Tag: ICC World Cup

  • Asia Cup 2025 | ಏಷ್ಯಾ ಕಪ್‌ಗೆ 30 ವರ್ಷಗಳ ಇತಿಹಾಸ

    Asia Cup 2025 | ಏಷ್ಯಾ ಕಪ್‌ಗೆ 30 ವರ್ಷಗಳ ಇತಿಹಾಸ

    ಏಷ್ಯಾ ಕಪ್‌ ಟಿ20 ಕ್ರಿಕೆಟ್‌ (Asia Cup T20 Cricket) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು ಫೈನಲ್‌ ಪಂದ್ಯ ನಡೆಯಲಿದೆ.

    ಹಾಲಿ ಚಾಂಪಿಯನ್‌ ಭಾರತ (India) ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ಪಾಕಿಸ್ತಾನದ ವಿರುದ್ಧ ಸೂಪರ್‌ ಸಂಡೇ ಹೈವೋಲ್ಟೇಜ್‌ ಪಂದ್ಯವನ್ನಾಡಲಿದೆ. ಪ್ರತಿದಿನ ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ. ಈಹೊತ್ತಿನಲ್ಲಿ ಏಷ್ಯಾಕಪ್‌ ಆವೃತ್ತಿಯ ಇತಿಹಾಸ ತಿಳಿಯುವುದೂ ಅಷ್ಟೇ ಸೂಕ್ತವಾಗಿದೆ.

    30 ವರ್ಷಗಳ ಇತಿಹಾಸ ನೀವೂ ತಿಳಿಯಿರಿ
    ಏಷ್ಯಾ ಕಪ್ ಟೂರ್ನಿಗೆ 30 ವರ್ಷಗಳ ಇತಿಹಾಸವಿದೆ. ಮೊದಲಬಾರಿಗೆ ಏಷ್ಯನ್‌ ಕ್ರಿಕೆಟ್ ಸಮಿತಿ (ACC)ಯು ಏಷ್ಯಾದ ಅತ್ಯುತ್ತಮ ತಂಡವನ್ನು ನಿರ್ಧರಿಸುವ ಸಲುವಾಗಿ 1984ರಲ್ಲಿ ಶಾರ್ಜಾದಲ್ಲಿ ಏಷ್ಯಾಕಪ್ ಹಮ್ಮಿಕೊಂಡಾಗ ಏಕದಿನ ಮಾದರಿಯಲ್ಲೇ ನಡೆಸುವುದೆಂದು ನಿರ್ಧಾರ ಆಗಿತ್ತು . ಆಗ ಟಿ20 ಮಾದರಿ ಸಹ ಇರಲಿಲ್ಲ ಎಂಬುದು ಸಹ ಗಮನಾರ್ಹ. ಆದರೆ ಈ ರೀತಿ ಪ್ರತಿಬಾರಿ ಮಾದರಿ ಬದಲಾಯಿಸುವ ಪರಿಪಾಠ ಕಳೆದ 10 ವರ್ಷಗಳಿಂದ ಸಾಗಿ ಬಂದಿದೆ. 2009ರ ಬಳಿಕ ಈ ಟೂರ್ನಿ ಪ್ರತಿ 2 ವರ್ಷಗಳಿಗೊಮ್ಮೆ ನಿಯಮಿತವಾಗಿ ನಡೆಸಲು ನಿರ್ಧರಿಸಲಾಯಿತು. ಆದರೆ 2015ರಲ್ಲಿ ಮುಂದಿನ ವಿಶ್ವ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಸುವ ನಿರ್ಧಾರಕ್ಕೆ ಬರಲಾಯಿತು. ಹಾಗಾಗಿ 2026ರ ಈ ಬಾರಿಯ ಏಷ್ಯಾ ಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ.

    ಭಾರತ vs ಪಾಕಿಸ್ತಾನ 3 ಬಾರಿ ಮುಖಾಮುಖಿ?
    ಪಹಲ್ಗಾಮ್‌ ಉಗ್ರರ ದಾಳಿ ಹಾಗೂ ಆ ಬಳಿಕ ನಡೆದ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಭಾರತ-ಪಾಕ್‌ (India vs Pakistan) ತಂಡಗಳು ತಂಡಗಳು ಬಹುರಾಷ್ಟ್ರೀಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಪ್ರಶಸ್ತಿ ಸುತ್ತಿಗೆ ಬಂದ್ರೆ ಉಭಯ ತಂಡಗಳು ಒಂದಲ್ಲ ಮೂರು ಬಾರಿ ಕಾದಾಟ ನಡೆಸುವ ಸಾಧ್ಯತೆಯಿದೆ.

    ಸೆ.14ರಂದು ಗುಂಪು ಹಂತದಲ್ಲಿ ಮೊದಲ ಬಾರಿಗೆ ಸೆಣಸಾಟವಾಡಲಿವೆ. ಒಂದು ವೇಳೆ ಗುಂಪು ಹಂತದಲ್ಲಿ ಗೆದ್ದು ಸೂಪರ್‌ 6 ಪ್ರವೇಶಿಸಿದ್ರೆ ಅಲ್ಲೂ ಕಾದಾಟ ನಡೆಸಬೇಕಾಗುತ್ತದೆ. ಸೂಪರ್‌ 6 ರಲ್ಲಿ ಅಗ್ರ ಸ್ಥಾನ ಪಡೆದರೆ ಫೈನಲ್‌ನಲ್ಲೂ ಮುಖಾಮುಖಿಯಾಗುವ ಸಾಧ್ಯತೆಯಿದೆ.

    ಭಾರತವೇ ಯಶಸ್ವಿ ತಂಡ
    ಏಷ್ಯಾಕಪ್‌ ಇಲ್ಲಿಯವರೆಗೆ 16 ಆವೃತ್ತಿಗಳನ್ನು ಪೂರ್ಣಗೊಳಿಸಿದ್ದು, ಟೀಂ ಇಂಡಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. ಏಷ್ಯಾಕಪ್‌ನಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಭಾರತ ಆಗಿದೆ.

    ಭಾರತ – 8 ಪ್ರಶಸ್ತಿಗಳು
    ಶ್ರೀಲಂಕಾ – 6 ಪ್ರಶಸ್ತಿಗಳು
    ಪಾಕಿಸ್ತಾನ – 2 ಪ್ರಶಸ್ತಿಗಳು

    ರನ್ನರ್‌ ಅಪ್‌
    ಶ್ರೀಲಂಕಾ – 7 ಬಾರಿ ರನ್ನರ್‌ ಅಪ್‌
    ಭಾರತ – 3 ಬಾರಿ ರನ್ನರ್‌ ಅಪ್‌
    ಪಾಕಿಸ್ತಾನ – 3 ಬಾರಿ ರನ್ನರ್‌ ಅಪ್‌
    ಬಾಂಗ್ಲಾದೇಶ – 3 ಬಾರಿ ರನ್ನರ್‌ ಅಪ್‌

  • ಮುಂದಿನ ಪೀಳಿಗೆ ಬಗ್ಗೆ ಯೋಚಿಸಿ – ವಾಯು ಗುಣಮಟ್ಟ ಕುಸಿತದ ಬಗ್ಗೆ ರೋಹಿತ್‌ ಶರ್ಮಾ ಬೇಸರ

    ಮುಂದಿನ ಪೀಳಿಗೆ ಬಗ್ಗೆ ಯೋಚಿಸಿ – ವಾಯು ಗುಣಮಟ್ಟ ಕುಸಿತದ ಬಗ್ಗೆ ರೋಹಿತ್‌ ಶರ್ಮಾ ಬೇಸರ

    ಮುಂಬೈ: ವಾಣಿಜ್ಯ ನಗರಿಯಾದ ಮುಂಬೈ ಮತ್ತು ದೆಹಲಿಯಲ್ಲಿ ವಾಯುಗುಣಮಟ್ಟ ಕುಸಿತದ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

    ಬಾಂಬೆ ಹೈಕೋರ್ಟ್ ಮುಂಬೈನ (Mumbai) ವಾಯು ಗುಣಮಟ್ಟವನ್ನು (Air Quality) ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದೆ. ಈ ಬೆನ್ನಲ್ಲೇ ಮುಂಬೈನ ವಾಂಖೆಡೆ (Mumbai Wankhede Stadium) ಮತ್ತು ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ (ನ.2) ಮತ್ತು ಸೋಮವಾರ (ನ.6) ನಡೆಯಲಿರುವ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ (BCCI) ನಿಷೇಧಿಸಿದೆ.

    ಈ ನಡುವೆ ಇಲ್ಲಿನ ವಾಯು ಗುಣಮಟ್ಟ ಕುಸಿದ ಬಗ್ಗೆ ಮಾತನಾಡಿರುವ ರೋಹಿತ್‌ ಶರ್ಮಾ, ನಾನು ಯಾವಾಗಲೂ ವಾಯು ಮಾಲಿನ್ಯದ ಬಗ್ಗೆ ಮಾತನಾಡ್ತೇನೆ, ಜನರನ್ನ ಎಜುಕೇಟ್‌ ಮಾಡ್ತೇನೆ. ಏಕೆಂದರೆ ನಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಗೆದ್ದರೂ ಪಟಾಕಿ ಸಿಡಿಸುವಂತಿಲ್ಲ – BCCI ಪಟಾಕಿ ಬ್ಯಾನ್‌ ಮಾಡಿದ್ದೇಕೆ?

    ಮುಂಬೈ ಮತ್ತು ದೆಹಲಿಯಲ್ಲಿ (New Delhi) ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಈ ನಗರಗಳಲ್ಲಿ ನಡೆಯಲಿರುವ ಪಂದ್ಯಗಳ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ದೂರವುಳಿಯಲು ಬಿಸಿಸಿಐ ನಿರ್ಧರಿಸಿದೆ ಎಂದು ಕಾರ್ಯದರ್ಶಿ ಜಯ್‌ ಶಾ ಬುಧವಾರ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India), ಶ್ರೀಲಂಕಾ ವಿರುದ್ಧ, ಸೋಮವಾರ ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ (Sri Lanka) ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನಲ್ಲಿ ನವೆಂಬರ್‌ 7 ರಂದು ಆಸೀಸ್‌ ಮತ್ತು ಅಫ್ಘಾನಿಸ್ತಾನ ನಡುವೆ ಮತ್ತು ನವೆಂಬರ್‌ 15ರಂದು ಸೆಮಿಫೈನಲ್‌ ಪಂದ್ಯಗಳು ನಡೆಯಲಿದೆ.

    ಈ ವಿಷಯವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ತಿಳಿಸಲಾಗಿದೆ. ಮುಂಬೈ ಮತ್ತು ದೆಹಲಿಯಲ್ಲಿ ಯಾವುದೇ ಪಟಾಕಿ ಪ್ರದರ್ಶನ ಇರುವುದಿಲ್ಲ. ಪಟಾಕಿ ಸಿಡಿಸುವುದರಿಂದ ಮಾಲಿನ್ಯದ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಂಡಳಿಯು ಪರಿಸರ ಮಾಲಿನ್ಯದ ಸಮಸ್ಯೆಗಳ ಬಗ್ಗೆ ಸೂಕ್ಷ್ಮತೆ ಹೊಂದಿದೆ ಎಂದು ಜಯ್‌ ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕಿಂದು ಸಿಂಹಳಿಯರ ಸವಾಲ್‌ – ಸೆಮೀಸ್‌ಗೆ ಲಗ್ಗೆಯಿಡಲು ತವಕ; ಲಂಕಾ ಪಂದ್ಯಕ್ಕೂ ಪಾಂಡ್ಯ ಔಟ್‌? 

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ದತ್ತಾಂಶದ ಪ್ರಕಾರ, ಮಂಗಳವಾರ ಮುಂಬೈನಲ್ಲಿ ಗಾಳಿಯ ಗುಣಮಟ್ಟದ ಎಕ್ಯೂಐ (AQI) ರೀಡಿಂಗ್ 172 (ಮಧ್ಯಮ) ಆಗಿದ್ದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 260ರ ಆತಂಕಕಾರಿ ಮಟ್ಟವನ್ನು ಮುಟ್ಟಿತ್ತು. ದೆಹಲಿಯಲ್ಲಿ, ಈ ಅಕ್ಟೋಬರ್‌ನಲ್ಲಿ ವಾಯು ಗುಣಮಟ್ಟವು 2020ರಿಂದ ಅತ್ಯಂತ ಕೆಟ್ಟ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಇಂಡಿಯಾ ಗೆದ್ದರೂ ಪಟಾಕಿ ಸಿಡಿಸುವಂತಿಲ್ಲ – BCCI ಪಟಾಕಿ ಬ್ಯಾನ್‌ ಮಾಡಿದ್ದೇಕೆ?

    ಟೀಂ ಇಂಡಿಯಾ ಗೆದ್ದರೂ ಪಟಾಕಿ ಸಿಡಿಸುವಂತಿಲ್ಲ – BCCI ಪಟಾಕಿ ಬ್ಯಾನ್‌ ಮಾಡಿದ್ದೇಕೆ?

    ನವದೆಹಲಿ: ಮುಂಬೈನ ವಾಂಖೆಡೆ (Mumbai Wankhede Stadium) ಮತ್ತು ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ (ನ.2) ಮತ್ತು ಸೋಮವಾರ (ನ.6) ನಡೆಯಲಿರುವ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ (BCCI) ನಿಷೇಧಿಸಿದೆ.

    ಬಾಂಬೆ ಹೈಕೋರ್ಟ್ ಮುಂಬೈನ (Mumbai) ವಾಯು ಗುಣಮಟ್ಟವನ್ನು (Air Quality) ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದ ಬಳಿಕ ಬಿಸಿಸಿಐ (BCCI) ಈ ನಿರ್ಧಾರ ಪ್ರಕಟಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ (New Delhi) ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಈ ನಗರಗಳಲ್ಲಿ ನಡೆಯಲಿರುವ ಪಂದ್ಯಗಳ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ದೂರವುಳಿಯಲು ಬಿಸಿಸಿಐ ನಿರ್ಧರಿಸಿದೆ ಎಂದು ಕಾರ್ಯದರ್ಶಿ ಜಯ್‌ ಶಾ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India), ಶ್ರೀಲಂಕಾ ವಿರುದ್ಧ, ಸೋಮವಾರ ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ (Sri Lanka) ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನಲ್ಲಿ ನವೆಂಬರ್‌ 7 ರಂದು ಆಸೀಸ್‌ ಮತ್ತು ಅಫ್ಘಾನಿಸ್ತಾನ ನಡುವೆ ಮತ್ತು ನವೆಂಬರ್‌ 15ರಂದು ಸೆಮಿಫೈನಲ್‌ ಪಂದ್ಯಗಳು ನಡೆಯಲಿದೆ.

    ಈ ವಿಷಯವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ತಿಳಿಸಲಾಗಿದೆ. ಮುಂಬೈ ಮತ್ತು ದೆಹಲಿಯಲ್ಲಿ ಯಾವುದೇ ಪಟಾಕಿ ಪ್ರದರ್ಶನ ಇರುವುದಿಲ್ಲ. ಪಟಾಕಿ ಸಿಡಿಸುವುದರಿಂದ ಮಾಲಿನ್ಯದ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಂಡಳಿಯು ಪರಿಸರ ಮಾಲಿನ್ಯದ ಸಮಸ್ಯೆಗಳ ಬಗ್ಗೆ ಸೂಕ್ಷ್ಮತೆ ಹೊಂದಿದೆ ಎಂದು ಜಯ್‌ ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ

    ಮುಂಬೈ ಮತ್ತು ನವದೆಹಲಿ ಎರಡೂ ಕಡೆ ಗಾಳಿಯ ಗುಣಮಟ್ಟದ ಬಗೆಗೆ ಬಿಸಿಸಿಐ ಕಾಳಜಿ ವ್ಯಕ್ತಪಡಿಸಿದೆ. ಕ್ರಿಕೆಟ್‌ನ ಸಂಭ್ರಮಾಚರಣೆಗೆ ಸೂಕ್ತವಾದ ರೀತಿಯಲ್ಲಿ ಐಸಿಸಿ ವಿಶ್ವಕಪ್ (ICC World) ಆಯೋಜಿಸಲು ನಾವು ಶ್ರಮಿಸುತ್ತೇವೆ. ಹಾಗೆಯೇ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇದಕ್ಕೆ ಸಾರ್ವಜನಿಕರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಫೇವ್ರೆಟ್‌ ಕ್ರಿಕೆಟರ್‌ ಕೆ.ಎಲ್‌ ರಾಹುಲ್‌ ಅಲ್ಲ ಎಂದ ಸುನೀಲ್‌ ಶೆಟ್ಟಿ

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ದತ್ತಾಂಶದ ಪ್ರಕಾರ, ಮಂಗಳವಾರ ಮುಂಬೈನಲ್ಲಿ ಗಾಳಿಯ ಗುಣಮಟ್ಟದ ಎಕ್ಯೂಐ (AQI) ರೀಡಿಂಗ್ 172 (ಮಧ್ಯಮ) ಆಗಿದ್ದು, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 260ರ ಆತಂಕಕಾರಿ ಮಟ್ಟವನ್ನು ಮುಟ್ಟಿದೆ. ದೆಹಲಿಯಲ್ಲಿ, ಈ ಅಕ್ಟೋಬರ್‌ನ ಗಾಳಿಯ ಗುಣಮಟ್ಟವು 2020ರಿಂದ ಕೆಟ್ಟದ್ದಾಗಿದೆ. ಮುಂಬೈ ಮತ್ತು ದೆಹಲಿಯನ್ನು ಪಟಾಕಿ ಮುಕ್ತ ಮಾಡುವ ಮೂಲಕ ಕ್ರಿಕೆಟ್ ಮಂಡಳಿಯು ಉತ್ತಮ ಸಂದೇಶ ನೀಡುತ್ತಿದೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಏಕದಿನ ವಿಶ್ವಕಪ್ ಪಂದ್ಯಗಳ ವೇಳೆ ಪಟಾಕಿ ಸಿಡಿಸುವುದು ಸಂಭ್ರಮದ ಒಂದು ಭಾಗವಾಗಿದೆ. ಲೈಟ್‌ ಶೋ, ಸಿಡಿಮದ್ದಿನ ಪ್ರದರ್ಶನ ಸಾಕಷ್ಟು ಗಮನ ಸೆಳೆಯುತ್ತದೆ. ಆದ್ರೆ ಬಾಂಬೆ ಹೈಕೋರ್ಟ್ ಮಂಗಳವಾರ ಮುಂಬೈನಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟ ಸೂಚ್ಯಂಕದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಸಮಸ್ಯೆಯ ಬಗ್ಗೆ ಸ್ವಯಂಪ್ರೇರಿತವಾಗಿ (ಸ್ವತಃ) ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಈ ಬೆನ್ನಲ್ಲೇ ಬಿಸಿಸಿಐ ಪಟಾಕಿ ಸಿಡಿಸುವುದನ್ನು ಬ್ಯಾನ್‌ ಮಾಡಿದೆ. ಇದನ್ನೂ ಓದಿ: ಕಿಂಗ್‌ ಕೊಹ್ಲಿ, ರೋಹಿತ್‌ ಬಯೋಪಿಕ್‌ನಲ್ಲಿ ನಟಿಸುತ್ತಾರಾ ಶಾಹಿದ್ ಕಪೂರ್?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ

    Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ

    ಅಹಮದಾಬಾದ್‌: ವಿಶ್ವಕಪ್‌ (World Cup) ಟೂರ್ನಿಯ ರೋಚಕ ಇಂಡೋ-ಪಾಕ್‌ (Ind vs Pak) ಸಮರಕ್ಕೆ ಕ್ಷಣಗಣನೆ ಬಾಕಿಯಿದೆ. ಮಧ್ಯಾಹ್ನ 2 ಗಂಟೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಆರಂಭವಾಗಲಿದೆ. ಈ ಪಂದ್ಯ ನೋಡಲು ಮೈದಾನಕ್ಕೆ ಜನಸಾಗರವೇ ಹರಿದು ಬಂದಿದೆ. ಎಲ್ಲ ಟಿಕೆಟ್​ಗಳು ಕೂಡ ಸೋಲ್ಡ್​ ಔಟ್​ ಆಗಿದ್ದು, ಟಿಕೆಟ್​ ಸಿಗದ ಕೆಲವರು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರತ ತಂಡದ ಜೆರ್ಸಿಯನ್ನು ಹಾಕಿ ಸಂಭ್ರಮಾಚರಣೆ ಮಾಡುವ ಮೂಲಕ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

    ಇನ್ನೇನು ಕೆಲವೇ ಗಂಟೆಗಳಲ್ಲಿ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್​ ಗಾಯಕರಾದ ಶಂಕರ್​ ಮಹಾದೇವನ್​, ಸುಖ್ವಿಂದರ್​ ಸಿಂಗ್​, ಅರ್ಜಿತ್​ ಸಿಂಗ್​ ಸಂಗೀತ ಸುಧೆ ಹರಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿ ಹಲವು ಮಾಜಿ ಆಟಗಾರರು ಈ ಪಂದ್ಯ ವೀಕ್ಷಣೆಗೆ ಅಹಮದಾಬಾದ್‌ಗೆ ಆಗಮಿಸಿದ್ದಾರೆ. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    ಟೀಂ ಇಂಡಿಯಾ ಗೆಲುವಿಗೆ ಹೋಮ, ಹವನ:
    ಪ್ರತಿಬಾರಿ ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಅಭಿಮಾನಿಗಳು ಪೂಜೆ ಮತ್ತು ಪ್ರಾರ್ಥನೆ ನಡೆಸಿದ್ದಾರೆ. ಪಂದ್ಯಕ್ಕೆ ಭಾರೀ ಕಟ್ಟೆಚ್ಚರ ವಹಿಸಿದ್ದು, ಗುಜರಾತ್​ ಪೊಲೀಸ್​, ಎನ್​ಎಸ್​ಜಿ, ಆರ್‌ಎಎಫ್‌​, ಗೃಹರಕ್ಷಣಾ ಪಡೆ ಸಹಿತ ಕ್ರೀಡಾಂಗಣದ ಸುತ್ತ ವಿವಿಧ ಭದ್ರತಾ ಏಜೆನ್ಸಿಗಳಿಂದ ಒಟ್ಟು 11 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಬಿಗಿಭದ್ರತೆಗಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ: Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

    2016ರಲ್ಲಿ ಕೊನೆಯದ್ದಾಗಿ ಭಾರತಕ್ಕೆ ಬಂದಿದ್ದ ಪಾಕ್ ಈಡನ್ ಗಾರ್ಡನ್‌ನಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್ ತಂಡ ನೀಡಿದ್ದ 119 ರನ್‌ಗಳ ಗುರಿಯನ್ನು 18 ಓವರ್‌ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್‌ಗಳಲ್ಲೇ ಈ ಗುರಿ ಪೂರೈಸಿತ್ತು. ಇದೀಗ 7 ವರ್ಷಗಳ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿರುವ ಪಾಕ್ ತಂಡವನ್ನು ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜಾಗಿದೆ. ಇದನ್ನೂ ಓದಿ: ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ

    ಚಿಕ್ಕಬಳ್ಳಾಪುರ ಚೌಡೇಶ್ವರಿಗೆ ವಿಶೇಷ ಪೂಜೆ: ಪಾಕ್‌ ವಿರುದ್ಧ ಭಾರತ ಜಯ ಸಾಧಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಚೌಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೌಡೇಶ್ವರಿ ದೇವಿ ಬಳಿ ಭಾರತ ಧ್ವಜ ಇಟ್ಟು ಪೂಜೆ ಮಾಡಿಸಿ ಭಾರತ ತಂಡ ಗೆಲ್ಲಲಿ ಅಂತ ಅಭಿಮಾನಿಗಳು ಅಶಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    ಮುಂಬೈ: ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯು ನಿರ್ಣಾಯಕ ಘಟ್ಟದಲ್ಲಿದ್ದು, (ICC World Cup 2023) ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.

    1987 ಮತ್ತು 1996ರಲ್ಲಿ ಪಾಕಿಸ್ತಾನದ (Pakistan) ಜೊತೆಗೆ 2011ರಲ್ಲಿ ಬಾಂಗ್ಲಾದೇಶದ ಜೊತೆಗೆ ಸಹ ಆತಿಥ್ಯದೊಂದಿಗೆ ವಿಶ್ವಕಪ್‌ ಟೂರ್ನಿ ಆಯೋಜಿಸಿದ್ದ ಭಾರತ ಈ ಬಾರಿ ಪೂರ್ಣ ಆತಿಥ್ಯ ವಹಿಸಿಕೊಂಡಿದೆ. ಭಾರತ ಮತ್ತು ಪಾಕಿಸ್ತಾನ  ತಂಡಗಳು ಎದುರಾಗುತ್ತಿವೆ ಅಂದ್ರೆ ಸಾಕು ಪ್ರತಿ ಕ್ಷಣವೂ ಮೈ ರೋಮಾಂಚನವಾಗುತ್ತದೆ. ದೇಶದ ಮೂಲೆ ಮೂಲೆಯಲ್ಲಿರುವ ಕ್ರಿಕೆಟ್‌ ಅಭಿಮಾನಿಗಳು (Cricket Fans) ಈ ಪಂದ್ಯಗಳನ್ನು ಕಣ್ತುಂಬಿಕೊಳ್ಳೋದಕ್ಕೆ ತುದಿಗಾಲಿನಲ್ಲಿ ಕಾಯುತ್ತಿರುತ್ತಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಾತ್ರ ಏಕೆ ಇಷ್ಟೊಂದು ಕ್ರೇಜ್‌ ಹೆಚ್ಚಾಗಿದೆ? ಎಂಬುದನ್ನಿಲ್ಲಿ ತಿಳಿಯೋಣ. ಇದನ್ನೂ ಓದಿ: ರೋಹಿತ್‌ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್‌ ಹಿಂದಿಕ್ಕಿದ ಭಾರತ

    ಇತಿಹಾಸವೇ ರೋಚಕ..?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು. ಇದನ್ನೂ ಓದಿ: ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ನೆನಪಿದೆಯಾ ಆ ಕರಾಳ ದಿನ..?
    2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದಾದ ಬಳಿಕ 2019ರ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಪಾಕ್‌ ಉಗ್ರರು, ಭಾರತೀಯ ಯೋಧರನ್ನು ಭೀಕರವಾಗಿ ಬಾಂಬ್‌ ದಾಳಿಯಲ್ಲಿ ಕೊಂದರು. ಇದು ಇನ್ನಷ್ಟು ಭಾರತೀಯರ ನಿದ್ದೆಗೆಡಿಸಿತ್ತು. ಇದನ್ನೂ ಓದಿ: 7-0 ದಾಖಲೆ ಬಗ್ಗೆ ಚಿಂತೆಯಿಲ್ಲ, ಈ ಬಾರಿ ಮುರಿಯುತ್ತೇವೆ: ಅಜಂ ವಿಶ್ವಾಸ

    2016ರ‌ಲ್ಲಿ ಕೊನೆಯದ್ದಾಗಿ ಭಾರತಕ್ಕೆ ಬಂದಿದ್ದ ಪಾಕ್‌ ಈಡನ್‌ ಗಾರ್ಡನ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್‌ ತಂಡ ನೀಡಿದ್ದ 119 ರನ್‌ಗಳ ಗುರಿಯನ್ನು 18 ಓವರ್‌ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್‌ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್‌ಗಳಲ್ಲೇ ಈ ಗುರಿ ಪೂರೈಸಿತ್ತು. ಇದೀಗ 7 ವರ್ಷಗಳ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿರುವ ಪಾಕ್‌ ತಂಡವನ್ನು ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜಾಗಿದೆ. ಇದನ್ನೂ ಓದಿ: ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ

    1992ರಲ್ಲಿ ಪಾಕಿಸ್ತಾನ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 1992ರಲ್ಲಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ 7 ಬಾರಿ ಮುಖಾಮುಖಿಯಾಗಿವೆ. 1992, 1999, 2003, 2011, 2015 ಹಾಗೂ 2019ರಲ್ಲಿ ಇತ್ತಂಡಗಳು ಮುಖಾಮುಖಿಯಾಗಿವೆ. ಅಲ್ಲದೇ ಟಿ20 ವಿಶ್ವಕಪ್‌ನಲ್ಲಿ 7 ಬಾರಿ, ಚಾಂಪಿಯನ್ಸ್‌ ಟ್ರೋಫಿಯಲ್ಲಿ 5 ಬಾರಿ ಒಟ್ಟು 19 ಬಾರಿ ಇತ್ತಂಡಗಳು ಮುಖಾಮುಖಿಯಾಗಿವೆ. ಭಾರತ ಇದುವರೆಗೆ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಕ್‌ ವಿರುದ್ಧ ಸೋತಿದೆಯೇ ಹೊರತು ವಿಶ್ವಕಪ್‌ ಟೂರ್ನಿಯಲ್ಲಿ ಸೋತಿಲ್ಲ. ಈ ಬಾರಿಯೂ ಪಾಕ್‌ ವಿರುದ್ಧ ಗೆಲ್ಲುವ ವಿಶ್ವಾಸದಲ್ಲೇ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ

    ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ

    ಅಹಮದಾಬಾದ್: ಭಾರತ ಈಗ ನವರಾತ್ರಿ ಸಂಭ್ರಮಕ್ಕೆ ಅಣಿಯಾಗುತ್ತಿದೆ. ಬದ್ಧವೈರಿ ಪಾಕಿಸ್ತಾನ ತಂಡವನ್ನು ಟೀಂ ಇಂಡಿಯಾ ಶನಿವಾರ (ಅ.14) ವಿಶ್ವಕಪ್ ಸಮರದಲ್ಲಿ ಹುರಿದು ಮುಕ್ಕಿದರೆ ದೇಶದೆಲ್ಲೆಡೆ ಸಂಭ್ರಮ ಇಮ್ಮಡಿಗೊಳ್ಳಲಿದೆ. ಜೊತೆಗೆ ಅಭಿಮಾನಿಗಳಿಗೆ ನವರಾತ್ರಿಗೆ ಗೆಲುವಿನ ಉಡುಗೊರೆಯೂ ಸಿಗಲಿದೆ. ಈ ಪಂದ್ಯಕ್ಕಾಗಿ ಕೇವಲ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ.

    ಶನಿವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣದಲ್ಲಿ ಬದ್ಧ ವೈರಿಯನ್ನು ಬಗ್ಗು ಬಡಿದು ಭಾರತ ಸಂಭ್ರಮಿಸಲಿ ಅನ್ನೋದು 140 ಕೋಟಿ ಭಾರತೀಯರ ಪ್ರಾರ್ಥನೆ. ಅಭಿಮಾನಿಗಳ ಬೆಂಬಲವೂ ರೋಹಿತ್‌ ಶರ್ಮಾ ಪಡೆಯ ಬೆನ್ನಿಗೆ ಇರಲಿದೆ. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್‌ ನಿರೂಪಕಿ

    1992 ರಿಂದ 2019ರ ವರೆಗೂ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ 7 ಪಂದ್ಯಗಳನ್ನಾಡಿರುವ ಭಾರತ, 7 ಬಾರಿಯೂ ವಿಜಯದ ಮಾಲೆ ಹಾಕಿಕೊಂಡಿದೆ. ಈ ವಿಶ್ವಕಪ್‌ನಲ್ಲಿ ಆಡುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬಲಾಬಲವನ್ನು ನೋಡಿದಾಗ, ಈ ಸಲವೂ ಭಾರತವೇ ಗೆಲ್ಲುವ ಫೇವರಿಟ್ ಆಗಿದೆ. ಭಾರತ 8ನೇ ಜಯಕ್ಕೆ ಹಪಹಪಿಸುತ್ತಿದ್ದರೆ, ಮೊದಲ ಜಯ ಸಾಧಿಸಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ. ಇದನ್ನೂ ಓದಿ: 7-0 ದಾಖಲೆ ಬಗ್ಗೆ ಚಿಂತೆಯಿಲ್ಲ, ಈ ಬಾರಿ ಮುರಿಯುತ್ತೇವೆ: ಅಜಂ ವಿಶ್ವಾಸ

    ಭಾರತ ತಂಡದಲ್ಲಿರುವ ಬ್ಯಾಟರ್‌ಗಳೆಲ್ಲರೂ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬೌಲರ್‌ಗಳೂ ಒಬ್ಬರಿಗಿಂತ ಒಬ್ಬರು ದೊಡ್ಡ ರೆಕಾರ್ಡ್‌ ಮಾಡಿದವರಿದ್ದಾರೆ. ಈ ಪಂದ್ಯದಲ್ಲಿ ಲಯ, ಸಾಮರ್ಥ್ಯ, ಪ್ರತಿಭೆ ಇವೆಲ್ಲಕ್ಕಿಂತ ಮಿಗಿಲಾಗಿ ಯಾರು ಭಾವನೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರೋ ಅವರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆ. ಹೀಗಾಗಿ ರೋಹಿತ್‌ ಪಡೆಗಿರುವ ಅತಿದೊಡ್ಡ ಸವಾಲು ಭಾವನೆಗಳ ಬಂಧನಕ್ಕೆ ಒಳಗಾಗದಿರುವುದು.

    ಅಫ್ಘಾನಿಸ್ತಾನ ವಿರುದ್ಧ ಸಿಡಿಲಬ್ಬರದ ಆಟವಾಡಿದ್ದ ರೋಹಿತ್, ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದ್ದು, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಸಹ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ. ಇದನ್ನೂ ಓದಿ: ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಅಹಮದಾಬಾದ್‌ನ ಇತ್ತೀಚಿನ ದಾಖಲೆಯನ್ನು ಪರಿಗಣಿಸಿ, ವೇಗದ ಬೌಲರ್‌ಗಳಿಗೆ ಹೆಚ್ಚು ನೆರವು ಸಿಗಲಿದೆ ಎನ್ನುವ ನಂಬಿಕೆಯೊಂದಿಗೆ ಭಾರತ ಕಣಕ್ಕಿಳಿದರೆ ಮೊಹಮದ್ ಶಮಿಗೆ ಅವಕಾಶ ಸಿಗಬಹುದು. ಶಮಿ ಐಪಿಎಲ್‌ನಲ್ಲಿ ಗುಜರಾತ್ ತಂಡದಲ್ಲಿ ಆಡುವ ಕಾರಣ, ಇಲ್ಲಿನ ಪಿಚ್ ಬಗ್ಗೆ ಅವರಿಗೆ ಹೆಚ್ಚಿನ ಮಾಹಿತಿ ಇರಲಿದೆ. ಒಂದು ವೇಳೆ ದೊಡ್ಡ ಬೌಂಡರಿಗಳು ಎನ್ನುವ ಅಂಶವನ್ನು ತಲೆಯಲ್ಲಿಟ್ಟುಕೊಂಡು ಆಡುವ ಹನ್ನೊಂದನ್ನು ನಿರ್ಧರಿಸಿದರೆ ಆಗ ಆರ್.ಅಶ್ವಿನ್‌ರನ್ನು ಆಡಿಸಬಹುದು ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಇಂಡೋ-ಪಾಕ್‌ ಕದನ: 10 ಸೆಕೆಂಡ್‌ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!

    ಅಹಮದಾಬಾದ್‌: ಏಕದಿನ ವಿಶ್ವಕಪ್‌ (ICC World Cup) ಟೂರ್ನಿಯಲ್ಲಿ ಅಕ್ಟೋಬರ್‌ 14ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಆದ್ರೆ ಪಂದ್ಯದ ನಡುವೆ ಮಾಧ್ಯಮಗಳಲ್ಲಿ ಪ್ರಸಾರಗೊಳ್ಳುವ ಜಾಹೀರಾತಿನ (Advertisement) ಮೌಲ್ಯ ಕೇಳಿದ್ರೆ ನಿಜಕ್ಕೂ ಎದೆ ಬಡಿತ ಹೆಚ್ಚಿಸುತ್ತೆ. ಏಕೆಂದರೆ ಪ್ರತಿ 10 ಸೆಕೆಂಡ್‌ ಜಾಹೀರಾತಿಗೆ ಬರೋಬ್ಬರಿ 25 ರಿಂದ 30 ಲಕ್ಷ ರೂ. ನಿಗದಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ (Disney Hot Star) ಸಂಸ್ಥೆಯ ಪ್ರಸಾರ ಒಪ್ಪಂದ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಡಿಸ್ನಿ ಸ್ಟಾರ್‌ ಈ ಪಂದ್ಯದ ಸಂಪೂರ್ಣ ಲಾಭ ಪಡೆಯುವ ನಿರೀಕ್ಷೆಯಲ್ಲಿದೆ. ಪಂದ್ಯದ ವೇಳೆ ಪ್ರಸಾರಗೊಳ್ಳುವ ಪ್ರತಿ 10 ಸೆಕೆಂಡ್ ಜಾಹೀರಾತಿಗೆ ಬರೋಬ್ಬರಿ 25 ರಿಂದ 30 ಲಕ್ಷ ರೂ. ನಿಗದಿಪಡಿಸಲಾಗಿದೆ. ಭಾರತದ ಇತರ ಪಂದ್ಯಗಳ ವೇಳೆ 10 ಸೆಕೆಂಡ್‌ ಜಾಹೀರಾತಿನ ಸ್ಲಾಟ್‌ಗೆ ಅಂದಾಜು 10 ಲಕ್ಷ ರೂ. ನಿಗದಿ ಮಾಡಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ಆರಂಭದಲ್ಲಿ ಉಭಯ ತಂಡಗಳ ಈ ಪಂದ್ಯದ ವೇಳೆ ಪ್ರತಿ 10 ಸೆಕೆಂಡ್ ಜಾಹೀರಾತಿಗೆ 17 ರಿಂದ 18 ಲಕ್ಷ ರೂ. ಮೊತ್ತ ನಿಗದಿ ಪಡಿಸಲಾಗಿತ್ತು. ಆದ್ರೆ ಬೇಡಿಕೆ ಹೆಚ್ಚಾಗಿದ್ದರಿಂದ ಸಂಸ್ಥೆ ಇದರ ಲಾಭ ಪಡೆಯಲು ಉದ್ದೇಶಿಸಿದ್ದು, ಜಾಹೀರಾತಿನ ಮೌಲ್ಯವನ್ನು 25 ರಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಏಷ್ಯಾಕಪ್‌ ಟೂರ್ನಿ ವೇಳೆಯೂ ಜಿಯೋ ಆಪ್‌ ಇಷ್ಟೇ ಪ್ರಮಾಣದ ದರವನ್ನು ನಿಗದಿ ಮಾಡಿತ್ತು. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್‌ ನಿರೂಪಕಿ

    ಈಗಾಗಲೇ ಈ ಪಂದ್ಯವನ್ನು ಕಣ್ತುಂಬಿಕೊಳ್ಳುವ ನಿಟ್ಟಿನಲ್ಲಿ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಅಹಮದಾಬಾದ್​ನ ಬಹುತೇಕ ಹೋಟೆಲ್​ಗಳು ಬುಕ್​ ಆಗಿವೆ. ಕೆಲವು ಹೋಟೆಲ್‌ಗಳು 2 ದಿನಕ್ಕೆ ಸುಮಾರು 1 ಲಕ್ಷ ರೂ.ವರೆಗೂ ವಿಧಿಸಿತ್ತು. ಆದರೂ ಬಹುತೇಕ ಹೋಟೆಲ್‌ಗಳು ಈಗಾಗಲೇ ಹೌಸ್‌ಫುಲ್‌ ಆಗಿದೆ. ಸಾಮಾನ್ಯ ದಿನಗಳಲ್ಲಿ ನಗರದ ಐಷಾರಾಮಿ ಹೋಟೆಲ್‌ಗಳ ದರ ಪ್ರತಿದಿನಕ್ಕೆ 5 ರಿಂದ 8 ಸಾವಿರ ಇರುತ್ತದೆ. ಆದರೆ ಭಾರತ ಮತ್ತು ಪಾಕ್​ ಪಂದ್ಯ ನಡೆಯುವ ದಿನದಂದು ದರ 40,000 ರೂ.ಗೆ ಜಿಗಿದಿದೆ. ಕಡಿಮೆ ಖರ್ಚಿನ ಹೋಟೆಲ್‌ಗಳೂ ಲಭ್ಯವಿದ್ದು, ಅಭಿಮಾನಿಗಳು ದಾಂಗುಡಿಯಿಡುತ್ತಿದ್ದಾರೆ.

    ಈ ಮೊದಲು ಇಂಡೋ ಪಾಕ್‌ ಕದನ ಅಕ್ಟೋಬರ್‌ 15 ರಂದು ನಿಗದಿಯಾಗಿತ್ತು. ಆದ್ರೆ ಅಂದು ನವರಾತ್ರಿ ಉತ್ಸವ ಆರಂಭದ ದಿನವಾದ್ದರಿಂದ ಭದ್ರತಾ ಸಮಸ್ಯೆ ಎದುರಾಗಬಹುದು ಎಂದು ಭದ್ರತಾ ಏಜೆನ್ಸಿಗಳು ಸಲಹೆ ನೀಡಿತ್ತು. ಈ ಕಾರಣದಿಂದ ಪಂದ್ಯದ ದಿನಾಂಕವನ್ನು ಬದಲಿಸಿ ಅಕ್ಟೋಬರ್​ 14ಕ್ಕೆ ನಿಗದಿ ಮಾಡಲಾಗಿದೆ. ಇದನ್ನೂ ಓದಿ: World Cup 2023: ಗುಡ್‌ನ್ಯೂಸ್‌ – ಪಾಕ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್‌ ನಿರೂಪಕಿ

    ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್‌ ನಿರೂಪಕಿ

    ಇಸ್ಲಾಮಾಬಾದ್:‌ ಭಾರತ (India) ಮತ್ತು ಹಿಂದೂ ವಿರೋಧಿ (Anti Hindu) ಟ್ವೀಟ್‌ ಮಾಡಿದ್ದಕ್ಕೆ ಪಾಕಿಸ್ತಾನ (Pakistan) ಕ್ರೀಡಾ ಪತ್ರಕರ್ತೆ ಝೈನಾಬ್ ಅಬ್ಬಾಸ್‌ಳನ್ನು (Zainab Abbas) ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿದೆ ಎಂಬ ಸುದ್ದಿ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಈ ಚರ್ಚೆಗಳು ಹುಟ್ಟಿಕೊಂಡ ನಾಲ್ಕು ದಿನಗಳ ಬಳಿಕ ಪಾಕ್‌ ನಿರೂಪಕಿ ಕ್ಷಮೆಯಾಚಿಸಿದ್ದಾಳೆ. ನನ್ನ ಅನಿರೀಕ್ಷಿತ ಹೇಳಿಕೆಗಳಿಂದ ನೋವುಂಟಾಗಿದ್ದರೆ ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂಬುದಾಗಿ ಆಕೆ ತನ್ನ ಟ್ವಿಟ್ಟರ್‌ (X) ಖಾತೆಯಲ್ಲಿ ಬರೆದುಕೊಂಡಿದ್ದಾಳೆ. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಪಾಕ್‌ ನಿರೂಪಕಿ ಗಡೀಪಾರು

    ನಾನು ತುಂಬಾ ಅದೃಷ್ಟಶಾಲಿ, ನನ್ನಿಷ್ಟದ ಕ್ರೀಡೆಯನ್ನ ನಿರೂಪಣೆ ಮಾಡುವುದಕ್ಕೆ ಹಾಗೂ ಅದಕ್ಕಾಗಿ ಪ್ರಯಾಣ ಮಾಡಲು ಅವಕಾಶ ಕೊಟ್ಟಿದ್ದಕ್ಕಾಗಿ ನಾನು ಕೃತಜ್ಞಳಾಗಿರುತ್ತೇನೆ. ಪ್ರತಿದಿನ ನಾನು ಎಲ್ಲರೊಟ್ಟಿಗೂ ಹರ್ಷದಿಂದಲೇ ಸಂವಾದ ಮಾಡುತ್ತಿದ್ದೇನೆ. ನನ್ನನ್ನ ಯಾರು ನಿರೂಪಣೆಯಿಂದ ತೆಗೆದುಹಾಕಿಲ್ಲ. ಗಡಿಪಾರು ಮಾಡಿರುವುದಾಗಿಯೂ ಹೇಳಿಲ್ಲ. ಆದ್ರೆ ಆನ್‌ಲೈನ್‌ನಲ್ಲಿ ಹರಿದಾಡುತ್ತಿದ್ದ ಕಾಮೆಂಟ್‌ಗಳನ್ನು ನೋಡಿ ವಿಚಲಿತಳಾದೆ. ಜೊತೆಗೆ ತುಂಬಾ ಭಯವೂ ಆಗಿತ್ತು. ನನ್ನ ಸುರಕ್ಷತೆಗೆ ಯಾವುದೇ ಆತಂಕ ಇಲ್ಲದಿದ್ದರೂ ನನ್ನ ಕುಟುಂಬ ಮತ್ತು ನನ್ನ ಸ್ನೇಹಿತರು ಆತಂಕಗೊಂಡಿದ್ದರು. ಆದ್ದರಿಂದ ನನಗೆ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಲು ಆಗಲಿಲ್ಲ. ಏನಾಯಿತು ಅಂತಾ ತಿಳಿದುಕೊಳ್ಳಲು ಸ್ವಲ್ಪ ಸಮಯ ಬೇಕಾಗಿತ್ತು ಎಂದು ಹೇಳಿದ್ದಾರೆ.

    ನನ್ನ ಟ್ವೀಟ್‌ ಪೋಸ್ಟ್‌ಗಳಿಂದ ಯಾರ ಮನಸ್ಸಿಗಾದರೂ ನೋವುಂಟು ಮಾಡಿದ್ದರೆ, ತೀವ್ರವಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ. ಇದರೊಂದಿಗೆ ಸವಾಲಿನ ಸಮಯದಲ್ಲಿ ನನ್ನ ಬಗ್ಗೆ ಕಾಳಜಿ ವಹಿಸಿದ ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚೇತರಿಸಿಕೊಳ್ಳುತ್ತಿರುವ ಶುಭಮನ್ – ವಿಶ್ರಾಂತಿಗಾಗಿ ಅಘ್ಘಾನ್ ವಿರುದ್ಧದ ಪಂದ್ಯದಿಂದ ಹೊರಗೆ

    ಏನಿದು ವಿವಾದ?
    ವಕೀಲ ವಿನೀತ್‌ ಜಿಂದಾಲ್‌ (Vineet Jindal) ಅವರು ದೆಹಲಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಭಾರತ ಮತ್ತು ಹಿಂದೂ ಧರ್ಮವನ್ನು ಅವಹೇಳನ ಮಾಡಿದ ಆರೋಪ ಹೊರಿಸಿ ಝೈನಾಬ್ ಅಬ್ಬಾಸ್‌ ವಿರುದ್ಧ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಐಸಿಸಿ ವಿಶ್ವಕಪ್‌ (ICC World Cup) ನಿರೂಪಕಿ ಸ್ಥಾನದಿಂದ ಕೂಡಲೇ ತೆಗೆದುಹಾಕಬೇಕೆಂದು ಐಸಿಸಿ ಮತ್ತು ಬಿಸಿಸಿಐಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಜೈನಾಬ್‌ಳನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಗಿತ್ತು. ಬಳಿಕ ಪಾಕಿಸ್ತಾನಿ ಕ್ರೀಡಾ ನಿರೂಪಕಿ ಝೈನಾಬ್ ಅಬ್ಬಾಸ್ ಅವರು ಸುರಕ್ಷತಾ ಕಾಳಜಿಯಿಂದ ಭಾರತದಿಂದ ನಿರ್ಗಮಿಸಿ, ದುಬೈನಲ್ಲಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಏಷ್ಯನ್‌ ಗೇಮ್ಸ್‌ಗೆ ವರ್ಣರಂಜಿತ ತೆರೆ – ಐತಿಹಾಸಿಕ 107 ಪದಕಗಳೊಂದಿಗೆ ಭಾರತ ವಿದಾಯ

    ನಮ್ಮ ದೇಶ ಮತ್ತು ಹಿಂದೂ ಧರ್ಮವನ್ನು ಗೌರವಿಸುವವರಿಗೆ ಮಾತ್ರ ಅತಿಥಿ ದೇವೋ ಭವ. ಆದರೆ ನಮ್ಮ ಭೂಮಿಯಲ್ಲಿ ಭಾರತೀಯ ವಿರೋಧಿಗಳು ಸ್ವಾಗತಿಸುವುದಿಲ್ಲ ವಿನೀತ್‌ ಜಿಂದಾಲ್‌ ಬರೆದುಕೊಂಡಿದ್ದಾರೆ. ಈ ಹಿಂದೆ ಭಾರತ ವಿರೋಧಿಸಿ ಮಾಡಿದ ಟ್ವೀಟ್‌ ಗಳನ್ನು ಝೈನಾಬ್ ಅಬ್ಬಾಸ್ ಡಿಲೀಟ್‌ ಮಾಡಿದ್ದರೂ ಈಗ ವೈರಲ್‌ ಆಗುತ್ತಿದೆ. ಭಾರತದ ಕ್ರಿಕೆಟ್‌ ಅಭಿಮಾನಿಗಳು ಐಸಿಸಿ, ಬಿಸಿಸಿಐ ನಿರ್ಧಾರವನ್ನು ಸ್ವಾಗತಿಸಿದರೆ ಪಾಕಿಸ್ತಾನದ ಅಭಿಮಾನಿಗಳು ಭಾರತ ಸರ್ಕಾರವನ್ನು ದೂಷಣೆ ಮಾಡಲು ಆರಂಭಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ, ಹಿಂದೂ ಧರ್ಮ ಅವಹೇಳನ – ಪಾಕ್‌ ನಿರೂಪಕಿ ಗಡೀಪಾರು

    ಭಾರತ, ಹಿಂದೂ ಧರ್ಮ ಅವಹೇಳನ – ಪಾಕ್‌ ನಿರೂಪಕಿ ಗಡೀಪಾರು

    ನವದೆಹಲಿ: ಭಾರತ (India) ಮತ್ತು ಹಿಂದೂ ವಿರೋಧಿ (Anti Hindu) ಟ್ವೀಟ್‌ ಮಾಡಿದ್ದಕ್ಕೆ ಪಾಕಿಸ್ತಾನ (Pakistan) ಕ್ರೀಡಾ ಪತ್ರಕರ್ತೆ ಝೈನಾಬ್ ಅಬ್ಬಾಸ್‌ಳನ್ನು (Zainab Abbas) ಪಾಕಿಸ್ತಾನಕ್ಕೆ ಗಡೀಪಾರು ಮಾಡಿದೆ.

    ವಕೀಲ ವಿನೀತ್‌ ಜಿಂದಾಲ್‌ (Vineet Jindal) ಅವರು ದೆಹಲಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಭಾರತ ಮತ್ತು ಹಿಂದೂ ಧರ್ಮವನ್ನು ಅವಹೇಳನ ಮಾಡಿದ ಆರೋಪ ಹೊರಿಸಿ ಜೈನಾಬ್ ಅಬ್ಬಾಸ್‌ ವಿರುದ್ಧ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಐಸಿಸಿ ವಿಶ್ವಕಪ್‌ (ICC World Cup) ನಿರೂಪಕಿ ಸ್ಥಾನದಿಂದ ಕೂಡಲೇ ತೆಗೆದುಹಾಕಬೇಕೆಂದು ಐಸಿಸಿ ಮತ್ತು ಬಿಸಿಸಿಐಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಜೈನಾಬ್‌ಳನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಗಿದೆ.  ಇದನ್ನೂ ಓದಿ: ಪಾಕ್‌ ಪಂದ್ಯಕ್ಕೆ ಕೇಸರಿ ಜೆರ್ಸಿಯಲ್ಲಿ ಮೆನ್‌ ಇನ್‌ ಬ್ಲೂ ಕಣಕ್ಕೆ – ಬಿಸಿಸಿಐನಿಂದ ಖಡಕ್‌ ಉತ್ತರ

    https://twitter.com/KhushiViews/status/1710176712003387444

    ಈ ಸಂಬಂಧ ಸಮಾ ಟಿವಿ ಟ್ವೀಟ್‌ ಮಾಡಿದ್ದು, ಪಾಕಿಸ್ತಾನಿ ಕ್ರೀಡಾ ನಿರೂಪಕಿ ಝೈನಾಬ್ ಅಬ್ಬಾಸ್ ಅವರು ಸುರಕ್ಷತಾ ಕಾಳಜಿಯಿಂದ ಭಾರತದಿಂದ ನಿರ್ಗಮಿಸಿದ್ದಾರೆ. ಸದ್ಯ ಅವರು ದುಬೈನಲ್ಲಿದ್ದಾರೆ ಎಂದು ಹೇಳಿದೆ.

    ನಮ್ಮ ದೇಶ ಮತ್ತು ಹಿಂದೂ ಧರ್ಮವನ್ನು ಗೌರವಿಸುವವರಿಗೆ ಮಾತ್ರ ಅತಿಥಿ ದೇವೋ ಭವ. ಆದರೆ ನಮ್ಮ ಭೂಮಿಯಲ್ಲಿ ಭಾರತೀಯ ವಿರೋಧಿಗಳು ಸ್ವಾಗತಿಸುವುದಿಲ್ಲ ವಿನೀತ್‌ ಜಿಂದಾಲ್‌ ಬರೆದುಕೊಂಡಿದ್ದಾರೆ.

    ಈ ಹಿಂದೆ ಭಾರತ ವಿರೋಧಿ ಮಾಡಿದ ಟ್ವೀಟ್‌ ಗಳನ್ನು ಝೈನಾಬ್ ಅಬ್ಬಾಸ್ ಡಿಲೀಟ್‌ ಮಾಡಿದ್ದರೂ ಈಗ ವೈರಲ್‌ ಆಗುತ್ತಿದೆ. ಭಾರತದ ಕ್ರಿಕೆಟ್‌ ಅಭಿಮಾನಿಗಳು ಐಸಿಸಿ, ಬಿಸಿಸಿಐ ನಿರ್ಧಾರವನ್ನು ಸ್ವಾಗತಿಸಿದರೆ ಪಾಕಿಸ್ತಾನದ ಅಭಿಮಾನಿಗಳು ಭಾರತ ಸರ್ಕಾರವನ್ನು ದೂಷಣೆ ಮಾಡಲು ಆರಂಭಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IPL 2024: RCBಗೆ ಎಂಟ್ರಿ ಕೊಡ್ತಾರಾ ರಚಿನ್‌ ರವೀಂದ್ರ ?

    IPL 2024: RCBಗೆ ಎಂಟ್ರಿ ಕೊಡ್ತಾರಾ ರಚಿನ್‌ ರವೀಂದ್ರ ?

    ಬೆಂಗಳೂರು:‌ ನಿನ್ನೆಯಿಂದಲೂ ಜಾಲತಾಣದಲ್ಲಿ ಬೆಂಗಳೂರು ಮೂಲದ ಕಿವೀಸ್‌ ಆಟಗಾರ ರಚಿನ್‌ ರವೀಂದ್ರ (Rachin Ravindra) ಅವರದ್ದೇ ಸುದ್ದಿ ಹರಿದಾಡುತ್ತಿದೆ. ನವೆಂಬರ್‌ 4 ರಂದು ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್‌ ಸೆಣಸಲಿದ್ದು, ಈ ಪಂದ್ಯದಲ್ಲಿ ರಚಿನ್‌ ಆಟವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ.

    ರಚಿನ್‌ ಬಗ್ಗೆ ಜಾಲತಾಣದಲ್ಲಿ ಕುತೂಹಲಕಾರಿ ಸಂಗತಿಗಳು ಹೊರಬೀಳುತ್ತಿರುವ ಹೊತ್ತಿನಲ್ಲೇ ಆರ್‌ಸಿಬಿ ಜೆರ್ಸಿಯಲ್ಲಿ ರಚಿನ್‌ ಕಾಣಿಸಿಕೊಂಡಿರುವ ಫೋಟೋ ವೈರಲ್‌ ಆಗಿದೆ. ಅಲ್ಲದೇ 2024ರ ಐಪಿಎಲ್‌ (IPL 2024) ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಪರ ರಚಿನ್‌ ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿಗಳೂ ಹರಿದಾಡುತ್ತಿದೆ. ಇದನ್ನೂ ಓದಿ: ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

    ಈಗಾಗಲೇ ವಿರಾಟ್‌ ಕೊಹ್ಲಿ (Virat Kohli), ಗ್ಲೇನ್‌ ಮ್ಯಾಕ್ಸ್‌ವೆಲ್‌, ಫಾಫ್‌ ಡು ಪ್ಲೆಸಿಸ್‌ ನಂತಹ ಸ್ಟಾರ್‌ ಆಟಗಾರರನ್ನು ಹೊಂದಿರುವ ಆರ್‌ಸಿಬಿ ಇದೀಗ ಬೆಂಗಳೂರು ಮೂಲದ ಹುಡುಗನ ಮೇಲೆ ಕಣ್ಣಿಟ್ಟಿದೆಯಾ? ಆರ್‌ಸಿಬಿ ಪರ ರಚಿನ್‌ ಕಣಕ್ಕಿಳಿಯುತ್ತಾರಾ? ಅನ್ನೋ ಪ್ರಶ್ನೆಗಳೂ ಎದ್ದಿವೆ. ಆದ್ರೆ ಈ ಬಗ್ಗೆ ಆರ್‌ಸಿಬಿ ಟೀಂ ಮ್ಯಾನೇಜ್‌ಮೆಂಟ್‌ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    ರಚಿನ್‌ ರವೀಂದ್ರ ಯಾರು?
    23 ವರ್ಷದ ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್ವೇರ್ ಎಂಜಿನೀಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್ವೇರ್ ಎಂಜಿನೀಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

    ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್ ಪರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದಾರೆ. 2016 ಮತ್ತು 2018ರಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ನ್ಯೂಜಿಲೆಂಡ್ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಅಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರ ಫಲವಾಗಿ 2021ರಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ ಇದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]