Tag: idgha maidan

  • ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    ಬೆಂಗಳೂರು: ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ (Chamarajapete) ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಸಮಯಕ್ಕೆ ಸರಿಯಾಗಿ ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು. ಕಂದಾಯ ಇಲಾಖೆಯಿಂದಲೇ ಸ್ವಾತಂತ್ರ್ಯ ದಿನಾಚರಣೆಯ ರೀತಿಯಲ್ಲಿ ಕಾರ್ಯಕ್ರಮ ನಡೆಯಿತು.

    ಧ್ವಜರೋಹಣವನ್ನು ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ನೆರವೇರಿಸಿದರು. ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ (PC Mohan), ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Zameer Ahmed) ಉಪಸ್ಥಿತರಿದ್ದರು. 100ಕ್ಕೂ ಅಧಿಕ ಶಾಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬ್ಯಾಂಡ್ ಸೆಟ್, ಕಂಸಾಳೆ ಸೇರಿದಂತೆ ಹಲವು ವಿಶೇಷತೆಗಳು ನೋಡುಗರ ಕಣ್ಮನ ಸೆಳೆಯಿತು. ಸಂತ ತೆರೆಸ ಬಾಲಕಿಯರ ಶಾಲೆ, ಚಾಮರಾಜಪೇಟೆ ಬಾಲಕಿಯರ ಶಾಲೆ, ಸರ್ಕಾರಿ ಕನ್ನಡ, ಆಂಗ್ಲ ಪ್ರಾಥಮಿಕ ಶಾಲೆ ಸೇರಿದಂತೆ 5 ಶಾಲೆಗಳಿಂದ ಮಕ್ಕಳು ಭಾಗಿಯಾಗಿದ್ದರು.ಇದನ್ನೂ ಓದಿ: 74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್‍ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ

    ಚಾಮರಾಜಪೇಟೆ ನಾಗರೀಕರಿಂದ ಜೈಕಾರ: ಸನಾತನ ಹಿಂದೂಧರ್ಮಕ್ಕೆ ಜೈ ಮತ್ತು ಭಾರತಮಾತೆಗೆ ಜೈಕಾರವನ್ನು ಕಾರ್ಯಕ್ರಮದ ವೇಳೆ ಚಾಮರಾಜಪೇಟೆ ನಾಗರೀಕರು ಕೂಗಿದರು.

    ಸಿಸಿಟಿವಿ ಮಾನಿಟರಿಂಗ್: ಕಾರ್ಯಕ್ರಮ ಮುಗಿದ ನಂತರ ಮೈದಾನದಿಂದ ನಿರ್ಗಮಿಸಲು ಸೂಚನೆ ನೀಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರೂ ಸಜ್ಜಾಗಿದ್ದರು. ಸಿಸಿಟಿವಿ ಅಳವಡಿಸಿ ಮಾನಿಟರಿಂಗ್ ಮಾಡುವುದಕ್ಕೆ ಕೊಠಡಿ ಸಜ್ಜು ಮಾಡಲಾಗಿತ್ತು. ಒಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

    ಸರ್ಕಾರಕ್ಕೆ ಮತ್ತೆ ಈದ್ಗಾ ವಿವಾದ ಟೆನ್ಷನ್- ಜ. 21ರೊಳಗೆ ನಿಲುವು ಪ್ರಕಟಿಸಲು ಡೆಡ್‍ಲೈನ್

    ಚಾಮರಾಜಪೇಟೆ ನಾಗರೀಕರ ಒಕ್ಕೂಟಕ್ಕೆ ಸಿಕ್ಕ ಜಯ: ಇದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ಹಾಗೂ ಹಿಂದೂ ಸಂಘಟನೆಗಳ ಹೋರಾಟಕ್ಕೆ ದಕ್ಕಿದ ಪ್ರತಿಫಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದ್ದು, ಧ್ವಜಾರೋಹಣ ಮಾತ್ರವಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶಕ್ಕೆ ಒಕ್ಕೂಟ ಒತ್ತಾಯ ಮಾಡಿದ್ದರು. ನಮ್ಮ ದೇಶದ ಹಬ್ಬವನ್ನು ಆಚರಿಸಲು ಯಾಕೆ ಹಿಂದೇಟು ಹಾಕಬೇಕು ಎಂದು ಪ್ರಶ್ನೆ ಕೇಳಿದ್ದರು. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಇತರ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಈ ಮೊದಲು ಎನ್ನಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರಕ್ಕೆ ಮತ್ತೆ ಈದ್ಗಾ ವಿವಾದ ಟೆನ್ಷನ್- ಜ. 21ರೊಳಗೆ ನಿಲುವು ಪ್ರಕಟಿಸಲು ಡೆಡ್‍ಲೈನ್

    ಸರ್ಕಾರಕ್ಕೆ ಮತ್ತೆ ಈದ್ಗಾ ವಿವಾದ ಟೆನ್ಷನ್- ಜ. 21ರೊಳಗೆ ನಿಲುವು ಪ್ರಕಟಿಸಲು ಡೆಡ್‍ಲೈನ್

    ಬೆಂಗಳೂರು: ಗಣರಾಜ್ಯೋತ್ಸ (Republic Day) ವ ಸಮೀಪಿಸುತ್ತಾ ಇದ್ದಂತೆ ಚಾಮರಾಜಪೇಟಯ ಈದ್ಗಾ ಮೈದಾನ(Idgah Maidan) ದ ವಿವಾದ ಮತ್ತೆ ಭುಗಿಲೆದ್ದಿದೆ. ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಬಿಗಿಪಟ್ಟು ಹಿಡಿದಿದ್ದು, ರಾಜ್ಯ ಸರ್ಕಾರ ತನ್ನ ನಿಲುವು ಪ್ರಕಟಿಸಲು ಡೆಡ್ ಲೈನ್ ಕೊಟ್ಟಿವೆ.

    ಕಳೆದ ಒಂದು ವರ್ಷದಿಂದ ಬೆಂಗಳೂರಿನ ಚಾಮರಾಜಪೇಟೆ (Chamarajapete) ಯ ಈದ್ಗಾ ಮೈದಾನದ ವಿವಾದಿತ ಕೇಂದ್ರಬಿಂದುವಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಮಾದರಿಯಲ್ಲೇ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಒತ್ತಾಯ ಕೇಳಿ ಬಂದಿದೆ. ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಸಿಗದೆ ನಿರಾಸೆಗೊಂಡಿರೋ ಹಿಂದೂಪರ ಸಂಘಟನೆಗಳು ಹಾಗೂ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವವನ್ನ ಆಚರಣೆ ಮಾಡ್ಲೇಬೇಕು ಅಂತ ಹೋರಾಟಕ್ಕೆ ಇಳಿದಿದ್ದಾರೆ. ಈಗಾಗ್ಲೇ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಬೇಕೆಂದು ಚಾಮರಾಜಪೇಟೆ ನಾಗರೀಕ ಒಕ್ಕೂಟ, ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜೊತೆಗೆ ಸಿಎಂ, ಕಂದಾಯ ಇಲಾಖೆಗೂ ಪತ್ರ ಕೊಟ್ಟಿದ್ದಾರೆ. ಆದರೂ ಸರ್ಕಾರದಿಂದ ಯಾವುದೇ ನಿಲುವು ಹೊರಬಿದ್ದಿಲ್ಲ.

    ಸರ್ಕಾರ 7 ದಿನಗಳೊಳಗೆ, ಜನವರಿ 21ರವೊಳಗೆ ತೀರ್ಮಾನ ಪ್ರಕಟಿಸದಿದ್ದರೆ ಜನವರಿ 26ರಂದು ಮೈದಾನಕ್ಕೆ ನುಗ್ಗಿ ತ್ರಿವರ್ಣ ಧ್ವಜ ಹಾರಿಸೋದಾಗಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಮನವಿ ಮಾಡಿದ್ರು ರೆಸ್ಪಾನ್ಸ್ ನೀಡದ ಕಂದಾಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅನುಮತಿ ಇದ್ರೂ ಓಕೆ, ಇಲ್ಲದೇ ಇದ್ರೂ ಓಕೆ ನಾವು ಗಣರಾಜೋತ್ಸವ ಆಚರಣೆ ಮಾಡ್ತೀವಿ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹೇಳಿದರು.

    ಸರ್ಕಾರ ಮೌನವಾಗಿರೋದ್ದಕ್ಕೆ ಚಾಮರಾಜಪೇಟೆ ನಾಗರೀಕ ಒಕ್ಕೂಟ ಅಷ್ಟೇ ಅಲ್ಲದೆ ಹಿಂದೂಪರ ಸಂಘಟನೆಗಳು ಗರಂ ಆಗಿವೆ. ಗಣರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಇಲ್ಲವಾದ್ರೆ, ಕಾನೂನು ರೀತಿ ಹೋರಾಟ ಮಾಡೋದಾಗಿ ಹಿಂದೂ ಜನಜಾಗೃತಿ ಸಮಿತಿ (ರೀಜನಲ್) ವಕ್ತಾರ ಮೋಹನ್ ಗೌಡ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಒಟ್ಟಿನಲ್ಲಿ ಗಣರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ಆದರೆ ಸರ್ಕಾರ ಗಣರಾಜ್ಯೋತ್ಸವಕ್ಕೆ ಅನುಮತಿ ಕೊಡುತ್ತೊ ಇಲ್ಲವೋ ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಯತ್ನಾಳ್ ಆಟಾಟೋಪಕ್ಕೆ ಬಿಜೆಪಿ ವರಿಷ್ಠರು ಸುಸ್ತು- ಲಗಾಮು ಹಾಕದಷ್ಟು ವೀಕ್ ಆಯ್ತಾ ಹೈಕಮಾಂಡ್?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಬೆಂಗಳೂರು: ಭಾರೀ ವಿವಾದ ಎಬ್ಬಿಸಿದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಖಜಾಂಚಿ ಯಶವಂತ್ ಕಣ್ಣೀರಿಟ್ಟಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಸೆ.23ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ನಮಗೆ ಜಯ ಸಿಗುತ್ತೆ ಅನ್ನೋ ಭರವಸೆಯಿದೆ. ಗಣೇಶೋತ್ಸವಕ್ಕೆ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆವು. ನಾವು ಇದುವರೆಗೂ ಮುಸ್ಲಿಮರಿಗೆ ತೊಂದರೆ ಕೊಟ್ಟಿಲ್ಲ. ಆದರೆ ನಮ್ಮ ಗಣೇಶೋತ್ಸವಕ್ಕೆ ಯಾಕೆ ಇಷ್ಟೊಂದು ತೊಂದರೆ ಕೊಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಗಲಭೆ ಎಬ್ಬಿಸೋಕೆ ಅವರೇ ಹೀಗೆ ಮಾಡುತ್ತಿದ್ದಾರೆ. ಅವರು ಹಬ್ಬ ಮಾಡಿದಾಗ ನಾವು ಏನಾದ್ರೂ ತೊಂದರೆ ಮಾಡಿದ್ವಾ..? ನಮ್ಮ ಆಚರಣೆಗಳಿಗೆ ಯಾಕೆ ತೊಂದ್ರೆ ಕೊಡುತ್ತಿದ್ದಾರೆ. ದಾಖಲೆಗಳಿಲ್ಲದಿದ್ದರೂ ವಕ್ಫ್ ಬೋರ್ಡ್ ಮತ್ತೆ ಕೇಸ್ ಹಾಕಿದ್ದಾರೆ. ನಮಗೆ ಜಯ ಸಿಕ್ಕೇ ಸಿಗುತ್ತೆ. ಮೈದಾನ ವಿಚಾರವಾಗಿ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದು ಕಣ್ಣೀರಿಟ್ಟರು.

    Live Tv
    [brid partner=56869869 player=32851 video=960834 autoplay=true]

  • ಧ್ವಜಾರೋಹಣಕ್ಕೆ ಈದ್ಗಾ ಮೈದಾನದಲ್ಲಿ ಸಿದ್ಧತೆ- ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ

    ಧ್ವಜಾರೋಹಣಕ್ಕೆ ಈದ್ಗಾ ಮೈದಾನದಲ್ಲಿ ಸಿದ್ಧತೆ- ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ

    ಬೆಂಗಳೂರು: ನಾಳೆ ದೇಶದೆಲ್ಲೆಡೆ ಸ್ವಾತಂತ್ರ್ಯ ದಿನದ ಸಂಭ್ರಮ. ಇತ್ತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲೂ ನಾಳೆಯ ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗೆ ಪಾಸ್ ಕೊಡುವ ಚಿಂತನೆ ನಡೆಯುತ್ತಿದೆ.

    ವಂದೇ ಮಾತರಂ ಮತ್ತು ಭಾರತ್ ಮಾತಾಕಿ ಜೈ ಅಂತ ಎರಡೇ ಘೋಷಣೆ ಕೂಗಬೇಕು. ಅದನ್ನು ಹೊರತುಪಡಿಸಿ ಪಕ್ಷ, ಸಂಘಟನೆ ಬೇರೆ ಯಾವುದೇ ರೀತಿಯ ಘೋಷಣೆಗಳನ್ನ ಮೈದಾನದ ಬಳಿ ಕೂಗುವಂತಿಲ್ಲ. ಮಕ್ಕಳನ್ನ ಹೊರತುಪಡಿಸಿ ಸಾರ್ವಜನಿಕರಿಗೆ ಪ್ರತ್ಯೇಕ ಗೇಟ್ ಮೂಲಕ ಎಂಟ್ರಿ ಇರಲಿದೆ. ಕಂದಾಯ ಇಲಾಖೆ ಅಧಿಕಾರಿಗಳು ಈಗಾಗಲೇ ಧ್ವಜಾರೋಹಣ ಸ್ಥಂಭದ ಮಾರ್ಕ್ ಮಾಡಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಇನ್ಮುಂದೆ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ಉಳಿತಾಯಕ್ಕೆ ಸಿಎಂ ಪ್ಲ್ಯಾನ್‌

    ಮಧ್ಯಾಹ್ನದ ವೇಳೆಗೆ ಮೈದಾನದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಮಧ್ಯಾಹ್ನ ಸಮಯಕ್ಕೆ ಆರ್ ಎಎಫ್ ಪಡೆಯಿಂದ ಚಾಮರಾಜಪೇಟೆಯಲ್ಲಿ ಪರೇಡ್ ನಡೆಯಲಿದೆ. ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಹಿನ್ನೆ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲು ಕಂದಾಯ ಇಲಾಖೆ ಸಿದ್ಧತೆ ನಡೆಸುತ್ತಿದೆ. ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಧ್ವಜಾರೋಹಣ ಮಾಡುವ ಸಮಯಕ್ಕೆ ಈದ್ಗಾದಲ್ಲಿಯೂ ಧ್ವಜರೋಹಣ ನಡೆಯಲಿದೆ.

    ಗಣ್ಯರಿಗೆ ವೇದಿಕೆ ಮಾಡಲಿದ್ದು, ಕುರ್ಚಿ ವ್ಯವಸ್ಥೆಯನ್ನ ಸಹ ಮಾಡಲಿದ್ದಾರೆ. ಒಟ್ಟಿನಲ್ಲಿ ನಾಳೆಮೈದಾನವಿಡೀ ಖಾಕಿ ಸರ್ಪಗಾವಲಿನಲ್ಲಿರಲಿದೆ.

    Live Tv
    [brid partner=56869869 player=32851 video=960834 autoplay=true]