Tag: imprisonment

  • ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ಪ್ರಕಟ

    ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ಪ್ರಕಟ

    ನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ  ಪ್ರಕಟಿಸಿದೆ. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಪ್ರಕರಣದಲ್ಲಿ ಜಯಪ್ರದಾಗೆ ಸೋಲಾಗಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ, ಸಿನಿಮಾ ಪ್ರದರ್ಶಕಿಯೂ ಹೌದು. ಚೆನ್ನೈನಲ್ಲೇ ಇವರ ಹೆಸರಿನಲ್ಲಿ ಎರಡು ಚಿತ್ರಮಂದಿರಗಳಿವೆ. ಈ ಎರಡು ಚಿತ್ರ ಮಂದಿರಗಳಲ್ಲಿ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಇ.ಎಸ್.ಐ ಹಣವನ್ನು ಕಡಿತ ಮಾಡಿಕೊಂಡು ಕಾರ್ಮಿಕ ಇಲಾಖೆಗೆ ಅದನ್ನು ಪಾವತಿಸಿಲ್ಲ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

    ಈಗಾಗಲೇ ಅವರು ಮಾಲೀಕರಾಗಿರುವ ಆ ಎರಡೂ ಚಿತ್ರಮಂದಿರಗಳ ಮೇಲೆ ಕೇಸ್ ದಾಖಲಾಗಿದೆ. ಆಸ್ತಿ ತೆರಿಗೆಯನ್ನು ಕಟ್ಟದೇ ಇರುವ ಕಾರಣಕ್ಕಾಗಿ ಜಪ್ತಿ ಕೂಡ ಮಾಡಲಾಗಿದೆ. ಆದರೂ ಇ.ಎಸ್.ಐ ಕಟ್ ಮಾಡಿಯೂ ಕಾರ್ಮಿಕ ಇಲಾಖೆಗೆ ಅವರು ಪಾವತಿ ಮಾಡಿರಲಿಲ್ಲ ಎನ್ನುವುದು ಅಧಿಕಾರಿಗಳ ಆರೋಪವಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾ ಪೈರಸಿ ಮಾಡಿದರೆ 3 ವರ್ಷ ಜೈಲೂಟ ಫಿಕ್ಸ್: ಸಚಿವ ಠಾಕೂರ್

    ಸಿನಿಮಾ ಪೈರಸಿ ಮಾಡಿದರೆ 3 ವರ್ಷ ಜೈಲೂಟ ಫಿಕ್ಸ್: ಸಚಿವ ಠಾಕೂರ್

    ಲವಾರು ವರ್ಷಗಳಿಂದ ಪೈರಸಿ (Piracy) ಹಾವಳಿಗೆ ಚಿತ್ರೋದ್ಯಮ ನಲುಗಿ ಹೋಗಿತ್ತು. ಪೈರಸಿಯನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಸರಕಾರಗಳನ್ನು ಚಿತ್ರೋದ್ಯಮ ಒತ್ತಾಯಿಸುತ್ತಲೇ ಬಂದಿತ್ತು. ಇದೀಗ ಪೈರಸಿ ಕಡಿವಾಣಕ್ಕೆ ಕೇಂದ್ರ ಸರಕಾರ ಮುಂದಾಗಿದೆ. ಭಾರೀ ಮೊತ್ತದ ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸುವಂತಹ ಬಿಲ್ ಅನ್ನೂ ಪಾಸು ಮಾಡಿದೆ.

    ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಲೋಕಸಭೆಯಲ್ಲಿ ‘ಸಿನಿಮಾಟೋಗ್ರಫಿ ಬಿಲ್ 2023 (Cinematography Bill 2023) ಅನ್ನು ಮಂಡಿಸುವ ವೇಳೆ ಪೈರಸಿ ಮಾಡುವವರಿಗೆ ಇನ್ಮುಂದೆ ಕೋಟಿಗಟ್ಟಲೆ ದಂಡ ಹಾಕಲು ನಿರ್ಧರಿಸಿರುವ ಕುರಿತು ವಿವರಣೆ ನೀಡಿದರು. ಯಾವುದೇ ಸಿನಿಮಾವನ್ನು ಪೈರಸಿ ಮಾಡಿದರೆ, ಸಿನಿಮಾಗೆ ಆದ ಖರ್ಚಿನ ಶೇಕಡಾ 5ರಷ್ಟು ದಂಡ ಹಾಕಲಾಗುವುದು ಎಂದಿದ್ದಾರೆ.

     

    ‘ಚಿತ್ರರಂಗದ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸುತ್ತಿದ್ದೇವೆ. ಸಿನಿಮಾ ಪೈರಸಿ ಮಾಡಿದರೆ ಭಾರೀ ಮೊತ್ತದ ದಂಡದ ಜೊತೆಗೆ ಮೂರು ವರ್ಷಗಳ ಜೈಲು ಶಿಕ್ಷೆ ಕೂಡ ವಿಧಿಸಲಾಗುವುದು. ಅಲ್ಲದೇ, ಪೈರಸಿ ಮಾಡುವ ವೆಬ್ ಸೈಟ್ ಗಳನ್ನು ಬ್ಲಾಕ್ ಮಾಡಲಾಗುವುದು. ಅಲ್ಲದೇ ಸೆನ್ಸಾರ್ (Censorship)ಪತ್ರದಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ’ ಎಂದರು ಅನುರಾಗ್ ಠಾಕೂರ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ: ನಾವೂ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದ ನಟಿ

    ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ: ನಾವೂ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದ ನಟಿ

    ತ್ತಿಗೆಗೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿ ಅಭಿನಯಗೆ ನಿನ್ನೆಯಷ್ಟೇ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಭಿನಯ ಅವರ ಸಹೋದರನ ಪತ್ನಿ ಲಕ್ಷ್ಮಿದೇವಿ ಅನ್ನುವವರು ಅಭಿನಯ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ಅಭಿನಯ ಅವರಿಗೆ 2 ವರ್ಷ ಮತ್ತು ಅವರ ತಾಯಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಭಿನಯ, ‘ಇದು ಇಪ್ಪತ್ತು ವರ್ಷದ ಕೇಸು. ಕಳೆದ ಬಾರಿ ತೀರ್ಪು ನಮ್ಮಂತೆ ಆಗಿತ್ತು. ಇದೀಗ ಅವರಂತೆ ಆಗಿದೆ. ನಾವು ಕಾನೂನು ಸಮರವನ್ನು ಮುಂದುವರೆಸುತ್ತೇವೆ. ಲಕ್ಷ್ಮಿದೇವಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಾನೂನು ಹೋರಾಟ ಮುಂದುವರೆಯುತ್ತದೆ, ಮುಂದೇನಾಗತ್ತೋ ನೋಡೋಣ’ ಎಂದಿದ್ದಾರೆ. ಅತ್ತಿಗೆ ಮಾಡಿರುವ ಎಲ್ಲ ಆರೋಪಗಳನ್ನೂ ಈ ಸಂದರ್ಭದಲ್ಲಿ ಅವರು ತಳ್ಳಿ ಹಾಕಿದ್ದಾರೆ.  ಇದನ್ನೂ ಓದಿ: ಜಗ್ಗೇಶ್ ನಟನೆ `ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಬಗ್ಗೆ ಸ್ಪಷ್ಟನೆ ನೀಡಿದ ಸಂತೋಷ್‌ ಆನಂದ್‌ರಾಮ್

    ಏನಿದು ಪ್ರಕರಣ? : ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ.

    ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ ನರಕವನ್ನೂ ಅನುಭವಿಸಿದೆ. ತಿನ್ನೋಕೆ ಒಂದ್ ರೊಟ್ಟಿ, ಸ್ನಾನ ಮಾಡೋಕೆ ಒಂದ್ ಬಕೆಟ್ ನೀರು ಜೊತೆಗೆ ಪರಪುರುಷನ ಜೊತೆ ಸಹಕರಿಸು ಅಂತ ಚಿತ್ರಹಿಂಸೆ ಕೊಡುತ್ತಿದ್ದರು. ಪರಪುರುಷನನ್ನು ಮನೆಗೂ ಕರೆದುಕೊಂಡು ಬರುತ್ತಿದ್ದರು. ಅಭಿನಯ ಚಿತ್ರ ನಟಿಯಾದರೂ, ಅವರು ನನ್ನ ನೆರವಿಗೆ ಬರಲಿಲ್ಲ. ಅವರೂ ಕೂಡ ಹಿಂಸೆ ಕೊಟ್ಟರು ಎಂದು ಮಾತನಾಡಿದ್ದಾರೆ ಲಕ್ಷ್ಮಿದೇವಿ. ಇದನ್ನೂ ಓದಿ: ಕೊನೆಗೂ ಹೊರಬಿತ್ತು ಕೆ.ಎಲ್ ರಾಹುಲ್ -ಅಥಿಯಾ ಮದುವೆ ಡೇಟ್

    ಏನಿದು ಪ್ರಕರಣ?
    ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಅನುಭವ ಸಿನಿಮಾದ ಖ್ಯಾತನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

    ಅನುಭವ ಸಿನಿಮಾದ ಖ್ಯಾತನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

    ನ್ನಡ ಸಿನಿಮಾ ಮತ್ತು ಕಿರುತೆರೆ ನಟಿ ಅಭಿನಯಗೆ ಹೈಕೋರ್ಟ್ ಏಕಸದಸ್ಯ ಪೀಠವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

    ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು. ಇದನ್ನೂ ಓದಿ: ಮಹಾಲಕ್ಷ್ಮಿ ಮದುವೆಗೆ ಶತದಿನೋತ್ಸವ: ಹೆಂಡ್ತಿಗೆ ಹ್ಯಾಪಿ ಕ್ರೆಡಿಟ್ ಕೊಟ್ಟ ರವೀಂದ್ರ

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ನಿದ್ದೆಯಿಂದ ಎಬ್ಬಿಸಿದಕ್ಕೆ ಪೊಲೀಸರನ್ನ ಅಸಭ್ಯವಾಗಿ ನಿಂದಿಸಿದ ವ್ಯಕ್ತಿಗೆ 1 ವರ್ಷ, 7 ತಿಂಗಳು ಜೈಲು

    ನಿದ್ದೆಯಿಂದ ಎಬ್ಬಿಸಿದಕ್ಕೆ ಪೊಲೀಸರನ್ನ ಅಸಭ್ಯವಾಗಿ ನಿಂದಿಸಿದ ವ್ಯಕ್ತಿಗೆ 1 ವರ್ಷ, 7 ತಿಂಗಳು ಜೈಲು

    ಮುಂಬೈ:  ಪೊಲೀಸರು ವ್ಯಕ್ತಿಯೊಬ್ಬನನ್ನು ನಿದ್ದೆಯಿಂದ ಎಬ್ಬಿಸಿದಕ್ಕೆ ಆತ ಬಾಯಿಗೆ ಬಂದ ರೀತಿ ಬೈದಿದ್ದಾನೆ. ಈ ಹಿನ್ನೆಲೆ ಮುಂಬೈ ಕೋರ್ಟ್ ಆತನಿಗೆ 1 ವರ್ಷ, 7 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

    ಮುಂಬೈನ ರೈಲ್ವೆ ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿ ನಿದ್ದೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಎಬ್ಬಿಸಿ ಹೊರಹೋಗುವಂತೆ ತಿಳಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ವ್ಯಕ್ತಿಯೂ ಪೊಲೀಸರನ್ನು ನಿಂದಿಸಿದ್ದಾನೆ. ಈ ಹಿನ್ನೆಲೆ ಮುಂಬೈ ಸೆಷನ್ಸ್ ನ್ಯಾಯಾಲಯವು ಆ ವ್ಯಕ್ತಿಗೆ 1 ವರ್ಷ, 7 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

    KILLING CRIME

    ನಡೆದಿದ್ದೇನು?
    2020ರಲ್ಲಿ ನವೆಂಬರ್ 11 ರಂದು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(CSMT) ನಲ್ಲಿ ಕೆಲವು ಪೊಲೀಸರು ಗಸ್ತು ಕರ್ತವ್ಯದಲ್ಲಿದ್ದರು. 15ನೇ ಪ್ಲಾಟ್‍ಫಾರ್ಮ್‍ನಲ್ಲಿ ಒಬ್ಬ ವ್ಯಕ್ತಿ ಮಲಗಿದ್ದ. ಅವನನ್ನು ನೋಡಿದ ಪೊಲೀಸರು ಎಬ್ಬಿಸಲು ಪ್ರಯತ್ನಿಸಿ, ಅಲ್ಲಿಂದ ಹೋಗುವಂತೆ ಹೇಳಿದರು. ಆದರೆ, ಆ ವ್ಯಕ್ತಿ ಅವರ ಮೇಲೆ ಕೂಗಾಡಿದನಲ್ಲದೆ, ಅಸಭ್ಯ ಪದಗಳಿಂದ ನಿಂದಿಸಿದ್ದಾನೆ. ಆ ವ್ಯಕ್ತಿ, ಇದು ನಿಮ್ಮ ತಂದೆಯ ನಿಲ್ದಾಣವೇ? ನಾನು ಇಲ್ಲೇ ಮಲಗುತ್ತೇನೆ, ಇಲ್ಲಿಂದ ಹೋಗುವುದಿಲ್ಲ, ನಿನಗೆ ಏನು ಬೇಕೋ ಅದನ್ನು ಮಾಡು ಎಂದು ಸವಾಲು ಹಾಕಿದ್ದಾನೆ. ಇದನ್ನೂ ಓದಿ: ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ 

    ವ್ಯಕ್ತಿ ಮಾತು ಅತೀರೇಕಕ್ಕೆ ಹೋದ ಪರಿಣಾಮ ಆತನನ್ನು ಪೊಲೀಸ್ ಠಾಣೆಗೆ ಕರೆತಂದಿದ್ದು, ಸಾರ್ವಜನಿಕ ಕರ್ತವ್ಯವನ್ನು ನಿರ್ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಅಡ್ಡಿಪಡಿಸಿದ ಹಿನ್ನೆಲೆ ಎಫ್‍ಐಆರ್ ದಾಖಲಿಸಲಾಯಿತು.

    ಪೊಲೀಸರು ಸಹ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆಗೆ ಒಳಪಡಿಸಿದರು. ಅಲ್ಲದೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಲವು ಆರೋಪಗಳ ಆಧಾರದ ಮೇಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

    ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

    ಸಿಂಗಾಪುರ: 25 ವರ್ಷದ ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

    2020ರಲ್ಲಿ ಭಾರತೀಯ ಮೂಲದ ಸೂರ್ಯ ಕೃಷ್ಣನ್ ಸಿಂಗಾಪುರದಲ್ಲಿ ವಾಸಿಸುತ್ತಿದ್ದ. ಈತನ ಮನೆಯಲ್ಲಿ ಮ್ಯಾನ್ಮಾರ್ ಮೂಲದ ಮಹಿಳೆ ಕೆಲಸ ಮಾಡುತ್ತಿದ್ದಳು. ಒಂದು ದಿನ ಆಕೆಯನ್ನು ಕೃಷ್ಣನ್ ಹೀನಾಯವಾಗಿ ಥಳಿಸಿದ್ದನು. ಪರಿಣಾಮ ಆಕೆ ಪೊಲೀಸರಿಗೆ, ಕೃಷ್ಣನ್ ಬೇಕೆಂದು ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ನನಗೆ ತಲೆ, ಭುಜ ಮತ್ತು ತೊಡೆಯಲ್ಲಿ ಗಾಯಗಳಾಗಿವೆ ಎಂದು ದೂರು ನೀಡಿದ್ದಳು. ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಧರ್ಮನಿಂದನೆ ಆರೋಪ – ಹಿಂದೂ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪಾಕ್!

    ಸಂತ್ರಸ್ತೆ 27 ವರ್ಷದ ಮ್ಯಾನ್ಮಾರ್ ಪ್ರಜೆಯಾಗಿದ್ದು, ಕೃಷ್ಣನ್ ಅವರ ಸಹೋದರಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಕೃಷ್ಣನ್ ತನ್ನ ಸಹೋದರಿ ಮತ್ತು ಪೋಷಕರೊಂದಿಗೆ ಇಲ್ಲಿನ ಹೌಗಾಂಗ್ ಹೌಸಿಂಗ್ ಎಸ್ಟೇಟ್‍ನಲ್ಲಿರುವ ಫ್ಲಾಟ್‍ನಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ.

    ನಡೆದಿದ್ದು ಏನು?
    ಮೇ 29 2020 ರ ರಾತ್ರಿ, ಕೃಷ್ಣನ್ ಅವರ ಕುಟುಂಬವು ಅಪಾಟ್ರ್ಮೆಂಟ್ ನಲ್ಲಿ ಅವರ ತಂದೆಯ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿತ್ತು. ಹುಟ್ಟುಹಬ್ಬ ಪ್ರಾರಂಭವಾಗುವ ಮೊದಲು, ಕೃಷ್ಣನ್ ಮದ್ಯವನ್ನ ಸೇವಿಸಿ ಅಮಲಿನಲ್ಲಿದ್ದ. ಈ ವೇಳೆ ಕೃಷ್ಣನ್ ತಾಯಿ, ಮನೆಗೆಲಸದವಳಿಗೆ ಜೆಲ್ಲಿ ಮಾಡುವಂತೆ ಹೇಳುತ್ತಾಳೆ. ಆಗ ಆಕೆಯೂ ಅಡುಗೆ ಮನೆಗೆ ಹೋಗಿ ಮಾಡುತ್ತಿರುತ್ತಾಳೆ. ಈ ವೇಳೆ ಬಂದ ಕೃಷ್ಣನ್ ನನಗೂ ಜೆಲ್ಲಿ ಕೊಡು ಎಂದು ಕೇಳಿದ್ದಾನೆ. ಆಗ ಆಕೆ ನೀವು ತುಂಬಾ ತಿಂದ್ದೀರಾ, ಈಗ ಬೇಡ ಎಂದು ಹೇಳುತ್ತಾಳೆ. ಇದನ್ನೂ ಓದಿ: ಚರಂಡಿ ವಿವಾದ ಬಗೆಹರಿಸಲು ಹೋದ ಪೊಲೀಸರಿಗೆ ದೊಣ್ಣೆಯಿಂದ ಥಳಿಸಿದ ಗ್ರಾಮಸ್ಥರು!

    ಕೃಷ್ಣನ್ ತಾಯಿ ಆಕೆಯನ್ನು ಗದರುತ್ತಾನೆ. ಮನೆಗೆಲಸದವಳ ಕೆನ್ನೆಗೆ ಎರಡು-ಮೂರು ಬಾರಿ ಹೊಡೆಯುತ್ತಾನೆ. ಆಕೆ ಕೆಳಗೆ ಬೀಳುತ್ತಾಳೆ. ಮನೆಯವರೆಲ್ಲ ತಡೆದರೂ ಕೃಷ್ಣನ್ ಮನೆಗೆಲಸದವಳ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಆಕೆ ಆಸ್ಪತ್ರೆ ಸೇರಿದ್ದು, ಗಂಭೀರ ಗಾಯವಾಗಿದೆ. ಪರಿಣಾಮ ಆಕೆ ಪೊಲೀಸರಿಗೆ ದೂರನ್ನು ಕೊಟ್ಟಿದ್ದು, ಕೃಷ್ಣನ್ ನನ್ನು ಬಂಧಿಸಿ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

  • ಅತ್ಯಾಚಾರಿ ಪೊಲೀಸ್ ಅಧಿಕಾರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    ಅತ್ಯಾಚಾರಿ ಪೊಲೀಸ್ ಅಧಿಕಾರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    ತುಮಕೂರು: ಬುದ್ದಿಮಾಂಧ್ಯೆ ಯುವತಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1 ಲಕ್ಷ ರೂ ದಂಡವನ್ನು ತುಮಕೂರಿನ ಜಿಲ್ಲಾ ಎರಡನೇ ಹೆಚ್ಚುವರಿ ಅಧಿಕ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

    2017 ಜನವರಿ 15 ರಂದು ತುಮಕೂರಿನ ಮಹಿಳಾ ಠಾಣಾ ಎ.ಎಸ್.ಐ ಉಮೇಶಯ್ಯ ಬುದ್ದಿಮಾಂಧ್ಯೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು. ಬೆಳಗಿನ ಜಾವ ನಾಲ್ಕು ಗಂಟೆಸುಮಾರಿಗೆ ಯುವತಿಗೆ ಡ್ರಾಪ್ ಕೊಡೋ ನೆಪದಲ್ಲಿ ಖಾಸಗಿ ಬೊಲೆರೋ ವಾಹನದಲ್ಲಿ ಅತ್ಯಾಚಾರ ಎಸಗಿದ್ದನು. ಸತತ ಐದು ವರ್ಷಗಳ ವಾದ ಪ್ರತಿವಾದಗಳ ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ಎಎಸ್.ಐ ಉಮೇಶಯ್ಯ ಅಪರಾಧಿ ಎಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಕೊಟ್ಟು ನ್ಯಾಯಾಧೀಶ ಎಚ್ ಎಸ್ ಮಲ್ಲಿಕಾರ್ಜುನ ಸ್ವಾಮಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ವಿ.ಎ.ಕವಿತಾ ಸಂತ್ರಸ್ತೆ ಪರ ವಾದ ಮಂಡಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಘಟನೆ ಹಿನ್ನೆಲೆ: 2017 ಜನವರಿ 14 ಸಂಜೆಯ ವೇಳೆಗೆ ಸಂತ್ರಸ್ತೆ ನೃಪತುಂಗ ಬಡಾವಣೆಯ ಮನೆಯಿಂದ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಿಂದ ಬರುತ್ತಾಳೆ. ಚಿಕ್ಕಪೇಟೆಯ ಕೋಡಿ ಬಸವೇಶ್ವರ ದೇವಸ್ಥಾನದಲ್ಲಿ ತಂಗುತ್ತಾಳೆ. ಅಲ್ಲಿಂದ ಪುನಃ ಮನೆಗೆ ಹೋಗಲು ದಾರಿ ಗೊತ್ತಾಗದೇ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಂತರಸನಹಳ್ಳಿ ಕಡೆಗೆ ನಡೆದುಕೊಂಡು ಹೋಗುತ್ತಿರುತ್ತಾಳೆ.

    ಈ ವೇಳೆ ಕರ್ತವ್ಯ ನಿಮಿತ್ತ ಅಂತರಸನಹಳ್ಳಿ ಬಳಿ ಗಸ್ತು ತಿರುಗುತಿದ್ದ ಎ.ಎಸ್.ಐ ಉಮೇಶ್‍ನ ಕಣ್ಣಿಗೆ ಬೀಳುತ್ತಾಳೆ. ಯುವತಿಯನ್ನು ವಿಚಾರಿಸಿದಾಗ ತಾನು ದೇವಸ್ಥಾನಕ್ಕೆ ಬಂದಿದ್ದು, ಮನೆಗೆ ಹೋಗಲು ದಾರಿ ತಪ್ಪಿದ್ದೇನೆ ಎನ್ನುತ್ತಾಳೆ. ಸಿಕ್ಕಿದ್ದೇ ಚಾನ್ಸ್ ಅಂದು ಕೊಂಡ ಕಾಮುಕ ಉಮೇಶ್ ಕೊರಟಗೆರೆ ಕಡೆಯಿಂದ ಬರುತಿದ್ದ ಖಾಸಗಿ ಬೊಲೆರೋ ವಾಹನ ತಡೆದು ಅದರಲ್ಲಿ ಯುವತಿಗೆ ಮನೆಗೆ ಡ್ರಾಪ್ ಕೊಡಲು ಹೊರಡುತ್ತಾನೆ. ಈ ವೆಳೆ ತುಮಕೂರು ನಗರದಲ್ಲೆಲ್ಲಾ ಸುತ್ತಾಡಿಸುತ್ತ ಬೊಲೆರೋ ವಾಹನ ಚಾಲಕ ಪ್ರತಿರೋಧ ಒಡ್ಡಿದ್ದರೂ ಅದರಲ್ಲೇ ಅತ್ಯಾಚಾರ ಎಸಗುತ್ತಾನೆ. ಬಳಿಕ ಬೆಳಗಿನ ಜಾವ ಯುವತಿ ತಮ್ಮನಿಗೆ ಕಾಲ್ ಮಾಡಿ ಅಕ್ಕನನ್ನು ಕರೆದುಕೊಂಡು ಹೋಗುವಂತೆ ತಾಕೀತು ಮಾಡುತ್ತಾನೆ. ಯುವತಿ ಮನೆಗೆ ಹೋದ ನಂತರ ನಡೆದ ಘಟನೆಯನ್ನು ಮನೆಯವರಿಗೆ ಹೇಳಿದ್ದಳು.

  • ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ!

    ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ!

    ತುಮಕೂರು: ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

    ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.

    ಏನಿದು ಪ್ರಕರಣ?
    2011ರ ಫೆಬ್ರವರಿ 17ರ ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿತ್ತು. ಶಿಕ್ಷಕಿ ಫಹರತ್ ಫಾತಿಮಾ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ರೋಷಿನಿತಾಜ್(7) ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದಿದ್ದರು. ಇದನ್ನೂ ಓದಿ:  24/7 ಸಂಚಾರಿ ಪರೀಕ್ಷಾ ಘಟಕಕ್ಕೆ ಚಾಲನೆ ನೀಡಿದ ಗೌರವ್ ಗುಪ್ತ

    ಈ ವೇಳೆ ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್‍ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.

  • ಕರು ಕೊಂದಿದ್ದಕ್ಕೆ 10 ವರ್ಷ ಜೈಲು, 1 ಲಕ್ಷ ರೂ. ದಂಡ

    ಕರು ಕೊಂದಿದ್ದಕ್ಕೆ 10 ವರ್ಷ ಜೈಲು, 1 ಲಕ್ಷ ರೂ. ದಂಡ

    ಗಾಂಧಿನಗರ: ಕರು ಕೊಂದಿದ್ದಕ್ಕೆ ಗುಜರಾತ್‍ನ ರಾಜ್‍ಕೋಟ್ ಜಿಲ್ಲಾ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ 10 ವರ್ಷ ಜೈಲು ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.

    ಜಿಲ್ಲ ನ್ಯಾಯಾಲಯದ ನ್ಯಾ.ಎಚ್.ಕೆ.ದವೆ ಅವರು ಗುಜರಾತ್ ಪ್ರಾಣಿ ಸಂರಕ್ಷಣೆ(ತಿದ್ದುಪಡಿ) ಕಾಯ್ದೆ 2017ರ ಅನ್ವಯ ಆರೋಪಿ ಸಲೀಂಗೆ ಶಿಕ್ಷೆ ವಿಧಿಸಿದ್ದಾರೆ.

    ಜನವರಿಯಲ್ಲಿ ಸತ್ತರ್ ಕೋಲಿಯಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಎಫ್‍ಐಆರ್ ದಾಖಲಿಸಲಾಗಿತ್ತು. ಆರೋಪಿ ಮಕ್ರಾನಿ ತನ್ನ ಮಗಳ ಮದುವೆ ಹಿನ್ನೆಲೆ ಮನೆಯಲ್ಲಿದ್ದ ಕರುವನ್ನು ಯಾರಿಗೂ ಗೊತ್ತಾಗದಂತೆ ಕೊಂದು ಬಾಡೂಟ ಮಾಡಿಸಿ, ಮದುವೆ ಊಟವನ್ನಾಗಿ ಬಡಿಸಿದ್ದ ಎಂದು ದೂರುದಾರರು ಆರೋಪಿಸಿದ್ದರು.

    ಎಫ್‍ಐಆರ್ ದಾಖಲಾದ ನಂತರ ತನಿಖೆ ನಡೆಸಲಾಗಿದ್ದು, ಸಾಕ್ಷಿಗಳು ಹಾಗೂ ವಿಧಿವಿಜ್ಞಾನ ವರದಿಯನ್ನು ಆಧಾರಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ತಿದ್ದುಪಡಿಯಾದ ಕಾಯ್ದೆಯನ್ವಯ 10 ವರ್ಷ ಜೈಲು ಹಾಗೂ 1 ಲಕ್ಷ ರೂ. ದಂಡದ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

    ತಿದ್ದುಪಡಿ ಮಾಡಿದ ಹೊಸ ಕಾಯ್ದೆಯನ್ವಯ ಶಿಕ್ಷೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ. ಈ ಕಾಯ್ದೆಯ ಪ್ರಕಾರ ಗೋಮಾಂಸ ಸಾಗಣೆ, ಮಾರಾಟ ಮತ್ತು ಸಂಗ್ರಹಣೆಗಾಗಿ 7-10 ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದಾಗಿದೆ. ಈ ಹಿಂದೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತಿತ್ತು. ಕಾಯ್ದೆಯ ತಿದ್ದುಪಡಿ ನಂತರ ಶಿಕ್ಷೆಯ ಪ್ರಮಾಣವನ್ನು 10 ವರ್ಷಕ್ಕೆ ಹೆಚ್ಚಿಸಲಾಗಿತ್ತು.