Tag: ICC

  • ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

    ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

    ನವದೆಹಲಿ: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ (Pakistan Cricket Board) ಒಪ್ಪಿಗೆ ಸೂಚಿಸಿದೆ. ಆದರೆ, ಅದಕ್ಕೆ ಕೆಲವು ಷರತ್ತುಗಳನ್ನೂ ವಿಧಿಸಿದೆ.

    ಟೂರ್ನಿ ವಿಚಾರಕ್ಕೆ ಭಾರತ-ಪಾಕಿಸ್ತಾನ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಭದ್ರತಾ ಕಾರಣಗಳಿಗಾಗಿ ಪಾಕಿಸ್ತಾನಕ್ಕೆ ಆಡಲು ಹೋಗುವುದಿಲ್ಲ ಎಂದು ನಿರಾಕರಿಸಿತ್ತು. ಆಗ, ಹೈಬ್ರಿಡ್ ಮಾದರಿಯ ಚಾಂಪಿಯನ್ಸ್ ಟ್ರೋಫಿ ನಡೆಸಲು ಐಸಿಸಿ ಪಾಕಿಸ್ತಾನಕ್ಕೆ ಸಲಹೆ ನೀಡಿತ್ತು. ಈಗ ಪಾಕಿಸ್ತಾನ ಒಪ್ಪಿಗೆ ಸೂಚಿಸಿದ್ದು, ಮೂರು ಷರತ್ತುಗಳನ್ನು ವಿಧಿಸಿದೆ ಎಂದು ವರದಿಯಾಗಿದೆ.

    ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಭಾರತ ಫೈನಲ್‌ಗೆ ಲಗ್ಗೆಯಿಟ್ಟರೆ ಅದು ಕೂಡ ದುಬೈನಲ್ಲೇ ನಡೆಯಲಿದೆ. ಒಂದು ವೇಳೆ, ಟೀಂ ಇಂಡಿಯಾ ಗ್ರೂಪ್ ಸ್ಟೇಜ್ ದಾಟದಿದ್ದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಪಾಕ್‌ನ ಲಾಹೋರ್‌ನಲ್ಲೇ ನಡೆಯಲಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಐಸಿಸಿ ಪಂದ್ಯ ಆಯೋಜಿಸಿದರೆ ಪಾಕಿಸ್ತಾನದ ಪಂದ್ಯಗಳು ತಟಸ್ಥ ಕೇಂದ್ರಗಳಿಗೆ ವರ್ಗಾಯಿಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಐಸಿಸಿ ನಡೆಸಿದ ಸಭೆಯಲ್ಲಿ ಷರತ್ತುಗಳನ್ನು ಹಾಕಿದೆ.

    ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಹೈಬ್ರಿಡ್ ಮಾದರಿಯ ಚರ್ಚೆಯ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮುಬಾಶಿರ್ ಉಸ್ಮಾನಿಯನ್ನು ದುಬೈನಲ್ಲಿ ಭೇಟಿಯಾದರು.

    ಸಭೆಗೆ ಸಂಬಂಧಿಸಿದಂತೆ ಪಿಸಿಬಿ ಹೇಳಿಕೆಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲು ಪಾಕಿಸ್ತಾನ ಸಿದ್ಧವಾಗಿದೆ. ಎಲ್ಲಾ ಸಿದ್ಧತೆಗಳು ವೇಳಾಪಟ್ಟಿಯಲ್ಲಿದೆ ಎಂದು ನಖ್ವಿ ಉಸ್ಮಾನಿಗೆ ತಿಳಿಸಿದ್ದಾರೆ.

    ಪಾಕಿಸ್ತಾನದಲ್ಲಿ ಪರಿಸ್ಥಿತಿ ಸ್ಥಿರವಾಗಿದೆ. ಮೆಗಾ-ಈವೆಂಟ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೆ ರಾಜ್ಯ ಮಟ್ಟದ ಭದ್ರತೆಯನ್ನು ಒದಗಿಸಲಾಗುವುದು ಎಂದು ನಖ್ವಿ ಹೇಳಿದ್ದಾರೆ. ಪಂದ್ಯಾವಳಿಗೆ ಆತಿಥ್ಯ ವಹಿಸುವ ಕ್ರೀಡಾಂಗಣಗಳ ನಿರ್ಮಾಣ ಕಾರ್ಯವೂ ನಿಗದಿತ ಸಮಯಕ್ಕೆ ಸರಿಯಾಗಿದೆ. ಪಾಕಿಸ್ತಾನದ ಜನರು ದೇಶದಲ್ಲಿ ಉತ್ತಮ ತಂಡಗಳು ಮತ್ತು ಆಟಗಾರರು ಆಡುವುದನ್ನು ವೀಕ್ಷಿಸಲು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದ ಐಸಿಸಿ

    ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದ ಐಸಿಸಿ

    ಟೆಲ್‌ ಅವಿವ್‌: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವ ಹೊತ್ತಿನಲ್ಲೇ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹಾಗೂ ಇಸ್ರೇಲ್‌ನ ಮಾಜಿ ರಕ್ಷಣಾ ಸಚಿವ‌ ಯೋವ್‌ ಗ್ಯಾಲಂಟ್‌ (Yoav Gallant) ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ (ICC) ಬಂಧನ ವಾರೆಂಟ್‌ ಹೊರಡಿಸಿದೆ.

    ಗಾಜಾ ಪಟ್ಟಿಯಲ್ಲಿನ (Gaza Strip) ಯುದ್ಧ ಹಾಗೂ 2023ರ ಅಕ್ಟೋಬರ್‌ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವೀಯತೆಯ ವಿರುದ್ಧ ಅಪರಾಧ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕೋರ್ಟ್‌ ನೆತನ್ಯಾಹು ಹಾಗೂ ಗ್ಯಾಲಂಟ್ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿದೆ. ಇದನ್ನೂ ಓದಿ: Uttar Pradesh| ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ – ಐವರು ಸಾವು, 15 ಮಂದಿಗೆ ಗಾಯ

    ಜೊತೆಗೆ ಹಮಾಸ್ (Hamas) ಮಿಲಿಟರಿ ಪಡೆಯ ಮುಖ್ಯಸ್ಥರಾದ ಮೊಹಮ್ಮದ್ ಡೆಫ್ (Mohammed Deif) ಹಾಗೂ ಮುಖ್ಯಸ್ಥ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ವಿರುದ್ಧವೂ ಬಂಧನ ವಾರೆಂಟ್‌ ಹೊರಡಿಸಿದೆ. ಇದನ್ನೂ ಓದಿ: ಉಕ್ರೇನ್‌ ಮೇಲೆ ರಷ್ಯಾದ ICBM ದಾಳಿ – 60 ವರ್ಷಗಳ ಇತಿಹಾಸದಲ್ಲೇ ಯುದ್ಧಕ್ಕೆ ಕ್ಷಿಪಣಿ ಮೊದಲ ಬಳಕೆ

    ಕಳೆದ ಮೇ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಇಸ್ರೇಲ್‌ ನಾಯಕರ ವಿರುದ್ಧ ಯುದ್ಧಾಪರಾಧಗಳು ಹಾಗೂ ಮಾನವೀಯತೆಯ ವಿರುದ್ಧದದ ಅಪರಾಧಗಳಿಗಾಗಿ ವಾರೆಂಟ್‌ ಜಾರಿಗೊಳಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಮನವಿಯನ್ನು ಕೋರ್ಟ್‌ ಪುರಸ್ಕರಿಸಿತು. ಐಸಿಸಿಯ ಪ್ರೀ-ಟ್ರಯಲ್ ಚೇಂಬರ್ I, ತ್ರಿಸದಸ್ಯ ನ್ಯಾಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು.

    ವಿಚಾರಣೆ ವೇಳೆ ಇಸ್ರೇಲ್‌ ದಾಳಿಯಿಂದ ಗಾಜಾದ ಜನ ಸಂಕಷ್ಟಕ್ಕೀಡಾಗಿದ್ದಾರೆ. ಆಹಾರ, ನೀರು, ಔಷಧ, ವೈದ್ಯಕೀಯ ಸೌಲಭ್ಯ, ಇಂಧನ ಹಾಗೂ ವಿದ್ಯುತ್‌ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂಬ ಅಂಶಗಳನ್ನು ಕೋರ್ಟ್‌ ಉಲ್ಲೇಖಿಸಿತು. ಅಲ್ಲದೇ ನಾಗರಿಕರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲು ನಿರ್ದೇಶನ ನೀಡುವುದು ಮತ್ತು ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುವುದು ಅಪರಾಧ ಎಂದಿರುವ ನೆತನ್ಯಾಹು ಸೇರಿ ಹಲವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಇದನ್ನೂ ಓದಿ: 56 ವರ್ಷಗಳ ಬಳಿಕ ಗಯಾನದಲ್ಲಿ ಭಾರತದ ಪ್ರಧಾನಿ – ಮೋದಿಗೆ ಭವ್ಯವಾದ ಸ್ವಾಗತ

    ಈ ನಡುವೆ ನೆತನ್ಯಾಹು ನೆದರ್ಲೆಂಡ್‌ಗೆ ಪ್ರಯಾಣಿಸುವ ಸಾಧ್ಯತೆಯಿದೆ. ಒಂದು ವೇಳೆ ತೆರಳಿದರೆ, ಐಸಿಸಿ ವಾರೆಂಟ್‌ ಅಡಿಯಲ್ಲಿ ಅಲ್ಲಿಯೇ ಬಂಧಿಸಲಾಗುತ್ತದೆ ಎಂದು ಡಚ್ ವಿದೇಶಾಂಗ ಸಚಿವ ಕ್ಯಾಸ್ಪರ್ ವೆಲ್ಡ್‌ಕ್ಯಾಂಪ್ ಹೇಳಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್‌ 

  • ICC Champions Trophy 2025 | ಈ ವಾರವೇ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ

    ICC Champions Trophy 2025 | ಈ ವಾರವೇ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ

    – ಹೈಬ್ರಿಡ್‌ ಮಾದರಿ ಒಪ್ಪಿಕೊಳ್ಳುವಂತೆ ಪಿಸಿಬಿ ಮೇಲೆ ಐಸಿಸಿ ಒತ್ತಡ
    – ಭಾರತಕ್ಕೆ ಸಮಸ್ಯೆಯಿದ್ದರೆ ಮಾತನಾಡಿ ಬಗೆಹರಿಸೋಣ ಎಂದ ಪಿಸಿಬಿ

    ಇಸ್ಲಾಮಾಬಾದ್‌/ಅಬುದಾಬಿ: 2025ರ ಫೆಬ್ರವರಿ 19 ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಯ ವೇಳಾಪಟ್ಟಿಯು ಇದೇ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    50 ಓವರ್‌ಗಳ ಏಕದಿನ ಮಾದರಿಯ ಪಂದ್ಯ ಇದಾಗಿದೆ. ಈಗಾಗಲೇ ಪಾಕಿಸ್ತಾನ ಐಸಿಸಿ ಅನುಮತಿಗಾಗಿ ತಾತ್ಕಾಲಿಕ ವೇಳಾಪಟ್ಟಿ ಸಲ್ಲಿಸಿದ್ದು, ಅಂತಿಮ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಸಕ್ತ ಟೂರ್ನಿಗೆ ಪಾಕಿಸ್ತಾನದ (Pakistan) ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಪಾಕ್‌, ಭಾರತದ ಎಲ್ಲ ಪಂದ್ಯಗಳನ್ನು ಲಾಹೋರ್‌ ಕ್ರೀಡಾಂಗಣದಲ್ಲಿ ನಿಗದಿಪಡಿಸಿದೆ.

    ಹೈಬ್ರಿಡ್‌ ಮಾದರಿಗೆ ಒಪ್ಪಲು ಒತ್ತಡ:
    2025ರ ಚಾಂಪಿಯನ್ಸ್‌ ಟ್ರೋಫಿಗಾಗಿ ಟೀಂ ಇಂಡಿಯಾ (Team India) ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಹಾಗಾಗಿ ಹೈಬ್ರಿಡ್‌ ಮಾದರಿಗೆ ಒಪ್ಪಿಕೊಳ್ಳುವಂತೆ ಐಸಿಸಿಯ (ICC) ಉನ್ನತ ಅಧಿಕಾರಿಗಳು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಆದ್ರೆ ಇದ್ಯಾವುದಕ್ಕೂ ಕಿವಿಗೊಡದ ಪಿಸಿಬಿ ಈ ಬಾರಿ ಭಾರತ, ಬರಲಿ ಬರದೇ ಇರಲಿ, ಪಾಕ್‌ ನಲ್ಲೇ ಟೂರ್ನಿ ನಡೆಯಲಿದೆ ಎಂದು ಹೇಳಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಶಫಾಲಿ ವರ್ಮಾ, ಶ್ರೇಯಾಂಕಾ ಪಾಟೀಲ್ ಕೈಬಿಟ್ಟ ಭಾರತ

    ಸಮಸ್ಯೆಯಿದ್ದರೆ ಮಾತನಾಡಿ ಬಗೆಹರಿಸೋಣ:
    ಇನ್ನೂ ಪಾಕ್‌ಗೆ ಬರಲು ಒಪ್ಪದ ಬಿಸಿಸಿಐ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಿರುವ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ (Mohsin Naqvi), ಪಾಕಿಸ್ತಾನಕ್ಕೆ ಬರಲು ಸಮಸ್ಯೆಯಿದ್ದರೆ ಮಾತನಾಡಿ ಬಗೆಹರಿಸೋಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದು ಪಾಕಿಸ್ತಾನದ ಪ್ರತಿಷ್ಠೆ, ಭಾರತದ ಷರತ್ತಿಗೆ ನಮ್ಮ ಸಮ್ಮತಿಯಿಲ್ಲ: ಪಿಸಿಬಿ ಮೊಂಡಾಟ

    ಪಿಸಿಬಿ ಹೈಬ್ರಿಡ್‌ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಉತ್ಸುಕವಾಗಿಲ್ಲ. ಚಾಂಪಿಯನ್ಸ್‌ ಟ್ರೋಫಿ ವಿಚಾರದಲ್ಲಿ ಐಸಿಸಿ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಈಗಾಗಲೇ ಟ್ರೋಫಿ ಆಯೋಜಿಸುವ ಸಲುವಾಗಿ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳನ್ನು ನವೀಕರಿಸಲು ಪಾಕಿಸ್ತಾನವು 17 ಶತಕೋಟಿ ರೂ.ಗಳನ್ನ (ಪಾಕಿಸ್ತಾನ ರೂಪಾಯಿ) ವಿನಿಯೋಗಿಸಿದೆ. ಅಲ್ಲದೇ ಇದು ಪಾಕಿಸ್ತಾನದ ಪ್ರತಿಷ್ಠೆಯಾಗಿದ್ದು, ಭಾರತ ತಂಡಕ್ಕಾಗಿ ಎದುರು ನೋಡುತ್ತಿದ್ದೇವೆ. ಕ್ರೀಡೆ ಮತ್ತು ರಾಜಕೀಯ ಪ್ರತ್ಯೇಕ ವಿಷಯಗಳು, ನಾವು ಎರಡನ್ನು ಒಟ್ಟಿಗೆ ಸೇರಿಸುವುದಿಲ್ಲ. ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದಿರುವ ಎಲ್ಲಾ ತಂಡಗಳು ಬರಲು ಸಿದ್ಧವಾಗಿವೆ. ಭಾರತಕ್ಕೆ ಕಾಳಜಿ ಇದ್ದರೆ ಬರಲಿ ಎಂದು ತಿಳಿಸಿದ್ದಾರೆ.

    ಬಿಸಿಸಿಐ ಷರತ್ತು ಏನು?
    ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ. ಇದನ್ನೂ ಓದಿ: 20 ವರ್ಷಗಳ ಬಳಿಕ ರಿಂಗ್‌ನಲ್ಲಿ ಘರ್ಜಿಸಿದ ಮೈಕ್‌ ಟೈಸನ್‌ – ಜೇಕ್ ಪಾಲ್ ವಿರುದ್ಧ ಸೋಲು

    ಐಸಿಸಿ ಮುಂದಿರುವ ಆಯ್ಕೆಗಳೇನು?
    ಆಯ್ಕೆ – 1
    ಬಿಸಿಸಿಐಯ ಹೈಬ್ರಿಡ್ ಮಾದರಿಯ ಪ್ರಸ್ತಾಪ ಒಪ್ಪಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಮನವರಿಕೆ ಮಾಡಿ, 15 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸುವುದು.
    ಆಯ್ಕೆ – 2
    ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದ ತೆಗೆದುಹಾಕುವುದು. ಇದರಿಂದ ಟ್ರೋಫಿಯಿಂದ ಪಾಕ್‌ ತಂಡ ದೂರ ಉಳಿಯಲಿದೆ.
    ಆಯ್ಕೆ – 3
    ಅನಿರ್ದಿಷ್ಟಾವಧಿವರೆಗೆ ಚಾಂಪಿಯನ್ಸ್ ಟ್ರೋಫಿ ಮುಂದೂಡುವುದು. ಈ ನಿರ್ಧಾರವು ICC ಮತ್ತು PCB ಎರಡರ ಆದಾಯದ ಮೇಲೆ ಭಾರಿ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ. ಇದನ್ನೂ ಓದಿ: Champions Trophy | ಪಾಕ್‌ ಆಕ್ರಮಿತ ಕಾಶ್ಮೀರ ಪ್ರವಾಸಕ್ಕೆ ಬಿಸಿಸಿಐ ಆಕ್ಷೇಪ, ನೋ ಎಂದ ಐಸಿಸಿ

  • ಇದು ಪಾಕಿಸ್ತಾನದ ಪ್ರತಿಷ್ಠೆ, ಭಾರತದ ಷರತ್ತಿಗೆ ನಮ್ಮ ಸಮ್ಮತಿಯಿಲ್ಲ: ಪಿಸಿಬಿ ಮೊಂಡಾಟ

    ಇದು ಪಾಕಿಸ್ತಾನದ ಪ್ರತಿಷ್ಠೆ, ಭಾರತದ ಷರತ್ತಿಗೆ ನಮ್ಮ ಸಮ್ಮತಿಯಿಲ್ಲ: ಪಿಸಿಬಿ ಮೊಂಡಾಟ

    – ಕ್ರೀಡಾಂಗಣ ನವೀಕರಣಕ್ಕೆ 17 ಶತಕೋಟಿ ಖರ್ಚು

    ಇಸ್ಲಾಮಾಬಾದ್‌: ಹೈಬ್ರಿಡ್‌ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ಆಯೋಜಿಸುವ ವಿಚಾರದಲ್ಲಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮತ್ತೆ ಕ್ಯಾತೆ ತೆಗೆದಿದೆ. ಇದು ಪಾಕಿಸ್ತಾನದ ಗೌರವ, ಪ್ರತಿಷ್ಠೆ. ಬಿಸಿಸಿಐ ಷರತ್ತಿನಂತೆ ಹೈಬ್ರಿಡ್‌ ಮಾದರಿಯಲ್ಲಿ ಆಯೋಜಿಸಲಾಗುವುದಿಲ್ಲ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.

    ಸೋಮವಾರ ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನವೀಕರಣ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಸಿಬಿ ಹೈಬ್ರಿಡ್‌ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಉತ್ಸುಕವಾಗಿಲ್ಲ. ಚಾಂಪಿಯನ್ಸ್‌ ಟ್ರೋಫಿ ವಿಚಾರದಲ್ಲಿ ಐಸಿಸಿ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ಉಗ್ರರ ದಾಳಿಯದ್ದೇ ಭೀತಿ – ಐಸಿಸಿ ಬಳಿ ಇರೋದು ಮೂರೇ ಆಯ್ಕೆ

    ಈಗಾಗಲೇ ಟ್ರೋಫಿ ಆಯೋಜಿಸುವ ಸಲುವಾಗಿ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳನ್ನು ನವೀಕರಿಸಲು ಪಾಕಿಸ್ತಾನವು 17 ಶತಕೋಟಿ ರೂ.ಗಳನ್ನ ವಿನಿಯೋಗಿಸಿದೆ. ಅಲ್ಲದೇ ಇದು ಪಾಕಿಸ್ತಾನದ ಪ್ರತಿಷ್ಠೆಯಾಗಿದ್ದು, ಭಾರತ ತಂಡಕ್ಕಾಗಿ ಎದುರು ನೋಡುತ್ತಿದ್ದೇವೆ. ಕ್ರೀಡೆ ಮತ್ತು ರಾಜಕೀಯ ಪ್ರತ್ಯೇಕ ವಿಷಯಗಳು, ನಾವು ಎರಡನ್ನು ಒಟ್ಟಿಗೆ ಸೇರಿಸುವುದಿಲ್ಲ. ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದಿರುವ ಎಲ್ಲಾ ತಂಡಗಳು ಬರಲು ಸಿದ್ಧವಾಗಿವೆ. ಭಾರತಕ್ಕೆ ಕಾಳಜಿ ಇದ್ದರೆ ಬರಲಿ. ನಾವು ಕಾಳಜಿಯಿಂದ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಈಗಾಗಲೇ ಐಸಿಸಿಗೆ ವೇಳಾಪಟ್ಟಿಯನ್ನು ಕಳಿಸಿದ್ದೇವೆ. ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಟ್ರೋಫಿ ಆತಿಥ್ಯ ವಹಿಸುತ್ತಿವೆ. ಭಾರತದ ಎಲ್ಲ ಪಂದ್ಯಗಳೂ ಲಾಹೋರ್‌ ಕ್ರೀಡಾಂಗಣದಲ್ಲಿ ನಿಗದಿಯಾಗಿವೆ. ಶೀಘ್ರದಲ್ಲೇ ಐಸಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ. ಹಾಗಾಗಿ ಪಾಕ್‌ ತನ್ನ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 46 ಬೌಂಡರಿ, 12 ಸಿಕ್ಸರ್‌ – ಒಂದೇ ಇನ್ನಿಂಗ್ಸ್‌ನಲ್ಲಿ ಅಜೇಯ 426 ರನ್‌ ಚಚ್ಚಿ ಹೊಸ ದಾಖಲೆ ಸೃಷ್ಟಿ!

    ಬಿಸಿಸಿಐ ಷರತ್ತು ಏನು?
    ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ. ಇದನ್ನೂ ಓದಿ: Champions Trophy | ಪಾಕ್‌ ಆಕ್ರಮಿತ ಕಾಶ್ಮೀರ ಪ್ರವಾಸಕ್ಕೆ ಬಿಸಿಸಿಐ ಆಕ್ಷೇಪ, ನೋ ಎಂದ ಐಸಿಸಿ

    ಐಸಿಸಿ ಮುಂದಿರುವ ಆಯ್ಕೆಗಳೇನು?
    ಆಯ್ಕೆ – 1
    ಬಿಸಿಸಿಐಯ ಹೈಬ್ರಿಡ್ ಮಾದರಿಯ ಪ್ರಸ್ತಾಪ ಒಪ್ಪಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಮನವರಿಕೆ ಮಾಡಿ, ಇದು ಪಂದ್ಯಾವಳಿಯ 15 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸುವುದು.
    ಆಯ್ಕೆ – 2
    ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದ ತೆಗೆದುಹಾಕುವುದು. ಇದರಿಂದ ಟ್ರೋಫಿಯಿಂದ ಪಾಕ್‌ ತಂಡ ದೂರ ಉಳಿಯಲಿದೆ.
    ಆಯ್ಕೆ – 3
    ಅನಿರ್ದಿಷ್ಟಾವಧಿವರೆಗೆ ಚಾಂಪಿಯನ್ಸ್ ಟ್ರೋಫಿ ಮುಂದೂಡುವುದು. ಈ ನಿರ್ಧಾರವು ICC ಮತ್ತು PCB ಎರಡರ ಆದಾಯದ ಮೇಲೆ ಭಾರಿ ಪರಿಣಾಮ ಬೀರಬಹುದು.

  • Champions Trophy | ಪಾಕ್‌ ಆಕ್ರಮಿತ ಕಾಶ್ಮೀರ ಪ್ರವಾಸಕ್ಕೆ ಬಿಸಿಸಿಐ ಆಕ್ಷೇಪ, ನೋ ಎಂದ ಐಸಿಸಿ

    Champions Trophy | ಪಾಕ್‌ ಆಕ್ರಮಿತ ಕಾಶ್ಮೀರ ಪ್ರವಾಸಕ್ಕೆ ಬಿಸಿಸಿಐ ಆಕ್ಷೇಪ, ನೋ ಎಂದ ಐಸಿಸಿ

    ಇಸ್ಲಾಮಾಬಾದ್‌/ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ (Ind vs Pak) ನಡುವೆ ಚಾಂಪಿಯನ್ಸ್‌ ಟ್ರೋಫಿ-2025 (Champions Trophy 2025) ಆಯೋಜನೆ ಕುರಿತು ಹಗ್ಗಜಗ್ಗಾಟ ನಡೆಯುತ್ತಿದೆ. ಈ ಬಾರಿಯ ಆತಿಥ್ಯ ಪಾಕ್‌ ಕೈಯಲ್ಲೇ ಇದ್ದರೂ ಐಸಿಸಿ ಪಾಲಿಗೆ ಚಿನ್ನದ ಮೊಟ್ಟೆಯಾಗಿರುವ ಬಿಸಿಸಿಐ ನಿರ್ಧಾರದ ಮೇಲೆ ಐಸಿಸಿ (ICC) ಸ್ಥಳ ನಿಗದಿ ಮಾಡುವ ಬಗ್ಗೆ‌ ನಿರ್ಧಾರಕ್ಕೆ ಮುಂದಾಗಿದೆ. ಈ ನಡುವೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (POK) ಟ್ರೋಫಿ ಪ್ರವಾಸವನ್ನು ರದ್ದುಗೊಳಿಸಲು ಐಸಿಸಿ ನಿರ್ಧರಿಸಿದೆ.

    ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jay Shah), ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಪಿಒಕೆ ವ್ಯಾಪ್ತಿಯಲ್ಲಿರುವ ಸ್ಕರ್ದು, ಮುರ್ರೆ ಮತ್ತು ಮುಜಫರಾಬಾದ್‌ಗೆ ಚಾಂಪಿಯನ್ಸ್‌ ಟ್ರೋಫಿಯನ್ನು ಸ್ಥಳಾಂತರಿಸಲಾಗುವುದಿಲ್ಲ ಎಂದು ಐಸಿಸಿ ಹೇಳಿದೆ. ಅಲ್ಲದೇ ಟ್ರೋಫಿ ಪ್ರವಾಸದ ಕುರಿತು ಅಂತಿಮಗೊಳಿಸುವ ಬಗ್ಗೆ ಚರ್ಚೆಯಲ್ಲಿದ್ದೇವೆ. ಯಾವುದೇ ತೀರ್ಮಾನವನ್ನು ಐಸಿಸಿಯೇ ಪ್ರಕಟಿಸಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದೆ.

    ಮುಂದಿನ ವರ್ಷ 2025ರ ಫೆಬ್ರವರಿ 19 ರಿಂದ ಮಾರ್ಚ್ 9ರ ವರೆಗೆ ಐಸಿಸಿ ಚಾಂಪಿಯನ್‌ಶಿಪ್ ಟ್ರೋಫಿ ಪಂದ್ಯಗಳು ನಡೆಯಲಿವೆ. ಪಾಕಿಸ್ತಾನದ ರಾವಲ್ಪಿಂಡಿ, ಮುಲ್ತಾನ್‌ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಟೂರ್ನಿಗೆ ಆತಿಥ್ಯ ವಹಿಸಿವೆ. ಭಾರತದ ಎಲ್ಲಾ ಪಂದ್ಯಗಳು ಲಾಹೋರ್‌ನಲ್ಲಿ ನಿಗದಿಯಾಗಿವರೆ. ಬಿಸಿಸಿಐ ಈಗಾಗಲೇ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣ ಮಾಡಲು ನಿರಾಕರಿಸಿರೋದ್ರಿಂದ ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿವೆ ಎಂದು ಹೇಳಲಾಗುತ್ತಿದೆ. ಆದ್ರೆ ಪಿಸಿಬಿ ಈ ಹೇಳಿಕೆಗಳನ್ನು ತಳ್ಳಿಹಾಕಿದೆ.

    ಐಸಿಸಿ ಮುಂದಿರುವ ಆಯ್ಕೆಗಳೇನು?
    ಆಯ್ಕೆ – 1
    ಬಿಸಿಸಿಐಯ ಹೈಬ್ರಿಡ್ ಮಾದರಿಯ ಪ್ರಸ್ತಾಪ ಒಪ್ಪಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಮನವರಿಕೆ ಮಾಡಿ, ಇದು ಪಂದ್ಯಾವಳಿಯ 15 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸುವುದು.
    ಆಯ್ಕೆ – 2
    ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದ ತೆಗೆದುಹಾಕುವುದು. ಇದರಿಂದ ಟ್ರೋಫಿಯಿಂದ ಪಾಕ್‌ ತಂಡ ದೂರ ಉಳಿಯಲಿದೆ.
    ಆಯ್ಕೆ – 3
    ಅನಿರ್ದಿಷ್ಟಾವಧಿವರೆಗೆ ಚಾಂಪಿಯನ್ಸ್ ಟ್ರೋಫಿ ಮುಂದೂಡುವುದು. ಈ ನಿರ್ಧಾರವು ICC ಮತ್ತು PCB ಎರಡರ ಆದಾಯದ ಮೇಲೆ ಭಾರಿ ಪರಿಣಾಮ ಬೀರಬಹುದು.

    ಒಂದು ವೇಳೆ, ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಪಾಲ್ಗೊಳ್ಳುವಿಕೆಯಿಂದ ಹಿಂದಕ್ಕೆ ಸರಿದರೆ ಐಸಿಸಿಗೆ ನೂರಾರು ಕೋಟಿ ಮತ್ತು ಪಾಕಿಸ್ತಾನಕ್ಕೆ ಸುಮಾರು 1,800 ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಬಿಸಿಸಿಐ, ಈಗಾಗಲೇ ಹೈಬ್ರಿಡ್ ಮಾದರಿಗೆ ಒತ್ತಡ ಹೇರುತ್ತಿದೆ. ಐಸಿಸಿ ಕೂಡ ಈ ಬಗ್ಗೆ ಚಿಂತನೆ ನಡೆಸಿದೆ. ಒಂದು ವೇಳೆ ಪಾಕ್‌ ಟೂರ್ನಿ ಆಯೋಜನೆಯಿಂದ ಹಿಂದೆ ಸರಿದರೆ, ಇಡೀ ಟೂರ್ನಿಯನ್ನೇ ದಕ್ಷಿಣ ಆಫ್ರಿಕಾದಲ್ಲಿ ಆಯೋಜನೆ ಮಾಡುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.

  • ಟೀಂ ಇಂಡಿಯಾಕ್ಕೆ ಉಗ್ರರ ದಾಳಿಯದ್ದೇ ಭೀತಿ – ಐಸಿಸಿ ಬಳಿ ಇರೋದು ಮೂರೇ ಆಯ್ಕೆ

    ಟೀಂ ಇಂಡಿಯಾಕ್ಕೆ ಉಗ್ರರ ದಾಳಿಯದ್ದೇ ಭೀತಿ – ಐಸಿಸಿ ಬಳಿ ಇರೋದು ಮೂರೇ ಆಯ್ಕೆ

    ಮುಂಬೈ/ಅಬುದಾಬಿ: 2025ರ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಎಲ್ಲಿ, ಯಾವಾಗ ನಡೆಯುತ್ತದೆ? ಎಂಬುದು ವಿಶ್ವ ಕ್ರಿಕೆಟ್‌ನಲ್ಲಿ ದೊಡ್ಡ ಪ್ರಶ್ನೆಯಾಗಿದೆ. ಈ ನಡುವೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಐಸಿಸಿಗೆ ಬರೆದ ಪತ್ರದಲ್ಲಿ ಉಗ್ರರ ದಾಳಿಯ (Terrorists Attack) ಭೀತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

    ಈ ಬಾರಿ ʻಚಾಂಪಿಯನ್ಸ್‌ ಟ್ರೋಫಿʼಯ ಆತಿಥ್ಯ ಪಾಕ್‌ ಬಳಿಯೇ ಇದ್ದರೂ, ವಿಶ್ವದ ಪವರ್‌ಫುಲ್‌ ಕ್ರಿಕೆಟ್‌ ಸಂಸ್ಥೆ ಬಿಸಿಸಿಐ (BCCI) ನಿರ್ಧಾರದ ಮೇಲೆ ನಿಂತಿದೆ. ಬಿಸಿಸಿಐ ಬಿಲ್‌ಕುಲ್‌ ಬರಲ್ಲ ಎಂದು ಹೇಳಿದ್ದರೂ, ಪಾಕ್‌ ತನ್ನ ನಿಲುವಿನಿಂದ ಹಿಂದೆ ಸರಿದಿಲ್ಲ. ಭಾರತ ಬಾರದಿದ್ದರೂ ಚಾಂಪಿಯನ್ಸ್‌ ಟ್ರೋಫಿ ಪಾಕ್‌ನಲ್ಲಿ (Pakistan) ನಡೆಸುವುದಾಗಿ ಪಟ್ಟು ಹಿಡಿದಿದೆ. ಅಲ್ಲದೇ ಟೀಂ ಇಂಡಿಯಾ ಪಾಕ್‌ಗೆ ಪ್ರಯಾಣಿಸದಿರಲು ಲಿಖಿತ ರೂಪದಲ್ಲಿ ಐಸಿಸಿಗೆ ಕಾರಣ ತಿಳಿಸುವಂತೆ ಹೇಳಿತ್ತು. ಅದರಂತೆ ಬಿಸಿಸಿಐ ಐಸಿಸಿಗೆ (ICC) ಕಾರಣ ತಿಳಿಸಿದೆ.

    ಬಿಸಿಸಿಐ, ಐಸಿಸಿಗೆ ಬರೆದ ಪತ್ರದಲ್ಲಿ, ಟೀಂ ಇಂಡಿಯಾ (Team India) ಕ್ರಿಕೆಟ್‌ ಆಟಗಾರ ಸುರಕ್ಷತೆಯ ಬಗ್ಗೆ ಬಿಸಿಸಿಐ ಉಲ್ಲೇಖಿಸಿರುವುದಾಗಿ ʻಸ್ಪೋರ್ಟ್ಸ್‌ ಟಾಕ್‌ʼ ವರದಿ ಮಾಡಿದೆ. ಇದನ್ನೂ ಓದಿ: Ranji Trophy: ಇನ್ನಿಂಗ್ಸ್‌ನ ಎಲ್ಲಾ 10 ವಿಕೆಟ್‌ ಕಿತ್ತು ದಾಖಲೆ ಬರೆದ ಅಂಶುಲ್‌ ಕಾಂಬೋಜ್‌

    ಹೌದು. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳ ಬಗ್ಗೆ ಬಿಸಿಸಿಐಗೆ ಕಳವಳವಿದೆ. ಈಗ ಗಡಿಯಾಚೆಗೆ ಭಯೋತ್ಪಾದನೆ ನಡೆಯುತ್ತಿದೆ. ಭಾರತೀಯ ಕ್ರಿಕೆಟ್‌ ತಂಡ ಸಾಮಾನ್ಯರಿಂದ ಪ್ರೀತಿ ಗಳಿಸಬಹುದಾದರೂ ಉಗ್ರರಿಂದ ದಾಳಿಗೆ ಗುರಿಯಾಗುವ ಸಾಧ್ಯತೆ ಹೆಚ್ಚಾಗಿದೆ. 2009ರ ಟಿ20 ವಿಶ್ವಕಪ್‌ ವೇಳೆ ಶ್ರೀಲಂಕಾ ತಂಡದ ಮೇಲೆ ಆಗಿದ್ದ ದಾಳಿಯೇ ಇದಕ್ಕೆ ಉದಾಹರಣೆ ಎಂದು ಬಿಸಿಸಿಐ, ಐಸಿಸಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಸದ್ಯ ಬಿಸಿಸಿಐ ಮತ್ತು ಪಿಸಿಬಿ ತಮ್ಮ ನಿಲುವುಗಳಿಂದ ಹಿಂದೆ ಸರಿಯಲು ಸಿದ್ಧರಿಲ್ಲ. ಆದರೂ ಸಮಸ್ಯೆ ಬಗೆಹರಿಸುವ ಜವಾಬ್ದಾರಿ ಐಸಿಸಿ ಮೇಲಿದ್ದು, ಟೂರ್ನಿ ನಡೆಸಲು ಮೂರು ಆಯ್ಕೆಗಳು ಮಾತ್ರ ಇವೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ ಬರಲಿ, ಬಾರದೇ ಇರಲಿ ನಾವು ಚಾಂಪಿಯನ್ಸ್‌ ಟ್ರೋಫಿ ಆಯೋಜಿಸುತ್ತೇವೆ: ಪಾಕಿಸ್ತಾನ

    ಆಯ್ಕೆ – 1
    ಬಿಸಿಸಿಐಯ ಹೈಬ್ರಿಡ್ ಮಾದರಿಯ ಪ್ರಸ್ತಾಪ ಒಪ್ಪಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಮನವರಿಕೆ ಮಾಡಿ, ಇದು ಪಂದ್ಯಾವಳಿಯ 15 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸುವುದು.

    ಆಯ್ಕೆ – 2
    ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದ ತೆಗೆದುಹಾಕುವುದು. ಇದರಿಂದ ಟ್ರೋಫಿಯಿಂದ ಪಾಕ್‌ ತಂಡ ದೂರ ಉಳಿಯಲಿದೆ.

    ಆಯ್ಕೆ – 3
    ಅನಿರ್ದಿಷ್ಟಾವಧಿವರೆಗೆ ಚಾಂಪಿಯನ್ಸ್ ಟ್ರೋಫಿ ಮುಂದೂಡುವುದು. ಈ ನಿರ್ಧಾರವು ICC ಮತ್ತು PCB ಎರಡರ ಆದಾಯದ ಮೇಲೆ ಭಾರಿ ಪರಿಣಾಮ ಬೀರಬಹುದು.

    2006ರಲ್ಲಿ ಭಾರತ ಕೊನೆಯ ಬಾರಿಗೆ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ನಂತರ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿಗಳಲ್ಲಿ ಮಾತ್ರವೇ ಪಾಲ್ಗೊಳ್ಳುತ್ತಿವೆ.

  • ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    – ಭಾರತ-ಪಾಕ್‌ ಇರೋದ್ರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ ಎಂದ ರಶೀದ್ ಲತೀಫ್

    ಇಸ್ಲಾಮಾಬಾದ್‌: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯಲ್ಲಿ‌ (hampions trophy) ಪಾಲ್ಗೊಳ್ಳುವ ವಿಚಾರದಲ್ಲಿ ಭಾರತ-ಪಾಕಿಸ್ತಾನದ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈಗಾಗಲೇ ಪಾಕ್‌ಗೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ, ಪಿಸಿಬಿ ಮಾತ್ರ ಬರಲೇಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಮಹತ್ವದ ಹೇಳಿಕೆಯೊಂದನ್ನು ನೀಡಿದೆ.

    ಪಾಕ್‌ ತಂಡದ ಮಾಜಿ ನಾಯಕ ರಶೀದ್ ಲತೀಫ್, ಭಾರತ ಈ ಬಾರಿ ಪಾಕಿಸ್ತಾನಕ್ಕೆ ಹೋಗದಿದ್ದರೆ, ಐಸಿಸಿ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ದೊಡ್ಡ ಹೆಜ್ಜೆಯನ್ನು ಪಿಸಿಬಿ ತೆಗೆದುಕೊಳ್ಳುತ್ತದೆ ಹೇಳಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಇದು ದ್ವಿಪಕ್ಷೀಯ ಸರಣಿ ಅಥವಾ ಏಷ್ಯಾ ಕಪ್ ಆಗಿದ್ದರೆ, ಭಾರತವು ಆಡಬೇಕೆ ಅಥವಾ ಬೇಡವೇ ಎಂದು ತಂಡಗಳನ್ನು ಕೇಳಬಹುದಿತ್ತು. ಇದು ದ್ವಿಪಕ್ಷೀಯ ಪಂದ್ಯವಾಗಿದ್ದರೆ, ಪಂದ್ಯವನ್ನು ರದ್ದು ಮಾಡಬಹುದಿತ್ತು. ಆದ್ರೆ ನೀವು ಈಗಾಗಲೇ ಸಹಿ ಮಾಡಿರುವುದರಿಂದ ಐಸಿಸಿ ಒಪ್ಪಂದಗಳನ್ನು ನಿರಾಕರಿಸಲಾಗುವುದಿಲ್ಲ. ಭಾರತವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: WPL 2025 | 3ನೇ ಆವೃತ್ತಿಗೆ ಭರ್ಜರಿ ತಯಾರಿ – ರೀಟೆನ್‌ ಪಟ್ಟಿ ರಿಲೀಸ್‌

    ಈಗಾಗಲೇ ಎಲ್ಲಾ ಪ್ರಸಾರಕರು ಮತ್ತು ಪ್ರಾಯೋಜಕರು 2024-31ರ ಅವಧಿಗೆ ಸಹಿ ಮಾಡಿದ್ದಾರೆ. ಭಾರತ ತಂಡ ಭಾಗವಹಿಸಲು ನಿರಾಕರಿಸಿದ್ರೆ ಬಲವಾದ ಕಾರಣ ಇರಬೇಕು. ಬಿಸಿಸಿಐ ಭದ್ರತೆಯ ಕಾರಣಗಳನ್ನು ನೀಡಿ ಟೂರ್ನಿ ನಿರಾಕರಿಸಲು ಮುಂದಾಗುತ್ತಿದೆ. ಹಾಗಾದರೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳು ಪಾಕಿಸ್ತಾನಕ್ಕೆ ಬರುತ್ತಿಲ್ಲವೇ? ಭಾರತವು ಪಾಕಿಸ್ತಾನಕ್ಕೆ ಹೋಗದಿದ್ದರೆ, ಪಾಕಿಸ್ತಾನವು ಐಸಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಮುಂದುವರಿದು ಪಾಕಿಸ್ತಾನ ಮತ್ತು ಭಾರತ ಇರುವುದರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ. ಭಾರತದಂತೆ ಪಾಕಿಸ್ತಾನ ಸರ್ಕಾರವೂ ನಾವು ಆಡುವುದಿಲ್ಲ ಎಂದು ಹೇಳಿದರೆ, ಯಾರೂ ಕೂಡ ಪಂದ್ಯವನ್ನು ವೀಕ್ಷಿಸುವುದಿಲ್ಲ. ಬಿಸಿಸಿಐನಿಂದಲೂ ಯಾವುದೇ ಪ್ರಯೋಜನ ಆಗೋದಿಲ್ಲ ಎಂದು ಕೆಣಕಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಹಾಲಿ ಚಾಂಪಿಯನ್ ಪಾಕಿಸ್ತಾನ ಸೇರಿದಂತೆ ತಲಾ 4 ತಂಡಗಳ ಎರಡು ಗುಂಪುಗಳನ್ನು ಒಳಗೊಂಡಿವೆ. ಈಗಾಗಲೇ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ನಿಗದಿಯಾಗಿದ್ದು, ಪಾಕಿಸ್ತಾನದ ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಆತಿಥ್ಯ ವಹಿಸಲು ಸಜ್ಜಾಗಿವೆ.

    ಬಿಸಿಸಿಐ ಷರತ್ತು ಏನು?
    ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 6,6,6,6,6,W,6 – ಒಂದೇ ಓವರ್‌ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ!

  • ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಮುಂಬೈ: 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ಪುರುಷರ ಕ್ರಿಕೆಟ್‌ ತಂಡ (Team India) ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಹೊಸ ಷರತ್ತು ಮುಂದಿಟ್ಟಿದೆ.

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ವೇಳಾಪಟ್ಟಿ ಸಹ ನಿಗದಿಯಾಗಿದ್ದು, ಭಾರತದ ಪಂದ್ಯಗಳಿಗೆ ಲಾಹೋರ್‌ ಕ್ರೀಡಾಂಗಣ ಆತಿಥ್ಯ ವಹಿಸಲು ಸಜ್ಜಾಗಿವೆ. ಈ ಸಂಬಂಧ ಬಿಸಿಸಿಐ ಪ್ರತಿಕ್ರಿಯೆ ನೀಡಿದ್ದು, ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಆದ್ರೆ ವರದಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪಾಕಿಸ್ತಾನ ನೆಲದಲ್ಲೇ ಭಾರತ ತನ್ನ ಪಂದ್ಯಗಳನ್ನಾಡಲಿದೆ ಎಂದು ಹೇಳಿಕೊಂಡಿದೆ.

    ಪಾಕ್‌ ಆಶ್ವಾಸನೆ ಏನು?
    ಭಾರತಕ್ಕೆ ಭದ್ರತೆಯ ಕೊರತೆ ಇದೆ ಅನ್ನಿಸಿದ್ರೆ, ಲಾಹೋರ್‌ನಲ್ಲಿ ಪಂದ್ಯಗಳನ್ನು ಆಡಿದ ಬಳಿಕ ಅದೇ ದಿನ ಭಾರತಕ್ಕೆ ಪ್ರಯಾಣಿಸಬಹುದು. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಡಲಿದೆ. ಇದರೊಂದಿಗೆ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ವಿಶೇಷ ಕೋಟಾ, ವೀಸಾ ವ್ಯವಸ್ಥೆ ಮಾಡುತ್ತೇವೆ ಎಂದು ಪಿಸಿಬಿ ಅಧ್ಯಕ್ಷ ನಖ್ವಿ ಹೇಳಿದ್ದಾರೆ.

    ಹೈಬ್ರಿಡ್‌ ಮಾದರಿಯಲ್ಲೇ ಟೂರ್ನಿ?
    ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಆದ್ರೆ ಈ ಬಗ್ಗೆ ಪಿಸಿಬಿ ಹಾಗೂ ಐಸಿಸಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು.

  • ಚಾಂಪಿಯನ್‌ ಕಿವೀಸ್‌ ಮಹಿಳಾ ತಂಡಕ್ಕೆ 19.6 ಕೋಟಿ ಬಹುಮಾನ – ಟೀಂ ಇಂಡಿಯಾಕ್ಕೆ ಸಿಕ್ಕಿದ್ದೆಷ್ಟು?

    ಚಾಂಪಿಯನ್‌ ಕಿವೀಸ್‌ ಮಹಿಳಾ ತಂಡಕ್ಕೆ 19.6 ಕೋಟಿ ಬಹುಮಾನ – ಟೀಂ ಇಂಡಿಯಾಕ್ಕೆ ಸಿಕ್ಕಿದ್ದೆಷ್ಟು?

    ದುಬೈ: ಇದೇ ಮೊದಲ ಬಾರಿಗೆ ಮಹಿಳಾ ಟಿ20 ವಿಶ್ವಕಪ್‌ (Women’s T20 World Cup) ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ನ್ಯೂಜಿಲೆಂಡ್‌ ಮಹಿಳಾ ತಂಡ (New Zealand Womens Team) ಕೋಟಿ ಕೋಟಿ ನಗದು ಬಹುಮಾನ ಬಾಚಿಕೊಂಡಿದೆ. ಅಲ್ಲದೇ 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ.

    ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ ಗೆಲುವು ಸಾಧಿಸಿದ ಕಿವೀಸ್‌ ಇದೇ ಮೊದಲ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಈ ಟ್ರೋಫಿಯೊಂದಿಗೆ 19.6 ಕೋಟಿ ರೂ. (2.34 ದಶಲಕ್ಷ ಡಾಲರ್‌) ನಗದು ಬಹುಮಾನವನ್ನು (Prize Money) ತನ್ನದಾಗಿಸಿಕೊಂಡಿತು. ಜೊತೆಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಬರೋಬ್ಬರಿ 9.8 ಕೋಟಿ ರೂ. (1.17 ದಶಲಕ್ಷ ಡಾಲರ್‌) ಬಹುಮಾನ ಪಡೆದುಕೊಂಡಿತು.

    ಭಾರತಕ್ಕೆ ಸಿಕ್ಕಿದ್ದೆಷ್ಟು?
    2024ರ ಮಹಿಳಾ ಟಿ20 ವಿಶ್ವಕಪ್‌ ಆವೃತ್ತಿಯ ಬಹುಮಾನವು ವಿನ್ನರ್‌ ಮತ್ತು ರನ್ನರ್‌ ಅಪ್‌ಗಳಿಗೆ ಸೀಮಿತವಾಗಿರದೇ ಸೆಮಿಸ್‌, ಲೀಗ್‌ ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡಿದ ಮೂರು ತಂಡಗಳಿಗೂ ಬಹುಮಾನ ನೀಡಲಾಗುತ್ತಿದೆ. ಸೆಮಿ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿದ ಆಸ್ಟ್ರೇಲಿಯಾ ಮಹಿಳಾ ತಂಡ 5.7 ಕೋಟಿ ರೂ. (6,75,000 ದಶಲಕ್ಷ ಡಾಲರ್‌) ಬಹುಮಾನ ಪಡೆದುಕೊಂಡಿದೆ. ಇದನ್ನೂ ಓದಿ: 36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್‌ ಗೆದ್ದ ಕಿವೀಸ್‌ – ಟೀಂ ಇಂಡಿಯಾ ಸೋಲಿಗೆ ಕಾರಣಗಳೇನು?

    ಸದ್ಯ ಗುಂಪು ಹಂತದ ಪಂದ್ಯಗಳಲ್ಲಿ ಇನ್ನೂ ರೇಟಿಂಗ್ಸ್‌ ನಿಗದಿಪಡಿಸಿಲ್ಲ. ಆದ್ರೆ ಲೀಗ್‌ ಸುತ್ತಿನ 4 ಪಂದ್ಯಗಳ ಪೈಕಿ 2 ರಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ (Team India Womens) 2.25 ಕೋಟಿ ರೂ. (2,70,000 ದಶಲಕ್ಷ ಡಾಲರ್)‌ ಬಹುಮಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಲೀಗ್‌ ಸುತ್ತಿನ ಮೂರು ತಂಡಗಳಿಗೂ ಒಂದೇ ಮೊತ್ತದ ಬಹುಮಾನ ನೀಡಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ICC Women’s T20 World Cup | ನ್ಯೂಜಿಲೆಂಡ್‌ಗೆ ಚೊಚ್ಚಲ ಚಾಂಪಿಯನ್‌ ಕಿರೀಟ

    ಕಿವೀಸ್‌ಗೆ ಐತಿಹಾಸಿಕ ಗೆಲುವು:
    ಈ ಹಿಂದೆಯೂ ಎರಡು ಬಾರಿ ಫೈನಲ್ ತಲುಪಿದ್ದ ನ್ಯೂಜಿಲೆಂಡ್ ಮಹಿಳಾ ತಂಡ 2009ರಲ್ಲಿ ಇಂಗ್ಲೆಂಡ್ ವಿರುದ್ಧ, 2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡು ರನ್ನರ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇನ್ನೂ 2023ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿವೀಸ್ ಮಹಿಳಾ ತಂಡ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

    ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಸೋಫಿ ಡಿವೈನ್‌ ನಾಯಕತ್ವದ ನ್ಯೂಜಿಲೆಂಡ್ ಆರಂಭಿಕ ಹಿನ್ನಡೆ ಅನುಭವಿಸಿದರೂ ಸವಾಲಿನ ಮೊತ್ತ ಕಲೆಹಾಕಿತು. 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಗೆಲುವಿಗೆ 159 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 9 ವಿಕೆಟ್‌ಗಳಿಗೆ 126 ರನ್‌ಗಳಷ್ಟೇ ಗಳಿಸಲು ಸಾಧ್ಯವಾಗಿ ಸೋಲು ಕಂಡಿತು. ಇದನ್ನೂ ಓದಿ:  ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌ 

  • ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

    ನಂಬಿಕೆ ಇಲ್ಲದಿದ್ರೆ ಪ್ರತಿ ಪಂದ್ಯ ಮುಗಿದ ಬಳಿಕ ಭಾರತಕ್ಕೆ ಮರಳಬಹುದು: ಬಿಸಿಸಿಐಗೆ ಪಾಕ್‌ ಹೊಸ ಆಫರ್‌

    ನವದೆಹಲಿ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದ್ದರೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾತ್ರ ಪದೇ ಪದೇ ಒತ್ತಾಯ ಮಾಡುತ್ತಲೇ ಇದೆ. ಈ ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ತನ್ನ ನೆಲದಲ್ಲೇ ನಡೆಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB), ಬಿಸಿಸಿಐ ಮುಂದೆ ಹೊಸ ಪ್ರಸ್ತಾಪ ಇಟ್ಟಿದೆ.

    ಚಾಂಪಿಯನ್ಸ್‌ ಟ್ರೋಫಿ ವೇಳೆ ಭಾರತ ತಂಡಕ್ಕೆ (Team India) ಪಾಕಿಸ್ತಾನ ಸಂಪೂರ್ಣ ಭದ್ರತೆ ಒದಗಿಸಲಿದೆ. ಭಾರತ ತಂಡಕ್ಕೆ ಸುಲಭವಾಗಲೆಂದೇ ತಂಡದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಿಗದಿಪಡಿಸಲಾಗಿದೆ. ಭಾರತೀಯ ಅಭಿಮಾನಿಗಳಿಗೂ ಇದು ಅನುಕೂಲವಾಗಲಿದೆ. ಭಾರತ ತಂಡದ ಗುಂಪು ಹಂತದ ಪಂದ್ಯಗಳಿಗೆ ಅಂತರ ಇರುವುದರಿಂದ ಪ್ರತಿ ಪಂದ್ಯ ಮುಗಿದ ಬಳಿಕ ಸ್ವದೇಶಕ್ಕೆ ಮರಳಬಹುದು ಎಂದು ಬಿಸಿಸಿಐಗೆ (BCCI) ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪತ್ರ ಬರೆದಿದೆ. ಇದನ್ನೂ ಓದಿ: ಟೀಕೆಗಳಿಗೆ ತಕ್ಕ ಉತ್ತರ – 1,338 ದಿನಗಳ ಬಳಿಕ ತವರಿನಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಪಾಕ್‌

    ಭಾರತದ ಪಂದ್ಯಗಳು ಲಾಹೋರ್‌ನಲ್ಲಿ ಆಯೋಜಿಸಲಾಗಿದ್ದು, ಪಂಜಾಬ್‌ನ ಚಂಡೀಗಢ ಇದಕ್ಕೆ ಹತ್ತಿರದಲ್ಲಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಉಳಿಯಲು ಇಚ್ಛಿಸದಿದ್ದರೆ, ಭದ್ರತೆ ಕೊರತೆ ಅನ್ನಿಸಿದರೆ, ಪ್ರತಿ ಪಂದ್ಯ ಮುಗಿದ ಬಳಿಕ ಚಂಡೀಗಢ ಅಥವಾ ದೆಹಲಿಗೆ ಟೀಂ ಇಂಡಿಯಾ ವಾಪಸ್‌ ಬರಬಹುದು ಎಂದು ಪತ್ರದಲ್ಲಿ ತಿಳಿಸಿದೆ ಎಂದು ವರದಿಗಳು ಹೇಳಿವೆ. ಇದನ್ನೂ ಓದಿ: ಜಿಯೋದಲ್ಲಿ ಐಪಿಎಲ್‌ ಬರಲ್ಲ, ಇನ್ನು ಮುಂದೆ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ!

    ಭಾರತ ಸರ್ಕಾರ ಭದ್ರತಾ ಕಾರಣಗಳಿಗಾಗಿ ತಂಡವನ್ನು ಕಳುಹಿಸಲು ಅನುಮತಿ ನಿರಾಕರಿಸಿದ್ದರೆ, ಬಿಸಿಸಿಐ (BCCI) ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದು ಪಟ್ಟು ಹಿಡಿದಿದ್ದ ಪಾಕ್‌ ಇದೀಗ ಹೊಸ ಪ್ರಸ್ತಾಪವನ್ನ ಬಿಸಿಸಿಐ ಮುಂದಿಟ್ಟಿದೆ. ಅಲ್ಲದೇ ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ವೇಳೆ, ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುವಂತೆ ಅಲ್ಲಿನ ಸರ್ಕಾರ ಹಾಗೂ ಪಿಸಿಬಿ ಮನವಿ ಸಹ ಸಲ್ಲಿಸಿದೆ ಎಂದು ಹೇಳಲಾಗಿದೆ.

    ಭಾರತದ ಪಂದ್ಯಗಳು ಹೇಗಿವೆ?
    ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ಮೂರು ಗುಂಪು ಹಂತದ ಪಂದ್ಯಗಳನ್ನಾಡಲಿದೆ. ಸದ್ಯದ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 20 ರಂದು ಬಾಂಗ್ಲಾದೇಶದ ವಿರುದ್ಧ, ಫೆಬ್ರವರಿ 23 ರಂದು ಪಾಕಿಸ್ತಾನದ ವಿರುದ್ಧ, ಮಾರ್ಚ್ 2 ಎಂದು ನ್ಯೂಜಿಲೆಂಡ್ ವಿರುದ್ಧ ನಿಗದಿಯಾಗಿದೆ. ಈ ನಡುವೆ ಭಾರತ ಮತ್ತು ಕಿವೀಸ್‌ ನಡುವಿನ ಪಂದ್ಯವನ್ನು ಲಾಹೋರ್‌ನಿಂದ ರಾವಲ್ಪಿಂಡಿಗೆ ವರ್ಗಾಯಿಸುವ ಚರ್ಚೆಗಳೂ ನಡೆದಿವೆ.

    ಭಾರತ ಪಾಕ್‌ ತಂಡ ಪ್ರವೇಶಿಸುವ ಯಾವುದೇ ಸಾಧ್ಯತೆಗಳೂ ಇಲ್ಲದ ಕಾರಣ ಭಾರತದ ಲೀಗ್‌ ಪಂದ್ಯಗಳನ್ನ ಪಾಕ್‌ನಿಂದ ಹೊರಗೆ ನಡೆಸಬೇಕಾಗುತ್ತದೆ. ಒಂದು ವೇಳೆ ಭಾರತ ಫೈನಲ್‌ ತಲುಪಿದರೆ ದುಬೈನಲ್ಲಿ ನಡೆಯಲಿದೆ, ಅದರ ಖರ್ಚು ವೆಚ್ಚವನ್ನೂ ಐಸಿಸಿ ಬರಿಸಲಿದೆ ಎಂದು ಹೇಳಿದೆ.