ಕಲಬುರಗಿ: ಜಿಲ್ಲೆಯಲ್ಲಿ ಕುರುಡು ಕಾಂಚಾಣ ಭಾರೀ ಸದ್ದು ಮಾಡಿದ್ದು, ಆದಾಯ ತೆರಿಗೆ (Income Tax) ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ‘ಕೈ’ (Congress) ನಾಯಕರಿಗೆ ಸೇರಿದ ಕಾರಿನಲ್ಲಿ ಪತ್ತೆಯಾದ 2 ಕೋಟಿಗೂ ಅಧಿಕ ಹಣವನ್ನು ಸೀಜ್ (Money Seize) ಮಾಡಿದ್ದಾರೆ.
ಕಲಬುರಗಿ (Kalaburagi) ರೈಲ್ವೆ ನಿಲ್ದಾಣದಿಂದ ಹಣ ಸಾಗಾಟ ಮಾಡುತ್ತಿದ್ದ ವೇಳೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇರೆ ರಾಜ್ಯದಿಂದ ರೈಲು ಮೂಲಕ ಕಲಬುರಗಿ ರೈಲು ನಿಲ್ದಾಣಕ್ಕೆ ಹಣ ಬಂದಿತ್ತು. ರೈಲ್ವೆ ನಿಲ್ದಾಣದಿಂದ ಇನ್ನೋವಾ ಕಾರಿನಲ್ಲಿ ಹಣ ಸಾಗಾಟಕ್ಕೆ ಯತ್ನಿಸಿದ ಸಂದರ್ಭ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ
ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ (BJP Leader) ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.
ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್
ಬೆಂಗಳೂರು: ಬಿನ್ನಿಮಿಲ್ ಬಳಿ ಶನಿವಾರ ಸಂಜೆ 2 ಕೋಟಿ ರೂ. ಹಣ ಜಪ್ತಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಹಣ ತಮ್ಮದು ಎಂದು ಬಿಜೆಪಿ (BJP) ಹೇಳಿಕೊಂಡಿದ್ದು, ಇದಕ್ಕೆ ಪೂರಕವಾದ ಬ್ಯಾಂಕ್ ದಾಖಲೆಗಳನ್ನು ಒದಗಿಸಿದೆ.
ಇದು ಮಾರ್ಚ್ 27ರಂದು ಕೆನರಾ ಬ್ಯಾಂಕ್ನಲ್ಲಿ ಡ್ರಾ ಮಾಡಿದ್ದ ಹಣ. ಪಕ್ಷದ ಕಚೇರಿಯಲ್ಲಿ (Party Office) ಇರಿಸಲಾಗಿತ್ತು. ಇದನ್ನು ನಾಲ್ಕು ಲೋಕಸಭೆ ಕ್ಷೇತ್ರಗಳ (Lok Sabha Election) ಚುನಾವಣಾ ಕಾರ್ಯಕ್ಕೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದೆವು ಎಂದು ಬಿಜೆಪಿ ವಿವರಣೆ ನೀಡಿದೆ. ಇದನ್ನು ಆದಾಯ ತೆರಿಗೆ (Income Tax) ಇಲಾಖೆ ಮೂಲಕ ಪರಿಶೀಲಿಸಿದ ಚುನಾವಣಾ ಆಯೋಗ (Election Commission) ಜಪ್ತಿ ಮಾಡಿದ್ದ ಹಣವನ್ನು ಬಿಜೆಪಿಗೆ ಮರಳಿಸಿದೆ.
ಮೋದಿಯವರ ಬಳಿ ಇರುವುದು ಖಾಲಿ ಚೊಂಬೇ ಹೊರತು ಅಕ್ಷಯ ಪಾತ್ರೆಯಲ್ಲ.
ಅದು ಅಕ್ಷಯ ಪಾತ್ರೆ ಎಂದಾದರೆ, ಅದರಿಂದ ನಮ್ಮ ರೈತರಿಗೆ ಬರ ಪರಿಹಾರವನ್ನು, ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಬರಬೇಕಾದ ಅನುದಾನವನ್ನು ದೇವೇಗೌಡ ಅವರು ಪ್ರಧಾನಿಗಳಿಗೆ ಹೇಳಿಕೆ ಕೊಡಿಸಲಿ. – @krishnabgowdapic.twitter.com/t12CpwhaV7
ಈ ಪ್ರಕರಣದ ಬಗ್ಗೆ ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿ ಪ್ರಶ್ನೆಗಳನ್ನು ಕೇಳಿದೆ. ಐಟಿ ಇಲಾಖೆಯ ಸೂಪರ್ಫಾಸ್ಟ್ ಕಾರ್ಯವೈಖರಿ. ಎರಡ್ಮೂರು ಗಂಟೆಯಲ್ಲೇ ನೀಡಿದ ಕ್ಲೀನ್ಚಿಟ್ ಉಲ್ಲೇಖಿಸಿ, ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿದೆ. ಆಯೋಗಕ್ಕೆ ದೂರು ನೀಡಲು ಮುಂದಾಗಿದೆ. ಈ ಬೆಳವಣಿಗೆಗಳ ನಡುವೆ ಚುನಾವಣಾ ಆಯೋಗ, ಬಿಜೆಪಿ ಕಾರ್ಯದರ್ಶಿ ವಿರುದ್ಧ ದೂರು ನೀಡಿದೆ.
But as per ECI direction cash more than 10000 given to party functionaries and candidates agents for political activities shall be done through cheque or online mode. ECI also advised political parties not to carry huge cash.
— Chief Electoral Officer, Karnataka (@ceo_karnataka) April 21, 2024
ಐಟಿ ಅಧಿಕಾರಿಗಳು ಸೂಪರ್ ಸ್ಪೀಡ್ ನಲ್ಲಿ ಕೆಲಸ ಮಾಡಿದ್ದಾರೆ. 6-7 ಗಂಟೆಯಲ್ಲಿ ಘಟನೆ ನಡೆಯುತ್ತೆ, ರಾತ್ರಿ 10 ಗಂಟೆಗೆ ಆ ಹಣ ಪರಿಶೀಲನೆ ಮಾಡಿದ್ದೇವೆ, ಆ ಹಣ ವಾಪಸ್ ಕೊಡಿ ಎಂದು ಐಟಿ ಆರ್ಡರ್ ಮಾಡುತ್ತೆ. 2 ಕೋಟಿ ನಗದು ವರ್ಗಾವಣೆ ಆಗ್ತಿದೆ, ಚುನಾವಣಾ ನೀತಿ ಸಂಹಿತೆ ಕೂಡ ಇದೆ. ಆದರೆ ಎರಡ್ಮೂರು ಗಂಟೆಯಲ್ಲೇ ಕ್ಲೀನ್ ಚಿಟ್ ಕೊಡುತ್ತಾರೆ. ಇದು ಪ್ರಜಾಪ್ರಭುತ್ವಕ್ಕೆ ಸರ್ಜಿಕಲ್ ಸ್ಟ್ರೈಕ್, ಇದನ್ನ ಪ್ರಜಾಪ್ರಭುತ್ವ ಅಂತಾ ಕರಿಬೇಕಾ? ಐಟಿ ನಡೆ, ಆರ್ಡರ್ ಬಗ್ಗೆ ತನಿಖೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.
Permission of court is obtained for booking FIR at 11 am, on 21.04.24, against Lokesh ambekallu, secretary,BJP state office,Venkatesh Prasad and Gangadhar by the SST of 168-Chamrajpet Assembly Constituency of the Bengaluru Central Parliamentary Constituency at Cottonpet.
— Chief Electoral Officer, Karnataka (@ceo_karnataka) April 21, 2024
ನವದೆಹಲಿ: ಕಾಂಗ್ರೆಸ್ (Congress) ಪಕ್ಷಕ್ಕೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ (Lok Sabha Election) ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ (Supreme Court) ಭರವಸೆ ನೀಡಿದೆ.
ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.
ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್ ಪರ ಹಾಜರಾಗಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾಯಿ ಪ್ರಮೋದಾ ದೇವಿ ಮುಂದೆ ಬಿ ಫಾರಂ ಪಡೆದ ಯದುವೀರ್
ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.
ಭೋಪಾಲ್: ತನ್ನ ಬ್ಯಾಂಕ್ ಖಾತೆಯಿಂದ 46 ಕೋಟಿ ರೂ. ವಹಿವಾಟು ನಡೆದಿದೆ ಎಂದು ಕಾಲೇಜು ವಿದ್ಯಾರ್ಥಿಯೊಬ್ಬ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಗ್ವಾಲಿಯರ್ ನಿವಾಸಿ ಪ್ರಮೋದ್ ಕುಮಾರ್ ದಂಡೋಟಿಯಾ (25) ದೂರು ನೀಡಿರುವ ವಿದ್ಯಾರ್ಥಿ. ಆದಾಯ ತೆರಿಗೆ ಮತ್ತು ಜಿಎಸ್ಟಿಯಿಂದ ಬಂದ ನೋಟಿಸ್ ನೋಡಿ ವಿದ್ಯಾರ್ಥಿ ಶಾಕ್ ಆಗಿದ್ದಾನೆ. ತನ್ನ ಪಾನ್ ಕಾರ್ಡ್ ಮೂಲಕ ಕಂಪನಿಗೆ ನೋಂದಾಯಿಸಲಾಗಿದೆ ಎಂಬುದು ವಿದ್ಯಾರ್ಥಿ ಅರಿವಿಗೆ ಬಂದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರೋ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್ ಕೇಸ್
ನಾನು ಗ್ವಾಲಿಯರ್ನಲ್ಲಿ ಕಾಲೇಜು ವಿದ್ಯಾರ್ಥಿಯಾಗಿದ್ದೇನೆ. ಆದಾಯ ತೆರಿಗೆ ಮತ್ತು ಜಿಎಸ್ಟಿಯ ಸೂಚನೆಯ ನಂತರ, ಮುಂಬೈ ಮತ್ತು ದೆಹಲಿಯಲ್ಲಿ 2021 ರಲ್ಲಿ ಕಾರ್ಯನಿರ್ವಹಿಸುತ್ತಿರುವ ನನ್ನ ಪ್ಯಾನ್ ಕಾರ್ಡ್ ಮೂಲಕ ಕಂಪನಿಯೊಂದು ನೋಂದಾಯಿಸಿದೆ ಎಂದು ನನಗೆ ತಿಳಿಯಿತು. ಹೇಗೆ ಹೀಗಾಯಿತು ನನಗೆ ತಿಳಿದಿಲ್ಲ. ನನ್ನ ಪ್ಯಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ವಹಿವಾಟು ಮಾಡಲಾಗಿದೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ.
ಪ್ರಕರಣ ಸಂಬಂಧ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪಾನ್ ಕಾರ್ಡ್ ದುರುಪಯೋಗವಾಗಿದೆ. ಅದರ ಮೂಲಕ ಕಂಪನಿಯನ್ನು ನೋಂದಾಯಿಸಲಾಗಿದೆ. ಇಷ್ಟು ದೊಡ್ಡ ಮೊತ್ತದ ವ್ಯವಹಾರಗಳನ್ನು ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಶಿಯಾಜ್ ಕೆಎಂ ತಿಳಿಸಿದ್ದಾರೆ. ಇಡೀ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈ: ವಿರೋಧ ಪಕ್ಷದ ನಾಯಕರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ. ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ (BJP) ಸೇರ್ಪಡೆಯಾಗುತ್ತಿದ್ದಾರೆ ಎಂದು ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ವಾಗ್ದಾಳಿ ನಡೆಸಿದ್ದಾರೆ.
2009 ರಿಂದ ಪ್ರತಿನಿಧಿಸುತ್ತಿರುವ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಹಿರಿಯ ರಾಜಕಾರಣಿ ಶರದ್ ಪವಾರ್ (Sharad Pawar) ಪುತ್ರಿ ಸುಪ್ರಿಯಾ ಸುಳೆ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. 1996 ರಿಂದ 2009ರ ವರೆಗೆ ಈ ಕ್ಷೇತ್ರದಲ್ಲಿ ಶರದ್ ಪವಾರ್ ಪ್ರತಿನಿಧಿಸಿದ್ದರು.
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಹೋದವರು ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ : ಜಾರಿ ನಿರ್ದೇಶನಾಲಯದ (Enforcement Directorate) ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸುಪ್ರೀಂಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ.
2018 ರಲ್ಲಿ ಡಿಕೆಶಿ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ನ್ಯಾ. ಸೂರ್ಯ ಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ ಇಂದು ರದ್ದುಗೊಳಿಸಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಸುಪ್ರೀಂ ಕೋರ್ಟ್ನ ಈ ಆದೇಶ ಡಿಕೆಶಿಗೆ ಸಿಕ್ಕಿದ ದೊಡ್ಡ ಗೆಲುವು ಎಂದೇ ವಿಶ್ಲೇಷಿಸಲಾಗುತ್ತಿದೆ.
ಆಗಸ್ಟ್ 2019 ರಲ್ಲಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಪೀಠ ಇಂದು ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ
ರದ್ದಾಗಿದ್ದು ಯಾಕೆ?
ಇಂದು ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಇತರ ಆರೋಪಿಗಳ ಪರ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಮತ್ತು ಎಸ್.ನಾಗಮುತ್ತು ವಾದ ಮಂಡಿಸಿದರು. ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಪ್ರಕರಣ ಕೇವಲ ಶೆಡ್ಯೂಲ್ ಅಪರಾಧಗಳಲ್ಲಿ ಮಾತ್ರ ಬಳಕೆ ಮಾಡಲಾಗುತ್ತದೆ. ಡಿ. ಕೆ ಶಿವಕುಮಾರ್ ಅವರದ್ದು ಆದಾಯ ತೆರಿಗೆ (Income Tax) ಪ್ರಕರಣವಾಗಿದೆ. ಆದಾಯ ತೆರಿಗೆ ಪ್ರಕರಣದಲ್ಲಿ 120 ಬಿ ಬಳಕೆ ಸಾಧ್ಯವಿಲ್ಲ. 120 ಬಿ ಆಧರಿಸಿಯೇ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿದೆ. ಆದರೆ 120 ಬಿ ಏಕಾಂಗಿಯಾಗಿ ಬಳಕೆ ಮಾಡಲು ಸಾಧ್ಯವಿಲ್ಲ, ಯಾವುದಾದರೂ ಇತರೇ ಕ್ರಿಮಿನಲ್ ಪ್ರಕರಣಗಳಲ್ಲಿ ಪೂರಕವಾಗಿರುವ 120 ಬಿ ಬಳಕೆ ಮಾಡಬಹುದು. ಆದರೆ ಜಾರಿ ನಿರ್ದೇಶನಾಲಯ 120 ಬಿ ಆಧರಿಸಿಯೇ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿಕೊಂಡು ಬಂಧಿಸಿದೆ. ಇದು ಕಾನೂನು ಬಾಹಿರನಡೆ ಎಂದು ವಾದಿಸಿದರು. ವಾದ ಆಲಿಸಿದ ಕೋರ್ಟ್ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳ ಅರ್ಜಿ ಮಾನ್ಯ ಮಾಡಿದ ಕೋರ್ಟ್ 120 ಬಿ ಅಡಿ ದಾಖಲಾಗಿದ್ದ ಪ್ರಕರಣವನ್ನೇ ರದ್ದು ಮಾಡಿತು.
120 ಬಿ ರದ್ದಾದ ಹಿನ್ನಲೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣ ರದ್ದಾಂತಾಗಲಿದೆ. ಈ ನಡುವೆ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಕೇಸ್ ಮುಂದುವರಿಯಲಿದ್ದು ಈ ಬಗ್ಗೆ ಮಾಹಿತಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆರು ವಾರಗಳ ಸಮಯ ನೀಡಿದೆ. ಇದನ್ನೂ ಓದಿ: ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆ – ನಾಳೆ ಪ್ರಧಾನಿ ಮೋದಿ ಚಾಲನೆ
ಏನಿದು ಪ್ರಕರಣ?
2017 ರಲ್ಲಿ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆಸಿತು. ಅವರ ದೆಹಲಿಯ ನಿವಾಸದಲ್ಲಿ ಸುಮಾರು 7 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಐಟಿ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿದ್ದ ಇಡಿ ಸುದೀರ್ಘ ವಿಚಾರಣೆಯ 2019ರ ಸೆಪ್ಟೆಂಬರ್ನಲ್ಲಿ ಇಡಿ ಬಂಧಿಸಿತ್ತು. 2019 ರ ಅಕ್ಟೋಬರ್ನಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ನಂತರ ಅದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯಿತು.
ತಮ್ಮ ಬಂಧನಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಮತ್ತು ಇತರರು ತಮಗೆ ಜಾರಿ ಮಾಡಿರುವ ಇಡಿ ಸಮನ್ಸ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 2019 ರಲ್ಲಿ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಈ ರಿಟ್ ಅರ್ಜಿಗಳನ್ನು ವಜಾಗೊಳಿಸಿದ್ದರು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
– ರಾಜ್ಯ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡೋಕೆ ಹೊರಟಿದ್ದೀರಾ? – ಹೆಚ್ಡಿಕೆ ಪ್ರಶ್ನೆ
ಬೆಂಗಳೂರು: ವಿಧಾನಪರಿಷತ್ ನಲ್ಲಿ ಅಮ್ಮಾ.. ತಾಯಿ.. 6 ಸಾವಿರ ಕೋಟಿ ಕೊಡು ತಾಯಿ ಅಂತ ಬೇಡ್ತಾ ಸಿಎಂ ಪ್ರಸ್ತಾಪ ಮಾಡಿದ್ದಾರೆ. ರಾಜ್ಯದ ಗೌರವ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ? ಈ ರಾಜ್ಯದ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ರಾಜ್ಯದ ಮುಖ್ಯಮಂತ್ರಿ (Chief Minister) ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ. ಏತಕ್ಕಾಗಿ ಇಂತಹ ಪರಿಸ್ಥಿತಿಯನ್ನ ತಂದುಕೊಂಡಿದ್ದೀರಾ? ಈ ರಾಜ್ಯದ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದೀರಾ? ಅಂತ ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಬಿಲ್ ಬೇರೆ ಪಾಸ್ ಮಾಡಿದ್ದೀರಿ, ನಾಚಿಕೆ ಆಗಬೇಕು ನಿಮಗೆ ಅಂತಾ ವಾಗ್ದಾಳಿ ನಡೆಸಿದರು.
ಕರ್ನಾಟಕ ಸಂಪತ್ ಭರಿತ ರಾಜ್ಯ. ಹಣದ ಕೊರತೆಯಿಲ್ಲ, ರಸ್ತೆ ತೆರಿಗೆ ಆದಾಯ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಸ್ವಂತ ಟ್ಯಾಕ್ಸ್ ಕಲೆಕ್ಟ್ ಮಾಡೋದ್ರಲ್ಲಿ ಮೊದಲನೆ ಸ್ಥಾನದಲ್ಲಿದ್ದೇವೆ, ಹಣದ ಕೊರತೆಯಿಲ್ಲ. ಆದ್ರೆ ನಿಮ್ಮ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆ ಖಾಲಿ ಮಾಡ್ತಿದ್ದೀರಾ? ಕೇಂದ್ರ ಸರ್ಕಾರದ ಮುಂದೆ ಪದೇ ಪದೇ ಕೆದಕಿಕೊಂಡು ಹೋಗ್ತಾ ಇದ್ದೀರಿ. ಇದು ರಾಜ್ಯದ ಜನತೆಗೆ ಅವಮಾನ. ಇದು ಸಿಎಂಗೆ ಶೋಭೆ ತರುವಂತದಲ್ಲ ಅಂತಾ ಮಾಜಿ ಸಿಎಂ ಹೆಚ್ಡಿಕೆ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ; 50,000 ರೂ.ಗಿಂತ ಹೆಚ್ಚಿದ್ದ ದಂಡ ವಸೂಲಿ ಮಾಡಿದ ಪೊಲೀಸರು
ನವದೆಹಲಿ: ಇತ್ತೀಚೆಗೆ ಕೇರಳದ ʻಜೈಹಿಂದ್ ಚಾನೆಲ್ʼನ ಬ್ಯಾಂಕ್ ಖಾತೆಗಳನ್ನು (Bank Account) ಸ್ಥಗಿತಗೊಳಿಸಿದ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ವಿರುದ್ಧ ಕಾಂಗ್ರೆಸ್ ಪಕ್ಷದ ಖಜಾಂಜಿ ಅಜಯ್ ಮಾಕೇನ್ (Ajay Maken) ಗಂಭೀರ ಆರೋಪ ಮಾಡಿದ್ದಾರೆ.
Yesterday, the Income Tax Department mandated banks to transfer over ₹65 crores from @INCIndia, IYC, and NSUI accounts to the government—₹5 crores from IYC and NSUI, and ₹60.25 crores from INC, marking a concerning move by the BJP Government.
ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಕೇನ್, ಆದಾಯ ತೆರಿಗೆ ಇಲಾಖೆಯು ವಿವಿಧ ಬ್ಯಾಂಕ್ಗಳಿಗೆ ಪತ್ರ ಬರೆದು ಕಾಂಗ್ರೆಸ್ ಪಕ್ಷದ ಹಲವು ಖಾತೆಗಳಿಂದ 65 ಕೋಟಿ ರೂ. ಹಣವನ್ನು ಕಡಿತ ಮಾಡಿಕೊಂಡಿದೆ ಎಂದು ದೂರಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ಖಾತೆಯಿಂದ 17.64 ಕೋಟಿ ರೂ., ಕೇಂದ್ರ ಬ್ಯಾಂಕ್ನಿಂದ 41.85 ಕೋಟಿ ರೂ. ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 74.62 ಲಕ್ಷ ಸೇರಿ ರಾಷ್ಟ್ರೀಯ ಕಾಂಗ್ರೆಸ್ನಿಂದ ಸುಮಾರು 60.25 ಕೋಟಿ ರೂ. ಹಾಗೂ ಎನ್ಎಸ್ಯುಐ ಮತ್ತು ಭಾರತೀಯ ಯುವ ಕಾಂಗ್ರೆಸ್ನಿಂದ 5 ಕೋಟಿ ರೂ.ಗಳನ್ನು ಕಡಿತಗೊಳಿಸಿದೆ ಎಂದು ದೂರಿದ್ದಾರೆ.
ಕಾಂಗ್ರೆಸ್ ಪಕ್ಷ ಹಾಗೂ ಭಾರತೀಯ ಯುವ ಕಾಂಗ್ರೆಸ್ ಹೆಸರಿನಲ್ಲಿ ಇದ್ದ ಖಾತೆಗಳಿಂದ ಹಣ ಹಿಂಪಡೆಯಲಾಗಿದೆ. ಹಾಗೆ ನೋಡಿದ್ರೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಪಕ್ಷಕ್ಕೆ ಈ ಹಿಂದೆಯೇ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ ಇಲಾಖೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ನಡುವೆಯೇ ಹಣ ಕಡಿತ ಮಾಡಲಾಗಿದೆ ಎಂದು ಅಜಯ್ ಮಾಕೇನ್ ಆರೋಪಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: ಎಎಪಿ ಅಭ್ಯರ್ಥಿಗೆ ಗೆಲುವು ಘೋಷಿಸಿದ ಸುಪ್ರೀಂ ಕೋರ್ಟ್
ಕಾಂಗ್ರೆಸ್ ಪಕ್ಷದ ಆದಾಯ ತೆರಿಗೆ ವಿವಾದವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಹೀಗಿದ್ದೂ ಕಾಂಗ್ರೆಸ್ ಪಕ್ಷದ ಖಾತೆಯಿಂದ ಹಣ ಕಡಿತ ಆಗಿದೆ. ಈ ಹಿಂದೆಯೂ ಐಟಿ ಕಾಂಗ್ರೆಸ್ ಪಕ್ಷಕ್ಕೆ 210 ಕೋಟಿ ರೂ. ಆದಾಯ ತೆರಿಗೆ ಪಾವತಿ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಆದಾಯ ತೆರಿಗೆ ಇಲಾಖೆ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ತಮ್ಮ ಪಕ್ಷದ ಖಾತೆಗಳಿಂದ ಹಣವನ್ನು ಕಡಿತ ಮಾಡಿಕೊಂಡಿದೆ ಎಂದು ಅಜಯ್ ಮಾಕೇನ್ ಆಪಾದಿಸಿದ್ದಾರೆ.
115 ಕೋಟಿ ಹಣ ಫ್ರೀಜ್:
ಚುನಾವಣಾ ಬಾಂಡ್ಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ್ದ ಮರು ದಿನವೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮೂರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆ ನಡೆದಿತ್ತು. ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾದ 210 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸದ ಕಾರಣ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ಗೆ ಸೇರಿದ ಮೂರು ಬ್ಯಾಂಕ್ ಖಾತೆಗಳನ್ನು ಗುರುವಾರ ರಾತ್ರಿಯಿಂದಲೇ ಮುಟ್ಟುಗೋಲು ಹಾಕಿಕೊಂಡಿರುವುದು ವರದಿಯಾಗಿತ್ತು. ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ ಆದೇಶದ ಬಳಿಕ ಬ್ಯಾಂಕ್ ಖಾತೆಗಳು ಚಾಲ್ತಿಗೆ ಬಂದಿದ್ದರೂ 115 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಫ್ರೀಜ್ ಮಾಡಲಾಗಿತ್ತು. 115 ಕೋಟಿ ರೂ. ಹಣವನ್ನು ಬ್ಯಾಂಕ್ ಖಾತೆಯಲ್ಲಿ ಉಳಿಸಿ, ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಉಳಿದ ಹಣವನ್ನು ವಿನಿಯೋಗ ಮಾಡುತ್ತೇವೆ ಎಂದು ಅಜಯ್ ಮಾಕೆನ್ ಹೇಳಿದರು.