ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್ ಶರ್ಮಿಳಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಆರಂಭವನ್ನು ಘೋಷಣೆ ಮಾಡುವ ದಿನಾಂಕವನ್ನು ಹೇಳಿದ್ದಾರೆ.

ಜುಲೈ 8 ರಂದು ಹೊಸ ಪಕ್ಷವನ್ನು ತೆಲಂಗಾಣದಲ್ಲಿ ಉದ್ಘಾಟಿಸಲಿದ್ದೇನೆ. ಜುಲೈ 8 ರಂದು ತಂದೆ ದಿ.ವೈ ಎಸ್ ರಾಜಶೇಖರ ರೆಡ್ಡಿಯವರ ಜನ್ಮದಿನದ ವಾರ್ಷಿಕೋತ್ಸವಿದೆ. ಇದೇ ದಿನದಂದು ನಮ್ಮ ಹೊಸ ಪಕ್ಷವನ್ನು ಉದ್ಘಾಟಿಸಲಿದ್ದೇನೆ ಎಂದು ಶರ್ಮಿಳಾ ಖಮ್ಮಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಭರವಸೆ ನೀಡಿರುವ ಪ್ರಕಾರ, ಸರ್ಕಾರಿ ಉದ್ಯೋಗ ನೀಡುವುದಕ್ಕೆ ಅಧಿಸೂಚನೆ ಹೊರಡಿಸದಿದ್ದಲ್ಲಿ ಏಪ್ರಿಲ್ 15ರಿಂದ ಮೂರು ದಿನಗಳ ಕಾಲ ಹೈದರಾಬಾದ್ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ. ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರದ ಭ್ರಷ್ಟಾಚಾರ ಆರೋಪಗಳನ್ನು ಪ್ರಶ್ನೆ ಮಾಡುವುದಕ್ಕಾಗಿ ನಮ್ಮ ಪಕ್ಷ ಅಗತ್ಯ ಇದೆ. ತೆಲಂಗಾಣ ರಾಜ್ಯ ಸ್ಥಾಪನೆಯಾಗಿ 7 ವರ್ಷ ಆಗಿರಬಹುದು. ಜನರ ಆಶೋತ್ತರಗಳನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ತೆಲಂಗಾಣ ರಾಜ್ಯ ಸ್ಥಾಪನೆಗಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ತೆಲಂಗಾಣ ಅಸ್ತಿತ್ವಕ್ಕೆ ಬಂದ ನಂತರವೂ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳನ್ನು ಎಮ್ಎಲ್ಎಗಳು ಅಥವಾ ಎಂಪಿಗಳು ಭೇಟಿಯಾಗುವ ಅವಕಾಶವೇ ಇಲ್ಲ. ಕಾಂಗ್ರೆಸ್ ಪಾರ್ಟಿ ಕೆಸಿಆರ್ ಜೊತೆಗೆ ಫೈಟ್ ಮಾಡಲು ತಯಾರಿಲ್ಲ. ಬಿಜೆಪಿ ನೀಡಿದ ಭರವಸೆಗಳು ಏನಾದವು? ಅವರು ರೈಲು, ಫ್ಯಾಕ್ಟರಿಯ ಭರವಸೆ ನೀಡಿದ್ದರು. ಅದಿನ್ನೂ ಜಾರಿಗೆ ಬಂದಿಲ್ಲ ಎಂದು ಕಿಡಿಕಾರಿದ್ದಾರೆ.









ನಂತರ ಮಲ್ಲಿಕಾರ್ಜುನ್ ರಾವ್ ಅವರಿಗೆ ಮಾಸ್ಕ್ ಧರಿಸದೆ ಇರಲು ಕಾರಣವೇನು ಎಂದು ಕೇಳಿದ್ದಾರೆ. ಕೆಲಸಕ್ಕೆ ಬರುವ ಅವಸರದಲ್ಲಿ ಮರೆತೆ ಅಂತೆ ಮಲ್ಲಿಕಾರ್ಜುನ್ ಹೇಳಿದ್ದಾರೆ. ಈ ವೇಳೆ ಅವರಿಗೆ ದಂಡವನ್ನು ವಿಧಿಸಿ ಹಾಗೂ ತಾವೇ ಮಾಸ್ಕ್ ಅನ್ನು ಮಲ್ಲಿಕಾರ್ಜುನ್ ಅವರಿಗೆ ಹಾಕಿದ್ದಾರೆ. ಅಲ್ಲದೆ ಎಲ್ಲರಿಗೂ ಒಂದೇ ನಿಯಮ, ಕಾನೂನು ಎಂದು ಹೇಳಿದ್ದಾರೆ.
ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಎಸ್ಪಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.







ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಭೀಕರವಾದ ಅಪಘಾತ ಸಂಭವಿಸಿದೆ. ಗಾಯಳುಗಳನ್ನು ವಿಜಯವಾಡ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.









