Tag: Hyderabad

  • ನಿವೃತ್ತ ನ್ಯಾಯಾಧೀಶರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು

    ನಿವೃತ್ತ ನ್ಯಾಯಾಧೀಶರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು

    ಹೈದರಾಬಾದ್: ನಿವೃತ್ತ ನ್ಯಾಯಾಧೀಶರ ವಿರುದ್ಧ ವರಕ್ಷಿಣೆ ಕಿರುಕುಳ ಕೇಸ್ ದಾಖಲಾದ ಘಟನೆ ಆಂಧ್ರಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ.

    ಸಿಂಧು ಶರ್ಮಾ (30) ತನ್ನ ಮಾವ ನಿವೃತ್ತ ನ್ಯಾಯಾಧೀಶ ನೂಟಿ ರಾಮಾಮೋಹನಾ ರಾವ್ ಅವರ ವಿರುದ್ಧ ಹೈದರಾಬಾದ್‍ನ ಸೆಂಟ್ರಲ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಂಧು ತನ್ನ ಅತ್ತೆ ನೂಟಿ ದುರ್ಗಾ ಜಯಲಕ್ಷ್ಮಿ ಹಾಗೂ ಪತಿ ನೂಟಿ ವಸಿಷ್ಠ ನಿರಂತರವಾಗಿ ಕಿರುಕುಳ ನೀಡಿದಲ್ಲದೇ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ನಾನು 2012ರಲ್ಲಿ ವಸಿಷ್ಠರನ್ನು ಮದುವೆಯಾಗಿದ್ದೆ. ನಮಗೆ ಈಗ ಇಬ್ಬರು ಮಕ್ಕಳು ಕೂಡ ಇದ್ದಾರೆ. ನಾನು ಮದುವೆಯಾದ ಹೊಸತರಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ವರದಕ್ಷಿಣೆ ತರುವಂತೆ ದೈಹಿಕವಾಗಿ ಹಲ್ಲೆ ಮಾಡಿ ಕಿರುಕುಳ ನೀಡಲು ಶುರು ಮಾಡಿದ್ದರು. ಏಪ್ರಿಲ್ 20ರಂದು ನನ್ನ ಮೇಲೆ ಹಲ್ಲೆ ಮಾಡಿದ್ದಾಗ ನಾನು ಆಸ್ಪತ್ರೆಗೆ ದಾಖಲಾದೆ. ನನ್ನ ಗಾಯಗಳನ್ನು ನೋಡಿ ವೈದ್ಯರು ಎಂಎಲ್‍ಸಿ (ಮೇಡಿಕೋ ಲಿಗಲ್ ಕೇಸ್) ದಾಖಲಿಸುವಂತೆ ಒತ್ತಾಯಿಸಿದರು.

    ತನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದಂತೆ ಸಿಂಧು ತನ್ನ ಪೋಷಕರ ಜೊತೆ ಸೇರಿ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಅವರ ಮನೆಯವರ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಂಧು ಈಗ ಉಪ್ಪಾಲ್‍ನಲ್ಲಿ ಇರುವ ಪೋಷಕರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323, 406, 498ಎ ಅಡಿಯಲ್ಲಿ ದೂರು ದಾಖಲಿಸಿಕೊಂಡು ಸಮನ್ಸ್ ಜಾರಿ ಮಾಡಿದ್ದಾರೆ.

  • ಪ್ರೇಯಸಿಯ ಗಂಟಲು ಸೀಳಿ ಹತ್ಯೆ – ಆಧಾರ್ ಕಾರ್ಡ್ ಬಿಟ್ಟು ಆರೋಪಿ ಎಸ್ಕೇಪ್

    ಪ್ರೇಯಸಿಯ ಗಂಟಲು ಸೀಳಿ ಹತ್ಯೆ – ಆಧಾರ್ ಕಾರ್ಡ್ ಬಿಟ್ಟು ಆರೋಪಿ ಎಸ್ಕೇಪ್

    ಹೈದರಾಬಾದ್: ಭಗ್ನ ಪ್ರೇಮಿಯೊಬ್ಬ ಚಾಕುವಿನಿಂದ ತನ್ನ 18 ವರ್ಷದ ಪ್ರೇಮಿಯ ಗಂಟಲು ಸೀಳಿ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಕಾಜುಗಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಲವು ದಿನಗಳಿಂದ ಆರೋಪಿ ಹುಡುಗಿಯ ಹಿಂದೆ ಬಿದ್ದು ಪ್ರೀತಿಸು ಎಂದು ಕಿರುಕುಳ ನೀಡುತ್ತಿದ್ದನು. ಆದರೆ ಹುಡುಗಿ ಈತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ಭಾನುವಾರ ರಾತ್ರಿ ಚಾಕುವಿನಿಂದ ಆಕೆಯ ಗಂಟಲು ಸೀಳಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಹುಡುಗಿಯನ್ನು ಕೊಂದು ಗ್ರಾಮಸ್ಥರು ಸ್ಥಳಕ್ಕೆ ಬರುವಷ್ಟರಲ್ಲಿ ಪರಾರಿಯಾಗಿದ್ದಾನೆ. ಆದರೆ ಆರೋಪಿಯ ಸ್ನೇಹಿತನನ್ನು ಸ್ಥಳೀಯರು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಆತನನ್ನು ಪಾಲಕೋಲ್ಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಇತ್ತ ಕೊಲೆಯಾದ ಸ್ಥಳದಲ್ಲಿ ಪರಿಶೀಲನೆ ಮಾಡುವಾಗ ಆರೋಪಿಯ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಕೊಲೆಗಾರ ಹೈದರಾಬಾದ್ ಮೂಲದವನು ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

  • ಪ್ರಣಯ್ ಕೊಲೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು

    ಪ್ರಣಯ್ ಕೊಲೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು

    ಹೈದರಾಬಾದ್: ದೇಶಾದ್ಯಂತ ಸುದ್ದಿಯಾಗಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

    ನ್ಯಾಯಾಲಯವು ಮಾರುತಿ ರಾವ್, ಶ್ರಾವಣ್ ಮತ್ತು ಮತೊಬ್ಬ ಆರೋಪಿ ಕರೀಂನಗೆ ಜಾಮೀನು ನೀಡಿದೆ. ಇಂದು ವಾರಂಗಲ್ ಕೇಂದ್ರ ಜೈಲಿನಿಂದ ಆರೋಪಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ.

    ಈ ಹಿಂದೆ ಆರೋಪಿಗಳು ತೆಲಂಗಾಣದ ನಾಲ್ಗೊಂಡ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

    ಮೃತ ಪ್ರಣಯ್ ಪತ್ನಿ ಅಮೃತಾ ತನ್ನ ಪತಿಯ ಸಾವಿನ ನ್ಯಾಯಕ್ಕಾಗಿ ತಂದೆ ಟಿ. ಮಾರುತಿ ರಾವ್, ಚಿಕ್ಕಪ್ಪ ಟಿ. ಶ್ರಾವಣ್, ಅಸ್ಗರ್ ಅಲಿ, ಮೊಹಮ್ಮದ್ ಅಬುಲ್ ಬಾರಿ ಮತ್ತು ಎಸ್. ಶಿವಗೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.

    ಪ್ರಣಯ್ ಕೊಲೆ ಮರ್ಯಾದಾ ಹತ್ಯೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದರು. ಪೊಲೀಸರು ಕೊಲೆಗಾರನನ್ನು ಬಿಹಾರ್ ಮೂಲದ ಸುಭಾಷ್ ಶರ್ಮಾ ಎಂದು ಗುರುತಿಸಿದ್ದಾರೆ. ಈತನನ್ನು ಆರೋಪಿ ಮೊಹಮ್ಮದ್ ಅಬುಲ್ ರಾಜಮಂಡ್ರಿ ಕೇಂದ್ರ ಜೈಲಿನಲ್ಲಿ ಭೇಟಿಯಾಗಿದ್ದ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

    ಏನಿದು ಪ್ರಕರಣ?
    ಪ್ರಣಯ್ ಮತ್ತು ಅಮೃತ ಹೈಸ್ಕೂಲ್ ನಲ್ಲಿಯೇ ಪ್ರೇಮಪಾಶಕ್ಕೆ ಸಿಲುಕಿದ್ದರು. ಮುಂದೆ ಕಾಲೇಜಿನಲ್ಲಿಯೂ ಇಬ್ಬರ ಪ್ರೇಮ ಮುಂದುವರಿದಿತ್ತು. ಆದ್ರೆ ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು.

    2018ರ ಸೆಪ್ಟಂಬರ್ 15 ಶನಿವಾರದಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

  • ನಟಿ ಶ್ರುತಿ ಹಾಸನ್ ಲವ್ ಬ್ರೇಕಪ್

    ನಟಿ ಶ್ರುತಿ ಹಾಸನ್ ಲವ್ ಬ್ರೇಕಪ್

    ಹೈದರಾಬಾದ್: ನಟ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಇಟಲಿ ಮೂಲದ ಮೈಕಲ್ ಕೊರ್ಸೇಲ್ ಜೊತೆ ರಿಲೇಶನ್ ಶಿಪ್‍ನಲ್ಲಿದ್ದರು. ಇಬ್ಬರು ಮದುವೆಯಾಗುತ್ತಾರೆ ಎಂಬ ಸುದ್ದಿ ಹರಿದಾಡುತಿತ್ತು. ಇದೀಗ ಇವರಿಬ್ಬರ ಪ್ರೀತಿ ಬ್ರೇಕಪ್ ಆಗಿದ್ದು, ಈ ಬಗ್ಗೆ ಮೈಕಲ್ ಸ್ಪಷ್ಟಪಡಿಸಿದ್ದಾರೆ.

    ಶ್ರುತಿ ಹಾಸನ್ ಮತ್ತು ಮೈಕಲ್ ಕೊರ್ಸೇಲ್ ಕೆಲವು ವರ್ಷಗಳಿಂದ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಕ್ರಿಸ್‍ಮಸ್, ನ್ಯೂ ಇಯರ್ ಆಚರಣೆಯನ್ನು ಒಟ್ಟಿಗೆ ಸ್ನೇಹಿತರ ಜೊತೆ ಸೇರಿ ಆಚರಣೆ ಮಾಡುತ್ತಿದ್ದರು. ಅಷ್ಟೇ ಅಲ್ಲಿದೇ ತಮ್ಮ ಕ್ಯೂಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದರು. ಹೀಗಾಗಿ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುತ್ತಾರೆ ಎಂದು ಹೇಳಲಾಗುತಿತ್ತು. ಆದರೆ ಇದೀಗ ಇವರ ಲವ್ ಬ್ರೇಕಪ್ ಆಗಿದೆ.

    ಈ ಬಗ್ಗೆ ಸ್ವತಃ ಮೈಕಲ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. “ಜೀವನವು ನಮ್ಮಿಬ್ಬರನ್ನು ವಿರುದ್ಧ ಮಾರ್ಗದಲ್ಲಿ ತಂದು ನಿಲ್ಲಿಸಿದೆ. ದುರದೃಷ್ಟವಶಾತ್ ನಾವಿಬ್ಬರು ಇನ್ನು ಮುಂದೆ ಒಂಟಿ ಮಾರ್ಗದಲ್ಲಿ ಹೆಜ್ಜೆ ಹಾಕಬೇಕಿದೆ. ಆದರೂ ಈ ಯಂಗ್ ಲೇಡಿ ನನಗೆ ಒಳ್ಳೆಯ ಸ್ನೇಹಿತೆಯಾಗಿರುತ್ತಾಳೆ. ಆಕೆಯ ಜೀವನ ಪರ್ಯಂತ ಸ್ನೇಹಿತನಾಗಿರಲು ಹೆಮ್ಮೆಪಡುತ್ತೇನೆ” ಎಂದು ಬರೆದುಕೊಂಡು ಇಬ್ಬರ ಫೋಟೋವನ್ನು ಶೇರ್ ಮಾಡಿದ್ದಾರೆ.

    “ನಾನು ಸದ್ಯಕ್ಕೆ ಮದುವೆ ಆಗುವುದಿಲ್ಲ. ನನಗೆ ಮದುವೆ ಆಗಬೇಕು ಎಂದು ಅನಿಸಿಲ್ಲ. ಹೀಗಾಗಿ ಆ ಭಾವನೆ ಬಂದಾಗ ಮದುವೆಯಾಗುತ್ತೇನೆ” ಎಂದು ಸಂದರ್ಶನವೊಂದರಲ್ಲಿ ಶ್ರುತಿ ಮದುವೆ ಬಗ್ಗೆ ಹೇಳಿದ್ದರು.

    ಸದ್ಯಕ್ಕೆ ಸುಮಾರು ವರ್ಷಗಳ ಬಳಿಕ ಮತ್ತೆ ಶ್ರುತಿ ಹಾಸನ್ ಸಿನಿಮಾದತ್ತ ಮುಖ ಮಾಡಿದ್ದು, ವಿಜಯ್ ಸೇತುಪತಿ ಜೊತೆ ಅಭಿನಯಿಸುತ್ತಿದ್ದಾರೆ. ಜೊತೆಗೆ ಹಿಂದಿ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ.

    https://www.instagram.com/p/Bws8P5gnqPh/

  • ಐಪಿಎಲ್ ಫೈನಲ್ ಹೈದರಾಬಾದ್‍ಗೆ ಶಿಫ್ಟ್ ಬೆನ್ನಲ್ಲೇ ಕ್ರೀಡಾಂಗಣಕ್ಕೆ ಹಾನಿ

    ಐಪಿಎಲ್ ಫೈನಲ್ ಹೈದರಾಬಾದ್‍ಗೆ ಶಿಫ್ಟ್ ಬೆನ್ನಲ್ಲೇ ಕ್ರೀಡಾಂಗಣಕ್ಕೆ ಹಾನಿ

    ಹೈದರಾಬಾದ್: ಐಪಿಎಲ್ 2019ನೇ ಆವೃತ್ತಿಯ ಫೈನಲ್ ಪಂದ್ಯವನ್ನು ಆಯೋಜಿಸಲು ಅವಕಾಶ ಪಡೆದ ಬೆನ್ನಲ್ಲೇ ಆಂಧ್ರಪ್ರದೇಶ್ ಕ್ರಿಕೆಟ್ ಸಂಸ್ಥೆಗೆ ಕಹಿ ಅನುಭವ ಆಗಿದ್ದು, ರಭಸದಿಂದ ಬೀಸಿದ ಗಾಳಿಯಿಂದಾಗಿ ರಾಜೀವ್ ಗಾಂಧಿ ಕ್ರೀಡಾಂಗಣಕ್ಕೆ ಹಾನಿಯಾಗಿದೆ.

    ಹೈದರಾಬಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ಸಂಜೆ ಬೀಸಿದ ಗಾಳಿಯಿಂದ ಕ್ರೀಡಾಂಗಣದಲ್ಲಿ ನೆರಳಿನ ವ್ಯವಸ್ಥೆಗೆ ಹಾಕಿದ್ದ ಶೀಟ್‍ಗಳು ಹಾರಿ ಹೋಗಿದೆ. ಸದ್ಯ ಕ್ರೀಡಾಂಗಣದ ಅಧಿಕಾರಿಗಳಿಗೆ 2 ಸಮಸ್ಯೆಗಳು ಎದುರಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆ ಮುಂದುವರಿಯುವ ಸೂಚನೆ ಸಿಕ್ಕಿದ್ದರಿಂದ ಕ್ರೀಡಾಂಗಣದಲ್ಲಿ ಮತ್ತೆ ಹಾನಿಯಾಗದಂತೆ ತಡೆಯುವುದು ಹಾಗೂ ಹಾನಿಯಾಗಿರುವುದನ್ನು ನಿಗದಿತ ಅವಧಿಯ ಒಳಗಡೆ ಸರಿಪಡಿಸುವ ಕಾರ್ಯ ನಡೆಸಬೇಕಿದೆ.

    ಇತ್ತ ಏಪ್ರಿಲ್ 29 ರಂದು ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ನಡುವಿನ ಪಂದ್ಯ ನಡೆಯಲಿದ್ದು, ಮೇ 12 ರಂದು ಫೈನಲ್ ಪಂದ್ಯ ನಡೆಯಲಿದೆ. ಪರಿಣಾಮ ಕ್ರೀಡಾಂಗಣದ ಅಧಿಕಾರಿಗಳಿಗೆ ಪುನರ್ ವ್ಯವಸ್ತೆ ಕಲ್ಪಿಸಲು ಕಡಿಮೆ ಅವಧಿ ಸಿಕ್ಕಿದೆ.

    ಸೋಮವಾರ ಬಿಸಿಸಿಐ ಫೈನಲ್ ಪಂದ್ಯವನ್ನು ಚೆನ್ನೈ ಬದಲಾಗಿ ಹೈದರಾಬಾದ್‍ಗೆ ಶಿಫ್ಟ್ ಮಾಡಿತ್ತು. ಚಿದಂಬರಂ ಸ್ಟೇಡಿಯಂನಲ್ಲಿರುವ ಮೂರು ಕಡೆ ಪ್ರೇಕ್ಷಕರ ಸ್ಟ್ಯಾಂಡ್ ಗಳಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಲು ತಮಿಳುನಾಡು ಕ್ರಿಕೆಟ್ ಸಂಸ್ಥೆ ವಿಫಲವಾಗಿತ್ತು. ಪರಿಣಾಮ ಬಿಸಿಸಿಐ ಅನಿವಾರ್ಯವಾಗಿ ಈ ಬಾರಿ ಫೈನಲ್ ಪಂದ್ಯವನ್ನು ಹೈದರಾಬಾದಿಗೆ ಶಿಫ್ಟ್ ಮಾಡಿತ್ತು.

  • ಸಾನಿಯಾ ಮಿರ್ಜಾ ಸಹೋದರಿಯೊಂದಿಗೆ ಟೀಂ ಇಂಡಿಯಾ ಮಾಜಿ ನಾಯಕನ ಪುತ್ರ ಡೇಟಿಂಗ್!

    ಸಾನಿಯಾ ಮಿರ್ಜಾ ಸಹೋದರಿಯೊಂದಿಗೆ ಟೀಂ ಇಂಡಿಯಾ ಮಾಜಿ ನಾಯಕನ ಪುತ್ರ ಡೇಟಿಂಗ್!

    ಹೈದರಾಬಾದ್: ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್‍ರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಅನಮ್ ಮಿರ್ಜಾ ಈಗಾಗಲೇ ಅಕ್ಬರ್ ರಷಿದ್ ಎಂಬವರೊಂದಿಗೆ ವಿವಾಹವಾಗಿದ್ದರು. ಆದರೆ 2 ವರ್ಷದ ಬಳಿಕ ಇಬ್ಬರ ವಿವಾಹ ಸಂಬಂಧ ಮುರಿದು ಬಿದ್ದಿತ್ತು. ಅನಮ್, ಅಸಾದುದ್ದೀನ್ ಜೋಡಿ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಕಾಣಿಸಿಕೊಂಡಿದ್ದು, ತವರಿನ ಟೀಂ ಹೈದರಾಬಾದ್‍ಗೆ ಬೆಂಬಲ ಸೂಚಿಸಲು ಸಾನಿಯಾ ಮಿರ್ಜಾ, ಅನಮ್ ಇಬ್ಬರು ಅಸಾದುದ್ದೀನ್ ರೊಂದಿಗೆ ಆಗಮಿಸಿದ್ದರು. ಈ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

    ಇತ್ತ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದ ಸಾನಿಯಾ ಮಿರ್ಜಾ ಕೂಡ ಮಗುವನ್ನು ಮನೆಯಲ್ಲೇ ಬಿಟ್ಟು ಆಗಮಿಸಿದ್ದರು. ಈ ವೇಳೆ ಅನಮ್ ರೊಂದಿಗೆ ಅಸಾದುದ್ದೀನ್ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಸದ್ಯ ಇಬ್ಬರು ಡೇಟಿಂಗ್ ನಲ್ಲಿದ್ದು, ಶೀಘ್ರವೇ ಮದುವೆ ಆಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    ಈ ವರದಿಗೆ ಪುಷ್ಠಿ ನೀಡುವಂತೆ ಇತ್ತೀಚೆಗೆ ಸಾನಿಯಾ ಮಿರ್ಜಾ, ಅಸಾದುದ್ದೀನ್ ರೊಂದಿಗೆ ಇರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ‘ಫ್ಯಾಮಿಲಿ’ ಎಂದು ಬರೆದುಕೊಂಡಿದ್ದರು.

    ಅಂದಹಾಗೇ 25 ವರ್ಷದ ಸಾನಿಯಾ ಸಹೋದರಿ ಅನಮ್ ಶೂಟಿಂಗ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ನಡೆಸಿ ಯಶಸ್ವಿ ಕಾಣದೇ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಇತ್ತ 28 ವರ್ಷದ ಅಸಾದುದ್ದೀನ್ ಕೂಡ ತಂದೆಯಂತೆ ಕ್ರಿಕೆಟ್‍ನಲ್ಲಿ ಮಿಂಚಲು ಯತ್ನಿಸಿ ಸಾಕಷ್ಟು ಯಶಸ್ಸು ಲಭಿಸದೇ ಸದ್ಯ ವಕೀಲ ವೃತ್ತಿಯಲ್ಲಿ ತೊಡಗಿದ್ದಾರೆ.

     

    View this post on Instagram

     

    Family ❤️ @asad_ab18

    A post shared by Sania Mirza (@mirzasaniar) on

  • ಬೆಡ್ ಮೇಲೆ ಪುತ್ರಿ ಬಳಿ ಕುಳಿತ ತಾಯಿ – ಆಸ್ಪತ್ರೆಯಲ್ಲೇ ಸೆಕ್ಸ್‌ಗೆ ಕರೆದ ಕುಡುಕ ಪತಿ

    ಬೆಡ್ ಮೇಲೆ ಪುತ್ರಿ ಬಳಿ ಕುಳಿತ ತಾಯಿ – ಆಸ್ಪತ್ರೆಯಲ್ಲೇ ಸೆಕ್ಸ್‌ಗೆ ಕರೆದ ಕುಡುಕ ಪತಿ

    – ಪತ್ನಿ ಮೇಲೆ ಹಲ್ಲೆಗೈದ ಪತಿ
    – ಕೋಮಾಗೆ ಜಾರಿದ ಪತ್ನಿ

    ಹೈದರಾಬಾದ್: ಆಸ್ಪತ್ರೆಯಲ್ಲಿ ಸೆಕ್ಸ್‌ಗೆ ನಿರಾಕರಿಸಿದ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಶಾಕಿಂಗ್ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

    ಪತಿ ಕೃತ್ಯದಿಂದ ಪತ್ನಿ ಪದ್ಮಾ ಕೋಮಾದಲ್ಲಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಆರೋಪಿ ಪತಿ ನಂದಾನನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಪದ್ಮಾ ಮತ್ತು ನಂದಾ ಮದುವೆಯಾಗಿದ್ದು, ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆರೋಪಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ಐರುವಾರಾಂ ದಲಿತ್ವಾಡಾದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಪದ್ಮಾ ಮಗಳು ಅನಾರೋಗ್ಯದಿಂದ ಬಳಲುತ್ತಿದ್ದಳು. ಹೀಗಾಗಿ ಪದ್ಮಾ ಆಕೆಯನ್ನು ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಪರೀಕ್ಷೆ ಮಾಡಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡುವಂತೆ ಸೂಚಿಸಿದ್ದಾರೆ. ಕೊನೆಗೆ ಪದ್ಮಾ ಮಗಳನ್ನು ಅಡ್ಮಿಟ್ ಮಾಡಿ ಇನ್ನೊಬ್ಬಳ ಮಗಳೊಂದಿಗೆ ಆಸ್ಪತ್ರೆಯಲ್ಲಿಯೇ ಉಳಿದುಕೊಂಡಿದ್ದರು.

    ನಂದಾ ಭಾನುವಾರ ರಾತ್ರಿ ಆಸ್ಪತ್ರೆಗೆ ಕಂಠಪೂರ್ತಿ ಕುಡಿದು ಬಂದಿದ್ದಾನೆ. ಈ ವೇಳೆ ನಂದಾ ಪತ್ನಿ ಪದ್ಮಾ ಬಳಿ ಬಂದು ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ. ಇದರಿಂದ ಆಘಾತಕ್ಕೊಳಗಾದ ಪದ್ಮಾ ಆತನಿಗೆ ಬೈದು ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ನಂದಾ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾನೆ. ನಂತರ ಸೆಕ್ಯೂರಿಟಿ ಬಂದು ಆಸ್ಪತ್ರೆಯಿಂದ ಆತನನ್ನು ಹೊರಗೆ ಕಳುಹಿಸಿದ್ದಾನೆ.

    ಕೊಲೆ ಪ್ರಯತ್ನ:
    ನಂದಾ ಮತ್ತೆ ರಾತ್ರಿ ಸುಮಾರು 11 ಗಂಟೆಗೆ ಆಸ್ಪತ್ರೆಗೆ ಬಂದು ಮಾತನಾಡಬೇಕು ಎಂದು ಹೇಳಿ ಮಕ್ಕಳೊಂದಿಗಿದ್ದ ಪತ್ನಿಯನ್ನು ಟೆರೆಸಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಮತ್ತೆ ತನ್ನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸಿದ್ದಾನೆ. ಆಗಲೂ ಪತ್ನಿ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಡ ನಂದಾ ಪದ್ಮಾ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಪದ್ಮಾ ಪ್ರಜ್ಞಾಹೀನರಾಗಿ ಬಿದ್ದಿದ್ದಾರೆ. ಆದರೂ ಕಾಮುಕ ಪತಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಸೀರೆಯಿಂದಲೇ ಕುತ್ತಿಗೆ ಹಿಸುಕಿ ಹೋಗಿದ್ದಾನೆ.

    ಇತ್ತ ಪದ್ಮಾರ ಎರಡನೇ ಮಗಳು ತಾಯಿಯನ್ನು ಹುಡುಗಿಕೊಂಡು ಟೆರೆಸ್ ಮೇಲೆ ಬಂದಿದ್ದಾಳೆ. ಆಗ ತಾಯಿ ರಕ್ತಸ್ರಾವದಿಂದ ಪ್ರಜ್ಞೆಹೀನರಾಗಿ ಬಿದ್ದಿರುವುದನ್ನು ನೋಡಿದ್ದಾಳೆ. ತಕ್ಷಣ ಸಂಬಂಧಿಕರನ್ನು ಕರೆದಿದ್ದು, ಅವರು ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಸದ್ಯಕ್ಕೆ ಆಕೆ ಕೋಮಾಗೆ ಹೋಗಿದ್ದಾರೆ. ಆದರೂ ಬದುಕುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದ ಚಿತ್ತೂರು ಪೊಲೀಸರು ಆಸ್ಪತ್ರೆಗೆ ಬಂದು ನಂದನನ್ನು ಬಂಧಿಸಿದ್ದಾರೆ. ಈ ವೇಳೆ ಸಂಬಂಧಿಕರು ಪೊಲೀಸರ ವಾಹನವನ್ನು ಅಡ್ಡಗಟ್ಟಿ ಆತನನ್ನು ತಮಗೆ ಒಪ್ಪಿಸುವಂತೆ ಗಲಾಟೆ ಮಾಡಿದ್ದಾರೆ. ಆಗ ಪೊಲೀಸರು ಪರಿಸ್ಥಿತಿಯನ್ನ ಶಾಂತಗೊಳಿಸಿ ಆತನನ್ನು ಕರೆದುಕೊಂಡಿದ್ದಾರೆ. ಸದ್ಯಕ್ಕೆ ಆತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಮನೆಗೆ ಬಂದು ಹೆಣವಾದ!

    ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಮನೆಗೆ ಬಂದು ಹೆಣವಾದ!

    ಹೈದರಾಬಾದ್: ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮಗನ ಜೊತೆ ಸೇರಿಕೊಂಡು ತಾಯಿಯೇ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

    ಕಾತಿ ಶಂಕರ್ ರೆಡ್ಡಿ ಕೊಲೆಯಾದ ವ್ಯಕ್ತಿ. ಈ ಘಟನೆ ಜಿಲ್ಲೆಯ ರಾಯಚೋಟಿ ಟೌನ್ ವ್ಯಾಪ್ತಿಯ ರಾಯುಡು ಕಾಲೋನಿಯಲ್ಲಿ ಶನಿವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಖದೀರುನ್ ಮತ್ತು ಈಕೆಯ ಮಗ ಅಮೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಮೃತ ಶಂಕರ್ ರೆಡ್ಡಿ ಹತ್ತು ವರ್ಷಗಳಿಂದ ರಾಯುಡು ಕಾಲೋನಿಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದನು. ಈತ ವ್ಯಾಪಾರಿಯಾಗಿ ಕೆಲಸ ಮಾಡಿಕೊಂಡಿದ್ದನು. ರಾಯಚೋಟಿಯ ಬಳಿ ಅಬ್ಬವರಾಮ್ ಗ್ರಾಮದಿಂದ ಬಂದ ಶಂಕರ್ ರೆಡ್ಡಿ ಚೆಕ್ ಪೋಸ್ಟ್ ಬಳಿ ತನ್ನ ಅಂಗಡಿಯನ್ನು ಇಟ್ಟುಕೊಂಡಿದ್ದನು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಶೇಖರ್ ತಿಳಿಸಿದ್ದಾರೆ.

    ಶಂಕರ್ ರೆಡ್ಡಿ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಖದೀರುನ್ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದನು. ಈಕೆಯ ಪತಿ ಬೇರೆ ದೇಶದಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮಗ ಅಮೀರ್ ಜೊತೆ ವಾಸಿಸುತ್ತಿದ್ದಳು. ಮಗ ಅಮೀರ್ ತಾಯಿ ಬೇರೆ ವ್ಯಕ್ತಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದನ್ನು ಒಪ್ಪಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಈ ಸಂಬಂಧವನ್ನು ಮುಂದುವರಿಸಬಾರದೆಂದು ಕೂಡ ತಾಯಿಗೆ ಎಚ್ಚರಿಸಿದ್ದನು.

    ಶನಿವಾರ ಶಂಕರ್ ರೆಡ್ಡಿ ಮನೆಯಲ್ಲಿ ಮಗ ಅಮೀರ್ ಇರುವುದನ್ನು ತಿಳಿಯದೆ ಖದೀರುನ್ ಮನೆಗೆ ಬಂದಿದ್ದಾನೆ. ಈ ವೇಳೆ ಶಂಕರ್ ರೆಡ್ಡಿಯನ್ನು ನೋಡಿದ ತಕ್ಷಣ ಅಮಿರ್ ಕೋಪಗೊಂಡು ಜಗಳ ಶುರುಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಕ್ರಿಕೆಟ್ ಬ್ಯಾಟಿನಿಂದ ಶಂಕರ್ ರೆಡ್ಡಿಗೆ ತಲೆಗೆ ಹೊಡೆದಿದ್ದಾನೆ. ಇತ್ತ ಖದೀರುನ್ ಸಹ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾಳೆ. ಪರಿಣಾಮ ಶಂಕರ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಭಾನುವಾರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿ, ತಾಯಿ ಮತ್ತು ಮಗನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಸದ್ಯಕ್ಕೆ ಈ ಕುರಿತು ರಾಯಚೋತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆಗೆ ಇನ್ನಿಬ್ಬರು ವ್ಯಕ್ತಿಗಳು ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗಾಗಿ ಶೋಧಕಾರ್ಯ ಮಾಡುತ್ತಿದ್ದೇವೆ ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

  • ಐಪಿಎಲ್ ಫೈನಲ್ ಚೆನ್ನೈನಿಂದ ಹೈದರಾಬಾದ್‍ಗೆ ಶಿಫ್ಟ್

    ಐಪಿಎಲ್ ಫೈನಲ್ ಚೆನ್ನೈನಿಂದ ಹೈದರಾಬಾದ್‍ಗೆ ಶಿಫ್ಟ್

    ಮುಂಬೈ: 2019ರ ಇಂಡಿಯನ್ ಪ್ರೀಮಿಯರ್ ಲೀಗ್‍ನ ಫೈನಲ್ ಪಂದ್ಯ ಚೆನ್ನೈ ಬದಲಾಗಿ ಹೈದರಾಬಾದ್‍ನಲ್ಲಿ ನಡೆಯಲಿದೆ. ಮೇ 12 ರಂದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

    ಕಳೆದ ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ತಂಡದ ತವರಿನಲ್ಲಿ ಟೂರ್ನಿಯ ಫೈನಲ್ ಪಂದ್ಯ ನಡೆಸಲಾಗುತ್ತದೆ. ಆದರೆ ಚಿದಂಬರಂ ಸ್ಟೇಡಿಯಂನಲ್ಲಿರುವ ಮೂರು ಕಡೆ ಪ್ರೇಕ್ಷಕರ ಸ್ಟ್ಯಾಂಡ್ ಗಳಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಲು ತಮಿಳುನಾಡು ಕ್ರಿಕೆಟ್ ಸಂಸ್ಥೆ ವಿಫಲವಾಗಿತ್ತು. ಇದರಿಂದಾಗಿ ಬಿಸಿಸಿಐ ಅನಿವಾರ್ಯವಾಗಿ ಈ ಬಾರಿ ಫೈನಲ್ ಪಂದ್ಯವನ್ನು ಹೈದರಾಬಾದಿಗೆ ಶಿಫ್ಟ್ ಮಾಡಿದೆ.

    ಟೂರ್ನಿಯ ಆರಂಭಿಕ ಪಂದ್ಯವನ್ನು ಚೆನ್ನೈ ತಂಡ ತವರಿನಲ್ಲಿ ಆಯೋಜನೆ ಮಾಡಿತ್ತು. ಆದರೆ ಫೈನಲ್ ಪಂದ್ಯ ನಡೆಸಲು ಬೇಕಾದ ಅನುಮತಿಯನ್ನು ಪಡೆದುಕೊಳ್ಳಲು ವಿಫಲವಾಗಿತ್ತು. ಇತ್ತ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 8 ರಂದು ಹಾಗೂ 2ನೇ ಕ್ವಾಲಿಫೈರ್ ಪಂದ್ಯ ಮೇ 10 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಚೆನ್ನೈ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನ ಪಡೆದರೆ ಮೊದಲ ಕ್ವಾಲಿಫೈಯರ್ ಚೆನ್ನೈನಲ್ಲಿ ನಡೆಯಲಿದೆ.

  • ಕುಡಿದು ಕ್ರೀಡಾಂಗಣದಲ್ಲೇ ಗಲಾಟೆ – ಆ್ಯಂಕರ್ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

    ಕುಡಿದು ಕ್ರೀಡಾಂಗಣದಲ್ಲೇ ಗಲಾಟೆ – ಆ್ಯಂಕರ್ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

    ಹೈದರಾಬಾದ್: ಐಪಿಎಲ್ ಭಾಗವಾಗಿ ಹೈದರಾಬಾದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಕುಡಿದು ಅಸಭ್ಯವಾಗಿ ವರ್ತಿಸಿ, ಪಂದ್ಯ ವಿಕ್ಷೀಸಲು ಅಡ್ಡಪಡಿಸಿದ ಕಾರಣ ಯುವತಿ ಸೇರಿದಂತೆ 6 ಮಂದಿಯ ಮೇಲೆ ದೂರು ದಾಖಲಿಸಲಾಗಿದೆ.

    ಹೈದರಾಬಾದ್ ಹಾಗೂ ಕೋಲ್ಕತ್ತಾ ನಡುವಿನ ಪಂದ್ಯ ವೇಳೆ ಘಟನೆ ನಡೆದಿದ್ದು, ಭರತ್ ಫೈನಾನ್ಸಿಯಲ್ ಇನ್ಕ್ಲೂಷನ್ ಲಿ. ಕಂಪೆನಿಯ ಉಪಾಧ್ಯಕ್ಷರಾದ ಸಂತೋಷ್ ಉಪಾಧ್ಯಾಯ್ ಎಂಬವರು ಉಪ್ಪಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ್ಯಂಕರ್ ಪ್ರಶಾಂತಿ ಸೇರಿದಂತೆ ಕೆಲ ಯುವಕರು ಪಂದ್ಯ ನೋಡಲು ಅಡ್ಡಿ ಪಡಿಸಿ ದಾಂಧಲೆ ನಡೆಸಿದ್ದರು ಎಂದು ದೂರಿದ್ದಾರೆ.

    ಪೊಲೀಸರು ಸದ್ಯ ಕೆ ಪೂರ್ಣಿಮ (27), ಕೆ ಪ್ರಿಯಾ (23), ಸಿ ಪ್ರಶಾಂತಿ (32), ವಿ ಶ್ರೀಕಾಂತ್ ರೆಡ್ಡಿ (48), ಎಲ್ ಸುರೇಶ್ (28), ಜಿ ವೇಣುಗೋಪಾಲ್ (38) ಎಂಬವರ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಕ್ರೀಡಾಂಗಣದ ಬಾಕ್ಸ್ ನಂ.22ರಲ್ಲಿ ಘಟನೆ ನಡೆದಿದ್ದು, ಐಪಿಸಿ ಸೆಕ್ಷನ್ 341, 188, 506 ಮತ್ತು 70(ಬಿ) ಅಡಿ ದೂರು ದಾಖಲಾಗಿದೆ.