Tag: Hyderabad

  • ಶಿವ ದೇವಾಲಯಕ್ಕೆ ಹೊರಟವರು ರಸ್ತೆ ಅಪಘಾತದ ನಂತ್ರ ಕಣ್ಮರೆ

    ಶಿವ ದೇವಾಲಯಕ್ಕೆ ಹೊರಟವರು ರಸ್ತೆ ಅಪಘಾತದ ನಂತ್ರ ಕಣ್ಮರೆ

    ಹೈದರಾಬಾದ್: ಶಿವ ದೇವಾಲಯಕ್ಕೆ ಹೊರಟಿದ್ದ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿಯ ಪೈಕಿ ಐವರು ನದಿಗೆ ಬಿದ್ದು ಕಣ್ಣರೆಯಾಗಿದ್ದಾರೆ. ಅಲ್ಲದೆ ರಕ್ಷಿಸಲ್ಪಟ್ಟ 7 ಮಂದಿಯಲ್ಲಿ ಬಾಲಕಿಯೋರ್ವಳು ಅಸುನೀಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

    ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಗುರುವಾರ ರಾತ್ರಿ ವೇಳೆ ಸೇತುವೆ ಮೇಲೆ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಆಟೋ ರಿಕ್ಷಾ ನದಿಗೆ ಬಿದ್ದಿದ್ದು, ಬಾಲಕಿ ಸಾವನ್ನಪ್ಪಿದ್ದು,  ಐವರು ಕಣ್ಮರೆಯಾಗಿದ್ದಾರೆ. ಇದನ್ನೂ ಓದಿ: ಮದುವೆಗೆ ಬರುವ ಅತಿಥಿಗಳಿಗೆ ಕತ್ರಿನಾ-ವಿಕ್ಕಿ ವೆಲ್​ಕಮ್ ನೋಟ್

    ಸುಮಾರು 12 ಮಂದಿ ಆತ್ಮಕೂರ್ ಪಟ್ಟಣದಿಂದ ಸಮೀಪದ ಶಿವ ದೇವಾಲಯಕ್ಕೆ ವಿಶೇಷ ಪೂಜೆಗೆಂದು ಆಟೋದಲ್ಲಿ ತೆರಳುತ್ತಿದ್ದರು. ರಾತ್ರಿ 9.30ರ ಸುಮಾರಿಗೆ ನೆಲ್ಲೂರಿನ ಸಂಗೆಮ್ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ನೀರಿನಲ್ಲಿ ಮುಳುಗಿದ್ದ 12 ಜನರಲ್ಲಿ 7 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಅವರಲ್ಲಿ ಒಬ್ಬ ಬಾಲಕಿ ಮೃತಪಟ್ಟಿದ್ದಾಳೆ. ಆಟೋದಲ್ಲಿದ್ದ ಉಳಿದ ಐವರು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ:  ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಾಲೂ ಪ್ರಸಾದ್ ಪುತ್ರ

    POLICE JEEP

    6 ಮಂದಿಯನ್ನು ತಕ್ಷಣವೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ಏಳು ಜನರನ್ನು ರಕ್ಷಿಸಿದ್ದರು. ಇತರರು ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆಯಿದೆ. ರಾತ್ರಿಯಾಗಿರುವುದರಿಂದ ಶೋಧ ಕಾರ್ಯಾಚರಣೆಗೆ ಅಡಚಣೆಯುಂಟಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

  • RRR ಟ್ರೇಲರ್ ಔಟ್ – ರಾಮ್ ಚರಣ್, ಜ್ಯೂ. ಎನ್‍ಟಿಆರ್ ಆ್ಯಕ್ಷನ್‍ಗೆ ಫ್ಯಾನ್ಸ್ ಫಿದಾ

    RRR ಟ್ರೇಲರ್ ಔಟ್ – ರಾಮ್ ಚರಣ್, ಜ್ಯೂ. ಎನ್‍ಟಿಆರ್ ಆ್ಯಕ್ಷನ್‍ಗೆ ಫ್ಯಾನ್ಸ್ ಫಿದಾ

    ಹೈದರಾಬಾದ್: ಟಾಲಿವುಡ್ ನಟ ಜೂನಿಯರ್ ಎನ್‍ಟಿಆರ್ ಹಾಗೂ ನಟ ರಾಮ್ ಚರಣ್ ತೇಜ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾದ ಟ್ರೇಲರ್ ಇಂದು ಬಿಡುಗಡೆಯಾಗಿದೆ.

    ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎಸ್‍ಎಸ್ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿರುವ ಆರ್‌ಆರ್‌ಆರ್‌ ಸಿನಿಮಾ ಗ್ರ್ಯಾಂಡ್ ಆಗಿ ಸ್ಕ್ರೀನ್ ಮೇಲೆ ಎಂಟ್ರಿ ಕೊಡಲು ಇನ್ನೂ ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಈ ಮಧ್ಯೆ ಚಿತ್ರತಂಡ ಇಂದು ಆರ್‌ಆರ್‌ಆರ್‌ ಸಿನಿಮಾದ ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರೇಕ್ಷಕರಲ್ಲಿ ಮತ್ತಷ್ಟು ಕೂತುಹಲ ಕೆರಳಿಸಿದೆ. ಇದನ್ನೂ ಓದಿ: 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

    ಇಂದು ಬೆಳಗ್ಗೆ 11 ಗಂಟೆಗೆ ತಮಿಳು, ತೆಲುಗು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಆರ್‌ಆರ್‌ಆರ್‌ ಟ್ರೇಲರ್ ರಿಲೀಸ್ ಆಗಿದ್ದು, ಮೂರು ನಿಮಿಷವಿರುವ ಈ ಟ್ರೇಲರ್‌ನಲ್ಲಿ ಭರ್ಜರಿ ಸ್ಟಂಟ್ ಸೀಕ್ವೆನ್ಸ್‌ಗಳಿದ್ದು, ನೋಡಲು ಸಖತ್ ಆ್ಯಟ್ರಾಕ್ಟಿವ್ ಆಗಿ ದೃಶ್ಯಗಳು ಮೂಡಿಬಂದಿದೆ.

    RRR

    ಆರ್‌ಆರ್‌ಆರ್‌ ಸಿನಿಮಾ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರ ಜೀನಾಧರಿತ ಭಾವನಾತ್ಮಕ ಕಥೆಯಾಗಿದ್ದು, ಟ್ರೇಲರ್‌ನಲ್ಲಿ ಜೂನಿಯರ್ ಎನ್‍ಟಿಆರ್‌ರನ್ನು ಕೊಮರಂ ಭೀಮ್ ಆಗಿ ತಳ ಮಟ್ಟದ ಸಮುದಾಯದ ಜನರನ್ನು ರಕ್ಷಕರಾಗಿ ಕಾಣಿಸಿಕೊಂಡಿದ್ದರೆ, ಭೀಮನಿಗೆ ಪಾಠ ಕಲಿಸಲು ಬ್ರಿಟಿಷ್ ಅಧಿಕಾರಿಯಾಗಿ ರಾಮ್ ಚರಣ್ ತೇಜ ಅವರು ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಂತರ ಇಬ್ಬರು ಸ್ನೇಹಿತರಾಗಿ ಕೊನೆಗೆ ಬ್ರಿಟಿಷರ ವಿರುದ್ಧ ಬಂಡಾಯ ಎದ್ದಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: 7 ಬಿಳಿ ಕುದುರೆಗಳ ಜೊತೆ ಮಂಟಪಕ್ಕೆ ವಿಕ್ಕಿ ಕೊಡಲಿದ್ದಾರೆ ರಾಯಲ್ ಎಂಟ್ರಿ

    ಟ್ರೇಲರ್‌ನಲ್ಲಿ ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಸರನ್, ಒಲಿವಿಯಾ ಮೋರಿಸ್, ರೇ ಸ್ಟೀವನ್ಸನ್, ಅಲಿಸನ್ ಡೂಡಿ ಮತ್ತು ಸಮುದ್ರಕನಿ ಕಾಣಿಸಿಕೊಂಡಿದ್ದು, ಆರ್‌ಆರ್‌ಆರ್‌ ಸಿನಿಮಾ ಇದೇ 2022ರ ಜನವರಿ 7 ರಂದು ಬಹುಭಾಷೆಗಳಲ್ಲಿ ವಿಶ್ವದ್ಯಾಂತ 1,000 ಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ತೆರೆಕಾಣಲಿದೆ. ಇದನ್ನೂ ಓದಿ: ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

     

    View this post on Instagram

     

    A post shared by Jr NTR (@jrntr)

    ಈ ಮುನ್ನ ಡಿಸೆಂಬರ್ 3 ರಂದು ಆರ್‌ಆರ್‌ಆರ್‌ ಚಿತ್ರದ ಟ್ರೇಲರ್ ಅನ್ನು ಬಿಡುಗಡೆಗೊಳಿಸಲು ನಿರ್ಮಾಪಕರು ಯೋಜಿಸಿದ್ದರು. ಆದರೆ ಕಾರಣಾಂತರಗಳಿಂದ ನಿರ್ಮಾಪಕರು ಡಿಸೆಂಬರ್ 9 ಕ್ಕೆ ಟ್ರೇಲರ್ ಬಿಡುಗಡೆಗೊಳಿಸುವುದಾಗಿ ಘೋಷಿಸಿದ್ದರು. ಆರ್‌ಆರ್‌ಆರ್‌ ಸಿನಿಮಾ ಡಿವಿವಿ ದಾನಯ್ಯ ಅವರ ಪ್ರೊಡಕ್ಷನ್ ಹೌಸ್ ಡಿವಿವಿ ಎಂಟರ್​​ಟೈನ್ಮೆಂಟ್ ಅಡಿಯಲ್ಲಿ ಬಿಗ್ ಬಜೆಟ್‍ನಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾವಾಗಿದ್ದು, 450 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ತಯಾರಾಗಿದೆ ಎನ್ನಲಾಗುತ್ತದೆ.

     

  • ಆಂಧ್ರ ಪ್ರದೇಶ ಪ್ರವಾಹ – 1 ಕೋಟಿ ರೂ. ದೇಣಿಗೆ ಕೊಟ್ಟ ಪ್ರಭಾಸ್

    ಆಂಧ್ರ ಪ್ರದೇಶ ಪ್ರವಾಹ – 1 ಕೋಟಿ ರೂ. ದೇಣಿಗೆ ಕೊಟ್ಟ ಪ್ರಭಾಸ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಟಾಲಿವುಡ್ ನಟ ಪ್ರಭಾಸ್ ಸಹಾಯ ಹಸ್ತಚಾಚಿದ್ದಾರೆ.

    ಕಳೆದ ಎರಡು ವಾರ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅದರಲ್ಲಿಯೂ ಎರಡನೇ ಬಾರಿ ಸುರಿದ ಭಾರೀ ಮಳೆಗೆ ರಾಜ್ಯದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಸದ್ಯ ಜನರಿಗೆ ಸಹಾಯ ಮಾಡಲು ಪ್ರಭಾಸ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ(ಸಿಎಂಆರ್‍ಎಫ್) 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಇತ್ತೀಚೆಗಷ್ಟೇ ಜನರ ಕಷ್ಟಕ್ಕೆ ಮಿಡಿದ ಟಾಲಿವುಡ್ ಮೆಗಾ ಸ್ಟಾರ್ ನಟ ಚಿರಂಜೀವಿ, ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು, ರಾಮ್ ಚರಣ್‍ತೇಜ ಅವರು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ದೇಣಿಗೆ ನೀಡಿದ್ದರು. ಇದೀಗ ಪ್ರಭಾಸ್ ನೆರವಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಪ್ರಸ್ತುತ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಬಿಗ್ ಬಜೆಟ್ ಪ್ಯಾನ್ ಇಂಡಿಯನ್ ಸಿನಿಮಾ ರಾಧೆ ಶ್ಯಾಮ್‍ದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಪ್ರಭಾಸ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಇನ್ನೂ ಈ ಸಿನಿಮಾ ರಾಧೆ ಶ್ಯಾಮ್ 2022ರ ಜನವರಿ 14ರಂದು ತೆರೆ ಕಾಣಲಿದೆ.

  • ಡ್ರೈವಿಂಗ್ ಲೈಸನ್ಸ್ ಪಡೆದ ದೇಶದ ಮೊದಲ ಕುಬ್ಜ ವ್ಯಕ್ತಿ

    ಡ್ರೈವಿಂಗ್ ಲೈಸನ್ಸ್ ಪಡೆದ ದೇಶದ ಮೊದಲ ಕುಬ್ಜ ವ್ಯಕ್ತಿ

    ಹೈದರಾಬಾದ್: 3 ಅಡಿ ಎತ್ತರದ ವ್ಯಕ್ತಿ ಡ್ರೈವಿಂಗ್ ಲೈಸನ್ಸ್ ಪಡೆದಿದ್ದು, ಈ ಮೂಲಕ ದೇಶದ ಮೊದಲ ಕುಬ್ಜವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಹೈದರಾಬಾದ್ ಮೂಲದ 42 ವರ್ಷದ ಗಟ್ಟಿಪಲ್ಲಿ ಶಿವಪಾಲ್ ಎಂಬಾತ ಕೇವಲ 3 ಅಡಿ ಎತ್ತರವಿದ್ದರೂ ಚಾಲನಾ ಪರವಾನಿಗೆ ಪಡೆದಿದ್ದಾರೆ. ಚಾಲನಾ ಪರವಾನಿಗೆ ಪಡೆಯಲು ಎಷ್ಟೆಲ್ಲಾ ನಿಮಯಗಳಿವೆ. ಇಷ್ಟು ಎತ್ತರ, ಇಷ್ಟು ವಯಸ್ಸು ಈ ಎಲ್ಲಾ ನಿಯಮಗಳನ್ನು ಪಾಲಿಸಿದರೂ ಪರವಾನಿಗೆ ಸಿಗುವುದು ಕಷ್ಟವಿರುವಾಗ ಇವರು ಪಡೆದುಕೊಳ್ಳುವ ಮೂಲಕವಾಗಿ ಲೈಸನ್ಸ್ ಪಡೆದ ದೇಶದ ಮೊದಲ ಕುಬ್ಜ ಎನ್ನುವ ಹೆಗ್ಗಳಿಕೆ ಮತ್ತು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ಶಿವಪಾಲ್, 2004ರಲ್ಲಿ ಪದವಿ ಶಿಕ್ಷಣವನ್ನು ಮುಗಿಸಿದೆ. ಜನರು ನನ್ನ ಎತ್ತರದ ಬಗ್ಗೆ ವ್ಯಂಗ್ಯವಾಡುತ್ತಿದ್ದರು. ನನ್ನ ಹೆಂಡತಿ ಜೊತೆ ಹೊರಗೆ ಹೋದಾಗ ಕೆಟ್ಟದಾಗಿ ಮಾತನಾಡುತ್ತಿದ್ದರು. ಇದರಿಂದ ನೋವಾಗಿ ಸ್ವತಃ ಕಾರು ತೆಗೆದುಕೊಳ್ಳಲು ನಿರ್ಧರಿಸಿದೆ. ಕುಬ್ಜರು ಕಾರು ಚಲಾಯಿಸುವುದು ಹೇಗೆಂದು ಸೋಶಿಯಲ್ ಮೀಯಾದಲ್ಲಿ ಕೆಲವು ವೀಡಿಯೋಗಳನ್ನು ನೋಡಿದೆ. ನನ್ನ ಎತ್ತರಕ್ಕೆ ತಕ್ಕಂತೆ ಕಾರಿನ ಭಾಗಗಳನ್ನು ಮಾರ್ಪಡಿಸಿಕೊಂಡೆ. ಬಳಿಕ ಸ್ನೇಹಿತನ ಸಹಾಯದಿಂದ ಕಾರು ಚಲಾಯಿಸಲು ಕಲಿತುಕೊಂಡೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

    ಚಾಲನಾ ಪರವಾನಿಗೆಗಾಗಿ ಸಾರಿಗೆ ಇಲಾಖೆಗೆ ಅರ್ಜಿ ಹಾಕಿ, ಅಧಿಕಾರಿಗಳ ಸಮ್ಮುಖದಲ್ಲೇ ಕಾರು ಚಲಾಯಿಸಿದೆ. ಬಳಿಕ 3 ತಿಂಗಳ ಕಲಿಕಾ ಪರವಾನಿಗೆ ಪಡೆದುಕೊಂಡೆ. ಈಗ ಚಾಲನಾ ಪರವಾನಿಗೆ ಗಿಟ್ಟಿಸಿಕೊಂಡಿದ್ದೇನೆ. ಹೈದರಾಬಾದ್‍ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ಕಾರನ್ನು ನಾನೇ ಚಲಾಯಿಸಿಕೊಂಡು ಹೋಗುತ್ತೇನೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್‍ಗೆ ನಾಮಿ ನಿರ್ದೇಶನಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕುಬ್ಜರಿಗಾಗಿ ಡ್ರೈವಿಂಗ್ ಶಾಲೆಯನ್ನು ತೆರೆಯುವ ಯೋಚನೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    ನಮ್ಮ ಕುಟುಂಬದಲ್ಲಿ ನಾನು ಹಿರಿಯ ಮಗಬಾಗಿದ್ದು, ನಾನು ಮಾತ್ರ ಕುಬ್ಜನಾಗಿದ್ದೇನೆ. ನಾನು ಅಂಗವಿಕಲನಾಗಿದ್ದರಿಂದ ನನಗೆ ಯಾರೂ ಕೆಲಸ ನೀಡಲು ಜನರು ಸಿದ್ಧರಿರಲಿಲ್ಲ. ಸ್ನೇಹಿತರೊಬ್ಬರ ಮೂಲಕ ಖಾಸಗಿ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡು ಈಗ ಕಳೆದ 20 ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.

  • ಪತಿ ಸರಿಯಾಗಿ ಬ್ಲೌಸ್ ಹೊಲಿಯಲಿಲ್ಲವೆಂದು ಪತ್ನಿ ಆತ್ಮಹತ್ಯೆ

    ಪತಿ ಸರಿಯಾಗಿ ಬ್ಲೌಸ್ ಹೊಲಿಯಲಿಲ್ಲವೆಂದು ಪತ್ನಿ ಆತ್ಮಹತ್ಯೆ

    ಹೈದರಾಬಾದ್: ಬ್ಲೌಸ್ ಸರಿಯಾಗಿ ಹೊಲಿಯಲಿಲ್ಲವೆಂದು ಪತಿಯೊಂದಿಗೆ ಮಹಿಳೆ ಜಗಳವಾಡಿದ್ದಾಳೆ. ಇದೇ ವಿಚಾರವಾಗಿ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಶ್ರೀನಿವಾಸ್ ಪತ್ನಿ ವಿಜಯಲಕ್ಷ್ಮಿ (36) ಮೃತರು. ಬ್ಲೌಸ್ ವಿಚಾರವಾಗಿ ದಂಪತಿ ನಡುವೆ ನಡೆದಿರುವ ಜಗಳ ಪತ್ನಿ ಪ್ರಾಣವನ್ನು ಕಳೆದುಕೊಳ್ಳವ ಮಟ್ಟಿಗೆ ಹೋಗಿದೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

    ದಂಪತಿ ಹೈದರಾಬಾದ್‍ನ ಅಂಬರಪೇಟ್‍ನಲ್ಲಿ ವಾಸವಾಗಿದ್ದರು. ಶ್ರೀನಿವಾಸ್ ಟೈಲರ್ ಆಗಿದ್ದು, ಸೀರೆ ವ್ಯಾಪಾರವನ್ನೂ ಮಾಡುತ್ತಿದ್ದರು. ಶನಿವಾರ ಪತ್ನಿ ವಿಜಯಲಕ್ಷ್ಮಿಗೆ ಬ್ಲೌಸ್ ಹೊಲಿದು ಕೊಟ್ಟಿದ್ದಾರೆ. ಆದರೆ ಆಕೆಗೆ ಬ್ಲೌಸ್ ಇಷ್ಟವಾಗಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    POLICE JEEP

    ಇದೇ ಸಿಟ್ಟಿನಿಂದ ವಿಜಯಲಕ್ಷ್ಮಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಮಧ್ಯಾಹ್ನ 12.30ಕ್ಕೆ ಮಕ್ಕಳು ಶಾಲೆಯಿಂದ ಮನೆಗೆ ಬಂದು ಬಾಗಿಲು ತಟ್ಟಿದರೂ ಆಕೆ ಪ್ರತಿಕ್ರಿಯಿಸಲಿಲ್ಲ. ಆಕೆ ಪತಿ ಶ್ರೀನಿವಾಸ್ ಬಾಗಿಲು ಒಡೆದು ಒಳ ಹೋದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶ್ರೀನಿವಾಸ್ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಂಬರ್‍ಪೇಟ್ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಸ್ಪೇನ್‍ನಿಂದ ಅಂಬಾನಿ ಮನೆಗೆ ಬಂತು ಅದೃಷ್ಟದ 2 ಆಲಿವ್ ಮರ

    ಸ್ಪೇನ್‍ನಿಂದ ಅಂಬಾನಿ ಮನೆಗೆ ಬಂತು ಅದೃಷ್ಟದ 2 ಆಲಿವ್ ಮರ

    ಹೈದರಾಬಾದ್: ಎರಡು ಆಲಿವ್ ಮರಗಳನ್ನು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಿಂದ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮನೆಗೆ ರವಾನಿಸಲಾಗಿದೆ.

    ಈ ಮರಗಳನ್ನು ಮನೆಯಲ್ಲಿ ಬೆಳೆಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಕೆಲ ವರ್ಷಗಳ 2 ಹಿಂದೆ ಸ್ಪೇನ್‍ನಿಂದ ಆಂಧ್ರಪ್ರದೇಶಕ್ಕೆ ತರಿಸಲಾಗಿತ್ತು.

    ಬಳಿಕ ಪೂರ್ವ ಗೋದಾವರಿ ನದಿಯ ದಡದಲ್ಲಿರುವ ಕದಿಯಂ ಪ್ರದೇಶದಲ್ಲಿನ ಗೌತಮಿ ನರ್ಸರಿಯ ಆರು ಸಿಬ್ಬಂದಿ ಕಳೆದ 2 ವರ್ಷಗಳಿಂದ ಪೋಷಿಸುತ್ತಿದ್ದರು. ಈ ಮರ ಸುಮಾರು 185 ವರ್ಷಗಳಷ್ಟು ಹಳೆಯದಾಗಿದ್ದು, ವಿಶೇಷ ಆರೈಕೆ ಮಾಡಿ ಬೆಳೆಸಲಾಗಿತ್ತು. ಈ ಮರಗಳು ಅಂದಾಜು 1000 ವರ್ಷ ಕಾಲ ಬದುಕುತ್ತವೆ. ಇದನ್ನೂ ಓದಿ: ಮೊದಲ ಬಾರಿಗೆ ಬೋನಿ ಕಪೂರ್ ನಿರ್ಮಾಣದಲ್ಲಿ ಜಾನ್ವಿ ನಟನೆ

    ಗೌತಮಿ ನರ್ಸರಿ ಮಾಲೀಕ ಮಾರ್ಗನಿ ವೀರಬಾಬು ಮಾತನಾಡಿ, ರಿಲಾಯನ್ಸ್ ಗ್ರೂಪ್‍ನ ಆದೇಶದ ಮೇರೆಗೆ ಎರಡು ಮರಗಳನ್ನು ಸ್ಪೇನ್‍ನಿಂದ ಆಮದು ಮಾಡಿಕೊಂಡಿದ್ದೆವು. ಆ ಮರಗಳ ಆರೈಕೆ, ಮಣ್ಣಿನ ಫಲವತ್ತತೆ, ಬೆಳವಣಿಗೆಗೆ ಬೇಕಾದ ವಿಶೇಷ ಕಾಳಜಿಯನ್ನು ವಹಿಸಲಾಗಿತ್ತು ಎಂದರು.

    ಮರಗಳು 12 ಅಡಿಗಳಿಗಿಂತ ಎತ್ತರವಾಗಿ ಬೆಳೆಯದಂತೆ ನೋಡಿಕೊಳ್ಳಲು ಮರಗಳ ಆಕಾರವನ್ನು ಹೆಚ್ಚಿಸಲಾಗಿದೆ. ಹಾಗೆಯೇ ಮರಗಳನ್ನು ಆದ್ಯತೆಗೆ ಅನುಗುಣವಾಗಿ ಬೆಳಸಲಾಗಿದೆ. ಬುಧವಾರ ನಮ್ಮ ನರ್ಸರಿಯಿಂದ ಗುಜರಾತ್‍ನ ಜಾಮ್ ನಗರಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಂಪಾ ಸರೋವರವನ್ನು ಸಂಪೂರ್ಣ ಕಿತ್ತು ಹಾಕಿದ್ದು ಸರಿಯಲ್ಲ: ಶರಣಬಸಪ್ಪ ಕೋಲ್ಕಾರ್

    ಈ ಎರಡು ಮರಗಳನ್ನು ವಿಶೇಷ ಟ್ರಕ್ ಮುಖಾಂತರವಾಗಿ ಗುಜರಾತ್‍ನ ಜಾಮ್ ನಗರದಲ್ಲಿರುವ ಅಂಬಾನಿ ಮನೆಗೆ ಕಳುಹಿಸಿಕೊಡಲಾಗಿದೆ. ಈ ಟ್ರಕ್ ತೆಲಂಗಾಣ, ಮಹಾರಾಷ್ಟ್ರದ ಮೂಲಕ ಹಾದು ಹೋಗುತ್ತದೆ. ಇದು ಸುಮಾರು 1,800 ಕಿಮೀ ದೂರ ಕ್ರಮಿಸಿ ಗುಜರಾತ್‍ನ್ನು ತಲುಪುತ್ತದೆ. ಪ್ರತಿ ಮರಕ್ಕೂ ತಲಾ 47ಲಕ್ಷ ರೂ.ನಂತೆ 94 ಲಕ್ಷ ರೂ.ಗಳನ್ನು ಅಂಬಾನಿ ವ್ಯಯಿಸಿದ್ದಾರೆ.

  • ಸಿಂಹಕ್ಕೆ ಆಹಾರವಾಗುತ್ತಿದ್ದ ಯುವಕ: ತಪ್ಪಿತು ಭಾರೀ ದುರಂತ

    ಸಿಂಹಕ್ಕೆ ಆಹಾರವಾಗುತ್ತಿದ್ದ ಯುವಕ: ತಪ್ಪಿತು ಭಾರೀ ದುರಂತ

    ಹೈದರಾಬಾದ್: ಹೈದರಾಬಾದ್ ನೆಹರು ಝೂಲಾಜಿಕಲ್ ಪಾರ್ಕ್‍ನಲ್ಲಿ ಮಂಗಳವಾರ ವ್ಯಕ್ತಿಯೊಬ್ಬ ಆಫ್ರಿಕನ್ ಸಿಂಹಗಳ ಆವರಣಕ್ಕೆ ನುಗ್ಗಿದ್ದು, ಭಾರೀ ದುರಂತವೊಂದು ಕೂದಲೆಳೆಯಲ್ಲಿ ತಪ್ಪಿದೆ.

    ಆಫ್ರಿಕನ್ ಸಿಂಹಗಳ ಗುಹೆಗೆ ನುಗ್ಗಿದ ವ್ಯಕ್ತಿಯನ್ನು ಜಿ.ಸಾಯಿಕುಮಾರ್ (31) ಎಂದು ಗುರುತಿಸಲಾಗಿದೆ. ಈತ ಆಫ್ರಿಕನ್ ಸಿಂಹಗಳ ಆವರಣಕ್ಕೆ ನುಗ್ಗಿದ್ದನು. ಸಿಂಹವೊಂದು ಈತನ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸುತ್ತಿತ್ತು. ಅಷ್ಟರಲ್ಲಿ ಇದನ್ನು ಗಮನಿಸಿದ ಸಿಬ್ಬಂದಿ ಈತನನ್ನು ರಕ್ಷಿಸಿ ನಂತರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ

    ವಿಡಿಯೋದಲ್ಲಿ ಏನಿದೆ?
    ಆಫ್ರಿಕನ್ ಸಿಂಹಗಳಿರುವ ಗುಹೆಯ ಬಂಡೆ ಮೇಲೆ ವ್ಯಕ್ತಿಯೋರ್ವ ಕುಳಿತುಕೊಂಡಿದ್ದಾನೆ. ಕೆಳಗಿರುವ ದೈತ್ಯ ಸಿಂಹವೊಂದು ತನ್ನ ಗುಹೆಯ ಆಚೆ- ಈಚೆ ಓಡಾಡುತ್ತಿದೆ. ಆತನನ್ನು ನೋಡಿದ ಆ ಸಿಂಹವೂ ಆ ವ್ಯಕ್ತಿಯ ಮೇಲೆ ಆಕ್ರಮಣ ಮಾಡಲು ಹೊಂಚು ಹಾಕುತ್ತಾ ಕುಳಿತಿತ್ತು. ಈ ವೇಳೆ ಅಲ್ಲಿದ್ದ ಜನರು ಕೂಗಲು ಪ್ರಾರಂಭಿಸಿದ್ದಾರೆ. ಇದನ್ನು ನೋಡಿದ ಮೃಗಾಲಯದ ಅಧಿಕಾರಿಗಳು ಆ ಪ್ರದೇಶಕ್ಕೆ ಬಂದಿದ್ದಾರೆ. ಇದನ್ನು ಗಮನಿಸಿದ ಯುವಕ ಎದ್ದು ಹಿಂದಿರುಗಿದ್ದಾನೆ. ಈ ಸಂದರ್ಭದಲ್ಲಿ ಸಿಂಹ ಬಂಡೆಯ ಮೇಲೆ ಏರಗಲು ಪ್ರಯತ್ನಿಸಿರುವುದು ವಿಡಿಯೋದಲ್ಲಿದೆ. ಇದನ್ನೂ ಓದಿ:  ಮುರುಡೇಶ್ವರದ ಶಿವನ ಬೃಹತ್ ಪ್ರತಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು

    ಸಂಪೂರ್ಣ ನಿಷೇಧಿತ ಸ್ಥಳ ಇದಾಗಿದೆ. ಆದರೂ ಯಾವುದೇ ಒಪ್ಪಿಗೆ ತೆಗದುಕೊಳ್ಳದೇ ಸಾಯಿಕುಮಾರ್ ಬಂದಿದ್ದಾನೆ. ಮೃಗಾಲಯದ ಸಿಬ್ಬಂದಿ ದೂರಿನ ಮೇರೆಗೆ ಬಹದ್ದೂರ್‍ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

    ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

    ಹೈದರಾಬಾದ್: ಟ್ರಾಫಿಕ್ ಪೊಲೀಸ್ ಪ್ರವಾಹದಲ್ಲಿ ಸಿಲುಕಿದ್ದ ಅರ್ಚಕರೊಬ್ಬರನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹೀರೋ ಎಂದು ಪ್ರಶಂಸಿಸುತ್ತಿದ್ದಾರೆ.

    ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ಕೊಡವಲೂರು ಶಿವ ದೇವಸ್ಥಾನದ ಅರ್ಚಕರು ವೆಂಕಟೇಶ್ವರಪುರಂ ಸೇತುವೆ ಮೇಲೆ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಪ್ರವಾಹದ ನೀರಿನ ಸೆಳೆತಕ್ಕೆ ಅರ್ಚಕರು ಕೊಚ್ಚಿಹೋಗುವ ವೇಳೆ ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಇದನ್ನೂ ಓದಿ: ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಹೈಟೆಕ್ ವಂಚನೆ

    ಈ ವೇಳೆ ಅಲ್ಲೇ ಇದ್ದ ಕರ್ತವ್ಯ ನಿರತ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ನಾಯಕ್ ಅವರು ಅರ್ಚಕರನ್ನು ರಕ್ಷಿಸಲು ಮುಂದಾಗುತ್ತಾರೆ. ನಾಯಕ್ ಅವರು ಹಗ್ಗವನ್ನು ಬಳಸಿ ಅರ್ಚಕರು ಇರುವ ಸ್ಥಳಕ್ಕೆ ತಲುಪಿ ನಂತರ ಅವರು ಅರ್ಚಕರನ್ನು ಬಿಗಿಯಾಗಿ ಹಿಡಿದುಕೊಂಡು ಸುರಕ್ಷಿತವಾಗಿ ದಡ ಮುಟ್ಟಿಸುತ್ತಾರೆ.

    ನಾಯಕ್ ಅವರ ಸಾಹಸವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಲ್ಲೂರು ಜಿಲ್ಲೆಯ ಕೊಡವಲೂರು ಶಿವ ದೇವಾಲಯದಲ್ಲಿ ಕೆಲಸ ಮಾಡುವ ಅರ್ಚಕರೊಬ್ಬರು ವೆಂಕಟೇಶ್ವರಪುರಂ ಸೇತುವೆಯ ಬಳಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅವರು ಪ್ರವಾಹದ ನೀರಿನಿಂದ ಕೊಚ್ಚಿಹೋಗುತ್ತಿದ್ದರು. ಆಗ ಸಮಯಕ್ಕೆ ಸರಿಯಾಗಿ ಧೈರ್ಯ ಮಾಡಿದ ಟ್ರಾಫಿಕ್ ಸಿಐ ನಾಯಕ್ ಅವರು ಸುರಕ್ಷಿತವಾಗಿ ಕರೆತಂದಿದ್ದಾರೆ ಎಂದು ಬರೆದು ಟ್ವೀಟ್ ಮಾಡಲಾಗಿದೆ.

    ಈ ವೀಡಿಯೋ ವೈರಲ್ ಆಗಿದ್ದು ಟ್ರಾಫಿಕ್ ಪೊಲೀಸ್ ಸಾಹಸವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಈ ಕುರಿತು, ಸಾರ್ವಜನಿಕ ಸೇವೆಯಲ್ಲಿ ಮತ್ತು ವ್ಯಕ್ತಿಯ ಜೀವ ಉಳಿಸುವಲ್ಲಿ ಟ್ರಾಫಿಕ್ ಸಿಐ ಅವರು ತೋರಿದ ಶೌರ್ಯ ರಕ್ಷಣೆ ಮತ್ತು ಬದ್ಧತೆಯನ್ನು ಟ್ವೀಟ್ ಮಾಡಿ ಪ್ರಶಂಸಿದ್ದಾರೆ. ಇದನ್ನೂ ಓದಿ:  100 ರೂ. ನೋಟ್ ಒಳಗೆ ವೈಟ್ ಪೇಪರ್ ಇಟ್ಟು ವಂಚನೆ- ಐವರು ಅರೆಸ್ಟ್

  • ಭಾರೀ ಮಳೆಗೆ ಕಟ್ಟಡ ಕುಸಿತ – ಇಬ್ಬರು ಮಕ್ಕಳ ಸಾವು

    ಭಾರೀ ಮಳೆಗೆ ಕಟ್ಟಡ ಕುಸಿತ – ಇಬ್ಬರು ಮಕ್ಕಳ ಸಾವು

    ಹೈದರಾಬಾದ್: ಭಾರೀ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ನಡೆದಿದೆ.

    ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದ್ದು, ಕಟ್ಟಡ ಅವಶೇಷಗಳ ಅಡಿಯಲ್ಲಿ ಕೆಲವು ನಿವಾಸಿಗಳು ಸಿಲುಕಿಕೊಂಡಿದ್ದಾರೆ. ಇದೀಗ ಆರು ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಅಧಿಕಾರಿಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಇಂದು ಅಯ್ಯಪ್ಪನ ದರ್ಶನವಿಲ್ಲ

    ಶುಕ್ರವಾರ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಮೂರು ರಾಯಲಸೀಮಾ ಜಿಲ್ಲೆಗಳು ಮತ್ತು ಆಂಧ್ರಪ್ರದೇಶದ ಒಂದು ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ 20 ಸೆಂ.ಮೀ ರಷ್ಟು ಭಾರೀ ಮಳೆ ಸುರಿದಿದೆ. ಅಲ್ಲದೇ ಶುಕ್ರವಾರ ಸುರಿದ ಭಾರೀ ಮಳೆಗೆ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ

    ರಾಜ್ಯದ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದು, ರಾಜ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಜಗನ್ ಮೋಹನ್ ರೆಡ್ಡಿ ಅವರು ಶನಿವಾರ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ ಎಂದು  ಹೇಳಲಾಗುತ್ತಿದೆ.

  • ಅರವಿಂದ್ ಕೈಯಿಂದ ಅವಾರ್ಡ್ ಪಡೆದ ಡಿಯು

    ಅರವಿಂದ್ ಕೈಯಿಂದ ಅವಾರ್ಡ್ ಪಡೆದ ಡಿಯು

    ಬೆಂಗಳೂರು: ಬಿಗ್ ಸೀಸನ್ -8 ಸ್ಪರ್ಧಿ ದಿವ್ಯಾ ಉರುಡುಗ ಫೇಸ್ ಟೂ ಫೇಸ್ ಚಿತ್ರಕ್ಕಾಗಿ ವಿಮಶರ್ಕರ ಬೆಸ್ಟ್ ಆ್ಯಕ್ಟರ್ ಪ್ರಶಸ್ತಿಯನ್ನು ಕೆ.ಪಿ ಅರವಿಂದ್ ಕೈಯಿಂದ ಪಡೆದಿದ್ದಾರೆ.

    aravind divya

    ಬಿಗ್‍ಬಾಸ್ ಸೀಸನ್-8 ಕ್ಯೂಟ್ ಕಪಲ್ ಎಂದೇ ಫೇಮಸ್ ಆಗಿದ್ದ ಅರವಿಂದ್ ಹಾಗೂ ದಿವ್ಯಾ ಉರುಡುಗ ಮಂಗಳವಾರ ಹೈದರಾಬಾದ್‍ಗೆ ಒಟ್ಟಿಗೆ ಫ್ಲೈಟ್‍ನಲ್ಲಿ ಹಾರಿದ್ದರು. ಇದೀಗ ಇಬ್ಬರು ಸಂತೋಷಮ್ ಸೌತ್ ಇಂಡಿಯನ್ ಫಿಲ್ಮ್ ಅವಾರ್ಡ್ಸ್ ‌ ಕಾರ್ಯಕ್ರಮದಲ್ಲಿ  ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.  ಇದನ್ನೂ ಓದಿ: ಹೈದರಾಬಾದ್‍ಗೆ ಹಾರಿದ ಅರ್ವಿಯಾ ಜೋಡಿ

    ಹೌದು ಫೇಸ್ ಟೂ ಫೇಸ್ ಚಿತ್ರಕ್ಕಾಗಿ ನಟಿ ದಿವ್ಯಾ ಉರುಡುಗಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ ಈ ಅವಾರ್ಡ್ ಅನ್ನು ದಿವ್ಯಾ ಉರುಡುಗ ಕೆ. ಪಿ ಅರವಿಂದ್ ಅವರ ಕೈಯಿಂದ ಸ್ವೀಕರಿಸಿದ್ದಾರೆ. ಸದ್ಯ ಈ ಫೋಟೋವನ್ನು ದಿವ್ಯಾ ಉರುಡುಗ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

     

    ಫೋಟೋ ಜೊತೆಗೆ, ಸಂತೋಷಮ್ ಸೌತ್ ಇಂಡಿಯನ್ ಫಿಲ್ಮ್ ಅವಾರ್ಡ್ಸ್ ನಲ್ಲಿ ಫೇಸ್ 2 ಫೇಸ್ ಚಲನಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಸಂತೋಷವಾಗುತ್ತಿದೆ ಮತ್ತು ರಾಷ್ಟ್ರದ ಹೆಮ್ಮೆಯ ವ್ಯಕ್ತಿಯಿಂದ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದೇನೆ, ಅವರನ್ನು ನಾನು ಹೆಚ್ಚು ಗೌರವಿಸುತ್ತೇನೆ ಮತ್ತು ಆರಾಧಿಸುತ್ತೇನೆ. ಕೆಪಿ ಅರವಿಂದ್ ಅನೇಕರಿಗೆ ಸ್ಫೂರ್ತಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್ ಲವ್ ಬರ್ಡ್ಸ್ ಭೇಟಿಯಾದ ಶುಭಾ ಪೂಂಜಾ

     

    View this post on Instagram

     

    A post shared by Divya Uruduga (@divya_uruduga)

    ಜೊತೆಗೆ ನನ್ನ ನಿರ್ದೇಶಕ ಜನಾರ್ಧನ್ ಮತ್ತು ನನ್ನ ಸಹನಟರಾದ ರೋಹಿತ್, ಪೂರ್ವಿಜೋಶಿ ಮತ್ತು ಇಡೀ ತಂಡಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನಗೆ ಬೆಂಬಲವಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಅವಿ ಅವರಿಗೆ ಧನ್ಯವಾದಗಳು ಮತ್ತು ನನಗೆ ಬೆಂಬಲ ನೀಡಿದ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ವಿಶೇಷವಾಗಿ ಧನ್ಯವಾದಗಳು. ನೀವೆಲ್ಲರು ಇಲ್ಲದೇ ಇದು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.