Tag: IAS officer

  • ರಾಜ್ಯದಲ್ಲಿ ಸಿಎಂ V/S ಮಾಜಿ ಸಿಎಂ ಫೈಟ್- ಸಿದ್ದರಾಮಯ್ಯ ಕಡೆಗಣಿಸಿದ್ದ ಅಧಿಕಾರಿಗಳಿಗೆ ಜಾಕ್‍ಪಾಟ್

    ರಾಜ್ಯದಲ್ಲಿ ಸಿಎಂ V/S ಮಾಜಿ ಸಿಎಂ ಫೈಟ್- ಸಿದ್ದರಾಮಯ್ಯ ಕಡೆಗಣಿಸಿದ್ದ ಅಧಿಕಾರಿಗಳಿಗೆ ಜಾಕ್‍ಪಾಟ್

    ಬೆಂಗಳೂರು: ರಾಜ್ಯದಲ್ಲಿ ಈಗ ಮಾಜಿ ಸಿಎಂ ವರ್ಸಸ್ ಹಾಲಿ ಸಿಎಂಗಳ ಮುಸುಕಿನ ಗುದ್ದಾಟ ನಡೆಯುತ್ತಿದೆ. ಸಿದ್ದರಾಮಯ್ಯರ ಸಿಟ್ಟಿಗೆ ಬಲಿಯಾಗಿ ಎತ್ತಂಗಡಿಯಾಗಿದ್ದ ಅಬಕಾರಿ ಆಯುಕ್ತ ವಿ.ಯಶವಂತ್‍ಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

    ಸಿದ್ದರಾಮಯ್ಯ ಅಸಮಾಧಾನದ ನಡುವೆಯೂ ಯಶವಂತ್ ಅವರಿಗೆ ಮೈಸೂರು ಹಿಡಿತ ಕೈಗೆ ಕೊಡಲಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕ್ಷೀರಭಾಗ್ಯದ ಬಗ್ಗೆ ಮಾಹಿತಿ ಕೇಳಿದ್ದರು. ಚಿಕ್ಕಮಗಳೂರು ಜಿಲ್ಲೆಯ ಡಿಸಿಯಾಗಿದ್ದ ವಿ.ಯಶವಂತ್ ಅವರಿಗೆ ಕ್ಷೀರಭಾಗ್ಯದ ಮಾಹಿತಿ ಗೊತ್ತಿರಲಿಲ್ಲ. ಹೀಗಾಗಿ ಸಿಟ್ಟಿಗೆದ್ದ ಸಿದ್ದರಾಮಯ್ಯ, ಪ್ರಗತಿ ಪರಿಶೀಲನಾ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ ಬಳಿಕ ಚಿಕ್ಕಮಗಳೂರು ಜಿಲ್ಲೆಯಿಂದ ಎತ್ತಂಗಡಿ ಮಾಡಿ ಸರಿಯಾದ ಹುದ್ದೆಗಳಿಂದ ದೂರ ಇಟ್ಟಿದ್ದರು. ಈಗ ಅದೇ ಅಧಿಕಾರಿಗೆ ಆಯಾಕಟ್ಟಿನ ಸ್ಥಳಗಳಿಗೆ ಹುದ್ದೆ ಭಾಗ್ಯ ಸಿಕ್ಕಿದೆ.

    ಹೆಚ್‍ಡಿಕೆ ಸರ್ಕಾರ ಬಂದ ಬಳಿಕ ಅಬಕಾರಿ ಆಯುಕ್ತರಾಗಿ ವಿ.ಯಶವಂತ್‍ಗೆ ಹುದ್ದೆ ನೀಡಲಾಗಿದೆ. ಹೆಚ್‍ಡಿಕೆ ಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಕೊಟ್ರೆ ಬೇರೆ ಖಾತೆ ಕೊಡಿ ಇಲ್ದೆ ಹೋದ್ರೆ ರಾಜೀನಾಮೆ ತಗೊಳ್ಳಿ- ಸಿಎಂ ಎದುರು ಸಚಿವ ಅಳಲು

    ಕೊಟ್ರೆ ಬೇರೆ ಖಾತೆ ಕೊಡಿ ಇಲ್ದೆ ಹೋದ್ರೆ ರಾಜೀನಾಮೆ ತಗೊಳ್ಳಿ- ಸಿಎಂ ಎದುರು ಸಚಿವ ಅಳಲು

    ಬೆಂಗಳೂರು: ಐಎಎಸ್ ಅಧಿಕಾರಿಯ ವರ್ತನೆಗೆ ಬೇಸತ್ತ ಸಚಿವರೊಬ್ಬರು ಕೊಟ್ರೆ ಬೇರೆ ಖಾತೆ ಕೊಡಿ ಇಲ್ಲದೇ ಹೋದ್ರೆ ರಾಜೀನಾಮೆ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ.

    ಐಎಎಸ್ ಅಧಿಕಾರಿ ಆದಿತ್ಯ ಬಿಸ್ವಾಸ್ ಅವರ ಆಡಳಿತಕ್ಕೆ ಬೇಸತ್ತು ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರು ಇದೀಗ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಆದಿತ್ಯ ಬಿಸ್ವಾಸ್ ನನ್ನ ಮಾತಿಗೆ ಬೆಲೆ ಕೊಡಲ್ಲ. ನನ್ನ ವಿರುದ್ಧ ಕೆಲಸ ಮಾಡುತ್ತಾರೆ. ನನ್ನ ಇಲಾಖೆಯಲ್ಲಿ ಏನು ನಡೆಯುತ್ತಿದೆ ಅನ್ನೋದೇ ನನಗೆ ಗೊತ್ತಾಗುತ್ತಿಲ್ಲ. ನನ್ನ ಮಾತಿಗೆ ಬೆಲೆ ಇಲ್ಲದ ಮೇಲೆ ಈ ಖಾತೆ ಇದ್ದರೆಷ್ಟು ಬಿಟ್ಟರೆಷ್ಟು. ಹೀಗಾಗಿ ನನ್ನ ಖಾತೆ ಬದಲಾವಣೆ ಮಾಡಿ, ಇಲ್ಲವೇ ರಾಜೀನಾಮೆ ತೆಗೆದುಕೊಳ್ಳಿ ಅಂತ ಕಾರ್ಮಿಕ ಸಚಿವರು ಸಿಎಂ ಕುಮಾರಸ್ವಾಮಿ ಮುಂದೆ ತನ್ನ ಅಳಲು ತೋಡಿಕೊಂಡಿಕೊಂಡಿದ್ದಾರೆ ಎನ್ನಲಾಗಿದೆ.

    ನನ್ನ ಖಾತೆಯೇ ನನಗೆ ಮರೆತು ಹೋಗಿದೆ. ಎಲ್ಲಾ ಟೆಂಡರ್ ಗಳನ್ನು ಅವರೇ ಕರೆಯುತ್ತಾರೆ. ಗುತ್ತಿಗೆ ಆಧಾರದ ಮೇಲೆ ಅವರೆ ಉದ್ಯೋಗ ನೇಮಕಾತಿ ಮಾಡಿಕೊಳ್ಳುತ್ತಾರೆ. ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇಷ್ಟೆಲ್ಲ ಇದ್ದ ಮೇಲೆ ನನಗೆ ಸಚಿವ ಸ್ಥಾನ ಯಾಕೆ ಅಂತ ಪ್ರಶ್ನಿಸಿದ ಸಚಿವರು, ಕೇವಲ ಸಹಿ ಹಾಕಿಕೊಂಡು ಕೂರಲು ಸಾಧ್ಯವಿಲ್ಲ. ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಖಾತೆ ಬದಲಾವಣೆ ಮಾಡಿ ಅಂತ ವೆಂಕಟರಮಣಪ್ಪ ಬಿಗಿ ಪಟ್ಟು ಹಿಡಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐಎಎಸ್ ಅಧಿಕಾರಿಯ ನವಜಾತ ಶಿಶುವಿಗೆ ಚಿತ್ರಹಿಂಸೆ ನೀಡಿದ ಖಾಸಗಿ ಆಸ್ಪತ್ರೆ

    ಐಎಎಸ್ ಅಧಿಕಾರಿಯ ನವಜಾತ ಶಿಶುವಿಗೆ ಚಿತ್ರಹಿಂಸೆ ನೀಡಿದ ಖಾಸಗಿ ಆಸ್ಪತ್ರೆ

    ಬೆಂಗಳೂರು: ಕೆಲವು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಅವ್ಯವಸ್ಥೆಯ ಬಗ್ಗೆ ಕೇಳಿರುತ್ತೇವೆ. ಅವ್ಯವಸ್ಥೆಯನ್ನು ಕಂಡ ಸಾರ್ವಜನಿಕರು ಪ್ರಶ್ನಿಸಲಾಗದೇ ಸುಮ್ಮನಾಗುವುದು ಸಹಜ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿಯೊಬ್ಬರ ನವಜಾತ ಶಿಶುವಿಗೆ ಹಿಂಸೆ ನೀಡಿದ್ದಾರೆ. ಇದ್ರಿಂದ ಐಎಎಸ್ ಅಧಿಕಾರಿ ಪಲ್ಲವಿ ಆಕುರಾತಿ ಆಸ್ಪತ್ರೆ ವಿರುದ್ಧ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದ್ದಾರೆ.

    ಇಂದಿರಾ ನಗರದ ‘ಲೈಫ್ ಪ್ಲಸ್’ ಆಸ್ಪತ್ರೆಯ ವಿರುದ್ಧ ಪಲ್ಲವಿ ಆಕುರಾತಿ ದೂರು ನೀಡಿದ್ದಾರೆ. ಜುಲೈ 18 ರಂದು ಪಲ್ಲವಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ಆಸ್ಪತ್ರೆಯ ವೈದ್ಯರು ಮತ್ತು ನರ್ಸ್ ಗಳಿಂದ ಚಿತ್ರಹಿಂಸೆ ನೀಡಲಾಗಿದೆ. ಇ-ಮೇಲ್ ಮೂಲಕ ಆಸ್ಪತ್ರೆಯ ನರಕಯಾತನೆಯನ್ನು ಬಿಚ್ಚಿಟ್ಟಿದ್ದಾರೆ.

    ಇಂದಿರಾ ನಗರದ “ಲೈಫ್ ಪ್ಲಸ್” ಆಸ್ಪತ್ರೆ ವಿರುದ್ಧ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಅಧಿಕಾರಿಗೆ ಐಎಎಸ್ ಅಧಿಕಾರಿ ಪಲ್ಲವಿ ಆಕುರಾತಿ ನೀಡಿರುವ ದೂರು ಹಾಗೂ ತಾವು ಅನುಭವಿಸಿದ ನರಕಯಾತೆಯ ಇ-ಮೇಲ್‍ನ ಇಂಚಿಂಚು ಮಾಹಿತಿ ಹೀಗಿದೆ.
    * ಡಾಕ್ಟರ್ ಸಲಹೆ ಮೇರೆಗೆ ಸಿಜೇರಿಯನ್ ಮಾಡಿಸಿಕೊಂಡಿದ್ದೆ. ಆದರೆ, ಸಿಜೇರಿಯನ್‍ಗೆ ಸಲಹೆ ನೀಡುವ ಮುನ್ನ ಆಸ್ಪತ್ರೆ ವೈದ್ಯರು ಸ್ಕ್ಯಾನಿಂಗ್ ಮಾಡಿರಲಿಲ್ಲ.
    * ಕರ್ತವ್ಯದಲ್ಲಿದ್ದ ನರ್ಸ್ ಗಳಿಗೆ ಸರಿಯಾಗಿ ತರಬೇತಿ ಇರಲಿಲ್ಲ.
    * ನರ್ಸ್ ಗಳು ಅನಗತ್ಯವಾಗಿ ರೂಂಗೆ ಪ್ರತಿ 10 ನಿಮಿಷಕ್ಕೆ ಬಂದು ತೊಂದರೆ ಕೊಡುತ್ತಿದ್ದರು.
    * ನವಜಾತ ಶಿಶುವಿನ ಪೋಷಣೆಯಲ್ಲಿ ಅಜಾಗರೂಕತೆ, ಅಸಡ್ಡೆಯಿಂದ ನಡೆದುಕೊಂಡಿದ್ದಾರೆ.
    * ನವಜಾತ ಶಿಶುವಿನ ಮೇಲೆ ಫೋಟೋ ಥೆರಪಿ ಮಾಡಲು ವೈದ್ಯರು ಬಲವಂತ ಪಡಿಸುತ್ತಿದ್ದರು.
    * ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎರಡು ದಿನಗಳ ನಂತರವು ಡಿಸ್ಚಾರ್ಜ್ ವರದಿ ನೀಡಿರಲಿಲ್ಲ.
    * ನಂತರ ನೀಡಿದ ವರದಿಯಲ್ಲಿ ತಪ್ಪುಗಳು ಇದ್ದವು.
    * ಆಸ್ಪತ್ರೆಯಲ್ಲಿ ಸಿಸಿಟಿವಿಯೂ ಇಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಕಲಬುರಗಿ: ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ, ಕರ್ನಾಟಕದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಾಗಿರುವ ಮಲ್ಲಿಕಾರ್ಜುನ ಖರ್ಗೆಯವರನ್ನು ಹೇಗಾದರೂ ಸೋಲಸಲೇಬೇಕೆಂದು ಬಿಜೆಪಿ ಮಾಸ್ಟರ್ ಮೈಂಡ್ ಪ್ಲಾನ್ ಸಿದ್ದಪಡಿಸಿದೆ. ಹೀಗಾಗಿ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಎಲ್ಲಾ ರೀತಿಯ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿದು ಬಂದಿದೆ.

    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ. ಅಲ್ಲದೇ ರತ್ನಪ್ರಭಾರವರು ಸಹ ಈಗಾಗಲೇ ಹಲವು ಬಾರಿ ಕಲಬುರಗಿ ಭೇಟಿ ನೀಡಿದ್ದಾರೆ. ಅಲ್ಲದೇ ಮತ್ತೆ ಸೆಪ್ಟಂಬರ್ ನಲ್ಲಿ ಭೇಟಿ ನೀಡುತ್ತಿದ್ದಾರೆ.

    ರತ್ನಪ್ರಭಾರ ಪದೇ ಪದೇ ಭೇಟಿಯಿಂದಾಗಿ, ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸುತ್ತಾರೆನ್ನು ಚರ್ಚೆ ಇದೀಗ ಬಿಜೆಪಿ ವಲಯದಲ್ಲಿ ಕೇಳಿ ಬಂದಿದ್ದು, ಈ ಮೂಲಕ ಮೂಲಕ ಖರ್ಗೆ ಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಸಜ್ಜಾಗಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿವೃತ್ತ ಸರ್ಕಾರಿ ಉದ್ಯೋಗಿಯನ್ನ ಬಂಧಿಸಿದ್ದ ಐಎಎಸ್ ಅಧಿಕಾರಿಗೆ ಜೈಲು!

    ನಿವೃತ್ತ ಸರ್ಕಾರಿ ಉದ್ಯೋಗಿಯನ್ನ ಬಂಧಿಸಿದ್ದ ಐಎಎಸ್ ಅಧಿಕಾರಿಗೆ ಜೈಲು!

    ಹೈದರಾಬಾದ್: ಕಾನೂನು ಬಾಹಿರವಾಗಿ ನಿವೃತ್ತ ಸರ್ಕಾರಿ ಉದ್ಯೋಗಿಯೊಬ್ಬರನ್ನು ಬಂಧಿಸಿದ್ದ ಐಎಎಸ್ ಅಧಿಕಾರಿಗೆ ಹೈದರಾಬಾದ್ ಹೈಕೋರ್ಟ್ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

    ಶುಕ್ರವಾರ ಪ್ರಕರಣದ ಸಂಬಂಧ ನ್ಯಾಯಾಧೀಶ ಪಿ.ನವೀನ್ ರಾವ್ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈ ವೇಳೆ ಆರೋಪ ಸಾಬೀತಾದ ಬೆನ್ನಲ್ಲೆ ಕೋರ್ಟ್ ಐಎಎಸ್ ಅಧಿಕಾರಿ ಕೆ.ಶಿವಕುಮಾರ್ ನಾಯ್ಡು ಅವರಿಗೆ 1 ತಿಂಗಳು ಜೈಲು ಶಿಕ್ಷೆ ಜೊತೆಗೆ 2 ಸಾವಿರ ರೂ. ದಂಡ ವಿಧಿಸಿದೆ. ಕಾನೂನು ಬಾಹಿರವಾಗಿ ಬಂಧನಕ್ಕೊಳಗಾಗಿದ್ದ ನಿವೃತ್ತ ಸರ್ಕಾರಿ ಉದ್ಯೋಗಿಗೆ ತೆಲಂಗಾಣ ಸರ್ಕಾರವು 50 ಸಾವಿರ ರೂ. ಪರಿಹಾರ ನೀಡುವಂತೆ ಕೋರ್ಟ್ ಆದೇಶ ನೀಡಿದೆ.

    ಏನಿದು ಪ್ರಕರಣ?
    ನಿವೃತ್ತ ಸರ್ಕಾರಿ ಉದ್ಯೋಗಿ ಎ.ಬುಚ್ಚಯ್ಯ ಎಂಬವರು ಮೆಹಬೂಬ್ ನಗರದ ಕಲ್ಯಾಣ ಮಂಟಪ ನಿರ್ಮಾಣ ಮಾಡುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯರು ಅಕ್ರಮವಾಗಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಜಂಟಿ ಆಯುಕ್ತ ಕೆ.ಶಿವಕುಮಾರ್ ನಾಯ್ಡು ಅವರಿಗೆ ದೂರು ನೀಡಿದ್ದರು.

    2017 ಜುಲೈ 1ರಂದು ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಯನ್ನು ಶಿವಕುಮಾರ್ ತಡೆಹಿಡಿದಿದ್ದರು. ಅಲ್ಲದೆ ತಮಗಿರುವ ಅಧಿಕಾರವನ್ನು ಬಳಸಿಕೊಂಡು ಬುಚ್ಚಯ್ಯ ಅವರನ್ನು ಬಂಧಿಸಿ, ಎರಡು ತಿಂಗಳು 29 ದಿನ ಜೈಲಿನಲ್ಲಿ ಇರಿಸಿದ್ದರು.

    ಜಾಮೀನು ಪಡೆದು ಜೈಲಿನಿಂದ ಹೊರಬಂದ ಬುಚ್ಚಯ್ಯ ಐಎಎಸ್ ಅಧಿಕಾರಿ ಶಿವಕುಮಾರ್ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ನ್ಯಾಯಾಧೀಶ ನವೀನ್ ಕುಮಾರ್ ಪ್ರಕರಣ ಅಧ್ಯಯನ ಮಾಡಿ ಶಿವಕುಮಾರ್ ಅವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    – ಸಿದ್ದರಾಮಯ್ಯಗೆ ಬಿಸಿ ಮುಟ್ಟಿಸಿದ್ರಾ ಎಚ್.ಡಿ.ಕೆ

    ಬೆಂಗಳೂರು: ಅತ್ತ ಧರ್ಮಸ್ಥಳದ ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿ, ಉಳಿವಿನ ಬಗ್ಗೆ ಮಾತನಾಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿ ಎತ್ತಂಗಡಿ ಭಾಗ್ಯ ಕರುಣಿಸಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ದಯಾನಂದ್ ಅವರ ಸ್ಥಾನಕ್ಕೆ ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಆದರೆ ದಯಾನಂದ್ ಅವರಿಗೆ ಮಾತ್ರ ರಾಜ್ಯ ಸರ್ಕಾರ ಯಾವುದೇ ಹುದ್ದೆಯನ್ನೇ ತೋರಿಸಿಲ್ಲ. ಸಿದ್ದರಾಮಯ್ಯ ಅವರ ಆಪ್ತ ವಲಯದ ಮತ್ತೊಬ್ಬ ಅಧಿಕಾರಿ ಶಂಕರಪ್ಪ ಅವರನ್ನು ಸಹ ವರ್ಗಾವಣೆ ಮಾಡಲಾಗಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಶಂಕರಪ್ಪ ಅವರನ್ನು ಸಿಎಡಿಎ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಇತರೇ 8 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಅಂತಿಮ ಪಟ್ಟಿ ಇಂತಿದೆ.

    ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
    ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
    ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ
    ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ
    ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ
    ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ
    ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ
    ನಳಿನಿ ಅತುಲ್ – ಜಂಟಿ ವ್ಯವಸ್ಥಾಪಕ ನಿರ್ದೇಶಕರು, ಕೆಯುಐಡಿಎಫ್‍ಸಿ

    ಈ ವರ್ಗಾವಣೆ ಪಟ್ಟಿ ಹೊರಬಿದ್ದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೇನೆಲ್ಲಾ ಬೆಳವಣಿಗೆಗಳಾಗುತ್ತೋ ಕಾದುನೋಡಬೇಕಿದೆ.

  • ಅಡ್ಡಕತ್ತರಿಯಲ್ಲಿ ಐಎಎಸ್ ಅಧಿಕಾರಿ: ಸಿಎಂ-ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಅತಂತ್ರರಾದ ಡಿ.ರಂದೀಪ್

    ಅಡ್ಡಕತ್ತರಿಯಲ್ಲಿ ಐಎಎಸ್ ಅಧಿಕಾರಿ: ಸಿಎಂ-ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಅತಂತ್ರರಾದ ಡಿ.ರಂದೀಪ್

    ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರರಾಗಿದ್ದಾರೆ. ಮೈಸೂರಿನಲ್ಲೂ ಇರಲಾರದೆ ಹಾಸನಕ್ಕೂ ತೆರಳಲಾಗದೆ ನಿರ್ಗಮಿತ ಡಿಸಿ ರಂದೀಪ್ ಕಂಗಾಲಾಗಿದ್ದಾರೆ.

    ವಾರದ ಹಿಂದೆ ಐಎಎಸ್ ಅಧಿಕಾರಿಗಳ ವರ್ಗವಣೆಯಲ್ಲಿ ಹಾಸನ ಡಿಸಿಯಾಗಿ ಡಿ.ರಂದೀಪ್ ವರ್ಗಾವಣೆಯಾಗಿದ್ದರು. ಹಾಸನದ ಡಿಸಿ ರೋಹಿಣಿ ಸಿಂಧೂರಿಯವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದ್ರೆ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ರೋಹಿಣಿ ಸಿಂಧೂರಿ ತಡೆಯಾಜ್ಞೆ ತಂದಿದ್ದು, ಮಾರ್ಚ್ 21ರವರೆಗು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ತಡೆಯಾಜ್ಞೆ ಆದೇಶಿಸಿದೆ.

    ಆದ್ರೆ ಅತ್ತ ಮೈಸೂರಿಗೆ ನೂತನ ಜಿಲ್ಲಾಧಿಕಾರಿ ಶಿವಕುಮಾರ್ ಆಗಮಿಸಿದ್ದು, ರಂದೀಪ್‍ಗೆ ಮೈಸೂರೂ ಇಲ್ಲದೆ ಹಾಸನವೂ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಐಎಎಸ್ ಅಧಿಕಾರಿಗೇ ತಮ್ಮ ಕೆಲಸದ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ತಿಲ್ಲ. ಹೀಗಾಗಿ ಡಿಪಿಆರ್‍ಗೆ ನಿರ್ಗಮಿತ ಡಿಸಿ ಡಿ.ರಂದೀಪ್ 2 ಪತ್ರವನ್ನು ಬರೆದಿದ್ದು, ಐಎಎಸ್ ಅಧಿಕಾರಿಯ ಪತ್ರಕ್ಕೂ ಹಿರಿಯ ಅಧಿಕಾರಿಗಳು ಸ್ಪಂದಿಸಿಲ್ಲ.

    ಈ ಹಿನ್ನೆಲೆಯಲ್ಲಿ ಅತ್ತ ಇತ್ತ ಎಲ್ಲಿಯೂ ಇಲ್ಲದೆ ಡಿ.ರಂದೀಪ್ ಖಾಲಿ ಕುಳಿತಿದ್ದಾರೆ. ಸದ್ಯ ಮೈಸೂರಿನ ತಮ್ಮ ಅಧಿಕೃತ ನಿವಾಸದಲ್ಲಿ ನೆಚ್ಚಿನ ನಾಯಿಗಳೊಂದಿಗೆ ಕಾಲ ಕಳೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕೃತ ನಿವಾಸ ಬಿಟ್ಟುಕೊಡಬೇಕಿದೆ.

    ಮಾರ್ಚ್ 21ರವರೆಗು ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರವಾಗಿಯೇ ಇರುವ ಪರಿಸ್ಥಿತಿ ಎದುರಾಗಿದೆ.

  • ಐಎಎಸ್ ಅಧಿಕಾರಿಯಿಂದ 7 ಕೋಟಿ ರೂ. ಸುಲಿಗೆ ಮಾಡಲೆತ್ನಿಸಿದ ದಂಪತಿ ಬಂಧನ

    ಐಎಎಸ್ ಅಧಿಕಾರಿಯಿಂದ 7 ಕೋಟಿ ರೂ. ಸುಲಿಗೆ ಮಾಡಲೆತ್ನಿಸಿದ ದಂಪತಿ ಬಂಧನ

    ಥಾಣೆ: ಮಹಾರಾಷ್ಟ್ರದ ಹಿರಿಯ ಐಎಎಸ್ ಅಧಿಕಾರಿಯೊಬ್ಬರಿಂದ 7 ಕೋಟಿ ರೂ. ಸುಲಿಗೆ ಮಾಡಲು ಯತ್ನಿಸಿದ ಖಾಸಗಿ ಡಿಟೆಕ್ಟಿವ್ ಹಾಗೂ ಆತನ ಪತ್ನಿಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ.

    ಅಮಾನತುಗೊಂಡಿರೋ ಅಧಿಕಾರಿ ರಾಧೆಶ್ಯಾಮ್ ಮೊಪಾಲ್ವರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಹಿಂತೆಗೆದುಕೊಳ್ಳಲು ಆರೋಪಿ ಸತೀಶ್ ಮಂಗ್ಲೆ ಬರೋಬ್ಬರಿ 7 ಕೋಟಿ ರೂ. ಗೆ ಡಿಮ್ಯಾಂಡ್ ಮಾಡಿದ್ದ. ಹಣ ಕೊಡದಿದ್ದರೆ ಫೋನ್ ಸಂಭಾಷಣೆಯ ಆಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದ ಎಂದು ವರದಿಯಾಗಿದೆ.

    ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಧೇಶ್ಯಾಮ್ ಅವರನ್ನು ಆಗಸ್ಟ್ ನಲ್ಲಿ ಸಿಎಂ ದೇವೇಂದ್ರ ಫಡ್ನಾವಿಸ್ ಹುದ್ದೆಯಿಂದ ತೆಗೆದುಹಾಕಿದ್ದರು. ಸತೀಶ್ ಲೀಕ್ ಮಾಡಿದ್ದ ಆಡಿಯೋದ ಫಲವಾಗಿ ರಾಧೇಶ್ಯಾಮ್ ಅಮಾನತುಗೊಂಡಿದ್ದರು. ಆಡಿಯೋದಲ್ಲಿ ಅಧಿಕಾರಿ ಡೀಲ್‍ವೊಂದರ ಬಗ್ಗೆ ಮಾತನಾಡುತ್ತಿದ್ದರು ಎಂದು ವರದಿಯಾಗಿದೆ.

    ಶುಕ್ರವಾರದಂದು ಖಾಸಗಿ ಡಿಟೆಕ್ಟೀವ್ ಸತೀಶ್ ಹಾಗೂ ಆತನ ಪತ್ನಿ ಶ್ರದ್ಧಾಳನ್ನು ದೊಂಬಿಲ್ವಿ ಮನೆಯಿಂದ ಎಇಸಿ(ಆ್ಯಂಟಿ ಎಕ್ಸ್ಟಾರ್ಷನ್ ಸೆಲ್) ಅಧಿಕಾರಿಗಳು ಬಂಧಿಸಿದ್ದಾರೆ. ಸತೀಶ್ ಮನೆಯಿಂದ ಪೊಲೀಸರು 2 ಲ್ಯಾಪ್‍ಟಾಪ್, 5 ಮೊಬೈಲ್‍ಗಳು, 4 ಪೆನ್‍ಡ್ರೈವ್, 15 ಸಿಡಿ ಹಾಗೂ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಥಾಣೆ ಪೊಲೀಸ್ ವರಿಷ್ಠಾಧಿಕಾರಿ ಪರಂ ಬೀರ್ ಹೇಳಿದ್ದಾರೆ.

    ರಾಧೇಶ್ಯಾಮ್ ಅವರು ಸತೀಶ್ ನಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಪೊಲೀಸರ ಮೊರೆ ಹೋಗಿದ್ದರು. ಸತೀಶ್ ತನ್ನ ಪತ್ನಿ ಹಾಗೂ ಗೆಳೆಯ ಅನಿಲ್ ವೇದ್ ಮೆಹ್ತಾ ಜೊತೆ ಅಧಿಕಾರಿಯನ್ನ ಸಂಪರ್ಕಿಸಿ ಅಕ್ಟೋಬರ್ 23ರಂದು ಹಣದ ಸಮೇತ ನಾಸಿಕ್ ಹೆದ್ದಾರಿಯ ಕರೇಗಾಂವ್ ಟೋಲ್ ಪ್ಲಾಜಾ ಬಳಿ ಬರುವಂತೆ ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ನಿಮ್ಮ ಕುಟುಂಬಸ್ಥರು ಸುರಕ್ಷಿತವಾಗಿರಬೇಕಾದ್ರೆ 7 ಕೋಟಿ ರೂ. ಹಣ ಕೊಡ್ಬೇಕು ಅಂತ ದಂಪತಿ ಅಧಿಕಾರಿಯನ್ನ ಬೆದರಿಸಿದ್ದರು. ಆದ್ರೆ ಐಎಎಸ್ ಅಧಿಕಾರಿ ಆ ಫೋನ್ ಸಂಭಾಷಣೆಯನ್ನ ಥಾಣೆ ಪೊಲೀಸರಿಗೆ ಒದಗಿಸಿದ್ದರು. ನಂತರ ಪೊಲೀಸರು ಸತೀಶ್ ಮತ್ತು ಆತನ ಪತ್ನಿಯನ್ನ ಬಂಧಿಸಲು ಪ್ಲ್ಯಾನ್ ರೂಪಿಸಿದ್ದರು. ಪೊಲೀಸ್ ಪೇದೆಯೊಬ್ಬರು ಬೇರೆ ವೇಷದಲ್ಲಿ 1 ಕೋಟಿ ರೂ. ತೆಗೆದುಕೊಂಡು ಸತೀಶ್ ಮನೆಗೆ ಹೋಗಿ ರೆಡ್ ಹ್ಯಾಂಡ್ ಆಗಿ ಆರೋಪಿಯನ್ನ ಹಿಡಿದಿದ್ದಾರೆ.

    ಸತೀಶ್ ಈ ಹಿಂದೆ ರಾಧೇಶ್ಯಾಮ್ ಅವರ ಫೋನ್ ಸಂಭಾಷಣೆಯನ್ನ ಮಾಧ್ಯಮಗಳಿಗೆ ಲೀಕ್ ಮಾಡಿ, ರಾಜ್ಯದ ಆಡಳಿತದಲ್ಲಿ ಲಂಚ ಕೊಡದಿದ್ದರೆ ಕೆಲಸ ಆಗಲ್ಲ ಎಂದು ಆರೋಪ ಮಾಡಿದ್ದ. ಮೊದಲಿಗೆ ಫೋನ್ ಸಂಭಾಷಣೆಯ ಆಡಿಯೋವನ್ನ ಹಿಂದಿರುಗಿಸಲು 10 ಕೋಟಿಗೆ ಡಿಮ್ಯಾಂಡ್ ಮಾಡಿ, ರಾಧಶ್ಯಾಮ್ ಹಣ ಕೊಡಲು ನಿರಾಕರಿಸಿದ ನಂತರ 7 ಕೋಟಿಗೆ ಬೇಡಿಕೆ ಇಟ್ಟಿದ್ದ ಎಂದು ವರದಿಯಾಗಿದೆ.

     

  • ತಿವಾರಿ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ, ನನಗೂ ಜೀವ ಬೆದರಿಕೆ ಇತ್ತು: ನಿವೃತ್ತ ಅಧಿಕಾರಿ ವಿಜಯಕುಮಾರ್

    ತಿವಾರಿ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ, ನನಗೂ ಜೀವ ಬೆದರಿಕೆ ಇತ್ತು: ನಿವೃತ್ತ ಅಧಿಕಾರಿ ವಿಜಯಕುಮಾರ್

    ಬೆಂಗಳೂರು: ಐಎಎಸ್ ಅಧಿಕಾರಿ ಅನುರಾಗ್ ತಿವಾರಿಯಂತೆ ನನ್ನ ಅಧಿಕಾರಿವಾಧಿಯಲ್ಲಿ ಕೂಡ ನನ್ನನ್ನು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ರು ಅಂತಾ ನಿವೃತ್ತ ಐಎಎಸ್ ಅಧಿಕಾರಿ ಎಮ್‍ಎನ್ ವಿಜಯಕುಮಾರ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಿವಾರಿ ಅನುಮಾನಾಸ್ಪದ ಸಾವಿನ ಪ್ರಕರಣದ ಸಿಬಿಐನಿಂದ ತನಿಖೆಯಾದ್ರೂ ಸತ್ಯ ಹೊರಬರುವ ಲಕ್ಷಣಗಳು ಇಲ್ಲ. ಯಾಕಂದ್ರೆ ಪ್ರಕರಣ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ. ಅಲ್ಲದೇ ಅತ್ಯಂತ ಕಳಪೆ ಮಟ್ಟದ ಅಧಿಕಾರಿಗಳು ಅನುರಾಗ್ ತಿವಾರಿಯ ಸಾವಿನ ಸಂಬಂಧ ತನಿಖೆ ನಡೆಸುತ್ತಿದ್ದಾರೆ ಅಂತಾ ಆರೋಪಿಸಿದರು.

    ಅನುರಾಗ್ ತಿವಾರಿಯವರ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ. ರಾಜ್ಯದಲ್ಲಿ ಐಎಎಸ್ ಮಾಫಿಯಾ ಹೆಮ್ಮರವಾಗಿ ಬೆಳೆದಿದೆ ಎಂದ ವಿಜಯ್ ಕುಮಾರ್, ಅನುರಾಗ್ ತಿವಾರಿಯವರ ಕೇಸನ್ನ ಸಿಬಿಐಗೆ ಒಪ್ಪಿಸ್ಸಿದ್ರೂ ನ್ಯಾಯ ಸಿಗುವುದು ಅನುಮಾನ ಅಂತಾ ಅನುಮಾನ ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಅನುರಾಗ್ ತಿವಾರಿಯ ಕಾಲೇಜು ಸ್ನೇಹಿತರು, ಈ ಸಿಸ್ಟಮ್ ನಲ್ಲಿ ನಮಗೆ ನಂಬಿಕೆಯಿಲ್ಲ, ಸಾವಿನ ತನಿಖೆ ನಿಷ್ಪಕ್ಷಪಾತವಾಗಿ ನಡೆಸಿದ್ರೆ ಮಾತ್ರ ಅನುರಾಗ್ ತಿವಾರಿಯವರ ಸಾವಿನ ಸತ್ಯ ಹೊರಬರುತ್ತೆ ಅಂತಾ ಹೇಳಿದ್ರು.

    ಅನುರಾಗ್ ತಿವಾರಿಯ ಸ್ನೇಹಿತರಾದ ಮದನ್ ಮೋಹನ್ ಮಾಳವೀರಾ ಕಾಲೇಜಿನ ರಶ್ಮಿ, ಆಶಿಶ್, ಪವನ್ ಸುದ್ದಿಗೋಷ್ಠಿ ಯಲ್ಲಿ ಭಾಗಿಯಾಗಿದ್ದು, ತಮ್ಮ ಗೆಳೆಯನ ಸಾವಿನ ತನಿಖೆಯನ್ನು ಸರಿಯಾಗಿ ಮಾಡಿ ಅಂತಾ ಸರ್ಕಾರಕ್ಕೆ ಒತ್ತಾಯಿಸಿದರು.

  • ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

    ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

    ಬೆಂಗಳೂರು: ಉತ್ತರಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ಕರ್ನಾಟಕದ ಐಎಎಸ್ ಅಧಿಕಾರು ಅನುರಾಗ್ ತಿವಾರಿ ಅವರ ಕೊನೆಯ ಕ್ಷಣದ ವಿಡಿಯೋವೊಂದು ಲಭ್ಯವಾಗಿದೆ.

    ಉತ್ತರಪ್ರದೇಶ ರಾಜಧಾನಿ ಲಕ್ನೋದ ಹಜರತ್‍ಗಂಜ್‍ನಲ್ಲಿರುವ ಆರ್ಯನ್ ಹೋಟೆಲ್‍ಗೆ ಎಂಟ್ರಿ ಕೊಡ್ತಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ದೃಶ್ಯದಲ್ಲಿ ಗ್ಲಾಸ್ ಡೋರ್‍ನ್ನು ತಳ್ಳಿಕೊಂಡು ತಿವಾರಿ ಎಂಟ್ರಿ ಕೊಡ್ತಿದ್ದಾರೆ. ಒಳಗೆ ಬಂದ ಬಳಿಕ ತಿವಾರಿ ಅಲ್ಲೇ ಇದ್ದ ಸ್ಟ್ಯಾಂಡ್‍ವೊಂದರಲ್ಲೇ ಏನನ್ನೋ ತೆಗೆದು ಓದುತ್ತಿದ್ದಾರೆ. ಹೋಟೆಲ್‍ಗೆ ತಿವಾರಿ ಎಂಟ್ರಿ ಕೊಡೋ ವೇಳೆ ಅವರ ಬ್ಯಾಚ್‍ಮೇಟ್ ಆಗಿದ್ದ ಪಿಎನ್ ಸಿಂಗ್ ಕೂಡಾ ಇದ್ದರು ಎನ್ನುವುದು ವಿಶೇಷ.

    ಇದನ್ನೂ ಓದಿ: Exclusive: ಅನುರಾಗ್ ತಿವಾರಿಗೆ ಇತ್ತು ಜೀವ‌ ಭಯ- 4-5 ತಿಂಗಳಿಂದ ಕೊಟ್ಟೇ ಇರಲಿಲ್ಲ ಸಂಬಳ 

    ಮೇ 17ರಂದು ತಿವಾರಿ ಮೃತದೇಹ ಹೋಟೆಲ್‍ನ ಬಳಿಯೇ ಸಿಕ್ಕಿತ್ತು. ಮೂರು ದಿನಗಳಿಂದ ಇದೇ ಹೋಟೆಲ್‍ನಲ್ಲಿ ತಿವಾರಿ ತಂಗಿದ್ದರೂ ರೂಂ ಬುಕ್ ಆಗಿದ್ದು ಮಾತ್ರ ಅವರ ಸ್ನೇಹಿತ ಪಿಎನ್ ಸಿಂಗ್ ಹೆಸರಲ್ಲಿ ಅನ್ನೋದು ವಿಚಿತ್ರ. ತಿವಾರಿ ಮರಣೋತ್ತರ ಪರೀಕ್ಷೆ ಕೂಡಾ ಅಪೂರ್ಣವಾಗಿದ್ದು ಸಾವಿಗೆ ಖಚಿತ ಕಾರಣ ಸಿಕ್ಕಿಲ್ಲ.

    ಇದನ್ನೂ ಓದಿ: ಅನುರಾಗ್ ತಿವಾರಿ ನಿಗೂಢ ಸಾವು: ಹರ್ಷ ಗುಪ್ತಾಗೆ ನೋಟಿಸ್ ಜಾರಿ? 

    ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕರ್ನಾಟಕ ಐಎಎಸ್ ಅಧಿಕಾರಿ  ಜನ್ಮದಿನದಂದೇ ಶವವಾಗಿ ಪತ್ತೆ 

    https://www.youtube.com/watch?v=tzqcBK2kx8k