Tag: imprisonment

  • ತಾಯಿಯನ್ನೇ ಕೊಲ್ಲಲು ಯತ್ನಿಸಿದ್ದ ಮಗನಿಗೆ 5 ವರ್ಷ ಜೈಲು

    ತಾಯಿಯನ್ನೇ ಕೊಲ್ಲಲು ಯತ್ನಿಸಿದ್ದ ಮಗನಿಗೆ 5 ವರ್ಷ ಜೈಲು

    ರಾಯಚೂರು: ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ್ದ ಆರೋಪಿ ಮಗನಿಗೆ ಜಿಲ್ಲಾ ಸತ್ರ ನ್ಯಾಯಾಲವು 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ರಾಯಚೂರು ತಾಲೂಕಿನ ಹಿರಾಪುರದ ಗ್ರಾಮದ ಈರೇಶ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ನರಸಮ್ಮ ಹಲ್ಲೆಗೊಳಗಾಗಿದ್ದ ತಾಯಿ. ಕೋರ್ಟ್ ಆರೋಪಿಗೆ 5 ವರ್ಷ ಜೈಲು ಶಿಕ್ಷೆಯ ಜೊತೆಗೆ 27,500 ರೂ. ದಂಡವನ್ನು ವಿಧಿಸಿದೆ.

    ಏನಿದು ಪ್ರಕರಣ?:
    ನರಸಮ್ಮ ಅವರು ಆಸ್ತಿಯನ್ನು ಮಾರಿ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಆ ಹಣವನ್ನು ತನಗೆ ನೀಡುವಂತೆ ಮಗ ಈರೇಶ್ ಒತ್ತಾಯಿಸಿದ್ದ. ಆದರೆ ನರಸಮ್ಮ ನನ್ನ ಜೀವನೋಪಾಯಕ್ಕೆ ಈ ಹಣ ಬೇಕು. ನಾನು ಕೊಡುವುದಿಲ್ಲ ಅಂತ ಮಗನಿಗೆ ಹೇಳಿದ್ದರು. ಇದರಿಂದಾಗಿ ಇಬ್ಬರ ನಡುವೆ ವಾಗ್ದಾಳಿ ಕೂಡ ಆಗಿತ್ತು. ಹಣ ಕೊಡಲಿಲ್ಲವೆಂದು ಈರೇಶ್ 2017ರ ಜುಲೈನಲ್ಲಿ ತಾಯಿಯ ಮೇಲೆ ಹಲ್ಲೆ ಮಾಡಿದ್ದ.

    ಈ ಕುರಿತು ನರಸಮ್ಮ ಯರಗೇರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈರೇಶ್‍ನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಪ್ರಕರಣ ನಡೆದು 18 ತಿಂಗಳ ಬಳಿಕ ಆರೋಪಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತೆಲಗಿ ಬದುಕಿದ್ದರೆ ಇನ್ನು 12 ದಿನಗಳಲ್ಲಿ ಜೈಲಿಂದ ಹೊರಬರುತ್ತಿದ್ದನಂತೆ!

    ತೆಲಗಿ ಬದುಕಿದ್ದರೆ ಇನ್ನು 12 ದಿನಗಳಲ್ಲಿ ಜೈಲಿಂದ ಹೊರಬರುತ್ತಿದ್ದನಂತೆ!

    ಹೈದರಾಬಾದ್: ಬಹುಕೋಟಿ ನಕಲಿ ಛಾಪಾಕಾಗದ ಹಗರಣದ ಅಪರಾಧಿ ಕರೀಂ ಲಾಲ್ ತೆಲಗಿ ಇನ್ನು 12 ದಿನಗಳಲ್ಲಿ ತನ್ನ ಮೇಲೆ ದಾಖಲಾಗಿರೋ ಎಲ್ಲಾ ಪ್ರಕರಣಗಳಿಂದ ಮುಕ್ತನಾಗಿ ಜೈಲಿನಿಂದ ಹೊರಬರಬಹುದಿತ್ತು ಎಂದು ವಕೀಲರು ಹೇಳಿದ್ದಾರೆ.

    ಬೇಗಂ ಬಜಾರ್ ಪ್ರಕರಣದಲ್ಲಿ ತೆಲಗಿ ತಪ್ಪೊಪ್ಪಿಕೊಳ್ಳಲು ನಿರ್ಧರಿಸಿದ್ದ. ಹೀಗಾಗಿ ನವೆಂಬರ್ 17ರಂದು ಹೈದರಾಬಾದ್‍ನ ಸಿಬಿಐ ಕೋರ್ಟ್ ನೊಂದಿಗೆ ಬೆಂಗಳೂರಿನ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮಾಡಬೇಕಿತ್ತು. ಆದ್ರೆ ಗುರುವಾರದಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತೆಲಗಿ ಮೃತಪಟ್ಟಿದ್ದಾನೆ.

    ಇತರೆ ಪ್ರಕರಣಗಳಂತೆ ಈ ಕೇಸ್‍ನಲ್ಲೂ ತೆಲಗಿ ತಪ್ಪೊಪ್ಪಿಕೊಳ್ಳಲು ನಿರ್ಧರಿಸಿದ್ದ. ಅನಾರೋಗ್ಯದ ಕಾರಣ ಬೆಂಗಳೂರಿನಿಂದ ಪ್ರಯಾಣ ಮಾಡಲು ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಗಾಗಿ ಮನವಿ ಮಾಡಿದ್ದ ಎಂದು ವರದಿಯಾಗಿದೆ.

    ತೆಲಗಿಗೆ ನ್ಯಾಯ ಸಿಗಲಿಲ್ಲ ಎಂದು ಹಿರಿಯ ವಕೀಲರಾದ ಸಿ ಮಲ್ಲೇಶ್ ರಾವ್ ಹೇಳಿದ್ದಾರೆ. 14ನೇ ಅಡಿಷನಲ್ ಮೆಟ್ರೊಪಾಲಿಟನ್ ಕೋರ್ಟ್ ನಲ್ಲಿ ರಾವ್ ಅವರು ತೆಲಗಿ ಪರವಾಗಿ ಹೋರಾಟ ಮಾಡಿದ್ದರು. ತೆಲಗಿ ಪ್ರಕರಣವನ್ನು ತನಿಖೆ ಮಾಡ್ತಿದ್ದ ಸಿಬಿಐ ಹಲವು ವರ್ಷಗಳಿಂದ ಪ್ರಕರಣವನ್ನ ಎಳೆದಾಡಿಕೊಂಡು ಬಂದಿದೆ ಎಂದು ರಾವ್ ಹೇಳಿದ್ದಾರೆ.

    ಒಂದು ವೇಳೆ ತೆಲಗಿಗೆ ಎಲ್ಲಾ 40ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದರೂ, ಕಾನೂನಿನ ಪ್ರಕಾರ 7 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಇರುತ್ತಿರಲಿಲ್ಲ. ನ್ಯಾಯಾಧೀಶರು ತೀರ್ಮಾನಿಸಿದ್ದರೆ 3 ವರ್ಷಗಳ ಶಿಕ್ಷೆ ಮಾತ್ರ ಆಗುತ್ತಿತ್ತು. ಆದ್ರೆ ತೆಲಗಿ 1999 ರಿಂದ ಜೈಲಿನಲ್ಲಿದ್ದ.

    ಬೇಗಂ ಬಜಾರ್ ಪೊಲೀಸರು ತೆಲಗಿ ವಿರುದ್ಧ ಐಪಿಸಿ ಸೆಕ್ಷನ್ 259, 260 ಹಾಗೂ 262ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. 1999ರಲ್ಲಿ ಚಿತ್ತೂರಿನ ಶಿವ ಎಂಬ ಸ್ಟ್ಯಾಂಪ್ ಮಾರಾಟಗಾರನನ್ನು ನಕಲಿ ಸ್ಟ್ಯಾಂಪ್ ಕೇಸ್‍ನಲ್ಲಿ ಬಂಧಿಸಿದ ನಂತರ ತೆಲಗಿಯ ಬಂಧನಕ್ಕೆ ಎಡೆ ಮಾಡಿಕೊಟ್ಟಿತ್ತು. 2006ರಲ್ಲಿ ತೆಲಗಿಗಿ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಜೊತೆಗೆ 202 ಕೋಟಿ ರೂ. ದಂಡ ವಿಧಿಸಲಾಗಿತ್ತು.

    ತೆಲಗಿ ವಿರುದ್ಧದ ಪ್ರಕರಣಗಳಲ್ಲಿ ಬೇಗಂ ಬಜಾರ್ ಕೇಸ್ ಪ್ರಮುಖವಾದುದು. ಈ ಪ್ರಕರಣದ ನಂತರವೇ ದೇಶದ ವಿವಿಧೆಡೆ ತೆಲಗಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು ಎಂದು ಮಲ್ಲೇಶ್ ರಾವ್ ಹೇಳಿದ್ದಾರೆ.

  • ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ

    ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ

    ಬೆಂಗಳೂರು: ಸೈನೆಡ್ ಮೋಹನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಕೆಳ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯನ್ನು ರದ್ದು ಪಡಿಸಿ ಜೀವಾವಧಿ ಶಿಕ್ಷೆಗೆ ಇಳಿಸಿದೆ.

    ನಾಲ್ಕು ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೋಹನ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ ವಿಭಾಗೀಯ ಪೀಠ, ಸೈನೆಡ್ ಮೋಹನ್ ಕುಮಾರ್ ಸಮಾಜಕ್ಕೆ ಮಾರಕ. ಹೀಗಾಗಿ ಈತ ಸಾಯುವವರೆಗೂ ಜೈಲಿನಲ್ಲಿರಬೇಕು ಎಂದು ಆದೇಶ ನೀಡಿದರು.

    20 ಯುವತಿಯರನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಸೈನೆಡ್ ನೀಡಿ ಕೊಲೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಮೋಹನ್ ಕುಮಾರ್‍ಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2013ರ ಡಿಸೆಂಬರ್ 21ರಂದು ಗಲ್ಲುಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿದ್ದ ಮೋಹನ್ ಕುಮಾರ್‍ಗೆ ಹೈಕೋರ್ಟ್ ರಿಲೀಫ್ ನೀಡಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದೆ.

    ತಾನೇ ವಾದಿಸಿದ್ದ:
    ವಿಚಾರಣೆ ವೇಳೆ ನನ್ನ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯಇಲ್ಲ. ನಾನು ಅತ್ಯಾಚಾರ ನಡೆಸಿದ್ದಕ್ಕೆ ಪುರಾವೆಯೇ ಇಲ್ಲ. ನಾನು ಸೈನೆಡ್ ತಿನ್ನಿಸಿ ಸಾಯಿಸಿದ್ದೇನೆ ಎಂದು ವಕೀಲರು ವಾದಿಸಿದ್ದಾರೆ. ಆದರೆ ಪ್ರಯೋಗಾಲಯದಲ್ಲಿ ನಾನು ನಾನು ಸೈನೆಡ್ ನೀಡಿ ಕೊಲೆ ಮಾಡಿದ್ದೇನೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಸೈನೆಡ್ ಸೇವಿಸಿದ್ದರೆ ಹೃದಯ ಬಡಿತ ನಿಂತುಹೋಗಿ ನರಗಳು ಹೆಪ್ಪುಗಟ್ಟಿ ಸಾವನ್ನಪ್ಪುತ್ತಾರೆ. ಆದರೆ ವರದಿಯಲ್ಲಿ ಈ ಯಾವುದೇ ವಿವರಗಳು ಇಲ್ಲ ಎಂದು ವಾದಿಸಿದ್ದ.

    ಸುಮಾರು 25ಕ್ಕೂ ಹೆಚ್ಚು ಖಾಲಿ ಪೇಪರ್ ಗಳಿಗೆ ನನ್ನ ಸಹಿ ಮಾಡಿಸಿಕೊಂಡು ಪೊಲೀಸರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ ಕೋರ್ಟ್ ನೀಡಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದ.

    2004ರಿಂದ 2009ರ ಅವಧಿಯಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಸೈನೆಡ್ ಮೋಹನ್ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ವಾದಿಸಿದ್ದರು. ಬಂಟ್ವಾಳ ಮೂಲದ ಶಿಕ್ಷಕನಾದ ಮೋಹನ್ 2002ರಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದ.