Tag: Illegal mining

  • ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಇದ್ದರಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ- ಶಾಸಕ ನಾಗೇಂದ್ರ

    ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಇದ್ದರಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ- ಶಾಸಕ ನಾಗೇಂದ್ರ

    – ನ್ಯಾಯಾಲಯಕ್ಕೆ ಹಾಜರಾಗದೇ ಮತ್ತೆ ಆನಂದ್ ಸಿಂಗ್ ಗೈರು

    ಬೆಂಗಳೂರು: ನಾನು ಓರ್ವ ಜನ ಪ್ರತಿನಿಧಿ, ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿದ್ದವು. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.

    ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ನಾಗೇಂದ್ರ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇಂದು ಹಾಜರಾದರು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಶಾಸಕರು, ಪ್ರತಿನಿತ್ಯ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಹೀಗಾಗಿ ವಾರಕ್ಕೊಮ್ಮೆ ಹಾಜರಾಗಲು ಅನುಮತಿ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಸುಪ್ರೀಂ ಕೋರ್ಟ್ ಸೂಚನೆ ಪ್ರಕಾರ ಆರೋಪಿಗಳ ಮುಂದೆಯೇ ವಿಚಾರಣೆ ನಡೆಯಬೇಕು. ಆದ್ದರಿಂದ ನಿಮ್ಮ ಮನವಿಗೆ ಅವಕಾಶವಿಲ್ಲ ಅಂತ ನ್ಯಾಯಾಧೀಶರು ಹೇಳಿ ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಿದರು.

    ಇದೇ ವೇಳೆ ಇವತ್ತು ಸಹ ಗೈರಾಗಿದ್ದ ಆನಂದ್ ಸಿಂಗ್ ತಮ್ಮ ವಕೀಲರ ಮೂಲಕ ಸೋಮವಾರ ಹಾಜರಾಗುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೂ ಆನಂದ್ ಸಿಂಗ್ ವಿರುದ್ಧ ಜಾರಿಯಾಗಿರುವ ಜಾಮೀನು ರಹಿತ ವಾರಂಟ್ ಮುಂದುವರಿಯಲಿದೆ ಎಂದು ಕೋರ್ಟ್ ತಿಳಿಸಿದೆ.

    ಏನಿದು ಪ್ರಕರಣ:
    ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಕೂಡ್ಲಿಗಿ ಶಾಸಕ ಬಿ ನಾಗೇಂದ್ರ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣ ದಾಖಲಾಗಿತ್ತು. ಆದರೆ ಶಾಸಕರು ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಇದರಿಂದಾಗಿ ಹಲವು ಬಾರಿ ಸಮನ್ಸ್ ಅನ್ನು ಕೂಡ ಜಾರಿ ಮಾಡಲಾಗಿತ್ತು. ಆದರೂ ಶಾಸಕರು ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ವಾರಂಟ್ ಜಾರಿ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?

    ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?

    ಮಂಡ್ಯ: ಜಮೀನಿನ ಹಕ್ಕುಪತ್ರ ಬದಲಾವಣೆ ವಿಚಾರದಲ್ಲಿ ಸರ್ಕಾರವು ಮೈಸೂರು ರಾಜಮನೆತನಕ್ಕೆ ಮೋಸ ಮಾಡುತ್ತಿದೆ ಎನ್ನವು ಅನುಮಾನ ವ್ಯಕ್ತವಾಗಿದ್ದು, ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ಹೀಗೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬರುತ್ತಿವೆ.

    ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು, ತಮಗೆ ಸೇರಬೇಕಾದ ಜಮೀನಿನ ಹಕ್ಕು ಬದಲಾವಣೆ ಮಾಡಿಕೊಡಿ ಎಂದು ಪಾಂಡವಪುರ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಮೀನು ಸರ್ಕಾರಿ ಜಾಗ ಅಂತಾ ತಹಶೀಲ್ದಾರ್ ಪತ್ರಕ್ಕೆ ಹಿಂಬರಹ ನೀಡಿರುವ ದಾಖಲೆ ಲಭ್ಯವಾಗಿದೆ. ಈ ಮೂಲಕ ಸರ್ಕಾರ ರಾಜ ಮನೆತನಕ್ಕೆ ಮೋಸ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

    ಪಾಂಡವಪುರ ತಾಲೂಕು ಬೇಬಿಬೆಟ್ಟದ ಕಾವಲು ಗ್ರಾಮದ ಸರ್ವೆ ನಂಬರ್ 1ರ ಅಮೃತಮಹಲ್ ಕಾವಲ್ ಜಮೀನಿನ ಖಾತೆಯನ್ನು ಕೋರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಕಳೆದ ವರ್ಷ ಅಕ್ಟೋಬರ್ 24ರಂದು ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದ್ದರು. ಮನವಿ ಸಲ್ಲಿಸಿದ ಒಂದು ತಿಂಗಳ ನಂತರ (ನವೆಂಬರ್ 25)ರಂದು ತಹಶೀಲ್ದಾರ್ ಹಿಂಬರಹ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಕಲ್ಲುಗಣಿಗಾರಿಕೆಗೆ ನೆರವಾದ ಆರೋಪ- ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ದೂರು ದಾಖಲು

    ತಹಶೀಲ್ದಾರ್ ಪತ್ರದಲ್ಲಿ ಏನಿದೆ?:
    ಅಮೃತ ಮಹಲ್ ಕಾವಲ್‍ನಲ್ಲಿ ಬರುವ 1,487 ಎಕರೆ ಜಮೀನು ಸರ್ಕಾರಿ ಖರಾಬು ಎಂದು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಖರಾಬು ಜಮೀನನ್ನು ಖಾತೆ ಬದಲಾವಣೆ ಮಾಡುವ ಅಧಿಕಾರ ನಮ್ಮ ಪ್ರಾಧಿಕಾರದ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ನೀವು ಮೇಲ್ಮನವಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

    ಇತ್ತ ಬೇಬಿಬೆಟ್ಟದ ಸುತ್ತಮುತ್ತ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಳೆದ ವಾರ ನಿಷೇಧ ಹೇರಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಹಾಯ ಮಾಡುವ ಸಲುವಾಗಿ ರಾಜಕುಟುಂಬಕ್ಕೆ ಮೋಸ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂಬರಹದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಅದಿರು ಹಗರಣ ಸಾಬೀತಿಗೆ ಸಾಕ್ಷ್ಯವೇ ಇಲ್ಲ – ಬಳ್ಳಾರಿ ಗಣಿ ಹಗರಣ ಕೇಸ್ ಕ್ಲೋಸ್..?

    ಅದಿರು ಹಗರಣ ಸಾಬೀತಿಗೆ ಸಾಕ್ಷ್ಯವೇ ಇಲ್ಲ – ಬಳ್ಳಾರಿ ಗಣಿ ಹಗರಣ ಕೇಸ್ ಕ್ಲೋಸ್..?

    -ಎಲೆಕ್ಷನ್ ಹೊತ್ತಲ್ಲಿ ರೆಡ್ಡಿ ಬ್ರದರ್ಸ್ ಬಚಾವ್..?

    ಬೆಂಗಳೂರು: ಕರ್ನಾಟಕದ ರಾಜಕಾರಣವನ್ನೇ ತಲ್ಲಣಿಸಿದ್ದ ಬಹುಕೋಟಿ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಸದ್ದಿಲ್ಲದೆ ಕೊನೆಮಾಡುತ್ತಿದೆ.

    ಮೊದಲ ಬಾರಿಗೆ ಅಧಿಕಾರದಲ್ಲಿದ್ದ ಬಿಜೆಪಿಗೆ ಕಂಟಕವಾಗಿದ್ದ ಈ ಹಗರಣವನ್ನು ತನಿಖೆ ಮಾಡುವಂತೆ ಸಿಬಿಐಗೆ ಒಪ್ಪಿಸಲಾಗಿತ್ತು. ಆಂಧ್ರ ಪ್ರದೇಶ, ಮಂಗಳೂರು, ಗೋವಾ, ಮತ್ತು ಕೃಷ್ಣಪಟ್ಟಣ ಬಂದರುಗಳಿಂದ ಅಕ್ರಮ ಅದಿರಿನ ರಫ್ತು ನಡೆಯುತ್ತಿದ್ದು, ಅಲ್ಲಿಂದನೇ ಪ್ರಾಥಮಿಕ ಶೋಧ ಕಾರ್ಯಚರಣೆ ಆರಂಭವಾಗಿದೆ. ಆದರೆ ಮೊದಲ ಹಂತದಲ್ಲಿಯೇ ಸಿಬಿಐಗೆ ಪ್ರಕರಣಗಳಿಗೆ ಸಂಬಂಧಿಸಿಂತೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಕೈ ಚೆಲ್ಲಿ ಕುಳಿತಿದೆ.

    ಸುಪ್ರೀಂ ಕೋರ್ಟ್ ಈ ಹಗರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಆದೇಶ ನೀಡಿದಾಗ ಸಿಬಿಐ, ಜನಾರ್ದನ ರೆಡ್ಡಿ ಮತ್ತು ಅಕ್ರಮ ಗಣಿಗಾರಿಕೆಯೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಲಾದ ಕಂಪನಿಗಳ ವಿರುದ್ಧ ಚಾರ್ಜ್ ಸೀಟ್‍ಗಳನ್ನು ಹಾಕಲಾಗಿತ್ತು.

    ಅಕ್ರಮ ಗಣಿಗಾರಿಕೆ ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, 2012 ರಲ್ಲಿ ಸಚಿವಾಲಯ ಸುಮಾರು 25 ಸಾವಿರ ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಅಂದಾಜಿಸಿ ಸಿಬಿಐ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.

    ಸಿಬಿಐ ಸಲ್ಲಿದ ವದರಿಯ ಪ್ರಕಾರ, ಆಂಧ್ರ ಪ್ರದೇಶ, ಗೋವಾ ಮತ್ತು ಕರ್ನಾಟಕ ಸಿಬಿಐನ ಅಧಿಕಾರಿಗಳು ಪ್ರಕರಣವನ್ನು ಮುಚ್ಚುವಂತೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಪ್ರಾಥಮಿಕ ಹಂತದಲ್ಲಿಯೇ ಅಕ್ರಮ ಗಣಿಗಾರಿಕೆ ಸಾಬೀತಿಗೆ ಸಾಕ್ಷ್ಯಗಳೇ ಇಲ್ಲವೆಂದು ಸಿಬಿಐ ತನಿಖಾಧಿಕಾರಿಗಳಿಂದ ಮೇಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಲೋಕಾಯುಕ್ತ ವರದಿಯಲ್ಲಿ ಏನಿತ್ತು?

    * 2006 ರಿಂದ 2010ರವರೆಗೆ 12.57 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ
    * ಇದರಲ್ಲಿ 2.98 ಕೋಟಿ ಮೆಟ್ರಿಕ್ ಟನ್‍ನಷ್ಟು ಪ್ರಮಾಣದ ಕಬ್ಬಿಣದ ಅದಿರು ಅಕ್ರಮ ಸಾಗಾಟ
    * ಸುಪ್ರೀಂ ಕೋರ್ಟ್ ಆದೇಶದಂತೆ ಸಿಬಿಐನಿಂದ ತನಿಖೆ, ಆರೋಪಪಟ್ಟಿ ಸಲ್ಲಿಕೆ
    * ಮಾಜಿ ಸಚಿವ ಜನಾರ್ದನ ರೆಡ್ಡಿ ಸೇರಿ ಪ್ರಮುಖರ ವಿರುದ್ಧ ಎಫ್‍ಐಆರ್, ಬಂಧನ
    * ಬೇಲೆಕೇರಿ, ನವ ಮಂಗಳೂರು ಬಂದರಿಂದ 50 ಸಾವಿರ ಮೆಟ್ರಿಕ್ ಟನ್‍ನ್ನಷ್ಟು ಅಕ್ರಮವಾಗಿ ಅದಿರು ಸಾಗಾಟ
    * ಸುಪ್ರೀಂಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರದಿಂದ ಎಸ್‍ಐಟಿ ಸ್ಥಾಪನೆ