Tag: Idris Ali

  • ನಾನು ಪುರುಷ ED, CBI ನನ್ನನ್ನು ಮುಟ್ಟುವಂತಿಲ್ಲ – ಸುವೇಂದು ಅಧಿಕಾರಿಗೆ ಇದ್ರಿಸ್ ಅಲಿ ಟಾಂಗ್

    ನಾನು ಪುರುಷ ED, CBI ನನ್ನನ್ನು ಮುಟ್ಟುವಂತಿಲ್ಲ – ಸುವೇಂದು ಅಧಿಕಾರಿಗೆ ಇದ್ರಿಸ್ ಅಲಿ ಟಾಂಗ್

    ಕೋಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸುವೇಂದು ಅಧಿಕಾರಿಯನ್ನು (Suvendu Adhikari) ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ನಾನು ಪುರುಷ, ನನ್ನನ್ನು ಮುಟ್ಟಬೇಡಿ ಎಂದು ಕಿರುಚಾಡಿದ್ದರು. ಇದೀಗ ಇದಕ್ಕೆ ಟಾಂಗ್ ನೀಡಲು ಮುಂದಾಗಿರುವ ಟಿಎಂಸಿ ಎಮ್‍ಎಲ್‍ಎ ಇದ್ರಿಸ್ ಅಲಿ (Idris Ali) ನಾನು ಪುರುಷ ಇಡಿ (ED), ಸಿಬಿಐ (CBI) ನನ್ನನ್ನು ಮುಟ್ಟುವಂತಿಲ್ಲ ಎಂದು ತಮ್ಮ ಕುರ್ತಾದಲ್ಲಿ ಬರೆದುಕೊಂಡು ವ್ಯಂಗ್ಯವಾಡಿದ್ದಾರೆ.

    ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕೆಲದಿನಗಳ ಹಿಂದೆ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಮೆರವಣಿಗೆ ಮೂಲಕ ಕೋಲ್ಕತ್ತಾದ ರಾಜ್ಯ ಕಾರ್ಯಾಲಯ ನಬನ್ನಾಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಸುವೇಂದು ಅಧಿಕಾರಿ, ನನ್ನನ್ನು ಮುಟ್ಟಬೇಡಿ, ನೀವು ಮಹಿಳೆಯರು, ಪುರುಷ ಪೊಲೀಸರನ್ನು ಕರೆಯಿರಿ ಎಂದು ಕಿರುಚಾಡಿದ್ದರು. ಇದನ್ನೂ ಓದಿ: 2026ಕ್ಕೆ ಭಾರತದಲ್ಲಿ ಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚಳ!

    ಬಳಿಕ ಈ ಬಗ್ಗೆ ಮಹಿಳಾ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂದು ಸುವೇಂದು ಅಧಿಕಾರಿ ಟೀಕಿಸಿದ್ದರು. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಪೋಸ್ಟ್ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಸೀದಿಯಲ್ಲಿ ಮುಸ್ಲಿಂ ಮುಖಂಡರನ್ನು ಭೇಟಿಯಾದ RSS ಮುಖ್ಯಸ್ಥ ಮೋಹನ್ ಭಾಗವತ್

    ಇದೀಗ ಈ ಬಗ್ಗೆ ಕಿಚಾಯಿಸಿರುವ ಇದ್ರಿಸ್ ಅಲಿ, ಬಂಗಾಳದ ಅಧಿವೇಶನಕ್ಕೆ ಆಗಮಿಸಿದಾಗ ತಾವು ಧರಿಸಿದ್ದ ಕುರ್ತಾದಲ್ಲಿ ನಾನು ಪುರುಷ ಇಡಿ, ಸಿಬಿಐ ನನ್ನನ್ನು ಮುಟ್ಟುವಂತಿಲ್ಲ ಎನ್ನುವಂತಹ ಕೆಲ ಬಿಜೆಪಿ ನಾಯಕರಿದ್ದಾರೆ ಎಂದು ಬರೆದುಕೊಂಡು ವ್ಯಂಗ್ಯವಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಂಕಾ ಅಧ್ಯಕ್ಷರ ಸ್ಥಿತಿ ಪ್ರಧಾನಿ ಮೋದಿಗೂ ಬರಲಿದೆ- ಟಿಎಂಸಿ ಶಾಸಕ ಎಚ್ಚರಿಕೆ

    ಲಂಕಾ ಅಧ್ಯಕ್ಷರ ಸ್ಥಿತಿ ಪ್ರಧಾನಿ ಮೋದಿಗೂ ಬರಲಿದೆ- ಟಿಎಂಸಿ ಶಾಸಕ ಎಚ್ಚರಿಕೆ

    ಕೋಲ್ಕತ್ತಾ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸ್ಥಿತಿ ಪ್ರಧಾನಿ ನರೇಂದ್ರ ಮೋದಿ ಅವರೂ ಎದುರಿಸಬೇಕಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ (TMC) ಶಾಸಕ ಇದ್ರಿಸ್ ಅಲಿ ಎಚ್ಚರಿಕೆ ನೀಡಿದ್ದಾರೆ.

    ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಿದ್ದಾರೆ. ಇಂದು ಸಹ ಪ್ರಧಾನಿ ನಿವಾಸದಲ್ಲಿ ಪ್ರಜೆಗಳದ್ದೇ ದರ್ಬಾರ್  ಮುಂದುವರಿದಿದೆ.  ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಜುಲೈ 11ರಂದು ನಡೆಯಲಿರುವ ಕೋಲ್ಕತ್ತಾದ ಸೀಲ್ದಾಹ್ ಮೆಟ್ರೋ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಹ್ವಾನಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.  ಇದನ್ನೂ ಓದಿ: ಕೊಲೆ ಯತ್ನ ನಡೆದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹಾಸ್ಯ ನಟ ಬಾಬು ಮೋಹನ್

    ಮಮತಾ ಬ್ಯಾನರ್ಜಿ ಅವರು ರೈಲ್ವೆ ಸಚಿವರಾಗಿದ್ದಾಗ ಈ ಯೋಜನೆಯನ್ನು ಪ್ರಾರಂಭಿಸಿದರು. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು ಅನ್ಯಾಯ. ಈ ಹಿಂದೆಯೂ ಕೇಂದ್ರ ಗೃಹಸಚಿವ ಅಮಿತ್ ಶಾರ ಅಧ್ಯಕ್ಷತೆಯಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಿಂದ ಮಮತಾ ಬ್ಯಾನರ್ಜಿ ಅವರನ್ನು ಹೊರಗಿಡಲಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಟಿಎಂಸಿ ಆರೋಪಿಸಿತ್ತು.

    Live Tv
    [brid partner=56869869 player=32851 video=960834 autoplay=true]