Tag: Illegal mining

  • ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    – ದಾಳಿ ಹೆಸರಲ್ಲಿ ದುಡ್ಡು ವಸೂಲಿಗೆ ಹೋಗಿರ್ಬೇಕು, ಹೆಚ್‍ಡಿಕೆ ಕಿಡಿ

    ಮಂಡ್ಯ: ಕನ್ನಂಬಾಡಿ ಅಣೆಕಟ್ಟು ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ನಡುವಿನ ನೇರ ಸಂಘರ್ಷ ಇನ್ನಷ್ಟು ತೀವ್ರಗೊಂಡಿದೆ. ಅಕ್ರಮ ಕಲ್ಲುಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಸುಮಲತಾ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ…? ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದ್ದಾರೆ. ಆದ್ರೆ ಸಂಸದೆ ಬೇಬಿ ಬೆಟ್ಟಕ್ಕೆ ಭೇಟಿ ನೀಡಲಿಲ್ಲ. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಇನ್ನು ಶ್ರೀರಂಗಪಟ್ಟಣದಲ್ಲಿ ಸಂಸದೆ ಕಾರಿಗೆ ಮುತ್ತಿಗೆ ಹಾಕಿದ ಶಾಸಕರ ಬೆಂಬಲಿಗರು ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಇನ್ನು ಸುಮಲತಾ ಮತ್ತು ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ತಮ್ಮನ್ನು ಭ್ರಷ್ಟಾಚಾರದ ರಾಯಭಾರಿ, ಡೀಲ್ ಮಾಸ್ಟರ್, ಚೈಲ್ಡಿಶ್ ಎಂದು ಕರೆದಿರುವ ಸುಮಲತಾಗೆ ಕುಮಾರಸ್ವಾಮಿ ‘ಗಣಿ ಮಾಲೀಕರಿಂದ ಹಣ ವಸೂಲಿಗೆ ಹೋಗಿರಬಹುದು’ ತಿರುಗೇಟು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಭವಿಷ್ಯದ ಬಗ್ಗೆ ಮಾತಾಡಲು ಸುಮಲತಾ ಏನು ಜ್ಯೋತಿಷಿನಾ ಎಂದು ಮಾಜಿ ಪ್ರಧಾನಿ ದೇವೇಗೌಡರು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

  • ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

    ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

    – ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್, ಚೈಲ್ಡಿಶ್ ರೀತಿಯ ಮಾತು

    ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್. ಡೀಲ್ ಗಳ ಮಾಸ್ಟರ್ ಯಾರು ಅನ್ನೋದು ರಾಜ್ಯದ ಜನತೆ ಗೊತ್ತಿದೆ ಎಂದು ಹೇಳುವ ಮಾಜಿ ಸಿಎಂ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ನನ್ನ ಮಂಡ್ಯ ಕಾರ್ಯಕ್ರಮ ಮೊದಲೇ ನಿಗದಿ ಆಗಿತ್ತು. ಶ್ರೀರಂಗ ಪಟ್ಟಣಕ್ಕೆ ಹೋಗುತ್ತೇನೆ, ಒಟ್ಟು ಮೂರು ಕಡೆ ಅಕ್ರಮ ಗಣಿಗಾರಿಕೆಯ ಪರಿಶೀಲನೆಗೆ ಹೋಗುತ್ತಿದ್ದೇನೆ. ಅಕ್ರಮ ಗಣಿಗಾರಿಕೆ ಸೀಜ್ ಆಗಿದೆ, ಬೇಬಿ ಬೆಟ್ಟಕ್ಕೆ ಸಹಾ ಭೇಟಿ ಕೊಡುತ್ತಿದ್ದೇನೆ. ನಾನು ಯಾರ ಮೇಲು ಆರೋಪ ಮಾಡ್ತಿಲ್ಲ. ಈ ಹಿಂದೆಯೇ ಕೆಆರ್‍ಎಸ್ ಬಿರುಕಿನ ಸಮಸ್ಯೆ ಆಗಿತ್ತು ಅದು ಮತ್ತೆ ಆಗಬಾರದು ಅಲ್ಲಿ ಬ್ಲಾಸ್ಟ್ ಆಗಬಾರದು ಅಂತ ಅದನ್ನು ತಡಿಬೇಕು ಅನ್ನೋದು. ಅದು ಲೋ ಅರ್ಥ್ ಕ್ವಿಕ್ ಝೋನ್. ಈ ಹಿಂದೆ ಶೇ.2.5 ನಷ್ಟು ಪ್ರಮಾಣದಲ್ಲಿ ಭೂಮಿ ನಡುಗಿತ್ತು. ಅದು ಶೇ.6.5 ರಷ್ಟು ಆದರೆ ಆಗುವ ಅಪಾಯ ದೊಡ್ಡದು ಎಂದು ಆತಂಕ ವ್ಯಕ್ತಪಡಿಸಿದರು.

    ಅಲ್ಲಿ ರಾತ್ರಿ ಯುವಕರು ಕೆಆರ್‍ಎಸ್ ಒಳಗೆ ಹೋಗಿ ಪಾರ್ಟಿ ಮಾಡಿದ ಘಟನೆಯು ನಡೆದಿದೆ. ಓರ್ವ ಸಂಸದೆಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ. ಒಂದು ಕಡೆ ಅಕ್ರಮ ನಡೆಯುವಾಗ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಅಧಿಕಾರಿಗಳಿಗೆ ಸೂಚಿಸಬೇಕು. ಆದರೆ ಇವರು ಅಕ್ರಮದ ಪರ ನಿಲ್ಲುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ರಾಜಧನ ಸರ್ಕಾರಕ್ಕೆ ಬರುವುದು ತಪ್ಪಿ ಹೋಗ್ತಿದೆ. ಇದರಿಂದ ಜಿಲ್ಲೆಗೆ ಬರುವ ಆದಾಯ ಬರುತ್ತಿಲ್ಲ ನಿಂತು ಹೋಗಿದೆ.

    ಸ್ಥಳೀಯ ಜೆಡಿಎಸ್ ಶಾಸಕರುಗಳು ಕಳೆದ ಎರಡು ವರ್ಷದಿಂದ ನಾನು ಏನು ಮಾಡಿದರೂ ಅದನ್ನು ವಿರೋಧ ಮಾಡಿಕೊಂಡು ಬಂದಿದ್ದಾರೆ. ಅವರಿಂದ ಸಹಕಾರವನ್ನ ಬಯಸುವುದು ಕನಸಿನ ಮಾತು. ಯಾರಾದರೂ ಒಳ್ಳೆ ಕೆಲಸ ಮಾಡಿದರೆ ಅದನ್ನ ತಿರುಚುವ ಕೆಲಸ ಮಾಡುತ್ತಿದ್ದಾರೆ. ಕೊರೊನದ ಸಂದರ್ಭದಲ್ಲಿ ಆಕ್ಸಿಜನ್ ಹಾಗೂ ಐಸಿಯು ಅಂಬ್ಯುಲೆನ್ಸ್ ನಾನು ಪರ್ಸನಲ್ ಆಗಿ ಕೊಡಿಸಿದ್ದೇನೆ. ಒಂದೊಂದು ಜೀವಕ್ಕೂ ಬೆಲೆ ಇಲ್ವಾ? ಅವರು ಎಲ್ಲವನ್ನು ತಿರುಚಿ ತಿರುಗಿಸಿ ಹೇಳ್ತಾರೆ. ಕಳೆದ ಲೋಕ ಸಭೆ ಚುನಾವಣೆ ಸೋಲು ಇದುವರೆಗೆ ಡೈಜೆಸ್ಟ್ ಮಾಡಿಕೊಳ್ಳೋಕೆ ಅವರಿಗೆ ಆಗಿಲ್ಲ. ಈ ಬೆಳವಣಿಗೆಯೆ ಅದಕ್ಕೆಲ್ಲಾ ದೊಡ್ಡ ಕಾರಣ. ಅವರು ಮಂಡ್ಯಕ್ಕೆ ಬಂದಾಗಲೆಲ್ಲಾ ಆ ನೋವನ್ನು ಹೊರ ಹಾಕ್ತಿದಾರೆ. ಆದರೆ ಜನ ಒಂದು ಸರಿ ತೀರ್ಪು ಕೊಟ್ಟ ನಂತರ ಅದನ್ನ ಒಪ್ಪಿಕೊಳ್ಳಬೇಕು. ಮುಂದಿನ ಬಾರಿ ಪ್ರಯತ್ನ ಪಡೋಣ ಅನ್ನಬೇಕು ಎರೆಡು ಬಾರಿ ಸಿಎಂ ಆದವರು ಅದನ್ನ ಸ್ವೀಕರಿಸಬೇಕು ಹೊರತು ಈ ರೀತಿಯ ಚೈಲ್ಡಿಶ್ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದರು. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಡೀಲ್ ಗಳಲ್ಲಿ ಮಾಸ್ಟರ್ ಯಾರು ಅಂತ ಕರ್ನಾಟಕದ ಜನರಿಗೆ ಗೊತ್ತು. ನಾನು ಜಾಸ್ತಿ ಮಾತನಾಡಿದರೆ ಅವರಿಗೆ ಹೇಸಿಗೆ ಆಗುತ್ತೆ. ಡೀಲ್ ಅವರಿಗೆ ಪ್ರಧಾನ ಅಜೆಂಡ ರೀತಿ ಆಗಿದೆ. ಪ್ರತಿ ಒಂದು ಕೆಲಸದಲ್ಲೂ ಡೀಲ್ ಮಾಡ್ತಾರೆ. ಆಡಿಯೋ, ವೀಡಿಯೋ ಏನೇ ಇದ್ರೂ ರಿಲೀಸ್ ಮಾಡಲಿ ಅದನ್ನ ಫೇಸ್ ಮಾಡ್ತೀನಿ ಅವರಿಗೆ ಚಾಲೆಂಜ್ ಮಾಡ್ತೀನಿ. ಅಂಬರೀಶ್ ಮನೆಯಲ್ಲಿ ನಾನೇ ಆಗಲಿ, ನನ್ನ ಮಗನಾಗಲಿ ಭ್ರಷ್ಟಾಚಾರದ ದಾರಿಯಲ್ಲಿ ಹೋಗುವ ಕರ್ಮ ನಮಗೆ ಇಲ್ಲ. ಇದನ್ನೂ ಓದಿ: ಸುಮಲತಾ Vs ಕುಮಾರಸ್ವಾಮಿ – ಮೈ ಶುಗರ್ ವಿವಾದ ಈಗ ಎದ್ದಿದ್ದು ಯಾಕೆ?

    ರಾಜಕಾರಣ ನನಗೆ ಆಕಸ್ಮಿಕ ಜನ ವಿಶ್ವಾಸ ಇಟ್ಟು ಗೆಲ್ಲಿಸಿದ ಋಣ ನನ್ನ ಮೇಲಿದೆ. ಜನ ಇರು ಅಂದಷ್ಟು ದಿನ ಇರ್ತಿನಿ ಬೇಡ ಅಂದಾಗ ಹೊರಟು ಹೋಗ್ತಿನಿ, ಅಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳಲ್ಲ ಯಾರಿಗೆ ದುರಾಸೆ ಇದೆಯೋ ಅವರಿಗೆ ಆತಂಕ ಆಗ್ತಿದೆ. ಒಂದೊಂದಾಗಿ ನಾನು ಬಿಚ್ಚಿಟ್ಟಿದ್ದರಿಂದ ಕೆಲವರಿಗೆ ಆತಂಕವಾಗಿದೆ. ಭ್ರಷ್ಟಾಚಾರ ಎಷ್ಡು ದಿನ ಹೀಗೆ ನಡೆಯಬೇಕು. ಭ್ರಷ್ಟಾಚಾರವನ್ನು ಪ್ರಶ್ನಿಸಬಾರದಾ..? ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ತರ ಕಾಣಿಸ್ತಿದಿರ ನೀವು. ನಮ್ಮಲ್ಲಿ ಸತ್ಯ ಇರುವಾಗ ಯಾರಿಗು ಹೆದರಬಾರದು. ನನ್ನಲ್ಲಿ ಸತ್ಯ ಇದೆ ಹಾಗಾಗಿ ಹೆದರುವ ಪ್ರೆಶ್ನೆ ಇಲ್ಲಾ. ನಿಮ್ಮಲ್ಲಿ ತಪ್ಪಿಲ್ಲ ಅಂದರೆ ಭಯ ಏಕೆ. ನಿಮಗೆ ಗಿಲ್ಟ್ ಕಾಡಿದಾಗ ಭಯ ಆಗುತ್ತೆ ಅಷ್ಟೇ ಎಂದು ವ್ಯಂಗ್ಯ ಮಾಡಿದರು.

  • ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ

    ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ

    ಹಾವೇರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಸ್ತುಗಳು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿಯಲ್ಲಿ ಪತ್ತೆಯಾಗಿವೆ.

    ಗ್ರಾಮದ ರಾಜು ಅಣ್ಣಪ್ಪನವರ ಜಮೀನಿನಲ್ಲಿದ್ದ ಕೋಳಿ ಶೆಡ್ ಹಿಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಸ್ಫೋಟಕ ವಸ್ತುಗಳಾದ ಎಲೆಕ್ಟ್ರಿಕ್ ಜೆಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸುರೇಶ್, ಶೌಕತ್ ಮತ್ತು ಧನರಾಜ್ ಎಂಬವರು ಈ ಸ್ಫೋಟಕಗಳನ್ನು ಅಡಗಿಸಿಟ್ಟಿದ್ದರು.

    ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯ ಸಿಪಿಐ ಸಂತೋಷ ಪವಾರ ದಾಳಿ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಲು ಆರೋಪಿಗಳು ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು. ಈ ಕುರಿತಂತೆ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಹಿರೇನಾಗವಲ್ಲಿಯ ನಿವಾಸಿಯಿಂದ ಸುಧಾಕರ್ ವಿರುದ್ಧ ಆಕ್ರೋಶ

    ಹಿರೇನಾಗವಲ್ಲಿಯ ನಿವಾಸಿಯಿಂದ ಸುಧಾಕರ್ ವಿರುದ್ಧ ಆಕ್ರೋಶ

    – ಸಚಿವರ ಬೆಂಬಲಿಗರಿಂದ ಹಲ್ಲೆಗೆ ಯತ್ನ
    – ಕ್ವಾರಿ ಬಳಿ ಜಮೀನು ಹೊಂದಿದ್ದರಾ ಸುಧಾಕರ್?

    ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿರುವ ಸಚಿವ ಸುಧಾಕರ್ ವಿರುದ್ಧ ಸ್ಥಳೀಯ ನಿವಾಸಿ ಆರೋಪಗಳ ಸುರಿಮಳೆಗೈದು ಆಕ್ರೋಶ ಹೊರ ಹಾಕಿದರು. ಇತ್ತ ಆರೋಪ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಸಚಿವರ ಬೆಂಬಲಿಗರು ಹಲ್ಲೆಗೆ ಯತ್ನಿಸಿದರು.

    ಸಚಿವ ಸುಧಾಕರ್ ಮತ್ತು ಅವರ ಸಂಬಂಧಿಕರ ಒಡೆತನದ ಸರ್ವೇ ನಂಬರ್ 11ರಲ್ಲಿ 30 ಎಕರೆ ಜಮೀನು ಹೊಂದಿದ್ದು, ಅವರೇ ಗಣಿಗಾರಿಕೆಗೆ ಮುಂದಾಗಿದ್ದಾರೆ. ಹಾಗಾಗಿ ಈ ಸ್ಫೋಟಕ್ಕೆ ಸುಧಾಕರ್ ಅವರೇ ನೇರ ಹೊಣೆ. ಇಲ್ಲಿ ಹೇಳೋರು ಕೇಳೋರು ಯಾರಿಲ್ಲ ಎಂದು ಸಚಿವರ ವಿರುದ್ಧ ಆರೋಪಿಸಿದರು. ಸ್ಥಳದಲ್ಲಿದ್ದ ಸಚಿವರ ಬೆಂಬಲಿಗರು ನಿವಾಸಿ ಮೇಲೆ ಹಲ್ಲೆಗೆ ಮುಂದಾಗ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

    ಆರೋಪ ಮಾಡುತ್ತಿರುವ ವ್ಯಕ್ತಿ ವಿರೋಧ ಪಕ್ಷದವನು. ಉದ್ದೇಶಪೂರ್ವಕವಾಗಿ ಸ್ಥಳಕ್ಕೆ ಬಂದು ಗಲಾಟೆ ಮಾಡುತ್ತಿದ್ದಾನೆ ಎಂದು ಸಚಿವರು ಬೆಂಬಲಿಗರು ಸ್ಪಷ್ಟನೆ ನೀಡಿದ್ದಾರೆ.

    ರಾತ್ರಿ ಸುಮಾರು 12ರ ನಂತರ ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದರು. ಸ್ಥಳದಲ್ಲಿಯೇ ಐವರು ಕಾರ್ಮಿಕರು ಸಾವನ್ನಪ್ಪಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಜಿಲೆಟಿನ್ ಹೊತ್ತು ತಂದ ಟಾಟಾ ಏಸ್ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ಅಕ್ರಮ ಗಣಿಗಾರಿಕೆಗೆ ಎನ್‍ಓಸಿ ಕೊಡಲು 10 ಲಕ್ಷ ಫಿಕ್ಸ್: ಹೆಚ್‍ಡಿಕೆ

    ಅಕ್ರಮ ಗಣಿಗಾರಿಕೆಗೆ ಎನ್‍ಓಸಿ ಕೊಡಲು 10 ಲಕ್ಷ ಫಿಕ್ಸ್: ಹೆಚ್‍ಡಿಕೆ

    – ನಾರಾಯಣಗೌಡ ವಿರುದ್ಧ ಹೆಚ್‍ಡಿಕೆ ಆರೋಪ

    ಮಂಡ್ಯ: ಜಿಲ್ಲೆಯಲ್ಲಿ ಶೇಕಡ 87 ರಷ್ಟು ಅಕ್ರಮ ಗಣಿಗಾರಿಕೆಗಳು ಇವೆ. ರಾಜ್ಯದಲ್ಲಿ ಅತೀ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿರೋದು ಮಂಡ್ಯ ಜಿಲ್ಲೆಯಲ್ಲಿ. ನಾರಾಯಣಗೌಡರು ಸಚಿವರಾದ ತಕ್ಷಣ ಅಕ್ರಮ ಗಣಿಗಾರಿಕೆಯನ್ನು ತಡೆಯುವ ಮೂಲಕ ಜಿಲ್ಲೆಯ ಸಂಪನ್ಮೂಲವನ್ನು ಉಳಿಸಬಹುದಿತ್ತು. ಆದರೆ ಇದೀಗ ಶಿವಮೊಗ್ಗದ ಘಟನೆಯ ಬಳಿಕ ಅವರು ಮಾತನಾಡುತ್ತಿದ್ದಾರೆ. ಮಂಡ್ಯದಲ್ಲಿ ಗಣಿಗಾರಿಕೆಗೆ ಎನ್‍ಓಸಿ ಕೊಡಲು 10 ಲಕ್ಷ ಫಿಕ್ಸ್ ಮಾಡಲಾಗಿದೆ ಎನ್ನಲಾಗುತ್ತಿದೆ. ಆ 10 ಲಕ್ಷ ರೂಪಾಯಿ ದುಡ್ಡು ಎಲ್ಲಿ ಹೋಯಿತು ಎಂದು ಸತ್ಯ ಹೇಳಬೇಕು ಎಂದು ನಾರಾಯಣಗೌಡ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

    ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಇಂದು ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಅಕ್ರಮ ಗಣಿಗಾರಿಕೆಯ ಕುರಿತು ಮಾತನಾಡಿದ ಅವರು. ನಾರಾಯಣಗೌಡ ಅವರು ಸಚಿವರಾಗಿ 14 ತಿಂಗಳುಗಳು ಆಗಿವೆ. ಆದರೆ ಇದೀಗ ಶಿವಮೊಗ್ಗದ ಘಟನೆಯ ನಂತರ ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಯನ್ನು ತಡೆಯಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ. ಇಷ್ಟು ದಿವಸ ಈ ಬಗ್ಗೆ ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.

    ಬೆಳಗಾವಿಯಲ್ಲಿ ಮರಾಠರ ಪುಡಾಂಟಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರಕ್ಕೆ ಈ ವಿಚಾರದಲ್ಲಿ ಗಡಸು ನಿರ್ಧಾರ ತೆಗೆದುಕೊಳ್ಳಬೇಕು ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಮರಾಠರನ್ನು ಮೆಚ್ಚಿಸಿಕೊಳ್ಳಲು ಈ ಸರ್ಕಾರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

  • ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳೇ ಹೊಣೆ : ಬಿಎಸ್‌ವೈ

    ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳೇ ಹೊಣೆ : ಬಿಎಸ್‌ವೈ

    – ಎಫ್‌ಡಿಎ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಅಮಾನತಿಗೆ ಸೂಚನೆ

    ಶಿವಮೊಗ್ಗ : ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಗಣಿಗಾರಿಕೆಗಳಿಗೆ ತತ್ ಕ್ಷಣ ಕಡಿವಾಣ ಹಾಕುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

    ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ನಂತರವೂ ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ. ಎಲ್ಲ ಅಕ್ರಮ ಗಣಿಗಾರಿಕೆಗಳು ಕೂಡಲೇ ನಿಲ್ಲಬೇಕು.  ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು. ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುಮತಿ ನೀಡಬೇಕು ಎಂದರು.

    ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಗಣಿಗಾರಿಕೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೇ ಹಲವು ಬಾರಿ ಗಣಿಗಾರಿಕೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಇದರ ನಡುವೆಯೂ ಅಲ್ಲೊಂದು ಇಲ್ಲೊಂದು ಕದ್ದುಮುಚ್ಚಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು,  ಶೀಘ್ರವೇ ಇದಕ್ಕೂ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

    ಅಮಾನತಿಗೆ ಸೂಚನೆ: ಕೆಪಿಎಸ್‌ಸಿ ಎಫ್ ಡಿಎ ಪ್ರಶ್ನೆ ಪತ್ರಿಕೆ ಪರೀಕ್ಷೆಗು ಮುನ್ನವೇ ಬಹಿರಂಗಗೊಂಡಿರುವ ವಿಚಾರ ಅಕ್ಷಮ್ಯ ಅಪರಾಧ. ಈ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ಬಂಧನವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು‌ ಮಾಡುವಂತೆ ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದನ್ನೂ ಓದಿ: 1 ಪೇಪರ್‌ಗೆ 10 ಲಕ್ಷ ರೂ. ಡೀಲ್‌ – ಕೆಪಿಎಸ್‌ಸಿ ಕಚೇರಿಯಿಂದಲೇ ಎಫ್‌ಡಿಎ ಪ್ರಶ್ನೆ ಪತ್ರಿಕೆ ಲೀಕ್‌

  • ಹುಣಸೋಡು ಕ್ವಾರಿಗೆ ಸಿಎಂ ಕಾಟಾಚಾರದ ಭೇಟಿ – ಎರಡೇ ನಿಮಿಷದಲ್ಲಿ ಪರಿಶೀಲನೆ

    ಹುಣಸೋಡು ಕ್ವಾರಿಗೆ ಸಿಎಂ ಕಾಟಾಚಾರದ ಭೇಟಿ – ಎರಡೇ ನಿಮಿಷದಲ್ಲಿ ಪರಿಶೀಲನೆ

    ಶಿವಮೊಗ್ಗ: ಹುಣಸೋಡು ಕ್ವಾರಿಗೆ ಕಾಟಾಚಾರದ ಭೇಟಿ ನೀಡಿದ ಸಿಎಂ ಯಡಿಯೂರಪ್ಪನವರು ಎರಡೇ ನಿಮಿಷದಲ್ಲಿ ಪರಿಶೀಲನೆ ನಡೆಸಿದರು.

    ಸ್ಫೋಟಕದ ಮಾರಾಟ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಎಕೋ ಸೆನ್ಸಿಟೀವ್ ಝೋನ್ ಆಗಿರೋದರಿಂದ ಮರು ತನಿಖೆಗೆ ಸೂಚಿಸಿದ್ದೇನೆ. ತನಿಖೆಯ ನಂತರ ಕಠಿಣ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ. ಕ್ರಷರ್‍ಗಷ್ಟೇ ಅನುಮತಿ ನೀಡಿದ್ದೇವೆ. ಕಲ್ಲು ಗಣಿಗಾರಿಕೆಗೆ ಅನುಮತಿಯೇ ಕೊಟ್ಟಿಲ್ಲ. ಆದರೆ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳುತ್ತೇವೆ ಅನ್ನೋದರ ಬಗ್ಗೆ ಸಿಎಂ ಜಾಣ ಮೌನಕ್ಕೆ ಶರಣಾದರು.

    ಉಲ್ಟಾ ಹೊಡೆದ ಸಿಎಂ: ಇಂದು ಬೆಳಗ್ಗೆ ಬೆಂಗಳೂರಲ್ಲಿ ಮಾತಾಡಿ, ಅಕ್ರಮ ಗಣಿಗಾರಿಕೆ ಅವಕಾಶ ಕೊಡಲ್ಲ ಅಂದಿದ್ದರು. ಮೈಸೂರಲ್ಲಿ ಉಲ್ಟಾ ಹೊಡೆದರು. ಗಣಿಗಾರಿಕೆಯನ್ನ ನಿಲ್ಲಿಸೋಕೆ ಆಗಲ್ಲ. ಯಾರಾದರೂ ಗಣಿಗಾರಿಕೆ ಮಾಡ್ತೀನಿ ಅಂದ್ರೇ ಲೈಸೆನ್ಸ್ ಇರ್ಬೇಕು. ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆ ಅರ್ಜಿ ಹಾಕ್ಕೊಂಡು ಸಕ್ರಮ ಮಾಡ್ಕೊಳ್ಳಿ ಎಂದು ಆಫರ್ ನೀಡಿದರು. ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳು ಸ್ಥಳ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

    ಮುಖ್ಯಮಂತ್ರಿಗಳ ಅಕ್ರಮ ಸಕ್ರಮವನ್ನು ಸರ್ಕಾರ ಸಮರ್ಥಿಸಿಕೊಳ್ತಿದೆ. ಸಿಎಂ ಮಾತಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಧ್ವನಿಗೂಡಿಸಿದ್ದಾರೆ. ಕಾನೂನಿನಡಿಯಲ್ಲಿ ಗಣಿಗಾರಿಕೆ ಇರಲಿ ಎಂಬ ದೃಷ್ಟಿಯಿಂದ ಸಿಎಂ ಹೇಳಿಕೆ ಕೊಟ್ಟಿದ್ದಾರೆ. ಎಲ್ಲೆಲ್ಲಿ ಲೈಸೆನ್ಸ್ ತಗೊಂಡಿಲ್ವೋ ಅಂಥ ಕಡೆ ಲೈಸೆನ್ಸ್ ತಗೊಳ್ಳಿ ಅಂತ ಸಿಎಂ ಹೇಳಿದ್ದಾರೆ ಅಂತ ಸಮರ್ಥಿಸಿಕೊಂಡರು. ನಾಳೆ ಅಥವಾ ನಾಡಿದ್ದು ತನಿಖೆಯ ಪ್ರಾಥಮಿಕ ವರದಿ ಬರಲಿದೆ. ಹುಣಸೋಡು ಕೇಸಲ್ಲಿ ಓನರ್, ಲೈಸೆನ್ಸ್ ಪಡೆದವರ ಮೇಲೆ ಕ್ರಮ ತೆಗೆದುಕೊಳ್ತೇವೆ ಎಂದರು.

  • ಮಧ್ಯರಾತ್ರಿ ಅಕ್ರಮ ಗಣಿಗಾರಿಕೆ ಅಡ್ಡೆ ಮೇಲೆ ದಾಳಿ – 8 ವಾಹನ ವಶ

    ಮಧ್ಯರಾತ್ರಿ ಅಕ್ರಮ ಗಣಿಗಾರಿಕೆ ಅಡ್ಡೆ ಮೇಲೆ ದಾಳಿ – 8 ವಾಹನ ವಶ

    ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗಣಿ ಹಾಗೂ ಭೂ ವಿಜ್ಞಾನ ಇಲಾಖಾಧಿಕಾರಿಗಳು, ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ 8 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ತಾಲೂಕು ಚಿಕ್ಕನಾಗವಲ್ಲಿ ಗ್ರಾಮದ ಬಳಿಯ ಬೆಟ್ಟದಲ್ಲಿ, ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಕ್ವಾರಿ ಮೇಲೆ ದಾಳಿ ನಡೆಸಿ, 5 ಟಿಪ್ಪರ್ ಗಳು, 1 ಕಂಪ್ರೈಸರ್ ವಾಹನ, 2 ಜೆಸಿಬಿ ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಾಗರ್ ಮಂಜು ಎಂಬಾತ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದನೆ ಎಂಬ ಆರೋಪ ಕೇಳಿ ಬಂದಿದ್ದು, ಈಗ ಈತ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

    ಸಾಗರ್ ಮಂಜು ವಿರುದ್ಧ ಅಕ್ಕ ಪಕ್ಕದ ಗುತ್ತಿಗೆದಾರರು ಹಾಗೂ ಸಾರ್ವಜನಿಕರು ದೂರು ನೀಡಿದ್ದು, ಈ ಸಂಬಂಧ ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ವಾಹನಗಳನ್ನು ಬಿಟ್ಟು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಖದೀಮರು ಪರಾರಿಯಾಗಿದ್ದಾರೆ.

  • ಶ್ರೀರಂಗಪಟ್ಟಣದ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ

    ಶ್ರೀರಂಗಪಟ್ಟಣದ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ

    ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಕ್ಕೆ ಮತ್ತೊಂದು ಹೆಜ್ಜೆ ಮುಂದಿಟ್ಟ ಜಿಲ್ಲಾಡಳಿತಕ್ಕೆ ತಾಲೂಕು ಆಡಳಿತ ಕೂಡ ಸಾಥ್ ನೀಡಿದ್ದು, ಶ್ರೀರಂಗಪಟ್ಟಣ ತಾಲೂಕಿನಲ್ಲೂ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಬಿದ್ದಿದೆ.

    ಶ್ರೀರಂಗಪಟ್ಟಣ ತಾಲೂಕಿನ ಸುತ್ತಮುತ್ತಲ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಸೆ. 09 ರಿಂದ ಅ. 08ರವರೆಗೆ ಅಂದರೆ ಒಂದು ತಿಂಗಳು ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶದಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಕರಿಘಟ್ಟ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಈ ಅಕ್ರಮವನ್ನು ತಡೆಗಟ್ಟಲು ತಾಲೂಕು ಆಡಳಿತ ಈ ನಿರ್ಧಾರಕ್ಕೆ ಬಂದಿದೆ.

    ಜಕ್ಕನಹಳ್ಳಿ, ಚನ್ನನಕೆರೆ, ಕಾಳೇನಹಳ್ಳಿ, ಗಣಂಗೂರು, ಸಿದ್ದಾಪುರ, ಮುಂಡುಗದೊರೆ, ಹಂಗರಹಳ್ಳಿ, ಗೌಡಹಳ್ಳಿ, ಟಿ.ಎಂ. ಹೊಸೂರು, ಕೋಡಿಶೆಟ್ಟಿಪುರ, ಶ್ರೀರಾಂಪುರ, ನೀಲನಕೊಪ್ಪಲು ಸೇರಿದಂತೆ ಹಲವು ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಈ ಪ್ರದೇಶಗಳಲ್ಲಿ ಹೆಚ್ಚಿನ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದ ಪರಿಸರ ನಾಶವಾಗುವುದರ ಜೊತೆಗೆ ಸಾರ್ವಜನಿಕರಿಗೂ ಸಾಕಷ್ಟು ತೊಂದರೆ ಆಗುತ್ತಿತ್ತು. ಅಕ್ರಮ ಗಣಿಗಾರಿಕೆಗೆ ಬೇಸತ್ತ ಜನರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದೂರು ನೀಡಿದ್ದರು. ಆದ್ದರಿಂದ ಇಂತಹ ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈಗಾಗಲೇ ಪಾಂಡವಪುರ ತಾಲೂಕಿನಲ್ಲಿ ಜಿಲ್ಲಾಡಳಿತ ಅಕ್ರಮ ಗಣಿಗಾರಿಕೆ ನಿಷೇಧ ಮಾಡಿದೆ.

  • ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ, ಹೇಳಿದ್ದನ್ನು ನಾವು ನಂಬೋಕೆ ಆಗುತ್ತಾ – ಶಾಸಕ ನಾಗೇಂದ್ರ

    ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ, ಹೇಳಿದ್ದನ್ನು ನಾವು ನಂಬೋಕೆ ಆಗುತ್ತಾ – ಶಾಸಕ ನಾಗೇಂದ್ರ

    – ಸಿಎಲ್‍ಪಿ ಸಭೆಗೆ ಹಾಜರಾಗುತ್ತೇನೆ

    ಬೆಂಗಳೂರು: ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ. ಕೆಲವರು ಏನೇನೋ ಹೇಳುತ್ತಾರೆ. ಅದನ್ನೆಲ್ಲಾ ನಾವು ನೀವು ನಂಬುವುದಕ್ಕೆ ಆಗುತ್ತಾ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಹೇಳಿದ್ದಾರೆ.

    ಅಕ್ರಮ ಗಣಿಗಾರಿಕೆ ಪ್ರಕರಣ ಹಿನ್ನಲೆಯಲ್ಲಿ ಶಾಸಕರಾದ ನಾಗೇಂದ್ರ ಹಾಗೂ ಆನಂದ್ ಸಿಂಗ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ನಾಗೇಂದ್ರ ಅವರು, ಆನಂದ್ ಸಿಂಗ್ ಅವರ ಜೊತೆಯಲ್ಲಿ ಮೊದಲಿಂದಲೂ ಇದ್ದೇನೆ. ನಮ್ಮಿಂದ ಸರ್ಕಾರಕ್ಕೆ ಸಂಕಷ್ಟ ಇಲ್ಲ. ನಾವು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಇದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸುವ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕರು, ವಿಧಾನಸೌಧದಲ್ಲಿ ನಾಳೆ ನಡೆಯುವ ಸಭೆಗೆ ಹಾಜರಾಗುತ್ತೇವೆ. ಕೋರ್ಟ್ ನಲ್ಲಿರುವ ಪ್ರಕರಣ ಇತ್ಯರ್ಥವಾಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟೀಕರಣ ನೀಡುತ್ತೇನೆ ಎಂದರು.

    ಕೋರ್ಟ್ ಆವರಣದಲ್ಲಿ ಶಾಸಕರು ಕೆಲಹೊತ್ತು ಆಪ್ತ ಸಮಾಲೋಚನೆ ನಡೆಸಿದರು. ಈ ವೇಳೆ ಆನಂದ್ ಸಿಂಗ್ ಅವರಿಗೆ ಸಂಬಂಧಿ ಅಜಯ್ ಸಿಂಗ್ ಸಾಥ್ ನೀಡಿದರು. ಇದನ್ನು ಓದಿ: ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಇದ್ದರಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ- ಶಾಸಕ ನಾಗೇಂದ್ರ

    ಪ್ರಕರಣ ಏನು?:
    ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ಬಿ ನಾಗೇಂದ್ರ ಅವರ ಮೇಲಿರುವ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಈ ಪ್ರಕರಣದ ವಿಚಾರಣೆಗೆ ಶಾಸಕರು ಹಾಜರಾಗುತ್ತಿರಲಿಲ್ಲ. ಇದರಿಂದಾಗಿ ಹಲವು ಬಾರಿ ಸಮನ್ಸ್ ಅನ್ನು ಕೂಡ ಜಾರಿ ಮಾಡಲಾಗಿತ್ತು. ಆದರೂ ಶಾಸಕರು ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಈ ಹಿಂದೆ ವಾರಂಟ್ ಜಾರಿ ಮಾಡಿದ್ದರು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಶಾಸಕರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv