Tag: income

  • ಮಹಿಳಾ ಪ್ರಯಾಣಿಕರಿಂದ ಕೆಕೆಆರ್‌ಟಿಸಿ ಆದಾಯ ಭಾರೀ ಏರಿಕೆ

    ಮಹಿಳಾ ಪ್ರಯಾಣಿಕರಿಂದ ಕೆಕೆಆರ್‌ಟಿಸಿ ಆದಾಯ ಭಾರೀ ಏರಿಕೆ

    – ಶಕ್ತಿಯೋಜನೆ ಜಾರಿ ಬಳಿಕ 190 ಕೋಟಿ ರೂ. ಆದಾಯ

    ರಾಯಚೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ (Shakti Scheme) ರಾಯಚೂರು (Raichur) ವಿಭಾಗ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಕಳೆದ ಮೂರು ತಿಂಗಳಿಂದ ಉತ್ತಮ ಆದಾಯ (Income) ಪಡೆಯುತ್ತಿದೆ.

    ಶಕ್ತಿ ಯೋಜನೆ ಆರಂಭವಾದಾಗಿನಿಂದ ಅಂದರೆ ಜೂನ್ 11ರಿಂದ ಆಗಸ್ಟ್ 20ರವರೆಗೆ ಕೇವಲ ಮಹಿಳಾ ಪ್ರಯಾಣಿಕರ ಶಕ್ತಿ ಆದಾಯವೇ 190 ಕೋಟಿ ರೂ. ಆಗಿದೆ. ಈ ಮೊದಲು ಇಡೀ ಕೆಕೆಆರ್‌ಟಿಸಿಯ ತಿಂಗಳ ಆದಾಯ ಸರಾಸರಿ 150 ಕೋಟಿ ರೂ. ಇತ್ತು. ಈಗ ಸರಾಸರಿ ಆದಾಯ ಹೆಚ್ಚಾಗಿದೆ. ಯೋಜನೆ ಆರಂಭವಾದಾಗಿನಿಂದ ಒಟ್ಟು 11.48 ಕೋಟಿ ಜನ ಪ್ರಯಾಣಿಸಿದ್ದಾರೆ. ಇದರಲ್ಲಿ 5.78 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದನ್ನೂ ಓದಿ: ಅಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    ರಾಯಚೂರು ವಿಭಾಗದ ಆದಾಯ ನೋಡುವುದಾದರೆ ಮಹಿಳಾ ಪ್ರಯಾಣಿಕರಿಂದಲೇ 26.85 ಕೋಟಿ ರೂ. ಬಂದಿದೆ. ಬಸ್‌ಗಳ ಸರಾಸರಿ ಲೋಡ್ ಫ್ಯಾಕ್ಟರ್ 68%ನಿಂದ 86%ಗೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಯೋಜನೆ ಜಾರಿಗಿಂತ ಮೊದಲು ಪ್ರತಿನಿತ್ಯ 61 ಲಕ್ಷ ರೂ. ಇದ್ದು, ಸರಾಸರಿ ಆದಾಯ ಈಗ 79 ಲಕ್ಷ ರೂ. ಆಗಿದೆ. ಪ್ರತಿನಿತ್ಯ ಮಹಿಳಾ ಪ್ರಯಾಣಿಕರಿಂದಲೇ ಸರಾಸರಿ 37 ಲಕ್ಷ ರೂ. ಆದಾಯ ಬರುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಈಗಾಗಲೇ ಸರ್ಕಾರ ರಾಯಚೂರು ವಿಭಾಗದ ಜೂನ್ ತಿಂಗಳಿನ ಆದಾಯ 6.78 ಕೋಟಿ ರೂ. ಬಿಡುಗಡೆ ಮಾಡಿದ್ದು, ಜುಲೈ ತಿಂಗಳಿನ 12.33 ಕೋಟಿ ರೂ. ಹಾಗೂ ಆಗಸ್ಟ್ 20ರ ವರೆಗಿನ 7.73 ಕೋಟಿ ಬಿಡುಗಡೆ ಮಾಡಬೇಕಿದೆ. ಜಿಲ್ಲೆಗೆ 69 ಹೊಸ ಬಸ್‌ಗಳನ್ನು ಬಿಡಲಾಗಿದ್ದು, 27 ಹೊಸ ಮಾರ್ಗಗಳನ್ನು ಆರಂಭಿಸಲಾಗಿದೆ. ಶ್ರಾವಣ ಮಾಸ ಇರುವುದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಾಣುತ್ತಿದೆ. ಈ ಮೊದಲು ಕಿರಿಕಿರಿ ಅನುಭವಿಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರು ಸಹ ಈಗ ನಿರಾಳತೆಯಿಂದ ಬಸ್ ಓಡಿಸುತ್ತಿದ್ದಾರೆ. ಇದನ್ನೂ ಓದಿ: ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಕ್ತಿ ಯೋಜನೆ ಪರಿಣಾಮ – ರಾಜ್ಯದ ದೇವಾಲಯಗಳಿಗೆ ಡಬಲ್ ಆದಾಯ

    ಶಕ್ತಿ ಯೋಜನೆ ಪರಿಣಾಮ – ರಾಜ್ಯದ ದೇವಾಲಯಗಳಿಗೆ ಡಬಲ್ ಆದಾಯ

    ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ಬಂದಿರುವುದು ಶಕ್ತಿ ಯೋಜನೆ. ಈ ಯೋಜನೆಗೆ ಅಭೂತಪೂರ್ವ ಮಹಿಳಾ ಬೆಂಬಲ ದೊರೆತಿದ್ದು ಉಚಿತ ಪ್ರಯಾಣದ ಕಾರಣದಿಂದ ದೇವಾಲಯಗಳ (Temple) ಆದಾಯವೂ ಹೆಚ್ಚಾಗಿದೆ. ಪ್ರವಾಸಿ ತಾಣಗಳು ಸಹ ರಶ್ ಆಗುತ್ತಿವೆ. ಶಕ್ತಿ ಯೋಜನೆಯಿಂದ (Shakti Scheme) ದೇವಾಲಯಗಳಿಗೆ ಹರಿದು ಬರುತ್ತಿರುವ ಆದಾಯ ದ್ವಿಗುಣಗೊಂಡಿದೆ.

    ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿಗೆ ಬಂದು ಮೂರು ತಿಂಗಳಾಗಿದೆ. ಸಾರಿಗೆ ನಿಗಮಗಳ ಬಸ್‌ನಲ್ಲಿ ಉಚಿತ ಪ್ರಯಾಣದ ಲಾಭವನ್ನ ಮಹಿಳೆಯರು ಬಹಳ ಸಂತೋಷದಿಂದ ಅನುಭವಿಸುತ್ತಿದ್ದಾರೆ. ಉಚಿತ ಪ್ರಯಾಣದಿಂದಾಗಿ ಸಾರಿಗೆ ನಿಗಮಕ್ಕೆ ಮಾತ್ರವಲ್ಲ ಪ್ರವಾಸಿ ತಾಣಗಳಿಗೂ ಲಾಭ ಶುರುವಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ಮಕ್ಕಳ ಬಿಸಿಯೂಟಕ್ಕೆ ರೇಷನ್ ವ್ಯತ್ಯಯ – ಸ್ವಂತ ಹಣ ಬಳಸಿ ಶಿಕ್ಷಕರಿಂದ ರೇಷನ್ ಖರೀದಿ

    ಶಕ್ತಿ ಯೋಜನೆಯಿಂದ ಭಗವಂತನ ಖಜಾನೆಗೆ ಕೋಟಿ ಕೋಟಿ ಕಾಸು ಹರಿದು ಬಂದಿದೆ. ಶಕ್ತಿ ಯೋಜನೆ ಜಾರಿಯಾಗಿ ಇದೇ ಮೊದಲ ಬಾರಿಗೆ ಹುಂಡಿ ಹಣ ಲೆಕ್ಕ ಹಾಕಲಾಗಿದೆ. ಅಲ್ಲದೆ ಜೂನ್ 11 ರಿಂದ ಜುಲೈ 15ರ ವರೆಗಿನ ತಮ್ಮ ವ್ಯಾಪ್ತಿಯ ದೇವಾಲಯಗಳ ಹುಂಡಿ ಹಣ ತುಲನೆ ಮಾಡಿದೆ ಮುಜರಾಯಿ ಇಲಾಖೆ. ಈ ವೇಳೆ 2022ರ ಇದೇ ಅವಧಿಗಿಂತ ಈ ಬಾರಿಯ ಅವಧಿಯಲ್ಲಿ ಹೆಚ್ಚು ಗಳಿಕೆಯಾಗಿರುವ ಮಾಹಿತಿ ಗೊತ್ತಾಗಿದೆ. 2022ರ ಜೂನ್ 11 – ಜುಲೈ 15ರ ಅವಧಿಯಲ್ಲಿ 29.68 (29,68,97,550) ಕೋಟಿ ರೂಪಾಯಿ ಆದಾಯ ಬಂದಿತ್ತು. ಆದರೆ ಈ ಬಾರಿಯ ಜೂನ್ 11 – ಜುಲೈ 15ರ ಅವಧಿಯಲ್ಲಿ 39.43 (39,43,60,764) ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಹತ್ತು ಕೋಟಿ ಹೆಚ್ಚಿನ ಆದಾಯ ಸಂಗ್ರಹ ದೇವಾಲಯಗಳಲ್ಲಾಗಿದೆ.

    ಜೊತೆಗೆ ಈ ಅವಧಿಯಲ್ಲಿ ಜನರ ಭೇಟಿ ಕೂಡ ಹೆಚ್ಚಳವಾಗಿದ್ದು, ಕಳೆದ ಬಾರಿಗಿಂತ 30% ಜನರ ಸಂಖ್ಯೆ ಏರಿಕೆ ಕಂಡಿದೆ. 2022 ಜೂನ್ 11 ರಿಂದ ಜುಲೈ 15ರ ವರೆಗೆ ರಾಜ್ಯದ ಮುಜರಾಯಿ ದೇವಸ್ಥಾನಗಳಿಗೆ 81.26 ಲಕ್ಷ ಭಕ್ತರು ಭೇಟಿ ಮಾಡಿದ್ದರೆ, 2023 ಜೂನ್ 11 ರಿಂದ ಜುಲೈ 15ರ ವರೆಗೆ 1.42 ಕೋಟಿ ಮಂದಿ ರಾಜ್ಯದ ಮುಜರಾಯಿ ವ್ಯಾಪ್ತಿಗೆ ಸೇರಿದ ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆದಿದ್ದಾರೆ. ಈ ಮೂಲಕ ಕೋಟ್ಯಂತರ ಆದಾಯ ಹರಿದು ಬಂದಿದೆ. ಇದನ್ನೂ ಓದಿ: ಮೈಸೂರಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ – ನಾಲ್ವರ ವಿರುದ್ಧ ಎಫ್‌ಐಆರ್

    ಯಾವ ದೇವಾಲಯಕ್ಕೆ ಎಷ್ಟು ಆದಾಯ?
    ಶ್ರೀ ಭಗಂಡೇಶ್ವರ & ತಲಕಾವೇರಿ ದೇವಾಲಯ, ಭಾಗಮಂಡಲ, ಕೊಡಗು:
    2022, ಜೂನ್ 11 ರಿಂದ ಜುಲೈ 15 – 6,13,94,492 ರೂ. ಆದಾಯ – 37,94,022 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 7,79,24,065 ರೂ. – 51,40,857 ಭಕ್ತರು.

    ಚಾಮುಂಡೇಶ್ವರಿ ದೇವಾಲಯ, ಮೈಸೂರು:
    2022, ಜೂನ್ 11 ರಿಂದ ಜುಲೈ 15 – 48,01,914 ರೂ. – 4,93,530 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 3,63,05,672 ರೂ. – 5,97,370 ಭಕ್ತರು.

    ಕುಕ್ಕೆ ಸುಬ್ರಹ್ಮಣ್ಯ ದೇವಾಲಯ, ದಕ್ಷಿಣ ಕನ್ನಡ:
    2022, ಜೂನ್ 11 ರಿಂದ ಜುಲೈ 15 – 11,13,92,705 ರೂ. – 6,95,800 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 11,66,40,265 ರೂ. – 9,68,450 ಭಕ್ತರು.

    ಕಟ್ಟ ಬಸವೇಶ್ವರ ದೇವಸ್ಥಾನ, ಎತ್ತಿನಬೂದಿಹಾಳ, ಬಳ್ಳಾರಿ ಜಿಲ್ಲೆ:
    2022, ಜೂನ್ 11 ರಿಂದ ಜುಲೈ 15 – 1,02,75,761 ರೂ. – 4,58,330 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 1,41,00,163 ರೂ. – 4,90,830 ಭಕ್ತರು.

    ಘಾಟಿ ಸುಬ್ರಮಣ್ಯ ದೇವಾಲಯ, ದೊಡ್ಡಬಳ್ಳಾಪುರ:
    2022, ಜೂನ್ 11 ರಿಂದ ಜುಲೈ 15 – 1,18,18,433 ರೂ. – 66,000 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 93,48,186 ರೂ. – 81,000 ಭಕ್ತರು.

    ಬಪ್ಪನಾಡು ದೇವಸ್ಥಾನ, ಮುಲ್ಕಿ, ದಕ್ಷಿಣ ಕನ್ನಡ:
    2022, ಜೂನ್ 11 ರಿಂದ ಜುಲೈ 15 – 1,62,07,103 ರೂ. – 25,000 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 1,86,06,514 ರೂ. – 30,000 ಭಕ್ತರು.

    ಶ್ರೀಕಂಠೇಶ್ವರ ದೇವಾಲಯ, ನಂಜನಗೂಡು, ಮೈಸೂರು:
    2022, ಜೂನ್ 11 ರಿಂದ ಜುಲೈ 15 – 1,05,82,075 ರೂ. – 15,650 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 1,12,70,814 ರೂ. – 20,110 ಭಕ್ತರು.

    ಶ್ರೀಬನಶಂಕರಿ ದೇವಾಲಯ ಬೆಂಗಳೂರು:
    2022, ಜೂನ್ 11 ರಿಂದ ಜುಲೈ 15 – 65,28,526 ರೂ. – 75,000 ಭಕ್ತರು.
    2023, ಜೂನ್ 11 ರಿಂದ ಜುಲೈ 15 – 83,64,052 ರೂ. – 1,00,000 ಭಕ್ತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದಿನ ಎಲ್ಲ ಆದಾಯದ ದಾಖಲೆಗಳನ್ನು ಮುರಿಯಲಿದೆ ಈ ಬಾರಿಯ ಫಿಫಾ ಫುಟ್ಬಾಲ್ ವಲ್ಡ್ ಕಪ್

    ಹಿಂದಿನ ಎಲ್ಲ ಆದಾಯದ ದಾಖಲೆಗಳನ್ನು ಮುರಿಯಲಿದೆ ಈ ಬಾರಿಯ ಫಿಫಾ ಫುಟ್ಬಾಲ್ ವಲ್ಡ್ ಕಪ್

    ನವದೆಹಲಿ: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಫಿಫಾ ವಿಶ್ವಕಪ್ (FIFA World Cup) ಈ ಬಾರಿ ಕತಾರ್‌ನಲ್ಲಿ ಆರಂಭಗೊಂಡಿದೆ. ಡಿಸೆಂಬರ್ 18ರವರೆಗೂ ಪಂದ್ಯಗಳು ನಡೆಯಲಿದ್ದು, ಎಂಟು ಕ್ರೀಡಾಂಗಣದಲ್ಲಿ 64 ಪಂದ್ಯಗಳು ಆಯೋಜನೆಗೊಂಡಿದೆ.

    ಈ ಬಾರಿ ಫಿಫಾ ವಿಶ್ವಕಪ್‍ನಿಂದ ಬರುವ ಆದಾಯ ನಿರೀಕ್ಷೆಯ ಪ್ರಮಾಣ ಮೀರಲಿದೆ ಎಂದು ಹೇಳಲಾಗುತ್ತಿದೆ. ಜಾಗತಿಕ ಹಣಕಾಸು ಮಾಹಿತಿ ಮತ್ತು ವಿಶ್ಲೇಷಣಾ ಸೇವೆಗಳ ಪೂರೈಕೆದಾರ ಎಸ್ ಆ್ಯಂಡ್ ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್‌ನ ಹೊಸ ವಿಶ್ಲೇಷಣೆಯ ಪ್ರಕಾರ, ಜಾಗತಿಕ ಪ್ರೇಕ್ಷಕರು ಈ ಬಾರಿ ಮೈದಾನದಲ್ಲಿ ಭಾರೀ ಪ್ರಮಾಣದಲ್ಲಿ ನೆರೆಯಲಿದ್ದಾರೆ. ಇತ್ತ ಮೈದಾನದ ಹೊರಗೆ ಇಡೀ ತಂತ್ರಜ್ಞಾನ, ಮಾಧ್ಯಮ ಮತ್ತು ದೂರಸಂಪರ್ಕ ವಲಯದಲ್ಲಿ ಹೆಚ್ಚು ಆದಾಯದ ಅವಕಾಶಗಳಿದೆ ಎಂದು ಹೇಳಿದೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್ – CBIಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ

    ವಿಶ್ಲೇಷಣೆಯ ಪ್ರಕಾರ ಕತಾರ್ ಫಿಫಾ ವಿಶ್ವಕಪ್ USD 6.5 ಶತಕೋಟಿ ಗಳಿಸುವ ನಿರೀಕ್ಷೆಯಿದೆ. ಇದು ಹಿಂದಿನ ಎಲ್ಲಾ ಪಂದ್ಯಾವಳಿಗಳನ್ನು ಮೀರಿಸುತ್ತದೆ ಮತ್ತು 2002ರಲ್ಲಿ ಕೊರಿಯಾ ಮತ್ತು ಜಪಾನ್‍ನಲ್ಲಿ ಕಂಡುಬಂದ ಅಂಕಿ ಅಂಶಕ್ಕಿಂತ ನಾಲ್ಕು ಪಟ್ಟು ಹೆಚ್ಚಾಗಿದೆ. ರಷ್ಯಾದಲ್ಲಿ 2018ರಲ್ಲಿ ನಡೆದ ಫುಟ್ಬಾಲ್ ವಿಶ್ವಕಪ್ ಸಮಯದಲ್ಲಿ, USD 5.2 ಶತಕೋಟಿ ಮೌಲ್ಯದ ಆದಾಯವನ್ನು ಗಳಿಸಿತ್ತು, ಫಿಫಾದ ಆದಾಯದ ಅರ್ಧದಷ್ಟು ಆದಾಯವು ಪ್ರಸಾರ ಹಕ್ಕುಗಳ ಶುಲ್ಕದಿಂದ ಬಂದಿತ್ತು. ಇದನ್ನೂ ಓದಿ: ಚುನಾವಣಾ ಅಭ್ಯರ್ಥಿಗಳನ್ನ ಘೋಷಣೆ ಮಾಡೋ ಹಕ್ಕು ಸಿದ್ದರಾಮಯ್ಯಗಿಲ್ಲ: ಡಿಕೆಶಿ

    ಈ ಬಾರಿಯ ವಿಶ್ವಕಪ್ ಪಂದ್ಯಗಳನ್ನು ಜೂನ್ ಜುಲೈನಲ್ಲಿ ನಡೆಸಬೇಕಿತ್ತು. ಆದರೆ ಹವಾಮಾನ ವೈಫರಿತ್ಯಗಳಿಂದ ನವೆಂಬರ್‌ನಲ್ಲಿ ನಡೆಸಲಾಗುತ್ತಿದೆ. ವರ್ಷದ ಕೊನೆಯಲ್ಲಿ ಪಂದ್ಯಗಳು ನಡೆಯುತ್ತಿರುವ ಹಿನ್ನೆಲೆ ಜಾಹೀರಾತು ದರದಲ್ಲಿ ಭಾರೀ ಏರಿಕೆ ಇರಲಿದೆ. ಇದರಿಂದ ಫಿಫಾ ವಿಶ್ವ ಕಪ್ ಆದಾಯ ಹೆಚ್ಚಲಿದೆ ಎಂದು ವಿಶ್ಲೇಷಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಐಟಿ ರಿಟರ್ನ್ಸ್ ಸಲ್ಲಿಸಲು ನಾಳೆ ಕೊನೆಯ ದಿನ: ತಪ್ಪಿದರೆ ದಂಡ

    ಐಟಿ ರಿಟರ್ನ್ಸ್ ಸಲ್ಲಿಸಲು ನಾಳೆ ಕೊನೆಯ ದಿನ: ತಪ್ಪಿದರೆ ದಂಡ

    ನವದೆಹಲಿ: ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಸಲ್ಲಿಸದೇ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.

    ಈ ಹಿಂದಿನ 2 ವರ್ಷಗಳಲ್ಲಿ ವೆಬ್‌ಸೈಟ್‌ ಸಮಸ್ಯೆ, ಕೋವಿಡ್‌ ಅಲೆ ಇತ್ಯಾದಿ ಕಾರಣಗಳಿಂದ ರಿಟರ್ನ್ ಸಲ್ಲಿಕೆಯ ಅವಧಿಯನ್ನು ಹಲವು ಬಾರಿ ವಿಸ್ತರಣೆ ಮಾಡಲಾಗಿತ್ತು. ಕಳೆದ ವರ್ಷ ಡಿ.31 ಅಂತಿಮ ಡೆಡ್‌ಲೈನ್‌ ನೀಡಲಾಗಿತ್ತು. ಆದರೆ ಈ ವರ್ಷ ಗಡುವು ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಪ್ರಕಟಿಸಿದೆ. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಹಣ ವಸೂಲಿ: ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ

    ಕಳೆದ ವರ್ಷ ಒಟ್ಟು 5.89 ಕೋಟಿ ಜನ ರಿಟರ್ನ್‌ ಫೈಲ್ ಮಾಡಿದ್ದರು. ಈ ವರ್ಷ ಗುರುವಾರ ಸಂಜೆಯವರೆಗೆ 4 ಕೋಟಿ ಜನ ರಿಟರ್ನ್ಸ್ ಸಲ್ಲಿಕೆ ಮಾಡಿದ್ದು, ನಂತರ ನಿತ್ಯ 30 ಲಕ್ಷ ಜನರು ಸಲ್ಲಿಕೆ ಮಾಡುತ್ತಿದ್ದಾರೆ. ಜು.31ರ ಬಳಿಕವೂ ಸಲ್ಲಿಕೆ ಮಾಡಲು ಅವಕಾಶ ಇದೆಯಾದರೂ ದಂಡ ಪಾವತಿಸಬೇಕಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಕೂದಲಿನಿಂದ 126 ಕೋಟಿ, ಲಡ್ಡು ಪ್ರಸಾದದಿಂದ 365 ಕೋಟಿ – ಟಿಟಿಡಿ ನಿರೀಕ್ಷಿತ ಆದಾಯ

    ಅಮರಾವತಿ: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಗುರುವಾರ ತನ್ನ 2022-23ನೇ ಸಾಲಿನ ಬಜೆಟ್ ಮಂಡಿಸಿದೆ.

    ತಿರುಮಲದ ಪುರಾತನ ವೆಂಕಟೇಶ್ವರ ದೇವಾಲಯದ ಆಡಳಿತ ಮಂಡಳಿ 2022-23ರ ವಾರ್ಷಿಕ ಬಜೆಟ್‌ನಲ್ಲಿ 3,096.40 ಕೋಟಿ ರೂ. ಆದಾಯವನ್ನು ಅಂದಾಜಿಸಿದೆ.

    ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಬಜೆಟ್ ಸಭೆಯಲ್ಲಿ ಪರಿಶೀಲಿಸಿದ ಬಳಿಕ ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಜವಾಹರ ರೆಡ್ಡಿ ವಾರ್ಷಿಕ ಬಜೆಟ್ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ

    ದೇವಾಲಯದ ವಾರ್ಷಿಕ ಆದಾಯದಲ್ಲಿ ಸುಮಾರು 1,000 ಕೋಟಿ ರೂ. ಹುಂಡಿಯಲ್ಲಿ (ದಾನ-ಪಾತ್ರೆ) ಭಕ್ತರಿಂದ ಬರುತ್ತದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿನ ಠೇವಣಿ ಮೇಲಿನ ಬಡ್ಡಿ ಸುಮಾರು 668.5 ಕೋಟಿ ರೂ., ವಿವಿಧ ರೀತಿಯ ಟಿಕೆಟ್‌ಗಳ ಮಾರಾಟದಿಂದ 362 ಕೋಟಿ ರೂ. ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ.

    ಲಡ್ಡು ಪ್ರಸಾದ ಮಾರಾಟದಿಂದ 365 ಕೋಟಿ ರೂ., ವಸತಿ ಹಾಗೂ ಮದುವೆ ಮಂಟಪದ ಬಾಡಿಗೆಯಿಂದ 95 ಕೋಟಿ ರೂ., ಭಕ್ತರು ಅರ್ಪಿಸುವ ಕೂದಲು ಮಾರಾಟದಿಂದ 126 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಮಂಡಳಿಯ ವಿವಿಧ ಸೇವೆಗಳ ವೆಚ್ಚವನ್ನು 1,360 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

    ಭಕ್ತರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಬಂದು ತಮ್ಮ ಕೂದಲನ್ನು ದಾನ ಮಾಡಿದರೆ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯುತ್ತಾರೆ ಹಾಗೂ ಅವರ ಎಲ್ಲಾ ತೊಂದರೆಗಳು ದೂರವಾಗುತ್ತದೆ ಎಂಬುದು ಜನಪ್ರಿಯ ನಂಬಿಕೆ. ಲಕ್ಷ್ಮಿ ದೇವಿ ಇಲ್ಲಿ ಎಲ್ಲಾ ಪಾಪಗಳನ್ನು ಹಾಗೂ ದುಷ್ಟತನವನ್ನು ತೊರೆಯುವ ವ್ಯಕ್ತಿಯ ಎಲ್ಲಾ ದುಃಖಗಳನ್ನು ದೂರ ಮಾಡುತ್ತಾಳೆ ಎಂದು ನಂಬಲಾಗುತ್ತದೆ.

    ಈ ನಂಬಿಕೆಯನ್ನು ಪೂರ್ಣಗೊಳಿಸಲು ಜನರು ಎಲ್ಲಾ ದುಷ್ಟತನ ಹಾಗೂ ಪಾಪವನ್ನು ತಮ್ಮ ಕೂದಲ ರೂಪದಲ್ಲಿ ಬಿಡುತ್ತಾರೆ. ಪ್ರತಿದಿನ ಸುಮಾರು 20 ಸಾವಿರ ಭಕ್ತರು ತಿರುಪತಿ ದೇವಸ್ಥಾನಕ್ಕೆ ಕೇಶ ದಾನಕ್ಕೆ ಹೋಗುತ್ತಾರೆ. ಈ ಕೆಲಸಕ್ಕಾಗಿ ಸುಮಾರು 600 ಕ್ಷೌರಿಕರನ್ನು ದೇವಾಲಯದ ಆವರಣದಲ್ಲಿ ಇರಿಸಲಾಗಿದೆ.

  • ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ

    ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ

    ನವದೆಹಲಿ: ಪೆಟ್ರೋಲ್, ಡೀಸೆಲ್ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‍ಟಿ ಮಂಡಳಿ ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದೆ.

    ಕಳೆದ ಜೂನ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲೆ ಪ್ರತ್ಯೇಕ ದರವನ್ನು ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಜಿಎಸ್‍ಟಿ ಮಂಡಳಿಗೆ ಸೂಚಿಸಿತ್ತು. ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಎಸ್‍ಟಿ ಮಂಡಳಿಯ ಸಭೆಯಲ್ಲಿ ಈ ವಿಚಾರವನ್ನು ಚರ್ಚೆಗೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

    ಈ ಸಭೆಯಲ್ಲಿ ಕೋವಿಡ್ 19 ಚಿಕಿತ್ಸಾ ಉಪಕರಣ ಮತ್ತು ಔಷಧ ಸೇರಿದಂತೆ ಕೆಲ ಅಗತ್ಯ ವಸ್ತುಗಳಿಗೆ ಸುಂಕ ವಿನಾಯಿತಿಯನ್ನು ವಿಸ್ತರಿಸುವ ಬಗ್ಗೆಯೂ ಮಂಡಳಿಯು ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಬಿಜೆಪಿ, ಕಾಂಗ್ರೆಸ್ ನಿಲುವು ಏನು?

    ಒಪ್ಪಿಗೆ ಸಿಗುತ್ತಾ?
    ಇಲ್ಲಿಯವರೆಗೆ ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿವೆ. ಜಿಎಸ್‍ಟಿ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದರೆ ಮಂಡಳಿ ಸದಸ್ಯ ರಾಜ್ಯಗಳ ಮೂರನೇ ಎರಡರಷ್ಟು ಬಹುಮತ ಬೇಕು.

    ಜನರು ಮತ್ತು ರಾಜಕೀಯ ಪಕ್ಷಗಳು ಆಗ್ರಹಿಸುತ್ತಿದ್ದರೂ ಜಿಎಸ್‍ಟಿ ವ್ಯಾಪ್ತಿಗೆ ತೈಲ ಬರುವುದು ಅಷ್ಟು ಸುಲಭವಿಲ್ಲ. ಜಿಎಸ್‍ಟಿ ವ್ಯಾಪ್ತಿಗೆ ತಂದರೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಹಾಕುವ ಸಂಭವವೇ ಹೆಚ್ಚು.  ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.  ಇದನ್ನೂ ಓದಿ: ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

    ಯಾಕೆ ಬಿಟ್ಟುಕೊಡಲ್ಲ?
    ರಾಜ್ಯ ಸರ್ಕಾರಗಳಿಗೆ ಅತಿಹೆಚ್ಚು ಆದಾಯ ಮೂಲವೇ ತೈಲ. ಕೇಂದ್ರ ಸರ್ಕಾರ ಅಬಕಾರಿ ಸುಂಕ ಹಾಕಿದರೆ ರಾಜ್ಯ ಸರ್ಕಾರ ವ್ಯಾಟ್ ಹಾಕುತ್ತದೆ. ಈ ಮೂಲಕ ರಾಜ್ಯದ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತದೆ. ಅಷ್ಟೇ ಅಲ್ಲದೇ ಸುಲಭವಾಗಿ ಆದಾಯ ಸಂಗ್ರಹವಾಗುತ್ತದೆ. ಸಿಎಂ ಕುಮಾರಸ್ವಾಮಿ ತನ್ನ ಅಧಿಕಾರ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡಲು ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಸಹ ಹಾಕಿದ್ದರು. ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಹೆಚ್ಚಳ ಮಾಡಲು ಇರುವ ಏಕೈಕ ಮಾರ್ಗ ಎಂದರೆ ತೈಲ. ಹೀಗಾಗಿ ಯಾವುದೇ ಸರ್ಕಾರ ಪೆಟ್ರೋಲನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡುತ್ತಿಲ್ಲ.

    ಒಂದು ಲೀಟರ್‌ ಪೆಟ್ರೋಲ್‌ ಮೇಲೆ 1 ವರ್ಷದ ಹಿಂದೆ 19.98 ರೂ. ಇದ್ದ ಅಬಕಾರಿ ಸುಂಕ 32.90 ರೂ.ಗೆ ಏರಿಕೆಯಾಗಿದೆ. ಡೀಸೆಲ್‌ ಮೇಲಿದ್ದ 15.83 ರೂ. ಅಬಕಾರಿ ಸುಂಕ 31.8 ರೂ.ಗೆ ಹೆಚ್ಚಳವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಹಿಂದೆ ತಿಳಿಸಿದ್ದರು.

  • 99 ದಿನಗಳಲ್ಲಿ ಮುಡಿ ಕೂದಲಿನಿಂದ ಮಲೆ ಮಾದಪ್ಪನಿಗೆ ಬಂದ ಅದಾಯ 1.49 ಕೋಟಿ ರೂ.

    99 ದಿನಗಳಲ್ಲಿ ಮುಡಿ ಕೂದಲಿನಿಂದ ಮಲೆ ಮಾದಪ್ಪನಿಗೆ ಬಂದ ಅದಾಯ 1.49 ಕೋಟಿ ರೂ.

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಕೂದಲಿನ ಬಿಡ್ ನಡೆದಿದ್ದು, ಪ್ರತಿ ಕೆ.ಜಿ.ಗೆ 15,535 ರೂ. ನಂತೆ 4,595 ಕೆ.ಜಿ. ತುಂಡು ಕೂದಲು, 951 ಕೆ.ಜಿ. ಉದ್ದದ ಕೂದಲು ಮಾರಾಟವಾಗಿದ್ದು, ಇದರಿಂದ ಬರೋಬ್ಬರಿ 1,49,40,391 ರೂ. ಆದಾಯ ಬಂದಿದೆ.

    ನಾಡಿನ ಪ್ರಮುಖ ದೇಗುಲಗಳಲ್ಲಿ ಒಂದಾದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹರಕೆ ಕೂದಲಿನ ಬಿಡ್ ನಡೆದಿದ್ದು, ಪ್ರತಿ ಕೆಜಿಗೆ 15,535 ರೂ. ನಂತೆ 4,595 ಕೆಜಿ ತುಂಡು ಕೂದಲು, 951 ಕೆ.ಜಿ. ಉದ್ದ ಕೂದಲು ಮಾರಾಟವಾಗಿದ್ದು, ಬರೋಬ್ಬರಿ 1,49,40,391 ರೂ. ಆದಾಯ ಬಂದಿದೆ. ಹುಂಡಿಯಲ್ಲಿ ಸಂಗ್ರಹವಾಗುತ್ತಿದ್ದ ಹಣದಿಂದ ಗಮನ ಸೆಳೆಯುತ್ತಿದ್ದ ಮಲೆ ಮಾದಪ್ಪ ಈಗ ಮತ್ತಷ್ಟು ಶ್ರೀಮಂತನಾಗಿದ್ದು, ಹರಕೆ ಕೂದಲಿನ ಹರಾಜಿನಿಂದ ಬರೋಬ್ಬರಿ 1.49 ಕೋಟಿ ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ನಿನ್ನ ವಾಹನದಿಂದ ಬೆಳೆ ಉಳಿಸು- ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ

    ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮಾಹಿತಿ ನೀಡಿ, ಕಳೆದ ವರ್ಷಕ್ಕಿಂತ ಈ ವರ್ಷ ಪ್ರತಿ ಕೆ.ಜಿ.ಗೆ 8,135 ರೂ. ಹೆಚ್ಚಿನ ಲಾಭ ಬಂದಿದ್ದು, ಒಟ್ಟು ಹಣ 1.49 ಕೋಟಿ ರೂ. ಸಂಗ್ರಹವಾಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. ಈ ಮುಡಿ ಕೂದಲು 99 ದಿನಗಳಲ್ಲಿ ಸಂಗ್ರಹವಾಗಿತ್ತು ಎಂದು ತಿಳಿಸಿದ್ದಾರೆ.

  • ಜಮೀರ್ ಆಸ್ತಿ 10 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಜಮೀರ್ ಆಸ್ತಿ 10 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಬೆಂಗಳೂರು: ಬಡ ಜನರನ್ನು ವಂಚಿಸಿದ್ದ, `ಐ ಮಾನಿಟರಿ ಅಡ್ವೈಸರಿ’ ಅರ್ಥಾಥ್ 400 ಕೋಟಿ ಐಎಂಎ ಹಗರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‍ಗೆ ಬಂಧನ ಭೀತಿ ಎದುರಾಗಿದೆ.

    ಐಎಂಎ ಸಂಸ್ಥಾಪಕ ಮನ್ಸೂರ್ ಅಲಿ ಖಾನ್ ಜೊತೆಗಿನ ಡೀಲ್ ಸಂಬಂಧ ಜಮೀರ್ ಜೊತೆಗೆ ರೋಷನ್ ಬೇಗ್‍ಗೂ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ಕೊಟ್ಟಿದೆ.

    ಇಡಿ ಅಧಿಕಾರಿಗಳ ತಂಡ ಇವತ್ತು ಬೆಳ್ಳಂಬೆಳಗ್ಗೆ ಬೆಂಗಳೂರು, ಮುಂಬೈ, ದೆಹಲಿಯ 6 ಕಡೆ ಏಕಕಾಲಕ್ಕೆ ರೇಡ್ ಮಾಡಿದೆ. ದಾಳಿ ವೇಳೆ ಮನೆಯಲ್ಲೇ ಜಮೀರ್, ಮಗ ಝಯ್ಯದ್ ಸೇರಿದಂತೆ ಕುಟುಂಬಸ್ಥರು ಇದ್ದರು. ಇವರೆಲ್ಲರ ಸಮ್ಮುಖದಲ್ಲೇ ಇಡಿ ಅಧಿಕಾರಿಗಳ ತಂಡ, ಜಮೀರ್ ಸಂಪಾದನೆ-ಆಸ್ತಿ-ವ್ಯವಹಾರದ ದಾಖಲೆಗಳನ್ನ ಜಾಲಾಡಿದ್ದಾರೆ.  ಇದನ್ನೂ ಓದಿ: ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!

    ಜೊತೆಗೆ, ಜಮೀರ್ ಸಹೋದರ ಮುಜಾಮಿಲ್ ಅಹ್ಮದ್ ಖಾನ್‍ನನ್ನು ವಶಕ್ಕೆ ಪಡೆದಿದೆ. ಆದರೂ, ಮುಜಾಮಿಲ್ ಮಾತ್ರ `ಗೆಲುವಿನ’ ಸಂಕೇತ ತೋರಿಸಿದ್ದಾರೆ.

    ಎಲ್ಲೆಲ್ಲಿ ದಾಳಿ?
    ಬಂಬೂ ಬಜಾರ್ ನಲ್ಲಿರುವ ಜಮೀರ್ ನಿವಾಸ, ಸದಾಶಿವನಗರದಲ್ಲಿರುವ ಜಮೀರ್ ಅತಿಥಿಗೃಹ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಯುಬಿ ಸಿಟಿ ಫ್ಲ್ಯಾಟ್, ಮುಂಬೈ-ದೆಹಲಿಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಗೋರಿಪಾಳ್ಯದಲ್ಲಿರುವ ಜಮೀರ್ ಆಪ್ತ ಅಲ್ತಾಫ್ ಮನೆ ಮೇಲೆ ದಾಳಿ ನಡೆದಿದೆ.

    ದಾಳಿ ಯಾಕೆ?
    ಜಮೀರ್ ಅವರ ಆರ್ಥಿಕ ವ್ಯವಹಾರದ ಮೇಲೆ ಇಡಿ 8 ತಿಂಗಳಿಂದಲೂ ನಿಗಾ ಇಟ್ಟಿತ್ತು. ಐಷಾರಾಮಿ ಮನೆ, ಮಗಳ ವೈಭವೋಪೇತ ಮದುವೆಗಳು, ವಿದೇಶಗಳಲ್ಲಿ ಕ್ಯಾಸಿನೋ ಬಾರ್ ವ್ಯವಹಾರದಲ್ಲಿ ಕೊಡ್ತಿದ್ದ ಕೊಡ್ತಿದ್ದ ಲೆಕ್ಕಕ್ಕೆ ತಾಳೆ ಆಗುತ್ತಿರಲಿಲ್ಲ. ಇದರ ಜೊತೆಗೆ 10 ವರ್ಷದಲ್ಲಿ ಜಮೀರ್ ಆಸ್ತಿ ಭಾರೀ ಏರಿಕೆಯಾಗಿದೆ.

    ಆದಾಯ ಎಷ್ಟು?
    2008 – 52 ಲಕ್ಷ ರೂ.
    2009 – 44 ಲಕ್ಷ ರೂ.
    2013 – 9.45 ಕೋಟಿ ರೂ.
    2018 – 44 ಕೋಟಿ ರೂ.

    ಆಸ್ತಿ ಎಷ್ಟಿದೆ?
    – ಸದಾಶಿವನಗರದಲ್ಲಿ 2 ಕೋಟಿ ರೂ. ಮೌಲ್ಯದ ಮನೆ
    – 37 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ
    – 9.64 ಲಕ್ಷ ರೂ. ಮೌಲ್ಯದ ಚಿನ್ನಾಭರಣ
    – 51 ಲಕ್ಷ ರೂ. ಮೌಲ್ಯದ ವಾಹನಗಳು
    – 49 ಲಕ್ಷ ರೂ. ಮೌಲ್ಯದ ಮರ್ಸಿಡೀಜ್ ಬೆನ್ಜ್ ಕಾರು
    – 20 ಕೋಟಿ ರೂ. ಸಾಲ ಪಡೆದಿರುವ ಮಾಹಿತಿ
    – 2016-17ರಲ್ಲಿ 25.65 ಲಕ್ಷ ರೂ. ತೆರಿಗೆ ಪಾವತಿ

  • ಲಾಕ್ ಡೌನ್ ನಡುವೆ ಎಂಜಿನಿಯರಿಂಗ್ ಪದವೀಧರನಿಂದ ಮೀನು ಕೃಷಿಯಲ್ಲಿ ವಿನೂತನ ಸಾಧನೆ

    ಲಾಕ್ ಡೌನ್ ನಡುವೆ ಎಂಜಿನಿಯರಿಂಗ್ ಪದವೀಧರನಿಂದ ಮೀನು ಕೃಷಿಯಲ್ಲಿ ವಿನೂತನ ಸಾಧನೆ

    ನೆಲಮಂಗಲ: ಕೋವಿಡ್ ಅಲೆಗಳಿಗೆ ತತ್ತರಿಸಿದ ಹಲವಾರು ನಗರ ಜನತೆ ಹಳ್ಳಿಯತ್ತ ಮುಖಮಾಡಿದ್ದಾರೆ. ಇದೇ ಹಾದಿಯಲ್ಲಿ ವಿದ್ಯಾವಂತ ಯುವಕರು ಸ್ವಯಂ ಕೃಷಿಯತ್ತ ಮನಸ್ಸು ಮಾಡಿ ಸಾಧನೆ ಮಾಡಿ ಸಾಧಕರಾಗಿದ್ದಾರೆ. ತುಮಕೂರಿನ ಕೈಗಾರಿಕಾ ವ್ಯವಹಾರ ಅಧ್ಯಯನದಲ್ಲಿ ಎಂಜಿನಿಯರ್ ಪದವಿ ಪಡೆದಿದ್ದ ಯುವಕೊರಬ್ಬರು ಮೀನು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ.

    ವಿವೇಕ್ ಕುಮಾರ್ ನೆಲಮಂಗಲ ತಾಲೂಕಿನ ಮುದ್ದರಾಮನಾಯ್ಕನ ಪಾಳ್ಯದ ಬಳಿಯ, ಸೈನಿಕ ವಸತಿ ಸಮುಚ್ಚಯದ ಪಕ್ಕದಲ್ಲಿ ಜಮೀನು ಪಡೆದು ಮೂರು ದೊಡ್ಡ ತೊಟ್ಟಿಗಳಲ್ಲಿ ಮೀನಿನ ಕೃಷಿ ಮಾಡಿ, ವರ್ಷಕ್ಕೆ ಸರಾಸರಿ 12 ಟನ್ ಮೀನು ಮಾರಾಟ ಮಾಡಿ ಲಕ್ಷ, ಲಕ್ಷ ಆದಾಯ ಗಳಿಸುತ್ತಿದ್ದಾರೆ.

    ಗಿಫ್ಟ್ ಥಿಲೋಪಿಯಾ ಮೀನು ವರದಾನವಾಗಿದ್ದು, ರಿಸರ್ಕಿಯೊಲೇಟಿಂಗ್ ಅಕ್ವಾ ಸಿಸ್ಟಂ ಎಂಬ ನೂತನ ತಂತ್ರಜ್ಞಾನ ಬಳಸಿ, ಮೂರು ತೊಟ್ಟಿಗಳಿಗೂ ಸ್ವಯಂ ಪೆಂಡಂಟಿಂಗ್ ಪಡೆದು, ಈ ಗಿಫ್ಟ್ ಥಿಲಿಪಿಯಾ ಎಂಬ ಮೀನನ್ನು ಮಾರುಕಟ್ಟೆಗೆ ನೀಡುತ್ತಿದ್ದಾರೆ. ಈ ಮೀನು ವಾಸ ಮಾಡುವ ನೀರಿನಲ್ಲಿ ಸುಮಾರು 14 ವಿವಿಧ ತ್ಯಾಜ್ಯಗಳನ್ನು ಬಿಡುವುದರಿಂದ, ಈ ನೀರಿನಲ್ಲಿ ಕೃಷಿ ಬೆಳೆಗಳನ್ನು ಬೆಳೆಯಲು ಸಾಕಷ್ಟು ಅನುಕೂಲಕರವಾಗಿದೆ. ಮುಂದಿನ ದಿನಗಳಲ್ಲಿ ಈ ಮೀನಿನ ಜೊತೆ ಸ್ವಯಂ ಕೃಷಿ ಸಹ ಮಾಡುತ್ತೇನೆ ಎಂದು ವಿವೇಕ್ ಕುಮಾರ್ ತಿಳಿಸಿದ್ದಾರೆ.

    ಆರ್.ಎ.ಎಸ್.( ರಿಸರ್ಕಿಯೊಲೇಟಿಂಗ್ ಅಕ್ವಾ ಸಿಸ್ಟಂ) ಬಳಸಿಕೊಂಡ ನಂತರ ಉತ್ಪಾದನಾ ವೆಚ್ಚವನ್ನು 200-220 ರೂಪಾಯಿಯಿಂದ 80 ರಿಂದ 100 ರೂಪಾಯಿಗಳಿಗೆ ಇಳಿಸಿದ್ದೇವೆ. ಸ್ಥಳೀಯವಾಗಿ ಸಹ ಮೀನಿನ ಮಾರಾಟ ಮಾಡುತ್ತೇವೆ. ಜೊತೆಗೆ ಸಗಟು ಮಾರಾಟ ಮಾಡುತ್ತೇವೆ. ಜಿ.ಐ.ಎಫ್.ಟಿ. ಥಿಲಪಿಯಾ ತಳಿ: ಜನಟೀಕಲಿ-ಇಂಪರ್ ವುಡ- ಫಾಮಿರ್ಂಗ್- ಟೆಕ್ನಾಲಜಿ, ಗಿಫ್ಟ್ ಥಿಲಪಿಯಾ ಮೀನಿನ ವಿಸ್ತøತ ರೂಪವಾಗಿದ್ದು, ಪ್ರಾರಂಭದಲ್ಲೇ ಈ ಮೀನುಗಳು, ಹೊಸ ತಳಿ ಶಾಸ್ತ್ರ, ಹಾಗೂ ಒಂದು ವರ್ಷದ ಕಾಲ ಈ ಮೀನುಗಳು ಗಂಡು-ಹೆಣ್ಣು ಭೇದವಿಲ್ಲದೆ, ಬೆಳೆಯುವುದರಿಂದ ಅಧಿಕ ಇಳುವರಿ ಬರುತ್ತದೆ ಮತ್ತು ಹೊಸ ಅವಿಷ್ಕಾರ ಮುಂದಿನ ಹೊಸ ಯೋಜನೆಗಳಿಗೂ ದಾರಿ ಮಾಡಿಕೊಡುತ್ತದೆ ಎಂದಿದ್ದಾರೆ.

    ಮೀನು ಮಾರಾಟ ಬಲು ಜೋರು: ಸ್ಥಳೀಯವಾಗಿ ವಾರದಲ್ಲಿ ಎರಡು ದಿನ ಮಾರಾಟ ಮಾಡುವ ಈ ಮೀನು ಕೆಜಿಗೆ 200 ರೂಪಾಯಿವರೆಗೆ ಮಾರಾಟವಾಗುತ್ತದೆ. ಇನ್ನೂ ಇದೇ ಜಾಗಕ್ಕೆ ಬಂದು ಸಗಟು ಮಾರಾಟಗಾರರು ಟನ್ ಗಟ್ಟಲೆ ಮೀನು ಖರೀದಿಸುವವರಿಗೆ 150 ರೂಪಾಯಿ ಕೆಜಿಗೆ ನೀಡುತ್ತೇವೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಕಾರ್ಯಪ್ರವೃತ್ತರಾಗಿ ಹೊಸ ಮಾರಾಟದ ಆಪ್ ಸಿದ್ದಪಡಿಸುತ್ತಿದ್ದು, ಜೀವಂತ ಮೀನುಗಳನ್ನು ತುಮಕೂರಿಗೆ ಮಂಜುಗಡ್ಡೆ ಮುಖಾಂತರ ಸಾಗಿಸಿ ಮಾರಾಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಧಾರಕಾರ ಮಳೆ – ಧುಮ್ಮುಕ್ಕಿ ಹರಿಯುತ್ತಿದೆ ಜಲಧಾರೆಗಳು

  • ಐದು ವರ್ಷದಲ್ಲಿ ಕೇಜ್ರಿವಾಲ್ ಆಸ್ತಿಯಲ್ಲಿ 1.3 ಕೋಟಿ ರೂ. ಹೆಚ್ಚಳ

    ಐದು ವರ್ಷದಲ್ಲಿ ಕೇಜ್ರಿವಾಲ್ ಆಸ್ತಿಯಲ್ಲಿ 1.3 ಕೋಟಿ ರೂ. ಹೆಚ್ಚಳ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಸಿಎಂ ಅರವಿಂದ ಕೇಜ್ರಿವಾಲ್ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ 1.3 ಕೋಟಿ ರೂ. ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದು ಘೋಷಿಸಿಕೊಂಡಿದ್ದಾರೆ.

    ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಸ್ತಿ ಘೋಷಿಸಿ ಪ್ರಮಾಣ ಪತ್ರ ಸಲ್ಲಿಸಿದ ಅವರು, ತಮ್ಮ ಒಟ್ಟು ಆಸ್ತಿ ಮೌಲ್ಯ 3.4 ಕೋಟಿ ರೂ. ಎಂದು ಹೇಳಿದ್ದಾರೆ. 2015ರ ಚುನಾವಣೆ ವೇಳೆ ಕೇಜ್ರಿವಾಲ್ ಬಳಿ ಆಸ್ತಿ 2.1 ಕೋಟಿ ರೂ. ಇತ್ತು. ಕಳೆದ ಐದು ವರ್ಷದಲ್ಲಿ 1.3 ಕೋಟಿ ರೂ. ಹೆಚ್ಚಾಗಿದೆ.

    ಪತ್ನಿ ಸುನೀತಾ ಕೇಜ್ರಿವಾಲ್ ಅವರ ಹಣ ಹಾಗೂ ಸ್ಥಿರ ಠೇವಣಿ ಐದು ವರ್ಷಗಳಲ್ಲಿ 15 ಲಕ್ಷದಿಂದ 57 ಲಕ್ಷ ರೂ.ಗೆ ಏರಿಕೆಯಾಗಿದೆ. ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 2016 ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಆಗ 32 ಲಕ್ಷ ಮೌಲ್ಯದಷ್ಟು ಪಿಂಚಣಿ ಹಣ ದೊರೆತಿದೆ. ಬಾಕಿಯ ಹಣ ಉಳಿತಾಯದ್ದಾಗಿ ಎಂದು ತಿಳಿಸಲಾಗಿದೆ.

    ಕೇಜ್ರಿವಾಲ್ ಅವರ ಹಣ ಮತ್ತು ಸ್ಥಿರ ಠೇವಣಿ 2015ರಲ್ಲಿ 2.26 ಲಕ್ಷ ರೂ. ಇದ್ದು, ಈಗ 9.65 ಲಕ್ಷ ರೂ.ಗೆ ಏರಿಕೆಯಾಗಿದೆ. ಸ್ಥಿರ ಆಸ್ತಿ 92 ಲಕ್ಷದಿಂದ 1.77 ಕೋಟಿಗೆ ಹೆಚ್ಚಾಗಿದೆ. ಕೇಜ್ರಿವಾಲ್ ಚರಾಸ್ತಿ ಮೌಲ್ಯವು ಮಾರುಕಟ್ಟೆಯಲ್ಲಿ ಏರಿಕೆಯಾಗಿರುವುದರಿಂದ ಆಸ್ತಿ ಏರಿಕೆಯಾಗಿದೆ ಎಂದು ಪಕ್ಷ ತಿಳಿಸಿದೆ. ಪತ್ನಿ ಸುನೀತಾ ಅವರ ಸ್ಥಿರ ಆಸ್ತಿ ಮೌಲ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.