Tag: ICU

  • ಹಿರಿಯ ನಟ ಕ್ಯಾಪ್ಟನ್ ವಿಜಯಕಾಂತ್ ಅನಾರೋಗ್ಯ: ಐಸಿಯುನಲ್ಲಿ ಚಿಕಿತ್ಸೆ

    ಹಿರಿಯ ನಟ ಕ್ಯಾಪ್ಟನ್ ವಿಜಯಕಾಂತ್ ಅನಾರೋಗ್ಯ: ಐಸಿಯುನಲ್ಲಿ ಚಿಕಿತ್ಸೆ

    ಮಿಳು ನಾಡಿನ ಹೆಸರಾಂತ ನಟ ಹಾಗೂ ಡಿಎಂಡಿಕೆ (DMDK) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ (Captain Vijayakanth) ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

    ಕ್ಯಾಪ್ಟನ್ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿದೆ. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.

    ಹಲವಾರು ವರ್ಷಗಳ ಕಾಲ ನಟರಾಗಿ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿರುವ ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿದೆ. ವಯೋ ಸಹಜ ಕಾಯಿಲೆಗಳು ಅವರನ್ನೂ ಕಾಡುತ್ತಿವೆ. ಎರಡು ದಿನಗಳ ಹಿಂದೆ ಅವರು ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಗೊಂದಲದ ಹೇಳಿಕೆಗಳನ್ನೂ ಪಕ್ಷ ಕೊಟ್ಟಿದೆ.

     

    ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿದೆ.

  • ಸಾಲು ಮರದ ತಿಮ್ಮಕ್ಕನಿಗೆ ಐಸಿಯುನಲ್ಲಿ ಚಿಕಿತ್ಸೆ

    ಸಾಲು ಮರದ ತಿಮ್ಮಕ್ಕನಿಗೆ ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ (Saalu Marada Thimmakka) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದರು. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ

    ಕಳೆದ ಮೂರು ತಿಂಗಳ ಹಿಂದೆಯಷ್ಟೇ ವೃಕ್ಷ ಮಾತೆಯವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ದತ್ತು ಪುತ್ರ ಬಳ್ಳೂರು ಗ್ರಾಮದ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 26 ರಂದು ಉಸಿರಾಟದಲ್ಲಿ ಏರು ಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಸೋಮವಾರ ರಾತ್ರಿ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಮಂಗಳವಾರ ಬೆಂಗಳೂರಿಗೆ ತೆರಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    ಬೆಂಗಳೂರು: ಸಿಸಿಬಿ ಡ್ರಿಲ್ ತಪ್ಪಿಸಿಕೊಳ್ಳಲು ಬಾಯಲ್ಲಿ ನೊರೆ ಸೃಷ್ಟಿಸಿಕೊಂಡು ಮೂರ್ಛೆ ರೋಗದ ನಾಟಕವಾಡಿದ್ದ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆ ಎಪಿಸೋಡ್‌ಗೆ ಬ್ರೇಕ್ ಬಿದ್ದಿದೆ. 3 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರ‍್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಚೈತ್ರಾಳನ್ನ ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ.

    ಆಸ್ಪೆçಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆದೊಯ್ದಿದ್ದರು. ಇದೀಗ ಚೈತ್ರಾ ಆರೋಗ್ಯವಾಗಿದ್ದರು ಕೂಡ ತನಿಖಾಧಿಕಾರಿಗಳ ಮುಂದೆ ಮೌನಂ ಸಮ್ಮತ್ತಿ ಲಕ್ಷಣಂ ಎಂಬಂತೆ ಚೈತ್ರಾ ಮೌನ್ಯಕ್ಕೆ ಜಾರಿದ್ದಾಳೆ. ತನಿಖಾಧಿಕಾರಿಗಳ ಮುಂದೆ ಜಪ್ಪಯ್ಯ ಅಂದರೂ ಬಾಯ್ಬಿಡ್ತಿಲ್ಲ. ತನಿಖಾಧಿಕಾರಿಗಳ ಪ್ರಶ್ನೆಗೆ ಮೌನವೇ ಚೈತ್ರಾಳ ಉತ್ತರವಾಗಿದ್ದು, ಸುಸ್ತಾಗಿರುವಂತೆ ನಾಟಕವಾಡಲು ಶುರು ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    ಚೈತ್ರಾ ಮೌನಕ್ಕೆ ಜಾರಿರೋದ್ರಿಂದ ಉತ್ತರಿಸುವಂತೆ ಪ್ರಶ್ನಾವಳಿಗಳನ್ನ ಪಟ್ಟ ಮಾಡಿ ಸಿಸಿಬಿ ಕೊಟ್ಟಿದೆ. ರಿಕವರಿ ಮಾಡಿದ ಹಣ ಹೊರತುಪಡಿಸಿ ಉಳಿದ ಹಣದ ಎಲ್ಲಿ? ಸ್ವಾಮೀಜಿಗೆ ಎಷ್ಟು ಹಣ ಕೊಟ್ಟಿದ್ದಿರಿ? ಹೀಗೆ 30ಕ್ಕೂ ಹೆಚ್ಚು ಪ್ರಶ್ನಾವಳಿಗಳನ್ನ ಮಾಡಿ ಚೈತ್ರಾಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಪ್ರಶ್ನಾವಳಿಗೂ ಸರಿಯಾಗಿ ಉತ್ತರ ಕೊಡಲು ನಿರಾಕರಿಸಿದ್ರೆ ಉಳಿದ ಆರೋಪಿಗಳ ಸಮ್ಮುಖದಲ್ಲಿ ವಿಚಾರಣೆ ಮಾಡಲು ಸಿಸಿಬಿ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ನಿನ್ನೆಯಷ್ಟೇ PMSSY ಆಸ್ಪತ್ರೆಯ ಸ್ಪೆಷಲ್ ಆಫೀಸರ್ ದಿವ್ಯ ಪ್ರಕಾಶ್ ಮಾತನಾಡಿ, ಎಲ್ಲ ತಪಾಸಣೆಯಲ್ಲೂ ನಾರ್ಮಲ್ ಇದೆ. ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲರೂ ಕೂಡ ಸಮಸ್ಯೆ ಇಲ್ಲ. ಪಿಟ್ಸ್ ಬಗ್ಗೆ ಏನೂ ಕಂಡು ಬಂದಿಲ್ಲ, ನೊರೆಯನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ವೈದ್ಯರ ಸ್ಪಷ್ಟನೆ ಬಳಿಕ ಆಸ್ಪತ್ರೆ ಹಿಂಭಾಗದಿಂದ ಸಿಸಿಬಿ ಪೊಲೀಸರು ಚೈತ್ರಾಳನ್ನ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    ಬೆಂಗಳೂರು: ವಿಚಾರಣೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನ (Chaitra Kundapura) ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ಡಿಸ್ಚಾರ್ಜ್‌ ಮಾಡಲಾಗಿದೆ.

    ಸತತ ವೈದ್ಯಕೀಯ ತಪಾಸಣೆ ನಂತರ ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆತಂದಿದ್ದಾರೆ. ಚೈತ್ರಾಳ ತಲೆ ಹಾಗೂ ಮುಖಕ್ಕೆ ಮಾಸ್ಕ್‌ ಕಟ್ಟಿಸಿ ಆಸ್ಪತ್ರೆ ಹಿಂಬಾಗಿಲಿನಿಂದ ಪೊಲೀಸರು ಕರೆ ತಂದಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಇಂದಿನಿಂದಲೇ ವಿಚಾರಣೆ ನಡೆಸಲು ಎಲ್ಲಾ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್ – ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ.

    ಈ ಕುರಿತು ಮಾತನಾಡಿರುವ ವೈದ್ಯ ಡಾ.ದಿವ್ಯಪ್ರಕಾಶ್ (Dhivya Prakash), ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಇಂದೇ ಆಕೆಯನ್ನ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌ ಇಲ್ಲ: ಬಾಲಾಜಿ ಪೈ

    ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಇದುವರೆಗೂ 3 ಕೋಟಿಯಷ್ಟು ಮೌಲ್ಯದ ನಗದು, ಚಿನ್ನ ಜಪ್ತಿ

    ಇದೇ ವೇಳೆ ಪಿಟ್ಸ್ ಇತ್ತ ಎಂಬ ವಿಚಾರಕ್ಕೆ ಉತ್ತರಿಸಿದ ವೈದ್ಯರು, ಪಿಟ್ಸ್ ಪತ್ತೆ ಮಾಡೋದಕ್ಕೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿದ್ದೀವಿ. ಇಇಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ ಎಲ್ಲಾ ನಾರ್ಮಲ್ ಇದೆ. ಸದ್ಯಕ್ಕೆ ಪಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಳಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸದ್ಯಕ್ಕೆ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌ ಇಲ್ಲ: ಬಾಲಾಜಿ ಪೈ

    ಸದ್ಯಕ್ಕೆ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌ ಇಲ್ಲ: ಬಾಲಾಜಿ ಪೈ

    ಬೆಂಗಳೂರು: ಸಿಸಿಬಿ (CCB Police) ವಿಚಾರಣೆಯ ವೇಳೆ ಕುಸಿದು ಬಿದ್ದ ವಂಚಕಿ ಚೈತ್ರಾ ಕುಂದಾಪುರ ಅವರಿಗೆ (Chaitra Kundapura) ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಸದ್ಯಕ್ಕೆ ಡಿಸ್ಚಾರ್ಜ್‌ ಇಲ್ಲ ಎಂದು ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್ ನಾ ಸ್ಪೆಷಲ್ ಆಫೀಸರ್ ಬಾಲಾಜಿ ಪೈ  ಹೇಳಿದ್ದಾರೆ.

    ಚೈತ್ರಾ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿ, ಚೈತ್ರಾ ಅವರು ಬರುವಾಗ ಪ್ರಜ್ಞಾಹೀನರಾಗಿ ಇದ್ರು. ಚಿಕಿತ್ಸೆ ಕೊಟ್ಟಿದ್ದೀವಿ, ಸಿಟಿ ಸ್ಕ್ಯಾನ್ ಮಾಡಿದ್ದೀವಿ. ಕಾನ್ಸಿಯಸ್ ಸ್ವಲ್ಪ ಬರ್ತಿದೆ ಈಗ ಪಿಟ್ಸ್ ಬಂದಿದ್ದೀಯಾ ಇಲ್ವಾ ಗೊತ್ತಿಲ್ಲ. ಮುಂಚೆ  ಇದು ಇತ್ತು ಅಂತ ಅವರ ಸ್ನೇಹಿತರು ಹೇಳ್ತಿದ್ದಾರೆ ಎಂದರು.

    ಕಾನ್ಸಿಯಸ್ ಬರ್ತಿದೆ, ICU ನಲ್ಲಿ ಇಟ್ಟಿದ್ದಾರೆ. ಸಿಸಿಬಿ ಅಧಿಕಾರಿಗಳು ಜೊತೆಗೆ ಇದ್ದಾರೆ. ಅವರ ಆರೋಗ್ಯದಲ್ಲಿ ಇಂಪ್ರೂವ್‌ ಮೆಂಟ್ ಇದೆ  ಕಾನ್ಸಿಯಸ್ ಬಂದು ಆರಾಮಾದ ತಕ್ಷಣ ವಾರ್ಡ್ ಗೆ ಶಿಫ್ಟ್ ಮಾಡ್ತೀವಿ. ವಾಮಿಟ್ ಕಂಟೆಂಟ್, ಬ್ಲಡ್ ರಿಪೋರ್ಟ್‌ ಬಂದಿಲ್ಲ. ನಾಳೆ ಒಳಗಡೆ ಬರಬಹುದು. ಡಿಸ್ಚಾರ್ಜ್ ಇನ್ನೂ ಸದ್ಯಕ್ಕೆ ಇಲ್ಲ. ಅವರು ಪ್ರಜ್ಞೆಗೆ ಬಂದು ಹುಷಾರಾದ್ರೆ ವಾರ್ಡ್ ಗೆ ಶಿಫ್ಟ್ ಮಾಡಿ  ಡಿಸ್ಚಾರ್ಜ್ ಮಾಡುತ್ತೇವೆ. ಅವರ ಕುಟುಂಬದವರನ್ನ ಕರೆಸುತ್ತಾ ಇದ್ದೇವೆ ಎಂದರು.

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನು ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.  ಇದನ್ನೂ ಓದಿ: ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ: ಚೈತ್ರಾ ಹೇಳಿದ್ದೇನು?

    ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಶಿಫ್ಟ್ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದ್ದು, ಭಾರೀ ಅನುಮಾನ ಹುಟ್ಟಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಐಸಿಯು ವೈದ್ಯರ ಕೊರತೆ!

    ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಐಸಿಯು ವೈದ್ಯರ ಕೊರತೆ!

    ಬೆಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದೆ. 50 ಐಸಿಯು ಬೆಡ್ (ICU Bed) ಇದ್ದರೂ ವರ್ಕ್ ಆಗ್ತಾ ಇರೋದು ಮಾತ್ರ 20 ಅಷ್ಟೇ. ವೈದ್ಯರ ಕೊರತೆಯಿಂದ ಐಸಿಯು ಚಿಕಿತ್ಸೆ ಕಷ್ಟ ಆಗ್ತಾ ಇದೆ. ವೈದ್ಯರ ಕೊರತೆ ಬಗ್ಗೆ ಆರೋಗ್ಯ ಇಲಾಖೆ ಗಮನಕ್ಕೆ ತರಲಾಗಿದೆ. ವೈದ್ಯರ ಕೊರತೆ ಬಗ್ಗೆ ಸರ್ಕಾರಿ ಆಸ್ಪತ್ರೆ ವೈದ್ಯರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

    ಹೌದು. ಕೆ.ಸಿ ಜನರಲ್ ಆಸ್ಪತ್ರೆಗೆ (K.C General Hospital) ದಿನಕ್ಕೆ ಸಾವಿರಾರು ರೋಗಿಗಳು ಬರುತ್ತಾರೆ. ಬೇರೆ ಬೇರೆ ಖಾಯಿಲೆಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಆದರೆ ಈ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರೋದು ಬಯಲಾಗಿದೆ. ಒಟ್ಟು 50 ಐಸಿಯು ಬೆಡ್ ಇದ್ದು ಅದರಲ್ಲಿ 15 ರಿಂದ 20 ಬೆಡ್ ವರ್ಕ್ ಆಗ್ತಿದೆ. ವೆಂಟಿಲೇಟರ್ ಬೆಡ್ ಇರುವ 30 ಬೆಡ್‍ಗಳಲ್ಲಿ ಚಿಕಿತ್ಸೆ ಸರಿಯಾಗಿ ಸಿಗ್ತಿಲ್ಲ ಕಾರಣ ವೈದ್ಯರ ಕೊರತೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

    ಐಸಿಯು ಪೇಷೆಂಟ್‍ಗಳ ಸಂಖ್ಯೆ ಹೆಚ್ಚಾದ್ರೆ ಸಿವಿ ರಾಮನ್ ನಗರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡುತ್ತಾರಂತೆ. ಇರುವ ಸಿಬ್ಬಂದಿಯಲ್ಲೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಸಿಬ್ಬಂದಿ ಕೊರತೆ ಇರೋದನ್ನ ಬಹಿರಂಗವಾಗಿ ಒಪ್ಪಿಕೊಳ್ತಿದ್ದು ಸಮಸ್ಯೆ ಶೀಘ್ರದಲ್ಲೇ ಕ್ಲಿಯರ್ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ – ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ಎಂದ ಪ್ರಶಾಂತ್ ಕಿಶೋರ್

    ಒಟ್ಟಾರೆ ಕೆಸಿ ಜನರಲ್ ಆಸ್ಪತ್ರೆ ಬೆಂಗಳೂರಿನಲ್ಲಿ ಪ್ರಮುಖ ಆಸ್ಪತ್ರೆ. ಸರ್ಕಾರ ಕೂಡಲೇ ಈ ಆಸ್ಪತ್ರೆಯಲ್ಲಿ ಇರುವ ಸಮಸ್ಯೆಗಳನ್ನ ಸರಿಪಡಿಸುತ್ತಾ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ (ICU) ವಾರ್ಡ್‌ಗೆ (Ward) ಶಿಫ್ಟ್ ಮಾಡಲಾಗಿದೆ.

    ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಸೆ.3 ರಂದು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಚಾಲನೆ: ಜಯಮೃತ್ಯುಂಜಯ ಸ್ವಾಮೀಜಿ

    ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಯಾವಾಗ ಡಿಸ್ಚಾರ್ಜ್ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ಕುಮಾರಸ್ವಾಮಿಯವರು ಚೆನ್ನಾಗಿ ಮಾತನಾಡಿದರು. ಅವರು ಬೇಗ ಗುಣಮುಖರಾಗಿ ಬರುತ್ತಾರೆ ಎಂದರು. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ – ತಪ್ಪಿದ ಭಾರೀ ಅನಾಹುತ

    ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ – ತಪ್ಪಿದ ಭಾರೀ ಅನಾಹುತ

    ಹಾಸನ: ಜಿಲ್ಲಾಸ್ಪತ್ರೆಯ (District Hospital) ನವಜಾತ ಶಿಶುಗಳ (Infant) ಐಸಿಯು (ICU) ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್‌ (Short Circuit) ಉಂಟಾಗಿದ್ದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ಹಾಸನದಲ್ಲಿ (Hassan) ನಡೆದಿದೆ.

    ಘಟನೆಯಿಂದ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಐಸಿಯುನಲ್ಲಿದ್ದ 24 ನವಜಾತ ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕೋಣೆಯೊಳಗೆ ಹೊಗೆ ತುಂಬಿಕೊಂಡಿದ್ದು, ಆಸ್ಪತ್ರೆ ಸಿಬ್ಬಂದಿ ಕಿಟಕಿ ಗಾಜುಗಳನ್ನು ಒಡೆದು ಮಕ್ಕಳನ್ನು ರಕ್ಷಿಸಿದ್ದಾರೆ. ಐಸಿಯುನಿಂದ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಬಳಿಕ ನವಜಾತ ಶಿಶುಗಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಭೀಮಾ ನದಿಯಲ್ಲಿ ನೀರು ಕುಡಿಯಲು ಹೋದ ಇಬ್ಬರು ಬಾಲಕರ ಸಾವು

    ಐಸಿಯುನಲ್ಲಿದ್ದ ಎಲ್ಲಾ 24 ನವಜಾತ ಶಿಶುಗಳು ಸುರಕ್ಷಿತವಾಗಿದ್ದು, ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಕೃಷ್ಣಮೂರ್ತಿ ಭೇಟಿ ನೀಡಿದ್ದಾರೆ. ಅಲ್ಲದೇ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking- ಡಾ.ರಾಜ್ ಕುಟುಂಬ ಕುಡಿ ನಟ ಧ್ರುವನ್ ಗಂಭೀರ ಅಪಘಾತ : ಐಸಿಯುನಲ್ಲಿ ಚಿಕಿತ್ಸೆ

    Breaking- ಡಾ.ರಾಜ್ ಕುಟುಂಬ ಕುಡಿ ನಟ ಧ್ರುವನ್ ಗಂಭೀರ ಅಪಘಾತ : ಐಸಿಯುನಲ್ಲಿ ಚಿಕಿತ್ಸೆ

    ಪಾರ್ವತಮ್ಮ ರಾಜ್ ಕುಮಾರ್ (, Pavarthamma Rajkumar) ಅವರ ಸಹೋದರನ ಪುತ್ರ, ನಟ ಸೂರಜ್ (ಧ್ರುವನ್) (Dhruvan) ಗೆ ಚಾಮರಾಜನಗರ ಬೇಗೂರು (ಗುಂಡ್ಲುಪೇಟೆ) ಸಮೀಪದ ಹಿರಿಕಾಟಿ ಗೇಟ್ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸೂರಜ್ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

    ನಿನ್ನೆ ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್ ಗೆ ಡಿಕ್ಕಿ  ಸಂಭವಿಸಿದ ಪರಿಣಾಮ   ಮೈಸೂರಿನ ಸರಸ್ವತಿಪುರಂ ನಿವಾಸಿ ಧ್ರುವನ್ (28) ತೀವ್ರವಾಗಿ ಗಾಯಗೊಂಡಿದ್ದಾರೆ  ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ:ಕೆಂಪು ಬಣ್ಣದ ಸೀರೆಯಲ್ಲಿ ಗ್ಲ್ಯಾಮರಸ್ ಆಗಿ ಮಿಂಚಿದ ಮಾನ್ವಿತಾ

    ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಧ್ರುವನ್ ಆಪ್ತರು ನೀಡಿದ ಮಾಹಿತಿಯಂತೆ ನಿನ್ನೆಯೇ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದ್ದು, ಕಾಲಿಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಒಂದು ಕಾಲು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಪ್ರಜ್ಞೆ ಬಾರದೇ ಇರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ(ICU) ಚಿಕಿತ್ಸೆ ನೀಡಲಾಗುತ್ತಿದೆಯಂತೆ.

    ನಿನ್ನೆ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಮೂಲ ಸೂರಜ್ ಅಂತಿದ್ದ ಹೆಸರನ್ನು ಧ್ರುವನ್ ಅಂತ ಬದಲಾಯಿಸಿಕೊಂಡು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ಭಗವಾನ್ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.