Tag: IAM

  • ಸಾಯೋ ಮುನ್ನ ಕುತ್ತಿಗೆ ನೋವಿನ ಪ್ಯಾಡ್ ಧರಿಸಿದ್ದ ವಿಜಯ್ ಶಂಕರ್

    ಸಾಯೋ ಮುನ್ನ ಕುತ್ತಿಗೆ ನೋವಿನ ಪ್ಯಾಡ್ ಧರಿಸಿದ್ದ ವಿಜಯ್ ಶಂಕರ್

    ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಸಾವಿನ ಸುತ್ತ ಹಲವು ಅನುಮಾನಗಳು ಮೂಡುತ್ತಿವೆ. ಅಧಿಕಾರಿ ಆತ್ಮಹತ್ಯೆಗೂ ಮುನ್ನ ಕುತ್ತಿಗೆಗೆ ನೋವಿನ ಪ್ಯಾಡ್ ಧರಿಸಿದ್ದರು. ಗಟ್ಟಿಯಾಗಿದ್ದ ಪ್ಲಾಸ್ಟಿಕ್ ಪ್ಯಾಡ್ ಮೇಲೆ ಕುತ್ತಿಗೆ ಬಿಗಿದಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆಯೇ ಎಂದು ರಾತ್ರಿ ಪೊಲೀಸರು ಸುದೀರ್ಘವಾಗಿ ಮೃತದೇಹದ ಪಂಚನಾಮೆ ನಡೆಸಿದ್ದಾರೆ.

    ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಕಾರಣವೇನು?, ಐಎಂಎ ಹಗರಣದ ವಿಚಾರಣೆಗೆ ಹೆದರಿ ಸಾವಿಗೆ ಶರಣಾದ್ರಾ..? ಸಿಬಿಐ ತನಿಖೆಯಿಂದ ಬಂಧನದ ಭೀತಿ ಎದುರಾಗಿತ್ತಾ..?, ಬಂಧನ ಭೀತಿಯಲ್ಲಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾದ್ರಾ?, ಕೌಟುಂಬಿಕ ಕಲಹ, ವೈಯಕ್ತಿಕ ವಿಚಾರದಲ್ಲಿ ಖಿನ್ನತೆ ಒಳಗಾಗಿದ್ರಾ ಹೀಗೆ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

    ಮಧ್ಯರಾತ್ರಿ ವಿಕ್ಟೋರಿಯಾ ಶವಾಗಾರಕ್ಕೆ ಮೃತ ದೇಹ ರವಾನಿಸಲಾಗಿದ್ದು, ಇಂದು ಕೊರೊನಾ ಸ್ವಾಬ್ ಟೆಸ್ಟ್ ನಂತರ ಪೋಸ್ಟ್ ಮಾರ್ಟಮ್ ಮಾಡಲಾಗುತ್ತೆ. ಪೋಸ್ಟ್ ಮಾರ್ಟಮ್ ನಂತರ ಮೃತ ದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು.

    ಬೆಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿಜಯ್ ಶಂಕರ್, 20 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಮರಳಿದ್ದರು. ಬೆಳಗ್ಗೆ ಕಚೇರಿಯಲ್ಲಿ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೂ ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು. ಮಧ್ಯಾಹ್ನ ಕಚೇರಿಯಿಂದ ತೆರಳಿದ್ದ ವಿಜಯ್ ಶಂಕರ್ ಸಂಜೆ ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾಗಿದ್ದಾರೆ.

    ಐಎಂಎ ಕೇಸ್‍ನಲ್ಲಿ ಮನ್ಸೂರ್ ಖಾನ್‍ನಿಂದ 1.5 ಕೋಟಿ ರೂ.ಪಡೆದ ಆರೋಪ ವಿಜಯ್ ಶಂಕರ್ ಮೇಲಿತ್ತು. ಈ ಬಗ್ಗೆ 3 ದಿನದ ಹಿಂದೆ ವಿಚಾರಣೆಗೆ ಹಾಜರಾಗಲು ಸಿಬಿಐ ನೋಟಿಸ್ ಕೂಡ ಕೊಟ್ಟಿತ್ತು. ಒಟ್ಟನಲ್ಲಿ ಬಂಧನ ಭೀತಿಯಿಂದ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

  • ಹಿಂದೂ, ಮುಸ್ಲಿಮರ ಆಭರಣ ಕುತಂತ್ರ – IAM ಗೋಲ್ಡ್ ಕಂಪನಿ ಮಾಲೀಕನ ದೋಖಾ ಸ್ಟೋರಿ

    ಹಿಂದೂ, ಮುಸ್ಲಿಮರ ಆಭರಣ ಕುತಂತ್ರ – IAM ಗೋಲ್ಡ್ ಕಂಪನಿ ಮಾಲೀಕನ ದೋಖಾ ಸ್ಟೋರಿ

    ಬೆಂಗಳೂರು: ಐಎಎಂ ಗೋಲ್ಡ್ ಕಂಪನಿ ಮಾಲೀಕ ಮನ್ಸೂರ್ ಖಾನ್ ದೋಖಾ ಪ್ರಕರಣ ಹೊರ ಬರುತ್ತಿದ್ದಂತೆ ದಿನಕ್ಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

    ಅಸಲಿಗೆ ಐಎಂಎ ಕಂಪನಿಯ ಮನ್ಸೂರ್ ಟಾರ್ಗೆಟ್ ಮಾಡಿದ್ದು ತನ್ನ ಸಮುದಾಯವರನ್ನೇ ಅನ್ನೋದು ಕುತೂಹಲಕಾರಿಯಾದ ಸಂಗತಿಯಾಗಿದೆ. ಆಭರಣಗಳಲ್ಲಿಯೂ ಮುಸ್ಲಿಂ ಆಭರಣ ಅಂತ ಡಿವೈಡ್ ಮಾಡಿ ಮಾರಾಟ ಮಾಡುತ್ತಿದ್ದನು. ಈತನ ಜ್ಯುವೆಲ್ಲರಿ ಶಾಪ್‍ಗೆ ಮುಸ್ಲಿಂ ಮಹಿಳೆಯರು ಬಿಟ್ಟರೆ ಅನ್ಯ ಧರ್ಮದವರು ಹೋಗುತ್ತಿದ್ದಿದ್ದು ತೀರ ಕಡಿಮೆ. ಇದನ್ನೂ ಓದಿ:  ಬೆಂಗ್ಳೂರು ಅಲ್ಲ ರಾಜ್ಯವ್ಯಾಪಿ ಜನರಿಂದ ಐಎಂಎಗೆ ಹಣ ಹೂಡಿಕೆ

    ಮುಸ್ಲಿಂ ಮಹಿಳೆಯರನ್ನ ನಯವಾಗಿ ಮಾತನಾಡಿಸಲು ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದನು. ನಮ್ಮ ಕಂಪನಿಯಲ್ಲಿ ಇಂತಿಷ್ಟು ಅಂತ ಹಣ ಹೂಡಿಕೆ ಮಾಡಿದರೆ ಕಂಪನಿಯ ಮೆಂಬರ್ ಕಾರ್ಡ್ ನೀಡುತ್ತೇವೆ. ನಿಮಗೆ ಆಭರಣ ಖರೀದಿಯ ಮೇಲೆ ಶೇಕಡಾ 10 ರಷ್ಟು ಡಿಸ್ಕೌಂಟ್ ಜೊತೆಗೆ ಝೀರೋ ಫರ್ಸೆಂಟ್ ಮೇಕಿಂಗ್ ಚಾರ್ಜಸ್ ಮತ್ತು ನಿಮ್ಮ ಹೂಡಿಕೆಗೆ ಶೇಕಡಾ 7 ರಿಂದ 10 ರಷ್ಟು ಬಡ್ಡಿ ಕೊಡುವುದಾಗಿ ನಂಬಿಸಿದ್ದನು. ಈತನ ಸಿಬ್ಬಂದಿ ಮಾತಿಗೆ ಮರುಳಾದ ಬಡ ಮುಸ್ಲಿಂ ಮಹಿಳೆಯರು ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಈಗ ಬೀದಿಗೆ ಬಿದ್ದಿದ್ದಾರೆ. ಇದನ್ನೂ ಓದಿ: ಐಎಂಎ ದೋಖಾ- ಫೇಸ್‍ಬುಕ್‍ನಲ್ಲಿ ಮನ್ಸೂರ್ ಖಾನ್ ಫುಲ್ ಆ್ಯಕ್ಟೀವ್

    ಇತ್ತ ಮನ್ಸೂರ್ ಖಾನ್ ಮಾತಿನಲ್ಲೇ ಮನೆ ಕಟ್ಟಿ ಸಾವಿರಾರು ಮಂದಿಯನ್ನು ಯಾಮಾರಿಸಿದ್ದಾನೆ. ನಾನು ವಾಪಸ್ ಬರುತ್ತೀನಿ. ನನ್ನ ಮೇಲೆ ನಂಬಿಕೆ ಇರುವವರು ಯಾರೂ ತಲೆ ಕೆಡಿಸಿಕೊಳ್ಳಬೇಡಿ. ನಿಮ್ಮ ಹಣ ನಿಮಗೆ ವಾಪಸ್ಸು ಆಗೇ ಆಗುತ್ತದೆ. ಯಾರಿಗೂ ನಾನು ಮೋಸ ಮಾಡುವುದಿಲ್ಲ. ಅಷ್ಟು ನಂಬಿಕೆ ಇಲ್ಲದವರು ನಿಮ್ಮ ಹಣ ವಾಪಸ್ಸು ಪಡೆದುಕೊಳ್ಳಬಹುದು. ನಾನೊಂದು ದಿನಾಂಕವನ್ನು ಹೇಳುತ್ತೀನಿ ಅವತ್ತು ಹಣ ಪಡೆದುಕೊಳ್ಳಬಹುದು ಎಂದು ಡೈಲಾಗ್ ಮೇಲೆ ಡೈಲಾಗ್ ಹೊಡೆದು ಯಾಮಾರಿಸಿದ್ದನು.