Tag: Importance

  • Navratri 2025 Day 9: ಸಿದ್ಧಿ ಕರುಣಿಸಿ ಭಕ್ತರನ್ನು ಕಾಪಾಡುವ ಸಿದ್ಧಿದಾತ್ರಿ ದೇವಿ

    Navratri 2025 Day 9: ಸಿದ್ಧಿ ಕರುಣಿಸಿ ಭಕ್ತರನ್ನು ಕಾಪಾಡುವ ಸಿದ್ಧಿದಾತ್ರಿ ದೇವಿ

    ವರಾತ್ರಿಯ ಒಂಬತ್ತನೇ ದಿನ ಅಂದರೆ ಮಹಾನವಮಿಯ ದಿನ ದುರ್ಗಾ ದೇವಿಯ ಒಂಬತ್ತನೇ ರೂಪವಾದ ದೇವಿ ಸಿದ್ಧಿದಾತ್ರಿಗೆ ಸಮರ್ಪಿತವಾಗಿದೆ. ಸಿದ್ಧಿದಾತ್ರಿ ದೇವಿಯು ತನ್ನ ಎರಡು ಕೈಗಳಲ್ಲಿ ಗದಾ ಮತ್ತು ಚಕ್ರವನ್ನು ಹೊಂದಿದ್ದಾಳೆ. ಇನ್ನೆರಡು ಕೈಗಳಲ್ಲಿ ಕಮಲ ಮತ್ತು ಶಂಕು ಹಿಡಿದಿದ್ದಾಳೆ.

    ಸಿದ್ಧಿದಾತ್ರಿಯ ಮಹತ್ವ:
    ಸಿದ್ಧಿದಾತ್ರಿ ದೇವಿಯು ಎಲ್ಲಾ ಸಿದ್ಧಿಗಳ ಮೂಲ. ಆಕೆ ಎಲ್ಲಾ ಎಂಟು ಅಷ್ಟಸಿದ್ಧಿಗಳನ್ನು ಹೊಂದಿದ್ದಾಳೆ. ದೇವಿಯ ಆರಾಧನೆಯು ಸಹಸ್ರಾರ ಚಕ್ರವನ್ನು ಪ್ರಚೋದಿಸುತ್ತದೆ. ಇದನ್ನು ಕಿರೀಟ ಚಕ್ರ ಎಂದೂ ಕರೆಯುತ್ತಾರೆ. ಹಿಂದೂ ಶಾಸನಗಳ ಪ್ರಕಾರ, ಅವಳು ತನ್ನ ಭಕ್ತರಿಗೆ ಅದೃಷ್ಟವನ್ನು ಆಶೀರ್ವದಿಸುತ್ತಾಳೆ ಮತ್ತು ಅವರಿಗೆ ಮೋಕ್ಷವನ್ನು ಒದಗಿಸುತ್ತಾಳೆ.

    ಸಿದ್ಧಿ ಎಂದರೆ ಅಲೌಕಿಕ ಶಕ್ತಿ ಅಥವಾ ಸೃಷ್ಟಿ, ಅಸ್ತಿತ್ವದ ಅಂತಿಮ ಮೂಲದ ಅರ್ಥವನ್ನು ಸಾಧಿಸುವ ಸಾಮರ್ಥ್ಯ. ದಾತ್ರಿ ಎಂದರೆ ಕೊಡುವುದು. ತಾಯಿಯನ್ನು ಪೂಜೆ ಮಾಡಿದರೆ ನಿಜವಾದ ಅಸ್ತಿತ್ವವನ್ನು ಅರಿತುಕೊಳ್ಳುವ ಶಕ್ತಿ ಪ್ರಾಪ್ತಿಯಾಗುತ್ತದೆ. ತಾಯಿಯ ಆರಾಧನೆಯು ನಮ್ಮ ಮನಸ್ಸಿನಲ್ಲಿರುವ ಅಜ್ಞಾನವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಪುರಾಣ ಗ್ರಂಥಗಳ ಪ್ರಕಾರ ಜಗತ್ತಿನ ಎಂಟು ಸಿದ್ಧಿಗಳೆಂದರೆ ಅನಿಮಾ, ಮಹಿಮಾ, ಗರಿಮಾ, ಲಘಿಮಾ, ಪ್ರಾಪ್ತಿ, ಪ್ರಕ್ಯಾಮ್ಯ, ಇನ್ಶಿತ್ವ, ವಶಿತ್ವ. ನವದುರ್ಗೆಗಳಲ್ಲಿ ತಾಯಿ ಸಿದ್ಧಿದಾತ್ರಿಯು ಈ ಎಲ್ಲ ಅದ್ಭುತ ಅಂಶಗಳನ್ನು ಹೊಂದಿದ್ದಾಳೆ.

    ಪುರಾಣದ ಕಥೆಗಳ ಪ್ರಕಾರ ತಾಯಿ ಸಿದ್ಧಿದಾತ್ರಿಯಿಂದ ಆಶೀರ್ವಾದ ಪಡೆದ ಶಿವನು ಆಕೆಯಿಂದ ಎಂಟು ಸಿದ್ಧಿಗಳನ್ನು ಪಡೆದ ಎಂದು ಹೇಳಲಾಗುತ್ತದೆ. ಬ್ರಹ್ಮಾಂಡದ ಸೃಷ್ಟಿಯ ವೇಳೆ ಶಿವನು ಪರಾಕಾಷ್ಟೆಯನ್ನು ಆರಾಧಿಸಿದನು. ಎಷ್ಟೇ ಆರಾಧಿಸದರೂ ಶಕ್ತಿ ದೇವತೆ ಪ್ರತ್ಯಕ್ಷಳಾಗಲಿಲ್ಲ. ನಂತರ ಆಕೆಯು ಶಿವನ ಎಡ ಭಾಗದ ಅರ್ಧದಲ್ಲಿ ಕಾಣಿಸಿಕೊಂಡಳು. ಅಂದಿನಿಂದ ಪರಶಿವನು ಅರ್ಧನಾರೀಶ್ವರ ಎಂಬ ಇನ್ನೊಂದು ಹೆಸರಿನಿಂದ ಗುರುತಿಸಿಕೊಂಡನು ಎಂದು ಹೇಳಲಾಗುತ್ತದೆ.

  • Navratri 2025 Day 5: ಈ ದಿನ ಸ್ಕಂದಮಾತೆ ಪೂಜೆ ನೆರವೇರಿಸಿದ್ರೆ ಏನು ಲಾಭ?

    Navratri 2025 Day 5: ಈ ದಿನ ಸ್ಕಂದಮಾತೆ ಪೂಜೆ ನೆರವೇರಿಸಿದ್ರೆ ಏನು ಲಾಭ?

    ಗನ್ಮಾತೆ ದುರ್ಗೆಯ ಐದನೇ ಸ್ವರೂಪವನ್ನು ಸ್ಕಂದಮಾತಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ವಾಸ್ತವಿಕವಾಗಿ ಇದು ಜಗತ್ ಕಲ್ಯಾಣ ರೂಪ. ತಾರಕಾಸುರನ ಉಪಟಳದಿಂದ ದೇವತೆಗಳು, ಭೂಮಿಯ ಜನರು ದುಃಖಪೀಡಿತರಾಗಿರುತ್ತಾರೆ. ತಾರಕಾಸುರನು ಬ್ರಹ್ಮನ ವರಬಲದಿಂದ ಕೊಬ್ಬಿರುತ್ತಾನೆ. ಶಿವ ಪಾರ್ವತಿಯರ ಕಂದನಿಂದ ಮಾತ್ರವೇ ತನಗೆ ಮರಣ ಎಂದು ಅವನು ವರ ಪಡೆದಿರುತ್ತಾನೆ. ಹಾಗಾಗಲು ಸಾಧ್ಯವಿಲ್ಲ ಎಂಬುದು ಅವನ ಎಣಿಕೆ. ಆದರೆ ಪಾರ್ವತಿ ಹಾಗೂ ಶಿವನ ಮದುವೆಯಾದ ಬಳಿಕ, ಸ್ಕಂದ ಅಥವಾ ಷಣ್ಮುಖನು ಜನ್ಮ ತಾಳುತ್ತಾನೆ. ಷಣ್ಮುಖನನ್ನೇ ತಮ್ಮ ದೇವಸೈನ್ಯಕ್ಕೆ ದೇವತೆಗಳು ಸೇನಾನಿಗಳಾಗಿಸಿಕೊಳ್ಳುತ್ತಾರೆ. ದೇವಿಯೂ ಸೇರಿದಂತೆ ಸರ್ವರೂ ಈತನಿಗೆ ತಮ್ಮ ಶಕ್ತಿಗಳನ್ನು ನೀಡುತ್ತಾರೆ. ಸ್ಕಂದನು ದೇವಸೇನಾ ಸಮೇತನಾಗಿ ತೆರಳಿ, ತಾರಕಾಸುರನನ್ನು ಘೋರ ಯುದ್ಧದಲ್ಲಿ ಕೊಂದು ಮರಳುತ್ತಾನೆ. ಹೀಗೆ ಜಗತ್ಕಲ್ಯಾಣಕಾರಕನಾದ ಸ್ಕಂದನನ್ನು ಹೆತ್ತು ಕೊಟ್ಟ ಈಕೆ ಸ್ಕಂದಮಾತೆ ಎನಿಸಿಕೊಳ್ಳುತ್ತಾಳೆ.

    ಸ್ಕಂದ ಮಾತೆಯು ಬುಧಗ್ರಹದ ಮೇಲೆ ಅಧಿಪತ್ಯವನ್ನು ಹೊಂದಿರುತ್ತಾಳೆ. ಶುದ್ಧಮನಸ್ಸಿನಿಂದ, ಭಕ್ತಿಯಿಂದ ಯಾರು ಆರಾಧನೆ ಮಾಡುತ್ತಾರೋ ಅವರಿಗೆ ದೇವಿಯು ಹೆಸರು, ಸಂಪತ್ತು ಹಾಗೂ ಸಮೃದ್ಧಿಯನ್ನು ನೀಡುತ್ತಾಳೆ. ಜನ್ಮ ಕುಂಡಲಿಯಲ್ಲಿ ಬುಧನು ಪ್ರತಿಕೂಲ ಸ್ಥಾನದಲ್ಲಿದ್ದರೆ ಉಂಟಾಗುವ ತೊಂದರೆಯನ್ನು ದೇವಿಯು ನಿವಾರಿಸುತ್ತಾಳೆ.

    ಸ್ಕಂದ ಮಾತೆಯ ರೂಪ:
    ಸ್ಕಂದ ಮಾತೆಗೆ ನಾಲ್ಕು ಭುಜಗಳಿದ್ದು, ಒಂದು ಕೈಯಲ್ಲಿ ಸ್ಕಂದನನ್ನು ಹಾಗೂ ಎರಡು ಕೈಯಲ್ಲಿ ಕಮಲವನ್ನು ಹಿಡಿದಿರುತ್ತಾಳೆ. ಇನ್ನೊಂದು ಹಸ್ತವು ಅಭಯ ಮುದ್ರೆಯಲ್ಲಿದ್ದು, ಸದಾ ತನ್ನ ಭಕ್ತರಿಗೆ ಆಶೀರ್ವಾದ ಮಾಡುತ್ತಾಳೆ. ಇವಳ ಶರೀರದ ಬಣ್ಣವೂ ಸಂಪೂರ್ಣವಾಗಿ ಬೆಳ್ಳಗಿದ್ದು, ಕಮಲದ ಆಸನದಲ್ಲಿ ವಿರಾಜಮಾನಳಾಗಿದ್ದಾಳೆ. ಈ ಕಾರಣಕ್ಕಾಗಿ ಇವಳನ್ನು ಪದ್ಮಾಸನಾ ದೇವಿ ಎಂದು ಕರೆಯುತ್ತಾರೆ. ಸಿಂಹವು ಸ್ಕಂದಮಾತೆಯ ವಾಹನವಾಗಿದೆ.

    ಸ್ಕಂದ ಮಾತೆಯ ಪೂಜಾ ವಿಧಾನ:
    ಈ ದಿನ ಸ್ಕಂದಮಾತಾ ದೇವಿಗೆ ಹಸಿರು ಬಣ್ಣ ನೆಚ್ಚಿನದ್ದು ಎಂದು ಪರಿಗಣಿಸಲಾಗುತ್ತದೆ. ಹಸಿರು ಬಣ್ಣವು ಬೆಳವಣಿಗೆ ಮತ್ತು ಸಾಮರಸ್ಯವನ್ನ ಪ್ರತಿನಿಧಿಸುತ್ತದೆ. ಇದು ಶಾಂತಿಯ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹೀಗಾಗಿ ಹಬ್ಬದ ಸಮಯದಲ್ಲಿ ಸಮತೋಲನ ಮತ್ತು ಗುಣಪಡಿಸುವಿಕೆಯನ್ನು ಸಾಧಿಸಲು ಬಯಸುವವರಿಗೆ ಪರಿಪೂರ್ಣ ಬಣ್ಣವಾಗಿದೆ.

    ನವರಾತ್ರಿಯ ಐದನೇ ದಿನದಂದು ಸ್ಕಂದಮಾತೆಯ ಪೂಜೆ ಮಾಡಿದರೆ ಮನಃಶುದ್ಧಿಯಾಗುವುದು. ದೇವಿಯು ಬುದ್ಧಿಶಕ್ತಿ ಹೆಚ್ಚುವಂತೆ ಆಶೀರ್ವಾದ ಮಾಡುತ್ತಾಳೆ. ಈ ದೇವಿಯ ಆರಾಧನೆಯಿಂದ ಭಕ್ತರು ಯಶಸ್ಸು ಹಾಗೂ ಖ್ಯಾತಿಯನ್ನು ಪಡೆಯುತ್ತಾರೆ. ಅಲ್ಲದೇ ಯಶಸ್ಸಿನ ಹಾದಿಯಲ್ಲಿ ಮುಂದುವರಿಯುತ್ತಾರೆ.

  • ಮಹಾಶಿವರಾತ್ರಿ  ಹಬ್ಬದ ದಿನ ಉಪವಾಸ ಏಕೆ ಮಾಡ್ತಾರೆ?

    ಮಹಾಶಿವರಾತ್ರಿ ಹಬ್ಬದ ದಿನ ಉಪವಾಸ ಏಕೆ ಮಾಡ್ತಾರೆ?

    ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ.  ಸೋಮವಾರ ಶಿವನಿಗೆ ಬಹಳ ಇಷ್ಟವಾದ ದಿನ. ಆದರೆ ಈ ಬಾರಿ ಹಬ್ಬ ಮಂಗಳವಾರ ಬಂದಿದೆ.

    ಶಿವನ ಪೂಜೆ ಮಾಡುವುದು ಹೇಗೆ:
    ಮಹಾಶಿವರಾತ್ರಿ ದಿನ ಹಸುವಿನ ತುಪ್ಪದ ಜೊತೆ ಕರ್ಪೂರವನ್ನು ಬೆರೆಸಿ ಮೃತ್ಯುಂಜಯ ಮಂತ್ರವನ್ನು ಪಠಿಸಬೇಕು. ಈ ದಿನ ರುದ್ರಾಕ್ಷಿಯ ಮಾಲೆ ಧರಿಸಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ. ಹಸಿ ಹಾಲಿನಲ್ಲಿ ಗಂಗಾ ಜಲವನ್ನು ಬೆರೆಸಿ ಶಿವನಿಗೆ ಅಭಿಷೇಕ ಮಾಡಬೇಕು. ನಂತರ ಚಂದನ, ಹೂ, ದೀಪ ಹಾಗೂ ಧೂಪ ಹಚ್ಚಿ ಪೂಜೆ ಮಾಡಬೇಕು.

    ವ್ರತದ ಮಹತ್ವ:
    ಮಹಾಶಿವರಾತ್ರಿ ಹಬ್ಬದಂದು ವ್ರತ ಮಾಡುವುದರಿಂದ ಪಾಪ ದೂರ ಆಗುತ್ತದೆ ಹಾಗೂ ಆತ್ಮ ಶುದ್ಧ ಆಗುತ್ತದೆ. ಎಲ್ಲೆಲ್ಲಿ ಶಿವಲಿಂಗವನ್ನು ಸ್ಥಾಪಿಸಲಾಗುತ್ತದೋ ಅಲ್ಲಿ ಶಿವ ಖಂಡಿತವಾಗಿಯೂ ಇರುತ್ತಾನೆ ಎಂಬುದು ಜನರ ನಂಬಿಕೆ. ಮಹಾಶಿವರಾತ್ರಿ ಇಡೀ ದಿನ ಶ್ರದ್ಧೆಯಿಂದ ವ್ರತ ಮಾಡಿದರೆ, ಶಿವ ಎಲ್ಲ ಕಷ್ಟಗಳನ್ನು ದೂರ ಮಾಡುತ್ತಾನೆ ಎನ್ನುವ ನಂಬಿಕೆಯಿದೆ. ಮಹಾಶಿವರಾತ್ರಿ ದಿನ ಮಾಡುವ ವ್ರತ ಪ್ರಭಾವಶಾಲಿ ಎಂದು ಹಿರಿಯರು ಹೇಳುತ್ತಾರೆ.

    ಶಿವನನ್ನು ಪ್ರಸನ್ನಗೊಳಿಸಲು ಮಹಾಶಿವರಾತ್ರಿ ಇಡೀ ದಿನ ಜನರು ಉಪವಾಸವಿರುತ್ತಾರೆ. ಕೆಲವರು ಇಡೀ ದಿನ ಅನ್ನ ಹಾಗೂ ನೀರು ಸೇವಿಸದೇ ಉಪವಾಸ ಮಾಡಿದರೆ, ಮತ್ತೆ ಕೆಲವರು ಹಣ್ಣು, ಡ್ರೈ ಫ್ರೂಟ್ಸ್ ಮಾತ್ರ ಸೇವಿಸುತ್ತಾರೆ.