Tag: inauguration

  • ದೇಶದ ಅತಿ ದೊಡ್ಡ ಆಸ್ಪತ್ರೆ ಉದ್ಘಾಟಿಸಿದ ಮೋದಿ

    ದೇಶದ ಅತಿ ದೊಡ್ಡ ಆಸ್ಪತ್ರೆ ಉದ್ಘಾಟಿಸಿದ ಮೋದಿ

    ಚಂಡೀಗಢ: ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ, ಕೇಂದ್ರೀಕೃತ ಸಂಪೂರ್ಣ ಸ್ವಯಂಚಾಲಿತ ಪ್ರಯೋಗಾಲಯ ಸೇರಿದಂತೆ 2,600 ಹಾಸಿಗೆಯುಳ್ಳ ನೂತನ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಹರಿಯಾಣದ ಫರಿದಾಬಾದ್‌ನಲ್ಲಿರುವ ಹೊಸ ‘ಅಮೃತ’ ಆಸ್ಪತ್ರೆ ದೇಶದ ಅತಿ ದೊಡ್ಡ ಖಾಸಗಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಮೋದಿ, ಭಾರತ ಆರೋಗ್ಯ ಹಾಗೂ ಆಧ್ಯಾತ್ಮಿಕತೆಯ ನಿಕಟ ಸಂಬಂಧ ಹೊಂದಿರುವ ದೇಶವಾಗಿದೆ. ಈ ಸಂಬಂಧಕ್ಕೆ ಕೋವಿಡ್-19 ಒಂದು ಅತ್ಯುತ್ತಮ ಉದಾಹರಣೆ. ಇದು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವನ್ನು ಕಾರ್ಯಗತಗೊಳಿಸಲು ಸಹಾಯ ಮಾಡಿದೆ ಎಂದರು.

    ತಂತ್ರಜ್ಞಾನ ಮತ್ತು ಆಧುನೀಕರಣದ ಸಂಯೋಜನೆ ದೇಶದ ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿಗೆ ಕಾರಣವಾಗಿದೆ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಜನರನ್ನು ಮುಂದೆ ತರಲು ಭಾರತ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    ಆಸ್ಪತ್ರೆ ವಿಶೇಷತೆಯೇನು?
    ಸುಮಾರು 130 ಎಕರೆಯ ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಅಮೃತ ಆಸ್ಪತ್ರೆ, 7 ಅಂತಸ್ತಿನ ಸಂಶೋಧನಾ ಬ್ಲಾಕ್ ಅನ್ನು ಹೊಂದಿದೆ. ಮಾತಾ ಅಮೃತಾನಂದಮಯಿ ಟ್ರಸ್ಟ್ ವತಿಯಿಂದ 6 ವರ್ಷಗಳ ಅವಧಿಯಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.

    ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 500 ಹಾಸಿಗೆಗಳನ್ನು ಈಗಾಗಲೇ ಬಳಕೆಗೆ ತೆರೆಯಲಾಗಿದೆ. ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಒಮ್ಮೆ ಸಂಪೂರ್ಣವಾಗಿ ಈ ಆಸ್ಪತ್ರೆ ಕಾರ್ಯ ನಿರ್ವಹಿಸಲು ಪ್ರಾರಂಭಿಸಿದರೆ, ದೇಶದ ಅತಿ ದೊಡ್ಡ ಖಾಸಗಿ ಆಸ್ಪತ್ರೆಯಾಗಲಿದೆ. ಇದನ್ನೂ ಓದಿ: ನಿವೃತ್ತಿ ಹೊಂದಿರುವ, ನಿವೃತ್ತಿ ಹೊಂದಲಿರುವ ವ್ಯಕ್ತಿಗೆ ಭಾರತದಲ್ಲಿ ಯಾವುದೇ ಮೌಲ್ಯವಿಲ್ಲ: ಸಿಜೆಐ ರಮಣ

    ಆಸ್ಪತ್ರೆಯ ಕಟ್ಟಡಗಳನ್ನು 36 ಲಕ್ಷ ಚದರ ಅಡಿ ಪ್ರದೇಶದಲ್ಲಿ ನಿರ್ಮಿಸಲಾಗಿದೆ. 14 ಮಹಡಿಗಳುಳ್ಳ ಕಟ್ಟಡದಲ್ಲಿ ಪ್ರಮುಖ ವೈದ್ಯಕೀಯ ಸೌಲಭ್ಯಗಳು ಇವೆ. ಮೇಲ್ಛಾವಣಿಯಲ್ಲಿ ಹೆಲಿಪ್ಯಾಡ್ ಕೂಡ ಇದೆ.

    ದೆಹಲಿ-ಮಥುರಾ ರಸ್ತೆಯ ಬಳಿ ಫರಿದಾಬಾದ್‌ನ ಸೆಕ್ಟರ್ 88ರಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಇದರ ಕ್ಯಾಂಪಸ್‌ನಲ್ಲಿ ವೈದ್ಯಕೀಯ ಕಾಲೇಜು ಕೂಡಾ ಇದೆ. ಕಟ್ಟಡದ 7 ಅಂತಸ್ತಿನಲ್ಲಿ ಸಂಶೋಧನಾ ವಿಭಾಗ, ಗ್ಯಾಸ್ಟ್ರೋ ವಿಜ್ಞಾನ, ಮೂತ್ರಪಿಂಡ ವಿಜ್ಞಾನ, ಮೂಳೆ ರೋಗಗಳು, ಅಪಘಾತ, ಕಸಿ ಮತ್ತು ತಾಯಿ-ಮಗುವಿನ ಆರೈಕೆ ಸೇರಿದಂತೆ 8 ವಿವಿಧ ಕೇಂದ್ರಗಳು ಕ್ಯಾಂಪಸ್‌ನಲ್ಲಿವೆ.

    Live Tv 
    [brid partner=56869869 player=32851 video=960834 autoplay=true]

  • ಬೇಸ್ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

    ಬೇಸ್ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

    ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೇ 20ರಂದು ನಾಗರಬಾವಿ ಸಮೀಪದ ಡಾ. ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ(ಬೇಸ್) ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಅವರು ಸೋಮವಾರ ಕ್ಯಾಂಪಸ್‌ಗೆ ಭೇಟಿ ನೀಡಿ, ಪೂರ್ವಸಿದ್ಧತೆ ಮತ್ತಿತರ ವ್ಯವಸ್ಥೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.

    ಟಾಟಾ ಸಮೂಹ ಸಂಸ್ಥೆಯ ಸಹಾಯದೊಂದಿಗೆ ನಾಲ್ಕೂವರೆ ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ಉನ್ನತೀಕರಿಸಿರುವ 150 ಸರ್ಕಾರಿ ಐಟಿಐ ಸಂಸ್ಥೆಗಳನ್ನು ಕೂಡ ಮೋದಿಯವರು ಈ ಕ್ಯಾಂಪಸ್‌ನಿಂದಲೇ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಐ ಸಂಸ್ಥೆಯ ಮಾದರಿ ಪ್ರತಿಕೃತಿ ಮತ್ತು ಅತ್ಯಾಧುನಿಕ ಪ್ರಯೋಗಾಲಯದ ಮಾದರಿಗಳನ್ನು ಇಲ್ಲಿ ಸೃಷ್ಟಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 400 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 3,545ಕ್ಕೆ ಏರಿಕೆ

    ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯಾವ್ಯಾವ ವಿಭಾಗದವರು, ಯಾವ್ಯಾವ ಕೆಲಸಗಳನ್ನು ಮಾಡಬೇಕು ಎಂದು ಸೂಕ್ತ ಸೂಚನೆಗಳನ್ನು ನೀಡಿದರು.

    ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವ್ಯವಸ್ಥೆಯೂ ಸಮರ್ಪಕವಾಗಿರಬೇಕು. ಇದರಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ಕೊಡಬಾರದು. 250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬೇಸ್ ಕ್ಯಾಂಪಸ್, ಎನ್‌ಇಪಿ ಅಳವಡಿಕೆ ದೃಷ್ಟಿಯಿಂದಲೂ ಗಮನ ಸೆಳೆಯುತ್ತಿದೆ. ಮೋದಿಯವರ ಭೇಟಿಯ ಸಂದರ್ಭದಲ್ಲಿ ಇದನ್ನು ಕೂಡ ಬಿಂಬಿಸಲು ಯೋಜಿಸಬೇಕು ಎಂದು ಸಚಿವರು ತಾಕೀತು ಮಾಡಿದರು. ಇದನ್ನೂ ಓದಿ: ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ ನಕಲಿ ಗಾಂಧಿಗಳಿಗೆ ED ನೋಟಿಸ್ ಕೊಟ್ಟಾಗ ಬೀದಿಗೆ ಬಂದಿದೆ: ಬಿಜೆಪಿ

    ಐಟಿಐಗಳ ಲೋಕಾರ್ಪಣೆಗೆ ಮಾಡಿಕೊಂಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದ ಸಚಿವರು, ಪ್ರಯೋಗಾಲಯಗಳಲ್ಲಿ ಇರುವ ಆಧುನಿಕ ಸಾಧನಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

  • ರಾಮಯ್ಯ ಆಸ್ಪತ್ರೆಯಲ್ಲಿ ತ್ರಿಡಿ ಪ್ರಿಂಟಿಂಗ್ ಕೃತಕ ಕೈಕಾಲು ಜೋಡಣಾ ಘಟಕ ಉದ್ಘಾಟನೆ

    ರಾಮಯ್ಯ ಆಸ್ಪತ್ರೆಯಲ್ಲಿ ತ್ರಿಡಿ ಪ್ರಿಂಟಿಂಗ್ ಕೃತಕ ಕೈಕಾಲು ಜೋಡಣಾ ಘಟಕ ಉದ್ಘಾಟನೆ

    ಬೆಂಗಳೂರು: ಸಿಲಿಕಾನ್ ಸಿಟಿಯ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಆವರಣದಲ್ಲಿರುವ ಎಂ.ಎಸ್.ರಾಮಯ್ಯ ರೋಟರಿ ಕೃತಕ ಕೈಕಾಲು ಜೋಡಣಾ ಕೇಂದ್ರದಲ್ಲಿ  ತ್ರಿಡಿ ಪ್ರಿಂಟಿಂಗ್ ಕೃತಕ ಕೈ, ಕಾಲು ಜೋಡಣಾ ಘಟಕವನ್ನು ಉದ್ಘಾಟಿಸಲಾಯಿತು.

    ಈ ಕೃತಕ ಕೈ, ಕಾಲು ಜೋಡಣಾ ಘಟಕವನ್ನು ರೋಟರಿ ಡಿಸ್ಟ್ರಿಕ್ಟ್ ಗವರ್ನರ್, 3190 ರೋ. ಫಜಲ್ ಮಹಮ್ಮದ್ ಉದ್ಟಾಟಿಸಿದರು. ಈ ಒಂದು ತಂತ್ರಜ್ಞಾನದಿಂದ ಅತೀ ಕಡಿಮೆ ಅವಧಿಯಲ್ಲಿ ಹಾಗೂ ಕಡಿಮೆ ವೆಚ್ಚದಲ್ಲಿ ಕೈ ಕಾಲಿನ ತದ್ರೂಪದಂತೆ ಕೃತಕ ಅಂಗವನ್ನು ಜೋಡಿಸಬಹುದಾಗಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಇದರಿಂದ ರೋಗಿಗಳು ಸಾಕಷ್ಟು ಸಮಯ ಕಾಯುವುದು ತಪ್ಪುವುದಲ್ಲದೇ ಶೀಘ್ರವೇ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ. ಕೈ, ಕಾಲು ಮಾತ್ರವಲ್ಲದೇ ದೇಹದ ಯಾವುದೇ ಅಂಗವನ್ನು ಕಡಿಮೆ ಅವಧಿಯಲ್ಲಿ ತಯಾರು ಮಾಡಬಹುದು. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

    ಈ ಸಂದರ್ಭದಲ್ಲಿ ಗೋಕುಲ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಆರ್.ಜಯರಾಂ, ಡಾ. ಸವಿತಾ ರವೀಂದ್ರ, ಡಾ. ಗುರುದೇವ್ ಮುಂತಾದವರು ಉಪಸ್ಥಿತರಿದ್ದರು.

  • ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

    ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

    ಲಕ್ನೋ: 1.16ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ರಸ್ತೆ ಉದ್ಘಾಟನೆ ಸಂದರ್ಭದಲ್ಲಿ ಒಡೆದ ತೆಂಗಿನ ಕಾಯಿಯಿಂದ  ರಸ್ತೆ ಬಿರುಕು ಬಿಟ್ಟ ಅಚ್ಚರಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    1.16ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ 7ಕಿ.ಮೀ ಉದ್ದ ಹೊಸ ರಸ್ತೆಯ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ, ಕಾಯಿ ಬದಲು ರಸ್ತೆಯೇ ಬಿರುಕು ಬಿಟ್ಟಿದೆ. ಈ ಘಟನೆಯಿಂದ ಮುಜುಗರಕ್ಕೀಡಾಗಿ ಕೆಂಡವಾಗಿರುವ ಆಡಳಿತಾರೂಢ ಬಿಜೆಪಿ ಶಾಸಕಿ ಸುಚಿ ಮೌಸಂ ಚೌದರಿ, ರಸ್ತೆಯ ಕಳಪೆ ಕಾಮಗಾರಿಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಜನವರಿ 1 ರಿಂದ ಎಟಿಎಂ ಶುಲ್ಕ ಹೆಚ್ಚಳ

    ಕಳಪೆ ಮಟ್ಟದ ಕಾಮಗಾರಿ ತನಿಖೆಗಾಗಿ ರಸ್ತೆ ಮಾದರಿ ಸಂಗ್ರಹಿಸಲು ಅಧಿಕಾರಿಗಳು ಬರುವವರೆಗೆ 3 ಗಂಟೆಗಳ ಕಾಲ ಸ್ಥಳದಲ್ಲೇ ಕಾದರು. ತಮ್ಮ ಕ್ಷೇತ್ರದಲ್ಲಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾಗಿರುವ 7.5 ಕಿಮೀ ರಸ್ತೆ ಕಾಮಗಾರಿ ಕೈಗೊಂಡಿದೆ. ಇದರ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ ಕಾಯಿ ತುಂಡಾಗದೇ ರಸ್ತೆಯೇ ಹೋಳಾಗಿದೆ. ಈ ವೇಳೆ ಪರಿಶೀಲನೆ ನಡೆಸಿದಾಗ ಕಾಮಗಾರಿಯಲ್ಲಿ ದಕ್ಷತೆ ಇಲ್ಲದಿರುವುದು ಕಂಡುಬಂದಿದೆ ಎಂದು ಬಿಜನೋರ್ ಶಾಸಕಿ ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

  • ದಸರಾ ಉದ್ಘಾಟನೆ- ಎಸ್.ಎಂ.ಕೃಷ್ಣಾರನ್ನು ಅಧಿಕೃತವಾಗಿ ಆಹ್ವಾನಿಸಿದ ಸರ್ಕಾರ

    ದಸರಾ ಉದ್ಘಾಟನೆ- ಎಸ್.ಎಂ.ಕೃಷ್ಣಾರನ್ನು ಅಧಿಕೃತವಾಗಿ ಆಹ್ವಾನಿಸಿದ ಸರ್ಕಾರ

    ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಗಮಿಸಲು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯದ ಹಿರಿಯ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಅವರಿಗೆ ಇಂದು ರಾಜ್ಯ ಸರ್ಕಾರ ಅಧಿಕೃತವಾಗಿ ಆಹ್ವಾನ ನೀಡಿತು.

    ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ತೆರಳಿ ಸರ್ಕಾರದ ಪರವಾಗಿ ಅವರಿಗೆ ಆಹ್ವಾನ ನೀಡಿದರು. ಇದೇ ತಿಂಗಳ 7ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದ್ದು, ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಕೀಯ ಕ್ಷೇತ್ರಕ್ಕೆ ಸೇರಿದ ಗಣ್ಯರೊಬ್ಬರಿಗೆ ಉದ್ಘಾಟನೆ ಮಾಡುವ ಸೌಭಾಗ್ಯ ಸಿಕ್ಕಿದೆ. ಇದನ್ನೂ ಓದಿ: ಅ. 7 ರಿಂದ13 ರವರೆಗೆ ನಿತ್ಯ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ: ಎಸ್.ಟಿ.ಸೋಮಶೇಖರ್

    9 ದಿನಗಳ ಕಾಲ ನಡೆಯಲಿರುವ ಮೈಸೂರು ದಸರಾವನ್ನು ಈ ಹಿಂದೆ ಸಾಹಿತಿಗಳು, ಬರಹಗಾರರು, ಸಮಾಜ ಸೇವಕರು, ಧರ್ಮಗುರುಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರು ಉದ್ಘಾಟನೆ ಮಾಡುತ್ತಿದ್ದರು. ಆದರೆ ಈ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿರುವ ರಾಜ್ಯ ಸರ್ಕಾರ ಮೊದಲ ಬಾರಿಗೆ ವಿಶ್ವವಿಖ್ಯಾತ ದಸರಾವನ್ನು ರಾಜಕೀಯ ಕ್ಷೇತ್ರಕ್ಕೆ ಸೇರಿದವರೊಬ್ಬರಿಂದ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ. ಇದನ್ನೂ ಓದಿ: 80 ಕಡೆ ದುರ್ಗಾಮೂರ್ತಿ ಪ್ರತಿಷ್ಠಾಪನೆಗೆ ಮನವಿ – ದಸರಾ ಮಾರ್ಗಸೂಚಿಗಾಗಿ ಎದುರುನೋಡ್ತಿರುವ ಬಿಬಿಎಂಪಿ

    ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆಗಳು ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಂ.ಕೃಷ್ಣ ಅವರನ್ನು ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿತ್ತು.

    ಈ ವೇಳೆ ಕಂದಾಯ ಸಚಿವ ಆರ್.ಅಶೋಕ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಕತ್ತರಿ ಬದಲು ಹಲ್ಲಿನಿಂದಲೇ ರಿಬ್ಬನ್ ಕತ್ತರಿಸಿದ ಪಾಕಿಸ್ತಾನದ ಸಚಿವ

    ಕತ್ತರಿ ಬದಲು ಹಲ್ಲಿನಿಂದಲೇ ರಿಬ್ಬನ್ ಕತ್ತರಿಸಿದ ಪಾಕಿಸ್ತಾನದ ಸಚಿವ

    ಇಸ್ಲಾಮಾಬಾದ್: ಪಾಕಿಸ್ತಾನದ ಸಚಿವರೊಬ್ಬರು ಉದ್ಘಾಟನಾ ಸಮಾರಂಭದಲ್ಲಿ ಕತ್ತರಿ ಇಲ್ಲದ್ದನ್ನು ಕಂಡು ಬಾಯಿಯಿಂದಲೇ ರಿಬ್ಬನ್ ಕತ್ತರಿಸಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಚಿವ ಫಯಾಜ್ ಅಲ್ ಹಸನ್ ಚೌಹಾಣ್ ಅವರು ಶೋ ರೂಮ್ ಉದ್ಘಾಟನೆಗಾಗಿ ಸಮಾರಂಭಕ್ಕೆ ಆಗಮಿಸಿದ್ದರು. ಸಕಲ ಸಿದ್ಧತೆಗಳೂ ನಡೆದಿತ್ತು. ಉದ್ಘಾಟನೆ ವೇಳೆ ಎಷ್ಟು ಪ್ರಯತ್ನಿಸಿದರೂ ಕತ್ತರಿಯಿಂದ ಕತ್ತರಿಸಲಾಗದ ರಿಬ್ಬನ್‍ಅನ್ನು ತಮ್ಮ ಬಾಯಿಯಿಂದಲೇ ಕಟ್ ಮಾಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣ ತಡೆಗೆ ವಿದ್ಯಾರ್ಥಿಯಿಂದ ರಾಜ್ಯಾದ್ಯಂತ ಸೈಕಲ್ ಜಾಥಾ

    ಸಚಿವ ಫಯಾಜ್ ಉಲ್ ಹಸನ್ ಚೌಹಾಣ್ ಅವರು ಉದ್ಘಾಟನೆ ವೇಳೆ ಕತ್ತರಿಯನ್ನು ಹಿಡಿದಿದ್ದಾರೆ. ರಿಬ್ಬನ್ ಕತ್ತರಿಸಲು ಮುಂದಾಗುತ್ತಾರೆ. ಆದರೆ ಎಷ್ಟು ಪ್ರಯತ್ನಿಸಿದರೂ ಸಹ ಆ ಕತ್ತರಿಯಿಂದ ರಿಬ್ಬನ್ ಕಟ್ ಆಗಲಿಲ್ಲ. ತಕ್ಷಣ ತಮ್ಮ ಹಲ್ಲುಗಳಿಂದ ರಿಬ್ಬನ್ ಕತ್ತರಿಸಿದ ವೀಡಿಯೋ ಫುಲ್ ವೈರಲ್ ಆಗಿದೆ.

  • ಮೇಕ್ ಶಿಫ್ಟ್ ಆಸ್ಪತ್ರೆಗೆ ನಾಳೆ ಸಿಎಂ ಚಾಲನೆ

    ಮೇಕ್ ಶಿಫ್ಟ್ ಆಸ್ಪತ್ರೆಗೆ ನಾಳೆ ಸಿಎಂ ಚಾಲನೆ

    ದೊಡ್ಡಬಳ್ಳಾಪುರ: ಕೊರೊನಾ ತುರ್ತು ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ, ಮಗು ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿ 100 ಹಾಸಿಗೆಯ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಜುಲೈ 7ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

    ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಉಸ್ತುವಾರಿ ಸಚಿವ ನಾಗರಾಜು(ಎಂ.ಟಿ.ಬಿ) ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

    ಲೆನೊವೊ, ಗೋಲ್ಡ್ ಮ್ಯಾನ್ ಸ್ಯಾಚಸ್ ಕಂಪನಿಗಳು ತಮ್ಮ ಸಿ.ಎಸ್.ಆರ್ ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣಗೊಂಡಿದೆ. ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಕ ಕಾರ್ಯಕರ್ತರ ವಲಯ, ಸ್ಕ್ರೀನಿಂಗ್ ಮತ್ತು ವೀಕ್ಷಣಾ ವಲಯ, ಪ್ರತ್ಯೇಕ ವಾರ್ಡ್ ವಲಯ, ಐಸಿಯು ವಾರ್ಡ್ ವಲಯ ಎಂದು ನಾಲ್ಕು ವಲಯಗಳನ್ನಾಗಿ ವಿಂಗಡಿಸಲಾಗಿದೆ.

    ಈ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ 70 ಆಕ್ಸಿಜನ್ ಬೆಡ್ ಗಳು, 20 ಐ.ಸಿ.ಯು (ತೀವ್ರ ನಿಗಾ ಘಟಕ)ಬೆಡ್ ಗಳು, 10 ವೆಂಟಿಲೇಟರ್ ಬೆಡ್ ಗಳು ಹಾಗೂ 2 ಕೆ.ಎಲ್. ಆಕ್ಸಿಜನ್ ಜನರೇಟರ್ ವ್ಯವಸ್ಥೆಯನ್ನು ಹೊಂದಿದೆ. ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ದೊಡ್ಡಬಳ್ಳಾಪುರದ ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್ ನಿರ್ವಹಿಸಿದೆ. ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ, ಅಮೆರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ ಸಂಸ್ಥೆಗಳು ನಿರ್ವಹಿಸಿವೆ.

    ಸುಸಜ್ಜಿತ ಎಲ್‍ಇಡಿ ಲೈಟ್‍ಗಳು 2×2 ಅಡಿ, 40 ವ್ಯಾಟ್ಸ್, ಕ್ಯಾಬಿನ್ ಫ್ಯಾನ್ ಗಳು, 12 ಇಂಚು-80 ವ್ಯಾಟ್ಸ್, ಎಕ್ಸಾಸ್ಟ್ ಫ್ಯಾನ್ ಗಳು 250 ಎಂಎಂ ಸ್ವೀಪ್ 25 ವ್ಯಾಟ್ಸ್, ಸಾಕೆಟ್ ಗಳು ಮತ್ತು ಪ್ಲಗ್ ಪಾಯಿಂಟ್ ಗಳು 5 ಆ್ಯಂಪ್ ಮತ್ತು 15 ಆ್ಯಂಪ್ (ವೈದ್ಯಕೀಯ ಉಪಕರಣಗಳ ಪ್ಲಗಿನ್), ವಿತರಣಾ ಬಾಕ್ಸ್- ಸಿಂಗಲ್ ಫೇಸ್ 32 ಆ್ಯಂಪ್-ಎಂಸಿಬಿ, ಎಸಿ ಪ್ಲಗ್ ಪಾಯಿಂಟ್ ಗಳ ಜೊತೆಗೆ 40 ಆ್ಯಂಪ್‍ಗಳು, ಎಸಿ ಸ್ಟೆಬಿಲೈಜರ್ ಗಳು ಇವೆ.

    ವೆಸ್ಟರ್ನ್ ಕ್ಲೋಸೆಟ್- ಪ್ರತಿ ಶೌಚಾಲಯಕ್ಕೆ ತಲಾ 1, ವಾಶ್ ಬೇಸಿನ್ ತಲಾ 1, ಎಕ್ಸಾಸ್ಟ್ ಫ್ಯಾನ್‍ಗಳು 150 ಎಂಎಂ ಸ್ವೀಪ್, ಬಿಸಿ ಮತ್ತು ತಣ್ಣೀರು ಸೌಲಭ್ಯದ ಶವರ್ ಹೆಡ್‍ಗಳು, ಬಿಸಿ ನೀರಿನ ಗೀಸರ್- ತಲಾ 1 ಸೇರಿದಂತೆ ಶೌಚಾಲಯಗಳು ಮತ್ತು ಕೊಳಾಯಿ ವ್ಯವಸ್ಥೆಗಳ ಸೌಲಭ್ಯಗಳು ಇದರಲ್ಲಿವೆ.

    30 ಎಂಪಿಸಿ ಗ್ರೇಡ್ ನೊಂದಿಗೆ ನೆಲಮಟ್ಟದಿಂದ 9 ಇಂಚಿನಷ್ಟು ಗಟ್ಟಿಯಾದ ಮಣ್ಣು ಪಿಸಿಸಿ ಬಳಕೆ, 15 ಅಡಿ ವ್ಯಾಪ್ತಿಯೊಳಗೆ ವಿದ್ಯುತ್ ಸಂಪರ್ಕ ಸೌಲಭ್ಯ, 15 ಅಡಿ ವ್ಯಾಪ್ತಿಯೊಳಗೆ ನೀರಿನ ಸಂಪರ್ಕ ಸೌಲಭ್ಯ, ಒಳಚರಂಡಿ ವ್ಯವಸ್ಥೆ, ತೆರೆದ ಮೈದಾನ, 40 ಎಫ್‍ಟಿ ಟ್ರೈಲರ್, 5ಟಿ ಕ್ರೇನ್ ಸುಲಭ ಚಲನೆಗೆ ಸ್ಥಳಾವಕಾಶ ಇರಿಸಲಾಗಿದೆ.

  • ಇಂಗ್ಲೆಂಡ್‍ನ ವಿಶ್ವ ಒಕ್ಕಲಿಗರ ಪರಿಷತ್‍ಗೆ ಡಿಸಿಎಂ ಚಾಲನೆ

    ಇಂಗ್ಲೆಂಡ್‍ನ ವಿಶ್ವ ಒಕ್ಕಲಿಗರ ಪರಿಷತ್‍ಗೆ ಡಿಸಿಎಂ ಚಾಲನೆ

    ಬೆಂಗಳೂರು/ಲಂಡನ್: ಇಂಗ್ಲೆಂಡ್‍ನಲ್ಲಿ ನೆಲೆಸಿರುವ ಒಕ್ಕಲಿಗ ಸಮುದಾಯದವರು ಸ್ಥಾಪನೆ ಮಾಡಿರುವ ವಿಶ್ವ ಒಕ್ಕಲಿಗರ ಪರಿಷತ್ತನ್ನು ಶನಿವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಉದ್ಘಾಟಿಸಿದರು.

    ವರ್ಚುಯಲ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನಿಂದಲೇ ಪಾಲ್ಗೊಂಡ ಅವರು, ಉದ್ಘಾಟನಾ ಸಮಾರಂಭದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಉತ್ಸವಕ್ಕೂ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಇಂಗ್ಲೆಂಡ್ ಸೇರಿದಂತೆ ಜಗತ್ತಿನ ನಾನಾ ದೇಶಗಳಲ್ಲಿ ನೆಲೆಸಿರುವ ಒಕ್ಕಲಿಗ ಬಂಧುಗಳ ಸಾಧನೆಯಿಂದ ಸ್ವದೇಶದಲ್ಲಿರುವ ನಮಗೆಲ್ಲರಿಗೂ ಹೆಮ್ಮೆಯಾಗಿದೆ. ಹುಟ್ಟಿದ ನೆಲದಲ್ಲಿ ಉದ್ಯಮ ಸ್ಥಾಪಿಸುವುದೋ ಅಥವಾ ಯಾವುದಾದರೂ ಉಪಯುಕ್ತ ಯೋಜನೆ ಹಾಕಿಕೊಂಡರೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು.

    ಕೃಷಿ ಮೂಲಕ ಅನ್ನ ನೀಡುವ ಒಕ್ಕಲಿಗರು ಎಲ್ಲರಿಗೂ ಆದರ್ಶವಾಗಿದ್ದಾರೆ. ಇಂಥ ಸಮುದಾಯದಲ್ಲೂ ಕಷ್ಟದಲ್ಲಿರುವವರು ಇದ್ದಾರೆ. ಅಂಥವರ ನೆರೆವಿಗೆ ತಾವು ಧಾವಿಸಬೇಕು. ಸಮುದಾಯವನ್ನು ಎಲ್ಲ ರೀತಿಯಲ್ಲೂ ಸಬಲೀಕರಣ ಮಾಡಬೇಕಿದೆ. ಅದಕ್ಕಾಗಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗೋಣ ಎಂದು ಅನಿವಾಸಿ ಒಕ್ಕಲಿಗರಿಗೆ ಕರೆ ನೀಡಿದರು.

    ಲಂಡನ್‍ನಲ್ಲಿ ವಿಶ್ವ ಒಕ್ಕಲಿಗರ ಪರಿಷತ್ತು ಸ್ಥಾಪನೆ ಅತ್ಯಂತ ಅರ್ಥಪೂರ್ಣ ಕೆಲಸವಾಗಿದೆ. ಈ ಮೂಲಕ ಭವಿಷ್ಯ ಅರಸಿಕೊಂಡು ಇಂಗ್ಲೆಂಡ್‍ಗೆ ಬರುವ ತಾಯ್ನಾಡಿನ ಪ್ರತಿಭೆಗಳಿಗೆ ಪರಿಷತ್ತು ನೆರವಾಗಲಿ ಎಂಬ ಆಶಯ ನನ್ನದು ಎಂದರು. ಬಿಜೆಪಿ ಮುಖಂಡರಾದ ಅಶ್ವತ್ಥ ನಾರಾಯಣ ಹಾಜರಿದ್ದರು.

  • ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

    ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು.

    ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

    ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಮ್ಮ ದಸರಾ-ನಮ್ಮ ಸುರಕ್ಷೆ ಎಂಬ ಘೋಷ ವಾಕ್ಯದೊಂದಿಗೆ ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ. ಅಕ್ಟೋಬರ್ 26 ರಂದು ದಸರಾ ವಿಸರ್ಜನಾ ಪೂಜೆ ನಡೆದು ಬಳಿಕ ಕ್ಷೇತ್ರದ ಆವರಣದಲ್ಲೇ ಮೂರ್ತಿಗಳ ಮೆರವಣಿಗೆ ನಡೆಸಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುವುದು.

  • 1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

    1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

    ನವದೆಹಲಿ/ಭೋಪಾಲ್: ಪ್ರಧಾನ ಮಂತ್ರಿ ಆವಸ್ ಯೋಜನೆ ಅಡಿಯಲ್ಲಿ ಮಧ್ಯಪ್ರದೇಶದಲ್ಲಿ ನಿರ್ಮಿಸಲಾಗಿದ್ದ 1.75 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಉದ್ಘಾಟಿಸಿದರು.

    ಘರ್ ಪ್ರವೇಶ ಹೆಸರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಮನೆ ಮಾಲೀಕರಿಗೆ ಮನೆ ಕೀ ನೀಡುವ ಮೂಲಕ ಶುಭ ಹಾರೈಸಿದರು. ಮಧ್ಯಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಕೂಲಿ ಕಾರ್ಮಿಕರಿಗಾಗಿ ಈ ಮನೆಗಳು ನಿರ್ಮಾಣವಾಗಿದ್ದು, ಮಧ್ಯಪ್ರದೇಶ ರಾಜ್ಯ ಒಂದರಲ್ಲೇ ಈವರೆಗೆ ಸ್ವಂತ ಸೂರು ಇಲ್ಲದ ಸುಮಾರು 17 ಲಕ್ಷ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಕ್ಕಿದೆ.

    ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ 1.20 ಲಕ್ಷ ರೂ.ಗಳ ಸರ್ಕಾರದ ಅನುದಾನ ಸಿಗುತ್ತಿದೆ. ಇದರಲ್ಲಿ ಶೇ.60 ಕೇಂದ್ರದಿಂದ ಮತ್ತು ಶೇ.40 ರಾಜ್ಯದಿಂದ ಹಣ ನೀಡಲಾಗುತ್ತದೆ. ಈ ಯೋಜನೆಯಡಿ ದೇಶಾದ್ಯಂತ 2022ರ ವೇಳೆಗೆ 2.95 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.