Tag: Hyderabad

  • ಅತ್ಯಾಚಾರ ಪ್ರಕರಣ: ಚೈನ್ನೈ ಎಕ್ಸ್ ಪ್ರೆಸ್ ಸಿನಿಮಾದ ನಿರ್ಮಾಪಕ ಕರೀಂ ಮೊರಾನಿ ಅರೆಸ್ಟ್

    ಅತ್ಯಾಚಾರ ಪ್ರಕರಣ: ಚೈನ್ನೈ ಎಕ್ಸ್ ಪ್ರೆಸ್ ಸಿನಿಮಾದ ನಿರ್ಮಾಪಕ ಕರೀಂ ಮೊರಾನಿ ಅರೆಸ್ಟ್

    ಹೈದರಾಬಾದ್: ಮದುವೆಯಾಗೋದಾಗಿ ನಂಬಿಸಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಆರೋಪದಲ್ಲಿ ಚೆನ್ನೈ ಎಕ್ಸ್ ಪ್ರೆಸ್ ಚಿತ್ರದ ನಿರ್ಮಾಪಕ ಕರೀಂ ಮೊರಾನಿಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

    ತೆಲಂಗಾಣದ ಹಯಾತ್‍ನಗರ ಪೊಲೀಸರು ತಡ ರಾತ್ರಿ ಬಂಧಿಸಿದ್ದು, 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಈ ಕೃತ್ಯ ಎಸಗಲಾಗಿದೆ. ಇನ್ನೂ ಆರೋಪಿ ಕರೀಂ ಮೊರಾನಿ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬರುತ್ತಿದ್ದಂತೆ ಜಾಮೀನು ಕೋರಿ ಹೈದ್ರಾಬಾದ್ ನ್ಯಾಯಾಲಯದ ಮೊರೆ ಹೋಗಿದ್ದರು. ಜಾಮೀನು ಸಿಗದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ತೆಲಂಗಾಣ ಪೊಲೀಸರು ಆರೋಪಿ ಕರೀಂ ಮೊರಾನಿಯರನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಯುವತಿಯನ್ನು ರಾಮೋಜಿ ಫಿಲ್ಮ್ ಸಿಟಿ ಪ್ರದೇಶಗಳಿಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರ ಮಾಡಲಾಗಿದೆ. ನಗ್ನ ಚಿತ್ರ ಹಾಗೂ ವಿಡಿಯೋ ಗಳನ್ನು ತೆಗೆದು ಬ್ಲಾಕ್‍ಮೇಲ್ ಮಾಡುತ್ತಿದ್ದು, ನನ್ನ ನಗ್ನ ವಿಡಿಯೋಗಳನ್ನು ಕರೀಂ ಅವರ ಸ್ನೇಹಿತರಿಗೆ ಶೇರ್ ಮಾಡುವುದಾಗಿ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ದೂರುದಾರ ಯುವತಿ ದೆಹಲಿಯಲ್ಲಿ ಬಿಬಿಎ ಪದವಿ ಪಡೆದಿದ್ದು, ಮುಂಬೈನಲ್ಲಿ ರಂಗಭೂಮಿ ಕಲಾವಿದೆಯಾಗಿದ್ದರು. ಯುವತಿಗೆ ಕರೀಂನ ಮಗಳ ಮೂಲಕ ಪರಿಚಯವಾಗಿದ್ದಳು ಎಂದು ಹೇಳಲಾಗಿದೆ. ಮೊರಾನಿ ಬಾಲಿವುಡ್ ನ ಶಾರುಖ್ ಖಾನ್ ಅಭಿನಯದ ಚೆನ್ನೈ ಎಕ್ಸ್ ಪ್ರೆಸ್, ದಿಲ್‍ವಾಲೆ, ಹ್ಯಾಪಿ ನ್ಯೂ ಇಯರ್ ಸೇರಿದಂತೆ ಹಿಟ್ ಚಿತ್ರಗಳಿಗೆ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ.

  • ಮಗನ ಸಾವಿಗೆ ಪ್ರತೀಕಾರವಾಗಿ ಅಣ್ಣನ ಮಗನನ್ನೇ ಕೊಂದ!

    ಮಗನ ಸಾವಿಗೆ ಪ್ರತೀಕಾರವಾಗಿ ಅಣ್ಣನ ಮಗನನ್ನೇ ಕೊಂದ!

    ಹೈದರಾಬಾದ್: ತನ್ನ ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಅಣ್ಣನ ಮಗನನ್ನೇ ಅಪಹರಣ ಮಾಡಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್‍ನಲ್ಲಿ ಶುಕ್ರವಾರ ನಡೆದಿದ್ದು, ಆರೋಪಿ ಚಿಕ್ಕಪ್ಪನ್ನು ಪೊಲೀಸರು ಬಂಧಿಸಿದ್ದಾರೆ.

    ಹೈದರಾಬಾದ್‍ನ ದಾದೀಪುರದಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಅಬ್ಬಾಸ್ ಹುಸೈನ್ ರಿಜ್ವಿ ಹತ್ಯೆಯಾದ ಬಾಲಕ. ಚಿಕ್ಕಪ್ಪ ಜಾದವ್ ಅಲಿ ಕೊಲೆ ಆರೋಪಿಯಾಗಿದ್ದು, ಹಳೆ ವೈಷಮ್ಯವೆ ಬಾಲಕನ ಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. 2008ರಲ್ಲಿ ಅಬ್ಬಾಸ್ ಹುಸೈನ್ ರಿಜ್ವಿಯ ಪೋಷಕರು ಜಾವದ್ ಅಲಿ ಮಗನ ಸಾವಿಗೆ ಕಾರಣರಾಗಿದ್ದರು. ಹೀಗಾಗಿ ಪೋಷಕರ ಮೇಲಿನ ದ್ವೇಷದಿಂದ ಸೇಡು ತೀರಿಸಿಕೊಳ್ಳಲು ಬಾಲಕನನ್ನು ಅಪಹರಣ ಮಾಡಿ ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಕೆಲ ದಿನಗಳ ಹಿಂದೆ ಬಾಲಕ ತನ್ನ ಪೋಷಕರ ಜೊತೆ ಮೊಹರಂ ಹಬ್ಬಕ್ಕೆಂದು ದಾದೀಪುರದಲ್ಲಿರುವ ತನ್ನ ಅಜ್ಜ ಖಮರ್ ಹುಸೈನ್ ರಿಜ್ವಿ ಮನೆಗೆ ಹೋಗಿದ್ದನು. ಶುಕ್ರವಾರದಂದು ಮೊಹರಂ ಮೊದಲ ದಿನವಾದ್ದರಿಂದ ಅಲಮ್ ಕೂರಿಸಲು ತಯಾರಿ ನಡೆಸುತ್ತಿದ್ದ. ಇದೇ ಸಂದರ್ಭದಲ್ಲಿ ಚಿಕ್ಕಪ್ಪ ಜಾವಿದ್ ಅಲಿ ಬಾಲಕನನ್ನು ಉಪಾಯದಿಂದ ಕರೆದೊಯ್ದು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ಇಲ್ಲಿನ ರೇನ್ ಬಜಾರ್ ಪ್ರದೇಶದ ನಾಗಾಬೌಲಿ ಸ್ಮಶಾನದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.

    ಆರೋಪಿ ಜಾವದ್ ಅಲಿ ತನ್ನ ಮಗನ ಸಾವಿಗೆ ಬಾಲಕನ ಅಜ್ಜನನ್ನು ಹೊಣೆಯಾಗಿಸಿದ್ದಾನೆ. ಜಾವದ್ ಸೌದಿ ಅರೇಬಿಯಾದಲ್ಲಿದ್ದಾಗ ತನ್ನ ಮಗನನ್ನು ಖಮರ್ ಹುಸೇನ್ ರಿಜ್ವಿಯ ಆಶ್ರಯದಲ್ಲಿ ಬಿಟ್ಟಿದ್ದ. ಹೀಗಾಗಿ ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಅಬ್ಬಾಸ್ ಹುಸೇನ್ ರಿಜ್ವಿಯನ್ನ ಕೊಲೆ ಮಾಡಿದ್ದಾನೆ.

    ರಿಜ್ವಿ ಅಜ್ಜ ಇಲ್ಲಿನ ಬಿಬಿ ಕಾ ಆಲಮ್‍ನಲ್ಲಿ ಅಲಮ್ ಬಾರ್ದರ್ ಆಗಿ ಕೆಲಸ ಮಾಡುತ್ತಿದ್ದು, ಅಜ್ಜನಂತೆ ಬಾಲಕ ಕೂಡ ಅಲಮ್ ಬಾರ್ದರ್ ಆಗಬಹುದು ಎಂದು ಜಾವದ್ ಭಾವಿಸಿದ್ದ. ಹೀಗಾಗಿ ಆತನನ್ನು ಕೊಲ್ಲಲು ನಿರ್ಧರಿಸಿದ್ದ. ಈ ಸಂಬಂಧ ಆರೋಪಿ ಜಾವದ್ ಅಲಿ ವಿರುದ್ಧ ಐಪಿಸಿ ಸೆಕ್ಷನ್ 363 ಮತ್ತು 302ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ ವಿ. ಸತ್ಯನಾರಾಯಣ ತಿಳಿಸಿದ್ದಾರೆ.

  • ಹೆಂಡ್ತಿಗೆ ಎಂಬಿಬಿಎಸ್ ಸೀಟ್ ಸಿಗ್ಲಿಲ್ಲವೆಂದು ಬೆಂಕಿ ಹಚ್ಚಿ ಕೊಂದ್ನಾ ಟೆಕ್ಕಿ?

    ಹೆಂಡ್ತಿಗೆ ಎಂಬಿಬಿಎಸ್ ಸೀಟ್ ಸಿಗ್ಲಿಲ್ಲವೆಂದು ಬೆಂಕಿ ಹಚ್ಚಿ ಕೊಂದ್ನಾ ಟೆಕ್ಕಿ?

    ಹೈದರಾಬಾದ್: ಎಂಬಿಬಿಎಸ್ ವ್ಯಾಸಂಗಕ್ಕೆ ಪ್ರವೇಶಾತಿ ಪಡೆಯಲು ವಿಫಲಳಾದ ಹೆಂಡತಿಯನ್ನು ಸಾಫ್ಟ್ ವೇರ್ ಎಂಜಿನಿಯರ್ ಪತಿಯೊಬ್ಬ ಬೆಂಕಿ ಹಚ್ಚಿ ಕೊಲೆ ಮಾಡಿರುವುದಾಗಿ ಹೈದರಾಬಾದ್ ಪೊಲೀಸರು ಶಂಕಿಸಿದ್ದಾರೆ. ಮೃತ ಮಹಿಳೆಯ ಪತಿ ಹಾಗೂ ಆತನ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.

    25 ವರ್ಷದ ಹಾರಿಕಾ ಕುಮರ್ ಮೃತ ದುರ್ದೈವಿ. ಹೈದರಾಬಾದ್‍ನ ಎಲ್‍ಬಿ ನಗರದ ರಾಕ್ ಟೌನ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಹಾರಿಕಾ ಪೋಷಕರು ಮಗಳನ್ನ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದು, ವರದಕ್ಷಿಣೆ ಕಿರುಕುಳದ ಬಗ್ಗೆಯೂ ಪ್ರಕರಣ ದಾಖಲಿಸಿದ್ದಾರೆ.

    ಹಾರಿಕಾ ಪತಿ ಋಷಿ ಕುಮಾರ್ ಭಾನುವಾರ ರಾತ್ರಿ ಹಾರಿಕಾ ತಾಯಿಗೆ ಕರೆ ಮಾಡಿ, ನಿಮ್ಮ ಮಗಳು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಾರಿಕಾ ಆತ್ಮಹತ್ಯೆ ಮಾಡಿಕೊಂಡಳೆಂದು ಪತಿ ಋಷಿ ಹೇಳುತ್ತಿದ್ದಾನೆ. ಆದ್ರೆ ನಾವು ಸ್ಥಳಕ್ಕೆ ಹೋಗಿ ನೋಡಿದ ನಂತರ ಇದೊಂದು ಕೊಲೆಯಂತೆ ಕಾಣುತ್ತಿದೆ. ಋಷಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ಇದೆ ಎಂದು ಎಸಿಪಿ ವೇಣುಗೋಪಾಲ್ ರಾವ್ ಹೇಳಿದ್ದಾರೆ.

    ಹಾರಿಕಾ ಕೆಲವು ಸಮಯದಿಂದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯನ್ನ ತೆಗೆದುಕೊಂಡಿದ್ದಳು. ಆದ್ರೆ ಈ ವರ್ಷವೂ ಆಕೆ ತೇರ್ಗಡೆಯಾಗಿರಲಿಲ್ಲ. ಖಾಸಗಿ ಕಾಲೇಜೊಂದರಲ್ಲಿ ಡೆಂಟಲ್ ಸರ್ಜರಿ ಪದವಿಗೆ ಆಯ್ಕೆಯಾಗಿದ್ದಳು. ಆದ್ರೆ ಪತಿ ಋಷಿಗೆ ಇದರಿಂದ ತೃಪ್ತಿಯಿರಲಿಲ್ಲ. ಆಕೆಗೆ ಡಿವೋರ್ಸ್ ಕೊಡುವುದಾಗಿ ಬೆದರಿಕೆ ಹಾಕಿದ್ದ ಎಂದು ಹಾರಿಕಾ ಪೋಷಕರು ಆರೋಪ ಮಾಡಿದ್ದಾರೆ.

    ಹಾರಿಕಾ ಮತ್ತು ಋಷಿಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ವರದಕ್ಷಿಣೆಗಾಗಿಯೂ ಕಿರುಕುಳ ನೀಡುತ್ತಿದ್ದ. ಪ್ಲಾನ್ ಮಾಡಿ ಈ ಕೊಲೆ ಮಾಡಿದ್ದಾರೆ ಎಂದು ಹಾರಿಕಾ ತಾಯಿ ಹಾಗೂ ಸಹೋದರಿ ಹೇಳಿದ್ದಾರೆ.

    ಮಹಿಳೆಯನ್ನ ಮೊದಲು ಕತ್ತು ಹಿಸುಕಿ ಕೊಲೆ ಮಾಡಿ ನಂತರ ಆಕೆಯ ದೇಹವನ್ನು ಸುಟ್ಟುಹಾಕಲಾಗಿದ್ಯಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿಯಲಿದೆ. ಸದ್ಯ ವರದಿಗಾಗಿ ಕಾಯುತ್ತಿದ್ದೇವೆ. ತನಿಖೆ ಮುಂದುವರೆಸಿದ್ದೇವೆ ಎಂದು ಪೊಲಿಸರು ಹೇಳಿದ್ದಾರೆ.

  • ಮಹಿಳೆಯರ ಸುರಕ್ಷತೆಗೆ 18ರ ಯುವಕ ತಯಾರಿಸಿದ್ದಾನೆ `ಎಲೆಕ್ಟ್ರೋಶೂ’!

    ಮಹಿಳೆಯರ ಸುರಕ್ಷತೆಗೆ 18ರ ಯುವಕ ತಯಾರಿಸಿದ್ದಾನೆ `ಎಲೆಕ್ಟ್ರೋಶೂ’!

    ಹೈದರಾಬಾದ್: ದೆಹಲಿಯಲ್ಲಿ ನಿರ್ಭಯಾ ಮೇಲೆ ಗ್ಯಾಂಗ್ ರೇಪ್ ನಡೆದ ಬಳಿಕ ಇದೀಗ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುತ್ತವೆ. ಹೀಗಾಗಿ ಹೈದರಾಬಾದ್ ಮೂಲದ ಯುವಕನೊಬ್ಬ ಮಹಿಳೆಯರ ರಕ್ಷಣೆಗೆಂದು ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ.

    ಹೈದರಾಬಾದ್ ನ ಸಿದ್ದಾರ್ಥ್ ಮಂಡಲ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ ವ್ಯಕ್ತಿ. ಹೈದರಾಬಾದ್‍ನ ಹಿಮಾಯತ್ ನಗರದ ನಿವಾಸಿಯೋಗಿರೋ ಸಿದ್ದಾರ್ಥ್, ಉದ್ಯಮಿ ಶ್ರೀರಾಮ್ ಮಂಡಲ ಹಾಗೂ ಶಶಿಕಲಾ ಮಂಡಲ ಅವರ ಪುತ್ರನಾಗಿದ್ದಾನೆ. ಸದ್ಯ ಈತನಿಗೆ 18 ವರ್ಷ ವಯಸ್ಸು.

    ಏನಿದರ ವಿಶೇಷತೆ?: ಈ ಶೂ ಧರಿಸಿದ್ದ ವೇಳೆ ಯಾರಾದ್ರೂ ನಿಮ್ಮ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದರೆ ನೇರವಾಗಿ ಮಹಿಳೆಯ ಅಥವಾ ಯುವತಿಯ ಕುಟುಂಬರಿಗೆ ಹಾಗೂ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನೆಯಾಗುತ್ತದೆ. ಅಲ್ಲದೇ ಅಸಭ್ಯವಾಗಿ ವರ್ತಿಸಿದ ವೇಳೆ ಅವರಿಗೆ ಒಂದು ಒದೆ ಕೊಟ್ಟಲ್ಲಿ ಅವರು ಶಾಕ್ ಗೆ ಒಳಗಾಗುತ್ತಾರೆ.

    ಈ ಶೂ ತಯಾರಿಗೆ ಕಾರಣವೇನು?: 2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ವೇಳೆ ಸಿದ್ದಾರ್ಥ್ ಗೆ 12ರ ಹರೆಯ. ಘಟನೆಯಿಂದ ಚಿಂತೆಗೀಡಾದ ಬಾಲಕ ಸಿದ್ದಾರ್ಥ್ ಮಹಿಳೆಯರ ರಕ್ಷಣೆಗೆ ಕೊಡುಗೆ ನೀಡಬೇಕೆಂದು ಪಟ್ಟು ಹಿಡಿದಿದ್ದನು. ಅಂತೆಯೇ ಇಂದು ಆತ ಈ ಶೂ ತಯಾರು ಮಾಡುವಲ್ಲಿ ಯಶಸ್ವಿಯಾಗಿದ್ದು, ಇದರಿಂದ ಯುವತಿ ಅಥವಾ ಮಹಿಳೆಯರಿಗೆ ಯಾರಾದ್ರೂ ಕಿರುಕುಳ ನೀಡಿದ್ರೆ ಎಲೆಕ್ಟ್ರಿಕ್ ಶಾಕ್ ಹೊಡೆಯುತ್ತೆ ಅಂತ ಸಿದ್ದಾರ್ಥ್ ಹೇಳಿದ್ದಾನೆ.

    ಶೂವನ್ನೇ ಯಾಕೆ ಆಯ್ಕೆ ಮಾಡಿಕೊಂಡ?: ಮೊದಲು ಮಹಿಳೆಯರು ಏನಾದ್ರೂ ಕೈಲಿ ಹಿಡಿದುಕೊಂಡು ಹೋಗುವಂತದ್ದನ್ನು ತಯಾರು ಮಾಡುವ ಪ್ಲಾನ್ ಹೊಳೆದಿತ್ತು. ಆದ್ರೆ ಎಲ್ಲಾ ಸಮಯದಲ್ಲೂ ಇದು ಕಷ್ಟ ಸಾಧ್ಯವೆಂದು ಅವನು ಅರಿತ. ಕೆಲವೊಂದು ಬಾರಿ ಕೆಲಸದ ಒತ್ತಡದ ವೇಳೆ ರಕ್ಷಣೆಯ ವಸ್ತುಗಳನ್ನು ಕೊಂಡೊಯ್ಯಲು ಮರೆಯಬಹುದು. ಹೀಗಾಗಿ ಬೇರೆ ಏನಾದ್ರೂ ಉಪಾಯ ಮಾಡೋಣ ಅಂತ ಯೋಚಿಸಿತೊಡಗಿದ್ದನು. ಈ ವೇಳೆ ಆತನ ತಲೆಯಲ್ಲಿ ಹೊಳೆದಿದ್ದು ಚಪ್ಪಲಿ ಅಥವಾ ಶೂ. ಹೀಗಾಗಿ ಆತ ಮಹಿಳೆಯರ ರಕ್ಷಣೆಗಾಗಿ ಯಾವ ರೀತಿ ಒಂದು ಶೂ ಅಥವಾ ಚಪ್ಪಲಿ ತಯಾರಿಸಬಹುದೆಂದು ಯೋಚಿಸಿ ಅದ್ರ ನಕಲಿಯನ್ನು ತಯಾರಿಸಿದ್ದಾನೆ.

    ಈಗ ನಾನು ಸಾಧನದ ಮಾದರಿಯನ್ನು ತಯಾರಿಸಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇನೆ. ಒಟ್ಟಿನ್ಲಲಿ ಮಹಿಳೆಯ ರಕ್ಷಣೆಗಾಗಿ ಒಂದು ಚಪ್ಪಲಿ ಅಥವಾ ಶೂ ತಯಾರಿಸಲು ಎರಡು ವರ್ಷ ಬೇಕಾಯಿತು. ಈ ಮಧ್ಯೆ ಓದಿನ ಕಡೆಗೂ ಸ್ವಲ್ಪ ಗಮನಹರಿಸಬೇಕಾಯಿತು ಅಂತ ಸಿದ್ದಾರ್ಥ್ ಹೇಳಿದ್ದಾನೆ.

  • ಮೃತದೇಹ ಮನೆಯೊಳಗೆ ತರದಂತೆ ತಡೆದ ಮಾಲೀಕ- ರಾತ್ರಿಯಿಡೀ ಮಗನ ಶವದೊಂದಿಗೆ ರಸ್ತೆಯಲ್ಲಿದ್ದ ತಾಯಿ

    ಮೃತದೇಹ ಮನೆಯೊಳಗೆ ತರದಂತೆ ತಡೆದ ಮಾಲೀಕ- ರಾತ್ರಿಯಿಡೀ ಮಗನ ಶವದೊಂದಿಗೆ ರಸ್ತೆಯಲ್ಲಿದ್ದ ತಾಯಿ

    ಹೈದರಾಬಾದ್: ಮಹಿಳೆಯೊಬ್ಬರು ಮಳೆಯ ನಡುವೆ ರಾತ್ರಿಯಿಡೀ ನಡುರಸ್ತೆಯಲ್ಲಿ ತನ್ನ ಮಗನ ಮೃತದೇಹವನ್ನು ಕಾವಲು ಕಾದ ಮನಕಲಕುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ತೆಲಂಗಾಣ ರಾಜ್ಯ ರಾಜಧಾನಿಯಾದ ಹೈದರಾಬಾದ್‍ನ ಕುಕ್ಕಟ್‍ಪಲ್ಲಿ ಪ್ರದೇಶದ ವೆಂಕಟೇಶ್ವರ್ ನಗರದಲ್ಲಿ ಈ ಘಟನೆ ಸಂಭವಿಸಿದೆ. ನಾಲ್ಕು ವರ್ಷಗಳ ಹಿಂದೆ ಮೆಹಬೂಬ್‍ನಗರ ಜಿಲ್ಲೆಯಿಂದ ತನ್ನ ಎರಡು ಮಕ್ಕಳೊಂದಿಗೆ ಇಲ್ಲಿಗೆ ಬಂದ ಈಶ್ವರಮ್ಮ, ವೆಂಕಟೇಶ್ವರ ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

    ಈಶ್ವರಮ್ಮ ಅವರ ಕಿರಿಯ ಮಗ ಸುರೇಶ್ ಡೆಂಗ್ಯೂ ಜ್ವರದಿಂದ ತೀವ್ರವಾಗಿ ಬಳಲಿ ಬುಧುವಾರ ಸಂಜೆ ಮೃತಪಟ್ಟಿದ್ದ. ಈತನ ಮೃತದೇಹವನ್ನು ಅಂದು ಸಂಜೆ ಆತನ ಕುಟುಂಬಸ್ಥರು ತಾವು ವಾಸವಿದ್ದ ಬಾಡಿಗೆ ಮನೆಗೆ ತಂದಿದ್ದಾರೆ. ಆದರೆ ಮನೆಯ ಮಾಲೀಕ ಮೃತ ದೇಹವನ್ನು ಮನೆಯ ಒಳಗೆ ತೆಗೆದುಕೊಂಡು ಹೋಗಲು ಅನುಮತಿಯನ್ನು ನೀಡದೆ ಮನೆಯಿಂದ ಹೊರಹಾಕಿದ್ದಾನೆ. ಶವವನ್ನು ಒಳಗೆ ತೆಗೆದುಕೊಂಡು ಹೋದರೆ ತನ್ನ ಕುಟುಂಬಕ್ಕೆ ಕೆಟ್ಟದ್ದಾಗುತ್ತದೆ ಎಂದು ಮಾಲೀಕ ಜಗದೀಶ್ ಗುಪ್ತಾ ಹೇಳಿದ್ದಾನೆ.

    ಸುರೇಶ್ ತಾಯಿ ಈಶ್ವರಪ್ಪ ಇಲ್ಲಿಮ ರೂಮ್‍ವೊಂದರಲ್ಲಿ ವಾಸವಿದ್ದು, ಉಳಿದಂತೆ ಗುಪ್ತಾ ಹಾಗೂ ಅವರ ಸಂಬಂಧಿಕರೇ ಇಲ್ಲಿ ವಾಸ ಮಾಡುತ್ತಿದ್ದಾರೆ. ಬಾಲಕ ಡೆಂಗ್ಯೂ ಜ್ವರದಿಂದ ಬಳಲಿ ಮೃತಪಟ್ಟಿದ್ದರಿಂದ ಅದರಿಂದ ಇನ್ಫೆಕ್ಷನ್ ಆಗಬಹುದೆಂದು ಗುಪ್ತಾ ಹೇಳಿದ್ದಾನೆ.

    ಹೀಗಾಗಿ ಇಡೀ ರಾತ್ರಿ ಈಶ್ವರಮ್ಮ ಮನೆಯ ಹೊರಗೆ ಮೃತದೇಹದ ಜೊತೆ ಕಾಲ ಕಳೆಯುವಂತಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರೂ ಕೂಡ ಇದನ್ನ ಪ್ರಶ್ನಿಸಿಲ್ಲ.

    ಮರುದಿನ ಮುಂಜಾನೆ ವಾಕಿಂಗ್ ಮಾಡುತ್ತಿದ್ದವರು ಈಶ್ವರಮ್ಮ ಹಾಗೂ ಅವರ ಹಿರಿಯ ಮಗ ಮೃತದೇಹವನ್ನು ಹಿಡಿದು ಕುಳಿತಿದ್ದನ್ನು ನೋಡಿದ್ದಾರೆ. ನಂತರ ಸಾಕಷ್ಟು ಜನ ಗುಂಪು ಸೇರಿದ್ದಾರೆ. ಬಳಿಕ ಒಂದು ಪೆಟ್ಟಿಗೆಯನ್ನ ತರಿಸಿಮೃತದೇಹವನ್ನ ಅದರಲಿ ಇರಿಸಿದ್ದಾರೆ. ಕೆಲವರು ಅಂತ್ಯಸಂಸ್ಕಾರ್ಕಕಾಗಿ ಹಣ ಸಂಗ್ರಹಿಸಿ ಸಹಾಯ ಮಾಡಿದ್ದಾರೆ.

    ಮನೆಯ ಮಾಲೀಕನ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿರುವ ಸ್ಥಳಿಯರು, ಯಾರ ಮನೆಯಲ್ಲಿ ತಾನೆ ಸಾವು ಸಂಭವಿಸಿಲ್ಲ? ಅಥವಾ ಮುಂದೆ ಸಂಭವಿಸುವುದಿಲ್ವಾ ಎಂದು ಪ್ರಶ್ನಿಸಿದ್ದಾರೆ.

  • ಶಾಲಾ ಸಮವಸ್ತ್ರ ಧರಿಸಿ ಬರದಿದ್ದಕ್ಕೆ ಬಾಲಕಿಗೆ ಏನು ಶಿಕ್ಷೆ ಕೊಟ್ರು ಗೊತ್ತಾ?

    ಶಾಲಾ ಸಮವಸ್ತ್ರ ಧರಿಸಿ ಬರದಿದ್ದಕ್ಕೆ ಬಾಲಕಿಗೆ ಏನು ಶಿಕ್ಷೆ ಕೊಟ್ರು ಗೊತ್ತಾ?

    ಹೈದರಾಬಾದ್: ಶಾಲಾ ಸಮವಸ್ತ್ರ ಧರಿಸಿ ಬರಲಿಲ್ಲವೆಂಬ ಕಾರಣಕ್ಕೆ ಶಿಕ್ಷೆಯಾಗಿ ಹುಡುಗರ ಟಾಯ್ಲೆಟ್‍ಗೆ ನನ್ನನ್ನು ಕಳಿಸಿದ್ರು ಎಂದು ಹೈದರಾಬಾದ್‍ನ ಖಾಸಗಿ ಶಲೆಯ 11 ವರ್ಷದ ಬಾಲಕಿಯೊಬ್ಬಳು ಹೇಳಿದ್ದಾಳೆ.

    ಬಾಲಕಿಯ ತಂದೆ ವಿಡಿಯೋ ಮಾಡಿದ್ದು, ಇದರಲ್ಲಿ 5ನೇ ತರಗತಿಯ ಬಾಲಕಿ ತನಗೆ ನೀಡಿದ ಶಿಕ್ಷೆಯ ಬಗ್ಗೆ ವಿವರಿಸಿದ್ದಾಳೆ. ನಾನು ಕ್ಲಾಸ್‍ಗೆ ಹೋಗುವ ಸಂದರ್ಭದಲ್ಲಿ ಮೊದಲನೇ ಮಹಡಿಯಲ್ಲಿ ಪಿಟಿ ಟೀಚರ್ ನನ್ನನ್ನು ಹಿಡಿದರು. ನಾನು ನನ್ನ ಡೈರಿ ನೋಡುವಂತೆ ಕೇಳಿಕೊಂಡೆ. ಆದ್ರೆ ಯಾರೂ ಕೆಳಿಸಿಕೊಳ್ಳಲೇ ಇಲ್ಲ. ನನ್ನ ಮೇಲೆ ಕಿರುಚಾಡಲು ಶುರು ಮಾಡಿದ್ರು. ನನಗೆ ಭಯವಾಗಿ ಏನೂ ಹೇಳಲಿಲ್ಲ. ಇಂಗ್ಲಿಷ್ ಶಿಕ್ಷಕರು ಹಾಗೂ 10ನೇ ತರಗತಿಯ ತೆಲುಗು ಶಿಕ್ಷಕರು ಸೇರಿದಂತೆ 2-3 ಶಿಕ್ಷಕರು ಅಲ್ಲಿದ್ದರು. ಸಮವಸ್ತ್ರದ ಬದಲು ಕಲರ್ ಡ್ರೆಸ್ ಧರಿಸಿ ಬಂದಿದ್ದಲ್ಲದೆ ನಮ್ಮ ಪ್ರಶ್ನೆಗಳಿಗೆ ಇವಳು ಉತ್ತರವೇ ಕೊಡುತ್ತಿಲ್ಲವಲ್ಲ ಎಂದು ಹೇಳುತ್ತಿದ್ದರು. ನಾವು ಈಕೆಯನ್ನ ಹುಡುಗರ ಟಾಯ್ಲೆಟ್‍ಗೆ ಕಳಿಸೋಣ ಎಂದರು. ಎಲ್ಲಾ ಮಕ್ಕಳು ನೋಡುತ್ತಿದ್ದರು ಎಂದು ವಿಡಿಯೋದಲ್ಲಿ ಬಾಲಕಿ ಹೇಳಿಕೊಂಡಿದ್ದಾಳೆ.

    ಬಾಲಕಿಯನ್ನು ಹುಡುಗರ ಟಾಯ್ಲೆಟ್‍ನಲ್ಲಿ 5 ನಿಮಿಷ ಇರುವಂತೆ ಮಾಡಿದ್ದಾಗಿ ಹೇಳಿದ್ದಾಳೆ. ನಂತರ ಆಕೆಯನ್ನು ಕ್ಲಾಸ್‍ಗೆ ಕಳಿಸಲಾಗಿದೆ. ಸಮವಸ್ತ್ರವನ್ನು ಒಗೆದ ನಂತರ ಇನ್ನೂ ಒದ್ದೆ ಇತ್ತು. ಹೀಗಾಗಿ ಕಲರ್ ಡ್ರೆಸ್ ಧರಿಸಿ ಬಂದಿರುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ತನ್ನ ತಾಯಿ ಡೈರಿಯಲ್ಲಿ ಬರೆದಿರುವುದಾಗಿ ಬಾಲಕಿ ಸಮಾಜವಿಜ್ಞಾನ ಶಿಕ್ಷಕಿಗೆ ಹೇಳಿದ್ದಾಳೆ.

    ಘಟನೆಯಿಂದ ನೊಂದ ಬಾಲಕಿ ತಾನು ಆ ಶಾಲೆಗೆ ಹೋಗೋದಿಲ್ಲ ಎಂದು ಹೇಳಿದ್ದಾಳೆ. ಆದ್ರೆ ನಾನು ಶಿಕ್ಷಕರೊಂದಿಗೆ ಮಾತಾಡಿದ್ದೇನೆ. ಇನ್ನು ಯಾರೂ ತೊಂದರೆ ಕೊಡೋದಿಲ್ಲ ಎಂದು ಆಕೆಯ ತಂದೆ ಹೇಳಿತ್ತಿರೋದನ್ನ ವಿಡಿಯೋದಲ್ಲಿ ಕೇಳಿಸಿಕೊಳ್ಳಬಹುದು.

    ಬಾಲಕಿಯ ತಂದೆ ಮಾನವ ಹಕ್ಕು ಹೋರಾಟಗಾರರಾದ ಅಚ್ಯುತ್ ರಾವ್ ಎಂಬವರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಇದು ಪೋಕ್ಸೋ ಕಾಯ್ದೆಯ ಉಲ್ಲಂಘನೆಯೂ ಹೌದು ಎಂದು ಅಚ್ಯುತ್ ರಾವ್ ಹೇಳಿದ್ದಾರೆ. ಶಾಲೆ ಹಾಗೂ ಶಿಕ್ಷಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಿದೆ. ಈ ರೀತಿ ಅಮಾನವೀಯವಾಗಿ ಅವರು ಹೇಗೆ ನಡೆದುಕೊಳ್ಳಲು ಸಾಧ್ಯ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾನವ ಹಕ್ಕುಗಳ ಸಮಿತಿಗೂ ದೂರು ನೀಡಲು ಯೋಚಿಸಿದ್ದಾರೆ.

     

  • ಬೋರ್ಡ್ ನಲ್ಲಿದ್ದ ಪದಗಳನ್ನು ಓದದ್ದಕ್ಕೆ ಶಿಕ್ಷಕ ಬಾಲಕನಿಗೆ ಥಳಿಸಿದ್ದು ಹೀಗೆ!

    ಬೋರ್ಡ್ ನಲ್ಲಿದ್ದ ಪದಗಳನ್ನು ಓದದ್ದಕ್ಕೆ ಶಿಕ್ಷಕ ಬಾಲಕನಿಗೆ ಥಳಿಸಿದ್ದು ಹೀಗೆ!

    ಹೈದರಾಬಾದ್: 2ನೇ ತರಗತಿಯಲ್ಲಿ ಓದುತ್ತಿರುವ 7 ವರ್ಷದ ವಿದ್ಯಾರ್ಥಿಯನ್ನು ಪ್ರಾಂಶುಪಾಲರು ಅಮಾನವೀಯವಾಗಿ ಹೊಡೆದಿರುವ ಘಟನೆ ಹೈದರಾಬಾದ್ ಸಮೀಪದ ಖಾಸಗಿ ಶಾಲೆಯಲ್ಲಿ ನಡೆದಿದೆ.

    ಪ್ರಾಂಶುಪಾಲರಾದ ಸುರೇಶ್ ಸಿಂಗ್ ಬೋರ್ಡ್ ಮೇಲೆ ಕೆಲವು ಪದಗಳನ್ನು ಬರೆದು ಬಾಲಕನಿಗೆ ಓದಲು ಹೇಳಿದ್ದರು. ಆದರೆ ಆತ ಓದದೇ ಇದ್ದಿದ್ದಕ್ಕೆ ಸುರೇಶ್ ಸಿಂಗ್ ಬೆನ್ನಿಗೆ ಹೊಡೆದಿದ್ದು ಬಾಸುಂಡೆ ಬಂದಿದೆ.

    ಘಟನೆ ನಡೆದ ನಂತರ ನಗರದ ಸರ್ಕಾರೇತರ ಸಂಸ್ಥೆ ‘ಬಾಲಾಲ ಹಕ್ಕುಲ ಸಂಗಮ್’ ಪ್ರಾಂಶುಪಾಲರನ್ನು ಬಂಧಿಸಬೇಕು ಹಾಗೂ ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಬೇಡಿಕೆಯಿಟ್ಟಿದ್ದಾರೆ.

    ಹುಡುಗನ ತಾಯಿ ಪ್ರಾಂಶುಪಾಲರು ಮೇಲೆ ದೂರನ್ನು ನೀಡಿದ್ದು, ತಪ್ಪಚಾಬುಟ್ರ ಪೊಲೀಸರು ಪ್ರಾಂಶುಪಾಲರ ವಿರುದ್ಧ ಐಪಿಸಿ ಸೆಕ್ಷನ್ 341 ಮತ್ತು 323 ಅಡಿಯಲ್ಲಿ ಕೇಸನ್ನು ದಾಖಲಿಸಿದ್ದಾರೆ. ಆದರೆ ಪೊಲೀಸರು ಪ್ರಾಂಶುಪಾಲರನ್ನು ಬಂಧಿಸಿಲ್ಲ.

  • ಥಿಯೇಟರ್ ನಲ್ಲಿ ರಾಷ್ಟ್ರಗೀತೆ ವೇಳೆ ಎದ್ದು ನಿಲ್ಲದ 3 ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ!

    ಥಿಯೇಟರ್ ನಲ್ಲಿ ರಾಷ್ಟ್ರಗೀತೆ ವೇಳೆ ಎದ್ದು ನಿಲ್ಲದ 3 ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ!

    ಹೈದರಾಬಾದ್: ಥಿಯೇಟರ್ ನಲ್ಲಿ ಸಿನಿಮಾಗೂ ಮುಂಚೆ ಪ್ರಸಾರ ಮಾಡಲಾದ ರಾಷ್ಟ್ರಗೀತೆಯ ಸಂದರ್ಭದಲ್ಲಿ ಎದ್ದು ನಿಲ್ಲದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ರಾಜೇಂದ್ರ ನಗರ ಪೊಲೀಸರು ಬಂಧಿಸಿದ್ದಾರೆ.

    ಜಮ್ಮು-ಕಾಶ್ಮೀರದ ಬಾರಮುಲ್ಲಾ ನಿವಾಸಿಗಳಾದ ಜಮೀಲ್ ಗುಲ್, ಓಮರ್ ಫೈಜ್ ಲುನೀ ಮತ್ತು ಮುದಾಸಿರ್ ಶಬ್ಬೀರ್ ಬಂಧಿತ ವಿದ್ಯಾರ್ಥಿಗಳಾಗಿದ್ದು, ಇವರು ಸದ್ಯ ಚೆವೆಲ್ಲಾದಲ್ಲಿರೋ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಈ ಆರೋಪವನ್ನು ತಳ್ಳಿಹಾಕಿದ್ದಾರೆ.

    ಈ ಮೂವರು ಯುವಕರು ಸಿನಿಪಾಲಿಸ್ ಮಂತ್ರ ಮಾಲ್ ನಲ್ಲಿ ಮಧ್ಯಾಹ್ನ 3.50ಕ್ಕೆ ಆರಂಭವಾಗುವ ಹಿಂದಿ ಸಿನಿಮಾ `ಬರೇಲಿ ಕಿ ಬರ್ಫಿ’ ನೋಡಲು ಬಂದಿದ್ದರು ಅಂತ ಶಮ್ಶಾಬಾದ್ ವಲಯದ ಉಪ ಆಯುಕ್ತ ಪಿವಿ ಪದ್ಮಜಾ ಹೇಳಿದ್ದಾರೆ.

    ಅಂದು ಸಂಜೆ ಥಿಯೇಟರ್ ಮ್ಯಾನೇಜ್‍ಮೆಂಟ್‍ನವರು ಈ ಬಗ್ಗೆ ದೂರು ನೀಡಿದ್ದರು. ಬಳಿಕ ಮೂವರು ವಿದ್ಯಾರ್ಥಿಗಳ ವಿರುದ್ಧ ರಾಷ್ಟ್ರ ಗೌರವಕ್ಕೆ ಅವಮಾನ ನಿಯಂತ್ರಣ ಕಾಯ್ದೆಯ ಸೆಕ್ಷನ್ 2ರ ಅಡಿ ರಾಜೇಂದ್ರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಥಿಯೇಟರ್ ನಲ್ಲಿ ಯಾವುದೇ ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡಬೇಕೆಂಬುದು ಸುಪ್ರೀಂ ಕೋರ್ಟ್ ಆದೇಶವಾಗಿದೆ.

  • 3ನೇ ತರಗತಿ ಬಾಲಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ!

    3ನೇ ತರಗತಿ ಬಾಲಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ!

    ಹೈದರಾಬಾದ್: ತೆಲುಗು ಪದ್ಯ ಕಲಿತುಕೊಂಡು ಬಂದಿಲ್ಲವೆಂದು ಶಾಲೆಯಲ್ಲಿ ಟೀಚರ್ ಹೊಡೆದಿದ್ದರಿಂದ ಮನನೊಂದ 9 ವರ್ಷದ ವಿದ್ಯಾರ್ಥಿಯೊಬ್ಬ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.

    ಈ ಘಟನೆ ವನಾಪರ್ತಿ ಜಿಲ್ಲೆಯಲ್ಲಿ ನಡೆದಿದೆ. ಆನಂದ್ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯಾಗಿದ್ದು, ಈತ ಸ್ಥಳೀಯ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದನು.

    ಏನಿದು ಘಟನೆ?: ಮೂರು ದಿನದ ಹಿಂದೆ ಟೀಚರ್ ವಿದ್ಯಾರ್ಥಿ ಆನಂದ್ ಬಳಿ ತೆಲುಗು ಪದ್ಯ ಕಲಿತುಕೊಂಡು ಬರುವಂತೆ ಸೂಚಿಸಿದ್ದರು. ಅಂತೆಯೇ ಗುರುವಾರ ಪದ್ಯ ಕಲಿತುಕೊಂಡು ಬಂದಿಯಾ ಅಂತ ಟೀಚರ್ ಕೇಳಿದಾಗ ಆನಂದ್ ಇಲ್ಲ ಎಂದು ಉತ್ತರಿಸಿದ್ದಾನೆ. ಮೂರು ದಿನ ಸಮಯ ಕೊಟ್ಟು ಬಳಿಕವೂ ಕಲಿತುಕೊಂಡು ಬಾರದ ಆನಂದ್ ಮೇಲೆ ಸಿಟ್ಟುಗೊಂಡ ಟೀಚರ್ ಚೆನ್ನಾಗಿ ಹೊಡೆದಿದ್ದಾರೆ. ಇದರಿಂದ ಮನನೊಂದು ಆನಂದ್, ಮನೆಗೆ ಬಂದು ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.

    ಕೂಡಲೇ ಇದನ್ನು ಗಮನಿಸಿದ ಪೋಷಕರು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗನಿಗೆ ಶಾಲೆಯಲ್ಲಿ ಉಳಿದ ವಿದ್ಯಾರ್ಥಿಗಳ ಎದುರು ಟೀಚರ್ ಅವಮಾನ ಮಾಡಿದ್ದಾರೆ. ಹೀಗಾಗಿ ಆತ ಮನೆಗೆ ಬಂದು ಈ ಕೃತ್ಯ ಎಸಗಿದ್ದಾನೆ. ಘಟನೆಯಿಂದ ಆನಂದ್ ದೇಹ ಶೇ.80 ರಷ್ಟು ಸುಟ್ಟು ಹೋಗಿದ್ದರಿಂದ ಜಿಲ್ಲೆಯ ಮೆಹಬುಬ್ ನಗರ್ ಆಸ್ಪತ್ರೆಯಿಂದ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ಆನಂದ್ ತಂದೆ ನಾಗಣ್ಣ ತಿಳಿಸಿದ್ದಾರೆ.

    ಘಟನೆಯ ಬಳಿಕ ಟೀಚರ್ ತಲೆಮರೆಸಿಕೊಂಡಿದ್ದು, ತಮ್ಮ ಮೊಬೈಲನ್ನು ಸ್ವಿಚ್ಚ್ ಆಫ್ ಮಾಡಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಅಂತ ಪೊಲೀಸ್ ಇನ್ಸ್ ಪೆಕ್ಟರ್ ಬಿ. ಸೋಮ್ನಾರಾಯಣ್ ಸಿಂಗ್ ತಿಳಿಸಿದ್ದಾರೆ.

  • ಅಬಾರ್ಷನ್‍ನಿಂದಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    ಅಬಾರ್ಷನ್‍ನಿಂದಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    ಹೈದರಾಬಾದ್: ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಗರ್ಭಪಾತ ಮಾಡಲು ಯತ್ನಿಸಿದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಕೋರ್ಟ್ ಅನುಮತಿ ಇಲ್ಲದ ಹೊರತು 20 ವಾರಗಳಿಗಿಂತ ಹೆಚ್ಚಿನ ಅವಧಿಯ ಭ್ರೂಣವನ್ನು ಗರ್ಭಪಾತ ಮಾಡಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಅನುಶಾ ಮೆಟರ್ನಿಟಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‍ನ ವೈದ್ಯರ ವರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    21 ವರ್ಷ ವಯಸ್ಸಿನ ಕೆ. ಹಾರಿಕಾ ಮೃತ ಯುವತಿ. 7 ತಿಂಗಳ ಗರ್ಭಿಣಿಯಾಗಿದ್ದ ಹಾರಿಕಾ ಹಾಗೂ ಆಕೆಯ ಪ್ರಿಯತಮ ಮಧು ಆಗಸ್ಟ್ 5ರಂದು ಗರ್ಭಪಾತ ಮಾಡಿಸಲು ಆಸ್ಪತ್ರೆಗೆ ಹೋಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆಸ್ಪತ್ರೆಯ ಮೇಲ್ವಿಚಾರಕಿ ಡಾ. ಗಿರಿಜಾ ರಾಣಿ ಗರ್ಭಪಾತ ಮಾಡಲು ಒಪ್ಪಿ 20 ಸಾವಿರ ರೂ. ಕೇಳಿದ್ದರು. ಆದ್ರೆ ಗರ್ಭಪಾತ ಯತ್ನ ವಿಫಲವಾಗಿದ್ದು ಹಾರಿಕಾಗೆ ತೀವ್ರ ರಕ್ತಸ್ರಾವವಾಗಿತ್ತು. ನಂತರ ಆಕೆಯನ್ನ ದಿಲ್‍ಕುಶ್‍ನಗರದ ಮತ್ತೊಂದು ಮೆಟರ್ನಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಇಲ್ಲಿನ ವೈದ್ಯರು ಹೇಳಿದ್ದಾರೆ. ಆದ್ರೆ ಅಲ್ಲಿಗೆ ಕರೆದುಕೊಂಡು ಹೋಗುವಷ್ಟರಲ್ಲಿ ಯುವತಿ ಸಾವನ್ನಪ್ಪಿದ್ದಾರೆ.

    ಹಾರಿಕಾ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದು, ಗರ್ಭಪಾತ ಮಾಡಿದ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ.

    ಪೊಲೀಸರು ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯೆ ಗಿರಿಜಾ ರಾಣಿ ಹಾಗೂ ಪ್ರಿಯಕರ ಮಧು ಸದ್ಯ ಪೊಲೀಸರ ವಶದಲ್ಲಿದ್ದಾರೆ.