Tag: Hyderabad

  • 45 ಅಡಿ ಎತ್ತರದ ಪರಿಸರ ಸ್ನೇಹಿ ದುರ್ಗಾದೇವಿ ಮೂರ್ತಿ – ಫೋಟೋ ವೈರಲ್

    45 ಅಡಿ ಎತ್ತರದ ಪರಿಸರ ಸ್ನೇಹಿ ದುರ್ಗಾದೇವಿ ಮೂರ್ತಿ – ಫೋಟೋ ವೈರಲ್

    ಹೈದರಾಬಾದ್: ಹೈದರಾಬಾದಿನ ಎಸಾಮಿಯಾ ಬಜಾರ್‌ನಲ್ಲಿ 45 ಅಡಿ ಎತ್ತರದ ದುರ್ಗಾದೇವಿ ಮೂರ್ತಿಯನ್ನು ಪರಿಸರ ಸ್ನೇಹಿ ಉತ್ಪನ್ನಗಳನ್ನು ಬಳಸಿ ಸ್ಥಾಪಿಸಲಾಗಿದೆ.

    Durga Devi

    ಈ ಮೂರ್ತಿಯನ್ನು ಹುಲ್ಲು, ಮಣ್ಣು, ಕೆಂಪು ಮರಳು ಮತ್ತು ಪೇಯಿಂಟ್‍ನಿಂದ ವಿನ್ಯಾಸಗೊಳಿಸಲಾಗಿದೆ. ಈ ವಿಗ್ರಹವು 9 ಮುಖ ಹಾಗೂ 9 ಜೋಡಿ ಕೈಗಳನ್ನು ಹೊಂದಿದ್ದು, ದೇವತೆಯ 9 ರೂಪಗಳನ್ನು ಸೂಚಿಸುತ್ತದೆ. ಈ ವಿಗ್ರಹವನ್ನು ಸ್ಥಾಪಿಸಲು ಗುಲಾಬ್ ಶ್ರೀನಿವಾಸ್ ಗಂಗಪುತ್ರ ಅವರು, 22 ಕೆಲಸಗಾರರೊಂದಿಗೆ 35 ದಿನಗಳ ಕಾಲ ಸಮಯ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಎಸ್.ಟಿ ಸೋಮಶೇಖರ್‌ರಿಂದ ಡೋಲು ಬಡಿತ, ವೀರಗಾಸೆ ಕುಣಿತ

    Durga Devi

    ಸದ್ಯ ಈ ಮೂರ್ತಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಮಗೆ ಬೇಕಾಗಿರುವುದು ಪರಿಸರ ಸ್ನೇಹಿ ಮೂರ್ತಿಗಳು. ಆದರೆ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಸಿದ್ದಪಡಿಸಿದ ವಿಗ್ರಹಗಳು ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸುವುದರಿಂದ ನಮ್ಮ ಪರಿಸರ ಹಾಳಾಗುತ್ತಿದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಜೈಲೂಟ ತಿನ್ನಲು ಆರ್ಯನ್ ಪರದಾಟ – ಕ್ಯಾಂಟೀನ್ ಊಟಕ್ಕೆ ಮನಿ ಆರ್ಡರ್ ಕಳುಹಿಸಿದ ಶಾರೂಖ್

    ಅಕ್ಟೋಬರ್ 7ರಿಂದ ಆರಂಭವಾದ ನವರಾತ್ರಿಯ ಹಬ್ಬವನ್ನು ದೇಶಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ವರ್ಷ ಅಕ್ಟೋಬರ್ 13 ರಂದು ಅಷ್ಟಮಿ ಬರುತ್ತದೆ ಮತ್ತು ದಶಮಿ ಅಕ್ಟೋಬರ್ 15 ರಂದು ಬರುತ್ತದೆ. ವಿಜಯ ದಶಮಿಯನ್ನು ದಸರಾ ಎಂದೂ ಕರೆಯುತ್ತಾರೆ, ಇದು ರಾಮನ ಕೈಯಲ್ಲಿ 10 ತಲೆಯ ರಾವಣನ ಸೋಲನ್ನು ಸೂಚಿಸುತ್ತದೆ.

  • ಫೇಸ್ ಕ್ರೀಮ್‍ನಲ್ಲಿ ಚಿನ್ನ ಸಾಗಾಟ ಮಾಡಿ ಪೊಲೀಸರ ಬಲೆಗೆ ಬಿದ್ದ

    ಫೇಸ್ ಕ್ರೀಮ್‍ನಲ್ಲಿ ಚಿನ್ನ ಸಾಗಾಟ ಮಾಡಿ ಪೊಲೀಸರ ಬಲೆಗೆ ಬಿದ್ದ

    ಹೈದರಾಬಾದ್: ಫೇಸ್ ಕ್ರೀಮ್‍ನಲ್ಲಿ ಚಿನ್ನದ ಪೇಸ್ಟ್ ಇಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಹೈದರಾಬಾದ್‍ನ( hyderabad) ಆರ್‌ಜಿಐ ವಿಮಾನ ನಿಲ್ದಾಣದಲ್ಲಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

    ಫೇಸ್ ಕ್ರೀಮ್ ಬಾಕ್ಸ್‌ಗಳ ಒಳಗೆ ಚಿನ್ನ ಮತ್ತು ಬೆಳ್ಳಿಯನ್ನು ಪೇಸ್ಟ್ ಮಾಡಿ ಸಾಗಿಸಲಾಗುತ್ತಿತ್ತು. 525.50 ಗ್ರಾಂ ಚಿನ್ನ( 525.50 grams gold) ಮತ್ತು 28 ಗ್ರಾಂ ಬೆಳ್ಳಿಯನ್ನು(silver) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಒಟ್ಟು 58.16 ಲಕ್ಷ ಬೆಲೆ ಬಾಳುವ  ಚಿನ್ನ,ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ಆರೋಪಿ ದೋಹಾದಿಂದ ಭಾರತಕ್ಕೆ ಬಂದಿಳಿದಿದ್ದ. ಖಚಿತ ಮಾಹಿತಿ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಚಲನವಲನ ಮೇಲೆ ನಿಗಾ ಇಟ್ಟಿದ್ದರು, ಸಿಬ್ಬಂದಿ ಈತನನ್ನು ತಪಾಸಣೆ ಮಾಡಿದ್ದಾರೆ. ಫೇಸ್ ಕ್ರೀಮ್ ಬಾಕ್ಸ್‌ನಲ್ಲಿ 24 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಇರುವುದು ಪತ್ತೆಯಾಗಿದೆ. ಈಗ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

  • ಮದುವೆಯಾಗಬೇಕೆಂದು ಹಠಕ್ಕೆ ಬಿದ್ದು ಪ್ರಾಣ ಬಿಟ್ಟ ಯುವಕ

    ಮದುವೆಯಾಗಬೇಕೆಂದು ಹಠಕ್ಕೆ ಬಿದ್ದು ಪ್ರಾಣ ಬಿಟ್ಟ ಯುವಕ

    – ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ

    ಹೈದರಾಬಾದ್: ತನ್ನ ಸ್ನೇಹಿತರು ಹಾಗೂ ಜೊತೆಗೆ ಇದ್ದವರಿಗೆಲ್ಲ ಮದುವೆಯಾಗಿ ಮಕ್ಕಳಾಗಿದೆ. ನನಗೆ ಯಾಕೆ ಇನ್ನೂ ಹೆಣ್ಣು ಸಿಗುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಸೈಯದ್ ಅಮ್ಜದ್( 30) ಮೃತ ಯುವಕ. ಈತ ಹೈದರಾಬಾದ್ ಫಲಕ್ನುಮಾದ ಸಂಜಯ್ ಗಾಂಧಿ ನಗರದ ನಿವಾಸಿಯಾಗಿದ್ದಾನೆ. ಸ್ನೇಹಿತರಿಗೆಲ್ಲ ಮದುವೆಯಾಗಿದೆ, ಆದರೆ ನನಗೆ ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ:   ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ

    ಸೈಯದ್ ಅಮ್ಜದ್ ಸ್ವಂತ ಟೈಲರ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಕಳೆದ ಕೆಲವರ್ಷಗಳಿಂದ ಈತನಿಗೆ ಮದುವೆ ಮಾಡಲು ಕುಟುಂಬಸ್ಥರು ಹುಡುಗಿಯನ್ನು ಹುಡುಕುತ್ತಿದ್ದರು. ಆದರೆ ಯಾವುದೇ ಹುಡುಗಿ ಈತನಿಗೆ ಇಷ್ಟವಾಗುತ್ತಿರಲಿಲ್ಲವಂತೆ. ಕೆಲವರು ಇವನನ್ನು ಇಷ್ಟಪಟ್ಟರೆ ಇವನು ಬೇಡವೆಂದು ಹೇಳುತ್ತಿದ್ದನಂತೆ. ಮತ್ತೆ ಕೆಲವರು ಈತನಿಗೆ ಇಷ್ಟವಾದರೆ ಅವರು ಬೇಡ  ಎನ್ನುತ್ತಿದ್ದರಂತೆ. ಹೀಗಾಗಿ ಮದುವೆ ಬಗ್ಗೆ ತುಂಬಾ ತಲೆಕೆಡಿಸಿಕೊಂಡಿದ್ದ ಸೈಯದ್ ಅಮ್ಜದ್, ಹೇಗಾದರೂ ಮಾಡಿ ಈ ವರ್ಷ ಮದುವೆಯಾಗಬೇಕೆಂದು ಹಠಕ್ಕೆ ಬಿದ್ದಿದ್ದ. ಇದನ್ನೂ ಓದಿ:  ಪ್ರಿಯಾಂಕಾ ಕಸ ಗುಡಿಸೋಕೆ ಲಾಯಕ್ಕು- ವೀಡಿಯೋ ವೈರಲ್‍ಗೆ ಯೋಗಿ ಪ್ರತಿಕ್ರಿಯೆ

    ಸ್ನೇಹಿತರು ಹಾಗೂ ಜೊತೆಗೆ ಇದ್ದವರಿಗೆಲ್ಲ ಮದುವೆಯಾಗಿ ಮಕ್ಕಳಾಗಿದೆ. ನನಗೆ ಯಾಕೆ ಇನ್ನೂ ಹೆಣ್ಣು ಸಿಗುತ್ತಿಲ್ಲ ಎಂಬ ಕೊರಗು ಸೈಯದ್ ಅಮ್ಜದ್ ತುಂಬಾ ಕಾಡುತ್ತಿತ್ತಂತೆ. ತನಗೆ ಪರಿಚಯ ಇರುವವರ ಬಳಿಯೆಲ್ಲಾ ಒಂದು ಹುಡುಗಿ ನೋಡಿ ಕೊಡುವಂತೆ ಮನವಿ ಮಾಡಿಕೊಂಡಿದ್ದ. ಮದುವೆ ವಿಚಾರದಲ್ಲಿ ತಲೆಕೆಡಿಸಿಕೊಂಡಿದ್ದ ಸೈಯದ್ ಅಮ್ಜದ್‌ಗೆ ತನ್ನ ಕೆಲಸದ ಕಡೆ ಗಮನ ಕೊಡಲು ಆಗುತ್ತಿರಲಿಲ್ಲ. ಮದುವೆ ವಿಚಾರದಿಂದಾಗಿ ಸೈಯದ್ ಖಿನ್ನತೆಗೆ ಒಳಗಾಗಿದ್ದ. ಸದಾ ಒಬ್ಬಂಟಿಯಾಗಿಯೇ ಇರುತ್ತಿದ್ದ ಈತನ ನಡವಳಿಕೆಯಿಂದ ಮನೆಯವರು ಬೇಸತ್ತು ಹೋಗಿದ್ದರು. ಗುರುವಾರ ರಾತ್ರಿ ಸೈಯದ್ ತನ್ನ ಅಂಗಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ಟಾಟಾ ಕಂಪನಿ ಮುಂದುವರಿಸಬೇಕು: ಕೇಂದ್ರ ಸರ್ಕಾರ

    ಬೆಳಗ್ಗೆ ಅಂಗಡಿಗೆ ಬಂದ ಅಕ್ಕಪಕ್ಕದ ಅಂಗಡಿಯವರು ಕಿಟಕಿಯಲ್ಲಿ ಇಣುಕಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಬಳಿ ಆತನ ಮನೆಯವರೇ, ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಸೈಯದ್ ಅಮ್ಜದ್‌ ಕೆಲದಿನಗಳಿಂದ ಖಿನ್ನತೆಗೆ ಒಳಗಾಗಿದ್ದ. ಇದಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಿದ್ದಾರೆ. ಫಲಕ್ನುಮಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • 627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳರು ಅರೆಸ್ಟ್

    627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳರು ಅರೆಸ್ಟ್

    ಮುಂಬೈ: 627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಮೂವರು ಕಳ್ಳರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ತೌಸಿಫ್ ಖುರೇಶಿ, ಪಾಷಾ ಗೌಸ್ ಮತ್ತು ಮೊಹಮ್ಮದ್ ಸಲೀಂ ಹಬೀಬ್ ಖುರೇಶಿ ಅಲಿಯಾಸ್ ಮುನ್ನಾ ಬಂಧನಕ್ಕೆ ಒಳಗಾದವರು. ಈ ಮೂವರು ಮುಂಬೈನಲ್ಲಿ 627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದು, ದೇಶದ ವಿವಿಧ ಭಾಗಗಳಲ್ಲಿ ಕಳ್ಳತನ ಮಾಡುತ್ತಿದ್ದರು. ಇವರನ್ನು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪತ್ತೆ ಮಾಡಲಾಯಿತು. ತೌಸಿಫ್ ಮತ್ತು ಪಾಷಾ ಅವರನ್ನು ಹೈದರಾಬಾದ್‍ನಲ್ಲಿ ಪತ್ತೆ ಮಾಡಲಾಯಿತು. ಮುನ್ನಾ ಬೆಂಗಳೂರಿನಲ್ಲಿ ಇದ್ದರಿಂದ ನಮ್ಮ ಒಂದು ತಂಡವನ್ನು ಕರ್ನಾಟಕಕ್ಕೆ ಕಳುಹಿಸಲಾಯಿತು. ಕೊನೆಗೆ ಅವನನ್ನು ರಾಯಚೂರಿನಲ್ಲಿ ಬಂಧಿಸಲಾಯಿತು, ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು

    ಈ ಕಳ್ಳರಿಂದ 21.60 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದೇವೆ. ಈ ಮೂವರು ಮನೆಗಳಿಗೆ ಹೋಗಿ ಕಳ್ಳತನ ಮಾಡುತ್ತಿದ್ದರು. ಒಂದು ಕಡೆ ಕಳ್ಳತನ ಮಾಡಿ ಅಲ್ಲಿಂದ ಬೇರೆ ರಾಜ್ಯಕ್ಕೆ ಹೋಗಿ ತಪ್ಪಿಸಿಕೊಳ್ಳಲು ವಿಮಾನಗಳನ್ನು ಬಳಸಿಕೊಳ್ಳುತ್ತಿದ್ದರು. ಆದರೆ ತನಿಖೆ ಮೂಲಕ ಈ ಕಳ್ಳರನ್ನು ಪತ್ತೆ ಹಚ್ಚಲಾಗಿದೆ. ಅದು ಅಲ್ಲದೇ ಈ ಮೂವರು ಮಾರುವೇಷದಲ್ಲಿ ರಸ್ತೆಗಳಲ್ಲಿ ಓಡಾಡುತ್ತಿದ್ದರು ಎಂದರು.

    ಅದರಲ್ಲಿಯೂ ಈ ಗುಂಪಿನಲ್ಲಿರುವ ಮೊಹಮ್ಮದ್ ಸಲೀಂ ಖುರೇಶಿ ಕ್ರಿಮಿನಲ್ ಆಗಿದ್ದು, ಆತನ ವಿರುದ್ಧ ಕನಿಷ್ಠ 215 ಪ್ರಕರಣಗಳಿವೆ. ಮೊಹಮ್ಮದ್ ರಾಜಸ್ಥಾನದ ಪ್ರಮುಖ ವ್ಯಕ್ತಿಗಳ ಮನೆಗಳಲ್ಲಿ ದರೋಡೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎರಡನೇ ಬಾರಿ ಸರ್ವರ್ ಡೌನ್ – ಸಮಸ್ಯೆ ಬಗೆಹರಿಸಿ ಬಳಕೆದಾರರಲ್ಲಿ ಕ್ಷಮೆಯಾಚಿಸಿದ ಇನ್‍ಸ್ಟಾಗ್ರಾಮ್‍

  • ನಿದ್ದೆ ಮಾಡುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋದ ಮಗಳು ದುರಂತ ಸಾವು

    ನಿದ್ದೆ ಮಾಡುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋದ ಮಗಳು ದುರಂತ ಸಾವು

    ಹೈದರಾಬಾದ್: ಮೊಬೈಲ್‍ನಲ್ಲಿ ಗೇಮ್ ಆಡಬೇಡ ಎಂದು ತಂದೆ ಗದರಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶಾರಣಾಗಿರುವ ಘಟನೆ ತೆಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕೌಶಿಕಿ (17) ಮೃತಳಾಗಿದ್ದಾಳೆ. ಈಕೆ ಬಾಳಾಪುರ್ ಮೂಲದ ವೇಲದುರ್ತಿ ಮನೋಹರಚಾರಿ ಮತ್ತು ಕಲ್ಯಾಣ ದಂಪತಿ ಮಗಳಾಗಿದ್ದಾಳೆ. ಇವರಿಗೆ ಮೂವರು ಮಕ್ಕಳಿದ್ದಾರೆ. ಈ ಕುಟುಂಬ ಮೀರ್‌ಪೇಟ್ ನ ಸರ್ವೋದಯ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ವಾಸವಾಗಿದ್ದರು.

    ಕೌಶಿಕಿ ದ್ವೀತಿಯ ಪಿಯು ವಿದ್ಯಾರ್ಥಿನಿ ಆಗಿದ್ದಳು. ಮೊಬೈಲ್ ಗೀಳಿಗೆ ಬಿದ್ದಿದ್ದ ಕೌಶಿಕಿ ಅಪ್ಪನ ಮೊಬೈಲ್ ತೆಗೆದುಕೊಂಡು ಪ್ರತಿದಿನ ಗೇಮ್ ಆಡುತ್ತಿದ್ದಳು. ಗೇಮ್ ಆಡುತ್ತಿರುವಾಗ ಒಂದು ದಿನ ರಾತ್ರಿ ಕೌಶಿಕಿ ತಂದೆ ಆಕೆಯನ್ನು ಬೈದು ಮೊಬೈಲ್ ಕಿತ್ತುಕೊಂಡಿದ್ದರು. ಇದನ್ನೂ ಓದಿ:   ಬೆಂಗಳೂರಿನಲ್ಲೇ ನಡೆಯಲಿದೆ ಪ್ರೊ ಕಬಡ್ಡಿ ಲೀಗ್

    ಅಪ್ಪ ಬೈದಿದ್ದರಿಂದ ಬೇಸರಗೊಂಡಿದ್ದ ಕೌಶಿಕಿ ಅದೇ ದಿನ ರಾತ್ರಿ ಮಲಗುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋಗಿ ಲಾಕ್ ಮಾಡಿಕೊಂಡಿದ್ದಳು. ಅದೇ ಕೋಣೆಯಲ್ಲಿ ಆಕೆಯ ಸಹೋದರಿ ಕೂಡಾ ಮಲಗಿದ್ದಳು. ಆದರೆ ಈ ನಡುವೆ ತಾಯಿ ಕಿಟಕಿ ಬಾಗಿಲು ತಟ್ಟಿದ್ದಾರೆ. ಕೌಶಿಕಿ ಸಹೋದರಿ ಎಚ್ಚರಗೊಂಡು ನೋಡಿದಾಗ ಅಕ್ಕ ದುಪ್ಪಟ್ಟಿದಿಂದ ನೇಣು ಹಾಕಿಕೊಂಡಿರುವುದನ್ನು ನೋಡಿ ಜೋರಾಗಿ ಕಿರುಚಿದ್ದಾಳೆ. ಇದನ್ನೂ ಓದಿ: ಗ್ರಾಹಕರಿಗೆ ಇನ್ನಷ್ಟು ಹೊರೆ- ಸಿಲಿಂಡರ್ ದರದಲ್ಲಿ 15 ರೂ. ಏರಿಕೆ

    ತಕ್ಷಣ ಕೌಶಿಕಿಯನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೌಶಿಕಿ ಸಾವನ್ನಪ್ಪಿದ್ದಾಳೆ. ಸದಯ ಈ ಪ್ರಕರಣ ಮೀರ್‍ಪೇಟ್ ಠಾಣೆಯಲ್ಲಿ ದಾಖಲಾಗಿದೆ.

  • 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

    200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

    ಹೈದರಾಬಾದ್: ದಕ್ಷಿಣ ಭಾರತದ ಕ್ಯೂಟ್ ಕಪಲ್ ಆಗಿದ್ದ ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಶನಿವಾರ ಅಧಿಕೃತವಾಗಿ ತಮ್ಮ ವಿಚ್ಛೇದನವನ್ನು ಘೋಷಿಸಿದ್ದರು. ಇದೀಗ ನಾಗ ಚೈತನ್ಯ ಹಾಗೂ ಅಕ್ಕಿನೇನಿ ಕುಟುಂಬದ ಕಡೆಯಿಂದ 200 ಕೋಟಿ ಜೀವನಾಂಶವನ್ನು ಸಮಂತಾ ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:  ಸಮುದ್ರದ ಮಧ್ಯೆ ಡ್ರಗ್ಸ್ ಪಾರ್ಟಿ- ಸ್ಟಾರ್ ನಟನ ಮಗ ಸೇರಿ ಹತ್ತು ಮಂದಿ ವಶಕ್ಕೆ

    ಸಮಂತಾ ಹಾಗೂ ನಾಗ ಚೈತನ್ಯ ಶನಿವಾರ ಪರಸ್ಪರ ದೂರವಾಗುತ್ತಿರುವ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿವಾಹವಾಗಿ ಕೇವಲ ನಾಲ್ಕೆ ವರ್ಷ ಕಳೆದಿದ್ದು, ಐದನೇ ವರ್ಷ ತುಂಬುತ್ತಿದ್ದಂತೆ ಇಬ್ಬರು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನೆ ಪಡೆದುಕೊಂಡಿದ್ದಾರೆ. ಸದ್ಯ ಸಮಂತಾಗೆ ಜೀವನಾಂಶವಾಗಿ 200 ಕೋಟಿ ರೂ.ವನ್ನು ನೀಡಲು ಅಕ್ಕಿನೇನಿ ಕುಟುಂಬ ಮುಂದಾಗಿತ್ತು ಎಂಬ ವಿಚಾರ ಬಹಿರಂಗವಾಗಿದೆ. ಆದರೆ ಈ ಕುರಿತಂತೆ ಸಮಂತಾ ನನಗೆ ಜೀವನಾಂಶ ಬೇಡ ಹಾಗೂ ನಾಗ ಚೈತನ್ಯ ಅಥವಾ ಅವರ ಕುಟುಂಬದವರಿಂದ ಒಂದು ಪೈಸೆ ಕೂಡ ತೆಗೆದುಕೊಳ್ಳಲು ಬಯಸುವುದಿಲ್ಲ ಅಂತ ಹೇಳಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.

    ತಮ್ಮ ಕಠಿಣ ಶ್ರಮ ಹಾಗೂ ಪರಿಶ್ರಮದಿಂದ ಟಾಲಿವುಡ್‍ನಲ್ಲಿ ಸಮಂತಾ ಅಗ್ರಸ್ಥಾನದಲ್ಲಿರುವುದರಿಂದ ವಿಚ್ಛೇದನದಿಂದ ತನಗೆ ಯಾವುದೇ ಹಣದ ಅಗತ್ಯ ಇಲ್ಲ ಎಂದು ಅವರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಸಮಂತಾ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳಿಂದ ದೂರ ಸರಿದು ಕೆಲಸದ ಕಡೆಗೆ ಗಮನ ಹರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:  29ರ ವಸಂತಕ್ಕೆ ಕಾಲಿಟ್ಟ ಚಂದನವನದ ಡಿಂಪಲ್ ಕ್ವೀನ್

  • ಮದುವೆ ಬದಲು ವಿಚ್ಛೇದನವನ್ನು ಸಂಭ್ರಮಿಸಬೇಕು: ರಾಮ್ ಗೋಪಾಲ್ ವರ್ಮಾ

    ಮದುವೆ ಬದಲು ವಿಚ್ಛೇದನವನ್ನು ಸಂಭ್ರಮಿಸಬೇಕು: ರಾಮ್ ಗೋಪಾಲ್ ವರ್ಮಾ

    ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಇಂದು ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಈ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮದೇ ಸ್ಟೈಲಿನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಹೌದು. ಇಂದು ನಟ ಹಾಗೂ ನಟಿ ಡಿವೋರ್ಸ್ ನೀಡುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ರಾಮ್ ಗೋಪಾಲ್ ವರ್ಮಾ ಅವರು, ಮದುವೆ ಬದಲು ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ವಿಚ್ಚೇದನವನ್ನು ಸಂಭ್ರಮಿಸಬೇಕು ಅನ್ನೋ ನಿರ್ದೇಶಕರ ಟ್ವೀಟ್ ಗಳು ಸದ್ಯ ಎಲ್ಲರ ಗಮನ ಸೆಳೆದಿದೆ. ಇದನ್ನೂ ಓದಿ:  ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ

    ಇತ್ತೀಚೆಗೆ ಮದುವೆಗಳನ್ನು ಅಲ್ಲ, ಬದಲಾಗಿ ಡಿವೋರ್ಸ್‍ಗಳನ್ನು ಸಂಭ್ರಮಿಸಬೇಕಾದ ಪರಿಸ್ಥಿತಿ ಬಂದಿದೆ. ಮದುವೆಗಳು ಸಾವಿದ್ದಂತೆ, ಡಿವೋರ್ಸ್ ಪುನರ್ಜನ್ಮ ಇದ್ದಂತೆ. ಮದುವೆಗಳು ನರಕದಲ್ಲಿ ಹಾಗೂ ಡಿವೋರ್ಸ್ ಗಳು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತವೇ ಎಂದು ತಮ್ಮದೇ ಶೈಲಿಯಲ್ಲಿ ನಿರ್ದೇಶಕರು ಬರೆದುಕೊಂಡಿರುವುದು ಎಲ್ಲರ ಗಮನ ಸೆಳೆದಿದೆ. ಅಲ್ಲದೆ ಆರ್‍ಜಿವಿ ಟ್ವೀಟ್ ಗೆ ಸಾಕಷ್ಟು ಪರ-ವಿರೋಧ ಕಾಮೆಂಟ್ ಗಳು ಹರಿದು ಬಂದಿವೆ.

    4 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಸ್ಟಾರ್ ಜೋಡಿ ಇಂದು ಅಧಿಕೃತವಾಗಿ ತಮ್ಮ ಡಿವೋರ್ಸ್ ವಿಚಾರ ಬಹಿರಂಗಪಡಿಸುವ ಮೂಲಕ ಗಾಸಿಪ್ ಗಳಿಗೆ ತೆರೆ ಎಳೆದಿದ್ದಾರೆ. ನಮ್ಮ ಖಾಸಗಿ ಬದುಕನ್ನು ಎಲ್ಲರೂ ಗೌರವಿಸಿ. ಇಂತಹ ಸಂದರ್ಭಗಳಲ್ಲಿ ನಮ್ಮ ಜೊತೆ ನಿಲ್ಲಿ ಎಂದು ಅಭಿಮಾನಿಗಳಲ್ಲಿ ಸಮಂತಾ ಹಾಗೂ ನಾಗಚೈತನ್ಯ ಮನವಿ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಭಾರವಾದ ಹೃದಯದಿಂದ ಸೊಸೆ ಕುರಿತಾಗಿ ಬರೆದ ನಾಗರ್ಜುನ್

    ಇತ್ತ ತಮ್ಮ ಸೊಸೆ ಹಾಗೂ ಪುತ್ರನ ದಾಂಪತ್ಯದಲ್ಲಿ ಬಿರುಕು ಮೂಡಿದ್ದರ ಕುರಿತು ಬೇಸರ ವ್ಯಕ್ತಪಡಿಸಿರುವ ನಾಗಾರ್ಜುನ್, ಅತ್ಯಂತ ಭಾರವಾದ ಹೃದಯದಿಂದ ನಾನು ಇದನ್ನು ಹೇಳುತ್ತೇನೆ. ಸ್ಯಾಮ್ ಮತ್ತು ಚಾಯ್ ನಡುವೆ ನಡೆದದ್ದು ತುಂಬಾ ದುರದೃಷ್ಟಕರವಾಗಿದೆ. ದಂಪತಿ ಮಧ್ಯೆ ಏನಾಗುತ್ತಿದೆ ಎನ್ನುವುದು ತುಂಬಾ ವೈಯಕ್ತಿಕವಾಗಿದೆ. ಇಬ್ಬರು ನನಗೆ ಪ್ರಿಯರು. ನನ್ನ ಕುಟುಂಬವು ಸ್ಯಾಮ್ ಜೊತೆ ಕಳೆದ ಕ್ಷಣಗಳನ್ನು ಗೌರವಿಸುತ್ತದೆ. ಅವಳು ಯಾವಾಗಲೂ ನಮಗೆ ಪ್ರಿಯಳಾಗಿರುತ್ತಾಳೆ. ದೇವರು ಅವರಿಬ್ಬರಿಗೂ ಶಕ್ತಿಯನ್ನು ನೀಡಲಿ ಎಂದು ಬೇಸರ ಹೊರಹಾಕಿದ್ದಾರೆ.

  • ನಾಯಕ ದೇವರಕೊಂಡಗಿಂತಲೂ ದುಬಾರಿ ಸಂಭಾವನೆ ಪಡೆಯಲಿದ್ದಾರೆ ಮೈಕ್ ಟೈಸನ್

    ನಾಯಕ ದೇವರಕೊಂಡಗಿಂತಲೂ ದುಬಾರಿ ಸಂಭಾವನೆ ಪಡೆಯಲಿದ್ದಾರೆ ಮೈಕ್ ಟೈಸನ್

    ಹೈದರಾಬಾದ್: ಟಾಲಿವುಡ್ ಬಹುನಿರೀಕ್ಷಿತ ಲೈಗರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಸಂಭಾವನೆ ನಟ ವಿಜಯ್ ದೇವರಕೊಂಡಗಿಂತ ದುಬಾರಿ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ.

    ನಟ ವಿಜಯ್ ದೇವರಕೊಂಡ ಅಭಿನಯಿಸುತ್ತಿರುವ ಲೈಗರ್ ಸಿನಿಮಾದಲ್ಲಿ ಗಾಡ್ ಆಫ್ ದಿ ಬಾಕ್ಸಿಂಗ್ ಎಂದೇ ಖ್ಯಾತಿ ಪಡೆದಿರುವ ಅಮೆರಿಕಾದ ಮೈಕ್ ಟೈಸನ್ ಅಭಿನಯಿಸಲಿದ್ದಾರೆ ಎಂಬ ವಿಚಾರವನ್ನು ಚಿತ್ರತಂಡ ಇತ್ತೀಚೆಗಷ್ಟೇ ರಿವೀಲ್ ಮಾಡಿತ್ತು. ಇದನ್ನೂ ಓದಿ: ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್

    ಚಿತ್ರದ ಅತಿಥಿ ಪಾತ್ರವೊಂದರಲ್ಲಿ ಮೈಕ್ ಟೈಸನ್, ಕ್ಲೈಮ್ಯಾಕ್ಸ್‍ಗಿಂತಲೂ ಬರುವ ಚಿಕ್ಕ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದು, ಈ ದೃಶ್ಯದಲ್ಲಿ ಅಭಿನಯಿಸಲು ದುಬಾರಿ ಸಂಭಾವನೆ ಪಡೆಯಲಿದ್ದಾರೆ. ಅದು ಲೈಗರ್ ಸಿನಿಮಾ ನಟ ವಿಜಯ್ ದೇವರಕೊಂಡ ಪಡೆಯವ ಸಂಭಾವನೆಗಿಂತಲೂ ಹೆಚ್ಚು ಎಂಬ ವಿಚಾರ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ.

     

    View this post on Instagram

     

    A post shared by Vijay Deverakonda (@thedeverakonda)

    ಮೈಕ್ ಟೈಸನ್‍ಗೆ ಹೆಚ್ಚು ಸಂಭಾವನೆ ನೀಡುವುದರಿಂದ ಯಾವುದೇ ನಷ್ಟವಿಲ್ಲ. ಸಾಕಷ್ಟು ಸಂಖ್ಯೆಯಲ್ಲಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇರುವ ಕಾರಣ ಸಿನಿಮಾ ಕಲೆಕ್ಷನ್ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿದೆ ಚಿತ್ರತಂಡ. ಈ ಚಿತ್ರಕ್ಕೆ ಪುರಿ ಜಗನ್ನಾಥ್, ಕರಣ್ ಜೋಹರ್, ಚಾರ್ಮಿ ಕೌರ್, ಅಪೂರ್ವ ಮೆಹ್ತಾ, ಹೀರೂ ಯಶ್ ಜೋಹರ್ ಒಟ್ಟಾಗಿ ಸೇರಿಕೊಂಡು ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್

     

    View this post on Instagram

     

    A post shared by Vijay Deverakonda (@thedeverakonda)

    ಸೋಮವಾರವಷ್ಟೇ ವಿಜಯ್ ದೇವರಕೊಂಡ ತಮ್ಮ ಟ್ವಿಟ್ಟರ್ ನಲ್ಲಿ ಮೈಕ್ ಟೈಸನ್ ಲೈಗರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ವಿಚಾರವನ್ನು ಶೇರ್ ಮಾಡಿಕೊಂಡಿದ್ದು, ನಿಮಗೆ ಭರವಸೆಯನ್ನು ನೀಡಿದ್ದೆವು. ಅದರಂತೆ ಇಂದು ನಾವು ಪ್ರಾರಂಭಿಸಿದ್ದೇವೆ. ಭಾರತೀಯ ಪರದೆಯಲ್ಲಿ ಮೊದಲ ‘ಲೈಗರ್’ ಸಿನಿಮಾದಲ್ಲಿ ಗಾಡ್ ಆಫ್ ಬಾಕ್ಸಿಂಗ್, ದಿ ಲೆಜೆಂಡ್, ದಿ ಬೀಸ್ಟ್, ದಿ ಗ್ರೇಟೆಸ್ಟ್ ಆಲ್ ಟೈಮ್ ಐರನ್ ‘ಮೈಕ್ ಟೈಸನ್’ ಎಂದು ಬರೆದು ಟ್ವೀಟ್ ಮಾಡುವ ಮೂಲಕ ಗಾಡ್ ಆಫ್ ಬಾಕ್ಸಿಂಗ್ ನನ್ನು ಭಾರತೀಯ ಪರದೆಯ ಮೇಲೆ ತರುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.

  • ದಂಪತಿ ಜಗಳಕ್ಕೆ ಬಲಿಯಾದ 22ದಿನದ ಕಂದಮ್ಮ

    ದಂಪತಿ ಜಗಳಕ್ಕೆ ಬಲಿಯಾದ 22ದಿನದ ಕಂದಮ್ಮ

    ಹೈದರಾಬಾದ್: ಇಪ್ಪತ್ತೆರಡು ದಿನಗಳ ಹುಸುಗೂಸೊಂದು ತನ್ನ ಅಪ್ಪ, ಅಮ್ಮನ ಜಗಳದಲ್ಲಿ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ತೆಲಂಗಾಣದ ಸೈದಾಬಾದ್‍ನ ಪೂಸಲ ಬಸ್ತಿ ನಿವಾಸಿಗಳಾದ ಪಿ. ರಾಜೇಶ್ ಮತ್ತು ಜಾಹ್ನವಿ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ದಂಪತಿ ನಡುಗೆ ಶುರುವಾದ ಸಣ್ಣ ಜಗಳ ಮಗುವನ್ನು ಬಲಿ ಪಡೆದುಕೊಂಡಿದೆ. ಇದನ್ನೂ ಓದಿ: ಪೂಜಾ ಹೆಗ್ಡೆಗೆ ಸರ್ಪ್ರೈಸ್ ಕೊಟ್ಟ ಫೋಟೋಗ್ರಾಫರ್‌ಗಳು

    ಇತ್ತೀಚೆಗಷ್ಟೆ ಈ ದಂಪತಿಗೆ ಮುದ್ದಾದ ಗಂಡು ಮಗು ಜನನವಾಗಿತ್ತು. ಮಗುವಿಗೆ ಹಾಲು ಕುಡಿಸುವ ಬಗ್ಗೆ ವಾಗ್ವಾದವಾದ ಹಿನ್ನಲೆಯಲ್ಲಿ ರಾಜೇಶ್ ಜಾಹ್ನವಿಗೆ ಹೊಡೆಯಲು ಪೈಪ್ ಕೈಗೆತ್ತಿಕೊಂಡ. ಮಗುವನ್ನು ತನ್ನ ತೋಳಿನಲ್ಲಿ ಎತ್ತಿಕೊಂಡಿದ್ದ ಆ ತಾಯಿ ಅದನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಳು. ಹೊಡೆತ ತಪ್ಪಿಸಿಕೊಳ್ಳಲು ಮನೆಯೆಲ್ಲಾ ಓಡಾಡಿದ್ದಳು ಎನ್ನಲಾಗಿದೆ. ಇದನ್ನೂ ಓದಿ:  ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

    ಸ್ವಲ್ಪ ಸಮಯದ ನಂತರ ಮಗು ಯಾವುದೇ ಪ್ರತಿಕ್ರಿಯೆ ನೀಡದೆ ಇದ್ದದನ್ನು ಗಮನಿಸಿದ ದಂಪತಿ, ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷೆ ನಡೆಸಿದ ವೈದ್ಯರು, ಮಗು ಉಸಿರುಗಟ್ಟಿ ಸತ್ತುಹೋಗಿದೆ ಎಂದು ತಿಳಿಸಿದರು. ಮಾಹಿತಿ ತಿಳಿದ ಸೈದಾಬಾದ್ ಪೊಲೀಸರು ದಂಪತಿ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

  • MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

    MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

    ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್(ಜೆಎಚ್‍ಎಂಸಿ)ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಕೀಟಶಾಸ್ತ್ರಜ್ಞರ ಕೆಲಸ ನೀಡಿದ್ದಾರೆ.

    ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ) ಮಾಡಿದ ಎ.ರಜನಿ, ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ತೆಲುಗಿನ ದಿನಪತ್ರಿಕೆಯೊಂದರಲ್ಲಿ ಮಹಿಳೆ ಬಗ್ಗೆ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಆಕೆಯ ವಿದ್ಯಾರ್ಹತೆಗೆ ಅನುಗುಣವಾಗಿ ಕೆಲಸ ನೀಡಿದ್ದಾರೆ.

    hydrabad women

    ರಜನಿ ಅವರನ್ನು ಸಚಿವರ ಬಳಿ ನಗರಾಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿರುವ ಅರವಿಂದ್ ಕುಮಾರ್‌‌ರವರು ಕರೆದುಕೊಂಡು ಹೋಗಿ ಕೆಲಸ ಕೊಡಿಸಿರುವುದಾಗಿ ತಿಳಿಸಿದ್ದಾರೆ.  ರುಜುವಾತುಗಳನ್ನು ಪರಿಶೀಲಿಸಿದ ಬಳಿಕ ರಜನಿಗೆ ಕೆಲಸ ನೀಡಲು ಆದೇಶಿಸಲಾಯಿತು ಎಂದು ಅರವಿಂದ್ ಕುಮಾರ್‍ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಿರುವ ರಜನಿಗೆ ಸಚಿವರು ಕರೆದು ಕೀಟಶಾಸ್ತ್ರ ವಿಭಾಗದಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ಕೆಲಸ ಕೊಟ್ಟು, ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದಾಗಭಾವುಕರಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್

    ವಾರಂಗಲ್ ಜಿಲ್ಲೆಯವರಾಗಿದ್ದು, ಕೃಷಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ್ದಾರೆ. ಹಣಕಾಸಿ ಸಮಸ್ಯೆ ಇದ್ದರೂ ಕೂಡ ಅವರ ಪೋಷಕರ ಬೆಂಬಲದಿಂದಾಗಿ ತಮ್ಮ ವಿದ್ಯಾಭ್ಯಾಸವನು ಮುಂದುವರಿಸಿದರು ಮತ್ತು 2013ರಲ್ಲಿ ಪ್ರಥಮ ದರ್ಜೆ ಜೊತೆಗೆ ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ)ಯಲ್ಲಿ ಉತ್ತೀರ್ಣರಾದರು. ಅಲ್ಲದೇ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಅರ್ಹತೆ ಪಡೆದರು. ಆದರೆ ಈ ಮಧ್ಯೆ ವಕೀಲರೊಬ್ಬರು ವಿವಾಹವಾಗಿ ಹೈದರಾಬಾದ್‍ಗೆ ಸ್ಥಳಾಂತರಗೊಂಡಿದ್ದಾಗಿ ತಿಳಿಸಿದ್ದಾರೆ.

    ರಜನಿಗೆ ಎರಡು ಮಕ್ಕಳ ತಾಯೊಯಾದ ನಂತರ ಕೂಡ ಉದ್ಯೋಗಕ್ಕಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು. ಆದರೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದರಿಂದ ಕುಟುಂಬ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿತು. ನಂತರ ಕುಟುಂಬವನ್ನು ನಡೆಸಲು ಆಕೆಯ ಅತ್ತೆ ಸೇರಿದಂತೆ ಐವರು ತರಕಾರಿ ಮಾರಾಟ ಮಾಡಲು ಆರಂಭಿಸಿದರು. ಇದರಿಂದ ಗಳಿಸಿದ ಹಣದಿಂದಾಗಿ ರಜನಿ ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಗುಡಿಸುವ ಕೆಲಸ ಪಡೆದು ತಿಂಗಳಿಗೆ 10,000ರೂ, ಸಂಬಳ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಕಾಟನ್ ಪೇಟೆಯನ್ನೇ ಆಯ್ಕೆ ಮಾಡ್ಕೊಂಡಿದ್ದೇಕೆ..?