Tag: ICU

  • Shreyas Iyer In ICU | ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚಿಕಿತ್ಸೆ

    Shreyas Iyer In ICU | ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚಿಕಿತ್ಸೆ

    ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೇ ಪಂದ್ಯದಲ್ಲಿ ಕ್ಯಾಚ್‌ ಹಿಡಿಯವ ವೇಳೆ ಎಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾ ಉಪನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂತರಿಕ ರಕ್ತಸ್ರಾವದಿಂದ ಬಳಲುತ್ತಿರುವ ಅಯ್ಯರ್ ಅವರನ್ನ ಸಿಡ್ನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    34ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಅಲೆಕ್ಸ್‌ ಕ್ಯಾರಿ (Alex Carey) ಬಾರಿಸಿದ ಚೆಂಡನ್ನು ಹಿಡಿಯಲು ಹಿಂದಕ್ಕೆ ಓಡಿ ಅದ್ಭುತ ಕ್ಯಾಚ್ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅಯ್ಯರ್ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿ ಮೈದಾನ ತೊರಿದಿದ್ದರು. ಅಲ್ಲದೇ ಡ್ರೆಸ್ಸಿಂಗ್‌ ರೂಮ್‌ಗೆ ಬರ್ತಿದ್ದಂತೆ ಅಯ್ಯರ್‌ ಅವರನ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರದಿಯಲ್ಲಿ ಆಂತರಿಕ ರಕ್ತಸ್ರಾವವಾಗಿರುವುದು ಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.

    ರಕ್ತಸ್ರಾವದಿಂದ ಸೋಂಕು ಹರಡುವುದನ್ನ ತಪ್ಪಿಸುವ ಉದ್ದೇಶದಿಂದ ಚೇತರಿಕೆಯ ಆಧಾರದಲ್ಲಿ ಅವರನ್ನು ಎರಡರಿಂದ ಏಳು ದಿನಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    ಬಿಸಿಸಿಐ ಹೇಳೋದೇನು?
    ಸ್ಕ್ಯಾನ್‌ ವರದಿಯಲ್ಲಿ ಪಕ್ಕೆಲುಬು ಗಾಯವಾಗಿರುವುದು ಕಂಡುಬಂದಿದೆ. ಆದ್ರೆ ವೈದ್ಯಕೀಯವಾಗಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ. ಸಿಡ್ನಿ ಮತ್ತು ಭಾರತದ ತಜ್ಞರ ಸಮನ್ವಯದೊಂದಿಗೆ ಬಿಸಿಸಿಐ ವೈದ್ಯಕೀಯ ತಂಡವು ಅಯ್ಯರ್‌ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅದಕ್ಕಾಗಿ ವೈದ್ಯಕೀಯ ತಂಡವನ್ನ ಸಿಡ್ನಿಯಲ್ಲೇ ಇರಿಸಲಾಗಿದೆ ಎಂದು ಬಿಸಿಸಿಐ (BCCI) ಹೇಳಿದೆ.

    ಆರಂಭದಲ್ಲಿ ಅಯ್ಯ‌ರ್ ಸುಮಾರು 3 ವಾರಗಳ ಕಾಲ ಆಟದಿಂದ ಹೊರಗುಳಿಯಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ಪರಿಸ್ಥಿತಿ ಗಮನಿಸಿದರೆ ಅವರ ಚೇತರಿಕೆಯ ಅವಧಿ ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

  • ರಾಜಸ್ಥಾನದ ಆಸ್ಪತ್ರೆ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ರೇಪ್ – ಮತ್ತು ಬರುವ ಇಂಜೆಕ್ಷನ್ ಕೊಟ್ಟು ಅತ್ಯಾಚಾರ

    ರಾಜಸ್ಥಾನದ ಆಸ್ಪತ್ರೆ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ರೇಪ್ – ಮತ್ತು ಬರುವ ಇಂಜೆಕ್ಷನ್ ಕೊಟ್ಟು ಅತ್ಯಾಚಾರ

    – ಮಹಿಳೆಯ ಕುಟುಂಬಸ್ಥರು ಐಸಿಯು ಹೊರಗಡೆ ಇದ್ದಾಗಲೇ ನಡೆದ ಕೃತ್ಯ

    ಜೈಪುರ: ರಾಜಸ್ಥಾನದ ಅಲ್ವಾರ್‌ನಲ್ಲಿರುವ ಇಎಸ್‌ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (ESIC Medical College Hospital) ಐಸಿಯುಗೆ (ತೀವ್ರ ನಿಗಾ ಘಟಕ) ದಾಖಲಾಗಿದ್ದ ಮಹಿಳಾ ರೋಗಿ ಮೇಲೆ ನರ್ಸಿಂಗ್‌ ಸಿಬ್ಬಂದಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಸಂತ್ರಸ್ತೆ ಕುಟುಂಬಸ್ಥರು ಐಸಿಯು (ICU ವಾರ್ಡ್‌ನ ಹೊರಗಿದ್ದಾಗಲೇ ಘಟನೆ ಸಂಭವಿಸಿದೆ.

    ವರದಿಗಳ ಪ್ರಕಾರ, ಇದೇ ತಿಂಗಳ ಜೂನ್‌ 4ರಂದು (ಬುಧವಾರ) ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. 32 ವರ್ಷದ ಮಹಿಳೆಯನ್ನ ಇದೇ ಜೂನ್‌ 2ರಂದು ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್‌ 4ರಂದು ಶಸ್ತ್ರಚಿಕಿತ್ಸೆ ನಂತರ ಆಕೆಯನ್ನ ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಈ ವೇಳೆ‌ ನರ್ಸಿಂಗ್‌ ಸಿಬ್ಬಂದಿ (Nursing Staff) ಮಹಿಳೆಗೆ ಮತ್ತು ಬರುವ ಇಂಜೆಕ್ಷನ್‌ ನೀಡಿದ್ದಾನೆ. ಜೊತೆಗೆ ಆಕೆ ಮಲಗಿದ ನಂತರ ಆಕೆಯ ಪತಿಯನ್ನ ಹೊರ ಹೋಗುವಂತೆ ಸೂಚಿಸಿದ್ದಾನೆ. ಇದನ್ನೂ ಓದಿ: ಬೆಂಗಳೂರು | ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್‌

    ಇಂಜೆಕ್ಷನ್‌ ನೀಡಿದ್ದರ ಪರಿಣಾಮವಾಗಿ ಸಂತ್ರಸ್ತೆ ಅರೆ ಪ್ರಜ್ಞಾವಸ್ಥೆ ತಲುಪಿದ್ದಾರೆ. ಮರುದಿನ ಜೂನ್ 5 ರಂದು, ರಾತ್ರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತನ್ನ ಪತಿಗೆ ತಿಳಿಸಿದ್ದಾರೆ. ನರ್ಸಿಂಗ್ ಸಿಬ್ಬಂದಿ ತನ್ನ ಸ್ಥಿತಿಯನ್ನ ದುರುಪಯೋಗ ಮಾಡಿಕೊಂಡಿದ್ದಾನೆಂದು ಹೇಳಿದ್ದಾರೆ. ಅರೆಪ್ರಜ್ಞಾವಸ್ಥೆಯಲ್ಲಿದ್ದರಿಂದ ನಾನು ವಿರೋಧಿಸಲು ಆಗಲಿಲ್ಲ, ಸಹಾಯಕ್ಕಾಗಿ ಕರೆಯಲೂ ಆಗಲಿಲ್ಲ ಎಂದು ಹೇಳಿಕೊಂಡಿದ್ದಾಳೆ. ಈ ವಿಷಯವನ್ನು ಪತಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Alwar Police) ಸಂತ್ರಸ್ತೆ ಪತಿ ದೂರು ನೀಡಿದ್ದಾರೆ.

    ಜೂನ್‌ 6ರಂದು ಸಂತ್ರಸ್ತೆ ವೈದ್ಯೆ ಡಾ. ದೀಪಿಕಾ ಅವರಿಗೆ‌ ಘಟನೆ ಬಗ್ಗೆ ತಿಳಿಸಿದ್ದಾರೆ. ಆರೋಪಿಯಾದ ನರ್ಸಿಂಗ್‌ ಸಿಬ್ಬಂದಿಯನ್ನ ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್‌ಎಚ್‌ಒ ಅಜಿತ್ ಬದ್ಸಾರ ದೃಢಪಡಿಸಿದರು.

    ಘಟನೆ ನಂತರ ಇಎಸ್ಐಸಿ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅಸಿಮ್ ದಾಸ್ ಅವರು ಆಂತರಿಕ ಆಡಳಿತಾತ್ಮಕ ಸಮಿತಿಯನ್ನ ರಚಿಸಿದ್ದಾರೆ. ಅಲ್ಲದೇ ಪೊಲೀಸ್‌ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ: ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

    ಎಂಐಎ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.  ಇದನ್ನೂ ಓದಿ: ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

  • ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಮಗ ಉಳಿಯಲಿಲ್ಲ – ವಿಜಯಪುರ ಕಾನ್ಸ್‌ಟೇಬಲ್‌ ಮನಕಲುಕುವ ಪೋಸ್ಟ್‌

    ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಮಗ ಉಳಿಯಲಿಲ್ಲ – ವಿಜಯಪುರ ಕಾನ್ಸ್‌ಟೇಬಲ್‌ ಮನಕಲುಕುವ ಪೋಸ್ಟ್‌

    ವಿಜಯಪುರ: ʻನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ..ʼ ಈ ರೀತಿ ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು‌ ವಾಟ್ಸಪ್‌ ಗ್ರೂಪ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಘಟನೆ ನಡೆದಿದೆ.

    ವಿಜಯಪುರ ನಗರದ ಗಾಂಧಿಔಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ ಆಗಿರುವ ಎ.ಎಸ್ ಬಂಡುಗೊಳ ಅವರು ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಪೊಸ್ಟ್ ಹಾಕಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೊ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾರೆ.

    ಕಾನ್ಸ್‌ಟೇಬಲ್‌ ಎ.ಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗು ಮೃತಪಟ್ಟ ಬಳಿಕ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಮೆಸೇಜ್ ಹಾಕಿದ್ದಾರೆ. ಇನ್ನೂ ಈ‌ ಘಟನೆಯನ್ನು ಡಿಜಿಪಿ, ಗೃಹ ಸಚಿವ ಜಿ.ಪರಮೇಶ್ವರ್‌ ಹಾಗೂ ಮಾಧ್ಯಮಗಳಿಗೆ ಜೊಹೇದ್ ಕಿಂಗ್ ಎಂಬ ಹೆಸರಿನ ಇನ್‌ಸ್ಟಾಗ್ರಾಮ್‌ನಿಂದ ಟ್ಯಾಗ್ ಕೂಡ ಮಾಡಲಾಗಿದೆ.

    ಸದ್ಯ ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ಎ.ಎಸ್ ಬಂಡುಗೋಳ ಯಾವುದೇ ರಜೆ ಕೇಳಿಲ್ಲ. ಮೌಖಿಕವಾಗಿ ಹಾಗೂ ಲಿಖಿತವಾಗಿ ಗಾಂಧಿಚೌಕ್ ಪೊಲೀಸ್ ಠಾಣಾಧಿಕಾರಿಗಳ ಬಳಿ‌‌ ರಜೆ ಕೇಳಿಲ್ಲ. ಮೊನ್ನೆ ‌ಹಾಗೂ ನಿನ್ನೆ ಅವರು ಕರ್ತವ್ಯಕ್ಕೂ ಹಾಜರಾಗಿಲ್ಲ ಎಂದಿದ್ದಾರೆ.

    ಎ.ಎಸ್ ಬಂಡುಗೋಳ‌ ‌ಅವರ ಪತ್ನಿಗೆ ಇದು 3ನೇ ಹೆರಿಗೆ ಎಂದು ತಿಳಿದುಬಂದಿದ್ದು, ರಜೆಗಾಗಿ ಯಾವುದೇ ‌ಮನವಿ‌ ಮಾಡಿಲ್ಲ. ಇಲಾಖಾ‌ ಸಿಬ್ಬಂದಿ ಗ್ರೂಪ್ ನಲ್ಲಿ ಈ ರೀತಿ ಪೋಸ್ಟ್ ಹಾಕಿದ್ದಾರೆ. ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟನೆ ನೀಡಿದ್ದಾರೆ.

  • ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ಗೆ ತೀವ್ರ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ

    ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ಗೆ ತೀವ್ರ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ

    ವಾಷಿಂಗ್ಟನ್‌: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) (Tabla maestro Zakir Hussain) ಅವರು ತೀವ್ರ ಹೃದಯ (Heart) ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುವಿನಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.

    ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ.

    ಅವರು ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾವೆಲ್ಲರೂ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಚೌರಾಸಿಯಾ ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ.

  • ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು – ಆಪ್ತರಿಂದ ಮಾಹಿತಿ

    ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು – ಆಪ್ತರಿಂದ ಮಾಹಿತಿ

    ಮುಂಬೈ: ಟಾಟಾ ಸನ್ಸ್ (Tata Sons) ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata) (86) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ (Breach Candy Hospital) ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    20ಕ್ಕೂ ಹೆಚ್ಚು ವರ್ಷಗಳಿಂದ ಟಾಟಾ ಸನ್ಸ್ ಕಂಪನಿಯನ್ನು ನಡೆಸಿಕೊಂಡು ಬಂದಿರುವ 86 ವರ್ಷದ ರತನ್ ಟಾಟಾ ಅವರು ಸೋಮವಾರ ತಮ್ಮ ವಯೋಸಹಜ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನೂ ಓದಿ: ನಿತೀಶ್‌-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 86 ರನ್‌ಗಳ ಜಯ

    ಟಾಟಾ ಸಮೂಹದ ಆಪ್ತರೊಬ್ಬರು, ರತನ್ ಟಾಟಾ ಅವರ ಆರೋಗ್ಯ ಪರಿಸ್ಥಿತಿಯ ಕುರಿತು ನೇರ ಮಾಹಿತಿಯನ್ನು ತಿಳಿದು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.

    ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದರು. ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ. ಆಂತಕಗೊಳ್ಳುವ ಅಗತ್ಯವಿಲ್ಲ. ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ. ಆ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ರತನ್ ಟಾಟಾ ಸ್ಪಷ್ಟನೆ ನೀಡಿದ್ದರು.

    ಕಂಪನಿಯ ನಿರ್ವಾಹಕರೊಬ್ಬರು ಮಾತನಾಡಿ, ಮೊದಲಿನಂತೆ ಟಾಟಾ ಅವರು ದಿನನಿತ್ಯದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಲ್ಲ. ಆದರೆ ಟಾಟಾ ಸನ್ಸ್ ನಾಯಕತ್ವದಿಂದ ಕೆಲವು ನಿರ್ಧಾರಗಳ ಕುರಿತು ಸಲಹೆ ನೀಡುತ್ತಾರೆ ಎಂದು ತಿಳಿಸಿದರು.

    ಸದ್ಯ ಇದೀಗ ಅವರು ಟಾಟಾ ಟ್ರಸ್ಟ್ನ ಲೋಕೋಪಕಾರಿ ಸಂಸ್ಥೆಯನ್ನು ನಡೆಸುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

  • ಹೆಣ್ಣು ಮಗು ಎಂದು ತಿಳಿಸಿ, ಸತ್ತ ಗಂಡು ಮಗು ನೀಡಿದ್ದಾರೆ : ಆಸ್ಪತ್ರೆಯ ವಿರುದ್ಧ ತಾಯಿ ಆಕ್ರೋಶ

    ಹೆಣ್ಣು ಮಗು ಎಂದು ತಿಳಿಸಿ, ಸತ್ತ ಗಂಡು ಮಗು ನೀಡಿದ್ದಾರೆ : ಆಸ್ಪತ್ರೆಯ ವಿರುದ್ಧ ತಾಯಿ ಆಕ್ರೋಶ

    ಕೊಪ್ಪಳ: ಹೆಣ್ಣು ಮಗು ಜನಿಸಿದೆ ಎಂದು ತಿಳಿಸಿ, ಸತ್ತಿರುವ ಗಂಡು ಮಗು ನೀಡಿರುವ ಘಟನೆ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

    ವಿಜಯನಗರ (Vijayanagar) ಜಿಲ್ಲೆಯ ಹಗರಿಬೊಮ್ಮನಳ್ಳಿ (Hagaribommanahalli) ನಿವಾಸಿಯಾಗಿರುವ ಗೌರಿ ಅವರಿಗೆ ಹೆಣ್ಣು ಮಗು ಜನಿಸಿರುವುದಾಗಿ ತಿಳಿಸಿ ಸತ್ತಿರುವ ಗಂಡು ಮಗುವನ್ನು ನೀಡಿ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟು ಮಾಡಿದ್ದಾರೆ.ಇದನ್ನೂ ಓದಿ:

    ಸೆ.23 ರಂದು ಗೌರಿ ಕೊಪ್ಪಳ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು. ಬಳಿಕ ಸೆ.25 ರಂದು ನಸುಕಿನ ಜಾವ ನಾಲ್ಕು ಗಂಟೆ ಸುಮಾರಿಗೆ ಹೆರಿಗೆಯಾಗಿತ್ತು. ಆ ವೇಳೆ ಹೆಣ್ಣು ಮಗು ಜನಿಸಿರುವುದಾಗಿ ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದರು. ಬಳಿಕ ಮಗುವಿನ ತೂಕ ಕಡಿಮೆ ಇದೆ ಎಂದು ತೀವ್ರ ನಿಗಾ ಘಟಕದಲ್ಲಿ (Intensive Care Unit) ಇಡಲಾಗಿತ್ತು. ಆದರೆ ಮಂಗಳವಾರ ಬೆಳಿಗ್ಗೆ ನಿಮ್ಮ ಮಗು ಸಾವನ್ನಪ್ಪಿದೆ. ಮಗುವನ್ನು ತೆಗೆದುಕೊಂಡು ಹೋಗಿ ಎಂದು ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದರು.

    ಕೊನೆಯ ಬಾರಿ ಮಗುವಿನ ಮುಖ ನೋಡಬೇಕು ಎಂದು ತೀವ್ರ ನಿಗಾ ಘಟಕಕ್ಕೆ ತೆರಳಿದ್ದರು. ಆದರೆ ಆ ಸಮಯದಲ್ಲಿ ಮೃತಪಟ್ಟಿರುವ ಮಗು ಹೆಣ್ಣಲ್ಲಾ, ಗಂಡು ಎನ್ನುವುದಾಗಿ ತಿಳಿದಿದೆ. ಹೀಗಾಗಿ ನಮ್ಮದು ಹೆಣ್ಣು ಮಗು ಆದರೆ ಇಲ್ಲಿ ಸತ್ತಿರುವುದು ಗಂಡು ಮಗು. ನಮ್ಮ ಮಗು ನಮಗೆ ಬೇಕು ಎಂದು ಮಗುವಿನ ತಾಯಿ ಆರೋಪಿಸಿದ್ದಾರೆ.

    ನಿಮಗೆ ಆಗಿರುವುದು ಗಂಡು ಮಗುವೇ ಆದರೆ ಕ್ಲರಿಕಲ್ ಎರರ್‌ನಿಂದ ಹೀಗಾಗಿದೆ. ಓಬಿಜಿ (OGC) ವಿಭಾಗದಿಂದ ಎನ್‌ಐಸಿಯು (NCU) ವಿಭಾಗಕ್ಕೆ ಬರುವಾಗ ಕ್ಲರಿಕಲ್ ಎರರ್ (Clerical Error) ಆಗಿದೆ. ಈ ಬಗ್ಗೆ ತನಿಖೆ ನಡೆಸುತ್ತೇವೆ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.ಇದನ್ನೂ ಓದಿ:

  • ಬಿಜೆಪಿ ಮಾಜಿ ಸಚಿವ ಸುರೇಶ್‌ ಕುಮಾರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ

    ಬಿಜೆಪಿ ಮಾಜಿ ಸಚಿವ ಸುರೇಶ್‌ ಕುಮಾರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್‌. ಸುರೇಶ್‌ ಕುಮಾರ್‌ (S Suresh Kumar) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಬೆಂಗಳೂರು (Bengaluru) ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Teachers Day| ಉತ್ತಮ ಪ್ರಾಂಶುಪಾಲ, ಉತ್ತಮ ಉಪನ್ಯಾಸಕ ಪ್ರಶಸ್ತಿ ಘೋಷಣೆ

    ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ:
    ಸುರೇಶ್‌ ಕುಮಾರ್‌ ಅವರಿಗೆ ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್‌ಕುಮಾರ್‌ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿ ಆಗಿದ್ದರು. ಆದ್ರೆ ಕಳೆದ 3-4 ದಿನಗಳ ಹಿಂದೆ ತೀವ್ರ ಜ್ವರಕ್ಕೆ ತುತ್ತಾಗಿದ್ದರು.

    ಮಂಗಳವಾರ ರಾತ್ರಿ ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಅಶ್ಲೀಲ ಚಿತ್ರ ಸರ್ಚಿಂಗ್‌ – ಕೇರಳದ 455 ಕಡೆ ದಾಳಿ, 6 ಬಂಧನ

  • ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ‌- ಗಾಯಾಳು ಕೆನ್ನೆಯಿಂದ ಗಾಜಿನ ಚೂರು ತೆಗೆದ ವೈದ್ಯರು!

    ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ‌- ಗಾಯಾಳು ಕೆನ್ನೆಯಿಂದ ಗಾಜಿನ ಚೂರು ತೆಗೆದ ವೈದ್ಯರು!

    – ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

    ಬೆಂಗಳೂರು: ಶುಕ್ರವಾರ ಮಧ್ಯಾಹ್ನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ  (Bengaluru Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಗಾಯಾಳು ಒಬ್ಬರ ಕೆನ್ನೆಯಲ್ಲಿ ಸಿಲುಕಿಕೊಂಡ ಗಾಜಿನ ಚೂರನ್ನು ಬ್ರೂಕ್ ಫೀಲ್ಡ್ ಆಸ್ಫತ್ರೆಯ ವೈದ್ಯರು ಯಶಸ್ವಿಯಾಗಿ ತೆಗೆದಿದ್ದಾರೆ.

    ಗಾಯಾಳು ಸ್ವರ್ಣಾಂಭ ಅವರಿಗೆ 35 ರಿಂದ 40% ಗಾಯಗಳಾಗಿದ್ದು ಸುಟ್ಟ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಕೆನ್ನೆಯಲ್ಲಿ ಗಾಜಿನ ಚೂರು ಸೇರಿಕೊಂಡಿದ್ದು ಶಸ್ತ್ರ ಚಿಕಿತ್ಸೆ ಮಾಡಿ  ವೈದ್ಯರು ತೆಗೆದಿದ್ದಾರೆ. ಕೈ , ಕಾಲುಗಳ ಬಳಿ ಆಗಿದ್ದ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಕೇಸ್‌ – ಓರ್ವ ವಶಕ್ಕೆ

    ಸದ್ಯ ಸ್ವರ್ಣಾಂಭ ಅವರು ಔಟ್ ಆಫ್ ಡೇಂಜರ್ ಆಗಿದ್ದು ಚೇತರಿಸಿಕೊಳ್ಳುತ್ತಾ ಇದ್ದಾರೆ. ಒಂದೆರಡು ದಿನ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದು ಬಳಿಕ ವಾರ್ಡ್ ಗೆ ಶಿಫ್ಟ್ ಮಾಡಲಿದ್ದಾರೆ.‌ ಒಟ್ಟು ನಾಲ್ಕು ಜನ ತಜ್ಞರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ – ಗಾಯಗೊಂಡವರ ಪೂರ್ಣ ವಿವರ ಓದಿ

    ಘಟನೆಯಲ್ಲಿ ಗಾಯಗೊಂಡ ಫಾರೂಕ್ ಮತ್ತು ದೀಪಾಂಶು ಔಟ್ ಆಫ್ ಡೇಂಜರ್ ಆಗಿದ್ದು, ಜನರಲ್ ವಾರ್ಡ್ ನಲ್ಲಿ ಫಾರೂಕ್ ಮತ್ತು ದೀಪಾಂಶುಗೆ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ‌ಮೂವರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಆಸ್ಪತ್ರೆ ಮೂಲಗಳಿಂದ ಪಬ್ಲಿಕ್‌ ಟಿವಿಗೆ ಸಿಕ್ಕಿದೆ.

  • ನಟಿ ಮಹಾಲಕ್ಷ್ಮಿ ಪತಿಗೆ ಐಸಿಯುನಲ್ಲಿ ಚಿಕಿತ್ಸೆ: ಆಸ್ಪತ್ರೆಯಲ್ಲಿ ರವೀಂದರ್

    ನಟಿ ಮಹಾಲಕ್ಷ್ಮಿ ಪತಿಗೆ ಐಸಿಯುನಲ್ಲಿ ಚಿಕಿತ್ಸೆ: ಆಸ್ಪತ್ರೆಯಲ್ಲಿ ರವೀಂದರ್

    ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮಿ (Mahalakshmi) ಅವರ ಪತಿ ರವೀಂದರ್ (Ravindran Chandrasekhar) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.  ಎರಡು ದಿನಗಳಿಂದ ಈ ಸುದ್ದಿ ಸಖತ್ ಸದ್ದು ಮಾಡುತ್ತಿದೆ.

    ರವೀಂದರ್, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎದೆನೋವು ಕೂಡ ಇರುವುದರಿಂದ ಉಸಿರಾಡೋಕೆ ಕಷ್ಟವಾಗುತ್ತಿದೆ ಎನ್ನುವುದು ಅವರ ಆಪ್ತರು ನೀಡಿದ ಮಾಹಿತಿ. ಉಸಿರಾದ ತೊಂದರೆ ಇರುವ ಕಾರಣಕ್ಕಾಗಿಯೇ ಆಕ್ಸಿಜನ್ ಮಾಸ್ಕ್ ಸಮೇತ ಇರುವ ಫೋಟೋ ಹರಿದಾಡುತ್ತಿದೆ.

     

    ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ರವೀಂದರ್ ಇತ್ತೀಚೆಗಷ್ಟೇ ಜೈಲಿಗೂ ಹೋಗಿ ಬಂದಿದ್ದರು. ಜೊತೆಗೆ ಬಿಗ್ ಬಾಸ್ ಶೋ ಕುರಿತಂತೆ ಅವರು ಯೂಟ್ಯೂಬ್ ವೊಂದರಲ್ಲಿ ವಿಮರ್ಶೆ ಮಾಡುತ್ತಿದ್ದರು. ಈ ಯೂಟ್ಯೂಬ್ ಮೂಲಕವೇ ಅವರ ಅನಾರೋಗ್ಯದ ಗುಟ್ಟು ಬಯಲಾಗಿದೆ.

  • ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

    ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

    ನವದೆಹಲಿ: ಆಸ್ಪತ್ರೆಗಳಲ್ಲಿ ರೋಗಿಗಳನ್ನು ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸುವ ಕುರಿತು ಕೇಂದ್ರ ಸರ್ಕಾರವು (Central Government) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    ಸಾಮಾನ್ಯವಾಗಿ ರೋಗಿಯ ಸ್ಥಿತಿ ಗಂಭಿರ ಇದ್ದರೆ ವೈದ್ಯರು ಐಸಿಯುನಲಿ ಚಿಕಿತ್ಸೆ ಕೊಡಿಸುತ್ತಾರೆ. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯಲ್ಲಿ ಇನ್ನು ಮುಂದೆ ಈ ರೀತಿ ಮಾಡುವಂತಿಲ್ಲ. ರೋಗಿ ಅಥವಾ ಆತನ ಕುಟುಂಬಸ್ಥರು ಒಪ್ಪಿಗೆ ನೀಡಿದರೆ ಮಾತ್ರ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದಾಗಿದೆ. ಬಲವಂತವಾಗಿ ಯಾವುದೇ ರೋಗಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವಂತಿಲ್ಲ.

    ಕೇಂದ್ರದ ಆರೋಗ್ಯ ಸಚಿವಾಲಯ ಹೊರಡಿಸಿರುವ ಈ ಮಾರ್ಗಸೂಚಿಗಳನ್ನು 24 ಮಂದಿ ತಜ್ಞರು ಚರ್ಚಿಸಿ ಬಿಡುಗಡೆ ಮಾಡಿದ್ದಾರೆ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದಿದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆಯಿಂದ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಾಣಲು ಸಾಧ್ಯವಾಗದಿದ್ದಲ್ಲಿ ಆತ ಅಥವಾ ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವುದು ವ್ಯರ್ಥ ಎಂದು ಹೇಳಲಾಗಿದೆ.

    ಸಾಂಕ್ರಾಮಿಕ ರೋಗಗಳು, ವಿಪತ್ತು ಸಂದರ್ಭಗಳಲ್ಲಿ ರೋಗಿಯನ್ನು ಐಸಿಯುಗೆ ದಾಖಲಿಸಬಹುದು. ರೋಗಿಯ ಅಂಗಾಂಗ ವೈಫಲ್ಯ, ಅಂಗಾಂಗ ಕಸಿ ಅಥವಾ ಹದಗೆಡುತ್ತಿರುವ ವೈದ್ಯಕೀಯ ಸ್ಥಿತಿಯನ್ನು ಅವಲೋಕಿಸಿ ಐಸಿಯುಗೆ ಪ್ರವೇಶ ನೀಡಬೇಕು. ಅಲ್ಲದೆ ರೋಗಿಯ ಪ್ರಜ್ಞಾಹೀನತೆ, ಹೆಮೊಡೈನಮಿಕ್ ಅಸ್ಥಿರತೆ, ಉಸಿರಾಟದ ಸಮಸ್ಯೆ ಹೀಗೆ ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದರೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ರೂಲ್ಸ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ನಾನು ಸತ್ತೇ ಹೋದೆ ಅಂದ್ಕೊಂಡೆ – ಅವಘಡಕ್ಕೀಡಾದ ವಿಮಾನದೊಳಗಿದ್ದ ಪ್ರಯಾಣಿಕ

    ಒಟ್ಟಾರೆಯಾಗಿ ರೋಗಿಯ ಸಂಬಂಧಿಕರು ಐಸಿಯುನಲ್ಲಿ ಚಿಕಿತ್ಸೆ ಬೇಡ ಎಂದು ಹೇಳಿದರೆ ಅಂತಹ ರೋಗಿಗಳನ್ನು ಐಸಿಯುಗೆ ದಾಖಲಿಸಿಕೊಳ್ಳುವಂತಿಲ್ಲ. ಇನ್ನು ಮಾರ್ಗಸೂಚಿ ಪ್ರಕಾರ, ಐಸಿಯುಗೆ ಸೇರಿಸುವ ಮೊದಲು ರಕ್ತದೊತ್ತಡ, ನಾಡಿ ಬಡಿತ, ಹೃದಯ ಬಡಿತ, ಆಮ್ಲಜನಕ ಹೀರಿಕೊಳ್ಳುವ ಸಾಮರ್ಥ್ಯ, ಮೂತ್ರ ವಿಸರ್ಜನೆಯ ಪ್ರಮಾಣ, ನರದ ಸ್ಥಿತಿಗತಿ ಮೊದಲಾದವುಗಳ ಪರಿಶೀಲನೆಯ ಬಳಿಕವೇ ರೋಗಿಯನ್ನು ಐಸಿಯುಗೆ ದಾಖಲಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.