Tag: Illegal alcohol

  • ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ ಎಸ್‍ಪಿ – ಕೇವಲ 6 ತಿಂಗ್ಳಲ್ಲಿ ಸಾವಿರ ರೇಡ್

    ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ ಎಸ್‍ಪಿ – ಕೇವಲ 6 ತಿಂಗ್ಳಲ್ಲಿ ಸಾವಿರ ರೇಡ್

    -ಎಸ್‍ಪಿಗೆ ಅಬಕಾರಿ ಅಧಿಕಾರಿಗಳು ಒತ್ತಡ
    -ಕ್ಯಾರೇ ಎನ್ನದ ಎಸ್‍ಪಿಗೆ ಜನರಿಂದ ಮೆಚ್ಚುಗೆ

    ಚಿಕ್ಕಬಳ್ಳಾಪುರ: ಜಿಲ್ಲೆಗೆ ಬಂದ ನೂತನ ಅಧಿಕಾರಿಯೊಬ್ಬರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದು, ಕೇವಲ 6 ತಿಂಗಳಲ್ಲೇ ಮಾರಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

    ಜಿಲ್ಲೆಯಲ್ಲಿ ಒಂದು ಕಡೆ ಮಳೆಯಿಲ್ಲ, ಮತ್ತೊಂದೆಡೆ ಮಳೆಯಿಲ್ಲದೆ ಬೆಳೆಯೂ ಇಲ್ಲ. ಇತ್ತ ಸರ್ಕಾರ ಕುಡಿಯೋಕೆ ನೀರು ಕೊಡದಿದ್ದರೂ ಆ ಜಿಲ್ಲೆಗೆ ಸಾಕು ಎನ್ನುವಷ್ಟು ಮದ್ಯ ಸರಬರಾಜಾಗುತ್ತಿದೆ. ಹೀಗಾಗಿ ಪ್ರತಿ ಹಳ್ಳಿಯಲ್ಲಿರುವ ಚಿಲ್ಲರೆ ಅಂಗಡಿಗಳು ಮದ್ಯ ಮಾರಾಟ ಅಂಗಡಿಗಳಾಗಿ ಮಾರ್ಪಾಡಾಗಿದ್ದವು. ಇದರಿಂದ ಗ್ರಾಮೀಣ ಭಾಗದ ಬಹಳಷ್ಟು ಮಂದಿ ಹಳ್ಳಿಗಳಲ್ಲಿನ ಚಿಲ್ಲರೆ ಅಂಗಡಿಗಳಲ್ಲೇ ಸಿಗುತ್ತಿದ್ದ ಮದ್ಯದ ಚಟಕ್ಕೆ ದಾಸರಾಗಿ ಬದುಕು ಹಾಳು ಮಾಡಿಕೊಂಡಿದ್ದರು.

    ಈ ಬಗ್ಗೆ ಜಿಲ್ಲೆಗೆ ಬಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅವರಿಗೆ ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಕರೆ ಮಾಡಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿಸುವಂತೆ ಮನವಿ ಮಾಡಿಕೊಂಡಿದ್ದರು. ಇದರಿಂದ ಎಚ್ಚೆತ್ತ ಎಸ್‍ಪಿ ಸಂತೋಷ್ ಬಾಬು, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ಹಗಲು ರಾತ್ರಿ ಎನ್ನದೆ ಅಕ್ರಮ ಮದ್ಯ ಮಾರಾಟ ಹಾಗೂ ಸರಬರಾಜು ಕಂಡು ಬಂದರೆ ಸಾಕು ನಿರ್ಧಾಕ್ಷಿಣ್ಯವಾಗಿ ಕ್ರಮಕೈಗೊಂಡು ಕೇಸ್ ಮಾಡುವಂತೆ ತಾಕೀತು ಮಾಡಿದರು. ಹೀಗಾಗಿ ಕೇವಲ 6 ತಿಂಗಳಲ್ಲಿ 1000ಕ್ಕೂ ಹೆಚ್ಚು ಅಕ್ರಮ ಮದ್ಯ ಮಾರಾಟದ ಕೇಸ್ ದಾಖಲಾಗಿದ್ದು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದಂತಾಗಿದೆ.

    ಜಿಲ್ಲೆಯ ಆರು ತಾಲೂಕುಗಳು, ಗಡಿಭಾಗದ ಹಳ್ಳಿಗಳಲ್ಲಂತೂ ಅಕ್ರಮ ಮದ್ಯ ಮಾರಾಟ ಬಲು ಜೋರಾಗಿಯೇ ಇತ್ತು. ಅದರಲ್ಲೂ ಅನುಮತಿ ಪಡೆದಿರುವ ಬಾರ್ ಮಾಲೀಕರೇ ಸ್ವತಃ ಅಬಕಾರಿ ಅಧಿಕಾರಿಗಳ ಕೊಡುವ ಟಾರ್ಗೆಟ್ ರೀಚ್ ಮಾಡೋಕೆ ಹಳ್ಳಿ ಹಳ್ಳಿಗಳಿಗೆ ಮದ್ಯ ಸರಬರಾಜು ಮಾಡುತ್ತಿದ್ದರು. ಆದರೆ ಈಗ ಅದೆಲ್ಲಕ್ಕೂ ಕಡಿವಾಣ ಬಿದ್ದಿದ್ದು ಎಸ್‍ಪಿ ಸಂತೋಷ್ ಬಾಬು ಕಾರ್ಯಕ್ಕೆ ಸಾರ್ವಜನಿಕರೇ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಪೊಲೀಸರು ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟಕ್ಕೆ ಬ್ರೇಕ್ ಹಾಕಿದ್ದೇ ತಡ ಅಬಕಾರಿ ಇಲಾಖಾಧಿಕಾರಿಗಳು ಸರ್ ಟಾರ್ಗೆಟ್ ರೀಚ್ ಮಾಡೋಕೆ ಕಷ್ಟ ಆಗುತ್ತದೆ. ಕುಡಿಯೋರು ಕುಡಿಯಲಿ ಬಿಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಆದರೆ ಅಬಕಾರಿ ಅಧಿಕಾರಿಗಳು ಏನೇ ಹೇಳಿದರೂ ಕೇಳದ ಎಸ್‍ಪಿ ಮಾತ್ರ ಪ್ರತಿ ದಿನ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು, ಪ್ರತಿದಿನ ಹತ್ತಾರು ಕೇಸ್ ದಾಖಲಾಗುತ್ತಿವೆ.

  • ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ

    ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ

    ರಾಯಚೂರು: ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.

    ಶಿವರಾಜ್ ಎಂಬವರ ಹೋಟೆಲ್‍ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ರಾಯಚೂರಿನ ಲಿಂಗಸುಗೂರಿನ ಮುದಗಲ್‍ನ ಹೋಟೆಲ್ ಮೇಲೆ ದಾಳಿ ನಡೆಸಿ ಅಕ್ರಮ ಮದ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    7,800 ಲೀಟರ್ ಬಿಯರ್ ಹಾಗೂ 163 ಲೀಟರ್ ಲಿಕ್ಕರ್ ಸೇರಿದಂತೆ ಲಕ್ಷಾಂತರ ರೂ. ಅಕ್ರಮವಾಗಿ ಸಂಗ್ರಹಿಸಿಟ್ಟ ಮದ್ಯವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದುಕೊಂಡಿದೆ.

    ಲಿಂಗಸುಗೂರು ಅಬಕಾರಿ ನಿರೀಕ್ಷರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಆರೋಪಿ ಶಿವರಾಜ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿ ಮಂಜುನಾಥ್ ಹಾಗೂ ಶಿವಾನಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

  • ಅಕ್ರಮ ಮದ್ಯ ಮಾರಾಟದ ಆರೋಪ – ಅಬಕಾರಿ ಇಲಾಖೆಯ ವಾಹನದಲ್ಲೇ ವ್ಯಕ್ತಿ ಸಾವು

    ಅಕ್ರಮ ಮದ್ಯ ಮಾರಾಟದ ಆರೋಪ – ಅಬಕಾರಿ ಇಲಾಖೆಯ ವಾಹನದಲ್ಲೇ ವ್ಯಕ್ತಿ ಸಾವು

    ಬಳ್ಳಾರಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎನ್ನುವ ಆರೋಪದ ಅಂಗಡಿ ಮೇಲೆ ಅಬಕಾರಿ ಇಲಾಖೆಯ ದಾಳಿ ಮಾಡಿದ್ದು, ಬಳಿಕ ವ್ಯಕ್ತಿಯನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿರುವ ಘಟನೆ ಬಳ್ಳಾರಿ ತಾಲೂಕಿನಲ್ಲಿ ನಡೆದಿದೆ.

    ತಿಪುನಾಯ್ಕ್, ಹಲಕುಂದಿ ಗ್ರಾಮದ ಪುಟ್ಟ ಅಂಗಡಿಯೊಂದನ್ನಿಟ್ಟು ಜೀವನ ಸಾಗಿಸುತ್ತಿದ್ದರು. ತನ್ನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಇವರ ಮೇಲೆ ಕೇಳಿ ಬಂದಿತ್ತು. ಆದ್ದರಿಂದ ತಿಪುನಾಯ್ಕ್ ನ ಅಂಗಡಿ ಮೇಲೆ ಬಳ್ಳಾರಿ ಅಬಕಾರಿ ಇಲಾಖೆಯ ಪೊಲೀಸರು ದಾಳಿ ಮಾಡಿ ಅಂಗಡಿಯಲ್ಲಿದ್ದ ತಿಪುನಾಯ್ಕ್ ನ ಕೊರಳ ಪಟ್ಟಿ ಹಿಡಿದು ಅಮಾನವೀಯವಾಗಿ ಎಳೆದು ತಮ್ಮ ವಾಹನದಲ್ಲಿ ಕೂರಿಸಿಕೊಂಡಿದ್ದಾರೆ.

    ಅಬಕಾರಿ ಇಲಾಖೆಯ ವಾಹನ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ತಿಪುನಾಯ್ಕ್ ಕೊನೆಯುಸಿರೆಳೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ತಿಪುನಾಯ್ಕ್ ನ ಅಂಗಡಿ ಮೇಲೆ ದಾಳಿ ಮಾಡಿ ತಿಪುನಾಯ್ಕ್ ನಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.

    ತಿಪುನಾಯ್ಕ್ ಮೂಲತಃ ಬಳ್ಳಾರಿ ತಾಲೂಕಿನ ಹೊನ್ನಳ್ಳಿ ತಾಂಡದವರು. ಇವರಿಗೆ ನಾಲ್ಕು ಜನ ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನಿದ್ದಾನೆ. ಜೀವನಕ್ಕೆಂದು ಊರು ತೊರೆದು ಹಲಕುಂದಿ ಗ್ರಾಮಕ್ಕೆ ಬಂದು ಸೇರಿದ್ದು, ಜೀವನೋಪಾಯಕ್ಕೆ ಪುಟ್ಟ ಅಂಗಡಿಯನ್ನಿಟ್ಟು ಜೀವನ ಸಾಗಿಸುತ್ತಿದ್ದರು.

    ಆದರೆ ಅಕ್ರಮ ಮದ್ಯ ಮಾರಾಟ ಮಾಡುತ್ತಾರೆ ಅನ್ನೊ ಆರೋಪಕ್ಕೆ ಇವರ ಅಂಗಡಿ ಮೇಲೆ ದಾಳಿ ಮಾಡಿದ ಬಳ್ಳಾರಿಯ ಅಬಕಾರಿ ಪೊಲೀಸರು, ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದು ಬಿಟ್ಟು ಕಾನೂನನ್ನ ಕೈಗೆತ್ತಿಕೊಂಡು ಇಡೀ ಅಬಕಾರಿ ಇಲಾಖೆಯೇ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾರೆ.

  • ಅಕ್ರಮವಾಗಿ ಸಾಗಿಸುತ್ತಿದ್ದ 4.50 ಲಕ್ಷ ಮೌಲ್ಯದ ಗೋವಾ ಪೆನ್ನಿ ವಶ!

    ಅಕ್ರಮವಾಗಿ ಸಾಗಿಸುತ್ತಿದ್ದ 4.50 ಲಕ್ಷ ಮೌಲ್ಯದ ಗೋವಾ ಪೆನ್ನಿ ವಶ!

    ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ(ಫೆನ್ನಿ)ವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಾಂಡೇಭಾಗ್ ಗ್ರಾಮದಲ್ಲಿ ವಶಕ್ಕೆ ಪಡೆದು ಓರ್ವನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

    ಗಜಾನನ ಕೃಷ್ಣ ಕದಂಬ ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಓಮ್ನಿ ಸಹಿತ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತನಿಂದ ಸುಮಾರು 4,50,000 ರೂಪಾಯಿ ಮೌಲ್ಯದ ಗೋವಾದ ಮದ್ಯ(ಪೆನ್ನಿ)ವನ್ನು ವಶಪಡಿಸಕೊಂಡಿದ್ದಾರೆ. ಕಾರವಾರದ ಅಬಕಾರಿ ನಿರೀಕ್ಷಕರಾದ ರೇವಣ ಸಿದ್ದಪ್ಪ ನೇತೃತ್ವದಲ್ಲಿ ದಾಳಿ ನಡೆದಿದ್ದು, ಘಟನೆ ಸಂಬಂಧ ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.