Tag: Illegal Affair

  • ಒಂದು ಕೊಲೆ, ಒಂದು ಆತ್ಮಹತ್ಯೆ – ಎರಡು ಕೊಲೆ ಯತ್ನದ ಹಿಂದೆ ಹಲವು ಅನುಮಾನಗಳು

    ಒಂದು ಕೊಲೆ, ಒಂದು ಆತ್ಮಹತ್ಯೆ – ಎರಡು ಕೊಲೆ ಯತ್ನದ ಹಿಂದೆ ಹಲವು ಅನುಮಾನಗಳು

    ಬೆಂಗಳೂರು: ಸಿಲಿಕಾನ್ ಸಿಟಿಯ ರಾಜಗೋಪಾಲನಗರದ ಹೆಗ್ಗನಹಳ್ಳಿಯಲ್ಲಿ ನಡೆದಿದ್ದ ಹೆಂಡತಿಯ ಕೊಲೆ, ಗಂಡ ಮತ್ತು ಮಗಳ ಕೊಲೆ ಯತ್ನ, ಬಾಡಿಗೆದಾರ ನೇಣು ಬಿಗಿದುಕೊಂಡು ಸಾವು ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಹೆಗ್ಗನಹಳ್ಳಿ ನಿವಾಸಿಯಾದ ಲಕ್ಷ್ಮಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಅದೇ ಮನೆಯಲ್ಲಿ ಲಕ್ಷ್ಮಿ ಗಂಡ ಶಿವರಾಜ್ ಮತ್ತು ಮಗಳು ಚೈತ್ರ ರಕ್ತದ ಮಡುವಿನಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಜೊತೆಗೆ ಅದೇ ಮನೆಯ ಮೇಲೆ ಬಾಡಿಗೆಗೆ ವಾಸವಾಗಿದ್ದ ಚಿತ್ರದುರ್ಗ ಮೂಲದ ರಂಗದಾಮಯ್ಯ ಅನುಮಾನಸ್ಪದ ರೀತಿಯಲ್ಲಿ ನೇಣಿಗೆ ಶರಣಾಗಿದ್ದರು.

    ಸ್ಥಳಕ್ಕೆ ಬಂದ ಪೊಲೀಸರು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಂದೆ ಮತ್ತು ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಮನೆ ಮಾಲೀಕಿ ಲಕ್ಷ್ಮಿ ತಲೆಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದ್ದು, ಬಾಡಿಗೆದಾರ ರಂಗದಾಮಯ್ಯ ಹೊಟ್ಟೆಗೆ ಚಾಕು ಇರಿದ ಸ್ಥಿತಿಯಲ್ಲಿ ನೇಣು ಬಿಗಿದುಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಲಕ್ಷ್ಮಿ ಮತ್ತು ಬಾಡಿಗೆದಾರ ರಂಗದಾಮಯ್ಯನ ನಡುವೆ ಅಕ್ರಮ ಸಂಬಂಧದ ಶಂಕೆ ವ್ಯಕ್ತವಾಗಿದ್ದು, ಇದೇ ಕಾರಣಕ್ಕೆ ಗಲಾಟೆ ನಡೆದು ಲಕ್ಷ್ಮಿಯನ್ನು ಬಾಡಿಗೆದಾರ ರಂಗದಾಮಯ್ಯನೆ ಕೊಲೆ ಮಾಡಿ ನಂತರ ಗಂಡ ಮತ್ತು ಮಗಳ ಕೊಲೆಗೆ ಯತ್ನಿಸಿರಬಹುದು ಅಂತಾ ಶಂಕಿಸಲಾಗಿದೆ. ಆದರೆ ರಂಗದಾಮಯ್ಯನ ಹೊಟ್ಟೆಗೆ ಚಾಕು ಹಾಕಿದ್ದು ಯಾರು? ಚಾಕು ಹಾಕಿ ತೀವ್ರ ರಕ್ತಸ್ರಾವ ಆದ ನಂತರ ಹೇಗೆ ನೇಣುಬಿಗಿದುಕೊಂಡ ಎಂಬ ಹಲವು ಅನುಮಾನಗಳು ಪೊಲೀಸರನ್ನು ಕಾಡತೊಡಗಿವೆ.

    ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡ ರಾಜಗೋಪಾಲನಗರ ಪೊಲೀಸರು ಈ ಎಲ್ಲಾ ಅಯಾಮಗಳಿಂದ ತನಿಖೆ ನಡೆಸಿದ್ದಾರೆ.

  • ಅನೈತಿಕ ಸಂಬಂಧ ಶಂಕೆ: ಆಟೋ ಚಾಲಕನ ಬರ್ಬರ ಕೊಲೆ!

    ಅನೈತಿಕ ಸಂಬಂಧ ಶಂಕೆ: ಆಟೋ ಚಾಲಕನ ಬರ್ಬರ ಕೊಲೆ!

    ಬಳ್ಳಾರಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ಇಂದು ನಡೆದಿದೆ.

    ಬಸವನಕುಂಟೆ ನಿವಾಸಿ ಈಶ್ವರ್ (45) ಕೊಲೆಯಾದ ಆಟೋ ಚಾಲಕ. ನಗರದ ಕಂಟ್ಮೋನೆಂಟ್ ಪ್ರದೇಶದಲ್ಲಿ ಈಶ್ವರ್ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಈಶ್ವರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ವೇಳೆ ಈಶ್ವರ್ ಜೊತೆಗಿದ್ದ ದಾದು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದಿದ್ದಾರೆ.

    ಈಶ್ವರ್‌ಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಸುಮಾರು 20 ವರ್ಷಗಳಿಂದ ಆಟೋ ಚಾಲನೆ ಮಾಡುತ್ತ ಜೀವನ ಸಾಗಿಸುತ್ತಿದ್ದ. ಆದರೆ ತಮ್ಮ ಬಡಾವಣೆ ಸಮೀಪದ ದೇವಿನಗರದ ನಿವಾಸಿ ಹಸೀನಾ ಎಂಬ ಮಹಿಳೆಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ. ಆಕೆಯ ಜೊತೆಗೆ ಸಂಬಂಧ ಬಿಡುವಂತೆ ಈ ಹಿಂದೆ ಹಲವು ಬಾರಿ ಗಲಾಟೆಯಾಗಿ, ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಈಶ್ವರ್ ಹಾಗೂ ಹಸೀನಾ ಸಂಬಂಧ ಮುಂದುವರಿದಿತ್ತು. ಇದೇ ಕಾರಣಕ್ಕೆ ಹಸೀನಾ ಸಂಬಂಧಿಕರು ಈಶ್ವರ್‍ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಈಶ್ವರ್ ಸಂಬಂಧಿ, ಕಂಟ್ಮೋನೆಂಟ್ ಪ್ರದೇಶದಲ್ಲಿ ಈಶ್ವರ್ ಹಾಗೂ ಓರ್ವ ಮಹಿಳೆ ಆಟೋದಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಕೆಲ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದರು. ಲಾಂಗು, ಮಚ್ಚಿನಿಂದ ಕೊಲೆ ಮಾಡಿದ್ದಾರೆ ಅಂತ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಬಂದಿರುವ ದಾದು ಹೇಳಿದ್ದಾರೆ. ಆಟೋದಲ್ಲಿದ್ದ ಮಹಿಳೆ ಕೂಡ ಕೊಲೆಯಲ್ಲಿ ಭಾಗಿಯಾಗಿದ್ದಾಳೆ ಎಂದು ಆರೋಪಿಸಿದ್ದಾರೆ.

    ಈಶ್ವರ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಹಸೀನಾ ಪರಾರಿಯಾಗಿದ್ದಾಳೆ. ಇದರಿಂದಾಗಿ ಆಕೆಯೇ ಕೊಲೆ ಮಾಡಿದ್ದಾಳೆಯೇ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೌಲಬಜಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಂದ ಪಾರಾದ ದಾದು ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭಿಸಿರುವ ಪೊಲೀಸರು ಮಹಿಳೆ ಹಾಗೂ ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ.

  • ಮಕ್ಕಳನ್ನೇ ಕೊಂದ ತಾಯಿ ಪ್ರಕರಣಕ್ಕೆ ಟ್ವಿಸ್ಟ್

    ಮಕ್ಕಳನ್ನೇ ಕೊಂದ ತಾಯಿ ಪ್ರಕರಣಕ್ಕೆ ಟ್ವಿಸ್ಟ್

    ಹುಬ್ಬಳ್ಳಿ/ಧಾರವಾಡ: ಕೌಟುಂಬಿಕ ಕಲಹಕ್ಕೆ ಬೇಸತ್ತು ಹೆತ್ತ ಮಕ್ಕಳನ್ನೆ ತಾಯಿಯೊಬ್ಬಳು ವೇಲ್ ನಿಂದ ಬಿಗಿದು ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಿಯಕರನ ಜೊತೆ ಸೇರಿ ಈ ಕೃತ್ಯವೆಸಗಿದ್ದಾಳೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

    ಹುಬ್ಬಳ್ಳಿಯ ಆಯೋಧ್ಯನಗರದಲ್ಲಿ ಈ ಘಟನೆ ನಡೆದಿತ್ತು. ಪ್ರೇಮಾ ಪರುಶುರಾಮ ಹುಲಕೋಟಿ ಎಂಬವಳು ರೋಹಿತ್ (6) ಮತ್ತು ರೋಹಿಣಿ (4) ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಳು. ಬಳಿಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಅನೈತಿಕ ಸಂಬಂಧಕ್ಕೆ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಆರೋಪಿ ತಾಯಿ ಪ್ರೇಮಾ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಗಂಡ ಕೆಲಸಕ್ಕೆ ಹೋದಾಗ ಪರ ಪುರುಷ ಮನೆಗೆ ಬಂದು ಹೋಗುತ್ತಿದ್ದನು. ಆಗ ಅವರಿಬ್ಬರ ಅನೈತಿಕ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗುತ್ತಿದ್ದರು. ಆದ್ದರಿಂದ ಪ್ರಿಯಕರನ ಜೊತೆ ಸೇರಿ ಮಕ್ಕಳನ್ನೇ ಕೊಲೆ ಮಾಡಿದ್ದಾಳೆ ಎಂದು ನೆರೆಹೊರೆಯವರು ಹೇಳಿದ್ದಾರೆ. ಅಷ್ಟೇ ಅಲ್ಲದೇ ಒಂದು ಮಗುವಿನ ಮೈ ಮೇಲೆ ಬೂಟಿನ ಗುರುತು ಪತ್ತೆಯಾಗಿದ್ದು, ಬಾಯಲ್ಲಿ ರಕ್ತ ಬಂದಿದೆ. ಆದ್ದರಿಂದ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ಪ್ರೇಮಾ ಮತ್ತು ಪರುಶುರಾಮ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ ರೋಹಿತ್ ಮತ್ತು ರೋಹಿಣಿ ಇಬ್ಬರು ಮಕ್ಕಳಿದ್ದು, ಸಂಸಾರಿಕ ಜೀವನ ಚೆನ್ನಾಗಿ ನಡೆದುಕೊಂಡು ಹೋಗುತ್ತಿತ್ತು. ಪತಿ ಪರುಶರಾಮ್ ಗಾರೆ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕುಡಿತದ ಚಟಕ್ಕೆ ದಾಸನಾಗಿದ್ದನು. ಹೀಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಮಕ್ಕಳನ್ನು ಸಾಕಲು, ಮನೆಯ ನಿರ್ವಹಣೆ ಮಾಡಲು ಕೂಡ ಹಣ ಕೊಡುತ್ತಿರಲಿಲ್ಲ.

    ಈ ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಆರೋಪಿ ತಾಯಿ ಮತ್ತು ಪತಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆಗ ನಮ್ಮಿಬ್ಬರ ಸಂಸಾರದಲ್ಲಿ ಮಕ್ಕಳೇ ನಮಗೆ ಭಾರವಾಗಿದ್ದು, ಮಕ್ಕಳನ್ನು ಸಾಕಲು ಪತಿ ಹಣ ಕೊಡುತ್ತಿರಲಿಲ್ಲ. ಪತಿ ಕುಡಿತ ಚಟಕ್ಕೆ ದಾಸನಾಗಿದ್ದನು. ಆದ್ದರಿಂದ ಇಂದು ಬೆಳಗ್ಗೆ ಕತ್ತು ಹಿಸುಕಿ ಕೊಂದಿರುವುದಾಗಿ ತಾಯಿ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಳು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2ನೇ ಹೆಂಡತಿಯ ಕೊಲೆಗೈದು ರುಂಡದೊಂದಿಗೆ ಪೊಲೀಸರಿಗೆ ಶರಣಾದ ಪತಿ!

    2ನೇ ಹೆಂಡತಿಯ ಕೊಲೆಗೈದು ರುಂಡದೊಂದಿಗೆ ಪೊಲೀಸರಿಗೆ ಶರಣಾದ ಪತಿ!

    ಕೋಲಾರ: ಅಕ್ರಮ ಸಂಬಂಧ ಹಿನ್ನೆಲೆ ತನ್ನ ಎರಡನೇ ಹೆಂಡತಿಯ ತಲೆ ಕಡಿದು, ರುಂಡದೊಂದಿಗೆ ಪತಿ ಪೊಲೀಸರಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.

    ಬೆಂಗಳೂರಿನ ನೀಲಸಂದ್ರ ನಿವಾಸಿ ರೋಷಿಣಿ ಖಾನಂ ಕೊಲೆಯಾದ ಪತ್ನಿಯಾಗಿದ್ದಾಳೆ. ಸುಮಾರು 27 ವರ್ಷದ ಸದ್ದಾಂ ಹುಸೇನ್ ಅಲಿಯಾಸ್ ಅಜೀಜ್ ಪೊಲೀಸರಿಗೆ ಶರಣಾದ ಪತಿ. ಮೂಲತಃ ಶ್ರೀನಿವಾಸಪುರ ಪಟ್ಟಣದ ಗಫರ್ ಖಾನ್ ಮೊಹಲ್ಲಾದ ನಿವಾಸಿಯಾಗಿರುವ ಅಜೀಜ್ ತನ್ನ 2ನೇ ಹೆಂಡತಿಯ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

    ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಮುಗಿಸಬೇಕೆಂದು ಮೊದಲೇ ಸಂಚು ರೂಪಿಸಿದ್ದ ಅಜೀಜ್, ಗುರುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮುಲ್ಲಕ್ಕೆ ಹೆಂಡತಿಯನ್ನು ಬೈಕಿನಲ್ಲಿ ಕರೆದುಕೊಂಡು ಬಂದಿದ್ದಾನೆ. ಬಳಿಕ ಪತ್ನಿ ರೋಷಿಣಿ ಖಾನಂಗೆ ಪ್ರಜ್ಞೆ ತಪ್ಪಿಸಿ ಬರ್ಬರವಾಗಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.

    ನಂತರ ಹೆಂಡತಿಯ ತಲೆಯನ್ನು ತೆಗೆದುಕೊಂಡು ಬಂದು ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಅಲ್ಲದೆ ಠಾಣೆಯಲ್ಲೇ ಪತ್ನಿಯ ರುಂಡವನ್ನು ಹಿಡಿದು ಕೊಂಡು ಚಿನ್ನಾ, ರನ್ನಾ ಎನ್ನುತ್ತಾ ಮುದ್ದಾಡಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ್ದ ಕತ್ತಿ ಹಾಗೂ ಮಹಿಳೆಯ ರುಂಡವನ್ನು ವಶಪಡಿಸಿಕೊಂಡಿದ್ದಾರೆ.

    ಆರೋಪಿ ಅಜೀಜ್‍ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಪ್ರಕರಣವು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವ್ಯಾಪ್ತಿಯಲ್ಲಿ ಜರುಗಿದ್ದರಿಂದ ಪೊಲೀಸರು ಕೆಂಚಾರಲಹಳ್ಳಿ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೆಂಚಾರಲಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅನೈತಿಕ ಸಂಬಂಧಕ್ಕೆ ಅಡ್ಡಿ- ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ!

    ಅನೈತಿಕ ಸಂಬಂಧಕ್ಕೆ ಅಡ್ಡಿ- ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ!

    ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಯನ್ನು ಹತ್ಯೆ ಮಾಡಿದ್ದ ಹಂತಕಿ ಪತ್ನಿ ಹಾಗೂ ಪ್ರಿಯಕರನನ್ನು ತುಮಕೂರಿನ ಕೋರಾ ಪೊಲೀಸರು ಬಂಧಿಸಿದ್ದಾರೆ.

    ಸಂಗೀತಾ ಹಾಗೂ ಆಕೆಯ ಪ್ರಿಯಕರ ತಿಪ್ಪೆಸ್ವಾಮಿ ಬಂಧಿತ ಆರೋಪಿಗಳು. ಜೂನ್ 16ರಂದು ಸೋಮಸಾಗರ ಗೇಟ್ ಬಳಿ ಹೊಗೆಯಾಡುತ್ತಿದ್ದ ಶವವೊಂದು ಪತ್ತೆಯಾಗಿತ್ತು. ಅದು ಆರೋಪಿ ಸಂಗೀತಾ ಪತಿ ನಾಗಾನಂದನ ಶವವಾಗಿತ್ತು.

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಪತ್ನಿ ಸಂಗಿತಾ ಹಾಗೂ ಪ್ರಿಯಕರ ತಿಪ್ಪೆಸ್ವಾಮಿ ತಮ್ಮೂರು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ದಾರಿ ಮಧ್ಯೆ ಹತ್ಯೆ ಮಾಡಿದ್ದಾರೆ. ಮದ್ಯ ಕುಡಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿದ್ದಾರೆ. ಬಳಿಕ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ.

    ಈ ಕೊಲೆಯ ಜಾಡು ಹಿಡಿದು ಹೊರಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಬೆಂಗಳೂರುನ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

  • ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಪತಿಯಿಂದ ಲೈಂಗಿಕ ದೌರ್ಜನ್ಯ!

    ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಪತಿಯಿಂದ ಲೈಂಗಿಕ ದೌರ್ಜನ್ಯ!

    ಬೆಂಗಳೂರು: ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ದೇವ್‍ಕುಮಾರ್ ವಿರುದ್ಧ 28 ವರ್ಷದ ಪತ್ನಿ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ. ಮದುವೆಯಾದ ನಂತರವೂ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದು, ಈಗ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    2009 ರಲ್ಲಿ ದೇವ್‍ಕುಮಾರ್ ಜೊತೆ ನನ್ನ ಮದುವೆಯಾಗಿದ್ದು, ಮದುವೆ ಸಂದರ್ಭದಲ್ಲಿ ನನ್ನ ಮನೆಯವರು ಪತಿಗೆ 2,20,000 ರೂ. ನಗದು, 15 ಗ್ರಾಂ ಚಿನ್ನ, 12 ಗ್ರಾಂನ ಬ್ರೇಸ್‍ಲೈಟ್, 8 ಗ್ರಾಂ ಉಂಗುರ, 4 ಗ್ರಾಂ ಡಾಲರ್ ಕೊಟ್ಟಿದ್ದರು. ನನ್ನ ಗಂಡ ಗೊರಗುಂಟೆಪಾಳ್ಯದಲ್ಲಿ ಮೆಕಾನಿಕ್ ಕೆಲಸ ಮಾಡಿಕೊಂಡಿದ್ದರು. ಮದುವೆಯಾದಾಗಿನಿಂದ ನಾನು ಮತ್ತು ನನ್ನ ಪತಿ ನನ್ನ ತವರು ಮನೆಯಲ್ಲೇ ವಾಸಿಸುತ್ತೀದ್ದೇವೆ. ನನ್ನ ಗಂಡ ನಮ್ಮ ಮನೆಯ ಯಾವುದೇ ಖರ್ಚು ವೆಚ್ಚವನ್ನೂ ಕೊಡುತ್ತಿರಲಿಲ್ಲ. ಮನೆಯ ಬಾಡಿಗೆ ಸಹ ಕಟ್ಟುತ್ತಿರಲಿಲ್ಲ. ಎಲ್ಲವನ್ನು ನನ್ನ ತಾಯಿ ನೋಡಿಕೊಳ್ಳುತ್ತಿದ್ದರು. ಅತ ದುಡಿಯುತ್ತಿದ್ದ ಹಣವನ್ನು ಮನೆಗೆ ಕೊಡದೇ ಎಲ್ಲವನ್ನೂ ಬೇರೆ ಹೆಂಗಸರಿಗೆ ಖರ್ಚು ಮಾಡುತ್ತಿದ್ದ.

    ಹೀಗಿರುವಾಗ ನನ್ನ ವಿವಾಹವಾದ 4 ವರ್ಷಗಳ ನಂತರ ನನ್ನ ಪತಿ ಬೇರೆ ಹೆಂಗಸಿನ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದನು. ಇದಾದ ನಂತರ ನನಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ. ಫೆಬ್ರವರಿ 13ರಂದು ನಾನು ಮತ್ತು ನನ್ನ ತಾಯಿ ಅಜ್ಜಿಯ ಮನೆಗೆ ಹೋದ ಸಂದರ್ಭದಲ್ಲಿ ನನ್ನ ಗಂಡ ಮಹಿಳೆಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿ, ಆಕೆಯ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದ.

    ಈ ವಿಷಯ ನನಗೆ ತಿಳಿದು ಆತನಲ್ಲಿ ಪ್ರಶ್ನಿಸಿದ್ದಾಗ ನಾನು ಇರುವುದೇ ಹೀಗೆ, ನನ್ನ ಜೀವನದ ಶೈಲಿಯೇ ಹೀಗೆ. ನೀನು ನಿನ್ನ ತಾಯಿಗೆ ಹೇಳಿ ನನಗೆ 1 ಲಕ್ಷ ರೂ. ಹಾಗೂ ಚಿನ್ನಾಭರಣವನ್ನು ಕೊಡಿಸು ಇಲ್ಲವಾದ್ದಲ್ಲಿ ಆ ಮಹಿಳೆಯನ್ನು ನಾನು ಮದುವೆಯಾಗುತ್ತೇನೆ. ನಿನ್ನ ಹಾಗೂ ನಿನ್ನ ತಾಯಿಯನ್ನು ನಾನು ಮುಗಿಸಿಬೀಡುತ್ತೇನೆಂದು ಬೆದರಿಕೆ ಹಾಕಿದ್ದಾನೆ. ನನಗೆ ಅವಾಚ್ಯ ಶಬ್ಧಗಳಿಂದ ಬೈದು, ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿ, ಹೆಚ್ಚಿನ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ಪತ್ನಿಯ ಲವ್ವರ್ ಅಂದ್ಕೊಂಡು 14ರ ಮಗನ ಮೇಲೆಯೇ ಕೊಡಲಿಯಿಂದ ಹಲ್ಲೆಗೈದ ಅಪ್ಪ!

    ಪತ್ನಿಯ ಲವ್ವರ್ ಅಂದ್ಕೊಂಡು 14ರ ಮಗನ ಮೇಲೆಯೇ ಕೊಡಲಿಯಿಂದ ಹಲ್ಲೆಗೈದ ಅಪ್ಪ!

    ಹೈದರಾಬಾದ್: ಪತ್ನಿಯ ಪ್ರಿಯಕರ ಅಂದುಕೊಂಡು ಅಪ್ಪನೇ 14 ವರ್ಷದ ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    14ರ ಹರೆಯದ ಪರಶುರಾಮ ತಂದೆಯಿಂದಲೇ ಹಲ್ಲೆಗೊಳಗಾದ ಹುಡುಗ. ಈ ಘಟನೆ ಬೆಥಾಮೆರ್ಲಾ ಮಂಡಲ್ ಗುತುಪಲ್ಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದ್ದು, ತಂದೆ ಸೋಮಣ್ಣ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಅಂದುಕೊಂಡು ಹಲ್ಲೆ ಮಾಡಿದ್ದಾನೆ.

    ನಡೆದಿದ್ದೇನು?
    ಸೋಮಣ್ಣ ಮತ್ತು ರಮಲಕ್ಷ್ಮೀ ಇಬ್ಬರು ಗ್ರಾಮದಲ್ಲಿ ಕೃಷಿ ಕಾರ್ಮಿಕರಾಗಿದ್ದರು. ಈ ದಂಪತಿಗೆ ನಾಲ್ಕು ಮಕ್ಕಳಿದ್ದು, ಸೋಮಣ್ಣನಿಗೆ ತನ್ನ ಪತ್ನಿ ಅದೇ ಗ್ರಾಮದ ಬೇರೊಬ್ಬ ವ್ಯಕ್ತಿಯ ಜೊತೆ ಅನೈತಿಕ ಸಂಬಂಧ ಇದೆ ಎಂಬ ಅನುಮಾನವಿತ್ತು. ಈ ವಿಚಾರವಾಗಿ ಆಗಾಗ ಇಬ್ಬರ ಮಧ್ಯೆ ಜಗಳ ಕೂಡ ನಡೆಯುತ್ತಿತ್ತು. ಶುಕ್ರವಾರ ಸೋಮಣ್ಣ ಕುಡಿದು ಮನೆಗೆ ರಾತ್ರಿ ಬಂದಿದ್ದಾನೆ. ಆಗ ಪತ್ನಿ ಲಕ್ಷ್ಮಿ ತನ್ನ ಮಗ ಪರುಶರಾಮನ ಜೊತೆ ಮಲಗಿದ್ದರು. ಆದರೆ ಸೋಮಣ್ಣ ತನ್ನ ಮಗನನ್ನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಬೇರೊಬ್ಬ ವ್ಯಕ್ತಿ ಎಂದು ತಿಳಿದು ಕೋಪಗೊಂಡು ಅಲ್ಲೇ ಪಕ್ಕದಲ್ಲಿದ್ದ ಕೊಡಲಿಯಿಂದ ಮಲಗಿದ್ದ ಮಗನ ಕೈ ಮತ್ತು ಭುಜಗಳಿಗೆ ಹೊಡೆದಿದ್ದಾನೆ.

    ಪರಶುರಾಮ ಅಪ್ಪ ಹಲ್ಲೆ ಮಾಡಿದ ಬಳಿಕ ಕೂಗಿಕೊಂಡು ಹಾಸಿಗೆಯಿಂದ ಕೆಳಗೆ ಬಿದ್ದಿದ್ದಾನೆ. ನಂತರ ಹಲ್ಲೆ ಮಾಡಿದ್ದು ಮಗನಿಗೆ ಎಂದು ತಿಳಿದು ಕಣ್ಣೀರಿಟ್ಟು ನೆರೆಹೊರೆಯವರ ಸಹಾಯ ಪಡೆದು ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಕೊಡಲಿಯಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಪೆಟ್ಟಾಗಿದ್ದು, ವೈದ್ಯರು ತೀವ್ರ ಗಾಯಗಳಾಗಿದೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಬಳಿಕ ಕಾರ್ನೂಲ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಹುಡುಗನ ಸ್ಥಿತಿ ತೀರ ಗಂಭೀರವಾಗಿದೆ ಎಂದು ಹೇಳಿದ್ದಾರೆ.

    ಈ ಘಟನೆ ಸಂಬಂಧ ಪೊಲೀಸರು ಆರೋಪಿ ಸೋಮಣ್ಣ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ಎಚ್‍ಎಎಲ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಅಂಥೋಣಿ ಆತ್ಮಹತ್ಯೆ ಮಾಡಿಕೊಂಡ ಪತಿ.

    ಪತ್ನಿ ಪ್ರಭಾ ಅನೈತಿಕ ಸಂಬಂಧ ಹೊಂದಿದ್ದಳು. ಪತಿ ಅಂಥೋಣಿ ಕೆಲಸಕ್ಕೆಂದು ಹೊರಗಡೆ ಹೋದಾಗ ಪಕ್ಕದ ಮನೆಯವನ ಜೊತೆ ಸಂಬಂಧ ಬೆಳೆಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾನೆ.

    ಒಂದು ದಿನ ಇದ್ದಕ್ಕಿದ್ದಂತೆ ಗಂಡ ಮನೆಗೆ ಬಂದಾಗ ರೆಡ್ ಹ್ಯಾಂಡ್ ಆಗಿ ಪ್ರಭಾ ಸಿಕ್ಕಿಬಿದ್ದಿದ್ದಳು. ಹೀಗೆ ಸಿಕ್ಕಿಬಿದ್ದ ಬಳಿಕ ಪತಿ ಅಂಥೋಣಿ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತ್ರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅನೈತಿಕ ಸಂಬಂಧಕ್ಕೆ ಕೊಲೆ: ಅಂಬಾಜಿ ದುರ್ಗ ಬೆಟ್ಟದಲ್ಲಿ ಪತ್ತೆಯಾದ ಶವದ ಡಿಎನ್‍ಎ ಪರೀಕ್ಷೆಗೆ ಮುಂದಾದ ಪೊಲೀಸ್ರು!

    ಅನೈತಿಕ ಸಂಬಂಧಕ್ಕೆ ಕೊಲೆ: ಅಂಬಾಜಿ ದುರ್ಗ ಬೆಟ್ಟದಲ್ಲಿ ಪತ್ತೆಯಾದ ಶವದ ಡಿಎನ್‍ಎ ಪರೀಕ್ಷೆಗೆ ಮುಂದಾದ ಪೊಲೀಸ್ರು!

    ಚಿಕ್ಕಬಳ್ಳಾಪುರ: ಪತ್ನಿ, ಪ್ರಿಯಕರ ಮತ್ತು ಪ್ರಿಯಕರನ ತಾಯಿಯನ್ನು ಪತಿಯೇ ಹತ್ಯೆ ಮಾಡಿದ್ದಾನೆ ಎನ್ನುವ ಸಂಶಯಾಸ್ಪದ ಪ್ರಕರಣದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಈ ಶವ ನಾಪತ್ತೆಯಾಗಿರುವ ಶ್ರೀನಾಥ್‍ ನದ್ದಾ ಎನ್ನುವ ಪ್ರಶ್ನೆ ಎದ್ದಿದೆ.

    ಹೌದು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಉಪ್ಪಾರಪೇಟೆ ಬಳಿಯ ಅಂಬಾಜಿ ದುರ್ಗ ಬೆಟ್ಟದಲ್ಲಿ ಜುಲೈ 26 ರಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಅಪರಿಚಿತ ವ್ಯಕ್ತಿಯನ್ನ ಕೊಲೆ ಮಾಡಿ ಗೋಣಿ ಚೀಲದಲ್ಲಿ ಹಾಕಿ ಅಂಬಾಜಿದುರ್ಗ ಬೆಟ್ಟದಲ್ಲಿ ಎಸೆಯಲಾಗಿತ್ತು. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದೀಗ ಹತ್ಯಾ ಪ್ರಕರಣ ಬಯಲಾದ ಬೆನ್ನಲ್ಲೇ, ಸಿಕ್ಕಿರುವ ಅಪರಿಚಿತ ಶವ ಈ ಪ್ರಕರಣದಲ್ಲಿ ನಾಪತ್ತೆಯಾಗಿರುವ ಶ್ರೀನಾಥ್ ನದ್ದೇನಾ ಅನ್ನೋ ಅನುಮಾನಗಳು ದಟ್ಟವಾಗಿ ಮೂಡಿವೆ. ಕಾರಣ ಜುಲೈ 17 ರಂದು ಶ್ರೀನಾಥ್ ತಾಯಿ ತೀರಿಕೊಂಡ 3 ದಿನ ಅಂದರೆ ಜುಲೈ 20 ರಂದು, ಮೂರು ದಿನದ ಹಾಲೆರೆಯುವ ಕಾರ್ಯ ಮುಗಿಸಿಕೊಂಡು ಹೋಗಿದ್ದ ಶ್ರೀನಾಥ್ ಅಂದಿನಿಂದ ನಾಪತ್ತೆಯಾಗಿದ್ದ.

    ಇದನ್ನೂ ಓದಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮೂವರನ್ನ ಕೊಂದನಾ ಪತಿ? – ಪೊಲೀಸರಿಗೆ ಇನ್ನೂ ಸಿಕ್ತಿಲ್ಲ ಸ್ಪಷ್ಟ ಮಾಹಿತಿ

    ಇನ್ನೂ ಜುಲೈ 26 ರಂದು ಪತ್ತೆಯಾದ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿ, ಕೊಲೆಯಾಗಿ 5-6 ದಿನಗಳು ಆಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿತ್ತು. ಈಗ ಈ ಹತ್ಯೆ ಪ್ರಕರಣದ ಬಯಲಾದ ಬೆನ್ನಲ್ಲೇ, ದಿನಾಂಕಗಳ ನಡುವಿನ ಅಂತರ ಹೋಲಿಕೆ ಆಗುತ್ತಿರುವ ಕಾರಣ ಪೊಲೀಸರಿಗೆ ಕೂಡ ಈ ಬಗ್ಗೆ ಅನುಮಾನ ಮೂಡಿದ್ದು, ಈ ಬಗ್ಗೆ ಮೃತದೇಹದ ಡಿಎನ್‍ಎ ಪರೀಕ್ಷೆಗೆ ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕಾಡುಗೋಡಿ ಪೊಲೀಸರು ಈ ದಿಕ್ಕಿನಲ್ಲೂ ಪ್ರಕರಣದ ತನಿಖೆಯನ್ನ ಚುರುಕುಗೊಳಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಪತಿ ವೆಂಕಟರೆಡ್ಡಿ ಎಂಬಾತ ತನ್ನ ಪತ್ನಿ ಪ್ರೇಮಾ ಶ್ರೀನಾಥ್ ಜೊತೆ ಪರಾರಿಯಾಗಿದ್ದಕ್ಕೆ ಪತ್ನಿ ಪ್ರೇಮಾ, ಪ್ರಿಯಕರ ಶ್ರೀನಾಥ್ ಹಾಗೂ ಆತನ ತಾಯಿ ಭಾಗ್ಯಮ್ಮಳಿಗೆ ಕಿರುಕುಳ ಕೊಟ್ಟು ಹತ್ಯೆ ಮಾಡಿದ್ದಾನೆ ಎಂಬ ಆರೋಪಕ್ಕೆ ಗುರಿಯಾಗಿದ್ದಾನೆ. ಈ ಸಂಬಂಧ ಆರೋಪಿ ವೆಂಕಟರೆಡ್ಡಿಯನ್ನು ಕಾಡುಗೋಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮೂವರನ್ನ ಕೊಂದನಾ ಪತಿ? – ಪೊಲೀಸರಿಗೆ ಇನ್ನೂ ಸಿಕ್ತಿಲ್ಲ ಸ್ಪಷ್ಟ ಮಾಹಿತಿ

    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮೂವರನ್ನ ಕೊಂದನಾ ಪತಿ? – ಪೊಲೀಸರಿಗೆ ಇನ್ನೂ ಸಿಕ್ತಿಲ್ಲ ಸ್ಪಷ್ಟ ಮಾಹಿತಿ

    ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಮರ್ಯಾದಾ ಹತ್ಯೆ ನಡೆದಿದೆಯಾ? ಪತಿಯೇ ತನ್ನ ಹೆಂಡತಿ ಸೇರಿದಂತೆ ಮೂವರನ್ನ ಕೊಲೆ ಮಾಡಿರಬಹುದೆಂಬ ಅನುಮಾನ ಪೊಲೀಸರಿಗೆ ಮೂಡಿದೆ.

    ಘಟನೆಗೆ ಸಂಬಂದಿಸಿದಂತೆ ಪೊಲೀಸರು ಚಿಂತಾಮಣಿ ಮೂಲದವನಾದ ವೆಂಕಟರೆಡ್ಡಿ ಎಂಬಾತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಏನಿದು ಘಟನೆ?: ಚಿಂತಾಮಣಿ ಮೂಲದ ವೆಂಕಟರೆಡ್ಡಿ ಹಾಗೂ ಪತ್ನಿ ಪ್ರೇಮಾ ಕಾಡುಗೋಡಿಯಲ್ಲಿ ವಾಸವಾಗಿದ್ದನು. ಆದರೆ ಶ್ರೀನಾಥ್ ಎಂಬ ಯುವಕ ಹಾಗೂ ವೆಂಕಟರೆಡ್ಡಿ ಪತ್ನಿ ಪ್ರೇಮಾ ನಡುವೆ ವಿವಾಹ ಪೂರ್ವ ಪ್ರೇಮವಿತ್ತು. ಈ ವಿಚಾರ ತಿಳಿದು ಪತಿ ಎಚ್ಚರಿಕೆ ನೀಡಿದ್ದರೂ ಶ್ರೀನಾಥ್ ಜೊತೆ ಪ್ರೇಮಾ ಪರಾರಿಯಾಗಿದ್ದಳು ಎನ್ನಲಾಗಿದೆ.

    ವೆಂಕಟರೆಡ್ಡಿ ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಈ ಮಧ್ಯೆ ವೆಂಕಟರೆಡ್ಡಿ ಶ್ರೀನಾಥ್‍ನ ತವರೂರು ಚಿಂತಾಮಣಿ ಬಳಿ ರಾಯಪ್ಪಳ್ಳಿಯ ಮನೆಗೆ ಹೋಗಿ ತಾಯಿ ಭಾಗ್ಯಮ್ಮಗೆ ವಿಷ ಕುಡಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪವಿದೆ. ಆದ್ರೆ ಚಿಂತಾಮಣಿ ಪೊಲೀಸರು ಆತ್ಮಹತ್ಯೆ ಎಂದು ದೂರು ದಾಖಲಿಸಿಕೊಂಡು ಪ್ರಕರಣ ಕ್ಲೋಸ್ ಮಾಡಿದ್ದಾರೆ ಎನ್ನಲಾಗಿದೆ.

    ತಾಯಿಯ ಸಾವಿನ ವಿಷಯ ತಿಳಿದು ಶ್ರೀನಾಥ್ ಮತ್ತು ಪ್ರೇಮಾ ವಾಪಸ್ ಮತ್ತೆ ಊರಿಗೆ ಬಂದಿದ್ದರು. ನಂತರ ಪೊಲೀಸ್ ಠಾಣೆಯಲ್ಲಿ ವೆಂಕಟರೆಡ್ಡಿ ತನ್ನ ಪತ್ನಿಗೆ ಬುದ್ಧಿವಾದ ಹೇಳಿ ಅವಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿದ್ದನು. ಅಂತೆಯೇ ಪತ್ನಿ ಪ್ರೇಮಾ ಜು. 17 ರಂದು ವೆಂಕಟರೆಡ್ಡಿ ಜೊತೆ ತೆರಳಿದ್ದಳು. ಇದಾದ ಮೂರು ದಿನದ ಬಳಿಕ ಪ್ರೇಮಾ ಸಾವನ್ನಪ್ಪಿದ್ದಳು. ಇತ್ತ ಪ್ರೇಮಾ ಸಾವಿನ ಬಳಿಕ ಶ್ರೀನಾಥ್ ಕೂಡ ಕಣ್ಮರೆಯಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

    ಶ್ರೀನಾಥ್ ಕಾಣೆಯಾದ ಬಗ್ಗೆ ವಿಚಾರಿಸಲು ವೆಂಕಟರೆಡ್ಡಿಯನ್ನು ಠಾಣೆಗೆ ಕರೆಸಿದಾಗ ಪ್ರೇಮಾ ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ಅನುಮಾನ ಮೂಡಿಸಿದೆ. ಮಣ್ಣು ಮಾಡುವ ಪದ್ಧತಿ ಇದ್ದರೂ ವೆಂಕಟರೆಡ್ಡಿ ಪ್ರೇಮಾಳನ್ನು ಸುಟ್ಟು ಹಾಕಿದ್ದು, ಹತ್ಯೆ ಮಾಡಿರಬಹುದು. ಪೊಲೀಸರಿಗೆ ಸಾಕ್ಷಿ ಸಿಗಬಾರದೆಂಬ ಕಾರಣಕ್ಕೆ ಪ್ರೇಮಾಳನ್ನು ಸುಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

    ವೆಂಕಟರೆಡ್ಡಿ ಮರ್ಯಾದೆಗಾಗಿ ಪ್ರೇಮಾಳನ್ನು ಒಂದೆಡೆ ಹತ್ಯೆ ಮಾಡಿ ಸುಟ್ಟು ಹಾಕಿದ್ದಾನೆ ಎಂಬ ಅನುಮಾನವೂ ಮೂಡಿದೆ. ಶ್ರೀನಾಥ್ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ವಿಷಯ ತಿಳಿದ ಮೇಲೆ ವೆಂಕಟರೆಡ್ಡಿಯನ್ನು ಕರೆದು ಅವನ ಪತ್ನಿ ಪ್ರೇಮಾ ಬಗ್ಗೆ ವಿಚಾರಿಸಿದ್ದಾರೆ. ಆಗ ಅವನು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುಳ್ಳು ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ವೆಂಕಟರೆಡ್ಡಿಯ ಮೇಲೆ ಪೊಲೀಸರಿಗೆ ಅನುಮಾನ ಬಂದು ಅವನನ್ನು ವಶಕ್ಕೆ ಪಡೆದು ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

    ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದು, ಇನ್ನು ತನಿಖೆ ವೇಳೆ ಈ ಪ್ರಕರಣದಲ್ಲಿ ಏನೆಲ್ಲಾ ತಿರುವು ಪಡೆದುಕೊಳ್ಳುತ್ತೋ ಕಾದು ನೋಡಬೇಕಿದೆ. ಇಷ್ಟೆಲ್ಲಾ ಘಟನೆ ನಡೆದ ಬಳಿಕವೂ ಶ್ರೀನಾಥ್ ಎಲ್ಲಿದ್ದಾನೆ ಎಂಬ ಬಗ್ಗೆ ಪೊಲೀಸರಿಗೆ ಇದೂವರೆಗೆ ಯಾವುದೇ ಮಾಹಿತಿ ಇಲ್ಲ. ಈತ ಇನ್ನೂ ಬದುಕಿದ್ದಾನಾ ಅಥವಾ ವೆಂಕಟರೆಡ್ಡಿ ಈತನಿಗೆ ಏನಾದ್ರೂ ಮಾಡಿದ್ದಾನಾ ಎಂಬ ಹಾದಿಯಲ್ಲೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.