Tag: ICC

  • ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಕೊಹ್ಲಿಗೆ ದಂಡ

    ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಕೊಹ್ಲಿಗೆ ದಂಡ

    ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನ ಮೂರನೇ ದಿನ ಅಂಗಳದಲ್ಲಿ ಅನುಚಿತ ವರ್ತನೆ ತೋರಿದ್ದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ವಿಧಿಸಿದೆ.

    ಆಫ್ರಿಕಾದ ಎರಡನೇ ಇನ್ನಿಂಗ್ಸ್ ಮ 25ನೇ ಓವರ್ ನಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕೆ ಪಂದ್ಯದ 25% ರಷ್ಟು ದಂಡ ವಿಧಿಸಿರುವುದಾಗಿ ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಈ ಸ್ಪೆಷಲ್ ರಿಂಗ್ ಗಾಗಿ 3 ತಿಂಗಳು ಅಲೆದಾಡಿದ್ರಂತೆ ಕೊಹ್ಲಿ! ಇದರ ಬೆಲೆ ಎಷ್ಟು ಗೊತ್ತಾ?

    ಆಗಿದ್ದು ಏನು?
    ದ.ಆಫ್ರಿಕಾ ದ್ವಿತೀಯ ಇನಿಂಗ್ಸ್ ಆಡುತ್ತಿದ್ದಾಗ ಮಳೆ ಬಂದು ಕೆಲ ಕಾಲ ಪಂದ್ಯ ಸ್ಥಗಿತಗೊಂಡಿತ್ತು. ಮತ್ತೆ ಪಂದ್ಯ ಆರಂಭವಾಗಿ 5 ಓವರ್ ಮುಗಿದಾಗ ಅಂಪಾಯರ್ ಗಳು ಮಂದ ಬೆಳಕಿನ ಕಾರಣ ನೀಡಿ ದಿನದಾಟ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡ ವಿರಾಟ್ ಕೊಹ್ಲಿ ಬಾಲ್ ಅನ್ನು ಜೋರಾಗಿ ಪಿಚ್ ಗೆ ಎಸೆದು ಅಂಪೈರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

    ಐಸಿಸಿ ನೀತಿ ಸಂಹಿತೆಯ 2.1.1 ಉಲ್ಲಂಘನೆಯಾಗಿದ್ದು, ಈ ಉಲ್ಲಂಘನೆಗೆ ಗರಿಷ್ಟ 50% ದಂಡವನ್ನು ವಿಧಿಸಬಹುದಾಗಿದೆ. ಇದನ್ನೂ ಓದಿ: ಕೊಹ್ಲಿ 17ರನ್ ಹೊಡೆದಿದ್ರೆ ಸಚಿನ್ ದಾಖಲೆಯೂ ಬ್ರೇಕ್ ಆಗ್ತಿತ್ತು!

  • ಬಿಸಿಸಿಐ ಜೊತೆ ಕಾನೂನು ಸಮರ: 471 ಕೋಟಿ ರೂ. ಪರಿಹಾರ ಕೇಳಿದ ಪಿಸಿಬಿ

    ಬಿಸಿಸಿಐ ಜೊತೆ ಕಾನೂನು ಸಮರ: 471 ಕೋಟಿ ರೂ. ಪರಿಹಾರ ಕೇಳಿದ ಪಿಸಿಬಿ

    ನವದೆಹಲಿ: ಪಾಕ್ ಕ್ರಿಕೆಟ್ ಮಂಡಳಿ(ಪಿಸಿಬಿ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿರುದ್ಧ ಕಾನೂನು ಸಮರ ಆರಂಭಿಸಿದ್ದು 70 ದಶಲಕ್ಷ ಡಾಲರ್(ಅಂದಾಜು 471 ಕೋಟಿ ರೂ.) ಪರಿಹಾರ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

    2014 ರಲ್ಲಿ ಬಿಸಿಸಿಐ ಪಾಕ್ ನೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಲು ಒಪ್ಪಂದಕ್ಕೆ ಸಹಿ ಮಾಡಿತ್ತು. ಇದರಂತೆ ಭಾರತ 2014 ಹಾಗೂ 2015 ಅವಧಿಯಲ್ಲಿ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಬಿಸಿಸಿಐಗೆ ಭಾರತ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಪಾಕ್ ಪ್ರವಾಸವನ್ನು ಕೈಗೊಂಡಿರಲಿಲ್ಲ.

    ಈ ಕುರಿತು ಪಾಕ್ ಕ್ರಿಕೆಟ್ ಮಂಡಳಿ ತನ್ನ ವಕೀಲರ ಮೂಲಕ ಐಸಿಸಿಯಲ್ಲಿ ನೋಟಿಸ್ ನೀಡಿದೆ. ಈ ನೋಟಿಸನ್ನು ಐಸಿಸಿ ವಿವಾದ ಪರಿಹಾರ ಮಾಡುವ ಸಮಿತಿಯ ಅಧ್ಯಕ್ಷರಿಗೆ ಕಳುಹಿಸಲಾಗಿದೆ ಎಂದು ಐಸಿಸಿಯ ವಕ್ತಾರರು ಗುರುವಾರ ಹೇಳಿದ್ದಾರೆ.

    2014ರ ಫ್ಯೂಚರ್ ಟೂರ್ಸ್ ಆಂಡ್ ಪ್ರೋಗ್ರಾಂ(ಎಫ್‍ಟಿಪಿ) ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ 6 ಕ್ರಿಕೆಟ್ ಸರಣಿ ನಡೆಯಬೇಕು. ಆದರೆ ಇಲ್ಲಿಯವರೆಗೆ ಯಾವುದೇ ಸರಣಿ ನಡೆಯದ ಕಾರಣ ನಮಗೆ 70 ದಶಲಕ್ಷ ಡಾಲರ್ ನಷ್ಟವಾಗಿದೆ. ಒಪ್ಪಂದ ಉಲ್ಲಂಘನೆಯಾಗಿರುವ ಕುರಿತು ನಾವು ಐಸಿಸಿಗೆ ಅರ್ಜಿ ಸಲ್ಲಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ನಡೆಯುವ ಸರಣಿಯಲ್ಲೂ ಭಾರತ ಭಾಗವಹಿಸಬೇಕಾಗಿತ್ತು. 2008 ನಂತರ ಬಿಸಿಸಿಐ ಯಾವುದೇ ಕಾರಣ ನೀಡದೆ ನಮ್ಮೊಂದಿಗೆ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸಿಲ್ಲ. ಆದರೆ ಐಸಿಸಿ ನಡೆಸುವ ಎಲ್ಲಾ ಸರಣಿಯಲ್ಲೂ ನಮ್ಮ ವಿರುದ್ಧ ಆಡಿದೆ ಎಂದು ಪಾಕ್ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರು ಹೇಳಿದ್ದಾರೆ.

    ಪಾಕಿಸ್ತಾನದ ಉಗ್ರಗಾಮಿಗಳು 2018 ನವೆಂಬರ್ 26ರಂದು ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಉಭಯ ದೇಶಗಳ ನಡುವಿನ ಕ್ರಿಕೆಟ್ ಸರಣಿಗೆ ಬ್ರೇಕ್ ಬಿದ್ದಿತ್ತು. ಇದಾದ ಬಳಿಕ 2012 ರಲ್ಲಿ ಎರಡು ಟಿ20 ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಪಾಕ್ ಭಾರತಕ್ಕೆ ಆಗಮಿಸಿತ್ತು. ಈ ಸರಣಿಯ ಬಳಿಕ ಇಲ್ಲಿಯವರೆಗೆ ಭಾರತ ಪಾಕ್ ಮಧ್ಯೆ ಯಾವುದೇ ಸರಣಿ ನಡೆದಿಲ್ಲ.

    2017ರಲ್ಲಿ ಇಂಗ್ಲೆಂಡ್‍ನಲ್ಲಿ ಆಯೋಜನೆಗೊಂಡಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಭಾರತ ಹಾಗೂ ಪಾಕ್ ಎರಡು ಬಾರಿ ಮುಖಾಮುಖಿಯಾಗಿದೆ. ಮೊದಲ ಪಂದ್ಯದಲ್ಲಿ ಭಾರತ ಜಯಗಳಿಸಿದರೆ, ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಸೋಲು ಪಡೆದಿತ್ತು.

    ಭಾರತ ಪಾಕ್ ಸರಣಿ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ, ಪಾಕ್ ಹಾಗೂ ಭಾರತ ನಡುವೆ ಕ್ರಿಕೆಟ್ ಸರಣಿ ಕೇವಲ ಕ್ರಿಕೆಟ್ ಸರಣಿ ಮಾತ್ರವಲ್ಲ ಅದಕ್ಕಿಂತಲೂ ಹೆಚ್ಚು. ಈ ಕುರಿತು ಅನುಮತಿ ನೀಡುವ ನಿಟ್ಟಿನಲ್ಲಿ ಸರ್ಕಾರವು ಉತ್ತಮ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದ್ದರು.

    ಅಲ್ಲದೇ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ಪ್ರತಿಕ್ರಿಯೆ ನೀಡಿ ಭಾರತ ಪಾಕ್ ಕ್ರಿಕೆಟ್ ಸರಣಿ ಆಯೋಜಿಸುವುದನ್ನು ರಾಜಕೀಯಗೊಳಿಸಲಾಗುತ್ತಿದೆ. ದೇಶದ ಭಕ್ತಿಯ ಅರ್ಥವನ್ನು ಈ ರೀತಿ ಕಿರಿದಾಗಿಸಬಾರದು. ಪಾಕ್ ವಿರುದ್ಧದ ಸರಣಿಗೆ ನನ್ನ ಬೆಂಬಲವಿದೆ ಎಂದು ಅಭಿಪ್ರಾಯ ಪಟ್ಟಿದ್ದರು.

    ಸರ್ಕಾರ ಅನುಮತಿ ನೀಡದ್ದು ಯಾಕೆ?
    ಪಂಜಾಬ್‍ನ ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ, ಕಾಶ್ಮೀರ ಉರಿ ಸೇನಾ ಕಚೇರಿ ಮೇಲೆ ಉಗ್ರರ ದಾಳಿ ಆ ಬಳಿಕ ಸೇನೆಯ ಸರ್ಜಿಕಲ್ ಸ್ಟ್ರೈಕ್ ನಿಂದಾಗಿ ಭಾರತ ಪಾಕಿಸ್ತಾನದ ಸಂಬಂಧ ಹದಗೆಟ್ಟಿದೆ. 2014ರ ಫ್ಯೂಚರ್ ಟೂರ್ಸ್ ಆಂಡ್ ಪ್ರೋಗ್ರಾಂ(ಎಫ್‍ಟಿಪಿ) ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಯಬೇಕು. ಆದರೆ ಉಗ್ರರ ದಾಳಿ ಮತ್ತು ಗಡಿಯಲ್ಲಿನ ಅಪ್ರಚೋದಿತ ದಾಳಿಯಿಂದ ಭಾರತ ಸರ್ಕಾರ ಸರಣಿ ಆಡಲು ಬಿಸಿಸಿಐಗೆ ಅನುಮತಿ ನೀಡಿಲ್ಲ. 2016ರಲ್ಲಿ ದುಬೈನಲ್ಲಿ ಸರಣಿ ಆಡಲು ಬಿಸಿಸಿಐ ಉತ್ಸುಕವಾಗಿದ್ದು ಈ ಸಂಬಂಧ ಅನುಮತಿ ನೀಡುವಂತೆ ಗೃಹ ಸಚಿವಾಲಯಕ್ಕೆ ಪತ್ರ ಬರೆದಿತ್ತು.

    2016ರಲ್ಲಿ ಯುಎಇಯಲ್ಲಿ ಸರಣಿ ನಡೆಸಲು ಬಂದಿದ್ದ ಪ್ರಸ್ತಾಪವನ್ನು ಬಿಸಿಸಿಐ ತಿರಸ್ಕರಿಸಿತ್ತು. ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಕ್ರಿಕೆಟ್ ಸರಣಿ ನಡೆಸುವಂತೆ ಬಹಳಷ್ಟು ಮಾತುಕತೆ ನಡೆದಿದ್ದರೂ ಯಾವುದೇ ಫಲಪ್ರದವಾಗಿರಲಿಲ್ಲ.

  • ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ನರ್ ಅಪ್: ಟೀಂ ಇಂಡಿಯಾದ ಆಟಗಾರರಿಗೆ ಸಿಕ್ಕಿದ ನಗದು ಬಹುಮಾನ ಎಷ್ಟು?

    ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ನರ್ ಅಪ್: ಟೀಂ ಇಂಡಿಯಾದ ಆಟಗಾರರಿಗೆ ಸಿಕ್ಕಿದ ನಗದು ಬಹುಮಾನ ಎಷ್ಟು?

    ಮುಂಬೈ: ಐಸಿಸಿ ಚಾಂಪಿಯನ್ ಟ್ರೋಫಿಯಲ್ಲಿ ಪಾಕಿಸ್ತಾನದ ವಿರುದ್ಧ ಸೋತು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿದ್ದ ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 38.67 ಲಕ್ಷ ರೂ. ನಗದು ಬಹುಮಾನ ನೀಡಿದೆ.

    ಬಿಸಿಸಿಐ ತನ್ನ ವೆಬ್‍ಸೈಟ್ ನಲ್ಲಿ 15 ಆಟಗಾರರಿಗೆ ನೀಡಿದ ನಗದು ಬಹುಮಾನದ ಮೊತ್ತದ ಮಾಹಿತಿಯನ್ನು ಪ್ರಕಟಿಸಿದೆ. ಅಕ್ಟೋಬರ್ 18, 2017 ರಿಂದ ಜನವರಿ 17,2018 ರ ಅವಧಿಯಲ್ಲಿ ಟೀಂ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕೋಚ್ ರವಿಶಾಸ್ತ್ರಿ ಅವರಿಗೆ 2 ಕೋಟಿ ರೂ. ವೇತನವನ್ನು ನೀಡಲಾಗಿದೆ.

    ಇಂಗ್ಲೆಡ್ ನ ಓವಲ್ ಕ್ರೀಡಾಂಗಣದಲ್ಲಿ ಜೂನ್ 18ರಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕ್ ವಿರುದ್ಧ 180 ರನ್ ಗಳ ಅಂತರದಿಂದ ಸೋತಿತ್ತು. ಈ ಮೂಲಕ ಪಾಕಿಸ್ತಾನ ತನ್ನ ಚೊಚ್ಚಲ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

    ಐಸಿಸಿ ನೀಡಿದ ಬಹುಮಾನ ಎಷ್ಟು?
    ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ಪಾಕ್ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಕ್ಕಿದೆ. ಈ ಟೂರ್ನಿಗೆ ಐಸಿಸಿ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ಬಹುಮಾನವನ್ನು ತಂಡಗಳಿಗೆ ನೀಡಿತ್ತು. ದ್ವಿತೀಯ ಸ್ಥಾನಿ ಭಾರತ ತಂಡಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.) ನಗದು ಬಹುಮಾನ ಸಿಕ್ಕಿತ್ತು.

    ಸೆಮಿಫೈನಲ್‍ನಲ್ಲಿ ಸೋತ ಎರಡೂ ತಂಡಗಳಿಗೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದೆ. ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆದ ಎರಡು ತಂಡಕ್ಕೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ತಂಡಕ್ಕೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ದೊರೆತಿದೆ.

    2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿತ್ತು. ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿತ್ತು. ಜೂನ್ 1ರಿಂದ ಜೂನ್ 18 ರವರೆಗೆ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆದಿತ್ತು.

    2013ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.

     

  • ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಾಕಿ ಟಾಕಿ ಬಳಸಿದ ಕೊಹ್ಲಿ – ಐಸಿಸಿಯಿಂದ ಕ್ಲೀನ್ ಚಿಟ್

    ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಾಕಿ ಟಾಕಿ ಬಳಸಿದ ಕೊಹ್ಲಿ – ಐಸಿಸಿಯಿಂದ ಕ್ಲೀನ್ ಚಿಟ್

    ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೀಂ ಇಂಡಿಯಾದ ಮೊದಲ ಟಿ20 ಪಂದ್ಯವನ್ನು ನೀವು ನಿನ್ನೆ ನೋಡಿದ್ರಾ..? ನೀವು ನಿನ್ನೆಯ ಮ್ಯಾಚ್ ಕಂಪ್ಲೀಟ್ ಆಗಿ ನೋಡಿದ್ರೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಾಕಿ ಟಾಕಿ ಬಳಸಿದ್ದನ್ನು ನೋಡಿರುತ್ತೀರಿ. ಟಿವಿಯಲ್ಲಿ ಈ ದೃಶ್ಯಾವಳಿಗಳು ಬರುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ವಾಕಿ ಟಾಕಿ ಬಳಕೆ ಬಗ್ಗೆ ಭಾರೀ ಚರ್ಚೆಗಳೆಲ್ಲಾ ನಡೆಯಿತು. ಕೊನೆಗೆ ಇಂದು ಐಸಿಸಿ ಅಧಿಕೃತವಾಗಿ ವಿರಾಟ್ ಕೊಹ್ಲಿ ವಾಕಿ ಟಾಕಿ ಬಳಸಿ ಯಾವುದೇ ತಪ್ಪು ಮಾಡಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ.

    ಆಗಿದ್ದೇನು?: ನಿನ್ನೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯ ನಡೆಯುತ್ತಿತ್ತು. ಟಾಸ್ ಸೋತು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಭರ್ಜರಿಯಾಗಿ ಬ್ಯಾಟ್ ಮಾಡುತ್ತಿದ್ದರು. 14.4ನೇ ಓವರ್ ಆಗುತ್ತಿದ್ದಂತೆ ರೋಹಿತ್ ಶರ್ಮಾ ಬೌಂಡರಿ ಬಾರಿಸಿದರು. ಈ ವೇಳೆ ಟಿವಿ ಕ್ಯಾಮರಾಗಳು ಟೀಂ ಇಂಡಿಯಾಗೆ ಮೀಸಲಾಗಿಟ್ಟಿದ್ದ ಡಗೌಟ್ ತೋರಿಸಿದವು. ಈ ವೇಳೆ ಕೊಹ್ಲಿ ವಾಕಿ ಟಾಕಿಯಲ್ಲಿ ಮಾತನಾಡುತ್ತಿದ್ದರು. ನೇರಪ್ರಸಾರದಲ್ಲಿ ಈ ದೃಶ್ಯ ಬರುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲಾಯ್ತು. ವಾಕಿ ಟಾಕಿ ಬಳಸಿ ಕೊಹ್ಲಿ ಐಸಿಸಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದವು. ಈ ಹಿನ್ನೆಲೆಯಲ್ಲಿ ಇಂದು ಐಸಿಸಿ ವಿರಾಟ್ ಕೊಹ್ಲಿಗೆ ಕ್ಲೀನ್ ಚಿಟ್ ನೀಡಿದೆ.

    ಸಾಮಾನ್ಯವಾಗಿ ಡಗೌಟ್ ಹಾಗೂ ಡ್ರೆಸ್ಸಿಂಗ್ ರೂಂನಲ್ಲಿರುವವರ ಸಂವಹನಕ್ಕಾಗಿ ವಾಕಿ ಟಾಕಿ ಬಳಸಲಾಗುತ್ತದೆ. ಆದರೆ ವಿರಾಟ್ ಕೊಹ್ಲಿ ವಾಕಿ ಟಾಕಿ ಬಳಸುವುದಕ್ಕೂ ಮುನ್ನ ಅನುಮತಿ ಪಡೆದಿದ್ದರು ಎಂದು ಹೆಸರು ಹೇಳಲಿಚ್ಛಿಸದ ಐಸಿಸಿ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಕ್ರೀಡಾಂಗಣದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ಭದ್ರತಾ ಘಟಕದ ವ್ಯವಸ್ಥಾಪಕರಿಂದ ಅನುಮತಿ ಪಡೆದಿದ್ದರು ಎಂದೂ ಅವರು ಹೇಳಿದ್ದಾರೆ.

    ನಿನ್ನೆ ಪಂದ್ಯ ಮುಗಿಯುತ್ತಿದ್ದಂತೆಯೇ ವಾಕಿ ಟಾಕಿ ಬಳಸಿ ಕೊಹ್ಲಿ ಐಸಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಬಂದಿದ್ದವು. ಪಂದ್ಯದ ವೇಳೆ ಆಟಗಾರರು, ತಂಡದ ಇತರೆ ಸಿಬ್ಬಂದಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿರುತ್ತಾರೆ. ಹೀಗಾಗಿ ಐಸಿಸಿ ನಿಯಮಗಳನ್ವಯ ವಾಕಿ ಟಾಕಿ ಬಳಸಲು ಅವಕಾಶವಿದೆ.

    ಕೊಹ್ಲಿ ನಾಯಕತ್ವದ ಭಾರತ ತಂಡವು ಮೊದಲ ಟಿ20 ಪಂದ್ಯದಲ್ಲಿ 53 ರನ್‍ಗಳ ಗೆಲುವನ್ನು ಪಡೆಯುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

  • ಗೆದ್ದಿದ್ದು ಟೀಂ ಇಂಡಿಯಾ, ನಂ.1 ಆಗಿದ್ದು ಪಾಕಿಸ್ತಾನ!

    ಗೆದ್ದಿದ್ದು ಟೀಂ ಇಂಡಿಯಾ, ನಂ.1 ಆಗಿದ್ದು ಪಾಕಿಸ್ತಾನ!

    ದುಬೈ: ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಗೆದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಈಗ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ.

    ನವದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತವು 53 ರನ್‍ಗಳ ಗೆಲುವು ಪಡೆದುಕೊಂಡಿತು. ಇದರಿಂದ ನಂ.1 ಸ್ಥಾನದಲ್ಲಿದ್ದ ನ್ಯೂಜಿಲೆಂಡ್ 2ನೇ ಸ್ಥಾನಕ್ಕೆ ಕುಸಿದಿದೆ. ಪ್ರಸ್ತುತ ಭಾರತ ತಂಡವು 116 ಅಂಕಗಳೊಂದಿಗೆ ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದುಕೊಂಡಿದೆ.

    ಈ ಹಿಂದೆ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಆಡಿದ್ದ 5 ಪಂದ್ಯಗಳಲ್ಲಿಯೂ ಸೋತಿತ್ತು. ಈಗ ಮೊದಲ ಪಂದ್ಯವನ್ನು ಗೆಲ್ಲುವ ಮೊದಲ ಗೆಲುವನ್ನು ಪಡೆದುಕೊಂಡು 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿದೆ.

    ಭಾರತದ ವಿರುದ್ಧದ ಮೊದಲ ಪಂದ್ಯದಲ್ಲಿ ಸೋಲನ್ನು ಪಡೆಯುವ ಮೂಲಕ ನ್ಯೂಜಿಲೆಂಡ್ ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 121 ಅಂಕಗಳನ್ನು ಪಡೆದುಕೊಂಡಿದೆ. ಇದರಿಂದ ಪಾಕ್ ತಂಡವು 124 ಅಂಕಗಳನ್ನು ಪಡೆಯುವ ಮೂಲಕ ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಪಡೆದುಕೊಂಡಿದೆ.

    ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಭಾರತ ಕ್ಲೀನ್ ಸ್ವಿಪ್ ಮಾಡಿದರೂ ಸಹ 122 ಅಂಕಗಳನ್ನು ಪಡೆದು 2ನೇ ಸ್ಥಾನಕ್ಕೆ ತೃಪ್ತಿಪಡಬೇಕಾಗುತ್ತದೆ. ಐಸಿಸಿ ಟಿ20 ಪಂದ್ಯಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಆಫ್ರಿಕಾ, ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳು ಕ್ರಮವಾಗಿ 6, 7 ಮತ್ತು 8 ನೇ ಸ್ಥಾನವನ್ನು ಪಡೆದುಕೊಂಡಿದೆ.

     

     

     

  • ಫಸ್ಟ್ ಟೈಂ, ಪುರುಷರ ಕ್ರಿಕೆಟ್‍ಗೆ ಮಹಿಳಾ ಅಂಪೈರ್!

    ಫಸ್ಟ್ ಟೈಂ, ಪುರುಷರ ಕ್ರಿಕೆಟ್‍ಗೆ ಮಹಿಳಾ ಅಂಪೈರ್!

    ಸಿಡ್ನಿ: ಐಸಿಸಿ ಇತ್ತೀಚೆಗೆ ಹಲವು ಬದಲಾವಣೆಗಳನ್ನು ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕ್ರಿಕೆಟ್‍ನಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯ ಸ್ಥಾನಮಾನ ನೀಡುವ ದೃಷ್ಟಿಯಿಂದ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಮಹಿಳೆಯೊಬ್ಬರು ಪುರುಷರ ಪಂದ್ಯಗಳಲ್ಲಿ ಅಂಪೈರಿಂಗ್ ಮಾಡಲು ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ.

    ಹೌದು. ಕ್ರಿಕೆಟ್ ಜಗತ್ತಿನಲ್ಲಿ ಇಂತಹದ್ದೊಂದು ಇತಿಹಾಸ ನಿರ್ಮಾಣವಾಗಿದೆ. ಆಸ್ಟ್ರೇಲಿಯಾ ಮೂಲದ 29 ವರ್ಷದ ಕ್ಲೇರ್ ಪೊಲೊಸಾಕ್ ಆಯ್ಕೆಯಾಗುವ ಮೂಲಕ ಪುರುಷರ ಕ್ರಿಕೆಟ್‍ಗೆ ಅಂಪೈರ್ ಆದ ವಿಶ್ವದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

                       

    ಆಸ್ಟ್ರೇಲಿಯಾದ ಹಸರ್ಟ್ ವಿಲ್ಲೆ ಓವಲ್‍ನಲ್ಲಿ ನಡೆಯಲಿರುವ ಪುರುಷರ ಪ್ರಥಮ ದರ್ಜೆ ಪಂದ್ಯದಲ್ಲಿ ಮಹಿಳಾ ಅಂಪೈರ್ ಕ್ಲೇರ್ ಪೊಲೊಸಾಕ್ ಕಾಣಿಸಿಕೊಳ್ಳಲಿದ್ದಾರೆ. ಅಕ್ಟೋಬರ್ 8ರಂದು ಭಾನುವಾರ ನಡೆಯಲಿರುವ ನ್ಯೂ ಸೌತ್ ವೆಲ್ಸ್ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾ ಇಲೆವನ್ ನಡುವಿನ ಏಕದಿನ ಪಂದ್ಯದಲ್ಲಿ ಪೊಲೊಸಾಕ್ ಅಂಪೈರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

    ಈ ಬಗ್ಗೆ ಸಿಡ್ನಿಯಲ್ಲಿ ಮಾತನಾಡಿದ ಪೊಲೊಸಾಕ್, ನನಗೆ 29 ವರ್ಷ ವಯಸ್ಸಾಗಿದ್ದು ಈವರೆಗೂ ಯಾವುದೇ ಹಂತದ ಕ್ರಿಕೆಟ್ ಆಡಿಲ್ಲ. ಆದರೆ ಪಂದ್ಯಗಳನ್ನು ಕುತೂಹಲದಿಂದ ವಿಕ್ಷಣೆ ಮಾಡುತ್ತಿದ್ದೆ. ಇದರಿಂದ ನನ್ನ ತಂದೆ ಗೊಲ್ಬರ್ನ್‍ನಲ್ಲಿ ಇರುವ ಅಂಪೈರ್ ಕೋರ್ಸ್‍ಗೆ ಸೇರಿಸಿದರು. ಅಲ್ಲದೇ ಕೆಲವು ಬಾರಿ ಅಂಪೈರ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದೆ. ಉತ್ಸಾಹ ಕಳೆದುಕೊಳ್ಳದೆ ಅಂತಿಮವಾಗಿ ಅಂತಾರಾಷ್ಟ್ರೀಯ ಪಂದ್ಯಗಳಿಗೆ ತೀರ್ಪುಗಾರ್ತಿಯಾಗಿ ಆಯ್ಕೆಯಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

                          

    ನಾನು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಅಂಪೈರ್ ಆಗಬೇಕು ಎಂಬ ಮಹಾದಾಸೆಯನ್ನು ಹೊಂದಿದ್ದೆ. ಇದೀಗ ಅಂತಾರಾಷ್ಟ್ರೀಯ ಪುರುಷರ ಕ್ರಿಕೆಟ್ ಪಂದ್ಯದಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.

    ಕ್ಲೇರ್ ಈ ಹಿಂದೆ ಕೆಲ ಪ್ರಾದೇಶಿಕ ಪಂದ್ಯಗಳಿಗೆ ಅಂಪೈರ್ ಆಗಿದ್ದು ಬಿಟ್ಟರೆ ನಂತರ ಕ್ಲಬ್ ಹಂತದ ಕ್ರಿಕೆಟ್‍ಗೆ ಅಂಪೈರ್ ಆಗಿದ್ದರು. ತದನಂತರ ಅಂತಾರಾಷ್ಟ್ರೀಯಾ ಮಹಿಳಾ ಪಂದ್ಯಗಳಿಗೆ ಪೊಲೊಸಾಕ್ ಆಯ್ಕೆಯಾಗಿ 2016ರ ಐಸಿಸಿ ಮಹಿಳಾ ಟಿ-20 ವಿಶ್ವಕಪ್‍ನಲ್ಲಿ, 2017ರ ಐಸಿಸಿ ಮಹಿಳಾ ಎಕದಿನ ವಿಶ್ವಕಪ್‍ನಲ್ಲಿ ತಿರ್ಪುಗಾರರಾಗಿ ಕೆಲಸ ಮಾಡಿದ್ದಾರೆ.

    ಕ್ಲೇರ್ ಸಾಲಿನಲ್ಲಿ ನ್ಯೂಜಿಲೆಂಡ್‍ನ ಕೆಥಿ ಕ್ರಾಸ್, ವೆಸ್ಟ್ ಇಂಡೀಸ್ ಜಾಕ್ವೇಲಿನ್ ಮತ್ತು ಇಂಗ್ಲೆಂಡ್‍ನ ಸ್ಯೂ ರೆಡ್ಮಂಡ್ ಇವರುಗಳು ಇದ್ದಾರೆ. ಅಲ್ಲದೇ ಕಿರಿಯ ವಯಸ್ಸಿಗೆ ಕ್ಲೇರ್ ಇಂತಹ ಸಾಧನೆ ಮಾಡಿದ್ದಾರೆ. ಈ ಹಿಂದೆ ಪೊಲೊಸಾಕ್ ಕೂಡ ಸಣ್ಣ ಸಣ್ಣ ಪಂದ್ಯಗಳಲ್ಲಿ ಗುರುತಿಸಿಕೊಂಡವರು. ಉತ್ತಮ ಪರಿಶ್ರಮದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ಸಿಕ್ಕಿದೆ ಎಂದು ಆಸ್ಟ್ರೇಲಿಯಾ ಸಿಇಓ ಜೇಮ್ಸ್ ಸುತರ್‍ಲೆಂಡ್ ಅಭಿನಂದನೆ ಸಲ್ಲಿಸಿದ್ದಾರೆ.

  • ಭಾರತಕ್ಕೆ 7 ವಿಕೆಟ್‍ಗಳ ಭರ್ಜರಿ ಜಯ: ಮತ್ತೆ  ಸಿಕ್ತು ನಂಬರ್ 1 ಪಟ್ಟ

    ಭಾರತಕ್ಕೆ 7 ವಿಕೆಟ್‍ಗಳ ಭರ್ಜರಿ ಜಯ: ಮತ್ತೆ ಸಿಕ್ತು ನಂಬರ್ 1 ಪಟ್ಟ

    ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದೆ. ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಇದೇ ಮೊದಲ ಬಾರಿಗೆ ಸರಣಿಯನ್ನು ಜಯಗಳಿಸಿದೆ.

    ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ 42.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿ ವಿಜಯದ ನಗೆ ಬೀರಿತು.

    ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಅಜಿಂಕ್ಯಾ ರಹಾನೆ ಮೊದಲ ವಿಕೆಟ್ ಗೆ 22.3 ಓವರ್ ಗಳಲ್ಲಿ 124 ರನ್ ಜೊತೆಯಾಟವಾಡಿದರು. ರಹಾನೆ 61 ರನ್(74 ಎಸೆತ, 7 ಬೌಂಡರಿ) ಗಳಿಸಿದ್ದಾಗ ಎಲ್‍ಬಿ ಬಲಿಯಾದರು. ನಂತರ ಬಂದ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಜೊತೆಗೂಡಿ ಎರಡನೇ ವಿಕೆಟ್ ಗೆ 99 ರನ್ ಗಳ ಜೊತೆಯಾಟವಾಡಿದರು. ತಂಡದ ಮೊತ್ತ 223 ಆಗಿದ್ದಾಗ ಕೊಹ್ಲಿ 39 ರನ್(55 ಎಸೆತ, 2 ಬೌಂಡರಿ) ಗಳಿಸಿದ್ದಾಗ ಕ್ಯಾಚ್ ನೀಡಿ ಔಟಾದರು.

    94 ಎಸೆತದಲ್ಲಿ 14ನೇ ಶತಕ ಪೂರ್ಣಗೊಳಿಸಿದ ರೋಹಿತ್ ಶರ್ಮಾ 125 ರನ್(109 ಎಸೆತ, 11 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಔಟಾದರು. ಕೇದಾರ್ ಜಾದವ್ ಅಜೇಯ 5 ರನ್, ಮನೀಷ್ ಪಾಂಡೆ ಅಜೇಯ 11ರನ್ ಗಳಿಸಿದರು.

    ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರವಾಗಿ ಡೇವಿಡ್ ವಾರ್ನರ್ 53 ರನ್(62 ಎಸೆತ, 5 ಬೌಂಡರಿ) ಸ್ಟೊಯಿನ್ಸ್ 46 ರನ್(63 ಎಸೆತ, 4 ಬೌಂಡರಿ 1 ಸಿಕ್ಸರ್) ಹೊಡೆದು ಔಟಾದರು.

    ಅಕ್ಷರ್ ಪಟೇಲ್ ಮೂರು ವಿಕೆಟ್ ಪಡೆದರೆ, ಬೂಮ್ರಾ 2 ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಕೇದಾರ್ ಜಾದವ್ ತಲಾ ಒಂದೊಂದು ವಿಕೆಟ್ ಕಿತ್ತರು. ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಹಾರ್ದಿಕ್ ಪಾಂಡ್ಯ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

    ಈ ಸರಣಿಗೂ ಮುನ್ನ ಒಟ್ಟು 7 ಬಾರಿ ಭಾರತ-ಆಸೀಸ್ 5 ಅಥವಾ 5ಕ್ಕೂ ಹೆಚ್ಚು ಪಂದ್ಯಗಳ ಅಟವಾಡಿದ್ದು, ಇದರಲ್ಲಿ 2 ಬಾರಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 2 ಬಾರಿ 3-2 ಅಂತರದಿಂದ ಸೋಲಿಸಿತ್ತು. 1986ರಲ್ಲಿ ಮೊದಲ ಬಾರಿ ಹಾಗೂ 2013ರಲ್ಲಿ 2ನೇ ಬಾರಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

    ಮತ್ತೆ ನಂಬರ್ 1 ಪಟ್ಟ: ಇಂದಿನ ಪಂದ್ಯದಲ್ಲಿ ಭಾರತ ಗೆದ್ದ ಹಿನ್ನೆಲೆಯಲ್ಲಿ ಮತ್ತೆ ಐಸಿಸಿ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೆ ಏರಿದೆ. ಸೆಪ್ಟೆಂಬರ್ 24ರಂದು ಇಂದೋರ್ ನಲ್ಲಿ ನಡೆದ ಪಂದ್ಯದ ಬಳಿಕ ಟೀಂ ಇಂಡಿಯಾ ನಂಬರ್ 1 ಪಟ್ಟಕ್ಕೇರಿತ್ತು. ಆದರೆ 4ನೇ ಪಂದ್ಯವನ್ನು ಸೋತ ಹಿನ್ನೆಲೆಯಲ್ಲಿ ನಂ.2ಕ್ಕೆ ಇಳಿದಿತ್ತು. ಈ ಪಂದ್ಯಕ್ಕೂ ಮುನ್ನಾ ದಕ್ಷಿಣ ಆಫ್ರಿಕಾ 119 ಅಂಕಗಳ ಜೊತೆ ನಂ.1 ಸ್ಥಾನದಲ್ಲಿತ್ತು. ಸಮಾನವಾದ 119 ಅಂಕಗಳೊಂದಿಗೆ ಟೀಂ ಇಂಡಿಯಾ 2ನೇ ಸ್ಥಾನದಲ್ಲಿತ್ತು. ಆದರೆ ಇಂದು ಪಂದ್ಯ ಗೆದ್ದ ಹಿನ್ನೆಲೆಯಲ್ಲಿ ಭಾರತದ ಅಂಕ 120ಕ್ಕೆ ಏರಿಕೆಯಾಗಿದ್ದು, ಈ ಮೂಲಕ ಮತ್ತೆ ನಂಬರ್ 1 ಪಟ್ಟಕ್ಕೆ ಏರಿದೆ.

     

  • ಬಾಲ್ ಇದೆ ಎಂದು ಸುಮ್ನೆ ಥ್ರೋ ಮಾಡಿದ್ದಕ್ಕೆ ಬಿತ್ತು ಭಾರೀ ದಂಡ

    ಬಾಲ್ ಇದೆ ಎಂದು ಸುಮ್ನೆ ಥ್ರೋ ಮಾಡಿದ್ದಕ್ಕೆ ಬಿತ್ತು ಭಾರೀ ದಂಡ

    ಬ್ರಿಸ್ಬೆನ್: ಗುರುವಾರ ಇಂಟರ್‍ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಕ್ರಿಕೆಟ್ ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿತ್ತು. ನಿಯಮ ಜಾರಿ ಮಾಡಿ 24 ಗಂಟೆಯೊಳಗೆ ಆಸ್ಟ್ರೇಲಿಯಾದಲ್ಲಿ ಕ್ಲಬ್ ಕ್ರಿಕೆಟ್ ಆಟಗಾರರೊಬ್ಬರು ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಲಾಗಿದೆ.

     ಹೌದು. ಆಸ್ಟ್ರೇಲಿಯಾದ ಕ್ಲಬ್ ಕ್ರಿಕೆಟ್‍ನಲ್ಲಿ ಕ್ವೀನ್ಸ್ ಲ್ಯಾಂಡ್ ಬುಲ್ಸ್ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ಎಲೆವನ್ ತಂಡಗಳ ಮಧ್ಯೆ ಜೆಎಲ್‍ಟಿ ಕಪ್‍ನ ಏಕದಿನ ಪಂದ್ಯ ನಡೆಯುತ್ತಿತ್ತು. 26ನೇ ಓವರ್ ನ ಮೊದಲ ಎಸೆತವನ್ನು ಆಸ್ಟ್ರೇಲಿಯಾ ಎಲೆವನ್ ಆಟಗಾರ ಪರಮ್ ಉಪ್ಪಲ್ ಆಫ್ ಸೈಡ್ ಹೊಡೆದರು.

    ಬಾಲ್ ಫಿಲ್ಡ್ ಮಾಡುತ್ತಿದ್ದ ಲ್ಯಾಬಸ್ಚ್ಯಾನ್ ಕೈಗೆ ಸಿಕ್ಕಿತ್ತು. ಆದರೆ ಲ್ಯಾಬಸ್ಟ್ಯಾನ್ ಕೈಯಿಂದ ಬಾಲ್ ಜಾರಿ ಹಿಂದಕ್ಕೆ ಹೋಗಿತ್ತು. ಈ ಸಂದರ್ಭದಲ್ಲಿ ಕೈಯಲ್ಲಿ ಬಾಲ್ ಇಲ್ಲದೇ ಇದ್ದರೂ ಬಾಲ್ ಇದೆ ಎಂದು ಬಿಂಬಿಸಲು ಥ್ರೋ ಮಾಡಿದ್ದಾರೆ. ಥ್ರೋ ಮಾಡಿದ್ದನ್ನು ನೋಡಿ ಬ್ಯಾಟ್ಸ್ ಮನ್ ಗಳು ಒಮ್ಮೆಲೆ ಪಿಚ್ ನಲ್ಲಿ ಓಡುವುದನ್ನು ನಿಲ್ಲಿಸಿದ್ದಾರೆ. ನಂತರ ಬಾಲ್ ಕೈಯಲ್ಲಿ ಇಲ್ಲದೇ ಸುಮ್ಮನೆ ಥ್ರೋ ಮಾಡಿದ್ದು ಎಂದು ತಿಳಿದು ಬ್ಯಾಟ್ಸ್ ಮನ್ ಗಳು ರನ್ ಓಡಿದ್ದಾರೆ.

    ಬಾಲ್ ಇದೆ ಎಂದು ಮೋಸ ಮಾಡಿ ಐಸಿಸಿಯ ಹೊಸ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಆನ್‍ಫಿಲ್ಡ್‍ನಲ್ಲಿದ್ದ ಅಂಪೈರ್ ಗಳಿಬ್ಬರು ಮಧ್ಯೆ ಮಾತುಕತೆ ನಡೆದು ಕ್ವೀನ್ಸ್ ಲ್ಯಾಂಡ್ ಕ್ರಿಕೆಟ್ ತಂಡಕ್ಕೆ 5 ರನ್‍ಗಳ ದಂಡ ವಿಧಿಸಿತು. ಈ ಮಊಲಕ ಐಸಿಸಿ ಜಾರಿ ಮಾಡಿದ ಕೆಲವು ನಿಯಮಗಳಿಗೆ ವಿಶ್ವದಲ್ಲಿಯೇ ಮೊದಲ ಬಾರಿಗೆ ದಂಡ ವಿಧಿಸಿಕೊಂಡ ಮೊದಲ ತಂಡ ಎನ್ನುವ ಕುಖ್ಯಾತಿಗೆ ಕ್ವೀನ್ಸ್ ಲ್ಯಾಂಡ್ ತಂಡ ಪಾತ್ರವಾಗಿದೆ.

    ಹೊಸ ನಿಯಮದ ಪ್ರಕಾರ ಸ್ಟ್ರೈಕರ್ ತಂಡದ ಬ್ಯಾಟ್ಸ್‍ಮನ್ ರನ್ ಓಡದಂತೆ ತಡೆಯಲು ಅಥವಾ ಮೋಸಗೊಳಿಸಲು ಯಾವುದೇ ಫಿಲ್ಡರ್ ಉದ್ದೇಶ ಪೂರ್ವಕವಾಗಿ ಪ್ರಯತ್ನ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘನೆಯಾದರೆ ವಿರುದ್ಧದ ತಂಡಕ್ಕೆ 5 ರನ್‍ಗಳನ್ನು ಕೊಡುವ ಅಧಿಕಾರ ಅಂಪೈರ್ ಗಳಿಗೆ ಇರುತ್ತದೆ.

    ಬ್ಯಾಟ್ಸ್ ಮನ್‍ಗಳು ರನ್ ಓಡುವ ವೇಳೆ ಫಿಲ್ಡಿಂಗ್‍ನಲ್ಲಿರುವ ಯಾವೊಬ್ಬ ಆಟಗಾರನನ್ನು ಕೈಯಲ್ಲಿಲ್ಲದ ಬಾಲನ್ನು ಎಸೆಯಲು ಅಥವಾ ಭಯಪಡಿಸಲು ಯತ್ನಿಸಿದರೂ ನಿಯಮ ಉಲ್ಲಂಘನೆಯಾಗಿದೆ ಎಂದು ಪರಿಗಣಿಸಲಾಗುತ್ತದೆ.

    ಆನ್‍ಫಿಲ್ಡ್‍ನಲ್ಲಿ ಆಟಗಾರರು ಏನಾದರೂ ಎದುರಾಳಿ ತಂಡದ ಆಟಗಾರರಿಗೆ ತೊಂದರೆ ಅಥವಾ ಅಂಪೈರ್ ನಿರ್ಣಯಕ್ಕೆ ಎದುರು ಮಾತನಾಡಿ ಆಕ್ರೋಷ ವ್ಯಕ್ತಪಡಿಸಿದರೆ 4ನೇ ಹಂತ ತಪ್ಪು ಎಂದು ತೀರ್ಮಾನಿಸಿ ಆ ಆಟಗಾರರನ್ನು ಮೈದಾನದಿಂದ ಹೊರಗೆ ಕಳುಹಿಸಬಹುದಾಗಿದೆ.

    ಫುಟ್ ಬಾಲ್ ನಲ್ಲಿ ಹೇಗೆ ಕಠಿಣ ನಿಯಮಗಳಿದೆಯೋ ಅದೇ ರೀತಿಯ ಕೆಲ ಕಠಿಣ ನಿಮಯಗಳನ್ನು ಐಸಿಸಿ ಕಳೆದ ಗುರುವಾರ ಜಾರಿ ಮಾಡಿತ್ತು.

  • ಆಸೀಸ್ ಸೋಲಿಸಿ ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

    ಆಸೀಸ್ ಸೋಲಿಸಿ ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

    ದುಬೈ: ಇಂದೋರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು 5 ವಿಕೆಟ್ ಗಳೊಂದಿಗೆ ಗೆಲ್ಲುವ ಮೂಲಕ ಟೀಂ ಇಂಡಿಯಾ ಈಗ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಿದೆ.

    ಸೆಪ್ಟೆಂಬರ್ 24ಕ್ಕೆ ಅಂತ್ಯಗೊಂಡ ಹೊಸ ಶ್ರೇಯಾಂಕ ಪಟ್ಟಿಯ ಪ್ರಕಾರ ಒಟ್ಟು 48 ಪಂದ್ಯಗಳಿಂದ 5,764 ಅಂಕಗಳೊಂದಿಗೆ 120 ರೇಟಿಂಗ್ ಸಂಪಾದಿಸಿದ ಭಾರತ ಮೊದಲ ಸ್ಥಾನವನ್ನು ಪಡೆದಿದೆ.

    50 ಪಂದ್ಯಗಳಿಂದ 5,957 ಅಂಗಳೊಂದಿಗೆ ದಕ್ಷಿಣ ಆಫ್ರಿಕಾ 119 ರೇಟಿಂಗ್ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, 50 ಪಂದ್ಯಗಳಿಂದ ಆಸ್ಟ್ರೇಲಿಯಾ 5,709 ಅಂಕ, 114 ರೇಟಿಂಗ್ ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

    ಟೆಸ್ಟ್ ನಲ್ಲಿ 36 ಪಂದ್ಯಗಳಿಂದ 4,493 ಅಂಕಗಳೊಂದಿಗೆ 125 ರೇಟಿಂಗ್ ಸಂಪಾದಿಸಿ ಭಾರತ ಮೊದಲ ಸ್ಥಾನದಲ್ಲಿದ್ದರೆ, ಟಿ20ಯಲ್ಲಿ 13 ಪಂದ್ಯಗಳನ್ನು ಆಡಿರುವ ಭಾರತ 2,328 ಅಂಕಗಳೊಂದಿಗೆ 116 ರೇಟಿಂಗ್ ಪಾಯಿಂಟ್ ಪಡೆಯುವ ಮೂಲಕ 5ನೇ ಸ್ಥಾನವನ್ನು ಪಡೆದುಕೊಂಡಿದೆ.

     

     

  • ಹಾರ್ದಿಕ್ ಪಾಂಡ್ಯ ರನೌಟ್ ಆದ್ರೂ ನಾಟೌಟ್ ಆಗಿದ್ದು ಹೇಗೆ?

    ಹಾರ್ದಿಕ್ ಪಾಂಡ್ಯ ರನೌಟ್ ಆದ್ರೂ ನಾಟೌಟ್ ಆಗಿದ್ದು ಹೇಗೆ?

    ಕೊಲ್ಕತ್ತಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ತಂಡದ ಸ್ಟಾರ್ ಆಟಗಾರ ಹಾರ್ಧಿಕ್ ಪಾಂಡ್ಯ ನಾಟೌಟ್ ತೀರ್ಪು ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

    ಪಂದ್ಯದ 45ನೇ ಓವರ್‍ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಕೇನ್ ರಿಚರ್ಡ್ ಸನ್ ಫುಲ್ಟಾಸ್ ಬಾಲ್ ಎಸೆದಿದ್ದರು. ಈ ಎಸೆತವನ್ನು ಪಾಂಡ್ಯ ಬಲವಾಗಿ ಹೊಡೆದಿದ್ದರು. ಆದರೆ ಬಾಲ್ ನಾಯಕ ಸ್ವೀವ್ ಸ್ಮಿತ್ ಕೈ ಸೇರಿತ್ತು. ಆದರೆ ಇದನ್ನು ನೋ ಬಲ್ ಎಂದು ಪ್ರಕಟಿಸಿದ ಅಂಪೈರ್ ನಾಟೌಟ್ ಎಂದು ತೀರ್ಪ ನೀಡಿದರು.

    ಈ ವೇಳೆ ಔಟ್ ಎಂದು ತಿಳಿದು ಪಾಂಡ್ಯ ಪೆವಿಲಿಯನ್ ಕಡೆಗೆ ಹೆಜ್ಜು ಹಾಕುತ್ತಿದ್ದರು. ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದಕ್ಕೆ ಸ್ಪಿತ್ ಬೌಲರ್ ಕಡೆ ಬಾಲ್ ಎಸೆದ ರನ್ ಔಟ್ ಮಾಡಲು ಹೇಳಿದರು. ಕೈಗೆ ಬಾಲ್ ಸಿಕ್ಕಿದ ಕೂಡಲೇ ರಿಚರ್ಡ್ ಸನ್ ಬೇಲ್ಸ್ ಹಾರಿಸಿದರು. ಈ ವೇಳೆ ಆಸೀಸ್ ಆಟಗಾರರು ಔಟ್ ಗೆ ಮನವಿ ಮಾಡಿದರೂ ಆದರೆ ಅಂಪೈರ್ ತಮ್ಮ ಮೊದಲ ತೀರ್ಮಾನಕ್ಕೆ ಬದ್ಧರಾಗಿ ನಾಟೌಟ್ ಎಂದು ತೀರ್ಪು ನೀಡಿದರು.

    ನಿಯಮ ಏನ್ ಹೇಳುತ್ತೆ?
    ನಿಯಮ 37.7ರ ಪ್ರಕಾರ ಯಾವುದೇ ಬ್ಯಾಟ್ಸ್ ಮನ್ ತಾನು ಔಟ್ ಎಂದು ಭಾವಿಸಿ ಅಂಗಳದಿಂದ ಹೊರನಡೆಯುತ್ತಿರುವ ಸಂದರ್ಭದಲ್ಲಿ ಅಂಪೈರ್ ನಾಟೌಟ್  ಎಂದು ತೀರ್ಪು ಎಂದು ನೀಡಿದರೆ, ಪುನಃ ಅಂಪೈರ್ ಆಟಗಾರರನ್ನು ವಾಪಸ್ ಬರಲು ಸೂಚಿಸಬಹುದಾಗಿದೆ. ಆದರೆ ಈ ಅವಧಿಯಲ್ಲಿ ಅಂಗಳದಲ್ಲಿದ ಆಟಗಾರರ ಯಾವುದೇ ಚಟುವಟಿಕೆ ಮಾಡಿದರೂ ಅದು ಡೆಡ್‍ಬಾಲ್ ಎಂದು ಪರಿಗಣಿಸಲಾಗುತ್ತದೆ.