Tag: income tax

  • ‘ಕೈ’ ನಾಯಕರಿಗೆ ಸೇರಿದ ಕಾರಿನಲ್ಲಿ 2 ಕೋಟಿಗೂ ಅಧಿಕ ಹಣ ಪತ್ತೆ – ಕಾರು ಸಮೇತ ಹಣ ಸೀಜ್

    ‘ಕೈ’ ನಾಯಕರಿಗೆ ಸೇರಿದ ಕಾರಿನಲ್ಲಿ 2 ಕೋಟಿಗೂ ಅಧಿಕ ಹಣ ಪತ್ತೆ – ಕಾರು ಸಮೇತ ಹಣ ಸೀಜ್

    ಕಲಬುರಗಿ: ಜಿಲ್ಲೆಯಲ್ಲಿ ಕುರುಡು ಕಾಂಚಾಣ ಭಾರೀ ಸದ್ದು ಮಾಡಿದ್ದು, ಆದಾಯ ತೆರಿಗೆ (Income Tax) ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ‘ಕೈ’ (Congress) ನಾಯಕರಿಗೆ ಸೇರಿದ ಕಾರಿನಲ್ಲಿ ಪತ್ತೆಯಾದ 2 ಕೋಟಿಗೂ ಅಧಿಕ ಹಣವನ್ನು ಸೀಜ್ (Money Seize) ಮಾಡಿದ್ದಾರೆ.

    ಕಲಬುರಗಿ (Kalaburagi) ರೈಲ್ವೆ ನಿಲ್ದಾಣದಿಂದ ಹಣ ಸಾಗಾಟ ಮಾಡುತ್ತಿದ್ದ ವೇಳೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇರೆ ರಾಜ್ಯದಿಂದ ರೈಲು ಮೂಲಕ ಕಲಬುರಗಿ ರೈಲು ನಿಲ್ದಾಣಕ್ಕೆ ಹಣ ಬಂದಿತ್ತು. ರೈಲ್ವೆ ನಿಲ್ದಾಣದಿಂದ ಇನ್ನೋವಾ ಕಾರಿನಲ್ಲಿ ಹಣ ಸಾಗಾಟಕ್ಕೆ ಯತ್ನಿಸಿದ ಸಂದರ್ಭ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್‌ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ

    ಖಚಿತ ಮಾಹಿತಿಯ ಮೇರೆಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಕಾರು ಸಮೇತ ಹಣವನ್ನು ಸೀಜ್ ಮಾಡಿದ್ದು, ಕಲಬುರಗಿಯ ಖರ್ಗೆ ಸರ್ಕಲ್ ಬಳಿ ಇರುವ ಆದಾಯ ತೆರಿಗೆ ಇಲಾಖೆಯ ಕಚೇರಿಯಲ್ಲಿ ಹಣದ ಸಮೇತ ವಾಹನ ಸೀಜ್ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಯಲ್ಲಿ ಸೈನಿಕರು ಸತ್ತಾಗ ಮಂಗಳಸೂತ್ರ ಕಿತ್ತುಕೊಂಡಿದ್ಯಾರು: ಬಿ.ಕೆ ಹರಿಪ್ರಸಾದ್ ಪ್ರಶ್ನೆ

  • ಬಿಜೆಪಿ ಹಿರಿಯ ಮುಖಂಡನ ಮನೆ ಮೇಲೆ ಐಟಿ ದಾಳಿ – 5 ಕೋಟಿ ನಗದು, 7 ಕೆಜಿ ಚಿನ್ನಾಭರಣ ಜಪ್ತಿ!

    ಬಿಜೆಪಿ ಹಿರಿಯ ಮುಖಂಡನ ಮನೆ ಮೇಲೆ ಐಟಿ ದಾಳಿ – 5 ಕೋಟಿ ನಗದು, 7 ಕೆಜಿ ಚಿನ್ನಾಭರಣ ಜಪ್ತಿ!

    ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ (BJP Leader) ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.

    ಮಾದಾವಾರದ ಗೋವಿಂದಪ್ಪ (Govindappa) ಅವರ ಮನೆ ಮೇಲೆ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು, 5 ಕೋಟಿ ನಗದು ಹಣ, 7 ಕೆಜಿ ಚಿನ್ನಾಭರಣವನ್ನು (Gold Seized) ವಶಕ್ಕೆ ಪಡೆದುಕೊಂಡಿದೆ. ಇದನ್ನೂ ಓದಿ: ಉದ್ಯಮಿ ಮನೆ ಮೇಲೆ ಐಟಿ ದಾಳಿ; ಸೀಕ್ರೆಟ್‌ ರೂಮಿನಲ್ಲಿದ್ದ 22 ಕೆಜಿ ಚಿನ್ನ, 6.50 ಕೋಟಿ ಹಣ ಜಪ್ತಿ!

    ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್‌ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್

  • ಬಿಜೆಪಿಯ 2 ಕೋಟಿ ಹಣಕ್ಕೆ ಐಟಿ ಕ್ಲೀನ್‌ ಚಿಟ್‌ – ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್‌ ಎಂದ ಕಾಂಗ್ರೆಸ್‌

    ಬಿಜೆಪಿಯ 2 ಕೋಟಿ ಹಣಕ್ಕೆ ಐಟಿ ಕ್ಲೀನ್‌ ಚಿಟ್‌ – ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್‌ ಎಂದ ಕಾಂಗ್ರೆಸ್‌

    ಬೆಂಗಳೂರು: ಬಿನ್ನಿಮಿಲ್ ಬಳಿ ಶನಿವಾರ ಸಂಜೆ 2 ಕೋಟಿ ರೂ. ಹಣ ಜಪ್ತಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಹಣ ತಮ್ಮದು ಎಂದು ಬಿಜೆಪಿ (BJP) ಹೇಳಿಕೊಂಡಿದ್ದು, ಇದಕ್ಕೆ ಪೂರಕವಾದ ಬ್ಯಾಂಕ್‌ ದಾಖಲೆಗಳನ್ನು ಒದಗಿಸಿದೆ.

    ಇದು ಮಾರ್ಚ್ 27ರಂದು ಕೆನರಾ ಬ್ಯಾಂಕ್‌ನಲ್ಲಿ ಡ್ರಾ ಮಾಡಿದ್ದ ಹಣ. ಪಕ್ಷದ ಕಚೇರಿಯಲ್ಲಿ (Party Office) ಇರಿಸಲಾಗಿತ್ತು. ಇದನ್ನು ನಾಲ್ಕು ಲೋಕಸಭೆ ಕ್ಷೇತ್ರಗಳ (Lok Sabha Election) ಚುನಾವಣಾ ಕಾರ್ಯಕ್ಕೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದೆವು ಎಂದು ಬಿಜೆಪಿ ವಿವರಣೆ ನೀಡಿದೆ. ಇದನ್ನು ಆದಾಯ ತೆರಿಗೆ (Income Tax) ಇಲಾಖೆ ಮೂಲಕ ಪರಿಶೀಲಿಸಿದ ಚುನಾವಣಾ ಆಯೋಗ (Election Commission) ಜಪ್ತಿ ಮಾಡಿದ್ದ ಹಣವನ್ನು ಬಿಜೆಪಿಗೆ ಮರಳಿಸಿದೆ.

    ಈ ಪ್ರಕರಣದ ಬಗ್ಗೆ ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿ ಪ್ರಶ್ನೆಗಳನ್ನು ಕೇಳಿದೆ. ಐಟಿ ಇಲಾಖೆಯ ಸೂಪರ್‌ಫಾಸ್ಟ್ ಕಾರ್ಯವೈಖರಿ. ಎರಡ್ಮೂರು ಗಂಟೆಯಲ್ಲೇ ನೀಡಿದ ಕ್ಲೀನ್‌ಚಿಟ್ ಉಲ್ಲೇಖಿಸಿ, ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿದೆ. ಆಯೋಗಕ್ಕೆ ದೂರು ನೀಡಲು ಮುಂದಾಗಿದೆ. ಈ ಬೆಳವಣಿಗೆಗಳ ನಡುವೆ ಚುನಾವಣಾ ಆಯೋಗ, ಬಿಜೆಪಿ ಕಾರ್ಯದರ್ಶಿ ವಿರುದ್ಧ ದೂರು ನೀಡಿದೆ.

    ಐಟಿ ಅಧಿಕಾರಿಗಳು ಸೂಪರ್ ಸ್ಪೀಡ್ ನಲ್ಲಿ ಕೆಲಸ ಮಾಡಿದ್ದಾರೆ. 6-7 ಗಂಟೆಯಲ್ಲಿ ಘಟನೆ ನಡೆಯುತ್ತೆ, ರಾತ್ರಿ 10 ಗಂಟೆಗೆ ಆ ಹಣ ಪರಿಶೀಲನೆ ಮಾಡಿದ್ದೇವೆ, ಆ ಹಣ ವಾಪಸ್ ಕೊಡಿ ಎಂದು ಐಟಿ ಆರ್ಡರ್ ಮಾಡುತ್ತೆ. 2 ಕೋಟಿ ನಗದು ವರ್ಗಾವಣೆ ಆಗ್ತಿದೆ, ಚುನಾವಣಾ ನೀತಿ ಸಂಹಿತೆ ಕೂಡ ಇದೆ. ಆದರೆ ಎರಡ್ಮೂರು ಗಂಟೆಯಲ್ಲೇ ಕ್ಲೀನ್ ಚಿಟ್ ಕೊಡುತ್ತಾರೆ. ಇದು ಪ್ರಜಾಪ್ರಭುತ್ವಕ್ಕೆ ಸರ್ಜಿಕಲ್ ಸ್ಟ್ರೈಕ್, ಇದನ್ನ ಪ್ರಜಾಪ್ರಭುತ್ವ ಅಂತಾ ಕರಿಬೇಕಾ? ಐಟಿ ನಡೆ, ಆರ್ಡರ್ ಬಗ್ಗೆ ತನಿಖೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

  • ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

    ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

    ನವದೆಹಲಿ: ಕಾಂಗ್ರೆಸ್‌ (Congress) ಪಕ್ಷಕ್ಕೆ ಕೇಂದ್ರ ಸರ್ಕಾರ ಬಿಗ್‌ ರಿಲೀಫ್‌ ನೀಡಿದೆ. ಲೋಕಸಭಾ ಚುನಾವಣೆ (Lok Sabha Election) ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಭರವಸೆ ನೀಡಿದೆ.

    ಆದಾಯ ತೆರಿಗೆ (Income Tax) ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು. ಇದನ್ನೂ ಓದಿ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ – ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ ದೆಹಲಿ ಸಿಎಂ

    ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.

    ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್‌ ಪರ ಹಾಜರಾಗಿದ್ದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾಯಿ ಪ್ರಮೋದಾ ದೇವಿ ಮುಂದೆ ಬಿ ಫಾರಂ ಪಡೆದ ಯದುವೀರ್‌

    ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.

     

  • ಕಾಲೇಜು ವಿದ್ಯಾರ್ಥಿಗೆ ಬಂತು ಬರೋಬ್ಬರಿ 46 ಕೋಟಿ ಮೊತ್ತದ ಟ್ಯಾಕ್ಸ್‌ ನೋಟಿಸ್‌ – ವಿದ್ಯಾರ್ಥಿಗೆ ಶಾಕ್‌!

    ಕಾಲೇಜು ವಿದ್ಯಾರ್ಥಿಗೆ ಬಂತು ಬರೋಬ್ಬರಿ 46 ಕೋಟಿ ಮೊತ್ತದ ಟ್ಯಾಕ್ಸ್‌ ನೋಟಿಸ್‌ – ವಿದ್ಯಾರ್ಥಿಗೆ ಶಾಕ್‌!

    ಭೋಪಾಲ್: ತನ್ನ ಬ್ಯಾಂಕ್‌ ಖಾತೆಯಿಂದ 46 ಕೋಟಿ ರೂ. ವಹಿವಾಟು ನಡೆದಿದೆ ಎಂದು ಕಾಲೇಜು ವಿದ್ಯಾರ್ಥಿಯೊಬ್ಬ ಪೊಲೀಸ್‌ ಠಾಣೆಗೆ ದೂರು ನೀಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.

    ಗ್ವಾಲಿಯರ್ ನಿವಾಸಿ ಪ್ರಮೋದ್ ಕುಮಾರ್ ದಂಡೋಟಿಯಾ (25) ದೂರು ನೀಡಿರುವ ವಿದ್ಯಾರ್ಥಿ. ಆದಾಯ ತೆರಿಗೆ ಮತ್ತು ಜಿಎಸ್‌ಟಿಯಿಂದ ಬಂದ ನೋಟಿಸ್‌ ನೋಡಿ ವಿದ್ಯಾರ್ಥಿ ಶಾಕ್‌ ಆಗಿದ್ದಾನೆ. ತನ್ನ ಪಾನ್ ಕಾರ್ಡ್ ಮೂಲಕ ಕಂಪನಿಗೆ ನೋಂದಾಯಿಸಲಾಗಿದೆ ಎಂಬುದು ವಿದ್ಯಾರ್ಥಿ ಅರಿವಿಗೆ ಬಂದಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ಧ ಕಣಕ್ಕಿಳಿದಿರೋ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್‌ ಕೇಸ್‌

    ನಾನು ಗ್ವಾಲಿಯರ್‌ನಲ್ಲಿ ಕಾಲೇಜು ವಿದ್ಯಾರ್ಥಿಯಾಗಿದ್ದೇನೆ. ಆದಾಯ ತೆರಿಗೆ ಮತ್ತು ಜಿಎಸ್‌ಟಿಯ ಸೂಚನೆಯ ನಂತರ, ಮುಂಬೈ ಮತ್ತು ದೆಹಲಿಯಲ್ಲಿ 2021 ರಲ್ಲಿ ಕಾರ್ಯನಿರ್ವಹಿಸುತ್ತಿರುವ ನನ್ನ ಪ್ಯಾನ್ ಕಾರ್ಡ್ ಮೂಲಕ ಕಂಪನಿಯೊಂದು ನೋಂದಾಯಿಸಿದೆ ಎಂದು ನನಗೆ ತಿಳಿಯಿತು. ಹೇಗೆ ಹೀಗಾಯಿತು ನನಗೆ ತಿಳಿದಿಲ್ಲ. ನನ್ನ ಪ್ಯಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ವಹಿವಾಟು ಮಾಡಲಾಗಿದೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ.

    ಆದಾಯ ತೆರಿಗೆ ಇಲಾಖೆಯಿಂದ ಮಾಹಿತಿ ಪಡೆದ ಕೂಡಲೇ ಸಂಬಂಧಪಟ್ಟ ಇಲಾಖೆಯೊಂದಿಗೆ ವಿದ್ಯಾರ್ಥಿ ಮಾತನಾಡಿದ್ದಾನೆ. ಬಳಿಕ ಹಲವು ಬಾರಿ ಪೊಲೀಸರಿಗೆ ದೂರು ನೀಡಲು ಯತ್ನಿಸಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಶುಕ್ರವಾರ ಮತ್ತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಮತ್ತೆ ದೂರು ದಾಖಲಿಸಿದ್ದಾನೆ. ಇದನ್ನೂ ಓದಿ: ‘ಲೋಕ’ಸಮರಕ್ಕೆ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ – ಮಂಡ್ಯದಲ್ಲಿ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್‌ ಬಾಬು

    ಪ್ರಕರಣ ಸಂಬಂಧ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪಾನ್‌ ಕಾರ್ಡ್‌ ದುರುಪಯೋಗವಾಗಿದೆ. ಅದರ ಮೂಲಕ ಕಂಪನಿಯನ್ನು ನೋಂದಾಯಿಸಲಾಗಿದೆ. ಇಷ್ಟು ದೊಡ್ಡ ಮೊತ್ತದ ವ್ಯವಹಾರಗಳನ್ನು ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶಿಯಾಜ್ ಕೆಎಂ ತಿಳಿಸಿದ್ದಾರೆ. ಇಡೀ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

  • ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ

    ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ

    ಮುಂಬೈ: ವಿರೋಧ ಪಕ್ಷದ ನಾಯಕರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ. ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ (BJP) ಸೇರ್ಪಡೆಯಾಗುತ್ತಿದ್ದಾರೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ವಾಗ್ದಾಳಿ ನಡೆಸಿದ್ದಾರೆ.

    2009 ರಿಂದ ಪ್ರತಿನಿಧಿಸುತ್ತಿರುವ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಹಿರಿಯ ರಾಜಕಾರಣಿ ಶರದ್ ಪವಾರ್ (Sharad Pawar) ಪುತ್ರಿ ಸುಪ್ರಿಯಾ ಸುಳೆ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. 1996 ರಿಂದ 2009ರ ವರೆಗೆ ಈ ಕ್ಷೇತ್ರದಲ್ಲಿ ಶರದ್‌ ಪವಾರ್‌ ಪ್ರತಿನಿಧಿಸಿದ್ದರು.

    ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ಬಿಜೆಪಿಗೆ ಅಡ್ಡಮತದಾನ ಮಾಡಿದ್ದ ನಾಲ್ವರು ಎಸ್‌ಪಿ ಶಾಸಕರಿಗೆ ‘ವೈ’ ಕೆಟಗರಿ ಭದ್ರತೆ

    ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಹೋದವರು ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್‌ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದೇ ವೇಳೆ ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನನ್ನ ಕೆಲಸ ಜನರ ಮುಂದೆ ಇದೆ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪವೂ ಇಲ್ಲ. ಹಾಗಾಗಿ ಬಾರಾಮತಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್‌ – ಆದೇಶದಲ್ಲಿ ಏನಿದೆ?

  • ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ

    ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ

    ಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ (Meghana Foods Groups) ಮೇಲೆ ಆದಾಯ ತೆರಿಗೆ (Income Tax) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ನಗರದ ಕೋರಮಂಗಲದಲ್ಲಿರುವ ಕಛೇರಿ, ಇಂದಿರಾನಗರ, ಜಯನಗರ ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸೋನಿಯಾ ಕ್ಷೇತ್ರ ರಾಯ್‌ಬರೇಲಿಗೆ ನೂಪೂರ್‌ ಶರ್ಮಾ ಬಿಜೆಪಿ ಅಭ್ಯರ್ಥಿ?

     

    ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ನಡೆಸುತ್ತಿರುವ ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ಭಾರೀ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಇದನ್ನೂ ಓದಿ:ನಾನು ಹಿಂದೂ ಧರ್ಮದ ʼಶಕ್ತಿʼಯ ಉಪಾಸಕ- ರಾಗಾ ವಿರುದ್ಧ ಮೋದಿ ವಾಗ್ದಾಳಿ

    ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳ ತಂಡ ನಗರದಲ್ಲಿರುವ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದೆ.

     

  • ಡಿಸಿಎಂ ಡಿಕೆಶಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ – ಇಡಿ ಕೇಸ್ ರದ್ದು

    ಡಿಸಿಎಂ ಡಿಕೆಶಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ – ಇಡಿ ಕೇಸ್ ರದ್ದು

    ನವದೆಹಲಿ : ಜಾರಿ ನಿರ್ದೇಶನಾಲಯದ (Enforcement Directorate) ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸುಪ್ರೀಂಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ.

    2018 ರಲ್ಲಿ ಡಿಕೆಶಿ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ನ್ಯಾ. ಸೂರ್ಯ ಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ ಇಂದು ರದ್ದುಗೊಳಿಸಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಸುಪ್ರೀಂ ಕೋರ್ಟ್‌ನ ಈ ಆದೇಶ ಡಿಕೆಶಿಗೆ ಸಿಕ್ಕಿದ ದೊಡ್ಡ ಗೆಲುವು ಎಂದೇ ವಿಶ್ಲೇಷಿಸಲಾಗುತ್ತಿದೆ.

    ಆಗಸ್ಟ್ 2019 ರಲ್ಲಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ (Karnataka High Court) ನಿರಾಕರಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಪೀಠ ಇಂದು ಮಹತ್ವದ ಆದೇಶ ನೀಡಿದೆ.  ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ

    ರದ್ದಾಗಿದ್ದು ಯಾಕೆ?
    ಇಂದು ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಇತರ ಆರೋಪಿಗಳ ಪರ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಮತ್ತು ಎಸ್.ನಾಗಮುತ್ತು ವಾದ ಮಂಡಿಸಿದರು. ಐಪಿಸಿ ಸೆಕ್ಷನ್‌ 120 ಬಿ (ಕ್ರಿಮಿನಲ್‌ ಪಿತೂರಿ) ಪ್ರಕರಣ ಕೇವಲ ಶೆಡ್ಯೂಲ್ ಅಪರಾಧಗಳಲ್ಲಿ ಮಾತ್ರ ಬಳಕೆ ಮಾಡಲಾಗುತ್ತದೆ. ಡಿ. ಕೆ ಶಿವಕುಮಾರ್ ಅವರದ್ದು ಆದಾಯ ತೆರಿಗೆ (Income Tax) ಪ್ರಕರಣವಾಗಿದೆ. ಆದಾಯ ತೆರಿಗೆ ಪ್ರಕರಣದಲ್ಲಿ 120 ಬಿ ಬಳಕೆ ಸಾಧ್ಯವಿಲ್ಲ. 120 ಬಿ ಆಧರಿಸಿಯೇ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA)   ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿದೆ. ಆದರೆ 120 ಬಿ ಏಕಾಂಗಿಯಾಗಿ ಬಳಕೆ ಮಾಡಲು ಸಾಧ್ಯವಿಲ್ಲ, ಯಾವುದಾದರೂ ಇತರೇ ಕ್ರಿಮಿನಲ್ ಪ್ರಕರಣಗಳಲ್ಲಿ ಪೂರಕವಾಗಿರುವ 120 ಬಿ ಬಳಕೆ ಮಾಡಬಹುದು. ಆದರೆ ಜಾರಿ ನಿರ್ದೇಶನಾಲಯ 120 ಬಿ ಆಧರಿಸಿಯೇ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿಕೊಂಡು ಬಂಧಿಸಿದೆ. ಇದು ಕಾನೂನು ಬಾಹಿರನಡೆ ಎಂದು ವಾದಿಸಿದರು. ವಾದ ಆಲಿಸಿದ ಕೋರ್ಟ್ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳ ಅರ್ಜಿ ಮಾನ್ಯ ಮಾಡಿದ ಕೋರ್ಟ್‌ 120 ಬಿ ಅಡಿ ದಾಖಲಾಗಿದ್ದ ಪ್ರಕರಣವನ್ನೇ ರದ್ದು ಮಾಡಿತು.

    120 ಬಿ ರದ್ದಾದ ಹಿನ್ನಲೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣ ರದ್ದಾಂತಾಗಲಿದೆ. ಈ ನಡುವೆ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಕೇಸ್ ಮುಂದುವರಿಯಲಿದ್ದು ಈ ಬಗ್ಗೆ ಮಾಹಿತಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆರು ವಾರಗಳ ಸಮಯ ನೀಡಿದೆ.  ಇದನ್ನೂ ಓದಿ: ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆ – ನಾಳೆ ಪ್ರಧಾನಿ ಮೋದಿ ಚಾಲನೆ

     

    ಏನಿದು ಪ್ರಕರಣ?
    2017 ರಲ್ಲಿ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆಸಿತು. ಅವರ ದೆಹಲಿಯ ನಿವಾಸದಲ್ಲಿ ಸುಮಾರು 7 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಐಟಿ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿದ್ದ ಇಡಿ ಸುದೀರ್ಘ ವಿಚಾರಣೆಯ 2019ರ ಸೆಪ್ಟೆಂಬರ್‌ನಲ್ಲಿ ಇಡಿ ಬಂಧಿಸಿತ್ತು. 2019 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್‌ ಅವರಿಗೆ ಜಾಮೀನು ನೀಡಿತ್ತು. ನಂತರ ಅದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯಿತು.

    ತಮ್ಮ ಬಂಧನಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಮತ್ತು ಇತರರು ತಮಗೆ ಜಾರಿ ಮಾಡಿರುವ ಇಡಿ ಸಮನ್ಸ್‌ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 2019 ರಲ್ಲಿ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಈ ರಿಟ್ ಅರ್ಜಿಗಳನ್ನು ವಜಾಗೊಳಿಸಿದ್ದರು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.

  • ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತ ಬೇಡುವ ಸ್ಥಿತಿ ಉದ್ಭವಿಸಿದೆ: ಹೆಚ್‌ಡಿಕೆ ಲೇವಡಿ

    ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತ ಬೇಡುವ ಸ್ಥಿತಿ ಉದ್ಭವಿಸಿದೆ: ಹೆಚ್‌ಡಿಕೆ ಲೇವಡಿ

    – ರಾಜ್ಯ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡೋಕೆ ಹೊರಟಿದ್ದೀರಾ? – ಹೆಚ್‌ಡಿಕೆ ಪ್ರಶ್ನೆ

    ಬೆಂಗಳೂರು: ವಿಧಾನಪರಿಷತ್ ನಲ್ಲಿ ಅಮ್ಮಾ.. ತಾಯಿ.. 6 ಸಾವಿರ ಕೋಟಿ ಕೊಡು ತಾಯಿ ಅಂತ ಬೇಡ್ತಾ ಸಿಎಂ ಪ್ರಸ್ತಾಪ ಮಾಡಿದ್ದಾರೆ. ರಾಜ್ಯದ ಗೌರವ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ? ಈ ರಾಜ್ಯದ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

    ವಿಧಾನಸೌಧದಲ್ಲಿ ( Vidhan Soudha) ಮಾತನಾಡಿದ ಅವರು, ಕೆಲವರು ಮನೆಗಳ ಮುಂದೆ ಹೋದಾಗ ರಾತ್ರಿ ಊಟ ಉಳಿದಿದ್ರೆ ಕೊಡಿ ಅಂತಾ ಭಿಕ್ಷೆ ಕೇಳ್ತಾರೆ, ಅದೇ ರೀತಿ ಸಿಎಂ ಕೇಳ್ತಿದ್ದಾರೆ. ಹಸಿವನ್ನ ನೀಗಿಸಿಕೊಳ್ಳಲು ಹೋಗುವ ಜನ ಅಮ್ಮಾ.. ತಾಯಿ ಕೊಡಿ ಅಂತಾ ಕೇಳ್ತಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್‍ಗಳ ಬ್ರದರ್‌ರಿಂದ ಕುಕ್ಕರ್ ಹಂಚಿಕೆ – ಡಿಕೆಸುಗೆ ತಿವಿದ ಬಿಜೆಪಿ

    ರಾಜ್ಯದ ಮುಖ್ಯಮಂತ್ರಿ (Chief Minister) ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ. ಏತಕ್ಕಾಗಿ ಇಂತಹ ಪರಿಸ್ಥಿತಿಯನ್ನ ತಂದುಕೊಂಡಿದ್ದೀರಾ? ಈ ರಾಜ್ಯದ ಸರ್ಕಾರವನ್ನ ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದೀರಾ? ಅಂತ ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಬಿಲ್‌ ಬೇರೆ ಪಾಸ್ ಮಾಡಿದ್ದೀರಿ, ನಾಚಿಕೆ ಆಗಬೇಕು ನಿಮಗೆ ಅಂತಾ ವಾಗ್ದಾಳಿ ನಡೆಸಿದರು.

    ಕರ್ನಾಟಕ ಸಂಪತ್ ಭರಿತ ರಾಜ್ಯ. ಹಣದ ಕೊರತೆಯಿಲ್ಲ, ರಸ್ತೆ ತೆರಿಗೆ ಆದಾಯ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಸ್ವಂತ ಟ್ಯಾಕ್ಸ್ ಕಲೆಕ್ಟ್ ಮಾಡೋದ್ರಲ್ಲಿ ಮೊದಲನೆ ಸ್ಥಾನದಲ್ಲಿದ್ದೇವೆ, ಹಣದ ಕೊರತೆಯಿಲ್ಲ. ಆದ್ರೆ ನಿಮ್ಮ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆ ಖಾಲಿ ಮಾಡ್ತಿದ್ದೀರಾ? ಕೇಂದ್ರ ಸರ್ಕಾರದ ಮುಂದೆ ಪದೇ ‌ಪದೇ ಕೆದಕಿಕೊಂಡು ಹೋಗ್ತಾ ಇದ್ದೀರಿ. ಇದು ರಾಜ್ಯದ ಜನತೆಗೆ ಅವಮಾನ. ಇದು ಸಿಎಂಗೆ ಶೋಭೆ ತರುವಂತದಲ್ಲ ಅಂತಾ ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ; 50,000 ರೂ.ಗಿಂತ ಹೆಚ್ಚಿದ್ದ ದಂಡ ವಸೂಲಿ ಮಾಡಿದ ಪೊಲೀಸರು