Tag: Hyderabad

  • ಐಐಟಿ ಕ್ಯಾಂಪಸ್‌ಗಳಲ್ಲಿ 2 ದಿನದಲ್ಲಿ 2ನೇ ಆತ್ಮಹತ್ಯೆ

    ಐಐಟಿ ಕ್ಯಾಂಪಸ್‌ಗಳಲ್ಲಿ 2 ದಿನದಲ್ಲಿ 2ನೇ ಆತ್ಮಹತ್ಯೆ

    ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಕ್ಯಾಂಪಸ್‌ಗಳಲ್ಲಿ ಇತ್ತೀಚೆಗೆ ಆತ್ಮಹತ್ಯೆಯ ಘಟನೆಗಳು ಬೆಚ್ಚಿ ಬೀಳಿಸುವಂತೆ ಮಾಡುತ್ತಿವೆ. ಪ್ರತಿಭಾವಂತರ ಮನಸ್ಸನ್ನು ಆಕರ್ಷಿಸುವ ಪ್ರಮುಖ ಎಂಜಿನಿಯರ್ ಸಂಸ್ಥೆಯಾಗಿರುವ ಐಐಟಿಯಲ್ಲಿ ಇದೀಗ ಹೈದರಾಬಾದ್ ಹಾಗೂ ಕಾನ್ಪುರದ ಕ್ಯಾಂಪಸ್‌ಗಳಲ್ಲಿ ಕೇವಲ 2 ದಿನಗಳಲ್ಲಿ 2 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

    ಇಂದು ಬೆಳಗ್ಗೆ ಹೈದರಾಬಾದ್‌ನ ಐಐಟಿ ಕಾಲೇಜು ವಿದ್ಯಾರ್ಥಿಯೊಬ್ಬ ಕ್ಯಾಂಪಸ್ ಬಳಿಕ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ರಾಜಸ್ಥಾನದ ಜೋಧಪುರದ ವಿದ್ಯಾರ್ಥಿ ಮೇಘ್ ಕಪೂರ್ ಐಐಟಿಯಲ್ಲಿ ಬಿಟೆಕ್ ಮುಗಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ

     

    ನಿನ್ನೆಯೂ ಕಾನ್ಪುರದ ಐಐಟಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರಶಾಂತ್ ಸಿಂಗ್ ತನ್ನ ಹಾಸ್ಟೆಲ್ ಕೋಣೆಯಲ್ಲಿ ಬಾಗಿಲಿಗೆ ಚಿಲಕ ಹಾಕಿದ್ದ. ನಿನ್ನೆ ಸಂಜೆ ಆತ ನನ್ನ ಕೋಣೆಯ ಬಾಗಿಲು ತೆರೆಯದೇ ಇದ್ದಾಗ ಕ್ಯಾಂಪಸ್ ಸೆಕ್ಯುರಿಟಿ ಸ್ಥಳಕ್ಕೆ ಬಂದು, ಕೋಣೆಯ ಬಾಗಿಲು ಒಡೆದಿದ್ದಾರೆ. ಈ ವೇಳೆ ಆತ ಶವವಾಗಿ ಪತ್ತೆಯಾಗಿದ್ದಾನೆ.

    ಇದಕ್ಕೂ ಮುನ್ನ ಆಗಸ್ಟ್ 31ರಂದು 2ನೇ ವರ್ಷದ ಎಂಟೆಕ್ ವಿದ್ಯಾರ್ಥಿ ರಾಹುಲ್ ಬಿಂಗುಮಲ್ಲ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿ ಐಐಟಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಉತ್ತಮ ಅಂಕ ಸಿಗದೇ ಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ದೇಶದ ಶೇ.80 ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿವೆ: ಕೇಜ್ರಿವಾಲ್

    ಇಂದು ಹೈದರಾಬಾದ್‌ನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಳಿಯಲ್ಲಿ ರೀಲ್ಸ್ ಹುಚ್ಚಾಟ – ರೈಲು ಗುದ್ದಿದ ರಭಸಕ್ಕೆ ಯುವಕ ಪಲ್ಟಿ

    ಹಳಿಯಲ್ಲಿ ರೀಲ್ಸ್ ಹುಚ್ಚಾಟ – ರೈಲು ಗುದ್ದಿದ ರಭಸಕ್ಕೆ ಯುವಕ ಪಲ್ಟಿ

    ಹೈದರಾಬಾದ್: ರೈಲ್ವೇ ಹಳಿಯ ಬಳಿ ಇನ್‍ಸ್ಟಾಗ್ರಾಮ್‍ನಲ್ಲಿ ರೀಲ್ ಮಾಡುತ್ತಿದ್ದ ಹುಡುಗನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್‍ನಲ್ಲಿ ನಡೆದಿದೆ.

    ಭಾನುವಾರ ಈ ಘಟನೆ ನಡೆದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಗಾಯಗೊಂಡ ಹುಡಗನನ್ನು ಅಕ್ಷಯ್ ರಾಜ್ (17) ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ರೈಲ್ವೆ ಹಳಿಯ ಬಳಿ ಹುಡುಗ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದ ರೈಲು ಆತನಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹುಡುಗ ಒಂದು ಸುತ್ತು ತಿರುಗಿ ನೆಲದ ಮೇಲೆ ಬಿದ್ದಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಹಾಲ್ ಟಿಕೆಟ್ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

    ಘಟನೆಯ ಇಡೀ ವೀಡಿಯೋವನ್ನು ಮತ್ತೊಬ್ಬ ವ್ಯಕ್ತಿ ತನ್ನ ಫೋನ್‍ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಗಾಯಗೊಂಡ ಅಕ್ಷಯ್ ಅನ್ನು ಕೂಡಲೇ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಮೂಢನಂಬಿಕೆ ಇನ್ನೂ ಜೀವಂತ – ಸತ್ತ ಬಾಲಕನನ್ನು ಬದುಕಿಸಲು 8 ಗಂಟೆ ಉಪ್ಪಿನಲ್ಲಿಟ್ಟ ಗ್ರಾಮಸ್ಥರು

    ರೈಲ್ವೇ ಹಳಿಗಳ ಬಳಿ ಸಂಚರಿಸಬೇಡಿ, ಇದು ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗಬಹುದು ಎಂದು ರೈಲ್ವೆ ಪೆÇಲೀಸರು ಪದೇ ಪದೇ ಎಚ್ಚರಿಸುತ್ತಿರುತ್ತಾರೆ. ಆದರೆ ರೀಲ್ಸ್, ಸೆಲ್ಫಿ ಕ್ರೇಜ್ ಹಿಂದೆ ಬಿದ್ದು ಅದೆಷ್ಟೋ ಮಂದಿ ಇಂತಹ ಅನಾಹುತಗಳನ್ನು ಮಾಡಿಕೊಂಡರೆ, ಇನ್ನೂ ಹಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ವ್ಯಕ್ತಿ ಆಹಾರ ತರೋದು ಬೇಡ- ಸ್ವಿಗ್ಗಿ ಗ್ರಾಹಕನ ಮೆಸೇಜ್ ವೈರಲ್

    ಮುಸ್ಲಿಂ ವ್ಯಕ್ತಿ ಆಹಾರ ತರೋದು ಬೇಡ- ಸ್ವಿಗ್ಗಿ ಗ್ರಾಹಕನ ಮೆಸೇಜ್ ವೈರಲ್

    ಹೈದಾರಾಬಾದ್: ವ್ಯಕ್ತಿಯೊಬ್ಬ ಸ್ವಿಗ್ಗಿಯಲ್ಲಿ ಆಹಾರ ಆರ್ಡರ್ ಮಾಡಿದಲ್ಲದೆ, ತನಗೆ ಮುಸ್ಲಿಂ ವ್ಯಕ್ತಿ ಆಹಾರ ತರುವುದು ಬೇಡ ಎಂದು ಹೇಳಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

    ಸ್ವಿಗ್ಗಿ ಆರ್ಡರ್ ನ ಸ್ಕ್ರೀನ್‍ಶಾಟ್ ಅನ್ನು ಕಾರ್ಮಿಕರ ಸಂಘಟನೆಯ ಮುಖ್ಯಸ್ಥ ಶೇಕ್ ಸಲಾವುದ್ದೀನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ನೀವು ನಿಲುವು ತೆಗೆದುಕೊಳ್ಳಿ ಎಂದು ಸ್ವಿಗ್ಗಿಗೆ ಒತ್ತಾಯಿಸಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಎಂದು ಎಲ್ಲರಿಗೂ ಆಹಾರವನ್ನು ತಲುಪಿಸಲು ನಾವು ಇಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ. ಸದ್ಯ ಗ್ರಾಹಕನ ಮೆಸೇಜ್‌ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

    ಟ್ವಿಟ್‍ನಲ್ಲೇನಿದೆ..?: ಡಿಯರ್ ಸ್ವಿಗ್ಗಿ, ದಯವಿಟ್ಟು ಇಂತಹ ಮತಾಂಧ ವಿನಂತಿಯ ವಿರುದ್ಧ ನಿಲುವು ತೆಗೆದುಕೊಳ್ಳಿ. ನಾವು (ವಿತರಣಾ ಕೆಲಸಗಾರರು) ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಎಲ್ಲರಿಗೂ ಆಹಾರವನ್ನು ತಲುಪಿಸಲು ಇಲ್ಲಿದ್ದೇವೆ. ಮಜಬ್ ನಹೀ ಸಿಖಾತಾ ಆಪಾಸ್ ಮೇ ಬೈರ್ ರಖ್ನಾ ಎಂದು ಸಲಾವುದ್ದೀನ್ ಎಂದು ತಿಳಿಸಿದ್ದಾರೆ. ಈ ವಿವಾದಕ್ಕೆ ಸ್ವಿಗ್ಗಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: 15 ನಿಮಿಷದಲ್ಲಿ ಸೈಕಲಿನಲ್ಲಿ ಟೀ ತಂದುಕೊಟ್ಟ ಡೆಲಿವರಿ ಬಾಯ್‍ಗೆ ಐಟಿ ಉದ್ಯೋಗಿಯಿಂದ ಬೈಕ್ ಗಿಫ್ಟ್..!

    ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಈ ಟ್ವೀಟ್‌ಗೆ ಆಕ್ರೋಶ ಹೊರಹಾಕಿದ್ದು, ಕಾರ್ಮಿಕರು ಧರ್ಮದ ಹೆಸರಿನಲ್ಲಿ ಇಂತಹ ಕಟುವಾದ ಮತಾಂಧತೆಯನ್ನು ಎದುರಿಸುತ್ತಿರುವುದನ್ನು ಪ್ಲಾಟ್‍ಫಾರ್ಮ್ ಕಂಪನಿಗಳು ನೋಡಿಕೊಂಡು ಕುಳಿತುಕೊಳ್ಳಲು ಸಾಧ್ಯವಿಲ್ಲ. ಕಾರ್ಮಿಕರ ಹಕ್ಕುಗಳನ್ನು ಕಾಪಾಡಲು ಕಂಪನಿಗಳು ಯಾವ ಕ್ರಮ ತೆಗೆದುಕೊಳ್ಳುತ್ತವೆ ಎಂದು  ಸ್ವಿಗಿಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಕ್ಕಿನ ಕೂಗಿನಿಂದ ನಿದ್ರೆಗೆ ಭಂಗ – ಪೆಟ್ರೋಲ್ ಸುರಿದು ಮಾಲೀಕನನ್ನೇ ಕೊಂದ ಭೂಪ

    ಬೆಕ್ಕಿನ ಕೂಗಿನಿಂದ ನಿದ್ರೆಗೆ ಭಂಗ – ಪೆಟ್ರೋಲ್ ಸುರಿದು ಮಾಲೀಕನನ್ನೇ ಕೊಂದ ಭೂಪ

    ಹೈದರಾಬಾದ್: ಬಹುತೇಕ ಮನೆಗಳಲ್ಲಿ ಸಹಜವಾಗಿ ಬೆಕ್ಕು ಇದ್ದೇ ಇರುತ್ತದೆ. ಕೆಲವರಿಗೆ ಬೆಕ್ಕಿನ ಕೂಗು ಅಪ್ಯಾಯಮಾನವೆನಿಸಿದ್ದರೂ ಇನ್ನೂ ಕೆಲವರಿಗೆ ಸದಾ ಕಿರಿ-ಕಿರಿಯಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಕ್ಕನ್ನು ಮನೆಯಿಂದ ಆಚೆಗೆ ಬಿಸಾಡಿದ ಉದಾಹರಣೆಗಳೂ ಇವೆ. ಆದರೆ ಇಲ್ಲೊಬ್ಬ ಬೆಕ್ಕಿನ ಕೂಗಿನಿಂದ ತನ್ನ ನಿದ್ರೆಗೆ ಭಂಗವಾಗುತ್ತದೆ ಎಂದು ಬೆಕ್ಕಿನ ಮಾಲೀಕನನ್ನೇ ಪೆಟ್ರೋಲ್ ಸುರಿದು ಕೊಂದಿದ್ದಾನೆ.

    ಹೌದು. ಬೆಕ್ಕಿನ ಕೂಗಿನಿಂದ ಸಿಟ್ಟಾದ ವ್ಯಕ್ತಿ ಹಾಗೂ ಬಾಲಕ ಸೇರಿ ಸಾಕು ಪ್ರಾಣಿ ಬೆಕ್ಕಿನ ಮಾಲೀಕನನ್ನೇ ಬೆಂಕಿಹಚ್ಚಿ ಸುಟ್ಟು ಹಾಕಿರುವ ವಿಲಕ್ಷಣ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಸಂತ್ರಸ್ತನ ಸ್ನೇಹಿತ ಶನಿವಾರ ಹೈದರಾಬಾದ್ ನಗರದ ಬಂಜಾರ ಪೊಲೀಸರಿಗೆ ದೂರು ನೀಡಿದ ಬಳಿಕ ಇದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಾಷ್ಟ್ರಗೀತೆಗೆ ಅಪಮಾನ : ಬರಗೂರು ವಿರುದ್ಧ ಬಿಜೆಪಿಯಿಂದ ದೂರು

    ಇಲ್ಲಿನ ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಹರೀಶ್ವರ್ ರೆಡ್ಡಿ ಅಲಿಯಾಸ್ ಚಿಂಟು (20) ಮತ್ತು ಇನ್ನೋರ್ವ 17 ವರ್ಷದ ಬಾಲಕ ವಾಸಿಸುತ್ತಿದ್ದರು.

    ಇಲ್ಲಿಗೆ 20 ವರ್ಷದ ಎಜಾಜ್ ಹುಸೇನ್ ಹಾಗೂ 20 ವರ್ಷದ ಅಸ್ಸಾಂ ಮೂಲದ ಬ್ರಾನ್ ಸ್ಟಿಲಿಂಗ್ ಸಹ ಅದೇ ಮನೆಯಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡು ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅಂದೊಂದು ರಾತ್ರಿ ಎಜಾಜ್ ಮತ್ತು ಬ್ರಾನ್ ಇಬ್ಬರೂ ತಮ್ಮ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ತಿರುಗಾಡುತ್ತಿದ್ದ ಬೆಕ್ಕನ್ನು ಕಂಡು ಮನೆಗೆ ತಂದಿದ್ದರು. ಇದನ್ನೂ ಓದಿ: ಬಲವಂತವಾಗಿ ದನದ ಮಾಂಸ ತಿನ್ನಿಸಿದ ಮುಸ್ಲಿಂ ಪತ್ನಿ, ಆಕೆಯ ಸಹೋದರ- ವ್ಯಕ್ತಿ ಆತ್ಮಹತ್ಯೆ

    ಈ ಬೆಕ್ಕನ್ನು ಮನೆಗೆ ತಂದಾಗ ನಿರಂತರವಾಗಿ ಕೂಗುತ್ತಿದ್ದರಿಂದ ಹರೀಶ್ವರ್ ರೆಡ್ಡಿ ನಿದ್ರೆಗೆ ಭಂಗ ಬಂದಿತ್ತು. ಇದರಿಂದ ಹರೀಶ್ವರ್ ತೀವ್ರ ಸಿಟ್ಟಿಗೆದ್ದಿದ್ದರು, ಹರೀಶ್ವರ್ ಜೊತೆಗಿದ್ದ ಬಾಲಕನಿಗೂ ಬೆಕ್ಕಿನ ಕೂಗು ಸಿಟ್ಟು ತರಿಸಿತ್ತು. ಬೆಕ್ಕು ಪದೇ-ಪದೇ ಕೂಗುತ್ತಿದ್ದರಿಂದ ಅಪ್ರಾಪ್ತನಿಗೂ ಕೋಪ ನೆತ್ತಿಗೇರಿತ್ತು. ಮಲಗಿದ್ದ ಇಬ್ಬರೂ ಎದ್ದು ಬೆಕ್ಕನ್ನು ತಂದಿದ್ದ ಎಜಾಜ್ ಎಂಬಾತನ ಮನೆಗೆ ಹೋಗಿ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಏಜಾಜ್‌ಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿತ್ತು. ತಕ್ಷಣವೇ ಆತನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು.

    ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಹರೀಶ್ವರ್ ರೆಡ್ಡಿ, ಎಜಾಜ್ ಆಕಸ್ಮಿಕವಾಗಿ ಬೆಂಕಿ ಹೊತ್ತಿಸಿಕೊಂಡಿದ್ದಾರೆ ಸುಳ್ಳು ಮಾಹಿತಿ ನೀಡಿದ್ದರು. ನಂತರ ಮೃತನ ಸ್ನೇಹಿತ ಬ್ರಾನ್ ನೀಡಿದ ದೂರಿನ ಮೇರೆಗೆ ಪೊಲೀಸರಿಗೆ ಘಟನೆ ತಿಳಿದುಬಂದಿದೆ. ಘಟನೆ ಸಂಬಂಧ ಹರೀಶ್ವರ್ ರೆಡ್ಡಿ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಚಿತ್ರಕ್ಕೆ ಹೈದರಾಬಾದ್ ನಲ್ಲಿ ನಡೀತು ಭರ್ಜರಿ ಫೈಟ್

    ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಚಿತ್ರಕ್ಕೆ ಹೈದರಾಬಾದ್ ನಲ್ಲಿ ನಡೀತು ಭರ್ಜರಿ ಫೈಟ್

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ.

    “ಮಾಫಿಯಾ” ಚಿತ್ರ ತುಂಬಾ ಚೆನ್ನಾಗಿ ಮೂಡಿ ಬರುತ್ತಿದ್ದು, ಪ್ರಜ್ವಲ್ ಅವರ ಈವರೆಗಿನ ಸಿನಿಪಯಣದ ಅತ್ಯುತ್ತಮ ಚಿತ್ರವಾಗಲಿದೆ ಎಂಬ ಭರವಸೆಯಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಹ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರ ಸಹಕಾರಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕುಮಾರ್. ಈ ಸಾಹಸ ಸನ್ನಿವೇಶದ ನಂತರ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿರುತ್ತದೆ. ಆ ಹಾಡಿನ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. ಇದನ್ನೂ ಓದಿ:ನಂದು -ಜಯಶ್ರೀ ಜಟಾಪಟಿ: ನಟಿ ಜಯಶ್ರೀಗೆ ಶಿಕ್ಷೆ ಕೊಟ್ಟ ಬಿಗ್ ಬಾಸ್

    ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಧರ್ಮ ನಿಂದನೆ ಆರೋಪ – ಹಿಂದೂ ವ್ಯಕ್ತಿ ಅಪಾರ್ಟ್ಮೆಂಟ್ ಸುತ್ತ ಜನವೋ ಜನ

    ಧರ್ಮ ನಿಂದನೆ ಆರೋಪ – ಹಿಂದೂ ವ್ಯಕ್ತಿ ಅಪಾರ್ಟ್ಮೆಂಟ್ ಸುತ್ತ ಜನವೋ ಜನ

    ಇಸ್ಲಾಮಾಬಾದ್: ಕೇವಲ ಧರ್ಮನಿಂದನೆಯ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಅದೆಷ್ಟೋ ಹತ್ಯೆಗಳು ನಡೆದಿವೆ. ವಕೀಲರು ತಮ್ಮ ಪ್ರಾಣಕ್ಕೆ ಹೆದರಿ ಅಲ್ಪಸಂಖ್ಯಾತರ ಪರ ವಾದಿಸಲು ನಿರಾಕರಿಸುತ್ತಾರೆ. ಈ ಕಾರಣದಿಂದ ಅಸಂಖ್ಯಾತ ಜನರು ಅದೆಷ್ಟೋ ವರ್ಷಗಳಿಂದ ಜೈಲಿನಲ್ಲಿಯೇ ಕೊಳೆಯುವ ಪರಿಸ್ಥಿತಿ ಬಂದೊದಗಿದೆ. ಇದೇ ರೀತಿಯ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಅಲ್ಪಸಂಖ್ಯಾತರ ಭದ್ರತೆಗೆ ಇದು ಒಂದು ಸವಾಲಾಗಿದೆ.

    ಪಾಕಿಸ್ತಾನದಲ್ಲಿ ಹಿಂದೂ ನೈರ್ಮಲ್ಯ ಕಾರ್ಮಿಕನೊಬ್ಬ ಖುರಾನ್ ಅನ್ನು ಅಪವಿತ್ರಗೊಳಿಸಿರುವುದಾಗಿ ಆರೋಪಿಸಲಾಗಿದ್ದು, ಆತನ ವಿರುದ್ಧ ಧರ್ಮ ನಿಂದನೆಯ ಪ್ರಕರಣ ದಾಖಲಿಸಲಾಗಿದೆ. ಹಿಂದೂ ಅಲ್ಪಸಂಖ್ಯಾತನ ಸೆರೆ ಹಿಡಿಯಲು ಹಾಗೂ ದಾಳಿ ನಡೆಸಲು ಆತನ ಅಪಾರ್ಟ್ಮೆಂಟ್ ಕಟ್ಟಡದ ಸುತ್ತಲೂ ಜನರು ಜಮಾಯಿಸಿರುವುದು ವೀಡಿಯೋವೊಂದರಲ್ಲಿ ಕಂಡುಬಂದಿದೆ.

    ಪಾಕಿಸ್ತಾನದ ಹೈದರಾಬಾದ್‌ನಲ್ಲಿ ನೈರ್ಮಲ್ಯ ಕಾರ್ಮಿಕ ಅಶೋಕ್ ಕುಮಾರ್ ಸ್ಥಳೀಯ ನಿವಾಸಿಯೊಬ್ಬರೊಂದಿಗೆ ಜಗಳವಾಡಿದ್ದು, ಬಳಿಕ ನಿವಾಸಿ ಅಶೋಕ್ ವಿರುದ್ಧ ಧರ್ಮನಿಂದನೆಯ ದೂರು ದಾಖಲಿಸಿದ್ದಾರೆ. ಧರ್ಮನಿಂದನೆಗೆ ಕೋಪಗೊಂಡ ಜನರು ಆತನನ್ನು ಸೆರೆ ಹಿಡಿಯಲು ಹಿಂಸಾತ್ಮಕ ರೂಪದಲ್ಲಿ ಆತನ ನಿವಾಸದ ಸುತ್ತಲೂ ಜಮಾಯಿಸಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾಗೆ ಶೂ ಎತ್ತಿಕೊಟ್ಟ ಬಿಜೆಪಿ ನಾಯಕನ ವೀಡಿಯೋ ವೈರಲ್

    ಹಿಂದೂ ವ್ಯಕ್ತಿಯ ಮೇಲೆ ದಾಳಿ ಮಾಡಲು ನೂರಾರು ಜನರು ಮುಂದಾದಾಗ ಸ್ಥಳೀಯ ಮಾಧ್ಯಮವೊಂದು ಮುಸ್ಲಿಮರ ಪವಿತ್ರ ಪುಸ್ತಕವನ್ನು ಮುಸ್ಲಿಂ ಮಹಿಳೆಯೇ ಸುಟ್ಟು ಅಪಮಾನ ಮಾಡಿರುವುದಾಗಿ ವರದಿ ಮಾಡಿದೆ. ಇದರಲ್ಲಿ ಅಶೋಕ್ ಕುಮಾರ್‌ನ ಯಾವುದೇ ತಪ್ಪಿಲ್ಲ, ಆತನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಿಳಿಸಿದೆ.

    ಅಶೋಕ್ ಕುಮಾರ್ ಮೇಲೆ ದಾಳಿ ನಡೆಸಲು ಪ್ರಯತ್ನಿಸುತ್ತಿದ್ದ ಗುಂಪನ್ನು ಪೊಲೀಸರು ಚದುರಿಸಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಅದರ ವೀಡಿಯೋಗಳು ಕೂಡಾ ವೈರಲ್ ಆಗುತ್ತಿದ್ದು, ಮತಾಂಧತೆಗೆ ಒಬ್ಬನ ಜೀವ ಬಲಿಯಾಗುತ್ತಿದ್ದುದು ತಪ್ಪಿದಂತಾಗಿದೆ ಎಂದು ಜನರು ಕೊಂಡಾಡಿದ್ದಾರೆ. ಇದನ್ನೂ ಓದಿ: ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

    ಪಾಕಿಸ್ತಾನ ಧರ್ಮನಿಂದನೆಗೆ ಕ್ರೂರವಾದ ಕಾನೂನನ್ನು ಹೊಂದಿದೆ. ಕೇವಲ ಆರೋಪಗಳ ಮೇಲೆ ಅನೇಕ ಜನರನ್ನು ಹತ್ಯೆ ಮಾಡಲಾಗಿದೆ. ಡಿಸೆಂಬರ್ 2021 ರಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಪಾಕಿಸ್ತಾನದ ಜನರ ಗುಂಪೊಂದು ಶ್ರೀಲಂಕಾದ ಫ್ಯಾಕ್ಟರಿ ಮ್ಯಾನೇಜರ್ ಅನ್ನು ಹೊಡೆದು ಕೊಂದು, ಸುಟ್ಟು ಹಾಕಿತ್ತು. ಈ ಘಟನೆ ಭಾರೀ ಆಕ್ರೋಶಕ್ಕೂ ಕಾರಣವಾಗಿ, ಆಗಿನ ಪ್ರಧಾನಿ ಇಮ್ರಾನ್ ಖಾನ್ ಅದನ್ನು ಪಾಕಿಸ್ತಾನಕ್ಕೆ ಅವಮಾನದ ದಿನ ಎಂದು ಕರೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ತೆಲುಗು ಚಿತ್ರರಂಗಕ್ಕೆ ನೀವು ರತ್ನ: ಜೂನಿಯರ್ ಎನ್‍ಟಿಆರ್ ಹಾಡಿ ಹೊಗಳಿದ ಅಮಿತ್ ಶಾ

    ತೆಲುಗು ಚಿತ್ರರಂಗಕ್ಕೆ ನೀವು ರತ್ನ: ಜೂನಿಯರ್ ಎನ್‍ಟಿಆರ್ ಹಾಡಿ ಹೊಗಳಿದ ಅಮಿತ್ ಶಾ

    ಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್‍ಟಿಆರ್ ಅವರನ್ನು ಹಾಡಿಹೊಗಳಿದ್ದಾರೆ.

    ಭಾನುವಾರ ಹೈದರಾಬಾದ್‍ನಲ್ಲಿ ಜೂನಿಯರ್ ಎನ್‍ಟಿಆರ್ ಅವರನ್ನು ಅಮಿತ್ ಶಾ ಭೇಟಿಯಾದರು. ಇದೇ ವೇಳೆ ಜೂ.ಎನ್‍ಟಿಆರ್ ಅವರನ್ನು ತೆಲುಗು ಚಿತ್ರರಂಗಕ್ಕೆ ನೀವೊಂದು ರತ್ನ ಮತ್ತು ಅಪ್ರತಿಮ ಪ್ರತಿಭಾವಂತ ನಟ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸಲ್ಲ: ಕೇಂದ್ರ ಸರ್ಕಾರ

    ಜೂನಿಯರ್ ಎನ್‍ಟಿಆರ್ ಅವರೊಂದಿಗೆ ಕುಳಿತುಕೊಂಡು ಸಂವಾದ ನಡೆಸುತ್ತಿರುವ ಫೋಟೋಗಳನ್ನು ಅಮಿತ್ ಶಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಬಹಳ ಪ್ರತಿಭಾವಂತ ನಟ ಮತ್ತು ನಮ್ಮ ತೆಲುಗು ಚಿತ್ರದ ರತ್ನವಾಗಿರು ಜೂನಿಯರ್ ಎನ್‍ಟಿಆರ್ ಜೊತೆಗೆ ಹೈದರಾಬಾದ್‍ನಲ್ಲಿ ಸಂಭಾಷಣೆ ನಡೆಸುತ್ತಿದ್ದೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಹೈವೇಯಲ್ಲಿ ಕಾಡಾನೆ ಪ್ರತ್ಯಕ್ಷ

    ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್‍ಟಿ ರಾಮರಾವ್ ಅವರ ಮೊಮ್ಮಗ ಆಗಿರುವ ನಟ ಜೂನಿಯರ್ ಎನ್‍ಟಿಆರ್ ಅವರನ್ನು ಬಿಜೆಪಿ ನಾಯಕರು ಭಾನುವಾರ ಸಂಜೆ ಅಮಿತ್ ಶಾ ಅವರೊಂದಿಗೆ ಔತಣಕೂಟಕ್ಕೆ ಆಹ್ವಾನಿಸಿದ್ದರು. ಅವರ ತಂದೆ ನಂದಮೂರಿ ಹರಿಕೃಷ್ಣ ಅವರು 2008 ರಿಂದ 2013 ರವರೆಗೆ ಟಿಡಿಪಿ ರಾಜ್ಯಸಭಾ ಸದಸ್ಯರಾಗಿದ್ದರು, ಅವರ ಚಿಕ್ಕಪ್ಪ ಮತ್ತು ನಟ ನಂದಮೂರಿ ಬಾಲಕೃಷ್ಣ ಆಂಧ್ರಪ್ರದೇಶದ ಟಿಡಿಪಿ ಶಾಸಕರಾಗಿದ್ದಾರೆ.

    ನಂದಮೂರಿ ತಾರಕ ರಾಮರಾವ್ ಜೂನಿಯರ್ (ಜೂ.ಎನ್‍ಟಿಆರ್) ಅತ್ಯಂತ ಜನಪ್ರಿಯ ಭಾರತೀಯ ನಟರಾಗಿದ್ದು, ಇತ್ತೀಚೆಗಷ್ಟೇ ನಟ ರಾಮ್‍ಚರಣ್ ಹಾಗೂ ಜೂ.ಎನ್‍ಟಿಆರ್ ಅಭಿನಯಿಸಿದ್ದ ಆರ್‌ಆರ್‌ಆರ್ ಸಿನಿಮಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ನಾವು ನಿಮಗಿಂತ ದೊಡ್ಡ ಗೂಂಡಾಗಳು: ಚರ್ಚೆಗೆ ಕಾರಣವಾದ ಬಿಜೆಪಿ ನಾಯಕನ ಹೇಳಿಕೆ

    ನಾವು ನಿಮಗಿಂತ ದೊಡ್ಡ ಗೂಂಡಾಗಳು: ಚರ್ಚೆಗೆ ಕಾರಣವಾದ ಬಿಜೆಪಿ ನಾಯಕನ ಹೇಳಿಕೆ

    ಹೈದರಾಬಾದ್: ಟಿಆರ್‌ಎಸ್ ಕಾರ್ಯಕರ್ತರಿಗಿಂತ ನಮ್ಮ ಪಕ್ಷದ ಕಾರ್ಯಕರ್ತರು ದೊಡ್ಡ ಗೂಂಡಾಗಳು. ಆದರೆ ಅವರು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಾರೆ ಎಂಬ ಭಾರತೀಯ ಜನತಾ ಪಕ್ಷದ ತೆಲಂಗಾಣ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಅವರ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರನ್ನು ತರಾಟೆಗೆ ತೆಗೆದುಕೊಂಡ ಸಂಜಯ್ ಅವರು, ಟಿಆರ್‌ಎಸ್ ಸರ್ಕಾರ ಹಣ ಮತ್ತು ಅಧಿಕಾರವಿರುವುದರಿಂದ ದಾದಾಗಿರಿ ಮಾಡುತ್ತಿದೆ. ಆದರೆ ಬಿಜೆಪಿ ಕಾರ್ಯಕರ್ತರು ಟಿಆರ್‌ಎಸ್ ಕಾರ್ಯಕರ್ತರಿಗಿಂತ ದೊಡ್ಡ ಗೂಂಡಾಗಳು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ಬಳಿಕ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಪ್ಲಾನ್- ಆಗಸ್ಟ್ 26ರಂದು ನಡೆಯುತ್ತಾ ಹೈಡ್ರಾಮಾ..?

    ಜನಾಂವದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿನ್ನೆ ಪಾಲಕುರ್ತಿಯಿಂದ ರಸ್ತೆ ಬಂದ್ ಮಾಡಿದ್ದರೂ ಜನರ ಗುಂಪು ಬಂದಿತ್ತು. ಕೆಲವರು ದಾದಾಗಿರಿ ಮಾಡುತ್ತಿದ್ದಾರೆ. ನಾವು ಕೂಡ ದಾದಾಗಳೇ. ಆದರೆ ಬಿಜೆಪಿ ಕಾರ್ಯಕರ್ತರು ಜನರ ಹಿತಕ್ಕಾಗಿ ದುಡಿಯುತ್ತಿದ್ದಾರೆ. ಕೆಸಿಆರ್ ಮತ್ತು ಅವರ ಕುಟುಂಬದವರು ಕೇವಲ ಅಧಿಕಾರವಿದೆ ಎಂಬ ಕಾರಣಕ್ಕೆ ಕಳ್ಳರಂತೆ ಎಲ್ಲವನ್ನೂ ಆಕ್ರಮಿಸಿಕೊಳ್ಳುತ್ತಿದ್ದಾರೆ. ಹಣ ಮತ್ತು ಅಧಿಕಾರವಿದೆ ಎಂಬ ಕಾರಣಕ್ಕೆ ಪೊಲೀಸರ ನೆರವಿನಿಂದ ದಾದಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇದೇ ವೇಳೆ, ನಾವು ನಿಮಗಿಂತ ದೊಡ್ಡ ಗೂಂಡಾಗಳು ಮತ್ತು ಬಿಜೆಪಿಯವರು ಬಡವರಿಗಾಗಿ ಗೂಂಡಾಗಿರಿ ಮಾಡುತ್ತಾರೆ. ನಿಮ್ಮಿಂದ ತೆಲಂಗಾಣವನ್ನು ಉಳಿಸಲು ನಾವು ರೌಡಿಸಂ ಕೂಡ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಲದಲ್ಲೇ ತುಮಕೂರಲ್ಲಿ ಸಾವರ್ಕರ್ ಪಾರ್ಕ್- ಹಳೆ ಫೋಟೋ ವೈರಲ್, ಕೈ ಪಡೆಗೆ ಮುಜುಗರ

    ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಟಿಆರ್‌ಎಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿದ್ದರೆ, ಕೆಸಿಆರ್ ನೇತೃತ್ವದ ಸರ್ಕಾರ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಚಲಿಸುತ್ತಿದ್ದ ಎಸ್ಕಲೇಟರ್‌ನಿಂದ ಬಿದ್ದು ಒಂಬತ್ತು ಮಕ್ಕಳಿಗೆ ಗಾಯ

    ಚಲಿಸುತ್ತಿದ್ದ ಎಸ್ಕಲೇಟರ್‌ನಿಂದ ಬಿದ್ದು ಒಂಬತ್ತು ಮಕ್ಕಳಿಗೆ ಗಾಯ

    ಹೈದರಾಬಾದ್: ಚಲಿಸುತ್ತಿದ್ದ ಎಸ್ಕಲೇಟರ್‌ನಿಂದ ಜಾರಿ ಬಿದ್ದು  ಒಂಬತ್ತು ಮಕ್ಕಳು ಗಾಯಗೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    1982ರಲ್ಲಿ ಬಿಡುಗಡೆಯಾಗಿದ್ದ ಗಾಂಧಿ ಸಿನಿಮಾದ ಉಚಿತ ಪ್ರದರ್ಶನವನ್ನು ನಗರದ ಬಂಜಾರಾ ಹಿಲ್ಸ್‍ನ ಪಿವಿಆರ್ ಸಿನೆಪ್ಲೆಕ್ಸ್‍ನಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿತ್ತು. ಈ ವೇಳೆ ಎಸ್ಕಲೇಟರ್‌ನಿಂದ ಜಾರಿ ಬಿದ್ದು ಮಕ್ಕಳು ಗಾಯಗೊಂಡಿದ್ದಾರೆ. ಇದೀಗ ಗಾಯಗೊಂಡಿರುವ ಮಕ್ಕಳನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ದ್ವೇಷದ ಕಸಕ್ಕೆ ಹೋಲಿಸಿದ ನಿರ್ದೇಶಕ ಡಿಲನ್ ಮೋಹನ್ ಗ್ರೇ

    ತೆಲಂಗಾಣ ಸರ್ಕಾರವು ದೇಶಭಕ್ತಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಮಕ್ಕಳಲ್ಲಿ ತಿಳುವಳಿಕೆಯನ್ನು ಮೂಡಿಸಲು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಸ್ಕ್ರೀನಿಂಗ್ ಕೂಡ ಒಂದಾಗಿದೆ. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಮಾರು 22 ಲಕ್ಷ ಮಕ್ಕಳಿಗಾಗಿ 552 ಚಿತ್ರಮಂದಿರಗಳಲ್ಲಿ ಚಿತ್ರವನ್ನು ಪ್ರದರ್ಶಿಸಲಾಗಿತ್ತು. ಇದನ್ನೂ ಓದಿ : 10 ಮಕ್ಕಳನ್ನು ಹೆರಿ, ಹಣ ಪಡೆಯಿರಿ- ರಷ್ಯಾ ಮಹಿಳೆಯರಿಗೆ ಬಂಪರ್‌ ಆಫರ್‌

    Live Tv
    [brid partner=56869869 player=32851 video=960834 autoplay=true]

  • ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

    ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

    ಹೈದರಾಬಾದ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ‌

    ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಿಬಲ್‌ ವಿರುದ್ದ ನ್ಯಾಯಾಂಗ ನಿಂದನೆ ಕೇಸ್‌: ಅಟಾರ್ನಿ ಜನರಲ್‌ಗೆ ಮನವಿ

    ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸೋಮವಾರ ಬೆಳಗ್ಗೆ ಮಿಯಾಪುರ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ನಂತರ ಘಟನೆ ಬೆಳಕಿಗೆ ಬಂದಿದೆ.

    ತಕ್ಷಣವೇ ಒಂದು ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಕಂಡುಬಂದಿದೆ. ಇದನ್ನೂ ಓದಿ: ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಆ್ಯಸಿಡ್ ದಾಳಿ

    ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸಾದ್ ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್‌ಹೌಸ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಸಿಆರ್‌ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

    Live Tv
    [brid partner=56869869 player=32851 video=960834 autoplay=true]