Tag: ICC

  • ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ

    ಲಂಕಾಗೆ 7 ವಿಕೆಟ್‍ಗಳ ಭರ್ಜರಿ ಜಯ

    ಓವಲ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ  ಶ್ರೀಲಂಕಾ  7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ.

    ಗೆಲ್ಲಲು 322 ರನ್‍ಗಳ ಕಠಿಣ ಸವಾಲನ್ನು ಪಡೆದ ಲಂಕಾ 48.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 322 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ.

    11 ರನ್ ಗಳಿಸಿದ್ದಾಗ ಮೊದಲ ವಿಕೆಟ್ ಕಳೆದುಕೊಂಡರೂ ಎರಡನೇ ವಿಕೆಟಿಗೆ 139 ಎಸೆತಗಳಲ್ಲಿ 159 ರನ್ ಜೊತೆಯಾಟವಾಡುವ ಮೂಲಕ ಗುಣತಿಲಕ ಮತ್ತು ಕುಸಲ್ ಮೆಂಡಿಸ್ ಭದ್ರ ಅಡಿಪಾಯ ಹಾಕಿದರು.

    ಗುಣತಿಲಕ 76 ರನ್(72 ಎಸೆತ, 7 ಬೌಂಡರಿ, 2ಸಿಕ್ಸರ್) ಸಿಡಿಸಿ ರನ್ ಔಟ್ ಔಟಾದರೆ, ಮೆಂಡಿಸ್ 89 ರನ್(93 ಎಸೆತ, 11 ಬೌಂಡರಿ, 1 ಸಿಕ್ಸರ್) ಸಿಡಿಸಿ ರನ್ ಔಟ್ ಆದರು.

    ಕುಸಲ್ ಪಿರೇರಾ 47 ರನ್‍ಗಳಿಸಿ ನಿವೃತ್ತರಾದರೆ, ಆಂಜಲೋ ಮಾಥ್ಯುಸ್ ಔಟಾಗದೇ 52 ರನ್(44 ಎಸೆತ, 6 ಬೌಂಡರಿ) ಗುಣರತ್ನೆ ಔಟಾಗದೇ 34 ರನ್(21 ಎಸೆತ, 2 ಬೌಂಡರಿ, 2 ಸಿಕ್ಸರ್) ಸಿಡಿಸಿ ತಂಡಕ್ಕೆ ಜಯವನ್ನು ತಂದುಕೊಟ್ಟರು.

    ಭುನವೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದರೆ, ಭಾರತ 11 ಲೆಗ್ ಬೈ, 5 ವೈಡ್, 1 ನೋಬಾಲ್ ಎಸೆಯುವ ಮೂಲಕ ಇತರೆ ರೂಪದಲ್ಲಿ 17 ರನ್ ಬಿಟ್ಟುಕೊಟ್ಟಿತ್ತು.

    ರನ್ ಏರಿದ್ದು ಹೇಗೆ?
    50 ರನ್ – 10.3 ಓವರ್
    100 ರನ್ – 19.2 ಓವರ್
    150 ರನ್ – 25.4 ಓವರ್
    200 ರನ್ – 33.4 ಓವರ್
    250 ರನ್ – 40.3 ಓವರ್
    300 ರನ್ – 45.5 ಓವರ್
    322 ರನ್ – 48.4 ಓವರ್

    ಉತ್ತಮ ಮೊತ್ತ: ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿತ್ತು.

    ಶತಕದ ಜೊತೆಯಾಟ: ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್‍ಗೆ 149 ಎಸೆತಗಳಲ್ಲಿ 138 ರನ್‍ಗಳ ಜೊತೆಯಾಟ ಆಡಿದರು. ಮಲಿಂಗ ಎಸೆತದಲ್ಲಿ ಔಟಾಗುವ ವೇಳೆ ರೋಹಿತ್ ಶರ್ಮಾ 78 ರನ್(79 ಎಸೆತ, 6 ಬೌಂಡರಿ, 3ಸಿಕ್ಸರ್) ಸಿಡಿಸಿದ್ದರು.

    ನಂತರ ಬಂದ ವಿರಾಟ್ ಕೊಹ್ಲಿ 5 ಎಸೆತದ ಎದುರಿಸಿ ಶೂನ್ಯಕ್ಕೆ ಔಟಾದರು. ಮೂರನೇ ವಿಕೆಟ್‍ಗೆ ಶಿಖರ್ ಧವನ್ ಮತ್ತು ಯುವರಾಜ್ 46 ಎಸೆತಗಳಲ್ಲಿ 40 ರನ್ ಜೊತೆಯಾಟ ಆಡಿದರು. ಇದರಲ್ಲಿ ಯುವರಾಜ್ ಪಾಲು 7 ರನ್.

    ಯುವರಾಜ್ ಔಟಾದ ಬಳಿಕ ಕ್ರೀಸಿಗೆ ಬಂದ ಧೋನಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದರು. ಧೋನಿ ಮತ್ತು ಧವನ್ 4ನೇ ವಿಕೆಟಿಗೆ 64 ಎಸೆತಗಳಲ್ಲಿ 82 ರನ್ ಪೇರಿಸಿದರು.

    ಶಿಖರ್ ಧವನ್ ಶತಕ: 69 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಧವನ್ 112 ಎಸೆತಗಳಲ್ಲಿ ಏಕದಿನ ಕ್ರಿಕೆಟ್ ಬಾಳ್ವೆಯ 10 ನೇ ಶತಕ ಪೂರ್ಣಗೊಳಿಸಿದರು. ಅಂತಿಮವಾಗಿ 125 ರನ್(128 ಎಸೆತ, 6 ಬೌಂಡರಿ, 3ಸಿಕ್ಸರ್) ಗಳಿಸಿದ್ದಾಗ ಮೆಂಡಿಸ್‍ಗೆ ಕ್ಯಾಚ್ ನೀಡಿ ಔಟಾದರು.

    ಧೋನಿ 63 ರನ್(52 ಎಸೆತ, 7 ಬೌಂಡರಿ, 2ಸಿಕ್ಸರ್), ಕೇಧಾರ್ ಜಾಧವ್ ಔಟಾಗದೇ 25 ರನ್(13 ಎಸೆತ, 3 ಬೌಂಡರಿ, 1 ಸಿಕ್ಸರ್) ಸಿಡಿಸಿ ಕೊನೆಯಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕಾರಣ ತಂಡದ ಮೊತ್ತ 300 ರನ್‍ಗಳ ಗಡಿ ದಾಟಿತು. ಲಸಿತ್ ಮಾಲಿಂಗ, 2 ವಿಕೆಟ್ ಪಡೆದರೆ, ಲಕ್ಮಲ್, ಪ್ರದೀಪ್, ಪಿರೇರಾ ಗುಣರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.

    ರನ್ ಏರಿದ್ದು ಹೀಗೆ:
    50 ರನ್ – 10.2 ಓವರ್
    100 ರನ್ – 19.2 ಓವರ್
    150 ರನ್- 27.1 ಓವರ್
    200 ರನ್ – 37.6 ಓವರ್
    250 ರನ್ – 42.4 ಓವರ್
    300 ರನ್ – 48.2 ಓವರ್
    321 ರನ್ – 50 ಓವರ್

    ಬಿ ಗುಂಪಿನ ಎಲ್ಲ ತಂಡಗಳು ಒಂದೊಂದು ಪಂದ್ಯವನ್ನು ಗೆದ್ದಿದೆ. ಜೂನ್ 11 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಭಾರತ ಗೆದ್ದಲ್ಲಿ ಸೆಮಿಫೈನಲ್ ಪ್ರವೇಶಿಸಲಿದೆ.

     

     

  • ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ

    ಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ

    ಓವಲ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಶ್ರೀಲಂಕಾಗೆ 322 ರನ್‍ಗಳ ಗುರಿಯನ್ನು ನೀಡಿದೆ.

    ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿದೆ.

    ಶತಕದ ಜೊತೆಯಾಟ: ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್‍ಗೆ 149 ಎಸೆತಗಳಲ್ಲಿ 138 ರನ್‍ಗಳ ಜೊತೆಯಾಟ ಆಡಿದರು. ಮಲಿಂಗ ಎಸೆತದಲ್ಲಿ ಔಟಾಗುವ ವೇಳೆ ರೋಹಿತ್ ಶರ್ಮಾ 78 ರನ್(79 ಎಸೆತ, 6 ಬೌಂಡರಿ, 3ಸಿಕ್ಸರ್) ಸಿಡಿಸಿದ್ದರು.

    ನಂತರ ಬಂದ ವಿರಾಟ್ ಕೊಹ್ಲಿ 5 ಎಸೆತದ ಎದುರಿಸಿ ಶೂನ್ಯಕ್ಕೆ ಔಟಾದರು. ಮೂರನೇ ವಿಕೆಟ್‍ಗೆ ಶಿಖರ್ ಧವನ್ ಮತ್ತು ಯುವರಾಜ್ 46 ಎಸೆತಗಳಲ್ಲಿ 40 ರನ್ ಜೊತೆಯಾಟ ಆಡಿದರು. ಇದರಲ್ಲಿ ಯುವರಾಜ್ ಪಾಲು 7 ರನ್.

    ಯುವರಾಜ್ ಔಟಾದ ಬಳಿಕ ಕ್ರೀಸಿಗೆ ಬಂದ ಧೋನಿ ಇನ್ನಿಂಗ್ಸ್ ಕಟ್ಟಲು ಆರಂಭಿಸಿದರು. ಧೋನಿ ಮತ್ತು ಧವನ್ 4ನೇ ವಿಕೆಟಿಗೆ 64 ಎಸೆತಗಳಲ್ಲಿ 82 ರನ್ ಪೇರಿಸಿದರು.

    ಶಿಖರ್ ಧವನ್ ಶತಕ: 69 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಧವನ್ 112 ಎಸೆತಗಳಲ್ಲಿ ಏಕದಿನ ಕ್ರಿಕೆಟ್ ಬಾಳ್ವೆಯ 10 ನೇ ಶತಕ ಪೂರ್ಣಗೊಳಿಸಿದರು. ಅಂತಿಮವಾಗಿ 125 ರನ್(128 ಎಸೆತ, 6 ಬೌಂಡರಿ, 3ಸಿಕ್ಸರ್) ಗಳಿಸಿದ್ದಾಗ ಮೆಂಡಿಸ್‍ಗೆ ಕ್ಯಾಚ್ ನೀಡಿ ಔಟಾದರು.

    ಧೋನಿ 63 ರನ್(52 ಎಸೆತ, 7 ಬೌಂಡರಿ, 2ಸಿಕ್ಸರ್), ಕೇಧಾರ್ ಜಾಧವ್ ಔಟಾಗದೇ 25 ರನ್(13 ಎಸೆತ, 3 ಬೌಂಡರಿ, 1 ಸಿಕ್ಸರ್) ಸಿಡಿಸಿ ಕೊನೆಯಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕಾರಣ ತಂಡದ ಮೊತ್ತ 300 ರನ್‍ಗಳ ಗಡಿ ದಾಟಿತು.

    ಲಸಿತ್ ಮಾಲಿಂಗ,  2 ವಿಕೆಟ್ ಪಡೆದರೆ, ಲಕ್ಮಲ್, ಪ್ರದೀಪ್, ಪಿರೇರಾ ಗುಣರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.

    ರನ್ ಏರಿದ್ದು ಹೀಗೆ:
    50 ರನ್ – 10.2 ಓವರ್
    100 ರನ್ – 19.2 ಓವರ್
    150 ರನ್- 27.1 ಓವರ್
    200 ರನ್ – 37.6 ಓವರ್
    250 ರನ್ – 42.4 ಓವರ್
    300 ರನ್ – 48.2 ಓವರ್
    321 ರನ್ – 50 ಓವರ್

  • ಕೊಹ್ಲಿಯನ್ನು ನಮ್ಗೆ ಕೊಡಿ, ಇಡೀ ನಮ್ಮ ತಂಡ ಕೊಡ್ತೀವಿ: ಪಾಕ್ ಪತ್ರಕರ್ತ

    ಕೊಹ್ಲಿಯನ್ನು ನಮ್ಗೆ ಕೊಡಿ, ಇಡೀ ನಮ್ಮ ತಂಡ ಕೊಡ್ತೀವಿ: ಪಾಕ್ ಪತ್ರಕರ್ತ

    ನವದೆಹಲಿ: ವಿರಾಟ್ ಕೊಹ್ಲಿಯನ್ನು ನಮಗೆ ಕೊಟ್ಟು ಇಡೀ ಪಾಕ್ ತಂಡವನ್ನೇ ಭಾರತ ತೆಗೆದುಕೊಳ್ಳಲಿ ಎಂದು ಪಾಕ್ ಪತ್ರಕರ್ತ ನಜರಾನಾ ಗಫರ್ ಟ್ವೀಟ್ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಪಾಕಿಸ್ತಾನಕ್ಕೆ ಕೊಟ್ಬಿಡಿ.ಬೇಕಿದ್ರೆ ಇದಕ್ಕೆ ಬದಲಾಗಿ ಇಡೀ ಪಾಕ್ ತಂಡವನ್ನು ಭಾರತ ತೆಗೆದುಕೊಳ್ಳಲಿ. ಒಂದು ವರ್ಷದ ಮಟ್ಟಿಗೆ ಕೊಹ್ಲಿಯನ್ನು ಕೊಟ್ಬಿಡಿ ಎಂದು ಹೀಗಂತ ತಂಡದ ಸೋಲಿನ ಹತಾಶೆಯಲ್ಲಿ ಪಾಕ್ ಪತ್ರಕರ್ತ ನಜರಾನಾ ಗಫರ್ ಟ್ವಿಟ್ ಮಾಡಿದ್ದಾರೆ.

    ಇದಕ್ಕೆ ಭಾರೀ ಪ್ರಮಾಣದಲ್ಲಿ ಪರ ವಿರೋಧದ ಟ್ವೀಟ್‍ಗಳು ಹರಿದುಬಂದಿವೆ. ಟೀಂ ಇಂಡಿಯಾದ ಕಟ್ಟಾ ಅಭಿಮಾನಿಯಿಬ್ಬರು ರೀ ಟ್ವೀಟ್ ಮಾಡಿದ್ದು, ‘K’ ಅಕ್ಷರದಿಂದ ಕಾಶ್ಮೀರ ಬೇಕು ಅಂತಿದ್ರಿ.. ಇದೀಗ ‘K’ ಅಕ್ಷರದ ಕೊಹ್ಲಿಯೂ ಬೇಕಾ.. ಅವರೆಡು ನಿಮಗೆ ಸಿಗಲ್ಲ ಎಂದು ಕಿಚಾಯಿಸಿದ್ದಾರೆ.

    ಮತ್ತೊಬ್ಬರು ನಾವು ಭಿಕ್ಷುಕರನ್ನು ಪ್ರೋತ್ಸಾಹಿಸುವುದಿಲ್ಲ. ನಿಮ್ಮ ತಂಡವನ್ನು ಜಿಂಬಾಬ್ವೆ ಸಹ ಖರೀದಿಸಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    ಪಾಕಿಸ್ತಾನದ ಮಂದಿ ನಜರಾನಾ ಗಫರ್ ಮುಗಿ ಬಿದ್ದಿದ್ದು, ಈ ರೀತಿ ಅವಮಾನ ಮಾಡಿ ಟ್ವೀಟ್ ಮಾಡಿದ್ದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

     

     

  • ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ

    ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ

    ಲಂಡನ್‍: ಚಾಂಪಿಯನ್ಸ್ ಟ್ರೋಫಿಯಲ್ಲಿ ಇವತ್ತು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಪಾಕಿಸ್ತಾನ ವಿರುದ್ಧ ದಾಖಲೆ ರನ್‍ಗಳಲ್ಲಿ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಇವತ್ತು ಲಂಕಾ ವಿರುದ್ಧ ಅಂಗಳಕ್ಕೆ ಇಳಿಯಲಿದೆ.

    ಪಾಕಿಸ್ತಾನ ವಿರುದ್ಧ ಗೆದ್ದ ಪಡೆಯನ್ನೇ ಕೊಹ್ಲಿ ಉಳಿಸಿಕೊಂಡಿದ್ದಾರೆ. ಇಂದು ನಡೆಯುವ ಪಂದ್ಯದಲ್ಲಿ ಶ್ರೀಲಂಕಾ ತಂಡದಲ್ಲಿ ಮ್ಯಾಥ್ಯೂ ಬೌಲಿಂಗ್ ಅನುಮಾನ ಎಂದು ಹೇಳಲಾಗುತ್ತಿದೆ. ಶ್ರೀಲಂಕಾ ಇತ್ತೀಚೆಗೆ ನಡೆದ 23 ಪಂದ್ಯಗಳಲ್ಲಿ ಗೆದ್ದಿರೋದು ಕೇವಲ 8 ಪಂದ್ಯಗಳನ್ನು ಮಾತ್ರ.

    ಲಂಡನ್‍ನ ಓವಲ್ಸ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಭೇರಿ ಕಂಡ್ರೆ ಕೊಹ್ಲಿ ಪಡೆ ಸೆಮಿಫೈನಲ್‍ಗೆ ತಲುಪುತ್ತೆ ಅನ್ನೋದು ಕ್ರಿಕೆಟ್ ತಜ್ಞರ ಲೆಕ್ಕಾಚಾರ ಆಗಿದೆ. ಆದರೆ ಮಳೆ ಬಂದರೆ ಪಂದ್ಯವನ್ನು ಯಾವ ದಿಕ್ಕಿಗಾದ್ರೂ ಬದಲಿಸಬಹುದು.

     

  • ಇಂದು ನಡೆಯಲಿದೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ- ಮಿಸ್ ಮಾಡ್ಕೊಬೇಡಿ!

    ಇಂದು ನಡೆಯಲಿದೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ- ಮಿಸ್ ಮಾಡ್ಕೊಬೇಡಿ!

    ಬೆಂಗಳೂರು: ಬಹು ದಿನಗಳ ನಂತರ ಸಾಂಪ್ರದಾಯಿಕ ಬದ್ದ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.

    ಈಗಾಗಲೇ ಐಸಿಸಿ ಚಾಂಪಿಯನ್ ಟ್ರೋಪಿ ಪಂದ್ಯಾವಳಿಗಳು ಲಂಡನ್‍ನಲ್ಲಿ ಆರಂಭಗೊಂಡಿವೆ. 2016ರ ವಿಶ್ವ ಟಿ-ಟ್ವೆಂಟಿಯ ನಂತರ ಭಾರತ ಮತ್ತು ಪಾಕ್ ಎರಡು ದೇಶಗಳ ನಡುವೆ ರೋಚಕ ಪಂದ್ಯ ನಡೆಯಲಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಸಹ ಇಂದಿನ ಪಂದ್ಯಕ್ಕೆ ಮಹತ್ವ ನೀಡಿದೆ.

    ಭಾರತ ಹಾಗೂ ಪಾಕಿಸ್ತಾನ ಒಟ್ಟು ಮೂರು ಬಾರಿ ಚಾಂಪಿಯನ್ಸ್ ಟ್ರೋಫಿಗೆ ಸೆಣಸಿದ್ದು, ಒಂದು ಬಾರಿ ಭಾರತ ಗೆದ್ರೆ ಪಾಕಿಸ್ತಾನ 2 ಬಾರಿ ಗೆದ್ದಿದೆ. ಈಗ 2ನೇ ಜಯಕ್ಕೆ ಭಾರತ ಕಾತರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಯುವರಾಜ್ ಸಿಂಗ್ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ರೆ, ಹಾರ್ದಿಕ್ ಪಾಂಡ್ಯ, ಜಸ್ಪೀತ್ ಬೂಮ್ರಾ ಬಾಲ್ ದಾಳಿಗೆ ಸಜ್ಜಾಗಿದ್ದಾರೆ.

    ಅತ್ತ ಪಾಕಿಸ್ತಾನ ತಂಡದ ಆಟಗಾರರು ಸಹ ನಾವೇನು ಕಡಿಮೆಯಿಲ್ಲ ಎಂದು ಅವರು ಅಖಾಡಕ್ಕಿಳಿಯಲು ಸನ್ನದ್ಧರಾಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬರ್ಮಿಂಗ್ ಹ್ಯಾಮ್‍ನಲ್ಲಿ ರಿಯಲ್ ವಾರ್ ನಡೆಯಲಿದೆ.

  • ಇಂಡೋ, ಪಾಕ್ ಕ್ರಿಕೆಟ್: ಗೆಲುವು ಯಾರಿಗೆ? ಹಿಂದಿನ ಪಂದ್ಯಗಳಲ್ಲಿ ಗೆದ್ದವರು ಯಾರು?

    ಇಂಡೋ, ಪಾಕ್ ಕ್ರಿಕೆಟ್: ಗೆಲುವು ಯಾರಿಗೆ? ಹಿಂದಿನ ಪಂದ್ಯಗಳಲ್ಲಿ ಗೆದ್ದವರು ಯಾರು?

    ಎಜ್‍ಬಾಸ್ಟನ್: ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಭಾನುವಾರ ಇಂಗ್ಲೆಂಡಿನ ಎಜ್‍ಬಾಸ್ಟನ್ ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ 3 ಗಂಟೆಗೆ ಆರಂಭವಾಗಲಿರುವ ಈ ಪಂದ್ಯ ವೀಕ್ಷಿಸಲು ಜನರು ಈಗ ತುದಿಗಾಲಿನಲ್ಲಿ ನಿಂತಿದ್ದಾರೆ.

    ವಿಶೇಷ ಏನೆಂದರೆ 2013ರ ಚಾಂಪಿಯನ್ಸ್ ಟ್ರೋಫಿ ವೇಳೆ ಇದೇ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಭಾರತ ಜಯಗಳಿಸಿತ್ತು. ಹೀಗಾಗಿ 50 ಓವರ್‍ಗಳ ಪಂದ್ಯವಾಗಿರುವುದರಿಂದ ಈ ಹಿಂದಿನ ಮೂರು ದೊಡ್ಡ ಟೂರ್ನಿಯಲ್ಲಿ ಯಾವ ತಂಡ ಗೆದ್ದಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    2015ರ ವಿಶ್ವಕಪ್:
    ಆಸ್ಟ್ರೇಲಿಯಾದ ಆಡಿಲೆಡ್‍ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಭಾರತ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ 107 ರನ್(126 ಎಸೆತ, 8 ಬೌಂಡರಿ) ಹೊಡೆದಿದ್ದರು. 301ರನ್‍ಗಳ ಗುರಿಯನ್ನು ಪಡೆದ ಪಾಕಿಸ್ತಾನ 47 ಓವರ್‍ಗಳಲ್ಲಿ 224 ರನ್‍ಗಳಿಗೆ ಆಲೌಟ್ ಆಯ್ತು. ಮೊಹಮ್ಮದ್ ಶಮಿ 35 ರನ್‍ಗಳಿಗೆ 4 ವಿಕೆಟ್ ಪಡೆದಿದ್ದರು. ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತ್ತು. ಈ ಮೂಲಕ 6 ವಿಶ್ವಕಪ್‍ನಲ್ಲಿ ಭಾರತ ಪಾಕ್ ವಿರುದ್ಧ ಜಯಗಳಿಸಿದ ಸಾಧನೆ ಮಾಡಿತು.

    2014ರ ಏಷ್ಯಾಕಪ್:
    ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಏಷ್ಯ ಕಪ್‍ನಲ್ಲಿ ಭಾರತವನ್ನು ಒಂದು ವಿಕೆಟ್‍ನಿಂದ ಪಾಕಿಸ್ತಾನ ಸೋಲಿಸಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತ್ತು. ಭಾರತದ ಪರ ಅಂಬಾಟಿ ರಾಯಡು 58 ರನ್ ಹೊಡೆದಿದ್ದರೆ, ರವೀಂದ್ರ ಜಡೇಜಾ ಔಟಾಗದೇ 52 ರನ್ ಹೊಡೆದಿದ್ದರು. ಪಾಕಿಸ್ತಾನ 49.4 ಓವರ್ ಗಳಲ್ಲಿ 249 ರನ್ ಗಳಿಸಿ 1 ವಿಕೆಟ್‍ಗಳ ಜಯವನ್ನು ಸಂಪಾದಿಸಿತ್ತು. ಮೊಹಮ್ಮದ್ ಹಫೀಸ್ 75ರನ್ ಭಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    2013ರ ಚಾಂಪಿಯನ್ಸ್ ಟ್ರೋಫಿ:
    ಇಂಗ್ಲೆಂಡಿನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 165 ರನ್‍ಗಳಿಗೆ ಆಲೌಟ್ ಆಗಿತ್ತು. ಮಳೆ ಬಂದ ಹಿನ್ನೆಲೆಯಲ್ಲಿ ಡಕ್‍ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತಕ್ಕೆ 22 ಓವರ್ ಗಳಲ್ಲಿ 102 ರನ್‍ಗಳ ಟಾರ್ಗೆಟ್ ನೀಡಲಾಗಿತ್ತು. ಭಾರತ 19.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ವಿಜಯಿ ಆಯ್ತು. 8 ಓವರ್ ಎಸೆದು 2 ಮೇಡನ್ ಮಾಡಿ 19 ರನ್ ನೀಡಿ 2 ವಿಕೆಟ್ ಪಡೆದ ಭುವನೇಶ್ವರ್ ಕುಮಾರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

  • ವಿಶೇಷ ಬ್ಯಾಟ್ ಬಳಸಲಿದ್ದಾರೆ ರೋಹಿತ್: ಏನಿದು  ಚಿಪ್ ಬ್ಯಾಟ್? ವಿಶೇಷತೆ ಏನು? ವಿಡಿಯೋ ನೋಡಿ

    ವಿಶೇಷ ಬ್ಯಾಟ್ ಬಳಸಲಿದ್ದಾರೆ ರೋಹಿತ್: ಏನಿದು ಚಿಪ್ ಬ್ಯಾಟ್? ವಿಶೇಷತೆ ಏನು? ವಿಡಿಯೋ ನೋಡಿ

    ಲಂಡನ್: ಇಲ್ಲಿಯವರೆಗೆ ಬೌಲಿಂಗ್ ಸ್ಪೀಡ್ ಎಷ್ಟಿದೆ ಎನ್ನುವ ಮಾಹಿತಿ ಸಿಗುತಿತ್ತು. ಆದರೆ ಇನ್ನು ಮುಂದೆ ಬ್ಯಾಟ್ಸ್ ಮನ್ ಎಷ್ಟು ವೇಗದಲ್ಲಿ ಬ್ಯಾಟ್ ಬೀಸಿದ್ದಾನೆ. ಎಷ್ಟು ಡಿಗ್ರಿಯಲ್ಲಿ ಬ್ಯಾಟ್ ಹಿಡಿದಿದ್ದಾನೆ ಎನ್ನುವ ಎಲ್ಲ ಮಾಹಿತಿಗಳು ಸಿಗಲಿದೆ.

    ಹೌದು. ಹಲವಾರು ದೇಶಗಳಲ್ಲಿ ಕ್ರಿಕೆಟ್ ಜಪ್ರಿಯವಾಗುತ್ತಿದೆ. ಈಗ ಕ್ರಿಕೆಟನ್ನು ಮತ್ತಷ್ಟು ಜನಪ್ರಿಯಗೊಳಿಸಲು ಐಸಿಸಿ ಮುಂದಾಗುತ್ತಿದ್ದು, ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆನ್ಸರ್ ಹೊಂದಿರುವ ಬ್ಯಾಟ್ ಗಳನ್ನು ಬಳಸಲು ಅನುಮತಿ ನೀಡಿದೆ.

    ಕ್ರಿಕೆಟ್ ಇತಿಹಾಸಲ್ಲಿ ಮೊದಲ ಬಾರಿಗೆ ಈ ರೀತಿಯ ಚಿಪ್ ಬ್ಯಾಟ್ ನಲ್ಲಿ ಅಳವಡಿಸಲಾಗುತ್ತಿದೆ. ಟೆಕ್ ಕಂಪೆನಿ ಇಂಟೆಲ್ ಈ ಚಿಪ್ ಅನ್ನು ತಯಾರಿಸಿದೆ.

    ಎಲ್ಲಿರಲಿದೆ ಚಿಪ್?
    ಇಂಟೆಲ್ ಕ್ಯೂರಿ ಟೆಕ್ನಾಲಜಿಯ ‘ಬ್ಯಾಟ್ ಸೆನ್ಸ್’ ಚಿಪ್ ಬ್ಯಾಟಿನ ಮೇಲ್ಬಾಗದಲ್ಲಿ ಇರಲಿದೆ. ಅಂದರೆ ಹ್ಯಾಂಡಲ್ ತುದಿಯಲ್ಲಿ ಇರುವ ವೃತ್ತಾಕಾರದ ಜಾಗದಲ್ಲಿ ಈ ಚಿಪ್ ಅಳವಡಿಸಲಾಗುತ್ತದೆ.

    ಚಿಪ್ ಅಳವಡಿಸುವುದು ಹೇಗೆ?
    ಬ್ಯಾಟಿನ ಹ್ಯಾಂಡಲ್ ಕವರ್ ಮೊದಲು ಹಾಕಿ, ಬಳಿಕ ಅದನ್ನು ಕೆಳಗೆ ಸರಿಸಬೇಕಾಗುತ್ತದೆ. ಇದಾದ ಬಳಿಕ ಚಿಪ್ ಫಿಕ್ಸ್ ಆಗಿರುವ ಸಣ್ಣ ಹ್ಯಾಂಡಲ್ ಕವರ್ ಅನ್ನು ಹಾಕಬೇಕು. ನಂತರ ಕೆಳಗಡೆ ಸರಿಸಲಾಗಿರುವ ಹ್ಯಾಂಡಲ್ ಕವರ್ ಮೇಲಕ್ಕೆ ಸರಿಸಿದಾಗ ಸೆನ್ಸರ್ ಚಿಪ್ ಫಿಕ್ಸ್ ಆಗಿ ಗಟ್ಟಿಯಾಗಿ ಮೇಲ್ಬಾಗದಲ್ಲಿ ಕುಳಿತುಕೊಳ್ಳುತ್ತದೆ.

    ಲಾಭ ಏನು?
    ಬ್ಯಾಟಿನ ಆಂಗಲ್ ಹೇಗೆ ಬದಲಾಗುತ್ತದೆ? ಬ್ಯಾಟ್ ಸ್ಪೀಡ್ ಎಷ್ಟಿರಲಿದೆ? ಹೀಗೆ ಬ್ಯಾಟ್ ಪ್ರತಿಯೊಂದು ಚಲನೆ ಕೂಡ ಚಿಪ್ ನಲ್ಲಿ ದಾಖಲಾಗಿರುತ್ತದೆ. ಇದರಲ್ಲಿ ದಾಖಲಾಗಿರುವ ಮಾಹಿತಿಯನ್ನು ಕಂಪ್ಯೂಟರ್ ಹಾಕಿ ಬ್ಯಾಟ್ಸ್ ಮನ್ ತನ್ನ ತಪ್ಪನ್ನು ತಿಳಿದುಕೊಳ್ಳಲು ಸಹಕಾರಿಯಾಗಲಿದೆ. ಬ್ಯಾಟ್ಸ್ ಮನ್ ಸಂಪೂರ್ಣ ಗ್ರೌಂಡ್ ರಿಪೋರ್ಟ್ ದಾಖಲಾಗುವುದರಿಂದ ವಿಶೇಷವಾಗಿ ಕೋಚ್ ಗಳಿಗೂ ನೆರವಾಗಲಿದೆ.

    ಯಾರ ಬ್ಯಾಟಲ್ಲಿ ಚಿಪ್ ಇರಲಿದೆ?
    ಸದ್ಯಕ್ಕೆ ಐಸಿಸಿ ಒಂದು ತಂಡದ ಮೂವರು ಆಟಗಾರರಿಗೆ ಚಿಪ್ ಬ್ಯಾಟಿನೊಂದಿಗೆ ಆಡಲು ಅನುಮತಿ ನೀಡಿದೆ. ಭಾರತದ ಪರ, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ ಹಾಗೂ ಆರ್ ಅಶ್ವಿನ್ ಚಿಪ್ ಇರುವ ಬ್ಯಾಟ್ ನಲ್ಲಿ ಆಡಲಿದ್ದಾರೆ.

    ವಿಆರ್ ಟೆಕ್ನಾಲಜಿ ಬಳಕೆ
    ಬ್ಯಾಟ್ ಸೆನ್ಸರ್ ಅಲ್ಲದೇ ಪ್ರೆಕ್ಷಕರಿಗೆ ಮುದ ನೀಡಲು ವರ್ಚುಯಲ್ ರಿಯಾಲಿಟಿ(ವಿಆರ್) ಈ ಬಾರಿ ಬಳಸಲಾಗುತ್ತದೆ. ಅಷ್ಟೇ ಅಲ್ಲದೇ ಪಂದ್ಯಕ್ಕೂ ಪಿಚ್ ಸಂಪೂರ್ಣ ಮಾಹಿತಿ ಪಡೆಯಲು, ಎಚ್‍ಡಿ ಮತ್ತುಇನ್‍ಫ್ರಾರೆಡ್ ಕ್ಯಾಮೆರಾ ಹೊಂದಿರುವ 8 ಡ್ರೋನ್ ಗಳು ಪಿಚ್ ಮೇಲೆ ಹಾರಾಟ ನಡೆಸಲಿದೆ.

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ?

    ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ?

    ದುಬೈ: ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.

    ಈ ಟೂರ್ನಿಗೆ ಐಸಿಸಿ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ಬಹುಮಾನ ನೀಡಲಿದ್ದು, ದ್ವಿತೀಯ ಸ್ಥಾನಿ ತಂಡಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.)ಬಹುಮಾನ ಸಿಗಲಿದೆ.

    ಸೆಮಿಫೈನಲ್‍ನಲ್ಲಿ ಸೋತ ಎರಡೂ ತಂಡಗಳಿಗೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದರೆ, ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆಯುವ ಎರಡು ತಂಡಕ್ಕೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ತಂಡಕ್ಕೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ಸಿಗಲಿದೆ.

    2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿದ್ದು, ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿದೆ. ಜೂನ್1 ರಿಂದ ಜೂನ್ 18ರವರೆಗೆ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆಯಲಿದೆ.

    2013ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಚಾಂಪಿಯನ್ಸ್ ಟ್ರೋಪಿ ಪಂದ್ಯಾಟದಲ್ಲಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.

    ಇದನ್ನೂ ಓದಿ: ಐಪಿಎಲ್ ಕ್ರಿಕೆಟ್: ಟಿವಿ ಸ್ಕ್ರೀನ್‍ನಲ್ಲಿ ಕಾಣೋ ಕೆಂಪು, ಹಸಿರು ಪಟ್ಟಿಯ ಅರ್ಥ ಏನು?
    ಇದನ್ನೂ ಓದಿ: ಐಪಿಎಲ್‍ನ ಜಸ್ಟ್ 10 ಸೆಕೆಂಡ್ ಜಾಹಿರಾತಿಗೆ ಎಷ್ಟು ಹಣ? ನಗದು ಬಹುಮಾನ ಎಷ್ಟು?

  • ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ (ಐಪಿಎಲ್) ಹಣದ ಹೊಳೆ ಹರಿಯುವುದು ನಿಮಗೆ ಗೊತ್ತೆ ಇರುವ ವಿಚಾರ. ಆಟಗಾರರು ಕೋಟಿಗಟ್ಟಲೇ ಹಣಕ್ಕೆ ಸೇಲ್ ಆದರೆ ಅಂಪೈರ್‍ಗಳಿಗೂ ಲಕ್ಷಗಟ್ಟಲೇ ಹಣ ಸಂಬಳ ರೂಪದಲ್ಲಿ ಸಿಗುತ್ತಿದೆ.

    2016ರಲ್ಲಿ ಸಿ.ಕೆ.ನಂದನ್, ಅನಿಲ್ ಚೌಧರಿ ಮತ್ತು ಸಿ.ಸಂಶುದ್ದೀನ್ ಐಪಿಎಲ್ ಪಂದ್ಯಗಳ ಅಂಪೈರ್‍ಗಳಾಗಿ ಕಾರ್ಯನಿರ್ವಹಿಸಿದ್ದು ಇವರು ಹತ್ತಿರ ಹತ್ತಿರ ಒಟ್ಟು 40 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ.

    2016 ರಲ್ಲಿ ಅನಿಲ್ ಚೌಧರಿ ಅವರು ಸರಿಸುಮಾರು 39.63 ಲಕ್ಷ ಸಂಭಾವನೆಯನ್ನು ಪಡೆದಿದ್ದರೆ, ನಂದನ್ ಸಂಶುದ್ದೀನ್ ಕೂಡ ಸರಿ ಸುಮಾರು 40.83 ಲಕ್ಷ ರೂ. ಸಂಬಳವನ್ನು ಐಪಿಎಲ್‍ನಿಂದ ಪಡೆದಿದ್ದರು.

    ರೆಫ್ರಿಗಳಿಗೂ ಐಪಿಎಲ್ ಒಳ್ಳೆಯ ಸಂಭಾವನೆಯನ್ನ ನೀಡುತ್ತಿದೆ. ಜಾವಗಲ್ ಶ್ರೀನಾಥ್ ಹಲವು ವರ್ಷಗಳಿಂದ ಮ್ಯಾಚ್ ರೆಫ್ರಿಯಾಗಿದ್ದು, ಐಪಿಎಲ್ ನಿಂದ ಬರೋಬ್ಬರಿ 26.42 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶ್ರೀನಾಥ್ ಅವರನ್ನು ಹತ್ತು ವರ್ಷಗಳ ಹಿಂದೆ ಮ್ಯಾಚ್ ರೆಫ್ರಿಯಾಗಿ ನೇಮಕ ಮಾಡಿಕೊಂಡಿತ್ತು. ಇದೂವರೆಗೂ 24 ಟೆಸ್ಟ್, 122 ಅಂತರಾಷ್ಟ್ರೀಯ ಏಕದಿನ ಮತ್ತು 25 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಶ್ರೀನಾಥ್ ಮ್ಯಾಚ್ ರೆಫ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮತ್ತೊಬ್ಬ ಅಂಪೈರ್ ಕೆ.ಎನ್. ಅನಂತಪದ್ಮನಾಭನ್ ಅವರಿಗೆ 26.65 ಲಕ್ಷ ರೂ.ಸಂಬಳವನ್ನು ಬಿಸಿಸಿಐ ನೀಡಿದೆ.

    ಇದನ್ನೂ ಓದಿ: ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ದೆಹಲಿ ಮೂಲದವರಾದ ಅನಿಲ್ ಚೌಧರಿ ವಿಶ್ವ ಕ್ರಿಕೆಟ್‍ನ ಅಂಪೈರ್‍ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನಿಲ್ ಈಗಾಗಲೇ 39 ಐಪಿಎಲ್ ಮ್ಯಾಚ್‍ಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 17 ಏಕದಿನ ಪಂದ್ಯಗಳು ಮತ್ತು 16 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಅಂಪೈರಾಗಿ ಕೆಲಸ ಮಾಡಿದ್ದಾರೆ.

    ಸಿ.ಕೆ.ನಂದನ್ ಇವರು ಹುಟ್ಟಿದ್ದು ದೆಹಲಿ ಆದರೆ ರಣಜಿ ಕ್ರಿಕೆಟ್‍ನಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಆಡಿದ್ದಾರೆ. ನಂದನ್ 6 ಅಂತರಾಷ್ಟ್ರೀಯ ಏಕದಿನ ಪಂದ್ಯಗಳು ಮತ್ತು 7 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿದ್ದರು.

    ಹೈದರಾಬಾದ್ ನಿವಾಸಿಯಾಗಿರುವ ಸಿ.ಸಂಶುದ್ದೀನ್ ಇದೂವರೆಗೂ 17 ಅಂತರಾಷ್ಟ್ರೀಯ ಏಕದಿನ ಪಂದ್ಯ ಮತ್ತು 11 ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿರುವ ಅನುಭವವಿದೆ.

    ಇದನ್ನೂ ಓದಿ: ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

  • ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

    ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

    ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರವೀಂದ್ರ ಜಡೇಜಾ ಬೌಲಿಂಗ್‍ನಲ್ಲಿ ಆರ್.ಅಶ್ವೀನ್‍ರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇಯ ಸ್ಥಾನದಲ್ಲಿದ್ದಾರೆ.

    ಬ್ಯಾಟಿಂಗ್‍ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ 941 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಪೂಜಾರ 861 ಅಂಕ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಇನ್ನೂ ನಾಯಕ ವಿರಾಟ್ ಕೊಹ್ಲಿ 826 ಅಂಕಗಳನ್ನು ಪಡೆಯುವ ಮೂಲಕ ನಾಲ್ಕನೇಯ ಸ್ಥಾನದಲ್ಲಿದ್ದಾರೆ. ಅಜಿಂಕ್ಯಾ ರೆಹಾನೆ 704 ಅಂಕಗಳನ್ನು ಪಡೆಯುವ ಮೂಲಕ 17ನೇ ಸ್ಥಾನದಲ್ಲಿದ್ದಾರೆ.

    ಆಲ್ ರೌಂಡರ್ ವಿಭಾಗದಲ್ಲಿ ನೆರೆಯ ಬಾಂಗ್ಲಾದೇಶದ ಶಕೀಬ್-ಅಲ್-ಹಸನ್ 431 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

    ಏಕದಿನ ಪಂದ್ಯಗಳ ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮೊದಲ ಸ್ಥಾನ, ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನೂ ರೋಹಿತ್ ಶರ್ಮಾ, ಎಂ.ಎಸ್.ಧೋನಿ ಮತ್ತು ಶಿಖರ್ ಧವನ್ ಕ್ರಮವಾಗಿ 12, 13 ಮತ್ತು 15ನೇ ಸ್ಥಾನದಲ್ಲಿದ್ದಾರೆ.

    ಏಕದಿನ ಪಂದ್ಯಗಳ ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಇಮ್ರಾನ್ ತಾಹೀರ್ ಮೊದಲ ಸ್ಥಾನದಲ್ಲಿದ್ದಾರೆ. ಭಾರತದ ಅಕ್ಷರ್ ಪಟೇಲ್, ಅಮೀತ್ ಮಿಶ್ರಾ ಮತ್ತು ಅಶ್ವಿನ್ ಕ್ರಮವಾಗಿ 11, 13 ಮತ್ತು 20 ನೇ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ಬಾಂಗ್ಲಾ ದೇಶದ ಶಕೀಬ್-ಅಲ್-ಹಸನ್ ಮೊದಲ ಸ್ಥಾನದಲ್ಲಿದ್ದು. ಭಾರತದ ರವೀಂದ್ರ ಜಡೇಜಾ 10 ನೇ ಸ್ಥಾನದಲ್ಲಿದ್ದಾರೆ.