Tag: ICC world cup 2019

  • ಜಡೇಜಾಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ: ರಿವಾಬಾ ಜಡೇಜಾ

    ಜಡೇಜಾಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ: ರಿವಾಬಾ ಜಡೇಜಾ

    ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಸೆಮಿಪೈನಲ್‍ನಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ವಿರೋಚಿತ ಹೋರಾಟದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿತು. ಈ ಸೋಲಿನ ಆಘಾತದಿಂದ ಪತಿ ಹೊರ ಬಂದಿಲ್ಲ ಎಂದು ಜಡೇಜಾ ಪತ್ನಿ ರಿವಾಬಾ ಹೇಳಿದ್ದಾರೆ.

    ಸೋಲಿನ ವಿಚಾರವಾಗಿ ಮಾತನಾಡಿದ ರವೀಂದ್ರ ಜಡೇಜಾ, ನಾನು ವಿಕೆಟ್ ಒಪ್ಪಿಸಿ ಮೈದಾನದಿಂದ ಹೊರಬರದಿದ್ದರೆ ಗೆಲುವು ಸಾಧಿಸುತ್ತಿದ್ದೇವು. ಇನ್ನೇನು ಗೆಲುವು ಸಾಧಿಸುತ್ತೇವೆ ಎನ್ನುವ ಹಂತದಲ್ಲಿಯೇ ಸೋಲನುಭವಿಸಿದೇವು ಎಂದು ಹೇಳುತ್ತಲೇ ಇದ್ದರು. ಈ ಆಘಾತದಿಂದ ಅವರು ಇನ್ನೂ ಹೊರ ಬಂದಿಲ್ಲ. ಹೀಗಾಗಿ ಅವರಿಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ ಎಂದು ರಿವಾಬಾ ಜಡೇಜಾ ತಿಳಿಸಿದ್ದಾರೆ.

    ಪತಿ ಯಾವಾಗಲೂ ಸ್ಫೂರ್ತಿಯಿಂದ ಆಟವಾಗುತ್ತಾರೆ. ನೀವು ಅದನ್ನು ನೋಡಿರಬಹುದು. ಪಂದ್ಯಗಳಲ್ಲಿ ಆಲ್ ರೌಂಡರ್ ಆಗಿ ಮಿಂಚುತ್ತಾರೆ. 2013ರಲ್ಲಿ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲುವು ಸಾಧಿಸಿದಾಗ ಫೈನಲ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು ಎಂದು ರಿಬಾವಾ ಜಡೇಜಾ ನೆನೆದರು.

    ಈ ಹಿಂದೆ ಭಾವನತ್ಮಾಕವಾಗಿ ಟ್ವೀಟ್ ಮಾಡಿದ್ದ ರವೀಂದ್ರ ಜಡೇಜಾ, “ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ. ಅದನ್ನು ನಾನು ಎಂದಿಗೂ ಬಿಡುವುದಿಲ್ಲ. ನನ್ನ ಪ್ರೀತಿಯ ಮೂಲವಾದ ನನ್ನ ಅಭಿಮಾನಿಗಳಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ನನಗೆ ಸದಾ ಸ್ಫೂರ್ತಿದಾಯಕವಾಗಿರಿ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ನನ್ನ ಕೈಯಲ್ಲಿ ಅದಷ್ಟೂ ಅತ್ಯುತ್ತಮ ಆಟ ಆಡುತ್ತೇನೆ” ಎಂದು ಬರೆದುಕೊಂಡಿದ್ದರೆ.

    ಸೆಮಿಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಟವಾಡಿ ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡದತ್ತ ತಂದಿದ್ದರು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು. ಜಡೇಜಾ 39 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಗಳಿಂದ ಅರ್ಧ ಶತಕ ಪೂರ್ಣಗೊಳಿಸಿದರು. ಈ ಮೂಲಕ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ನಲ್ಲಿ ನಂ.8ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಅರ್ಧ ಶತಕ ಬ್ಯಾಟ್ಸ್ ಮನ್ ಸಿಡಿಸಿದ ಸಾಧನೆ ಮಾಡಿದರು. 5 ವರ್ಷಗಳ ಬಳಿಕ ಜಡೇಜಾ ಗಳಿಸಿದ ಏಕದಿನ ಅರ್ಧ ಶತಕ ಇದಾಗಿತ್ತು. ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್‍ಗೆ ವಿಕೆಟ್ ಒಪ್ಪಿಸಿದ್ದರು.

  • ಐಸ್‍ಲ್ಯಾಂಡ್ ಕ್ರಿಕೆಟಿನಿಂದ ಆಫರ್ ಬಂದ ಮರುದಿನ ರಾಯುಡು ನಿವೃತ್ತಿ

    ಐಸ್‍ಲ್ಯಾಂಡ್ ಕ್ರಿಕೆಟಿನಿಂದ ಆಫರ್ ಬಂದ ಮರುದಿನ ರಾಯುಡು ನಿವೃತ್ತಿ

    ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಆಡಲು ಅವಕಾಶ ಪಡೆಯುವಲ್ಲಿ ವಿಫಲರಾದ ಅಂಬಟಿ ರಾಯುಡು ಅವರಿಗೆ ಐಸ್‍ಲ್ಯಾಂಡ್ ಕ್ರಿಕೆಟ್ ಆಫರ್ ನೀಡಿದೆ.

    ಆಂಧ್ರಪ್ರದೇಶದ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಅಂಬಟಿ ರಾಯುಡು ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಟೀಂ ಇಂಡಿಯಾ 15ರ ಬಳಗದಲ್ಲಿ ರಾಯುಡು ಬದಲಿಗೆ ವಿಜಯ್ ಶಂಕರ್ ಅವರಿಗೆ ಸ್ಥಾನ ನೀಡಲಾಗಿತ್ತು. ಶಿಖರ್ ಧವನ್ ಹಾಗೂ ವಿಜಯ್ ಶಂಕರ್ ಗಾಯಗೊಂಡಾಗಲೂ ರಾಯುಡು ಅವರಿಗೆ ಬಿಸಿಸಿಐ ಮಣೆ ಹಾಕಲಿಲ್ಲ. ಈ ಮಧ್ಯೆ ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಅಂಬಟಿ ರಾಯುಡು ಅವರಿಗೆ ಭರ್ಜರಿ ಆಫರ್ ನೀಡಿದೆ.

    ವಿಶ್ವಕಪ್ ಟೂರ್ನಿಯಲ್ಲಿ ಬಿಸಿಸಿಐ ರಾಯುಡು ಅವರನ್ನು ಕಡೆಗಣಿಸಿದ್ದನ್ನು ಅವಕಾಶವಾಗಿ ಪಡೆದ ಐಸ್‍ಲ್ಯಾಂಡ್ ಆಫರ್ ನೀಡಿದೆ. ಈ ಕುರಿತು ಟ್ವೀಟ್ ಮಾಡಿ, ಕ್ರಿಕೆಟ್ ಅಭಿಮಾನಿಗಳ ಟೀಕೆಗೆ ಗುರಿಯಾಗಿದೆ. ಟ್ವೀಟ್ ಬೆನ್ನಲ್ಲೇ ರಾಯುಡು ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

    ಮಯಾಂಕ್ ಅಗರ್ವಾಲ್ 3 ವಿಕೆಟ್ ಹೊಂದಿದ್ದಾರೆ. ಹೀಗಾಗಿ ಅಂಬಟಿ ರಾಯುಡು ನೀವು 3ಡಿ ಗ್ಲಾಸ್ ಪಕ್ಕಕ್ಕೆ ಇರಿಸಿ. ಸಾಮಾನ್ಯ ಕನ್ನಡಕ ಬಳಸಿ ಈ ದಾಖಲೆಗಳನ್ನು ಓದಿ. ನಮ್ಮ ಜೊತೆ ಬಂದು ಕೈ ಜೋಡಿಸಿ. ನಾವು ನಿಮ್ಮನ್ನು ಇಷ್ಟಪಡುತ್ತೇವೆ ಎಂದು ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಟ್ವೀಟ್ ಮಾಡಿದೆ. ಟ್ವೀಟ್ ಜೊತೆಗೆ ಐಸ್‍ಲ್ಯಾಂಡ್ ಪೌರತ್ವ ಪಡೆಯಲು ಯಾವ ದಾಖಲೆಗಳನ್ನು ನೀಡಬೇಕು ಎಂದು ಕೂಡ ತಿಳಿಸಲಾಗಿದೆ.

    4ನೇ ಸ್ಥಾನಕ್ಕೆ ತ್ರಿ ಡೈಮೆನ್ಶನ್ ಪ್ಲೇಯರ್ ಅಗತ್ಯವಿತ್ತು. ಹೀಗಾಗಿ ಅಂಬಟಿ ರಾಯುಡು ಬದಲು ವಿಜಯ್ ಶಂಕರ್ ಗೆ ಸ್ಥಾನ ನೀಡಲಾಗಿತ್ತು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಪ್ರಸಾದ್ ಅವರ ಹೇಳಿಕೆ ರಾಯುಡು ಅವರನ್ನು ಕೆರಳಿಸಿತ್ತು. ಹೀಗಾಗಿ ರಾಯುಡು ‘3ಡಿ ಗ್ಲಾಸ್ (ತ್ರಿ ಡೈಮೆನ್ಶನ್) ಖರೀದಿಸಿ ವಿಶ್ವಕಪ್ ಪಂದ್ಯ ನೋಡುವುದಾಗಿ ಟ್ವೀಟ್ ಮಾಡಿದ್ದರು.

    ಅಂಬಾಟಿ ರಾಯುಡು ಟ್ವೀಟ್ ಸಖತ್ ಟ್ರೋಲ್ ಆಗಿತ್ತು. ಟೂರ್ನಿ ನಡುವೆ ವಿಜಯ್ ಶಂಕರ್ ಗಾಯಗೊಂಡಾಗ ರಾಯುಡು ಬದಲು ಮಯಾಂಕ್ ಅಗರ್ವಾಲ್‍ಗೆ ಅವಕಾಶ ನೀಡಲಾಯಿತು. ಈ ವೇಳೆ ಮತ್ತೆ ರಾಯುಡು 3ಡಿ ಗ್ಲಾಸ್ ವಿಚಾರ ಟ್ರೋಲ್ ಆಯಿತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಕೂಡ ಪರೋಕ್ಷವಾಗಿ ರಾಯುಡು ಕಾಲೆಳೆದಿದೆ.

    ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಜುಲೈ 2 ರಂದು ಟ್ವೀಟ್ ಮಾಡಿದ್ದು, ಇದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲೈ 3 ಮಧ್ಯಾಹ್ನದ ವೇಳೆಗೆ 402 ರೀ ಟ್ವೀಟ್ ಆಗಿದ್ದು, 1,400ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

    ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಈ ರೀತಿ ಟ್ವೀಟ್ ಮಾಡಬಾರದಿತ್ತು ಎಂದು ನೆಟ್ಟಿಗರು ಹೇಳಿದ್ದಾರೆ. ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ವಿದೇಶಿ ಆಟಗಾರರ ಕಾಲೆಳೆದಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಅಫ್ಘಾನಿಸ್ತಾನದ ಬೌಲರ್ ರಶೀದ್ ಖಾನ್ ಬಗ್ಗೆ ವ್ಯಂಗ್ಯವಾಡಿ, ಕ್ಷಮೆ ಕೇಳಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ 110 ರನ್ ಬಿಟ್ಟುಕೊಟ್ಟಿದ್ದರು. ಈ ಕುರಿತು ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದ ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ, ರಶೀದ್ ಖಾನ್ ಅಫ್ಘಾನಿಸ್ತಾನದ ಪರವಾಗಿ ಮೊದಲ ಶತಕ ಬಾರಿಸಿದ್ದಾರೆ ಎಂಬ ವಿಚಾರ ಈಗ ತಾನೇ ತಿಳಿಯಿತು. 56 ಎಸೆತಗಳಲ್ಲಿ 110 ರನ್‍ಗಳು! ಬೌಲರ್ ಒಬ್ಬರು ಇಷ್ಟು ಸ್ಕೋರ್ ಮಾಡಿದ್ದು ಇದೇ ಮೊದಲು. ಒಳ್ಳೆಯ ಬ್ಯಾಟಿಂಗ್ ಮಾಡಿದ್ದೀರಾ ಎಂದು ಹೇಳಿತ್ತು.

    ಐಸ್‍ಲ್ಯಾಂಡ್  ಕ್ರಿಕೆಟ್ ಮಂಡಳಿ ಟ್ವೀಟ್‍ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ದಿಗ್ಗಜ ಕ್ರಿಕೆಟಿಗರೂ ಕೂಡ ಅಸಮಾಧಾನ ಹೊರ ಹಾಕಿದ್ದರು. ಭಾರೀ ಟೀಕೆ ವ್ಯಕ್ತವಾಗಿದ್ದರಿಂದ ಐಸ್‍ಲೆಂಡ್ ಕ್ಷಮೆಯಾಚಿಸಿತ್ತು.

  • ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಶಮಿ

    ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಶಮಿ

    ಬರ್ಮಿಂಗ್ ಹ್ಯಾಮ್: ಟೀಂ ಇಂಡಿಯಾ ಬಲಗೈ ವೇಗಿ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ವಿಶ್ವಕಪ್ ಟೂರ್ನಿನಲ್ಲಿ ದಾಖಲೆ ಬರೆದಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳನ್ನು ಕಾಡಿದ್ದ ಬೈರ್‌ಸ್ಟೋವ್ ಹಾಗೂ ನಾಯಕ ಇಯಾನ್ ಮಾರ್ಗನ್ (1 ರನ್) ವಿಕೆಟ್ ಕೀಳುವ ಮೂಲಕ ಮೊಹಮ್ಮದ್ ಶಮಿ ಮಿಂಚಿದ್ದಾರೆ. ಅಲ್ಲದೇ ಇನ್ನಿಂಗ್ಸ್ ನ 44 ಓವರ್ ನ ಮೊದಲ ಎಸೆತದಲ್ಲಿ 44 ರನ್ ಗಳಿಸಿದ್ದ ಜೋ ರೂಟ್ ವಿಕೆಟ್ ಪಡೆದರು.

    ಅಂತಿಮ ಅಂತದಲ್ಲಿ ಬಲ್ಟರ್ (20 ರನ್) ಹಾಗೂ ವೋಕ್ಸ್ (7 ರನ್) ವಿಕೆಟ್ ಪಡೆದು ಇಂಗ್ಲೆಂಡ್ ರನ್ ವೇಗಕ್ಕೆ ಕಡಿವಾಣ ಹಾಕಿದರು. 10 ಓವರ್ ಬೌಲ್ ಮಾಡಿದ ಶಮಿ 5 ವಿಕೆಟ್ ಪಡೆದು 69 ರನ್ ಬಿಟ್ಟುಕೊಟ್ಟರು. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ 3 ಬಾರಿ 4 ಹಾಗೂ ಅದಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಸತತ 3 ಪಂದ್ಯಗಳಲ್ಲಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಉರುಳಿಸಿದ ಭಾರತದ ಮೊಟ್ಟ ಮೊದಲ ವೇಗಿ ಎನ್ನುವ ಹೆಗ್ಗಳಿಕೆಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. 2011ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ಶಾಹಿದ್ ಆಫ್ರಿದಿ ಈ ದಾಖಲೆ ಮಾಡಿದ್ದರು. ಹೀಗಾಗಿ ಸತತ 3 ಪಂದ್ಯಗಳಲ್ಲಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 2ನೇ ಬೌಲರ್ ಎನ್ನುವ ಖ್ಯಾತಿಗೂ ಶಮಿ ಪಾತ್ರರಾಗಿದ್ದಾರೆ.

    ಟೀಂ ಇಂಡಿಯಾ ಬಲಗೈ ವೇಗಿ ಭುವನೇಶ್ವರ್ ಕುಮಾರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅಫ್ಘಾನಿಸ್ತಾನ ವಿರುದ್ಧ ಪಂದ್ಯದಲ್ಲಿ ಭುವನೇಶ್ವರ್ ಸ್ಥಾನವನ್ನು ಮೊಹಮ್ಮದ್ ಶಮಿ ತುಂಬಿದರು. ದೊರೆತ ಅವಕಾಶವನ್ನು ಸಮರ್ಪಕ ಪ್ರದರ್ಶನ ನೀಡಿದ ಶಮಿ ಅಫ್ಘಾನಿಸ್ತಾನ ವಿರುದ್ಧ 4 ವಿಕೆಟ್, ವೆಸ್ಟ್ ಇಂಡೀಸ್ ವಿರುದ್ಧ 4 ವಿಕೆಟ್ ಹಾಗೂ ಭಾನುವಾರ ನಡೆದ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಆಡಿರುವ ಮೂರು ಪಂದ್ಯಗಳಲ್ಲಿ 13 ವಿಕೆಟ್ ಸಾಧನೆ ಮಾಡಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 10 ಪಂದ್ಯ ಆಡಿರುವ ಶಮಿ 30 ವಿಕೆಟ್ ಪಡೆದಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಅತಿ ವೇಗವಾಗಿ 30 ವಿಕೆಟ್ ಪಡೆದ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

    ಅಷ್ಟೇ ಅಲ್ಲದೆ ಶಮಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. 1987 ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಚೇತನ್ ಶರ್ಮಾ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ನ್ಯೂಜಿಲೆಂಡ್ ವಿರುದ್ಧ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಶರ್ಮಾ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. 32 ವರ್ಷಗಳ ಬಳಿಕ ಮತ್ತೆ ಮೊಹಮ್ಮದ್ ಶಮಿ ಹ್ಯಾಟ್ರಿಕ್ ಪಡೆದಿದ್ದಾರೆ. ಅಲ್ಲದೇ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಹ್ಯಾಟ್ರಿಕ್ ಸಾಧನೆ ಮಾಡಿದ 10ನೇ ಬೌಲರ್ ಕೂಡ ಆಗಿದ್ದಾರೆ.

  • ಟೀಂ ಇಂಡಿಯಾ ಗೆಲುವಿಗೆ ಪಾಕಿಸ್ತಾನಿಗಳ ಪ್ರಾರ್ಥನೆ!

    ಟೀಂ ಇಂಡಿಯಾ ಗೆಲುವಿಗೆ ಪಾಕಿಸ್ತಾನಿಗಳ ಪ್ರಾರ್ಥನೆ!

    – ಅಫ್ಘಾನ್ ವಿರುದ್ಧ ತಿಣುಕಾಡಿ ಗೆದ್ದ ಪಾಕ್

    ಬೆಂಗಳೂರು: ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಗೆಲುವಿನ ನಾಗಾಲೋಟ ಮುಂದುವರಿಸಿರುವ ಭಾರತ ಭಾನುವಾರ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ರಾಜಕೀಯ ಟೀಕೆಗೆ ಗುರಿಯಾಗಿರುವ ಕೇಸರಿ ಟೀ-ಶರ್ಟ್ ಧರಿಸಿ ಕೊಹ್ಲಿ ಪಡೆ ಮೈದಾನಕ್ಕೆ ಇಳಿಯಲಿದೆ.

    ನಂಬರ್ 4ನೇ ಕ್ರಮಾಂಕದಲ್ಲಿ ಆಲ್‍ರೌಂಡರ್ ವಿಜಯ್ ಶಂಕರ್ ವಿಫಲವಾಗುತ್ತಿರುವ ಕಾರಣ, ರಿಷಬ್ ಪಂಥ್‍ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತವರಿನಲ್ಲಿ ಇಂಗ್ಲೆಂಡ್ ಆಟ ಎಲ್ಲರ ಅಚ್ಚರಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಶನಿವಾರದ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಿಣುಕಾಡಿ ಗೆಲುವು ಸಾಧಿಸಿದೆ. ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ಸಿಡಿಸಿತ್ತು. ಈ ಗುರಿಯನ್ನು ತಲುಪಲು ಪಾಕಿಸ್ತಾನ ಪರದಾಡಿತು.

    ಈ ಮೂಲಕ ಪಾಕ್ ಸೆಮಿಫೈನಲ್ ಪ್ರವೇಶ ಮಾಡುವ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಆದರೆ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಮಾತ್ರ ಪಾಕ್ ಕನಸು ಈಡೇರಲಿದೆ.

    ವಿಚಿತ್ರವೆಂದರೆ ಇಂಗ್ಲೆಂಡ್ ವಿರುದ್ಧ ಭಾರತ ಗೆಲ್ಲಲಿ ಎಂದು ಬದ್ಧವೈರಿಯಾಗಿರುವ ಪಾಕಿಸ್ತಾನ ಪ್ರಾರ್ಥಿಸುತ್ತಿದೆ. ಭಾನುವಾರ ಇಂಗ್ಲೆಂಡ್ ಸೋತರೆ ಸೆಮಿಫೈನಲ್ ತಲುಪುವ ಪಾಕ್ ದಾರಿ ಸ್ವಲ್ಪ ಸರಳವಾಗಲಿದೆ ಎನ್ನುವುದು ಪಾಕಿಗಳ ಲೆಕ್ಕಾಚಾರ. ಜೊತೆಗೆ, ಇನ್ನುಳಿದಿರುವ ಶ್ರೀಲಂಕಾವನ್ನೂ ಮಣಿಸಲಿ ಅಂತಲೂ ಪ್ರಾರ್ಥಿಸುತ್ತಿದ್ದಾರೆ.

    ಪಾಕಿಸ್ತಾನ ಸೆಮಿಫೈನಲ್ಸ್ ನಿಂದ ಹೊರಗಟ್ಟಲು, ಉದ್ದೇಶಪೂರ್ವಕವಾಗಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ವಿರುದ್ಧ ಸೋಲಬಹುದು. ಟೀಂ ಇಂಡಿಯಾ ಯಾರಿಗೂ ಅರ್ಥವಾಗದ ರೀತಿ ಆಡುತ್ತಿದೆ. ಅಫ್ಘಾನಿಸ್ಥಾನದ ವಿರುದ್ಧವೂ ಉದ್ದೇಶಪೂರ್ವಕವಾಗಿ ಕಳಪೆಯಾಗಿ ಆಡಿತ್ತು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿಲ್ ಅಲಿ ಹೇಳಿಕೆ ನೀಡಿದ್ದಾರೆ. ಬಸಿಲ್ ಅಲಿ ಅವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

  • ಥರ್ಡ್ ಅಂಪೈರ್ ತೀರ್ಪು ನೋಡಿ ‘ಹಣೆ ಚಚ್ಚಿಕೊಂಡ’ ಹಿಟ್ ಮ್ಯಾನ್

    ಥರ್ಡ್ ಅಂಪೈರ್ ತೀರ್ಪು ನೋಡಿ ‘ಹಣೆ ಚಚ್ಚಿಕೊಂಡ’ ಹಿಟ್ ಮ್ಯಾನ್

    ಬೆಂಗಳೂರು: ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿದ ತೀರ್ಪನ್ನು ಹಿಟ್ ಮ್ಯಾನ್ ರೋಹಿತ್ ಶರ್ಮಾ ಕುಟುಕಿದ್ದಾರೆ.

    ಟ್ವೀಟ್ ಮಾಡಿ ಐಸಿಸಿ ಕಾಲೆಳೆದಿರುವ ರೋಹಿತ್ ಶರ್ಮಾ ಅವರು, ಚೆಂಡು ಹಾಗೂ ಬ್ಯಾಟ್ ಮಧ್ಯೆ ಇರುವ ಅಂತರನ್ನು ಫೋಟೋ ಮೂಲಕ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಹಣೆ ಬಡೆದುಕೊಳ್ಳುತ್ತಿರುವ ಹಾಗೂ ಕಣ್ಣುಗಳ ಇಮೋಜಿಯನ್ನು ಹಾಕಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸಚಿನ್, ಲಾರಾ ಹಿಂದಿಕ್ಕಿ ಕೊಹ್ಲಿ ವಿಶ್ವದಾಖಲೆ

    ವೆಸ್ಟ್ ವಿಂಡೀಸ್ ಬೌಲರ್ ಕೆಮರ್ ರೂಚ್ ಎಸೆದ ಟೀಂ ಇಂಡಿಯಾ ಇನ್ನಿಂಗ್ಸ್ ನ ಆರನೇ ಓವರ್ ನ ಅಂತಿಮ ಎಸೆತವನ್ನು ರೋಹಿತ್ ಶರ್ಮಾ ಎದುರಿಸಿದರು. ಈ ವೇಳೆ ಚಂಡು ಬ್ಯಾಟ್ ಹಾಗೂ ಪ್ಯಾಡ್ ಮಧ್ಯೆ ಸಾಗಿ ವಿಕೆಟ್ ಕೀಪರ್ ಶಾಯ್ ಹೋಪ್ ಕೈಸೇರಿತ್ತು. ಇದನ್ನೂ ಓದಿ: ವಿಶ್ವಕಪ್‍ನಲ್ಲಿ ಪಾಕಿಗೆ ಭಾರತ ಸಹಾಯ ಮಾಡಲಿ – ಅಕ್ತರ್ ಮನವಿ

    ಅಂಪೈರ್ ಔಟ್ ನೀಡದ ಹಿನ್ನೆಲೆಯಲ್ಲಿ ವಿಂಡೀಸ್ ಡಿಆರ್‍ಎಸ್ ಮೊರೆ ಹೋಗಿತ್ತು. ಡಿಆರ್‍ಎಸ್ ರಿವ್ಯೂ ಪರೀಶೀಲನೆ ವೇಳೆ ಬ್ಯಾಟ್ ಚೆಂಡು ತಾಗಿರಲಿಲ್ಲ. ಅಲ್ಟ್ರಾ ಎಡ್ಜ್ ನಲ್ಲಿ ಚೆಂಡ್ ಪ್ಯಾಡ್‍ಗೆ ತಗಲಿದ್ದನ್ನು ಗಮನಿಸಿದ ಮೂರನೇ ಅಂಪೈರ್ ಔಟ್ ತೀರ್ಪು ನೀಡುವಂತೆ ಸೂಚನೆ ನೀಡಿದ್ದರು.

    https://twitter.com/IamRs45Fc/status/1144189062284103680

    ಔಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ರೋಹಿತ್ ಶರ್ಮಾ ನಕ್ಕು ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು. ಆದರೆ ಥರ್ಡ್ ಅಂಪೈರ್ ಮೈಕಲ್ ಗೌಫ್ ವಿರುದ್ಧ ಕ್ರಿಕೆಟ್ ಅಭಿಮಾನಿಗಳು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಥರ್ಡ್ ಅಂಪೈರ್ ಗೆ ಕಣ್ಣು ಕಾಣಿಸುವುದಿಲ್ಲ. ಅವರು ಕುರುಡರಾಗಿದ್ದಾರೆ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಇದನ್ನೂ ಓದಿ: ವಿಶ್ವಕಪ್‍ನಲ್ಲಿ ಮಿಂಚುತ್ತಿರುವ ಶಮಿಗೆ `ಲಫಂಗ’ ಎಂದ ಪತ್ನಿ ಹಸೀನ್

    ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದಾಗ ಪತ್ನಿ ರಿತಿಕಾ ಸಿಂಗ್ ವಾಟ್ ಎಂದು ಹೇಳಿ ಅಸಮಾಧಾನ ಹೊರ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಆಟಗಾರರು ಶಿಸ್ತು ಉಲ್ಲಂಘಿಸಿದರೆ ಅವರ ವಿರುದ್ಧ ದಂಡ ಹಾಕಲಾಗುತ್ತದೆ. ಮೈದಾನದಲ್ಲಿ ಅಂಪೈರ್ ಗಳು ತಪ್ಪು ಮಾಡುತ್ತಾರೆ. ಅದನ್ನು ಅರ್ಥ ಮಾಡಿಕೊಳ್ಳಬಹುದು. ಥರ್ಡ್ ಅಂಪೈರ್ ತಪ್ಪು ತೀರ್ಪನ್ನು ಹೇಗೆ ಒಪ್ಪಿಕೊಳ್ಳುವುದು. ತಪ್ಪು ತೀರ್ಪು ನೀಡುವ ಅಂಪೈರ್ ಗಳಿಗೆ ಐಸಿಸಿ ಯಾಕೆ ದಂಡ ವಿಧಿಸುವುದಿಲ್ಲ ಎಂದು ಸರ್ ಜಡೇಜಾ ಫ್ಯಾನ್ ಅಸಮಾಧಾನ ಹೊರಹಾಕಿದ್ದಾರೆ.

    ಥರ್ಡ್ ಅಂಪೈರ್ ಮೈಕಲ್ ಗೋ ಇಂಗ್ಲೆಂಡ್ ಮೂಲದವರು. ಇದೊಂದು ಅತ್ಯಂತ ತಪ್ಪು ತೀರ್ಪು, ಥರ್ಡ್ ಅಂಪೈರ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ ಎಂದು ಕ್ರಿಕೆಟ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

  • 125 ರನ್‍ಗಳ ಭರ್ಜರಿ ಜಯ – 2ನೇ ಸ್ಥಾನಕ್ಕೆ ನೆಗೆದ ಭಾರತ

    125 ರನ್‍ಗಳ ಭರ್ಜರಿ ಜಯ – 2ನೇ ಸ್ಥಾನಕ್ಕೆ ನೆಗೆದ ಭಾರತ

    ಮ್ಯಾಂಚೆಸ್ಟರ್: ಬ್ಯಾಟಿಂಗ್, ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ 125 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

    269 ರನ್ ಗಳ ಗುರಿಯನ್ನು ಪಡೆದ ವಿಂಡೀಸ್ 34.2 ಓವರ್ ಗಳಲ್ಲಿ 143 ರನ್ ಗಳಿಗೆ ಆಲೌಟ್ ಆಯ್ತು. ಆಡಿರುವ ಆರು ಪಂದ್ಯಗಳಲ್ಲಿ ಐದು ಗೆಲುವು ಹಾಗೂ ಒಂದು ಡ್ರಾ ಫಲಿತಾಂಶದೊಂದಿಗೆ ಒಟ್ಟು 11 ಅಂಕಗಳನ್ನು ಕಲೆ ಹಾಕಿ, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಭಾರತ ನೆಗೆದಿದೆ. ಈ ಮೂಲಕ ಟೀಂ ಇಂಡಿಯಾ ಸೆಮಿಫೈನಲ್ ಹಾದಿ ಬಹುತೇಕ ಸುಗಮಗೊಂಡಿದೆ.

    ಏಳು ಪಂದ್ಯಗಳಲ್ಲಿ ಐದನೇ ಸೋಲು ಅನುಭವಿಸಿರುವ ವೆಸ್ಟ್ ಇಂಡೀಸ್ ನಿರ್ಗಮನದ ಹಾದಿ ಹಿಡಿದಿದೆ. ತಲಾ ಒಂದು ಗೆಲುವು ಹಾಗೂ ಡ್ರಾ ಫಲಿತಾಂಶ ದಾಖಲಿಸಿರುವ ವಿಂಡೀಸ್ ಮೂರು ಅಂಕಗಳೊಂದಿಗೆ ಎಂಟನೇಸ್ಥಾನದಲ್ಲಿದೆ.

    ಆರಂಭದಲ್ಲಿ ಶಮಿ ಆಘಾತ ನೀಡಿದರೆ ಮಧ್ಯಮ ಕ್ರಮಾಂಕದಲ್ಲಿ ಬುಮ್ರಾ ಎರಡು ಎಸೆತಗಳಲ್ಲಿ 2 ವಿಕೆಟ್ ಪಡೆಯುವ ಮೂಲಕ ಶಾಕ್ ನೀಡಿದರು. ಶಮಿ 4 ವಿಕೆಟ್ ಕಿತ್ತರೆ, ಬುಮ್ರಾ ಮತ್ತು ಚಹಲ್ ತಲಾ 2 ವಿಕೆಟ್, ಪಾಂಡ್ಯ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

    ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್‍ಗಳ ವೈಫಲ್ಯದ ನಡುವೆಯೂ ಕೊಹ್ಲಿ, ಧೋನಿ ಅರ್ಧಶತಕ, ಪಾಂಡ್ಯ, ರಾಹುಲ್ ಉತ್ತಮ ಆಟದಿಂದ ಭಾರತ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 268 ರನ್ ಗಳಿಸಿತ್ತು.

    38.2 ಓವರ್ಗಳಲ್ಲಿ 180 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡಾಗ ಭಾರತ 250 ರನ್‍ಗಳ ಗಡಿಯನ್ನು ದಾಟುವುದು ಅನುಮಾನವಾಗಿತ್ತು. ಆದರೆ ಪಾಂಡ್ಯ ಮತ್ತು ಧೋನಿ ಗಟ್ಟಿ ನಿಂತು ಆಡಿದ ಪರಿಣಾಮ ಭಾರತ ಉತ್ತಮ ಮೊತ್ತವನ್ನು ಪೇರಿಸಿತ್ತು.

    1 ಸಿಕ್ಸರ್, 1 ಬೌಂಡರಿ ಹೊಡೆದು ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ 18 ರನ್ ಗಳಿಸಿ ಔಟಾದರು. ಮೂರನೇ ಅಂಪೈರ್ ಈ ಔಟ್ ತೀರ್ಪು ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಎರಡನೇ ವಿಕೆಟಿಗೆ ರಾಹುಲ್ ಮತ್ತು ಕೊಹ್ಲಿ 69 ರನ್ ಜೊತೆಯಾಟವಾಡಿದರು. ರಾಹುಲ್ 48 ರನ್(64 ಎಸೆತ, 4 ಬೌಂಡರಿ) ಹೊಡೆದರೆ ಕೊಹ್ಲಿ 72 ರನ್( 82 ಎಸೆತ, 8 ಬೌಂಡರಿ) ಹೊಡೆದು ಔಟಾದರು.

    ನಂತರ ಬಂದ ವಿಜಯ್ ಶಂಕರ್ ಮತ್ತು ಕೇದಾರ್ ಜಾಧವ್ ಕ್ರಮವಾಗಿ 14, 7 ರನ್ ಗಳಿಸಿ ಪೆವಿಲಿಯನ್‍ಗೆ ನಡೆದರು. ಕೊನೆಯಲ್ಲಿ ಧೋನಿ ಮತ್ತು ಪಾಂಡ್ಯ ಬಿರುಸಿನ ಬ್ಯಾಟಿಂಗ್ ನಡೆಸಿ 6ನೇ ವಿಕೆಟಿಗೆ 60 ಎಸೆತಗಳಲ್ಲಿ 70 ರನ್ ಜೊತೆಯಾಟವಾಡಿದರು. ಪಾಂಡ್ಯ 46 ರನ್(38 ಎಸೆತ, 5 ಬೌಂಡರಿ) ಹೊಡೆದರೆ ಧೋನಿ 56 ರನ್(61 ಎಸೆತ,3 ಬೌಂಡರಿ, 2 ಸಿಕ್ಸರ್) ಸಿಡಿಸಿದರು. 50ನೇ ಓವರ್ನಲ್ಲಿ ಧೋನಿ 2 ಸಿಕ್ಸರ್, ಒಂದು ಬೌಂಡರಿ ಸಿಡಿಸಿ ರನ್ ಏರಿಸಿದ್ದರು.

    ರೋಚ್ ಮೂರು ವಿಕೆಟ್ ಪಡೆದರೆ, ಕೊಟ್ರೆಲ್ ಮತ್ತು ಹೋಲ್ಡರ್ ತಲಾ 2 ವಿಕೆಟ್ ಪಡೆದಿದ್ದರು. 72 ರನ್ ಹೊಡೆದ ಕೊಹ್ಲಿ ಪದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

  • ಕೊನೆಯ ಓವರ್‌ನಲ್ಲಿ ಧೋನಿ 2 ಸಿಕ್ಸ್, ವಿಂಡೀಸ್‍ಗೆ 269 ರನ್ ಗುರಿ

    ಕೊನೆಯ ಓವರ್‌ನಲ್ಲಿ ಧೋನಿ 2 ಸಿಕ್ಸ್, ವಿಂಡೀಸ್‍ಗೆ 269 ರನ್ ಗುರಿ

    ಮ್ಯಾಂಚೆಸ್ಟರ್: ವಿಶ್ವಕಪ್ ಕ್ರಿಕೆಟ್‍ನಲ್ಲಿ ವಿಂಡೀಸ್‍ಗೆ ಭಾರತ 269 ರನ್‍ಗಳ ಗುರಿಯನ್ನು ನೀಡಿದೆ.

    ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್‍ಗಳ ವೈಫಲ್ಯದ ನಡುವೆಯೂ ಕೊಹ್ಲಿ, ಧೋನಿ ಅರ್ಧಶತಕ, ಪಾಂಡ್ಯ, ರಾಹುಲ್ ಉತ್ತಮ ಆಟದಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 268 ರನ್ ಗಳಿಸಿತು. ಇದನ್ನೂ ಓದಿ: ಸಚಿನ್, ಲಾರಾ ಹಿಂದಿಕ್ಕಿ ಕೊಹ್ಲಿ ವಿಶ್ವದಾಖಲೆ

    38.2 ಓವರ್‌ಗಳಲ್ಲಿ 180 ರನ್‍ಗಳಿಗೆ 5 ವಿಕೆಟ್ ಕಳೆದುಕೊಂಡಾಗ ಭಾರತ 250 ರನ್‍ಗಳ ಗಡಿಯನ್ನು ದಾಟುವುದು ಅನುಮಾನವಾಗಿತ್ತು. ಆದರೆ ಪಾಂಡ್ಯ ಮತ್ತು ಧೋನಿ ಗಟ್ಟಿ ನಿಂತು ಆಡಿದ ಪರಿಣಾಮ ಭಾರತ ಉತ್ತಮ ಮೊತ್ತವನ್ನು ಪೇರಿಸಿದೆ.

    1 ಸಿಕ್ಸರ್, 1 ಬೌಂಡರಿ ಹೊಡೆದು ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ 18 ರನ್ ಗಳಿಸಿ ಔಟಾದರು. ಮೂರನೇ ಅಂಪೈರ್ ಈ ಔಟ್ ತೀರ್ಪು ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: 3ನೇ ಅಂಪೈರ್ ಬೇಡ, 4ನೇ ಅಂಪೈರ್ ಬೇಕು – ಐಸಿಸಿ ವಿರುದ್ಧ ನೆಟ್ಟಿಗರು ಕಿಡಿ

    ಎರಡನೇ ವಿಕೆಟಿಗೆ ರಾಹುಲ್ ಮತ್ತು ಕೊಹ್ಲಿ 69 ರನ್ ಜೊತೆಯಾಟವಾಡಿದರು. ರಾಹುಲ್ 48 ರನ್(64 ಎಸೆತ, 4 ಬೌಂಡರಿ) ಹೊಡೆದರೆ ಕೊಹ್ಲಿ 72 ರನ್( 82 ಎಸೆತ, 8 ಬೌಂಡರಿ) ಹೊಡೆದು ಔಟಾದರು.

    ನಂತರ ಬಂದ ವಿಜಯ್ ಶಂಕರ್ ಮತ್ತು ಕೇದಾರ್ ಜಾಧವ್ ಕ್ರಮವಾಗಿ 14, 7 ರನ್ ಗಳಿಸಿ ಪೆವಿಲಿಯನ್‍ಗೆ ನಡೆದರು. ಕೊನೆಯಲ್ಲಿ ಧೋನಿ ಮತ್ತು ಪಾಂಡ್ಯ ಬಿರುಸಿನ ಬ್ಯಾಟಿಂಗ್ ನಡೆಸಿ 6ನೇ ವಿಕೆಟಿಗೆ 60 ಎಸೆತಗಳಲ್ಲಿ 70 ರನ್ ಜೊತೆಯಾಟವಾಡಿದರು. ಪಾಂಡ್ಯ 46 ರನ್(38 ಎಸೆತ, 5 ಬೌಂಡರಿ) ಹೊಡೆದರೆ ಧೋನಿ 56 ರನ್(61 ಎಸೆತ,3 ಬೌಂಡರಿ, 2 ಸಿಕ್ಸರ್) ಸಿಡಿಸಿದರು. 50ನೇ ಓವರ್‍ನಲ್ಲಿ ಧೋನಿ 2 ಸಿಕ್ಸರ್, ಒಂದು ಬೌಂಡರಿ ಸಿಡಿಸಿ ರನ್ ಏರಿಸಿದರು.

    ರೋಚ್ ಮೂರು ವಿಕೆಟ್ ಪಡೆದರೆ, ಕೊಟ್ರೆಲ್ ಮತ್ತು ಹೋಲ್ಡರ್ ತಲಾ 2 ವಿಕೆಟ್ ಪಡೆದರು.

  • 3ನೇ ಅಂಪೈರ್ ಬೇಡ, 4ನೇ ಅಂಪೈರ್ ಬೇಕು – ಐಸಿಸಿ ವಿರುದ್ಧ ನೆಟ್ಟಿಗರು ಕಿಡಿ

    3ನೇ ಅಂಪೈರ್ ಬೇಡ, 4ನೇ ಅಂಪೈರ್ ಬೇಕು – ಐಸಿಸಿ ವಿರುದ್ಧ ನೆಟ್ಟಿಗರು ಕಿಡಿ

    – 3ನೇ ಅಂಪೈರ್‌ಗೂ ದಂಡ ವಿಧಿಸಿ
    – ತೀರ್ಪು ನೋಡಿ ನಕ್ಕ ರೋಹಿತ್ ಶರ್ಮಾ

    ಮ್ಯಾಂಚೆಸ್ಟರ್: ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಅವರ ಔಟ್ ತೀರ್ಪು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ವೆಸ್ಟ್ ವಿಂಡೀಸ್ ಬೌಲರ್ ಕೆಮರ್ ರೂಚ್ ಎಸೆದ ಟೀಂ ಇಂಡಿಯಾ ಇನ್ನಿಂಗ್ಸ್ ನ ಆರನೇ ಓವರ್ ನ ಅಂತಿಮ ಎಸೆತವನ್ನು ರೋಹಿತ್ ಶರ್ಮಾ ಎದುರಿಸಿದರು. ಈ ವೇಳೆ ಚಂಡು ಬ್ಯಾಟ್ ಹಾಗೂ ಪ್ಯಾಡ್ ಮಧ್ಯೆ ಸಾಗಿ ವಿಕೆಟ್ ಕೀಪರ್ ಶಾಯ್ ಹೋಪ್ ಕೈಸೇರಿತ್ತು.

    https://twitter.com/Ro45FC/status/1144193118725496832

    ಅಂಪೈರ್ ಔಟ್ ನೀಡದ ಹಿನ್ನೆಲೆಯಲ್ಲಿ ವಿಂಡೀಸ್ ಡಿಆರ್‍ಎಸ್ ಮೊರೆ ಹೋಗಿತ್ತು. ಡಿಆರ್‍ಎಸ್ ರಿವ್ಯೂ ಪರೀಶೀಲನೆ ವೇಳೆ ಬ್ಯಾಟ್ ಚೆಂಡು ತಾಗಿರಲಿಲ್ಲ. ಅಲ್ಟ್ರಾ ಎಡ್ಜ್ ನಲ್ಲಿ ಚೆಂಡ್ ಪ್ಯಾಡ್‍ಗೆ ತಗಲಿದ್ದನ್ನು ಗಮನಿಸಿದ ಮೂರನೇ ಅಂಪೈರ್ ಔಟ್ ತೀರ್ಪು ನೀಡುವಂತೆ ಸೂಚನೆ ನೀಡಿದ್ದಾರೆ.

    ಔಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ರೋಹಿತ್ ಶರ್ಮಾ ನಕ್ಕು ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದ್ದಾರೆ. ಥರ್ಡ್ ಅಂಪೈರ್ ಮೈಕಲ್ ಗೌಫ್ ವಿರುದ್ಧ ಕ್ರಿಕೆಟ್ ಅಭಿಮಾನಿಗಳು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಥರ್ಡ್ ಅಂಪೈರ್ ಗೆ ಕಣ್ಣು ಕಾಣಿಸುವುದಿಲ್ಲ. ಅವರು ಕುರುಡರಾಗಿದ್ದಾರೆ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

    ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದಾಗ ಪತ್ನಿ ರಿತಿಕಾ ಸಿಂಗ್ ವಾಟ್ ಎಂದು ಹೇಳಿ ಅಸಮಾಧಾನ ಹೊರ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    https://twitter.com/IamRs45Fc/status/1144189062284103680

    ಆಟಗಾರರು ಶಿಸ್ತು ಉಲ್ಲಂಘಿಸಿದರೆ ಅವರ ವಿರುದ್ಧ ದಂಡ ಹಾಕಲಾಗುತ್ತದೆ. ಮೈದಾನದಲ್ಲಿ ಅಂಪೈರ್ ಗಳು ತಪ್ಪು ಮಾಡುತ್ತಾರೆ. ಅದನ್ನು ಅರ್ಥ ಮಾಡಿಕೊಳ್ಳಬಹುದು. ಥರ್ಡ್ ಅಂಪೈರ್ ತಪ್ಪು ತೀರ್ಪನ್ನು ಹೇಗೆ ಒಪ್ಪಿಕೊಳ್ಳುವುದು. ತಪ್ಪು ತೀರ್ಪು ನೀಡುವ ಅಂಪೈರ್ ಗಳಿಗೆ ಐಸಿಸಿ ಯಾಕೆ ದಂಡ ವಿಧಿಸುವುದಿಲ್ಲ ಎಂದು ಸರ್ ಜಡೇಜಾ ಫ್ಯಾನ್ ಅಸಮಾಧಾನ ಹೊರಹಾಕಿದ್ದಾರೆ.

    ಥರ್ಡ್ ಅಂಪೈರ್ ಮೈಕಲ್ ಗೋ ಇಂಗ್ಲೆಂಡ್ ಮೂಲದವರು. ಇದೊಂದು ಅತ್ಯಂತ ತಪ್ಪು ತೀರ್ಪು, ಥರ್ಡ್ ಅಂಪೈರ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ ಎಂದು ಕ್ರಿಕೆಟ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

  • ಬುಮ್ರಾ ಕಮಾಲ್, ಶಮಿ ಹ್ಯಾಟ್ರಿಕ್ – ಭಾರತಕ್ಕೆ 11 ರನ್ ರೋಚಕ ಜಯ

    ಬುಮ್ರಾ ಕಮಾಲ್, ಶಮಿ ಹ್ಯಾಟ್ರಿಕ್ – ಭಾರತಕ್ಕೆ 11 ರನ್ ರೋಚಕ ಜಯ

    ಸೌತಾಂಪ್ಟನ್: ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ 11 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಈ ಮೂಲಕ 2019ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನಾಲ್ಕನೇ ಜಯ ಸಾಧಿಸಿದೆ.

    ಟಾಸ್ ಗೆದ್ದ ಭಾರತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತ್ತು. 225 ರನ್ ಗಳ ಗುರಿಯನ್ನು ಪಡೆದ ಅಫ್ಘಾನಿಸ್ತಾನ 49.5 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಈ ಮೂಲಕ 2019ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಗೆಲುವಿನ ಕನಸು ಕೈ ತಪ್ಪಿಸಿಕೊಂಡಿದೆ.

    ಕೊನೆಯ ಓವರ್ ನಲ್ಲಿ ಅಫ್ಘಾನಿಸ್ತಾನಕ್ಕೆ ಗೆಲ್ಲಲು 16 ರನ್ ಬೇಕಿತ್ತು. ಈ ಓವರ್ ನಲ್ಲಿ ಶಮಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಈ ಮೂಲಕ ಈ ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಸಾಧನೆಗೈದ ಮೊದಲ ಬೌಲರ್ ಎನಿಸಿಕೊಂಡರು.

    46ನೇ ಓವರ್ ನಲ್ಲಿ ಬುಮ್ರಾ 7 ರನ್ ನೀಡಿದರೆ, 49 ನೇ ಓವರ್ ನಲ್ಲಿ 5 ರನ್ ನೀಡಿ ರನ್ ವೇಗಕ್ಕೆ ಕಡಿವಾಣ ಹಾಕಿದರು. ಅಂತಿಮವಾಗಿ 10 ಓವರ್ ಎಸೆದ ಬುಮ್ರಾ 1 ಮೇಡನ್ ಓವರ್ 39 ರನ್ ನೀಡಿ 2 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    ಅಫ್ಘಾನ್‍ನ ಮೊಹಮ್ಮದ್ ನಬಿ 52 ರನ್ (55 ಎಸೆತ, 4 ಬೌಂಡರಿ,1 ಸಿಕ್ಸರ್), ರಹ್ಮತ್ ಶಾಹ 36 ರನ್ (63 ಎಸೆತ, 3 ಬೌಂಡರಿ) ನಾಯಕ ನೈಬ್ 27 ರನ್ (42 ಎಸೆತ, 2 ಬೌಂಡರಿ) ಗಳಿಸಿ ಔಟಾದರು.

    ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಬ್ಯಾಟಿಂಗ್ ಪಡೆ ಅಫ್ಘಾನ್ ಯುವ ಬೌಲರ್ ಮುಜೀಬ್ ಉರ್ ರೆಹಮಾನ್, ರಶೀದ್ ಖಾನ್ ಬೌಲಿಂಗ್ ಎದುರು ರನ್ ಗಳಿಸಿಲು ಪರದಾಡಿತ್ತು. ಪಾಕ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ನಾಯಕ ಕೊಹ್ಲಿ ಹಾಗೂ ಕೆಎಲ್ ರಾಹುಲ್ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದರು. ಪರಿಣಾಮ ಯಾವುದೇ ಹಂತದಲ್ಲಿ ಟೀಂ ಇಂಡಿಯಾ ರನ್ ರೇಟ್ ಹೆಚ್ಚಿಸಲು ಸಾಧ್ಯವಾಗಲೇ ಇಲ್ಲ.

    53 ಎಸೆತಗಳಲ್ಲಿ 2 ಬೌಂಡರಿ ನೆರವಿನಿಂದ 30 ರನ್ ಸಿಡಿಸಿ ಉತ್ತಮವಾಗಿ ಆಡುತ್ತಿದ್ದ ಕೆಎಲ್ ರಾಹುಲ್ ಮೊಹಮ್ಮದ್ ನಬಿಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದ್ದರು. ಆ ಬಳಿಕ ಬಂದ ವಿಜಯ್ ಶಂಕರ್ ಕೂಡ 41 ಎಸೆತಗಳಲ್ಲಿ 21 ರನ್ ಗಳಿಸಿ ನಿರ್ಗಮಿಸಿದ್ದರು. ಕೊಹ್ಲಿ, ರಾಹುಲ್ ಜೋಡಿ 52 ರನ್ ಜೊತೆಯಾಟ ನೀಡಿದರೆ, ಕೊಹ್ಲಿ ಮತ್ತು ವಿಜಯ್ ಶಂಕರ್ 58 ರನ್ ಜೊತೆಯಾಟವಾಡಿದ್ದರು. 5 ಬೌಂಡರಿ ಸಹಾಯದಿಂದ 63 ಎಸೆತಗಳಲ್ಲಿ 67 ರನ್ ಗಳಿಸಿದ್ದ ಕೊಹ್ಲಿ ವಿಕೆಟ್ ಪಡೆದ ಮೊಹಮ್ಮದ್ ನಬಿ ಭಾರತಕ್ಕೆ ರನ್ ವೇಗ ಹೆಚ್ಚಿಸಿಕೊಳ್ಳದಂತೆ ನೋಡಿಕೊಂಡಿದ್ದರು.

    ಈ ಹಂತದಲ್ಲಿ ಒಂದಾದ ಧೋನಿ, ಕೇದಾರ್ ಜಾಧವ್ ಕುಸಿಯುತ್ತಿದ್ದ ಟೀಂ ಇಂಡಿಯಾಗೆ ಚೇತರಿಕೆ ನೀಡಲು ಮುಂದಾಗಿದ್ದರು. ಈ ಜೋಡಿ 5ನೇ ವಿಕೆಟ್‍ಗೆ 57 ರನ್ ಜೊತೆಯಾಟ ನೀಡಿತ್ತು. ಭಾರತ 40 ಓವರ್ ಗಳ ಅಂತ್ಯಕ್ಕೆ ಕೇವಲ 157 ರನ್ ಗಳಷ್ಟೇ ಪೇರಿಸಿತ್ತು. ಇತ್ತ ಕೇದಾರ್ ಜಾಧವ್ 68 ಎಸೆತಗಳಲ್ಲಿ 52 ರನ್ ಗಳಿಸಿ ತಂಡ ಮೊತ್ತ 200 ರನ್ ಗಡಿ ದಾಟುವಂತೆ ಮಾಡಿದ್ದರು. ಅಂತಿಮ ಹಂತದಲ್ಲಿ ಬಿರುಸಿನ ಆಟಕ್ಕೆ ಮುಂದಾಗಿ ದಿಢೀರ್ ಕುಸಿತ ಕಂಡ ಟೀಂ ಇಂಡಿಯಾ 41 ರನ್ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡಿತ್ತು.

    ಅಫ್ಘಾನಿಸ್ತಾನ ಪರ ಶಿಸ್ತುಬದ್ಧ ಬೌಲಿಂಗ್ ನಡೆಸಿದ ಮೊಹಮ್ಮದ್ ನಬಿ, ಗುನ್ಬದೀನ್ ನೈಬ್ ತಲಾ 2 ವಿಕೆಟ್ ಪಡೆದರೆ ರಶಿದ್ ಖಾನ್, ರಹಮಾತ್ ಶಾ, ರೆಹಮಾನ್, ಅಲಮ್ ತಲಾ ಒಂದು ವಿಕೆಟ್ ಪಡೆದಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮ್ಯಾಚ್ ನೋಡಲು ಬಂದ ವಿಜಯ್ ಮಲ್ಯ

    ಮ್ಯಾಚ್ ನೋಡಲು ಬಂದ ವಿಜಯ್ ಮಲ್ಯ

    ಟೌಂಟನ್: ಲಂಡನ್‍ನ ಕೆನ್ನಿಂಗ್ಟನ್ ಓವಲ್‍ನಲ್ಲಿ ಇಂದು ನಡೆಯುತ್ತಿರುವ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಪಂದ್ಯವನ್ನು ನೋಡಲು ಉದ್ಯಮಿ ವಿಜಯ್ ಮಲ್ಯ ಆಗಮಿಸಿದ್ದಾರೆ.

    ವಿಜಯ್ ಮಲ್ಯ ಕ್ರೀಡಾಂಗಣದ ಗೇಟ್ ಬಳಿ ಟಿಕೆಟ್ ನೀಡಿ ಒಳ ಹೋಗುತ್ತಿದ್ದವೇಳೆ ಮಾಧ್ಯಮಗಳು ಪ್ರಶ್ನೆ ಕೇಳುತ್ತಿದ್ದರೂ ಮೌನವಾಗಿದ್ದು ಸ್ವಲ್ಪ ಸಮಯದ ಬಳಿಕ, ನಾನು ಮ್ಯಾಚ್ ನೋಡಲು ಬಂದಿದ್ದೇನೆ ಎಂದು ಕ್ರಿಡಾಂಗಣದ ಒಳಗೆ ಹೋದರು.

    ಐಸಿಸಿ 2019 ಏಕದಿನ ವಿಶ್ವಕಪ್‍ನಲ್ಲಿ ಟೀ ಇಂಡಿಯಾವು ತನ್ನ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಕೊಹ್ಲಿ ಪಡೆ 27 ಓವರ್ ನಲ್ಲಿ ಒಂದು ವಿಕೇಟ್ ನಷ್ಟಕ್ಕೆ 153 ರನ್ ಕಲೆ ಹಾಕಿದೆ.

    ಮದ್ಯದ ದೊರೆ ವಿಜಯ್ ಮಲ್ಯ ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದಾರೆ. ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ. ಆದರೆ ಈ ಸಂಬಂಧ ವಿಚಾರಣೆ ಮುಂದೂಡಲಾಗಿದೆ.

    ಕಳೆದ ವರ್ಷ ಡಿಸೆಂಬರಿನಲ್ಲಿ ಈ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಮಲ್ಯ ಗಡಿಪಾರಿಗೆ ಅನುಮತಿ ನೀಡಿತ್ತು. ಅಲ್ಲದೇ ಗಡಿಪಾರು ಆದೇಶ ನೀಡುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ನ್ಯಾಯಾಲಯದ ತೀರ್ಪಿಗೆ ಸಂಸತ್ ಒಪ್ಪಿಗೆ ಮಾತ್ರ ಬಾಕಿ ಇತ್ತು. ಆದರೆ ಮಲ್ಯ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ ಬ್ಯಾಂಕ್ ಸಾಲ ಮರು ಪಾವತಿ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

    ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶದಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಅಕ್ರಮ ಹಣ ವರ್ಗಾವಣೆ ತಡೆ ನ್ಯಾಯಾಲಯ (ಪಿಎಂಎಲ್‍ಎ) ಘೋಷಿಸಿದೆ. ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ ಜಾರಿಗೆ ಬಂದ ಬಳಿಕ ಘೋಷಣೆಯಾದ ಮೊದಲ ಉದ್ಯಮಿ ವಿಜಯ್ ಮಲ್ಯ ಆಗಿದ್ದಾರೆ.

    ಸಾಲ ತೆಗೆದುಕೊಂಡು ಮರು ಪಾವತಿಸದೇ ವಿದೇಶದಲ್ಲಿ ನೆಲೆಸಿರುವ ವಿಜಯ್ ಮಲ್ಯರನ್ನ ಆರ್ಥಿಕ ಅಪರಾಧಿ ಎಂದು ಘೋಷಿಸಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ 2018, ನವೆಂಬರ್ ನಲ್ಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಇಡಿ ಮತ್ತು ಸಿಬಿಐ ಸುಳ್ಳು ಆರೋಪ ಮಾಡುತ್ತಿದ್ದು, ಸಾಲ ಮರುಪಾವತಿಸಲು ನ್ಯಾಯಾಲಯ ಅವಕಾಶ ನೀಡಬೇಕೆಂದು ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯ ವಿಜಯ್ ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಕೋರ್ಟ್ 2019 ಜನವರಿ 1ರಂದು ತೀರ್ಪು ನೀಡಿತ್ತು.