Tag: Immadi Mahadeva Swamiji

  • ಸುಳ್ವಾಡಿ ವಿಷ ಪ್ರಸಾದ ಪ್ರಕರಣ – ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ

    ಸುಳ್ವಾಡಿ ವಿಷ ಪ್ರಸಾದ ಪ್ರಕರಣ – ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ

    ಚಾಮರಾಜನಗರ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ ಆಗಿದೆ.

    ಜಾಮೀನು ಅರ್ಜಿ ವಜಾಗೊಳಿಸಿ ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್ ಭಾರತಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲೂ ಜಾಮೀನು ಅರ್ಜಿ ವಜಾ ಆಗಿತ್ತು.

    ಅನಾರೋಗ್ಯದ ಕಾರಣ ನೀಡಿ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮತ್ತೆ ಜಿಲ್ಲಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದೀಗ ಮತ್ತೆ ಜಾಮೀನು ಅರ್ಜಿಯನ್ನು ಚಾಮರಾಜನಗರ ಜಿಲ್ಲಾ ನ್ಯಾಯಾಲಯವು ವಜಾ ಮಾಡಿದೆ. ಕಳೆದ 5 ವರ್ಷ 11 ತಿಂಗಳಿಂದ ಇಮ್ಮಡಿ ಮಹದೇವಸ್ವಾಮಿ ಜೈಲಿನಲ್ಲಿದ್ದಾರೆ.

    ಮಹದೇಶ್ವರ ಬೆಟ್ಟ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಇಮ್ಮಡಿ ಮಹದೇವಸ್ವಾಮಿ, ಸುಳ್ವಾಡಿ ಕಿಚ್‌ಗುತ್ ಮಾರಮ್ಮ ದೇವಸ್ಥಾನದ ಆಡಳಿತದಲ್ಲಿ ಅಧಿಪತ್ಯ ಸ್ಥಾಪಿಸಲು ಪಿತೂರಿ ನಡೆಸಿದ್ದರು. ಮತ್ತೊಂದು ಗುಂಪಿಗೆ ಕೆಟ್ಟ ಹೆಸರು ತರಲು ಪ್ರಸಾದಕ್ಕೆ ವಿಷ ಬೆರೆಸಿದ್ದ ಆರೋಪ ಕೇಳಿಬಂದಿತ್ತು.

    2018ರ ಡಿ.14 ರಲ್ಲಿ ನಡೆದ ಘಟನೆಯಲ್ಲಿ 17 ಮಂದಿ ಭಕ್ತರು ಮೃತಪಟ್ಟಿದ್ದರು. 127 ಮಂದಿ ಅಸ್ವಸ್ಥಗೊಂಡಿದ್ದರು. ಸದ್ಯ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿ, ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ದೇವಸ್ಥಾನದ ವ್ಯವಸ್ಥಾಪಕ ಮಾದೇಶ್, ನಾಲ್ಕನೇ ಆರೋಪಿ ತಂಬಡಿ ದೊಡ್ಡಯ್ಯ ಮೈಸೂರಿನ ಜೈಲಿನಲ್ಲಿದ್ದಾರೆ.

  • ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿಗಳ ಪರ ಮಡಿಕೇರಿ ವಕೀಲ ವಕಾಲತ್ತು

    ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿಗಳ ಪರ ಮಡಿಕೇರಿ ವಕೀಲ ವಕಾಲತ್ತು

    – ಜಾಮೀನು, ಪ್ರಕರಣ ವಿಚಾರಣೆ ಜ.29ಕ್ಕೆ

    ಚಾಮರಾಜನಗರ: ಸುಳ್ವಾಡಿಯ ಮಾರಮ್ಮ ದೇವಿ ಪ್ರಸಾದಕ್ಕೆ ವಿಷಬೆರೆಸಿ 17 ಜನ ಅಮಾಯಕರನ್ನು ಬಲಿ ಪಡೆದ ಪ್ರಕರಣದ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಪರ ವಕಾಲತ್ತು ವಹಿಸಲು ಮಡಿಕೇರಿ ಮೂಲದ ವಕೀಲರು ಮುಂದಾಗಿದ್ದಾರೆ.

    ಮಡಿಕೇರಿ ಮೂಲದ ವಕೀಲ ಅಪ್ಪಣ್ಣ, ತಮ್ಮ ಕಿರಿಯ ವಕೀಲರಾದ ಸುದೇಶ್ ಹಾಗೂ ಲೋಹಿತ್ ಎಂಬವರ ಮೂಲಕ ಇಂದು ಇಮ್ಮಡಿ ಮಹದೇವಸ್ವಾಮಿ ಪರ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಚಾಮರಾಜನಗರ ಜಿಲ್ಲಾ ನ್ಯಾಯಲಯದಲ್ಲಿ ಜನವರಿ 29ಕ್ಕೆ ನಡೆಯುವ ವಿಚಾರಣೆ ಮುನ್ನವೇ ಜಾಮೀನು ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ ಅರ್ಜಿ ಬರುತ್ತಿದ್ದಂತೆ, ಅದಕ್ಕೆ ತಕರಾರು ಅರ್ಜಿ ಸಲ್ಲಿಸಲು ಸರ್ಕಾರಿ ಅಭಿಯೋಜಕರು ಕಾಲಾವಕಾಶ ಕೇಳಿದ್ದಾರೆ. ಇದನ್ನು ಓದಿ: ವಿಷ ಪ್ರಸಾದ ಪ್ರಕರಣ- ದೇವಸ್ಥಾನದ ಆವರಣದಲ್ಲಿ ಭಕ್ತೆಯ ಗೋಳಾಟ

    ಸರ್ಕಾರಿ ಅಭಿಯೋಜಕರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಜನವರಿ 29ರಂದು ಪ್ರಕರಣದ ವಿಚಾರಣೆ ಜೊತೆಗೆ ಜಾಮೀನು ವಿಚಾರಣೆ ನಡೆಸಲಾಗುತ್ತದೆ ಎಂದು ನ್ಯಾಯಾಧೀಶರಾದ ಬಸವರಾಜು ತಿಳಿಸಿದ್ದಾರೆ. ಈ ಮಧ್ಯೆ ಆರೋಪಿಗಳ ಪರ ವಕಾಲತ್ತು ವಹಿಸಬಾರದೆಂಬ ತಮ್ಮ ನಿರ್ಣಯ ಬೆಂಬಲಿಸುವಂತೆ ಮಡಿಕೇರಿ ವಕೀಲರಿಗೆ ಮನವಿ ಸಲ್ಲಿಸಲು ಚಾಮರಾಜನಗರ ವಕೀಲರ ಸಂಘ ನಿರ್ಧರಿಸಿದೆ. ಇದನ್ನು ಓದಿ: ಅಂಬಿಕಾ ಮನೆ ಬಾಡಿಗೆಯಲ್ಲೂ ಮಧ್ಯಸ್ಥಿಕೆ ವಹಿಸಿದ್ದ ಇಮ್ಮಡಿ ಮಹದೇವ ಸ್ವಾಮೀಜಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊನೆಗೂ ವಿಷ ಹಾಕಿದ ಪಾಪಿ ಪತ್ತೆ – ಋಣ ತೀರಿಸಲು ಹೋಗಿ 15 ಮಂದಿ ಬಲಿ ಪಡೆದ ಅರ್ಚಕ

    ಕೊನೆಗೂ ವಿಷ ಹಾಕಿದ ಪಾಪಿ ಪತ್ತೆ – ಋಣ ತೀರಿಸಲು ಹೋಗಿ 15 ಮಂದಿ ಬಲಿ ಪಡೆದ ಅರ್ಚಕ

    ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ದುರಂತ ಪ್ರಕರಣವೂ ಹೊಸ ತಿರವು ಪಡೆದುಕೊಂಡಿದ್ದು ಉದ್ಯೋಗ ನೀಡಿದ್ದ ಋಣ ತೀರಿಸಲು ನಾನೇ ವಿಷ ಹಾಕಿದ್ದೇನೆ ಎಂದು ಆರೋಪಿ ದೊಡ್ಡಯ್ಯ ತಪ್ಪೊಪ್ಪಿಕೊಂಡಿದ್ದಾನೆ.

    ಆರೋಪಿ ದೊಡ್ಡಯ್ಯ ಸುಳ್ವಾಡಿ ಮಾರಮ್ಮ ದೇವಾಲಯದ ಸಮೀಪ ಇರುವ ನಾಗರಕೋವಿ ದೇವಸ್ಥಾನದ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದ. ಈತನನ್ನು ಅರ್ಚಕನಾಗಿ ನೇಮಿಸಿದ್ದೆ ಇಮ್ಮಡಿ ಮಹಾದೇವ ಸ್ವಾಮೀಜಿ. 2 ವರ್ಷದ ಹಿಂದೆ ನಾಗರಕೋವಿ ದೇಗುಲದಲ್ಲಿ ಪೂಜೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಸ್ವಾಮೀಜಿ ಹೇಳಿದಂತೆ ವಿಷ ಹಾಕಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: 5 ಮಂದಿಯ ಕುತಂತ್ರಕ್ಕೆ 15 ಮಂದಿ ಬಲಿ – ವಿಷ ಪ್ರಸಾದ ಸ್ಫೋಟಕ ಸತ್ಯ ರಿವೀಲ್

    ಶುಕ್ರವಾರ ಏನಾಯ್ತು?
    ಮಾರಮ್ಮ ದೇಗುಲದ ಅಡುಗೆ ಮಾಡಿದ್ದ ಸ್ಥಳದಿಂದ 100 ಮೀಟರ್ ದೂರದ ಅಂತರದಲ್ಲಿ ಆರೋಪಿ ದೊಡ್ಡಯ್ಯ ತನ್ನ ಯಮಹ ಬೈಕನ್ನು ನಿಲ್ಲಿಸಿದ್ದ. ಬಳಿಕ ಪ್ರಸಾದದಲ್ಲಿ ವಿಷ ಬೆರೆಸಿ ಹೋಗಿದ್ದಾನೆ. ನಂತರ ತನ್ನ ಮೇಲೆ ಅನುಮಾನ ಬಾರದೇ ಇರಲು ಪ್ರಸಾದ ಸೇವಿಸಿದಂತೆ ನಾಟಕವಾಡಿ ಆಸ್ಪತ್ರೆ ಸೇರಿದ್ದ. ಆದರೆ ವೈದ್ಯರ ಪರೀಕ್ಷೆಯ ವೇಳೆ ದೊಡ್ಡಯ್ಯ ದೇಹದಲ್ಲಿ ವಿಷ ಪ್ರಸಾದ ಸೇವಿಸದೇ ಇರುವ ವಿಚಾರ ಬೆಳಕಿಗೆ ಬಂದಿತ್ತು.

    ಅಷ್ಟೇ ಅಲ್ಲದೇ ಈತನ ವರ್ತನೆಯ ಬಗ್ಗೆ ಅನುಮಾನಗೊಂಡಿದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈ ಕೃತ್ಯವನ್ನು ತಾನು ಎಸಗಿದ್ದು ಯಾಕೆ ಎನ್ನುವುದನ್ನು ತಿಳಿಸಿದ್ದಾನೆ.

    ಸದ್ಯಕ್ಕೆ ವಿಷಮಿಶ್ರಿತ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳನ್ನು ಇಂದು ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮೀಜಿ, ವ್ಯವಸ್ಥಾಪಕ ಮಾದೇಶ್, ಮಾದೇಶನ ಪತ್ನಿ ಅಂಬಿಕಾ, ನಾಗದೇವತೆ ದೇವಾಲಯದ ಅರ್ಚಕ ದೊಡ್ಡಯ್ಯ ಪ್ರಮುಖ ಆರೋಪಿಗಳಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv