Tag: Idgah Maidan Issue

  • ಈದ್ಗಾ ಮೈದಾನ ನಮ್ಮದೇ ಬಿಬಿಎಂಪಿಗೆ ವಾರ್ನಿಂಗ್ ನೀಡಿದ ವಕ್ಫ್ ಬೋರ್ಡ್ – ಸಿಎಂ ಮಧ್ಯಪ್ರವೇಶಕ್ಕೆ ಕಸರತ್ತು

    ಈದ್ಗಾ ಮೈದಾನ ನಮ್ಮದೇ ಬಿಬಿಎಂಪಿಗೆ ವಾರ್ನಿಂಗ್ ನೀಡಿದ ವಕ್ಫ್ ಬೋರ್ಡ್ – ಸಿಎಂ ಮಧ್ಯಪ್ರವೇಶಕ್ಕೆ ಕಸರತ್ತು

    ಬೆಂಗಳೂರು: ಚಾಮರಾಜಪೇಟೆ ಈದ್ಗಾ ವಿವಾದ ಬಗೆಹರಿಯದ ಸಮಸ್ಯೆ ಆಗಿದೆ. ಬಿಬಿಎಂಪಿ ಮತ್ತು ವಕ್ಫ್ ಬೋರ್ಡ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಈದ್ಗಾ ಮೈದಾನ ನಮ್ಮದೇ ಅಂತಾ ವಕ್ಫ್ ಬೋರ್ಡ್ ಬಿಬಿಎಂಪಿಗೆ ವಾರ್ನಿಂಗ್ ನೀಡಿದೆ.

    ಚಾಮರಾಜಪೇಟೆ ಈದ್ಗಾ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ವಿವಾದ ಬಗೆಹರಿಸದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಸಂಘಟನೆಗಳು ಪ್ರತಿಭಟನೆ ಜೊತೆಗೆ ಹೋರಾಟವನ್ನು ಮಾಡ್ತ ಇದ್ದಾರೆ. ಬಿಬಿಎಂಪಿ ಸ್ವತ್ತು ಎಂದು ಹೇಳಿಕೊಂಡಿರುವುದರಿಂದಾಗಿ ಬಿಬಿಎಂಪಿ ಸಮಸ್ಯೆ ಪರಿಹಾರ ಮಾಡುವಲ್ಲಿ ನಿಧಾನ ಮಾಡ್ತಿದೆ. ಒಂದು ಕಡೆ ವಕ್ಫ್ ಬೋರ್ಡ್ ಕೂಡ ನಮ್ಮ ಸ್ವತ್ತು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖ ಆಗಿದೆ ಎಂದು ಬಿಬಿಎಂಪಿಗೆ ವಾರ್ನಿಂಗ್ ಕೊಡ್ತಾ ಇದ್ದಾರೆ ಹೀಗಾಗಿ ಬಿಬಿಎಂಪಿ ಈ ಸಮಸ್ಯೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮುಂದೆ ಇಟ್ಟಿದೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 13 ವಿದ್ಯಾರ್ಥಿನಿಯರು ಅಸ್ವಸ್ಥ – ಇಬ್ಬರು ಗಂಭೀರ

    ತೆರೆಮರೆಯಲ್ಲಿ ಸಿಎಂ ಬಳಿ ಚರ್ಚೆ ಮಾಡ್ತಾ ಇದ್ದು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಬಿಬಿಎಂಪಿ ಸಿಎಂ ಎಂಟ್ರಿಗೆ ಕಸರತ್ತು ಮಾಡುತ್ತಿದ್ದರೆ, ಇತ್ತ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖವನ್ನು ಪ್ರಸ್ತಾಪ ಮಾಡ್ತಾ ಇದೆ. ಇದು ನಮ್ಮ ಸ್ವತ್ತು ಎಂದು ಆದೇಶ ಇದೆ ಬಿಬಿಎಂಪಿ ನಮ್ಮ ಸ್ವತ್ತು ಅಂದರೆ ನ್ಯಾಯಾಂಗ ನಿಂದನೆ ಆಗುತ್ತೆ ಬಿಬಿಎಂಪಿ ಕೇಳಿರೋ ಎಲ್ಲಾ ದಾಖಲಾತಿ ನೀಡಿದ್ದೇವೆ. ಇನ್ನೂ ಸ್ವಲ್ಪ ಕೊಡಬೇಕಿದೆ ಕಾಲಾವಕಾಶವನ್ನು ಕೇಳುತ್ತಿದ್ದೇವೆ ಎನ್ನುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೊದಲೇ ಗೊತ್ತಿತ್ತು ವರುಣಾ ರಹಸ್ಯ – ಸಿದ್ದುಗೆ ಗುಟ್ಟು ಬಿಟ್ಟುಕೊಟ್ಟಿದ್ರು ಬಿಎಸ್‍ವೈ

    ಇನ್ನೂ ಈದ್ಗಾ ವಿವಾದ ಬಗೆಹರಿಯದ ಹಿನ್ನೆಲೆ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ರಾಜ್ಯಪಾಲರಿಗೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿದೆ. ಮುಖ್ಯಮಂತ್ರಿಗಳು ಕೂಡ ಮಧ್ಯ ಪ್ರವೇಶ ಮಾಡ್ತಾರೆ. ಮೈಸೂರು ಮಹಾರಾಜರಿಗೂ ಕೂಡ ಮನವಿ ಮಾಡಿದ್ದೇವೆ. 1974 ರಿಂದಲೂ ಇದು ನಮ್ಮ ಗ್ರೌಂಡ್ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಆಟದ ಮೈದವಾಗಿಯೇ ಇರುತ್ತೆ – ನಾನಿರುವವರೆಗೆ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ: ಜಮೀರ್

    ಈದ್ಗಾ ಆಟದ ಮೈದವಾಗಿಯೇ ಇರುತ್ತೆ – ನಾನಿರುವವರೆಗೆ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ: ಜಮೀರ್

    ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಮೈದಾನವಾಗಿಯೂ ಇರುತ್ತೆ. ಆಟದ ಮೈದವಾಗಿಯೂ ಇರುತ್ತೆ. ನಾನಿರುವವರೆಗೆ ಅದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

    ಈದ್ಗಾ ಮೈದಾನ ಹಾಗೂ ಆಟದ ಮೈದಾನ ವಿವಾದದ ಬಗ್ಗೆ ಸ್ಪಷ್ಟಿಕರಣ ನೀಡಿರುವ ಜಮೀರ್, ನಾನು ಶಾಸಕನಾಗಿರುವವರೆಗೆ ಇದನ್ನ ಬದಲಿಸಲು ಯಾರಿಂದಲು ಸಾಧ್ಯವಿಲ್ಲ. ನಿನ್ನೆ ಸಭೆ ಮಾಡಿದ್ದಾರೆ ಅಂತ ಗೊತ್ತಾಯ್ತು. ಸಭೆಯ ಉದ್ದೇಶ ಏನು ಅಂತ ಅರ್ಥ ಆಗ್ತಿಲ್ಲ. ಆಟದ ಮೈದಾನ ಉಳಿಸಿ ಅಂತ ಸಭೆ, ಅಲ್ಲದೇ ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ ಅಂತಿದ್ದಾರೆ. ಆಟದ ಮೈದಾನ ತೆಗೀತಾರೆ ಅಂತ ಯಾರು ಹೇಳಿದ್ದು? 2005ರವರೆಗೆ ಚಾಮರಾಜಪೇಟೆಯಲ್ಲಿ ಹಿಂದೂ, ಮುಸ್ಲಿಂ ಗಲಾಟೆ ಆಗುತಿತ್ತು. ನಾನು ಶಾಸಕನಾದ ಮೇಲೆ ಚಾಮರಾಜಪೇಟೆಯಲ್ಲಿ ಗಲಾಟೆ ಇಲ್ಲ. ಹಿಂದೂ, ಮುಸ್ಲಿಂ ಎಲ್ಲಾ ಶಾಂತಿಯಿಂದ ನೆಮ್ಮದಿಯಾಗಿ ಬದುಕುತ್ತಿದ್ದೇವೆ ಎಂದರು.  ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    ಈ ನಡುವೆ ಕಳೆದೊಂದು ತಿಂಗಳಿನಿಂದ ಈದ್ಗಾ ವಿವಾದಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿದೆ. ಚಾಮರಾಜಪೇಟೆ ಆಟದ ಮೈದಾನ ಮುಸ್ಲಿಮರಿಗೆ ಸೇರಿಲ್ಲ. ಇದು ನಮ್ಮ ಸ್ವತ್ತು ಅಂತ ಸ್ಥಳೀಯರು, ಸಂಘಟನೆಗಳು ಕಿಡಿಕಾರಿವೆ. ಚಾಮರಾಜಪೇಟೆ ಆಟದ ಮೈದಾನ ಉಳಿವಿಗಾಗಿ ಇದೇ 12ಕ್ಕೆ ಚಾಮರಾಜಪೇಟೆ ಬಂದ್‍ಗೆ ಕರೆ ಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6 ಘಂಟೆಯ ತನಕ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಸಂಪೂರ್ಣ ಸ್ಥಬ್ದಗೊಳ್ಳಲಿದೆ. ಆದ್ರೆ ಇದಕ್ಕೆ ಸೊಪ್ಪು ಹಾಕದ ಮುಸ್ಲಿಂ, ವ್ಯಾಪಾರಿಗಳು, ಬಂದ್‍ಗೆ ನಮ್ಮ ಬೆಂಬಲವಿಲ್ಲ. ನಮ್ಮ ಅಂಗಡಿಗಳನ್ನು ಯಾವ್ದೇ ಕಾರಣಕ್ಕೂ ಮುಚ್ಚಲ್ಲ. ಎಂದಿನಂತೆ ವ್ಯಾಪಾರ ಮಾಡ್ತೇವೆ. ಬಂದ್ ನಿಂದ ಲಾಸ್ ಆದ್ರೆ ಇವ್ರೇನು ತಂದು ಕೊಡ್ತಾರಾ ಅಂತ ಬಂದ್‌ಗೆ, ಟಕ್ಕರ್ ಕೊಟ್ಟಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ಈದ್ಗಾ ಮೈದಾನದ ಹೆಸರು?

    ಬಿಬಿಎಂಪಿ ಕಮಿಷನರ್ ಇದು ಪಾಲಿಕೆಯ ಸ್ವತ್ತಲ್ಲ ಎಂದಿದ್ರು. ವಕ್ಫ್ ಬೋರ್ಡ್, ಇದು ನಮ್ಮ ಜಾಗ ಎಂದು ವಾದ ಮಾಡಿತ್ತು. ಹೀಗೆ ಗೊಂದಲಗಳಲ್ಲಿದ್ದ, ಕ್ಷೇತ್ರದ ಜನ, ನಿನ್ನೆ ಈದ್ಗಾ ಮೈದಾನ ಸಮೀಪದ ಜಂಗಮ ಮಂಟಪದಲ್ಲಿ ಸಭೆ ನಡೆಸಿ, ಬಂದ್‍ಗೆ ತೀರ್ಮಾನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಆಟದ ಮೈದಾನವಾಗಿಯೇ ಉಳಿಯಬೇಕು – ರಕ್ತ ಕೊಟ್ಟಾದರೂ ಉಳಿಸಿಕೊಳ್ತೇವೆ

    ಈದ್ಗಾ ಆಟದ ಮೈದಾನವಾಗಿಯೇ ಉಳಿಯಬೇಕು – ರಕ್ತ ಕೊಟ್ಟಾದರೂ ಉಳಿಸಿಕೊಳ್ತೇವೆ

    ಬೆಂಗಳೂರು: ಈದ್ಗಾ ವಿವಾದದ ಕಿಚ್ಚು ಮತ್ತೆ ಹೆಚ್ಚಾಗುತ್ತಿದೆ. ಜುಲೈ 12ಕ್ಕೆ ಚಾಮರಾಜಪೇಟೆಯನ್ನು ಸಂಪೂರ್ಣ ಬಂದ್ ಮಾಡಲು ಕ್ಷೇತ್ರದ ಜನ ನಿರ್ಧರಿಸಿದ್ದಾರೆ. ಹೀಗಾಗಿ ಮನೆ, ಮನೆಗೆ ಭಿತ್ತಿಪತ್ರಗಳನ್ನು ಹಂಚಲು ತೀರ್ಮಾನಿಸಿ ಈದ್ಗಾ ಆಟದ ಮೈದಾನವಾಗಿಯೇ ಉಳಿಯಬೇಕೆಂಬ ನಿರ್ಧಾರಕ್ಕೆ ಸ್ಥಳೀಯರು ಬಂದಿದ್ದಾರೆ.


    ಈದ್ಗಾ ಆಟದ ಮೈದಾನ ವಿವಾದ, ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಮೈದಾನವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲ್ಲ. ರಕ್ತಕೊಟ್ಟಾದ್ರೂ ಚಾಮರಾಜಪೇಟೆ ಆಟದ ಮೈದಾನವನ್ನು ಉಳಿಸಿಕೊಳ್ಳುತ್ತೇವೆ ಎಂದು ಸ್ಥಳೀಯರು ಬಿಗಿ ಪಟ್ಟು ಹಿಡಿದಿದ್ದಾರೆ. ಮೈದಾನ ಉಳಿವಿಗಾಗಿ ಇದೇ ತಿಂಗಳು 12ಕ್ಕೆ ಸಂಪೂರ್ಣ ಚಾಮರಾಜಪೇಟೆ ಬಂದ್‍ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    ಈದ್ಗಾ ಆಟದ ಮೈದಾನ ಉಳಿವಿಗಾಗಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ 50ಕ್ಕೂ ಹೆಚ್ಚು ಸಂಘಟನೆಗಳು ಸೇರಿ ಬಂದ್‍ಗೆ ಕರೆಯನ್ನು ನೀಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸಿರ್ಸಿ ಸರ್ಕಲ್ ನಿಂದ ಈದ್ಗಾ ಮೈದಾನದವರೆಗೆ ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಿದ್ದಾರೆ. ಇಂದಿನಿಂದ ಮನೆ ಮನೆಗೆ ತೆರಳಿ ಭಿತ್ತಿಪತ್ರವನ್ನ ನೀಡಿ, ಬಂದ್‍ನಲ್ಲಿ ಭಾಗಿಯಾಗುವಂತೆ ಕರೆ ನೀಡಲು ಸ್ಥಳೀಯರು ಮುಂದಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ನಡೆಸುವುದು ತಪ್ಪಲ್ಲ: ಜಿ. ಪರಮೇಶ್ವರ್


    ಇಂದು ಚಾಮರಾಜಪೇಟೆಯ ಜಂಗಮ ಮಂಟಪದಲ್ಲಿ ನಡೆದ ಸಭೆಯಲ್ಲಿ ಜಯಕರ್ನಾಟಕ ಸಂಘಟನೆ ಬಂದ್‍ಗೆ ಕರೆ ನೀಡಿತು. ಇದಕ್ಕೆ ಉಳಿದ ಸಂಘಟನೆಗಳು ಕೂಡ ಒಪ್ಪಿಗೆ ಸೂಚಿಸಿದವು. ಬಂದ್ ದಿನ ಜನ ಸ್ವಯಂ ಪ್ರೇರಿತವಾಗಿ ಬರ್ತಾರೆ. ನಮ್ಮ ರ‍್ಯಾಲಿಯನ್ನು ಪೊಲೀಸರು ತಡೆದ್ರೆ, ಸರಿಯಿರಲ್ಲ. ಯಾರೇ ಬಂದ್ರೂ ನಮ್ಮನ್ನು ತಡೆಯೋಕೆ ಆಗಲ್ಲ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ. ಬಿಬಿಎಂಪಿ, ವಕ್ಫ್ ಬೋರ್ಡ್ ಜಟಾಪಟಿ ನಡುವೆ ಸ್ಥಳೀಯರೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    Live Tv