Tag: income tax

  • ನಿಮ್ಮ ಮಗನ ಆಸ್ತಿ ಎಷ್ಟಿದೆ  – ಡಿಕೆಶಿ ತಾಯಿಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ನಿಮ್ಮ ಮಗನ ಆಸ್ತಿ ಎಷ್ಟಿದೆ – ಡಿಕೆಶಿ ತಾಯಿಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಆದಾಯ ತೆರಿಗೆ ಕಚೇರಿಗೆ ಆಗಮಿಸಿ ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

    ಶುಕ್ರವಾರ ಮಧ್ಯಾಹ್ನ 12.30ಕ್ಕೆ ಆಗಮಿಸಿದ ಗೌರಮ್ಮ ಅವರನ್ನು ಸಂಜೆ 6.30ರವರೆಗೂ ವಿಚಾರಣೆ ನಡೆಸಲಾಯಿತು. ಪಿತ್ರಾರ್ಜಿತ ಆಸ್ತಿ ಮತ್ತು ಮಗನ ಆಸ್ತಿ ಬಗ್ಗೆ ತಾಯಿ ಗೌರಮ್ಮ ಉತ್ತರ ನೀಡಿದ್ದಾರೆ. ಈ ಹಿಂದೆ ಇದೇ ಪ್ರಶ್ನೆಗಳನ್ನು ಕೇಳಿದಾಗ ಡಿಕೆ ಶಿವಕುಮಾರ್ ಉತ್ತರ ನೀಡಲು ಸಮಯವಕಾಶ ಕೇಳಿದ್ದರು.

    ಡಿಕೆಶಿ ತಾಯಿಗೆ ಐಟಿ ಕೇಳಿದ 9 ಪ್ರಶ್ನೆಗಳು ಗೌರಮ್ಮ ಕೊಟ್ಟ ಉತ್ತರವೇನು..?

    ಪ್ರಶ್ನೆ: 1
    ನಿಮ್ಮ ಮಗನ ಆಸ್ತಿ ಎಷ್ಟಿದೆ ಅಂತ ನಿಮಗೆ ಗೊತ್ತಾ?
    ಬೆಂಗಳೂರಿನಾಗೆ ಮನೆ ಐತೆ ಅಂತ ಗೊತ್ತು ಸ್ವಾಮಿ

    ಪ್ರಶ್ನೆ: 2
    ಎಷ್ಟು ಮನೆಗಳಿವೆ ಗೊತ್ತಾ..?
    ಯಾವಾಗ್ಲೋ ಒಂದ್ಸಾರಿ ಬರ್ತೀವಿ ಹೋಗ್ತೀವಿ. ಹೀಗಾಗಿ ನನಗೆ ಗೊತ್ತಿರೋದು ಒಂದೇ ಮನೆ. ಇದನ್ನೂ ಓದಿ: 80 ವರ್ಷದ ತಾಯಿಯನ್ನು 6 ಗಂಟೆ ವಿಚಾರಣೆ ನಡೆಸಿದ್ದು ನೋವು ತಂದಿದೆ: ಡಿಕೆಶಿ

    ಪ್ರಶ್ನೆ: 3
    ನಿಮ್ಮ ಮೊಮ್ಮಗಳು ಏನು ಮಾಡ್ತಿದ್ದಾಳೆ ಗೊತ್ತಾ..?
    ಓದುತ್ತಿರಬೇಕು ಸ್ವಾಮಿ

    ಪ್ರಶ್ನೆ: 4
    ಬ್ಯುಸಿನೆಸ್ ಮಾಡ್ತಿರೋದು ನಿಮಗೆ ಗೊತ್ತಿಲ್ವಾ..?
    ಗೊತ್ತಿಲ್ಲ

    ಪ್ರಶ್ನೆ: 5
    ನಿಮ್ಮ ಸೊಸೆಯ ಬಳಿ ಇರೋ ಚಿನ್ನಾಭರಣ ಎಷ್ಟು ಅಂತ ಗೊತ್ತಾ..?
    ಇಲ್ಲ ಗೊತ್ತಿಲ್ಲ..

    ಪ್ರಶ್ನೆ: 6
    ನಿಮ್ಮ ಮಗನ ಅಕೌಂಟ್‍ನಲ್ಲಿ ಹಣ ಎಷ್ಟಿದೆ ಗೊತ್ತಾ..?
    ಗೊತ್ತಿಲ್ಲ

    ಪ್ರಶ್ನೆ: 7
    ನಿಮ್ಮ ಮಗ ತನ್ನ ವ್ಯವಹಾರದ ಬಗ್ಗೆ ಎಂದಾದ್ರು ತಮ್ಮ ಬಳಿ ಹೇಳಿದ್ದಾರಾ..?
    ಮಂತ್ರಿ ಆಗಿದ್ದಾನೆ ಅಂತ ಗೊತ್ತು. ಬೇರೆ ವ್ಯವಹಾರ ಗೊತ್ತಿಲ್ಲ.

    ಪ್ರಶ್ನೆ: 8
    ನಿಮ್ಮ ಹೆಸರಿನಲ್ಲಿ ನಿಮ್ಮ ಮಗ ಏನಾದ್ರು ಆಸ್ತಿ ಖರೀದಿ ಮಾಡಿದ್ದಾರಾ..?
    ನೆನಪಿಲ್ಲ ಸ್ವಾಮಿ

    ಪ್ರಶ್ನೆ: 9
    ನಿಮ್ಮ ಪಿತ್ರಾರ್ಜಿತ ಆಸ್ತಿ ಎಷ್ಟಿದೆ ..?
    ಅದರ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವನ್ನೂ ಅವರೇ ನೋಡಿಕೊಳ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ಶನಿವಾರವೂ ಮುಂದುವರಿದ ಐಟಿ ಪರಿಶೀಲನೆ – ಅಧಿಕಾರಿಗಳಿಗೆ ಸ್ಟಾರ್ ನಟರು ಹೇಳಿದ್ದೇನು?

    ಶನಿವಾರವೂ ಮುಂದುವರಿದ ಐಟಿ ಪರಿಶೀಲನೆ – ಅಧಿಕಾರಿಗಳಿಗೆ ಸ್ಟಾರ್ ನಟರು ಹೇಳಿದ್ದೇನು?

    ಬೆಂಗಳೂರು: ಸ್ಯಾಂಡಲ್‍ವುಡ್ ಕೋಟಿಗಳಿಕೆಯ ನಟರ ಮೇಲೆ 3ನೇ ದಿನವೂ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಅದರಲ್ಲೂ ಶಿವರಾಜ್ ಕುಮಾರ್ ಮನೆಯಲ್ಲಿ ಇಂದು ಬೆಳಗ್ಗೆಯವರೆಗೂ ಪರಿಶೀಲನಾ ಕಾರ್ಯ ಮುಂದುವರಿಯಿತು.

    ಪುನೀತ್ ರಾಜ್‍ಕುಮಾರ್ ಮನೆಯಲ್ಲಿನ ಶೋಧ ಕಾರ್ಯ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯಗೊಂಡಿದೆ. ಆದರೆ ಯಶ್ ಮತ್ತು ಸುದೀಪ್ ಮನೆಯಲ್ಲಿ ಪರಿಶೀಲನೆ ಮುಂದುವರಿಯಲಿದೆ. ಜೊತೆಗೆ ನಿರ್ಮಾಪಕರಾದ ವಿಜಯ ಕಿರಗಂದೂರು, ಸಿ.ಆರ್.ಮನೋಹರ್, ರಾಕ್‍ಲೈನ್ ವೆಂಕಟೇಶ್, ಜಯಣ್ಣ ಮನೆಯಲ್ಲಿ ಪರಿಶೀಲನೆ ಮುಂದುವರಿಯಲಿದೆ.  ಇದನ್ನೂ ಓದಿ: ಐಟಿ ರೇಡ್ ಹಿಂದಿನ ನಿಜವಾದ ಕಾರಣ ಬಿಚ್ಚಿಟ್ಟ ವಿತರಕ ಪ್ರಶಾಂತ್ ಸಂಬರ್ಗಿ

     

    ಸ್ಟಾರ್ ನಟರ ಮನೆ ಮೇಲಿನ ರೇಡ್ ಒಂದು ಹಂತಕ್ಕೆ ಕ್ಲೋಸ್ ಆಗಿದ್ದರೂ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಸ್ಟಾರ್ ನಟರ ಮನೆಯಲ್ಲಿ ಕೆಜಿಗಟ್ಟಲೆ ಬೆಳ್ಳಿ, ಚಿನ್ನ ಮತ್ತು ಹಣ ಪತ್ತೆಯಾಗಿದೆ. ಈ ಬಂಗಾರ ಮತ್ತು ಹಣಕ್ಕೆ ಸೂಕ್ತ ದಾಖಲೆ ತೋರಿಸಿದ ನಂತರವಷ್ಟೇ ಈ ಆಸ್ತಿಗಳು ಮನೆ ಸೇರಲಿದೆ. ಇದನ್ನೂ ಓದಿ: ನಾಲ್ವರು ಸ್ಟಾರ್‌ಗಳ ಮೇಲಿನ ಐಟಿ ದಾಳಿಗೆ ಜಿಎಸ್‍ಟಿ ಕಾರಣ?

    ಇದರ ಜೊತೆ ಸಾಕಷ್ಟು ಬಿಸಿನೆಸ್‍ನಲ್ಲಿ ಹೂಡಿಕೆ ಮಾಡಿರುವ ಕಾರಣ ಎಲ್ಲದಕ್ಕೂ ದಾಖಲೆ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ಒಂದು ವಾರದ ಗಡುವನ್ನು ಸ್ಟಾರ್ ನಟರು ಕೇಳಿದ್ದಾರೆ ಎನ್ನುವ ಮಾಹಿತಿ ಐಟಿ ಮೂಲಗಳಿಂದ ಸಿಕ್ಕಿದೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರಿಸಿದ ಸ್ಟಾರ್ ನಟರು

    ನಟರ ಬಳಿ ಸಿಕ್ಕಿದ ಆಸ್ತಿಗಿಂತಲೂ ನಿರ್ಮಾಪಕರ ಸಂಪಾದನೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶನಿವಾರವೂ ದಾಖಲೆಗಳ ಪರಿಶೀಲನೆ ಮುಂದುವರಿಯಲಿದೆ.  ಇದನ್ನೂ ಓದಿ: ಆ ಒಂದು ಡೈರಿಯಿಂದ ಸ್ಟಾರ್ ನಟರ ಮನೆ ಮೇಲೆ ದಾಳಿ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಡಿಯ ಮುಂದಿನ ಕಾನೂನು ಪ್ರಕ್ರಿಯೆ ಏನು? ಡಿಕೆಶಿ ಆಗ್ತಾರಾ ಅರೆಸ್ಟ್? ಮುಂದಿರುವ ದಾರಿ ಏನು?

    ಇಡಿಯ ಮುಂದಿನ ಕಾನೂನು ಪ್ರಕ್ರಿಯೆ ಏನು? ಡಿಕೆಶಿ ಆಗ್ತಾರಾ ಅರೆಸ್ಟ್? ಮುಂದಿರುವ ದಾರಿ ಏನು?

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಇಸಿಐಆರ್ ದಾಖಲಿಸಿದೆ.

    ದೂರು ದಾಖಲಾದ ಬಳಿಕ ಪೊಲೀಸರು ಎಫ್‍ಐಆರ್ ಹಾಕುವಂತೆ ಇಡಿ ಅಧಿಕಾರಿಗಳು ಎನ್‍ಫೋರ್ಸ್ ಮೆಂಟ್ ಕೇಸ್ ಇನ್‍ಫಾರ್ಮೆಶನ್ ರಿಪೋರ್ಟ್(ಇಸಿಐಆರ್) ಹಾಕುತ್ತಾರೆ. ಇಲಾಖೆಯ ವರದಿ ಆಧಾರದಲ್ಲಿಯೇ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಸೆಕ್ಷನ್ 120-ಬಿ ಅಡಿ ಒಳಸಂಚು, ಅಕ್ರಮದಲ್ಲಿ ಭಾಗಿ ಆರೋಪದಡಿ 2 ವಾರಗಳ ಹಿಂದೆಯೇ ಇಡಿ ಕೇಸ್ ದಾಖಲಿಸಿದೆ.

    ಕೇಸ್ ದಾಖಲಾದ ಬಳಿಕ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಬಹುದು. ವಿಚಾರಣೆ ವೇಳೆ ಕೇಳಿದ ಪ್ರಶ್ನೆಗೆ ಸರಿಯಾದ ಉತ್ತರ ನೀಡದೇ ಇದ್ದರೆ ಇಡಿ ಕೋರ್ಟ್ ಮೂಲಕ ಜಾಮೀನು ರಹಿತ ವಾರಂಟ್ ಪಡೆಯುವ ಸಾಧ್ಯತೆಯಿದೆ. ಒಂದು ವೇಳೆ ಕೋರ್ಟ್ ನಿಂದ ಈ ಆದೇಶ ಪ್ರಕಟವಾದರೆ ಇಡಿ ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಬಹುದು. ಇದನ್ನು ಓದಿ: ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಡಿಕೆಶಿ ಮಾಸ್ಟರ್ ಪ್ಲಾನ್!

    ಆರೋಪ ಏನು?
    2017ರ ಆಗಸ್ಟ್‍ನಲ್ಲಿ ನಡೆದಿದ್ದ ದಾಳಿ- ದೆಹಲಿಯ ಫ್ಲ್ಯಾಟ್‍ಗಳಲ್ಲಿ 8.5 ಕೋಟಿ ರೂ. ಹಣ ಸಿಕ್ಕಿತ್ತು. ಆದಾಯ ತೆರಿಗೆ ಸಲ್ಲಿಸಿದ್ದ ಆರೋಪಪಟ್ಟಿಯನ್ನೇ ಆಧರಿಸಿ ಇಡಿ ಇಸಿಐಆರ್ ದಾಖಲಿಸಿದ್ದು ಡಿಕೆಶಿ ನಂಬರ್ 1 ಆರೋಪಿಯಾಗಿದ್ದಾರೆ. ಡಿಕೆಶಿ ಶರ್ಮಾ ಟ್ರಾವೆಲ್ಸ್ ಮಾಲೀಕ ಎಸ್‍ಕೆ ಶರ್ಮಾರಿಂದ ಹವಾಲಾ ದಂಧೆ ನಡೆದಿದ್ದು, ಇತರೆ ಮೂವರ ನೆರವಿನೊಂದಿಗೆ ನಿರಂತರವಾಗಿ ತೆರಿಗೆ ವಂಚಿತ ಹಣ ಸರಬರಾಜು ಮಾಡಿದ್ದಾರೆ. ದೆಹಲಿ, ಬೆಂಗಳೂರು ನಿವಾಸಗಳ ನಡುವೆ ಹಣ ಸಾಗಾಟಕ್ಕಾಗಿಯೇ ಬೃಹತ್ ನೆಟ್‍ವರ್ಕ್ ಇದ್ದು, ಈ ಕೆಲಸಕ್ಕಾಗಿ ಡಿಕೆಶಿ ವ್ಯಕ್ತಿಗಳ ನೆಟ್‍ವರ್ಕ್ ಬೆಳೆಸಿಕೊಂಡಿದ್ದಾರೆ. ಕರ್ನಾಟಕ ಭವನದ ಉದ್ಯೋಗಿ ಹನುಮಂತಯ್ಯ ಹವಾಲಾ ಹಣದ ಹೊಣೆಗಾರಿಕೆಯನ್ನು ಉಸ್ತುವರಿ ವಹಿಸಿಕೊಂಡಿದ್ದ ಅಷ್ಟೇ ಅಲ್ಲದೇ ದೆಹಲಿಯಲ್ಲಿ ಡಿಕೆಶಿ ಕಳಿಸ್ತಿದ್ದ ಹವಾಲಾ ಹಣವನ್ನು ಸಂಗ್ರಹಿಸುತ್ತಿದ್ದ. ಶರ್ಮಾ ಟ್ರಾವೆಲ್ಸ್‍ನ ಶರ್ಮಾ ಪರ ಕರ್ನಾಟಕ ಭವನದ ಸಿಬ್ಬಂದಿ ರಾಜೇಂದ್ರ ಕೆಲ್ಸ ಮಾಡುತ್ತಿದ್ದ.

    ಐಟಿ ದಾಳಿಯ ವೇಳೆ ದೆಹಲಿಯ ಸಫ್ದರ್‍ಜಂಗ್‍ನಲ್ಲಿ 8,59,69,100 ರೂ. ಹಣ ಸಿಕ್ಕಿತ್ತು. ಇದರಲ್ಲಿ 41,03,600 ರೂ. ಕೃಷಿ ಆದಾಯದಿಂದ ಬಂದಿದ್ದಾಗಿ ಐಟಿ ಮುಂದೆ ಡಿಕೆಶಿ ಹೇಳಿಕೆ ನೀಡಿದ್ದರು. ಹಣ ಚಲಾವಣೆ ಬಗ್ಗೆ ಸಫ್ದರ್ ಜಂಗ್ ಎನ್‍ಕ್ಲೇವ್ ಫ್ಲ್ಯಾಟ್‍ನ ಕಾರು ಚಾಲಕನಿಂದಲೇ ಮಾಹಿತಿ ನೀಡಿದ್ದ. ಆದರೆ ಆದಾಯ ತೆರಿಗೆ ಅಧಿಕಾರಿಗಳ ಪ್ರಶ್ನೆಗೆ ದಾಖಲೆ ಸಮೇತ ಡಿಕೆಶಿ ಉತ್ತರ ನೀಡಿರಲಿಲ್ಲ. ದಾಳಿ ವೇಳೆ ಆರೋಪಿಗಳು ಬರೆದಿದ್ದ ಡೈರಿಗಳನ್ನ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

    ಡಿಕೆಶಿ ಮುಂದಿರುವ ದಾರಿ ಏನು?
    ಜಾರಿ ನಿರ್ದೇಶನಾಲಯ ದಾಖಲಿಸಿರುವ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಬಹುದು. ಇಡಿ ತನಿಖೆಗೆ ಮಧ್ಯಂತರ ತಡೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಹಾಕಬಹುದು. ನಿರೀಕ್ಷಣಾ ಜಾಮೀನು ಕೋರಿ ಆರ್ಥಿಕ ಅಪರಾಧಗಳ ಕೋರ್ಟ್ ಗೆ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನ ಕೋರ್ಟ್ ನಲ್ಲೇ ವಿಚಾರಣೆ ನಡೆಸುವಂತೆ ಕೋರಿ ಕಾನೂನು ಹೋರಾಟ ನಡೆಸಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹ: ಅರುಣ್ ಜೇಟ್ಲಿ

    ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹ: ಅರುಣ್ ಜೇಟ್ಲಿ

    ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧದಿಂದಾಗಿ ದೇಶದ ಆರ್ಥಿಕತೆ ಸುಗಮವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಟೀಕಾಕಾರಿಗೆ ಉತ್ತರಿಸಿದ್ದಾರೆ.

    ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಗೊಳಿಸಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ಸರ್ಕಾರದ ಈ ಕ್ರಮದಿಂದ ಇಂದು ದೇಶದ ಆರ್ಥಿಕತೆ ಸುಗಮವಾಗಿ ನಡೆಯಲು ಸಹಾಯಕವಾಗಿದೆ. ಅಲ್ಲದೇ ದಾಖಲೆಯ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದಿದ್ದಾರೆ.

    ನೋಟು ಅಮಾನ್ಯೀಕರಣದ ಮೊದಲು 2 ವರ್ಷಗಳಲ್ಲಿ ತೆರಿಗೆ ಸಂಗ್ರಹ ಕೇವಲ ಶೇ.6.6 ರಿಂದ ಶೇ.9 ರಷ್ಟಿತ್ತು. ನೋಟು ನಿಷೇಧದ ಬಳಿಕ ಇದರ ಪ್ರಮಾಣ ಶೇ.15 ರಿಂದ ಶೇ.18ಕ್ಕೆ ಗಣನೀಯವಾಗಿ ಏರಿಕೆಯಾಗಿದೆ. 2014 ರಲ್ಲಿ ಆದಾಯ ತೆರಿಗೆ ಪಾವತಿಸುತ್ತಿದ್ದವರ ಸಂಖ್ಯೆ ಕೇವಲ 3.8 ಕೋಟಿಯಷ್ಟಿತ್ತು, ಸದ್ಯ 2017-18ನೇ ಸಾಲಿನಲ್ಲಿ 6.86 ಕೋಟಿ ಗ್ರಾಹಕರು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದಾರೆ ಎಂದು ಹೇಳಿದರು.

    ನೋಟು ಅಮಾನ್ಯೀಕರಣದಿಂದಾಗಿ 2016ರ ನವೆಂಬರ್ 8 ರವರೆಗು ಚಲಾವಣೆಯಲ್ಲಿದ್ದ 500 ಹಾಗೂ 1,000 ಮುಖಬೆಲೆಯ 15.41 ಲಕ್ಷ ಕೋಟಿ ರೂಪಾಯಿಗಳ ಪೈಕಿ 15.31 ಲಕ್ಷ ಕೋಟಿ ರೂಪಾಯಿಗಳು ಭಾರತೀಯ ರಿಸರ್ವ್ ಬ್ಯಾಂಕಿಗೆ ಜಮೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 15.3 ಲಕ್ಷ ಕೋಟಿ ರೂ. ಮೌಲ್ಯದ 99.3% ನಿಷೇಧಗೊಂಡಿದ್ದ ನೋಟುಗಳು ವಾಪಸ್: ಆರ್‌ಬಿಐ

    ಟೀಕೆ ಏನು:
    ಪ್ರಧಾನಿ ನರೇಂದ್ರ ಮೋದಿಯವರು 2016 ರ ನವೆಂಬರ್ 8 ರಂದು 500 ಹಾಗೂ 1,000 ಮುಖ ಬೆಲೆಯ ನೋಟುಗಳನ್ನು ಅಮಾನ್ಯೀಕರಣಗೊಳಿಸಿದ್ದರು. ಇದರ ಸಂಬಂಧ ಆರ್‍ಬಿಐ ಇತ್ತೀಚೆಗೆ ನೋಟು ಅಮಾನ್ಯೀಕರಣದಿಂದಾಗಿ ಚಲಾವಣೆಯಲ್ಲಿದ್ದ ಬಹುತೇಕ ಎಲ್ಲಾ 500 ಹಾಗೂ 1,000 ಸಾವಿರ ಮುಖಬೆಲೆಯ ನೋಟುಗಳು ಬ್ಯಾಂಕುಗಳಿಗೆ ಜಮೆಯಾಗಿದೆ ಎಂದು ವರದಿ ನೀಡಿತ್ತು. ಈ ವರದಿಯು ದೇಶಾದ್ಯಂತ ವಾಪಕ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದಲ್ಲದೆ, ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಮಾಡುವ ಮೂಲಕ ಏನು ಸಾಧನೆ ಮಾಡಿದೆ ಎಂಬ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಾಮೀನು ಪಡೆದ ಬಳಿಕ ಡಿಕೆಶಿಯಿಂದ `ದೊಡ್ಡ ನಮಸ್ಕಾರ’!

    ಜಾಮೀನು ಪಡೆದ ಬಳಿಕ ಡಿಕೆಶಿಯಿಂದ `ದೊಡ್ಡ ನಮಸ್ಕಾರ’!

    ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. 50 ಸಾವಿರ ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ಡಿ.ಕೆ.ಶಿವಕುಮಾರ್ ಜತೆಗೆ ಐವರಿಗೂ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಐಟಿ ದೂರಿಗೆ ಮೊದಲು ಪೂರ್ವಾನುಮತಿ ಪಡೆದಿಲ್ಲ. ಆಯುಕ್ತರ ಬದಲು ನಿರ್ದೇಶಕರಿಂದ ಪೂರ್ವಾನುಮತಿ ಪಡೆಯಲಾಗಿತ್ತು. ಇದರಿಂದ ಐಟಿ ಕಾಯ್ದೆಯ ಉಲ್ಲಂಘನೆಯಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಡಿಕೆ ಶಿವಕುಮಾರ್ ಹಾಗೂ ಇತರೆ ಆರೋಪಿ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ.

    ವಾದವನ್ನು ಅಲಿಸಿದ ಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಡಿಕೆ ಶಿವಕುಮಾರ್ ಕೋರ್ಟ್ ಗೆ ಹಾಜರಾಗಿದ್ದರು. ಕೋರ್ಟ್ ನಲ್ಲಿ ಡಿಕೆಶಿ ಪರ ಹಿರಿಯ ವಕೀಲ ಬಿ.ವಿ ಆಚಾರ್ಯ ಮತ್ತು ನಂಜುಂಡ ರೆಡ್ಡಿ ವಾದ ಮಂಡಿಸಿದ್ದರು.

    ಜಾಮೀನು ಪಡೆದು ಹೊರ ಬಂದ ಬಳಿಕ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಕೈ ಮುಗಿದು ಒಂದು ನಿಮಿಷ ನಿಂತುಕೊಂಡು, ನ್ಯಾಯಾಲಯಕ್ಕೆ ತಲೆಬಾಗಿ ಬಂದಿದ್ದೇನೆ ಅಷ್ಟೇ ಎಂದು ಹೇಳಿ ಹೊರಟು ಹೋದರು.

    ಏನಿದು ಪ್ರಕರಣ?
    ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ನ್ಯಾಯಾಲಯದ ನ್ಯಾ.ಎಂ.ಎಸ್. ಆಳ್ವಾ ಅವರು ಡಿಕೆ ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಡಿಕೆಶಿ ಜೊತೆಗೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧವೂ ಸಮನ್ಸ್ ಜಾರಿಯಾಗಿತ್ತು.

  • ಗಮನಿಸಿ, ಐಟಿ ರಿಟರ್ನ್ಸ್ ಹೆಸರಲ್ಲಿ ಬರೋ ಇಮೇಲ್ ಓಪನ್ ಮಾಡೋ ಮೊದಲು ಈ ಸುದ್ದಿ ಓದಿ

    ಗಮನಿಸಿ, ಐಟಿ ರಿಟರ್ನ್ಸ್ ಹೆಸರಲ್ಲಿ ಬರೋ ಇಮೇಲ್ ಓಪನ್ ಮಾಡೋ ಮೊದಲು ಈ ಸುದ್ದಿ ಓದಿ

    ಮುಂಬೈ: ಐಟಿ ರಿಟರ್ನ್ಸ್ ಸಲ್ಲಿಸಲು ಡೆಡ್‍ಲೈನ್ ಹತ್ತಿರವಾಗುತ್ತಿರುವುದರಿಂದ ಸೈಬರ್ ವಂಚಕರು ಜನರಿಗೆ ಟೋಪಿ ಹಾಕಲು ಮುಂದಾಗಿದ್ದಾರೆ. ಐಟಿ ಇಲಾಖೆಗೆ ಸಂಬಂಧ ಪಟ್ಟ ಇಮೇಲ್ ಮಾದರಿಯಲ್ಲೇ ಅದೇ ತರಹದ ಇಮೇಲನ್ನು ಸೈಬರ್ ವಂಚಕರು ಸೃಷ್ಟಿಸಿದ್ದಾರೆ. ಹೀಗಾಗಿ ನೀವು ಆದಾಯ ತೆರಿಗೆದಾರರಾಗಿದ್ದರೆ ವಂಚಕರ ಜಾಲದಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ.

    ಹೌದು. ಆದಾಯ ತೆರಿಗೆ ರಿಟರ್ನ್ಸ್ ಹಣವನ್ನು ಮರಳಿ ಪಡೆಯಲು ನೆಟ್ ಬ್ಯಾಂಕಿಂಗ್ ಮಾಹಿತಿಗಳನ್ನು ನೀಡಬೇಕೆಂದು ಸ್ಪ್ಯಾಮ್ ಮೇಲ್‍ಗಳ ಮೂಲಕ ಆದಾಯ ತೆರಿಗೆದಾರರನ್ನು ವಂಚಿಸಲು ನಾನಾ ರೀತಿಯ ಪ್ರಯತ್ನಗಳನ್ನು ಸೈಬರ್ ವಂಚಕರು ನಡೆಸಿರುವುದು ಈಗ ಬೆಳಕಿಗೆ ಬಂದಿದೆ.

    ಸರಕಾರಿ ವೆಬ್‍ಸೈಟ್ ಅಥವಾ ಇಮೇಲ್ ವಿಳಾಸಗಳ ರೀತಿಯಲ್ಲೇ ಸೈಬರ್ ವಂಚಕರು ನಕಲಿ ವೆಬ್‍ಸೈಟ್, ಇಮೇಲ್‍ಗಳನ್ನು ಸೃಷ್ಟಿಸಿ ಆದಾಯ ತೆರಿಗೆದಾರರನ್ನು ಬಲೆಗೆ ಕೆಡವಲು ಯತ್ನಿಸಿದ್ದಾರೆ. ಐಟಿ ರಿಟರ್ನ್ಸ್ ಸಲ್ಲಿಸಲು ಆದಾಯ ಇಲಾಖೆ ತನ್ನ @donotreplyincometaxindiaefiling.gov.in ಇಮೇಲ್ ಮೂಲಕ ಸಂದೇಶ ಬರುತ್ತದೆ. ಆದರೆ ಸೈಬರ್ ವಂಚಕರು @donotreplyincometaxindiafilling.gov.in ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿದ್ದಾರೆ. ಇದರಲ್ಲಿ efiling ನಲ್ಲಿ e ನಾಪತ್ತೆಯಾಗಿದ್ದು, filing ಬದಲು filling ಎಂದು ಬಳಸಿ ನಕಲಿ ಮೇಲ್ ಐಡಿ ಓಪನ್ ಮಾಡಿದ್ದಾರೆ.

    ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ನಾವು ನಮ್ಮ ವೆಬ್‍ಸೈಟಿನಲ್ಲಿ ಹಾಗೂ ಮೊಬೈಲ್‍ಗೆ ಸಂದೇಶಗಳನ್ನು ಕಳುಹಿಸಿ ಆನ್‍ಲೈನ್ ವಂಚಕರ ಬಗ್ಗೆ ಎಚ್ಚರಿಕೆ ನೀಡುತ್ತಿರುತ್ತೇವೆ. ಅನುಮಾನಾಸ್ಪದ ಇ-ಮೇಲ್‍ಗಳಿಗೆ ಜನರು ಯಾವುದೇ ಕಾರಣಕ್ಕೂ ಉತ್ತರಿಸುವುದು ಬೇಡ. ಇಂತಹ ವೆಬ್ ಸೈಟ್‍ಗಳಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಬ್ಯಾಂಕ್ ಅಕೌಂಟ್‍ನ ಮಾಹಿತಿ, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡಿನ ಮಾಹಿತಿಯನ್ನು ನೀಡಬೇಡಿ. ಈ ರೀತಿಯ ಮಾಹಿತಿಗಳನ್ನು ಆದಾಯ ತೆರಿಗೆ ಇಲಾಖೆ ಕೇಳುವುದಿಲ್ಲ ಎಂದು ತಿಳಿಸಿದ್ದಾರೆ.

    ಜುಲೈ 31 ಡೆಡ್‍ಲೈನ್ ಹತ್ತಿರ ಬರುತ್ತಿರುವುದರಿಂದ ಈ ರೀತಿಯ ಸ್ಪ್ಯಾಮ್ ಮೇಲ್‍ಗಳು ಹೆಚ್ಚಾಗುತ್ತಿವೆ. ಐಟಿ ಇಲಾಖೆ ಕಡೆಯಿಂದ ಎಂದು ಹೇಳಿಕೊಂಡು ವಂಚಕರು ನಿಮಗೆ ದೂರವಾಣಿ ಕರೆಗಳನ್ನು ಹಾಗೂ ಇ-ಮೇಲ್ ಮಾಡುತ್ತಿರುತ್ತಾರೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಯಾವುದೇ ಕಾರಣಕ್ಕೂ ಗ್ರಾಹಕರಿಗೆ ಫೋನ್ ಮಾಡಿ ದಾಖಲೆಗಳನ್ನು ಕೇಳುವುದಿಲ್ಲ. ಈ ಕುರಿತು ಗ್ರಾಹಕರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

  • ಉದ್ದೇಶಪೂರ್ವಕ ಐಟಿ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು

    ಉದ್ದೇಶಪೂರ್ವಕ ಐಟಿ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು

    ಬೆಂಗಳೂರು: ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

    ಐಟಿ ಇಲಾಖೆಯನ್ನು ಮೋದಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಎರಡು ದೂರು ನೀಡಿದ್ದೇವೆ. ಆದರೂ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನೇತೃತ್ವದ ನಿಯೋಗ ದೂರು ನೀಡಿದೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ 5 ಕೋಟಿ ರೂ. ಅಕ್ರಮ ಹಣವನ್ನು ಪ್ರತಿ ವಿಧಾನಸಭಾಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಯಲಹಂಕ ಸೇರಿದಂತೆ ಕೆಲವೆಡೆ ದೇವರ ಲ್ಲಿ ಪ್ರಮಾಣ ಮಾಡಿಸಿ ಬಿಜೆಪಿ ವೋಟು ಪಡೆಯುತ್ತಿದೆ. ಸುರೇಶ್ ಕುಮಾರ್ ಪುತ್ರಿ ಹಣ ಹಂಚಿಕೆ ದೂರು ಏನಾಯ್ತು ಎಂದು ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಕೇಳಿದೆ.

  • ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮೇಲೆ ಐಟಿ ದಾಳಿ

    ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮೇಲೆ ಐಟಿ ದಾಳಿ

    ದಾವಣಗೆರೆ: ರಾಜ್ಯದ ಪ್ರಖ್ಯಾತ ಉದ್ಯಮಿ, ಬಿ.ಎಸ್ ಚನ್ನಬಸಪ್ಪ ಅಂಡ್ ಸನ್ಸ್ ಜವಳಿ ಮಳಿಗೆಗಳ ಮಾಲೀಕ ಬಿ.ಸಿ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಬೆಂಗಳೂರು ಹಾಗೂ ದಾವಣಗೆರೆಯ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

    ಕಾಳಿಕಾದೇವಿ ರಸ್ತೆಯ ಬಟ್ಟೆ ಅಂಗಡಿ, ಎವಿಕೆ ರಸ್ತೆ ಹಾಗೂ ಡೆಂಟಲ್ ಕಾಲೇಜ್‍ ಬಳಿ ಇರುವ ಮಳಿಗೆಗಳ ಮೇಲೆ ದಾಳಿ ನಡೆದಿದ್ದು ಪರಿಶೀಲನೆ ನಡೆಯುತ್ತಿದೆ.

     

  • ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

    ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

    ಕಾರವಾರ: ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

    ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ ಎಂದು ಹೇಳಿದರು.

    ಐಟಿ ದಾಳಿಯಿಂದ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಮಾಹಿತಿ ಸಿಕ್ಕ ನಂತರವೇ ಇಡೀ ಕುಟುಂಬವನ್ನ ವಿಚಾರಣೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಿದ್ದಾರೆ. ಇದಾದ ನಂತರ ಅನಿವಾರ್ಯವಾಗಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

    ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

     

    ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

     

     

     

  • ಡಿಕೆಶಿ ಮನೆಯಲ್ಲಿ ನಗನಾಣ್ಯ ಪತ್ತೆ: ಬಿಜೆಪಿ ಸೇರ್ಪಡೆ ಆಮಿಷ ಆರೋಪಕ್ಕೆ ಐಟಿ ಕೆಂಡಾಮಂಡಲ

    ಡಿಕೆಶಿ ಮನೆಯಲ್ಲಿ ನಗನಾಣ್ಯ ಪತ್ತೆ: ಬಿಜೆಪಿ ಸೇರ್ಪಡೆ ಆಮಿಷ ಆರೋಪಕ್ಕೆ ಐಟಿ ಕೆಂಡಾಮಂಡಲ

    ಬೆಂಗಳೂರು: ಐಟಿ ದಾಳಿ ಬಿಜೆಪಿ ಪ್ರೇರಿತ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯಲು ದಾಳಿ ನಡೆದಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆದಾಯ ತೆರಿಗೆ ಇಲಾಖೆ ಗರಂ ಆಗಿದೆ.

    ಗುರುವಾರ ಸಂಜೆ ಕರ್ನಾಟಕ ಗೋವಾ ಪ್ರಾಂತ್ಯದ ಐಟಿ ಇಲಾಖೆ ಮಹಾನಿರ್ದೇಶಕರಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಿಎಂ ಆರೋಪವನ್ನು ಅಲ್ಲಗಳೆದಿದ್ದಾರೆ. ಐಟಿ ಅಧಿಕಾರಿಗಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ಇಲಾಖೆ ವೃತ್ತಪರತೆ ಹೊಂದಿದ್ದು, ಮುಖ್ಯಮಂತ್ರಿ ಆರೋಪ ಸರಿಯಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

    ಡಿಕೆಶಿ ಮನೆ ಮೇಲೆ ನಡೆದ ರೇಡ್‍ಗೆ ಸಂಬಂಧಿಸಿದಂತೆ ಮಹತ್ವದ ಸುಳಿವು ಕೂಡ ಬಿಟ್ಟುಕೊಟ್ಟಿದ್ದಾರೆ. ದಾಳಿ ವೇಳೆ, ನೂರಾರು ಕೋಟಿ ಅಘೋಷಿತ ಆಸ್ತಿ, ಚಿನ್ನಾಭರಣ ಪತ್ತೆಯಾಗಿರುವುದಾಗಿ ಮಾಧ್ಯಮ ಪ್ರಕಟಣೆ ತಿಳಿಸಲಾಗಿದೆ.

    ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
    ನಮ್ಮ ಐಟಿ ದಾಳಿಯನ್ನ ಕೆಲವು ರಾಜಕೀಯ ಮುಖಂಡರು ಕೆಲ ಆರೋಪಗಳನ್ನ ಮಾಡುತ್ತಿದ್ದಾರೆ. ಐಟಿ ದಾಳಿ, ಐಟಿ ಇಲಾಖೆ ರಾಜಕೀಯ ಪ್ರೇರಿತ ಎಂದು ಆರೋಪಗಳನ್ನ ಮಾಡಿದ್ದಾರೆ. ಆದರಲ್ಲೂ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿ, ಐಟಿ ಅಧಿಕಾರಿಗಳು ದಾಳಿ ವೇಳೆ ಸಚಿವರನ್ನು ಬಿಜೆಪಿಗೆ ಸೇರುವಂತೆ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನ ನಾವು ಪ್ರಬಲವಾಗಿ ತಳ್ಳಿಹಾಕುತ್ತಿದ್ದೇವೆ. ಐಟಿ ಇಲಾಖೆ ವೃತ್ತಿಪರ, ರಾಜಕೀಯೇತರ ಇಲಾಖೆ. ದಾಳಿಯ ಸಂದರ್ಭದಲ್ಲಿ ನೂರಾರು ಕೋಟಿ ಅಘೋಷಿತ ಆಸ್ತಿ, ಚಿನ್ನಾಭರಣಗಳು ಪತ್ತೆಯಾಗಿವೆ. ಇದನ್ನು ದಾಳಿಯ ಸಂದರ್ಭದಲ್ಲಿ ಅವರು ಒಪ್ಪಿಕೊಂಡಿದ್ದಾರೆ.

    ಇದನ್ನೂ ಓದಿ: ಬಿಜೆಪಿಯಿಂದ ನಿಮಗೆ ಆಹ್ವಾನ ಬಂದಿತ್ತಾ: ಡಿಕೆಶಿ ತಿಳಿಸಿದ್ದು ಹೀಗೆ

    ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ