Tag: Iftar eve

  • ಬುಧವಾರ ಜೆಡಿಎಸ್ ವತಿಯಿಂದ ಬೆಂಗ್ಳೂರಿನಲ್ಲಿ ಇಫ್ತಾರ್ ಕೂಟ

    ಬುಧವಾರ ಜೆಡಿಎಸ್ ವತಿಯಿಂದ ಬೆಂಗ್ಳೂರಿನಲ್ಲಿ ಇಫ್ತಾರ್ ಕೂಟ

    ಬೆಂಗಳೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ರಂಜಾನ್ ಹಬ್ಬದ ಪ್ರಯುಕ್ತ ಇಫ್ತಿಯಾರ್ ಭೋಜನ ಕೂಟವನ್ನು ಆಯೋಜಿಸಿದ್ದಾರೆ.

    ಬುಧವಾರ ಸಂಜೆ ಅರಮನೆ ಮೈದಾನದ ಶೇಷ ಮಹಲ್ ನಲ್ಲಿ ಇಫ್ತಿಯಾರ್ ಭೋಜನ ಕೂಟ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕೂಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳು ಭಾಗವಹಿಸಲಿದ್ದಾರೆ.

    ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ, ಸ್ವತಃ ರಾಹುಲ್ ಗಾಂಧಿ ಯವರೇ ಫೋನ್ ಮಾಡಿ ಕುಮಾರಸ್ವಾಮಿ ಮತ್ತು ನನಗೂ ಬರುವಂತೆ ಆಹ್ವಾನ ನೀಡಿದ್ದಾರೆ. ಆದರೆ ನಾವು ಕೂಡ ಇಫ್ತಾರ್ ಕೂಟ ಆಯೋಜಿಸಿದ್ದೇವೆ. ಈ ಕೂಟದಲ್ಲಿ ಸುಮಾರು ಐದು ಸಾವಿರ ಜನರು ಭಾಗಿಯಾಗುತ್ತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಏರ್ಪಡಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದರು.