. ಆದರೆ ಇದಕ್ಕೆ ಪ್ರೇಮ್ ನಿರಾಕರಿಸಿದ್ದ. ಹೀಗಾಗಿ ಆತನನ್ನು ಕೊಂದು ಮೊಬೈಲ್ ಫೋನ್ ಪಡೆದುಕೊಳ್ಳಲು ನಿರ್ಧರಿಸಿದ್ದಾನೆ. ಅಲ್ಲದೇ ಶನಿವಾರ ಪ್ರೇಮ್‍ನನ್ನು ರಾಮನಾಥಪುರದ ಕಾಲೇಜಿನಿಂದ ಲಾಂಗ್ ಡ್ರೈವ್ ನೆಪದಲ್ಲಿ ಕರೆದುಕೊಂಡು ಹೋಗಿದ್ದಾನೆ. ಉಪ್ಪಳ ಪ್ರದೇಶದಲ್ಲಿ ಪ್ರೇಮ್ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾನೆ. ಬಳಿಕ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಾಗರ್ ಎಂಬಾತ ಮೂಲತಃ ಅಮೇಜಾನ್ ಡಿಲೆವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಘಟನೆ ಸಂಬಂಧ ಆರೋಪಿಯಿಂದ ಕದ್ದ ಮೊಬೈಲ್, ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಟರ್ ಬಾಟಲ್ ಗಳು ಹಾಗು ಸುಟ್ಟ ಬಟ್ಟೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸಾಗರ್ ಮೂಲತಃ ಹಳೆ ರಾಮನಾಥಪುರದ ನಿವಾಸಿಯಾಗಿದ್ದು, ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾನೆ. ಅದೇ ಪ್ರದೇಶದಲ್ಲಿರುವ ಮೃತ ಪ್ರೇಮ್ ಆರೋಪಿಯ ಸ್ನೇಹಿತನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ಆರೋಪಿಯು ಹತ್ಯೆ ನಂತರ ಮೊಬೈಲನ್ನು ಮಾರಿ ತನ್ನ ಸಾಲವನ್ನು ತೀರಿಸಿಕೊಂಡಿದ್ದಾನೆ. ಆದರೆ ಆ ಮೊಬೈಲ್ 15 ಸಾವಿರ ರೂಪಾಯಿಗೂ ಬೆಲೆ ಬಾಳುವುದಿಲ್ಲ ಎಂದು ಮಲ್ಕಜಗಿರಿ ಪೊಲೀಸ್ ಆಯುಕ್ತರಾದ ಉಮಾಮಹೇಶ್ವರ ಶರ್ಮ ತಿಳಿಸಿದ್ದಾರೆ.

    ಸಿಕ್ಕಿಬಿದ್ದಿದ್ದು ಹೇಗೆ?
    ಶನಿವಾರ ಪ್ರೇಮ್ ಕಾಲೇಜಿನಿಂದ ಮರಳಿ ಬಾರದ ಹಿನ್ನೆಲೆಯಲ್ಲಿ ಪೋಷಕರು ಅನುಮಾನಗೊಂಡು ಸ್ಥಳೀಯ ಉಪ್ಪಾಳ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು. ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಕಾಲೇಜಿನಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಈ ವೇಳೆ ಪ್ರೇಮ್ ತನ್ನ ಸ್ನೇಹಿತನಾದ ಸಾಗರ್ ಎಂಬಾತನೊಂದಿಗೆ ಬೈಕ್ ನಲ್ಲಿ ಹೋಗಿರುವುದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಸಾಗರ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

  • ತಾಯಿ ಸ್ನಾನ ಮಾಡ್ತಿದ್ದಾಗ ಇಣುಕಿ ನೋಡಿದ್ದ ಗೆಳೆಯನ ಕೊಂದೇ ಬಿಟ್ಟ!

    ತಾಯಿ ಸ್ನಾನ ಮಾಡ್ತಿದ್ದಾಗ ಇಣುಕಿ ನೋಡಿದ್ದ ಗೆಳೆಯನ ಕೊಂದೇ ಬಿಟ್ಟ!

    ಹೈದರಾಬಾದ್: ತನ್ನ ತಾಯಿ ಸ್ನಾನ ಮಾಡುತ್ತಿದ್ದಾಗ ಇಣುಕಿ ನೋಡಿದನೆಂದು ಸಿಟ್ಟುಗೊಂಡಿದ್ದ ವ್ಯಕ್ತಿಯೋರ್ವ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಸೆರ್ಲಿಂಗಪಳ್ಳಿ ಎಂಬಲ್ಲಿ ನಡೆದಿದೆ.

    23 ವರ್ಷದ ಯುವಕ ತನ್ನ ಗೆಳೆಯನಿಂದಲೇ ಹತ್ಯೆಯಾಗಿದ್ದಾನೆ. ಕಳೆದ ರಾತ್ರಿ ಕುಡಿದ ಮತ್ತಿನಲ್ಲಿದ್ದ ವೇಳೆ ಯುವಕನ ಕತ್ತು ಸೀಳಿದ್ದಾನೆ.

    ಘಟನೆಯಿಂದ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಆತನ ಸಹೋದರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅದಾಗಲೇ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ.

    ಇತ್ತ ಗೆಳೆಯನ ಕುತ್ತಿಗೆಗೆ ಚೂರಿಯಿಂದ ಇರಿದ ಬಳಿಕ ಕ್ಯಾಬ್ ಡ್ರೈವರ್ ಆಗಿರೋ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಅಲ್ಲದೇ ವಿಚಾರಣೆಯ ವೇಳೆ ಯುವಕ ತನ್ನ ತಾಯಿ ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಕದ್ದು ನೋಡಿದ್ದಾನೆ. ಕಳೆದ ತಿಂಗಳು ಆತ ನೋಡಿರುವುದನ್ನು ನಾನು ಗಮನಿಸಿದ್ದೆನು. ಇದರಿಂದ ಸಿಟ್ಟುಗೊಂಡು ಈ ಕೃತ್ಯ ಎಸಗಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

  • ಕಾಂಗ್ರೆಸ್ ಟಿಕೆಟ್ ಕೊಟ್ರೆ ಸಿಕಂದರಾಬಾದ್‍ನಿಂದ ನಿಲ್ತೀನಿ: ಅಜರುದ್ದೀನ್

    ಕಾಂಗ್ರೆಸ್ ಟಿಕೆಟ್ ಕೊಟ್ರೆ ಸಿಕಂದರಾಬಾದ್‍ನಿಂದ ನಿಲ್ತೀನಿ: ಅಜರುದ್ದೀನ್

    ಹೈದರಾಬಾದ್: 2019ರ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದ ಸಿಕಂದರಬಾದ್‍ನಿಂದ ಸ್ಪರ್ಧಿಸಲು ಬಯಸುವುದಾಗಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್‍ರವರು ಹೇಳಿದ್ದಾರೆ.

    ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಅಂತಿಮ ಎಂದರು.

    ನಾನು ಈ ಕ್ಷೇತ್ರದಲ್ಲಿನ ಹಲವಾರು ಸ್ಥಳಗಳು ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ರೈತರು, ಜನರೊಂದಿಗೆ ಮಾತಾನಾಡಿದ್ದೇನೆ. ಭೇಟಿ ವೇಳೆ ಈ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ. ಜನರಿಗಾಗಿ ಕೆಲಸ ಮಾಡಲು ಇಚ್ಛಿಸುತ್ತೇನೆ. ಆದರೆ ಪ್ರಚಾರವನ್ನು ನಾನು ಬಯಸುವುದಿಲ್ಲ. ನಾನು ನಿಲ್ಲಬೇಕೆಂದು ಜನ ಆಶಿಸುತ್ತಿದ್ದಾರೆ ಎಂದರು.

    2009 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೊರಾದಬಾದ್‍ನಲ್ಲಿ ಕಣಕ್ಕೆ ನಿಂತು ಜಯಗಳಿಸಿದ್ದ ಅಜರುದ್ದೀನ್, 2014 ರ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಸ್ಪರ್ಧಿಸಿ ಸೋತಿದ್ದರು.

    ಕಳೆದ ವರ್ಷ ಜನವರಿಯಲ್ಲಿ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್(ಎಚ್‍ಸಿಎ) ಅಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿದ್ದರು. ಆದರೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಅಜರ್ ಅರ್ಜಿ ತಿರಸ್ಕೃತಗೊಂಡಿತ್ತು.

  • ತಿರುಮಲ ತಿಮಪ್ಪನಿಗೆ 13.5 ಕೋಟಿ ರೂ. ದೇಣಿಗೆ ನೀಡಿದ ಎನ್‌ಆರ್‌ಐ  ಭಕ್ತರು

    ತಿರುಮಲ ತಿಮಪ್ಪನಿಗೆ 13.5 ಕೋಟಿ ರೂ. ದೇಣಿಗೆ ನೀಡಿದ ಎನ್‌ಆರ್‌ಐ ಭಕ್ತರು

    ಹೈದರಾಬಾದ್: ದೇಶದ ಶ್ರೀಮಂತ ದೇವರು ಎಂಬ ಹೆಗ್ಗಳಿಕೆ ಪಡೆದಿರುವ ತಿರುಮಲ ದೇವಾಲಯಕ್ಕೆ ಎನ್‌ಆರ್‌ಐ ಭಕ್ತರಿಬ್ಬರು ಬರೋಬ್ಬರಿ 13.5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

    ಅಮೆರಿಕದಲ್ಲಿ ವಾಸಿಸುತ್ತಿರುವ ಆಂಧ್ರಪ್ರದೇಶ ಮೂಲದ ರವಿ ಮತ್ತು ಶ್ರೀನಿವಾಸ್ ಎಂಬವರು ಟಿಟಿಡಿ ಸಮಿತಿಗೆ ಈ ಹಣವನ್ನು ಹಸ್ತಾಂತರ ಮಾಡಿದ್ದಾರೆ. ಟಿಟಿಡಿ ಸಮಿತಿ ವಿಶ್ವದಲ್ಲೇ ಅತೀ ಹೆಚ್ಚು ದೇಣಿಗೆ ಹಣ ಪಡೆಯುವ ಹಾಗೂ ಹೆಚ್ಚು ಭಕ್ತರು ಭೇಟಿ ನೀಡುವ ಎರಡನೇ ಬಹುದೊಡ್ಡ ಧಾರ್ಮಿಕ ಕೇಂದ್ರ ಎಂಬ ಹೆಗ್ಗಳಿಕೆ ಪಡೆದಿದೆ.

    ಅಮೆರಿಕದ ಬೋಸ್ಟನ್ ನಲ್ಲಿ ಔಷಧಿ ಕಂಪೆನಿಯೊಂದರ ಸಿಇಒ ಆಗಿ ರವಿ ಕಾರ್ಯನಿರ್ವಹಿಸುತ್ತಿದ್ದು, 10 ಕೋಟಿ ರೂ. ದೇಣಿಗೆ ಹಣವನ್ನು ನೀಡಿದ್ದಾರೆ. ಉಳಿದಂತೆ ಶ್ರೀನಿವಾಸ್ ಅವರು ಜೆಸಿಜಿ ಟೆಕ್ನಾಲಜೀಸ್ ಎಂಬ ಸಂಸ್ಥೆಯನ್ನು ಹೊಂದಿದ್ದು, 3.50 ಕೋಟಿ ರೂ, ದೇಣಿಗೆಯನ್ನು ನೀಡಿದ್ದಾರೆ.

    ಟಿಟಿಡಿಗೆ ದೇಣಿಗೆ ಹಣ ನೀಡುವ ವೇಳೆ ಆಂಧ್ರಪ್ರದೇಶ ಸಚಿವ ಅಮರನಾಥ್ ರೆಡ್ಡಿ, ಹಿರಿಯ ಸಿನಿಮಾ ನಿರ್ದೇಶಕ ರಾಘವೇಂದ್ರ ರಾವ್ ಸೇರಿದಂತೆ ಟ್ರಸ್ಟ್ ನ ಸದಸ್ಯರು ಹಾಜರಿದ್ದರು. ಸದ್ಯ ಭಕ್ತರು ನೀಡಿರುವ ದೇಣಿಗೆ ಹಣವನ್ನು ಟಿಟಿಡಿ ಸಮಿತಿ ತಿರುಮಲದಲ್ಲಿ ನಿರ್ವಹಿಸುವ ಅನ್ನದಾನ, ಆಸ್ಪತ್ರೆ ಹಾಗೂ ಅನಾಥ ಮಕ್ಕಳ ಆಶ್ರಮದ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

  • ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

    ತಿಮ್ಮಪ್ಪನಿಗೆ 9 ದಿನ ಅಷ್ಟ ಬಂಧನ – ಆಗಸ್ಟ್ 9 ರಿಂದ 17 ರವರೆಗೆ ತಿಮ್ಮಪ್ಪನ ದರ್ಶನ ಭಾಗ್ಯ ಇರಲ್ಲ

    ತಿರುಪತಿ: ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಹೊಂದಿರುವ ತಿರುಪತಿ ತಿರುಮಲ ದೇವಾಲಯ ಅಷ್ಟಬಂಧನ ಧಾರ್ಮಿಕ ಕಾರ್ಯಕ್ರಮದಿಂದ 7 ದಿನಗಳ ಕಾಲ ಭಕ್ತರಿಗೆ ದರ್ಶನ ಲಭ್ಯವಿಲ್ಲ ಎಂದು ಟಿಟಿಡಿ ಸಮಿತಿ ತಿಳಿಸಿದೆ.

    ಈ ಕುರಿತು ಮಾಹಿತಿ ನೀಡಿದ ಟಿಟಿಡಿ ಸಮಿತಿಯ ಮುಖ್ಯಸ್ಥ ಪುಟ್ಟ ಸುಧಾಕರ್ ಯಾದವ್, ಆಗಸ್ಟ್ 9 ರಿಂದ 17 ರವೆಗೂ ಅಷ್ಟ ಬಂಧನ ಬಾಲಾಲಯ ಮಹಾಸಂಪ್ರೋಕ್ಷಣೆ ನಡೆಯುವುದರಿಂದ ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಟಿಟಿಡಿ ಸಮಿತಿ ಶನಿವಾರ ನಡೆಸಿದ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಆಗಸ್ಟ್ 11 ರ ಮುಂಜಾನೆ 6 ರಿಂದ ದೇವರ ದರ್ಶನ ಕಾರ್ಯ ಸ್ಥಗಿತಗೊಳ್ಳಲಿದೆ. ಆದರೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೇವೆಯನ್ನು ಮುಂದುವರೆಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ.

    ಆಗಸ್ಟ್ 11 ರಂದು ದೇವರಿಗೆ ವಿಶೇಷ ಪೂಜೆ ಆರಂಭ ಮಾಡಲಾಗುತ್ತದೆ. ಈ ಪ್ರಕ್ರಿಯೇ 9 ತಿಂಗಳು ಕಾಲ ಮುಂದುವರೆಯಲಿದ್ದು, ಈ ಅವಧಿಯಲ್ಲಿ ದೇವರ ದರ್ಶನ ಭಾಗ್ಯ ಲಭ್ಯವಾಗುವುದಿಲ್ಲ. ಸದ್ಯ ಟಿಟಿಡಿ ಸಮಿತಿ ನಿರ್ಧಾರಕ್ಕೆ ಭಕ್ತ ಸಮೂಹದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ಏನಿದು ಬಾಲಾಲಯ ಮಹಾಸಂಪ್ರೋಕ್ಷಣೆ? ತಿಮ್ಮಪ್ಪನ ಮೂಲವಿರಾಟ್ ಮತ್ತು ಇತರೆ ದೇವರ ವಿಗ್ರಹಗಳ ಶಕ್ತಿಯನ್ನು ಬಿಂಬದಿಂದ ಕುಂಭದೊಳಕ್ಕೆ ಆವಾಹನೆ ಮಾಡುವ ಪ್ರಕ್ರಿಯೆಯಾಗಿದೆ. ಧಾರ್ಮಿಕ ಆಚಾರಣೆಯನ್ನು 12 ವರ್ಷಗಳಿಗೆ ಒಮ್ಮೆ ಮಾತ್ರ ಮಾಡಲಾಗುತ್ತದೆ.

    ಅಷ್ಟಬಂಧನ: 8 ರೀತಿಯ ವಸ್ತುಗಳಿಂದ ತಯಾರು ಮಾಡಿದ ಚೂರ್ಣ. ಈ ಚೂರ್ಣದ ಆಯಸ್ಸು 12 ವರ್ಷಗಳ ಕಾಲ ಇರುತ್ತದೆ. ಈ ಅಷ್ಟ ಬಂಧನವನ್ನು ತಿಮ್ಮಪ್ಪನ ಪಾದದಲ್ಲಿ ಇರಿಸುತ್ತಾರೆ. ವಿಶೇಷವಾಗಿ ಮಹಾಸಂಪ್ರೋಕ್ಷಣೆ ವೇಳೆ ದೇಗುಲದ ಸಿಬ್ಬಂದಿಗೂ ರಾಮುಲವಾರಿ ಮೇಡ ದಾಟಲು ಅವಕಾಶ ಇರಲ್ಲ.