Tag: Hyderabad

  • ಅನುಷ್ಕಾ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನ ಕೊಟ್ಟ ಪ್ರಭಾಸ್

    ಅನುಷ್ಕಾ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನ ಕೊಟ್ಟ ಪ್ರಭಾಸ್

    ಹೈದರಾಬಾದ್: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿ, ಕ್ಯೂಟ್ ಹೀರೋ-ಹೀರೋಯಿನ್ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತಾರೆ. ಅದರಲ್ಲೂ ‘ಬಾಹುಬಲಿ 2’ ಚಿತ್ರ ತೆರೆಕಂಡ ನಂತರ ಇವರಿಬ್ಬರ ಆಫ್‍ಸ್ಕ್ರೀನ್ ಕೆಮಿಸ್ಟ್ರಿ ಬಗ್ಗೆ ಗಾಸಿಪ್‍ಗಳು ಹೆಚ್ಚಾಗುತ್ತಲೇ ಇವೆ. ಸದ್ಯಕ್ಕೆ ಇಬ್ಬರ ನಡುವಿನ ಹೊಸ ಸಮಾಚಾರವೊಂದು ಟಾಲಿವುಡ್ ನಲ್ಲಿ ಹರಿದಾಡುತ್ತಿದೆ.

    ಇತ್ತೀಚೆಗೆ ನಟ ಪ್ರಭಾಸ್ 38ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಅವರಿಗೆ ಅನುಷ್ಕಾ ಶೆಟ್ಟಿ ಅವರು ಡಿಸೈನರ್ ವಾಚ್ ನ್ನು ಉಡೂಗರೆಯನ್ನಾಗಿ ನೀಡಿದ್ದರು. ಪ್ರಭಾಸ್‍ಗೆ ಡಿಸೈನರ್ ವಾಚ್ ಇಷ್ಟವಂತೆ. ಹೀಗಾಗಿ ಅನುಷ್ಕಾ ಪ್ರಭಾಸ್‍ಗೆ ವಾಚನ್ನೇ ಗಿಫ್ಟ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯಕ್ಕೆ ಈ ಜೋಡಿ ಏನೇ ಮಾಡಿದರೂ ಅದು ಸುದ್ದಿ ಆಗುತ್ತದೆ. ಇವರ ಮೇಲೆ ಒಂದು ಕಣ್ಣಿಟ್ಟಿರುವ ಗಾಸಿಪ್ ಪಂಡಿತರ ಬಾಯಿಗೆ ಅಗೆಯೋದಕ್ಕೆ ಹೊಸ ತಾಂಬೂಲ ಸಿಕ್ಕಂತ್ತಾಗಿದೆ.

    ನವೆಂಬರ್ 7 ರಂದು ಅನುಷ್ಕಾ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಉಡುಗೊರೆಯಾಗಿ ಅವರಿಗೆ ಏನು ಕೊಡಬಹುದು ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಈಗ ಬಾಹುಬಲಿ ಪ್ರಭಾಸ್ ಬಿಎಂಡಬ್ಲ್ಯು ಕಾರನ್ನು ಉಡುಗೊರೆಯಾಗಿ ಅನುಷ್ಕಾ ಅವರಿಗೆ ನೀಡಿದ್ದಾರೆ ಎಂಬ ಮಾತು ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

    ಈ ಹಿಂದೆ ಪ್ರಭಾಸ್-ಅನುಷ್ಕಾ ಮಧ್ಯೆ ರಿಯಲ್ ಲವ್ ಇದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇಬ್ಬರೂ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಹಬ್ಬಿತ್ತು. ಇಂತಹ ಗಾಸಿಪ್‍ಗಳನ್ನು ಪ್ರಭಾಸ್ ನೇರವಾಗಿ ತಳ್ಳಿ ಹಾಕಿದ್ದರು. ಆದರೆ ಅಭಿಮಾನಿಗಳು ಮಾತ್ರ ಇವರ ನಡುವಿನ ರಿಲೆಷನ್ ಶಿಪ್ ಬಗ್ಗೆ ತಿಳಿಯಲು ಕಾತುರದಿಂದ ಕಾಯುತ್ತಿದ್ದಾರೆ.

    ಪ್ರಭಾಸ್ ಹುಟ್ಟುಹಬ್ಬಕ್ಕೆ `ಸಾಹೋ’ ಸಿನಿಮಾದಿಂದ ಫಸ್ಟ್ ಲುಕ್ ಬಿಡುಗಡೆ ಮಾಡಿತ್ತು. ಅದೆ ರೀತಿ ಅನುಷ್ಕಾ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಭಾಗಮತಿಯ ಸಿನಿಮಾದಿಂದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಸಾಹೋ ಸಿನಿಮಾದಲ್ಲಿ ಪ್ರಭಾಸ್‍ಗೆ ಜೋಡಿಯಾಗಿ ಅನುಷ್ಕಾ ಅಭಿನಯಿಸಬೇಕಿತ್ತು. ಆದರೆ ಕಾರಣಾಂತಗಳಿಂದ ಶ್ರದ್ಧಾ ಕಪೂರ್ ಪ್ರಭಾಸ್‍ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಸಿನಿಮಾಗಳು ಮುಂದಿನ ವರ್ಷ ತೆರೆಗೆ ಬರುವ ನಿರೀಕ್ಷೆಯಲ್ಲಿವೆ.

    ಇದನ್ನು ಓದಿ: ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಪ್ರಭಾಸ್‍ಗೆ ಅನುಷ್ಕಾ ಗಿಫ್ಟ್ ಕೊಟ್ಟಿದ್ದು ಏನು ಗೊತ್ತಾ?

    ಇದನ್ನು ಓದಿ: ತನ್ನ ಹುಟ್ಟುಹಬ್ಬದಂದು ಡ್ರೈವರ್ ಗೆ 12 ಲಕ್ಷದ ಕಾರನ್ನು ಉಡುಗೊರೆಯಾಗಿ ಕೊಟ್ಟ ಅನುಷ್ಕಾ ಶೆಟ್ಟಿ!

  • ನಟ ಅಲ್ಲು ಅರ್ಜುನ್ ರಾಜಕೀಯಕ್ಕೆ ಎಂಟ್ರಿ?

    ನಟ ಅಲ್ಲು ಅರ್ಜುನ್ ರಾಜಕೀಯಕ್ಕೆ ಎಂಟ್ರಿ?

    ಹೈದರಾಬಾದ್: ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆ ಹಲವು ದಿನಗಳಿಂದ ಅಭಿಮಾನಿಗಳಲ್ಲಿ ಕಾಡುತ್ತಿತ್ತು.  ಆದರೆ ಈಗ ನಟ ಅಲ್ಲು ಅರ್ಜುನ್ ಇತ್ತೀಚೆಗೆ ಭಾಗವಹಿಸಿದ್ದ ಪಾರ್ಟಿಯಲ್ಲಿ ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ.

    ಸಾಮಾನ್ಯವಾಗಿ ಅಲ್ಲು ಅರ್ಜುನ್ ಅವರು ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಕುಟುಂಬದ ಸದಸ್ಯರ ಜೊತೆ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಮಾತ್ರವೇ ಭಾಗವಹಿಸುತ್ತಾರೆ. ಇತ್ತೀಚೆಗೆ ಇಂತಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ತಮ್ಮ ಮುಂದಿನ ಸಿನಿಮಾ ವೃತ್ತಿ ಜೀವನ ಹಾಗೂ ರಾಜಕೀಯ ಪ್ರವೇಶದ ಕುರಿತು ಮಾತನಾಡಿ ಎಲ್ಲರನ್ನು ಶಾಕ್ ಒಳಪಡಿಸಿದ್ದರು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    ಪ್ರಸ್ತುತ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಎರಡು ರಾಜ್ಯಗಳಲ್ಲಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿರುವ ಅವರು ಸೂಕ್ತ ಸಂದರ್ಭದಲ್ಲಿ ರಾಜಕೀಯಕ್ಕೆ ಪ್ರವೇಶ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ, ಆದರೆ ಅದು ಅರ್ಜುನ್‍ರ 40 ನೇ ವಯಸ್ಸಿನ ನಂತರವೇ ಎಂದು  ಮೂಲಗಳು ತಿಳಿಸಿವೆ.

    ಟಾಲಿವುಡ್‍ನಲ್ಲಿ ಅಲ್ಪ ಸಮಯದಲ್ಲಿಯೇ ತಮ್ಮ ವಿಶಿಷ್ಟ ನಟನೆಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನು ಹಲವು ಅಭಿಮಾನಿಗಳು ತಮ್ಮ ಪ್ರೀತಿಯ ನಟನ ರಾಜಕೀಯ ಪ್ರವೇಶ ಮಾಡುವ ಕುರಿತು ಸುದ್ದಿ ಕೇಳಿ ಅಚ್ಚರಿಗೊಂಡಿದ್ದಾರೆ.

  • ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್

    ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್

    ಹೈದರಾಬಾದ್: ವ್ಯಾಪಾಸ್ಥರೊಬ್ಬರನ್ನು ಕಿಡ್ನಾಪ್ ಮಾಡಿ ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ಅದನ್ನು ಕುಟುಂಬವರಿಗೆ ವಾಟ್ಸಪ್ ಮೂಲಕ ಕಳುಹಿಸಿ ಹಣಕ್ಕಾಗಿ ಬೇಡಿಕೆ ಮಾಡಿದ್ದಾರೆ. ಆದರೆ ಕುಟುಂಬದವರು ಹಣ ಕೊಡಲು ನಿರಾಕರಿಸಿದ್ದರಿಂದ ಕೋಪಗೊಂಡು ಅಪಹರಣಕಾರರು ವ್ಯಕ್ತಿಯನ್ನು ಕೊಂದೇ ಬಿಟ್ಟಿದ್ದಾರೆ.

    ಕುಶೈಗುಡಾ ಪೊಲೀಸ್ ವ್ಯಾಪ್ತಿಯ ಮಹೇಶ್ ನಗರದ ನಿವಾಸಿ ವಾಸುದೇವ್‍ರಾಜ್ ಅಪಹರಣಗಾರರಿಂದ ಹತ್ಯೆಯಾದ ದುರ್ದೈವಿ. ಈ ಘಟನೆ ಹೈದರಾಬಾದಿನ ಕುಶೈಗುಡಾದಲ್ಲಿ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಅಪರಿಚಿತ ವ್ಯಕ್ತಿಯೊಬ್ಬ ವಾಸುದೇವ್ ಬಳಿ ಬಂದು ನಿಮ್ಮ ಬಳಿ ವ್ಯಾಪಾರದ ಒಪ್ಪಂದ ಮಾಡಿಕೊಳ್ಳಬೇಕು ನಮ್ಮ ಮನೆಗೆ ಬನ್ನಿ ಎಂದು ಹೇಳಿದ್ದಾನೆ. ಅದರಂತೆ ವಾಸ್‍ದೇವ್ ಆತನ ಮನೆಗೆ ತೆರಳಿದಾಗ ಅಲ್ಲಿ ಅವರನ್ನು ಸಿಂಗಾಪುರಕ್ಕೆ ಕರೆದುಕೊಂಡಿದ್ದಾರೆ. ಅಲ್ಲಿ ಅವರ ಶರ್ಟ್ ಬಿಚ್ಚಿಸಿ, ಕೈ ಕಾಲು ಕಟ್ಟಿ ಹೊಡೆದು ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮೂಲಕ 3 ಕೋಟಿ ರೂ. ಹಣದ ಬೇಡಿಕೆ ಇಟ್ಟಿದ್ದಾರೆ.

    ಆದರೆ ಕುಟುಬಂಸ್ಥರು ಹಣ ಕೊಡಲು ನಿರಾಕರಿಸಿ ಅಪಹರಣಕಾರರ ಬಳಿ ವಾಸುದೇವ್ ಅವರನ್ನು ಬಿಡುವಂತೆ ಕೇಳಿಕೊಂಡಿದ್ದರು. ಆದರೆ ಹಣ ಸಿಗಲಿಲ್ಲ ಎಂದು ಕೋಪಗೊಂಡ ಅಪಹರಣಗಾರರು ವಾಸುದೇವ್ ಅವರನ್ನು ಕೊಲೆ ಮಾಡಿದ್ದಾರೆ.

    ಹತ್ಯೆಯಾದ ವಾಸುದೇವ್ ಆರ್.ಕೆ ಎಂಟರ್‍ಪ್ರೈಸ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಗೆ ಆರ್ಥಿಕವಾಗಿ ಸಮಸ್ಯೆಗಳನ್ನ ಹೊಂದಿದ್ದು, ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಕೂಡ ಬಳಲುತ್ತಿದ್ದರು. ಈಗ ಭಾರತೀಯ ರಾಯಭಾರಿ ಅಧಿಕಾರಿಗಳು ವಾಸುದೇವ್ ಅವರ ಶವವನ್ನು ಹೈದರಾಬಾದ್‍ಗೆ ಶನಿವಾರ ತರುವ ಪ್ರಯತ್ನ ನಡೆಸುತ್ತಿದ್ದಾರೆ.

     

  • ನನ್ನ ಮೊದಲ ಕ್ರಷ್ ಯಾರು ಅನ್ನೋದನ್ನು ರಿವಿಲ್ ಮಾಡಿದ್ರು ಅನುಷ್ಕಾ ಶೆಟ್ಟಿ

    ನನ್ನ ಮೊದಲ ಕ್ರಷ್ ಯಾರು ಅನ್ನೋದನ್ನು ರಿವಿಲ್ ಮಾಡಿದ್ರು ಅನುಷ್ಕಾ ಶೆಟ್ಟಿ

    ಹೈದರಾಬಾದ್: ಮೊನ್ನೆಯಾಷ್ಟೇ 36ನೇ ಹುಟ್ಟುಹಬ್ಬ ಆಚರಿಸಿಕೊಂಡ ಅನುಷ್ಕಾ ಶೆಟ್ಟಿ ಈಗ ತಮ್ಮ ಮೊದಲ ಕ್ರಷ್ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

    ಹೌದು, ಇತ್ತೀಚೆಗೆ ತೆಲುಗು ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ಸಮಯದಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶೆಟ್ಟಿ, ರಾಹುಲ್ ದ್ರಾವಿಡ್ ಮೇಲೆ ಮೊದಲ ಕ್ರಷ್ ಆಗಿತ್ತು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನುಷ್ಕಾ ಶೆಟ್ಟಿ

    ಮೂಲತಃ ಕರಾವಳಿ ಮೂಲದ ಅನುಷ್ಕಾ ಶೆಟ್ಟಿ ಅವರಿಗೆ ದ್ರಾವಿಡ್ ಅವರಲ್ಲಿರುವ ತಾಳ್ಮೆ, ಬ್ಯಾಟಿಂಗ್, ನಡವಳಿಕೆ, ನಾಯಕತ್ವ ಗುಣವನ್ನು ನೋಡಿ ಹುಚ್ಚು ಹಿಡಿಯುವಷ್ಟು ಅವರನ್ನು ಇಷ್ಟಪಟ್ಟಿದ್ದರಂತೆ.

    ರಾಜಮೌಳಿ ನಿರ್ದೇಶನದ ಬಾಹುಬಲಿಯಲ್ಲಿ ದೇವಸೇನಾ ಪಾತ್ರದಲ್ಲಿ ಮಿಂಚಿದ್ದ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ನಡುವೆ ಲವ್ ಇದೆ ಎನ್ನುವ ಸುದ್ದಿ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಬಾಹುಬಲಿಯಲ್ಲಿ ಇವರಿಬ್ಬರ ಸ್ಕ್ರೀನ್ ಕೆಮೆಸ್ಟ್ರಿ ನೋಡಿ ಅಭಿಮಾನಿಗಳು ಸಹ ಇಬ್ಬರ ನಡುವೆ ಪ್ರೀತಿ ಇದೆ ಎಂದು ವದಂತಿ ಹಬ್ಬಿಸುತ್ತಿದ್ದರು. ಆದರೆ ಪ್ರಭಾಸ್ ಈ ಹಿಂದೆ ನಮ್ಮಿಬ್ಬರ ಮಧ್ಯೆ ಯಾವುದೇ ಲವ್ ಇಲ್ಲ ಎಂದು ಹೇಳಿಕೆ ನೀಡಿ ಗಾಸಿಪ್ ಗಳಿಗೆ ತೆರೆ ಎಳೆದಿದ್ದರು.

    ಸದ್ಯ ಅರುಂಧತಿ ಖ್ಯಾತಿಯ ಅನುಷ್ಕಾ ಶೆಟ್ಟಿ ಅವರು ತಮ್ಮ ಮುಂದಿನ ಚಿತ್ರ ‘ಭಾಗಮತಿ’ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ.

    ಇದನ್ನೂ ಓದಿ: ಹುಟ್ಟುಹಬ್ಬದ ದಿನದಂದು ಕಾರು ಡ್ರೈವರ್ ಗೆ ಕಾರು ಗಿಫ್ಟ್ ಕೊಟ್ಟ ಅನುಷ್ಕಾ – ಕಾರಿನ ಬೆಲೆ ಎಷ್ಟು ಗೊತ್ತಾ?

    ಇದನ್ನೂ ಓದಿ: ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಪ್ರಭಾಸ್‍ಗೆ ಅನುಷ್ಕಾ ಗಿಫ್ಟ್ ಕೊಟ್ಟಿದ್ದು ಏನು ಗೊತ್ತಾ?

     

  • ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧುಗೆ ಕಿರುಕುಳ-ಇಂಡಿಗೋ ವಿಮಾನದಲ್ಲಾದ ಕಹಿ ಅನುಭವ ಬಿಚ್ಚಿಟ್ಟ ಖ್ಯಾತ ಕ್ರೀಡಾಪಟು..!

    ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧುಗೆ ಕಿರುಕುಳ-ಇಂಡಿಗೋ ವಿಮಾನದಲ್ಲಾದ ಕಹಿ ಅನುಭವ ಬಿಚ್ಚಿಟ್ಟ ಖ್ಯಾತ ಕ್ರೀಡಾಪಟು..!

    ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ವಿಮಾನ ಪ್ರಯಾಣದ ವೇಳೆ ತಮಗಾದ ಕೆಟ್ಟ ಅನುಭವದ ಕುರಿತು ಟ್ವೀಟ್ ಮಾಡುವ ಮೂಲಕ ಇಂಡಿಗೊ ವಿಮಾನ ಸಿಬ್ಬಂದಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಶನಿವಾರ ಹೈದರಾಬಾದ್‍ನಿಂದ ಮುಂಬೈಗೆ ಹೊರಟಿದ್ದ ಇಂಡಿಗೊ ಸಂಸ್ಥೆಯ 6ಇ 608 ಹೆಸರಿನ ವಿಮಾನದ ಪ್ರಯಾಣದ ವೇಳೆ ಅಜಿತೇಶ್ ಎಂಬ ಸಿಬ್ಬಂದಿ ಅಸಭ್ಯವಾಗಿ ವರ್ತನೆ ಮಾಡಿದ್ದು, ಈ ವೇಳೆ ಗಗನಸಖಿ ಎಂ.ಎಸ್ ಆಷಿಮಾ ಎಂಬವರು ಮಧ್ಯ ಪ್ರವೇಶಿಸಿ ಅಜಿತೇಶ್ ಅವರಿಗೆ ಗ್ರಾಹಕರೊಂದಿಗೆ ಸರಿಯಾಗಿ ನಡೆದುಕೊಳ್ಳುವಂತೆ ಸಲಹೆ ನೀಡಿದ್ದರು. ಇಂತಹ ಸಿಬ್ಬಂದಿ ಕಾರ್ಯನಿರ್ವಹಿಸುವುದರಿಂದ ವಿಮಾನಯಾನ ಸಂಸ್ಥೆಯ ಹೆಸರಿಗೆ ಧಕ್ಕೆಯಾಗುತ್ತದೆ ಎಂಬ ಸಲಹೆಯನ್ನು ಸಿಂಧು ಅವರು ತಮ್ಮ ಸರಣಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಪಿ.ವಿ. ಸಿಂಧು ಅವರ ಆರೋಪಕ್ಕೆ ಇಂಡಿಗೊ ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ತಮ್ಮ ಸಿಬ್ಬಂದಿಯನ್ನು ಸಮರ್ಥಿಸಿಕೊಂಡಿದ್ದಾರೆ. ಪಿ.ವಿ ಸಿಂಧು ಅವರು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕದ ಹ್ಯಾಂಡ್ ಬ್ಯಾಗನ್ನು ತಂದಿದ್ದರು. ಅದನ್ನು ವಿಮಾನದ ಓವರ್ ಹೆಡ್ ಬಿನ್ ನಲ್ಲಿ ಇಡಲು ಆಗುತ್ತಿರಲಿಲ್ಲ. ಈ ಕುರಿತು ತಮ್ಮ ಸಿಬ್ಬಂದಿ ಮಾಹಿತಿ ನೀಡಿ ವಿಮಾನದ ಕಾರ್ಗೊ ಸ್ಥಳಕ್ಕೆ ಬ್ಯಾಗ್‍ನ್ನು ಸ್ಥಳಾಂತರಿಸುವ ಬಗ್ಗೆ ತಿಳಿಸಿದ್ದರು. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿಯಮವನ್ನು ಪಾಲಿಸಲಾಗುತ್ತಿದೆ ಎಂದು ಇಂಡಿಗೊ ವಿಮಾನದ ಅಧಿಕಾರಿ ಅಜಯ್ ಸ್ಪಷ್ಟನೆಯನ್ನು ನೀಡಿದ್ದಾರೆ.

    ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರ ಸಾಧನೆ ಬಗ್ಗೆ ನಮಗೇ ಹೆಮ್ಮೆ ಇದ್ದು, ದೇಶದ ಕೀರ್ತಿಯನ್ನು ಎಲ್ಲೆಡೆ ಸಾರಿದ್ದಾರೆ. ಆದರೆ ನಮ್ಮ ಸಿಬ್ಬಂದಿ ಆತನ ಕರ್ತವ್ಯವನ್ನು ಅಷ್ಟೇ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಸಿಂಧು ಪ್ರಯಾಣದ ವೇಳೆ ವಿಮಾನ ಸಿಬ್ಬಂದಿಗೆ ತನ್ನ ಬ್ಯಾಗ್ ಅನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ತಿಳಿಸಿದ್ದರು. ಈ ಸಮಯದಲ್ಲಿ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸಿಂಧು ತಂದೆ ರಾಮಣ್ಣ ಹೇಳಿದ್ದಾರೆ.

     

  • ಭಯಾನಕ ಕನಸು ಬಿದ್ದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

    ಭಯಾನಕ ಕನಸು ಬಿದ್ದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

    ಹೈದರಾಬಾದ್: ಭಯಾನಕ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿಯೊಬ್ಬ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

    ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿಯನ್ನು ಸೈಯದ್ ರೆಹಮತ್ ಆಲಿ ಎಂದು ಗುರುತಿಸಲಾಗಿದ್ದು, ಈತ ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದ.

    ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವಿದ್ಯಾಥಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಕಳೆದ ಕೆಲ ದಿನಗಳಿಂದ ಸಂಬಂಧಿಕರೊಬ್ಬರನ್ನು ಕೊಲ್ಲುವಂತಹ ಭಯಾನಕ ಕನಸುಗಳು ಬೀಳುತ್ತಿವೆ. ಈ ಕನಸಿನಿಂದ ನಾನು ಮನಸ್ಸು ವಿಚಲಿತವಾಗಿದೆ. ಅಲ್ಲದೇ ಇದರಿಂದ ಆಘಾತಗೊಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಬರೆದಿದ್ದಾನೆ.

    ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ರೆಹಮತ್ ತನ್ನ ತಂದೆಗೆ ಕರೆ ಮಾಡಿ ತನಗೇನು ಆಗುತ್ತಿದೆ ಎನ್ನವುದರ ಮಾಹಿತಿ ನೀಡಿ ಫೋನ್ ಕಟ್ ಮಾಡಿದ್ದಾನೆ. ಆ ಬಳಿಕ ಆತನ ತಂದೆ ಕರೆ ಮಾಡಿದಾಗ ಫನ್ ನಾಟ್ ರೀಚೇಬಲ್ ಬರುತ್ತಿತ್ತು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ರವಾನಿಸಿ ಸಹಾಯ ಮಾಡುವಂತೆ ಕೇಳಿದ್ದರು. ಸದ್ಯ ರೆಹಮತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

     

  • ವೋಕ್ಸ್ ವೇಗನ್ ಕಾರಿನಲ್ಲಿ ಅಡ್ಡಾದಿಡ್ಡಿ ಚಾಲನೆ- ವಾಹನ ಸವಾರನನ್ನ ನಡುರಸ್ತೆಯಲ್ಲೇ ನಿಂದಿಸಿದ ಮಹಿಳೆ

    ವೋಕ್ಸ್ ವೇಗನ್ ಕಾರಿನಲ್ಲಿ ಅಡ್ಡಾದಿಡ್ಡಿ ಚಾಲನೆ- ವಾಹನ ಸವಾರನನ್ನ ನಡುರಸ್ತೆಯಲ್ಲೇ ನಿಂದಿಸಿದ ಮಹಿಳೆ

     

    ಹೈದರಾಬಾದ್: ಮಹಿಳೆಯೊಬ್ಬರು ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿದ್ದಲ್ಲದೆ ವ್ಯಕ್ತಿಯನ್ನ ನಡುರಸ್ತೆಯಲ್ಲೇ ನಿಂದಿಸಿರೋ ಘಟನೆ ಬೇಗಂಪೇಟ್‍ನಲ್ಲಿ ನಡೆದಿದೆ.

    ಗುರುವಾರದಂದು ಮಹಿಳೆಯೊಬ್ಬರು ವೋಕ್ಸ್ ವೇಗನ್ ಕಾರನ್ನ ಅಡ್ಡಾದಿಡ್ಡಿ ಚಲಾಯಿಸಿದ್ದಾರೆ. ರಸ್ತೆಯಲ್ಲಿ ಮನಬಂದಂತೆ  ಡ್ರೈವಿಂಗ್ ಮಾಡಿದ್ದು, ಹಲವು ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಹಿಳೆ ದ್ವಿಚಕ್ರ ವಾಹನ ಸವಾರರೊಬ್ಬರನ್ನ  ಬಾಯಿಗೆ ಬಂದಂತೆ ನಿಂದಿಸಿದ್ದಾರೆ.

    ಪ್ರತ್ಯಕ್ಷದರ್ಶಿಯೊಬ್ಬರು ಈ ಘಟನೆಯ ದೃಶ್ಯವನ್ನ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.

    ಕಾರನ್ನ ಮನಬಂದಂತೆ ಚಾಲನೆ ಮಾಡಿದ ಮಹಿಳೆಯನ್ನ ಬೇಗಂಪೇಟ್‍ನಲ್ಲಿ ವ್ಯಕ್ತಿಯೊಬ್ಬರು ತಡೆದು ಪ್ರಶ್ನಿಸಿದ್ದಾರೆ. ಆದ್ರೆ ಆಕೆ ಆ ವ್ಯಕ್ತಿಯ ಮೇಲೆಯೇ ಮಹಿಳೆ ತಿರುಗಿ ಬಿದ್ದಿದ್ದು ಬಾಯಿಗೆ ಬಂದಂತೆ ಬೈದಿದ್ದಾರೆ. ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ಮಹಿಳೆಯನ್ನ ಸಮಾಧಾನ ಮಾಡಲು ಯತ್ನಿಸೋದನ್ನ ವಿಡಿಯೋದಲ್ಲಿ ಕಾಣಬಹುದು.

    ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿದ್ದಲ್ಲದೆ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಎಸ್‍ಆರ್ ನಗರ ಟ್ರಾಫಿಕ್ ಇನ್ಸ್ ಪೆಕ್ಟರ್ ನೀಡಿದ ದೂರಿನನ್ವಯ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

    https://www.youtube.com/watch?time_continue=61&v=LrTxh66-jf8

    https://www.youtube.com/watch?time_continue=82&v=aATJGCfn7X8

     

  • ಆಂಧ್ರ, ತೆಲಂಗಾಣದಲ್ಲಿ ರಿಲೀಸ್ ಆಗಲ್ಲ `ಮರ್ಸಲ್’ ಸಿನಿಮಾ

    ಆಂಧ್ರ, ತೆಲಂಗಾಣದಲ್ಲಿ ರಿಲೀಸ್ ಆಗಲ್ಲ `ಮರ್ಸಲ್’ ಸಿನಿಮಾ

    ಹೈದರಾಬಾದ್: ಜಿಎಸ್‍ಟಿ ಮತ್ತು ಡಿಜಿಟಲ್ ಇಂಡಿಯಾದ ಬಗ್ಗೆ ಟೀಕಿಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ `ಮರ್ಸಲ್’ ಸಿನಿಮಾಕ್ಕೆ ಹೊಸ ಪ್ರಾಬ್ಲಂ ಶುರುವಾಗಿದೆ.

    ಇಳಯ ದಳಪತಿ ನಟ ವಿಜಯ್ ಅಭಿನಯದ ತೆಲುಗು ಅವತರಣಿಕೆ ಅದರೊಂದಿಗೆ ಇನ್ನೂ ಸೆನ್ಸಾರ್ ಮಂಡಳಿ ಒಪ್ಪಿಗೆ ಸೂಚಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಆಂಧ್ರ ಮತ್ತು ತೆಲಂಗಾಣದಲ್ಲಿ ಮೂವಿ ರಿಲೀಸ್ ಆಗುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ.

    ಜಿಎಸ್‍ಟಿ ಮತ್ತು ಡಿಜಿಟಲ್ ಇಂಡಿಯಾ ಕುರಿತ ಹೀರೋ ವಿಜಯ್ ಹೇಳಿಕೆಯನ್ನು ಮ್ಯೂಟ್ ಮಾಡಬೇಕು ಎನ್ನುವುದು ಬಿಜೆಪಿ ಆಗ್ರಹ. ಇದೇ ಕಾರಣಕ್ಕೆ ಸೆನ್ಸಾರ್ ಮಂಡಳಿಯೂ ಸಿನಿಮಾ ರಿಲೀಸ್ ಗೆ ಒಪ್ಪಿಗೆ ನೀಡುತ್ತಿಲ್ಲ. ಈಗಾಗಲೇ ತಮಿಳು ಭಾಷೆಯಲ್ಲಿ `ಮರ್ಸಲ್’ ಬರೋಬ್ಬರೀ 175 ಕೋಟಿ ರೂಪಾಯಿ ಬಾಚಿದೆ.

    ಚಿತ್ರದ ಬಗ್ಗೆ ವಿವಾದವೇನು?: `ಮರ್ಸಲ್’ ಸಿನಿಮಾದಲ್ಲಿ ನಾಯಕ ನಟ ವಿಜಯ್ ಅವರು, ಔಷಧಿಗೆ ಶೇ. 12ರಷ್ಟು ಜಿಎಸ್‍ಟಿ ವಿಧಿಸಲಾಗಿದೆ ಆದರೆ ಹಲವಾರು ಜನರ ಸಾವಿಗೆ ಕಾರಣವಾಗುವ ಮದ್ಯದ ಮೇಲೆ ಜಿಎಸ್‍ಟಿ ಇಲ್ಲ ಎಂದು ಹೇಳುವ ದೃಶ್ಯವಿದೆ. ಅಷ್ಟೇ ಅಲ್ಲದೆ ಗೋರಖಪುರದಲ್ಲಿ ಆಮ್ಲಜನಕದ ಕೊರತೆಯಿಂದ ಮಕ್ಕಳು ಮೃತಪಟ್ಟ ಘಟನೆಗೂ ಈ ದೃಶ್ಯದಲ್ಲಿ ಸಂಬಂಧ ಕಲ್ಪಿಸಲಾಗಿದೆ. ಈ ಎಲ್ಲ ದೃಶ್ಯಗಳಿಗೆ ಕತ್ತರಿ ಹಾಕಬೇಕು ಇಲ್ಲವೇ ಮ್ಯೂಟ್ ಮಾಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯ ಈ ಆಕ್ಷೇಪದ ವಿರುದ್ಧ ಸಾಮಾಜಿಕ ತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಮರ್ಸಲ್ ಬೆಂಬಲಿಗರು, ವಿಜಯ್ ಅಭಿಮಾನಿಗಳು #MersalVsModi   ಎಂಬ ಹ್ಯಾಶ್‍ಟ್ಯಾಗ್ ಬಳಸಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದರು.

  • 12 ವರ್ಷದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್: ಓರ್ವ ಆರೋಪಿ ಅರೆಸ್ಟ್

    12 ವರ್ಷದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್: ಓರ್ವ ಆರೋಪಿ ಅರೆಸ್ಟ್

    ಹೈದರಾಬಾದ್: 12 ವರ್ಷದ ಬಾಲಕಿಯ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕೃಷ್ಣ ಜಿಲ್ಲೆಯ ಜಗ್ಗಯ್ಯಪೇಟ್ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ತೊರಗಾಂಡಪಾಲೇಮ್ ಗ್ರಾಮದ ಸ್ಥಳೀಯ ಸರ್ಕಾರಿ ಕಚೇರಿಯ ಹಿಂಭಾಗದ ಕಟ್ಟಡದಲ್ಲಿ ಅಪ್ರಾಪ್ತೆಯ ಮೇಲೆ ಮೂವರು ಕಾಮುಕರು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅತ್ಯಾಚಾರ ಎಸಗಿದ್ದರು.

    ಈ ಘಟನೆಯಿಂದ ಬಾಲಕಿ ಆಘಾತಕ್ಕೆ ಒಳಗಾಗಿ ಕಳೆದ ವಾರ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಳು. ಭಾನುವಾರ ಆರೋಪಿಗಳ ವಿರುದ್ಧ ಜಗ್ಗಯ್ಯಪೇಟ್ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ ಎಂದು ಇನ್ಸ್ ಪೆಕ್ಟರ್ ಎಸ್. ಶ್ರೀಕುಮಾರ್ ಹೇಳಿದ್ದಾರೆ.

    ಈ ಪ್ರಕರಣದ ಸಂಬಂಧ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಜಾಲ ಬೀಸಿದ್ದೇವೆ ಎಂದು ಪೋಲಿಸರು ತಿಳಿಸಿದ್ದಾರೆ.

    ಇದನ್ನು ಓದಿ: ಹಾಡಹಗಲೇ ಫುಟ್ ಪಾತ್‍ನಲ್ಲೇ ರೇಪ್- ಸಹಾಯಕ್ಕೆ ಯಾರು ಬರಲಿಲ್ಲ ಆದ್ರೆ ವಿಡಿಯೋ ಮಾಡಿದ್ರು

  • ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಪ್ರಭಾಸ್‍ಗೆ ಅನುಷ್ಕಾ ಗಿಫ್ಟ್ ಕೊಟ್ಟಿದ್ದು ಏನು ಗೊತ್ತಾ?

    ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಪ್ರಭಾಸ್‍ಗೆ ಅನುಷ್ಕಾ ಗಿಫ್ಟ್ ಕೊಟ್ಟಿದ್ದು ಏನು ಗೊತ್ತಾ?

    ಹೈದರಾಬಾದ್: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿಗಳಾದ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಾಗುತ್ತಿರುತ್ತಾರೆ. ಸದ್ಯ ಇಬ್ಬರ ನಡುವಿನ ಹೊಸ ಸಮಾಚಾರವೊಂದು ಟಾಲಿವುಡ್ ವಲಯದಿಂದ ಕೇಳಿ ಬಂದಿದೆ.

    38ನೇ ಜನ್ಮದಿನದ ಅಂಗವಾಗಿ ಅನುಷ್ಕಾ ಶೆಟ್ಟಿ ಪ್ರಭಾಸ್ ಗೆ ಡಿಸೈನರ್ ವಾಚನ್ನು ವಿಶೇಷವಾದ ಉಡುಗರೆಯನ್ನಾಗಿ ನೀಡಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಮೂಲಗಳ ಪ್ರಕಾರ, ಪ್ರಭಾಸ್‍ಗೆ ಡಿಸೈನರ್ ವಾಚ್ ಇಷ್ಟವಂತೆ. ಹೀಗಾಗಿ ಅನುಷ್ಕಾ ಪ್ರಭಾಸ್‍ಗೆ ವಾಚನ್ನೇ ಗಿಫ್ಟ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಟಾಲಿವುಡ್‍ನಲ್ಲಿ ಈಗ ವಿಶೇಷ ಚರ್ಚೆ ಶುರುವಾಗಿದ್ದು, ಈ ಜೋಡಿ ಏನೇ ಮಾಡಿದರೂ ಇವರ ಮೇಲೆ ಒಂದು ಕಣ್ಣುಟ್ಟಿರುವ ಗಾಸಿಪ್ ಪಂಡಿತರ ಬಾಯಿಗೆ ಅಗೆಯೋದಕ್ಕೆ ಹೊಸ ತಂಬೂಲ ಸಿಕ್ಕಂತ್ತಾಗಿದೆ.

    ಈ ಹಿಂದೆ ಪ್ರಭಾಸ್-ಅನುಷ್ಕಾ ಮಧ್ಯೆ ರಿಯಲ್ ಲವ್ ಇದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇಬ್ಬರೂ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಹಬ್ಬಿತ್ತು. ಇಂತಹ ಗಾಸಿಪ್‍ಗಳನ್ನು ಪ್ರಭಾಸ್ ನೇರವಾಗಿ ತಳ್ಳಿ ಹಾಕಿದ್ದರು.

    ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಭಾಸ್ ರ ಮುಂದಿನ ಚಿತ್ರವಾದ `ಸಾಹೋ’ ಚಿತ್ರ ತಂಡವು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ‘ಸಾಹೋ’ ಫಸ್ಟ್ ಲುಕ್ ಇಂದು ರಿಲೀಸ್ ಆಗಿದೆ. ಬಿಡುಗಡೆಯಾಗಿರುವ ಫಸ್ಟ್ ಲುಕ್‍ನಲ್ಲಿ ಪ್ರಭಾಸ್ ಬ್ಲ್ಯಾಕ್ ಕೋಟ್‍ನಲ್ಲಿ ಸ್ಟೈಲಿಶ್ ಆಗಿ ಫೋನ್‍ನಲ್ಲಿ ಮಾತನಾಡುತ್ತಾ ಬರುತ್ತಿದ್ದಾರೆ. ಪೋಸ್ಟರ್‍ನಲ್ಲಿ ಪ್ರಭಾಸ್ ಕಣ್ಣುಗಳೇ ಹೈಲೈಟ್ ಆಗಿದ್ದು, ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

    ಸುಜಿತ್ ನಿರ್ದೇಶನದಲ್ಲಿ ಸಾಹೋ ಚಿತ್ರ ಮೂಡಿಬರುತ್ತಿದ್ದು, ಪ್ರಭಾಸ್‍ಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ಶ್ರದ್ಧಾ ಕಪೂರ್ ಅಭಿನಯಿಸುತ್ತಿದ್ದಾರೆ.