Tag: income tax

  • ಬ್ಯಾನ್ ಆಗಿದ್ರೂ  2 ಲಕ್ಷ ರೂ. ನಗದು ವ್ಯವಹಾರ ನಡೆಸೋ ಮಂದಿಗೆ ಐಟಿ ವಾರ್ನಿಂಗ್

    ಬ್ಯಾನ್ ಆಗಿದ್ರೂ 2 ಲಕ್ಷ ರೂ. ನಗದು ವ್ಯವಹಾರ ನಡೆಸೋ ಮಂದಿಗೆ ಐಟಿ ವಾರ್ನಿಂಗ್

    ನವದೆಹಲಿ: 2 ಲಕ್ಷ ರೂಪಾಯಿ ಅಥವಾ ಅದಕ್ಕಿಂತಲೂ ಹೆಚ್ಚಿನ ನಗದು ವ್ಯವಹಾರವನ್ನು ಇನ್ನೂ ನೀವು ಮಾಡುತ್ತಿದ್ದರೆ ಅಷ್ಟೇ ಅಪ್ರಮಾಣದ ದಂಡವನ್ನು ಕಟ್ಟಲು ರೆಡಿಯಾಗಿ.

    ಹೌದು. 2 ಲಕ್ಷ ರೂ. ಅಥವಾ ಅದಕ್ಕಿಂತ ಹೆಚ್ಚಿನ ನಗದು ವ್ಯವಹಾರ ನಡೆಸುವ ಮಂದಿಗೆ ಅಷ್ಟೇ ಪ್ರಮಾಣದ ದಂಡವನ್ನು ವಿಧಿಸಲಾಗುವುದು ಎಂದು ಶುಕ್ರವಾರ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

    ಕೇಂದ್ರ ಸರ್ಕಾರ ಈ ವರ್ಷದ ಏಪ್ರಿಲ್ 1ರ ಬಳಿಕ 2 ಲಕ್ಷ ರೂ. ನಗದು ವ್ಯವಹಾರವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧ ಇದ್ದರೂ 2 ಲಕ್ಷ ರೂ. ನಗದು ವ್ಯವಹಾರ ನಡೆಸಿದರೆ ಅಂತವರ ಮೇಲೆ ದಂಡ ವಿಧಿಸುವುದಾಗಿ ಆದಾಯ ತೆರಿಗೆ ಇಲಾಖೆ ಹೇಳಿದೆ.

    ಅಕ್ರಮವಾಗಿ 2 ಲಕ್ಷ ರೂ.ಗಿಂತ ಹೆಚ್ಚಿನ ನಗದು ವ್ಯವಹಾರ ನಡೆಸಿದವರ ಮಾಹಿತಿಯನ್ನು blackmoneyinfo@incometax.gov.in ಇಮೇಲ್ ಮಾಡುವಂತೆ ತೆರಿಗೆ ಇಲಾಖೆ ಜನರಲ್ಲಿ ಕೇಳಿಕೊಂಡಿದೆ.

    ಸಚಿವ ಅರುಣ್ ಜೇಟ್ಲಿ ತಮ್ಮ ಹಣಕಾಸು ಬಜೆಟ್ ನಲ್ಲಿ 2 ಲಕ್ಷ ರೂ.ಗಿಂತ ಹೆಚ್ಚಿನ ನಗದು ವ್ಯವಹಾರವನ್ನು ನಿಷೇಧಿಸುವ ಪ್ರಸ್ತಾಪವನ್ನು ಮಂಡಿಸಿದ್ದರು. ಈ ಬಜೆಟ್‍ಗೆ ಮಾರ್ಚ್ ತಿಂಗಳಿನಲ್ಲಿ ಸಂಸತ್ತು ಅನುಮೋದನೆ ನೀಡಿತ್ತು.

    ನವೆಂಬರ್ 8ರಂದು 1 ಸಾವಿರ ರೂ. ಮತ್ತು 500 ರೂ.ಗಳನ್ನು ನಿಷೇಧಗೊಂಡ ಬಳಿಕ ಸರ್ಕಾರ ಕಪ್ಪು ಹಣವನ್ನು ತಡೆಗಟ್ಟಲು, ಜನರಿಗೆ ಕಪ್ಪುಕುಳಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲು blackmoneyinfo@incometax.gov.in ಇಮೇಲ್ ತೆರೆಯಲಾಗಿದೆ.

  • ಮಾಜಿ ಕೇಂದ್ರ ಸಚಿವ ಸಿದ್ದೇಶ್ವರ್ ನಿವಾಸದ ಮೇಲೆ ಐಟಿ ದಾಳಿ

    ಮಾಜಿ ಕೇಂದ್ರ ಸಚಿವ ಸಿದ್ದೇಶ್ವರ್ ನಿವಾಸದ ಮೇಲೆ ಐಟಿ ದಾಳಿ

    ಚಿತ್ರದುರ್ಗ: ಕೇಂದ್ರ ಮಾಜಿ ಸಚಿವ ಸಿದ್ದೇಶ್ವರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಚಿತ್ರದುರ್ಗದ ಭೀಮಸಂದ್ರದಲ್ಲಿರುವ ತೋಟದ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಜಿಎಂ ಸಿದ್ದೇಶ್ವರ್ ಗೆ ಸೇರಿದ ಮೂರು ಫ್ಯಾಕ್ಟರಿ ಮತ್ತು ಜಿಎಂ ಸೌಹಾರ್ದ ಪತ್ತಿನ ಸಹಕಾರಿ ಬ್ಯಾಂಕಿನ ಮೇಲೂ ದಾಳಿ ನಡೆದಿದೆ.

    ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರವಾಗಿರುವ ಜಿಎಂ ಸಿದ್ದೇಶ್ವರ್ ಈ ಹಿಂದೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವರಾಗಿದ್ದರು. ಮೋದಿ ಸಂಪುಟದ ಪುನಾರಚನೆ ವೇಳೆ ಅವರನ್ನು ಕೈಬಿಡಲಾಗಿತ್ತು.

  • 1000 ಕೋಟಿ ಬೇನಾಮಿ ಆಸ್ತಿ ಡೀಲ್: ಲಾಲೂಗೆ ಐಟಿ ಶಾಕ್

    1000 ಕೋಟಿ ಬೇನಾಮಿ ಆಸ್ತಿ ಡೀಲ್: ಲಾಲೂಗೆ ಐಟಿ ಶಾಕ್

    ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ ಚಿದಂಬರಂಗೆ ಸಿಬಿಐ ಶಾಕ್ ನೀಡಿದರೆ, ಆರ್‍ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‍ಗೆ ಆದಾಯ ತೆರಿಗೆ ಇಲಾಖೆ ಭರ್ಜರಿ ಶಾಕ್ ನೀಡಿದೆ.

    ಲಾಲೂ ಪ್ರಸಾದ್ ಯಾದವ್ ಅವರಿಗೆ ಸಂಬಂಧ ಇದೆ ಎಂದು ಹೇಳಲಾಗುತ್ತಿರುವ 1 ಸಾವಿರ ಕೋಟಿ ರೂ. ಬೇನಾಮಿ ಭೂಮಿ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ದೆಹಲಿ ಎನ್‍ಸಿಆರ್ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

    ರಿಯಲ್ ಎಸ್ಟೇಟ್ ಎಜೆಂಟ್ ಮತ್ತು ಉದ್ಯಮಿಗಳ ನಿವಾಸ, ಕಚೇರಿಯ ಸೇರಿದಂತೆ 22 ಕಡೆಯಲ್ಲಿ ಈ ದಾಳಿ ನಡೆದಿದೆ. 100 ಮಂದಿ ತೆರಿಗೆ ಅಧಿಕಾರಿಗಳು, ಮತ್ತು ಪೊಲೀಸರ ತಂಡ ಇಂದು ಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

    ಬಿಹಾರದ ಬಿಜೆಪಿ ಘಟಕ ಕೆಲ ದಿನಗಳ ಹಿಂದೆ ಲಾಲೂ ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದ ವೇಳೆ ತಮ್ಮ ಮಕ್ಕಳಿಗಾಗಿ 1000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಿ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಲಾಲೂ ವಿರುದ್ಧ ನಿಖೆ ನಡೆಸಬೇಕೆಂದು ಆಗ್ರಹಿಸಿತ್ತು.

    ಬಿಜೆಪಿಯನ್ನು ಪ್ರಶ್ನೆ ಮಾಡಿದ ರಾಜಕೀಯ ನಾಯಕರ ಮಾನವನ್ನು ಹರಾಜು ಹಾಕಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ ಎಂದು ಲಾಲೂ ಪ್ರಸಾದ್ ಯಾದವ್ ಸೋಮವಾರ ಹೇಳಿದ್ದರು.

    ಇದನ್ನೂ ಓದಿ: ಈ ಐಡಿಯಾ ಮಾಡಿದ್ರೆ 2019ರಲ್ಲಿ ಬಿಜೆಪಿ ಸೋಲುತ್ತೆ.. ಏನಿದು ಲಾಲೂ ಐಡಿಯಾ?

  • ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

    ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ದಿದ್ರೆ ಸಿಮ್ ಸಿಗಲ್ಲ!

    ನವದೆಹಲಿ: ನಿಮ್ಮ ಬಳಿ ಆಧಾರ್ ಕಾರ್ಡ್ ಇಲ್ಲವೆಂದಲ್ಲಿ ಇನ್ನು ಮುಂದೆ ಮೊಬೈಲ್ ಸಿಮ್ ಕಾರ್ಡ್ ಸಿಗಲ್ಲ.

    ಹೌದು. ಈಗಾಗಲೇ ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೇಳಿರುವ ಕೇಂದ್ರ ಸರ್ಕಾರ ಇದೀಗ ಮೊಬೈಲ್ ಸಿಮ್ ಪಡೆಯಲು ಕೂಡ ಆಧಾರ್ ಕಾರ್ಡ್ ಕಡ್ಡಾಯ ಮಾಡಲು ಮುಂದಾಗಿದೆ.

    ಈ ಸಂಬಂಧ ಟೆಲಿಕಾಂ ಇಲಾಖೆ ಎಲ್ಲಾ ಟೆಲಿಕಾಂ ಕಂಪೆನಿಗಳಿಗೂ ನೋಟಿಸ್ ಕಳುಹಿಸಿದ್ದು, ಮೊಬೈಲ್ ಚಂದಾದಾರರ ಸಿಮ್ ಕಾರ್ಡ್‍ಗಳು ಅವರ ಆಧಾರ್ ನಂಬರ್ ಜೊತೆ ಲಿಂಕ್ ಆಗಿದೆಯೋ ಅಥವಾ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದೆ. ಮಾತ್ರವಲ್ಲದೇ ಈ ಪ್ರಕ್ರಿಯೆ ವರ್ಷದೊಳಗೆ ಪೂರ್ಣಗೊಳಿಸಬೇಕು ಅಂತಾ ಇಲಾಖೆ ತಿಳಿಸಿದೆ.

    ಈ ಹಿನ್ನೆಲೆಯಲ್ಲಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಎಲ್ಲಾ ಗ್ರಾಹಕರ ದಾಖಲೆಗಳನ್ನು ಆಧಾರ್ ಕಾರ್ಡ್ ಇ- ನಿಮ್ಮ ಗ್ರಾಹಕರನ್ನು ಅರಿಯಿರಿ(ಕೆವೈಸಿ) ಮೂಲಕ ಮರುಪರಿಶೀಲನೆ ಮಾಡಲಿವೆ.

    ಟೆಲಿಕಾಂ ಕಂಪನಿಗಳು ಗ್ರಾಹಕರಿಗೆ ವೆರಿಫಿಕೇಶನ್ ಕೋಡ್ ನ್ನು ಕಳುಹಿಸಲಿವೆ. ಭವಿಷ್ಯದಲ್ಲಿ ವ್ಯಕ್ತಿಯ ಗುರುತು ಪತ್ತೆಗೆ ಆಧಾರ್ ಕಾರ್ಡ್ ಏಕೈಕ ಸಾಧನವಾಗಲಿದೆ ಅಂತಾ ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದರು.

    ಪಾನ್ ಕಾರ್ಡ್, ಐಟಿ ರಿಟರ್ನ್ಸ್ ಗೂ ಆಧಾರ್ ಕಡ್ಡಾಯ: ಕಳೆದ ಮಂಗಳವಾರವಷ್ಟೇ ಸಂಸತ್ತಿನಲ್ಲಿ ಚರ್ಚೆಯಾದ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಎಂಬ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿತ್ತು. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದೆ ಅಂತಾ ಹೇಳಲಾಗಿದೆ.

    ದೇಶದಲ್ಲಿ ಮೊದಲ ಬಾರಿಗೆ ರಿಲಯನ್ಸ್ ಜಿಯೋ ಕಂಪೆನಿ ಆಧಾರ್ ಕಾರ್ಡ್ ಮೂಲಕ ಗ್ರಾಹಕರಿಗೆ ಸಿಮ್ ಕಾರ್ಡನ್ನು ಕೆಲವೇ ನಿಮಿಷಗಳಲ್ಲಿ ವಿತರಣೆ ಮಾಡಿತ್ತು. ಗ್ರಾಹಕರು ಬೆರಳಚ್ಚು ಓತ್ತಿದಾಗಲೇ ಆಧಾರ್ ದಾಖಲೆಗಳು ಸ್ಕ್ರೀನ್‍ನಲ್ಲಿ ಕಾಣುತಿತ್ತು.

  • ಆಧಾರ್ ಕಾರ್ಡ್ ಇಲ್ಲದೇ ಇದ್ರೆ ಇನ್ನು ಮುಂದೆ ನಿಮಗೆ ಪಾನ್ ಕಾರ್ಡ್ ಸಿಗಲ್ಲ!

    ಆಧಾರ್ ಕಾರ್ಡ್ ಇಲ್ಲದೇ ಇದ್ರೆ ಇನ್ನು ಮುಂದೆ ನಿಮಗೆ ಪಾನ್ ಕಾರ್ಡ್ ಸಿಗಲ್ಲ!

    ನವದೆಹಲಿ: ಪಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ವೇಳೆ  ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

    ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿದೆ. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಹಣಕಾಸು ಮಸೂದೆಯ ಬಗ್ಗೆ ಬುಧವಾರ ಸಂಸತ್ತಿನಲ್ಲಿ ಮಾತನಾಡಲಿದ್ದಾರೆ.

    ಕಳೆದ ಕೆಲ ವರ್ಷಗಳ ಐಟಿಆರ್ ಸಲ್ಲಿಕೆಯ ಆಧಾರ್ ಐಚ್ಚಿಕವಾಗಿತ್ತು. ಭಾರತದಲ್ಲಿ ವಿದೇಶಿ ಪ್ರಜೆಗಳು ತೆರಿಗೆ ಪಾವತಿಸುತ್ತಿರುವುದರಿಂದ ಈಗ ಕೆಲ ಪ್ರಶ್ನೆಗಳು ಎದ್ದಿದ್ದು ಈ ಸಮಸ್ಯೆಗೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕಿದೆ.

    ಕೇಂದ್ರ ಸರ್ಕಾರ ಈಗ ಎಲ್ಲ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಕೆಲ ದಿನಗಳ ಹಿಂದೆ ಬಡ ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಅಡಿಗೆ ಅನಿಲ(ಎಲ್ ಪಿಜಿ) ಸಂಪರ್ಕ ಪಡೆಯಯಲು ಆಧಾರ ಕಾರ್ಡ್ ಅನ್ನು ಕಡ್ಡಾಯಗೊಳಿಸಿತ್ತು.

  • 63 ರನ್‍ಗಳಿಗೆ 4 ವಿಕೆಟ್ ಹೋಗಿದ್ದಾಗ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡಿ ಪಂದ್ಯವನ್ನು ಉಳಿಸಿಕೊಟ್ರು!

    63 ರನ್‍ಗಳಿಗೆ 4 ವಿಕೆಟ್ ಹೋಗಿದ್ದಾಗ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡಿ ಪಂದ್ಯವನ್ನು ಉಳಿಸಿಕೊಟ್ರು!

    ರಾಂಚಿ: ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್ ಮಾರ್ಷ್ ಅವರ ಉಪಯುಕ್ತ ಆಟದಿಂದಾಗಿ ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.

    63 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಪಂದ್ಯ ಭಾರತದತ್ತ ವಾಲಿತ್ತು. ಆದರೆ 5 ವಿಕೆಟ್‍ಗೆ ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್ ಮಾರ್ಷ್ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡುವ ಮೂಲಕ ಸೋಲುವ ಭೀತಿಯಿಂದ ತಂಡವನ್ನು ಪಾರು ಮಾಡಿದರು. ಅಂತಿಮವಾಗಿ ಆಸ್ಟ್ರೇಲಿಯಾ 100 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 204 ಗಳಿಸಿತು.

    ಭಾನುವಾರ 7.2 ಓವರ್‍ಗಳಲ್ಲಿ 23 ರನ್‍ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾ ಇಂದು 4 ವಿಕೆಟ್‍ಗಳ ಸಹಾಯದಿಂದ 93.4 ಓವರ್‍ಗಳಲ್ಲಿ ಬಾರಿಸಿದ್ದು 181 ರನ್ ಮಾತ್ರ. ಇದರಲ್ಲಿ ಬೈ 9, ಲೆಗ್‍ಬೈ 4, ನೋಬಾಲ್ 3 ಎಸೆಯುವ ಮೂಲಕ ಇತರೇ ರೂಪದಲ್ಲಿ ಭಾರತ 16 ರನ್‍ಗಳ ಕಾಣಿಕೆಯನ್ನು ನೀಡಿತ್ತು.

    ನಾಯಕ ಸ್ವೀವ್ ಸ್ಮಿತ್ 21 ರನ್‍ಗಳಿಸಿ ಔಟಾದರೆ, ಶೇನ್ ಮಾರ್ಷ್ 53 ರನ್(197 ಎಸೆತ, 7 ಬೌಂಡರಿ), ಪೀಟರ್ ಹ್ಯಾಂಡ್ಸ್ ಕಾಂಬ್ ಔಟಾಗದೇ 72 ರನ್(200 ಎಸೆತ, 7 ಬೌಂಡರಿ) ಹೊಡೆಯುವ ಮೂಲಕ ಆಸ್ಟ್ರೇಲಿಯಾವನ್ನು ಪಾರು ಮಾಡಿದರು.

    ಜಡೇಜಾ 44 ಓವರ್ ಎಸೆದು 18 ಓವರ್‍ಗಳನ್ನು ಮೇಡನ್ ಮಾಡಿ, 54 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಆರ್ ಅಶ್ವಿನ್ 30 ಓವರ್ ಎಸೆದು 10 ಓವರ್ ಮೇಡನ್ ಮಾಡಿ 71 ರನ್ ನೀಡಿ 1 ವಿಕೆಟ್ ಪಡೆದರು. ಇಶಾಂತ್ ಶರ್ಮಾ ಒಂದು ವಿಕೆಟ್ ಪಡೆದರು.

    ಈ ಟೆಸ್ಟ್ ನಲ್ಲಿ ದ್ರಾವಿಡ್ ದಾಖಲೆಯನ್ನು ಮುರಿದು 202 ರನ್ ಹೊಡೆದಿದ್ದ ಚೇತೇಶ್ವರ ಪೂಜಾರ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    ಈ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಸಮಬಲದಲ್ಲಿ ಸಾಧಿಸಿದ್ದು, ಕೊನೆಯ ಟೆಸ್ಟ್ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮಾರ್ಚ್ 25ರಿಂದ ನಡೆಯಲಿದೆ. ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 333 ರನ್‍ಗಳಿಂದ ಗೆದ್ದುಕೊಂಡಿದ್ದರೆ, ಬೆಂಗಳೂರಿನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದು ಕೊಂಡಿತ್ತು.

    ಸಂಕ್ಷಿಪ್ತ ಸ್ಕೋರ್
    ಆಸ್ಟ್ರೇಲಿಯಾ 451 ಮತ್ತು 204/6
    ಭಾರತ 603/ 9 ಡಿಕ್ಲೇರ್

    ಇದನ್ನೂ ಓದಿ: 13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

  • ಸಿಎಂ ಆಪ್ತ, ಎಂಟಿಬಿ ನಾಗರಾಜ್ ನಿವಾಸದ ಮೇಲೆ ಐಟಿ ದಾಳಿ

    ಬೆಂಗಳೂರು: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿರುವ ಶಾಸಕ ನಾಗರಾಜ್ ಮನೆ ಮತ್ತು ಅವರ ಸಂಬಂಧಿಕರಿಗೆ ಸೇರಿದ 2 ನಿವಾಸಗಳ ಮೇಲೂ ಐಟಿ ದಾಳಿ ನಡೆದಿದೆ. ಎರಡು ಕಾರುಗಳಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆ 5 ಗಂಟೆಯಿಂದ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

    ನೋಟು ನಿಷೇಧವಾದ ಬಳಿಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳ ಯೋಜನಾಧಿಕಾರಿ ಜಯಚಂದ್ರ, ಕಾವೇರಿ ನೀರಾವರಿ ನಿಗಮ ನಿರ್ದೇಶಕ ಚಿಕ್ಕರಾಯಪ್ಪ, ಸಿಎಂ ಪುತ್ರ ರಾಕೇಶ್ ಸ್ನೇಹಿತ ರೋಹಿತ್ ಗೌಡ, ಚಕ್ರವರ್ತಿ, ರಾಮಲಿಂಗಂ ಸೇರಿ ಮೂವರು ಬಿಲ್ಡರ್ಸ್, ನಟ ದೊಡ್ಡಣ್ಣ ಅಳಿಯ ವೀರೇಂದ್ರ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು.

    ಅಷ್ಟೇ ಅಲ್ಲದೇ ಬೆಳಗಾವಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸ ಮತ್ತು ಬೆಂಗಳೂರಿನ ವಾಸವಿ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಮೇಲೆ ಐಟಿ ದಾಳಿ ನಡೆದಿತ್ತು.

  • ದೇಶದಲ್ಲಿ ಎಷ್ಟು ಜನ ತೆರಿಗೆ ಕಟ್ಟುತ್ತಿದ್ದಾರೆ? ಎಷ್ಟು ಕಂಪೆನಿಗಳು ಆದಾಯ ತೋರಿಸಿವೆ?

    ನವದೆಹಲಿ: ದೇಶದಲ್ಲಿ ಸಂಘಟಿತ ವಲಯದಲ್ಲಿ 4.2 ಕೋಟಿ ಉದ್ಯೋಗಿಗಳಿದ್ದು, ಇವರಲ್ಲಿ 1.74 ಕೋಟಿ ಮಂದಿ ವೇತನ ಆಧಾರಿತ ತೆರಿಗೆ ಸಲ್ಲಿಕೆ ಮಾಡುತ್ತಿದ್ದಾರೆ. ವ್ಯಕ್ತಿಗತ/ಸಂಸ್ಥೆಯ ರೂಪದಲ್ಲಿ 5.6 ಕೋಟಿ ಸಣ್ಣ ಉದ್ದಿಮೆಗಳಿದ್ದು, ಇದರಲ್ಲಿ 1.81 ಕೋಟಿ ಮಂದಿ ತೆರಿಗೆ ಸಲ್ಲಿಕೆ ಮಾಡುತ್ತಿದ್ದಾರೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ಮಾರ್ಚ್ 2014ರವರೆಗೆ 13.94 ಲಕ್ಷ ಕಂಪೆನಿಗಳು ನೋಂದಣಿಯಾಗಿದ್ದು, ಇದರಲ್ಲಿ 5.97 ಲಕ್ಷ ಕಂಪೆನಿಗಳು ತೆರಿಗೆಯನ್ನು ಪಾವತಿ ಮಾಡಿವೆ. 2.76 ಲಕ್ಷ ಕಂಪೆನಿಗಳು ನಷ್ಟ ಅಥವಾ ಶೂನ್ಯ ಆದಾಯ ತೋರಿಸಿವೆ. 2.85 ಲಕ್ಷ ಕಂಪನಿಗಳು 1 ಕೋಟಿ ರೂ.ಗಿಂತಲೂ ಕಡಿಮೆ ಆದಾಯ ತೋರಿಸಿದರೆ, 28,667 ಕಂಪೆನಿಗಳು 1 ಕೋಟಿಯಿಂದ 10 ಕೋಟಿ ರೂ. ಲಾಭ ತೋರಿಸಿವೆ. 7,781 ಕಂಪೆನಿಗಳು 10 ಕೋಟಿ ರೂ.ಗೂ ಅಧಿಕ ಲಾಭವಿದೆ ಎಂದು ತೋರಿಸಿವೆ.

    3.7 ಕೋಟಿ ಜನ ತೆರಿಗೆ ಮಾಹಿತಿ ಸಲ್ಲಿಸಿದ್ದು, 99 ಲಕ್ಷ ಜನ 2.50 ಲಕ್ಷ ರೂ.ಗಿಂತ ಕಡಿಮೆ ಆದಾಯ ತೋರಿಸಿದ್ದಾರೆ. 1.95 ಕೋಟಿ ಮಂದಿ  2.50 ಲಕ್ಷ ರೂ. – 5 ಲಕ್ಷ ರೂ ಆದಾಯ ತೋರಿಸಿದರೆ, 52 ಲಕ್ಷ ಮಂದಿ 5 ಲಕ್ಷ – 10 ಲಕ್ಷ ರೂ. ಆದಾಯ ತೋರಿಸಿದ್ದಾರೆ. 24 ಲಕ್ಷ ಮಂದಿ ತಮ್ಮ ಬಳಿ 10 ಲಕ್ಷ ರೂ.ಗಿಂತ ಅಧಿಕ ಆದಾಯವಿದೆ ಎಂದು ಪ್ರಕಟಿಸಿದ್ದಾರೆ.

    76 ಲಕ್ಷ ಮಂದಿ 5 ಲಕ್ಷ ಆದಾಯ ತೋರಿಸಿದ್ದು, ಇವರಲ್ಲಿ 56 ಲಕ್ಷ ವೇತನದಾರರು ಇದ್ದಾರೆ. 1.72 ಲಕ್ಷ ಮಂದಿ 50 ಲಕ್ಷಕ್ಕಿಂತ ಹೆಚ್ಚು ಆದಾಯ ತೋರಿಸಿದ್ದಾರೆ.

    ನ.8ರಿಂದ ಡಿ.30ರವರೆಗೆ 1.09 ಕೋಟಿ ಖಾತೆಗಳಲ್ಲಿ 2 ಲಕ್ಷದಿಂದ 80 ಲಕ್ಷ ರೂ.ವರೆಗೆ ಜಮೆಯಾಗಿದೆ. ಈ ಖಾತೆಗಳಲ್ಲಿ ಸರಾಸರಿ ಜಮೆ 5.03 ಲಕ್ಷ ರೂಪಾಯಿ ಆಗಿದೆ. 1.48 ಲಕ್ಷ ಖಾತೆಗಳಲ್ಲಿ ತಲಾ 80 ಲಕ್ಷ ರೂ.ಗಿಂತ ಅಧಿಕ ಮೊತ್ತ ಜಮೆಯಾಗಿದ್ದು, ಈ ಖಾತೆಗಳಲ್ಲಿ ಸರಾಸರಿ ಜಮೆ 3.31 ಕೋಟಿ ರೂ. ಆಗಿದೆ. ಕಳೆದ 5 ವರ್ಷಗಳಲ್ಲಿ 1.25 ಕೋಟಿ ಕಾರು ಮಾರಾಟವಾಗಿದೆ ಎನ್ನುವ ಅಂಶ ಬಜೆಟ್‍ನಲ್ಲಿದೆ.

  • ಬಜೆಟ್ 2017: ಆದಾಯ ತೆರಿಗೆ ಮಿತಿ ಹೇಗೆ?

    ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಮಂಡಿಸಿದ ಕೇಂದ್ರ ಬಜೆಟ್‍ನಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳನ್ನ ಘೋಷಿಸಿದ್ದಾರೆ.

    ನೋಟ್ ನಿಷೇಧವಾದ ಬಳಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕನಿಷ್ಠ 4 ಲಕ್ಷಕ್ಕೆ ಏರಿಸಬಹುದು ಎನ್ನುವ ನಿರೀಕ್ಷೆ ಇತ್ತು.

    ಆದಾಯ ತೆರಿಗೆಗೆ ಯಾರಿಗೆ ಎಷ್ಟು?
    – 3 ಲಕ್ಷದಿಂದ 5 ಲಕ್ಷದ ಆದಾಯಕ್ಕೆ ಶೇ. 5ರಷ್ಟು ತೆರಿಗೆ ಕಡಿತ(ಕಳೆದ ಬಾರಿ ಶೇ. 10 ರಷ್ಟಿತ್ತು )
    – 5 ಲಕ್ಷದಿಂದ 10 ಲಕ್ಷಕ್ಕೆ – ಶೇ.20ರಷ್ಟು ತೆರಿಗೆ
    – 10 ಲಕ್ಷ ಮೇಲ್ಪಟ್ಟ ಆದಾಯಕ್ಕೆ – ಶೇ.30ರಷ್ಟು ತೆರಿಗೆ

    50 ಲಕ್ಷದಿಂದ 1 ಕೋಟಿ ವರೆಗಿನ ಆದಾಯಕ್ಕೆ ಶೇ.10 ಸರ್‍ಚಾರ್ಜ್ ಹೇರಿದರೆ, 1 ಕೋಟಿಗಿಂತ ಹೆಚ್ಚಿನ ಆದಾಯ ಹೊಂದಿದವರಿಗೆ ಈಗಿರುವ ಶೇ. 15 ಸರ್ಚಾರ್ಜ್ ಮುಂದುವರಿಯಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

    ಆದಾಯಕ್ಕೆ ತಕ್ಕಂತೆ  ಎಷ್ಟು ತೆರಿಗೆ ಕಟ್ಟಬೇಕು ಎಂಬ ಮಾಹಿತಿ ಇಲ್ಲಿದೆ: